Tag: Andhra Pradesh

  • ದೀಪಾವಳಿಯ ಶುಭಾಶಯ ಹೇಳೋ ನೆಪದಲ್ಲಿ ಮಹಾಮೈತ್ರಿ ಚರ್ಚೆ

    ದೀಪಾವಳಿಯ ಶುಭಾಶಯ ಹೇಳೋ ನೆಪದಲ್ಲಿ ಮಹಾಮೈತ್ರಿ ಚರ್ಚೆ

    – ಮೈತ್ರಿಯ ಪ್ರಧಾನಿ ಅಭ್ಯರ್ಥಿ ಯಾರು ಎಂದಿದ್ದಕ್ಕೆ ಸಿಡಿಮಿಡಿಕೊಂಡ ಆಂಧ್ರ ಸಿಎಂ
    – 1996 ಫಲಿತಾಂಶ ಎಂಪಿ ಚುನಾವಣೆ ಫಲಿತಾಂಶ ಮರಕಳಿಸುತ್ತೆ ಎಂದ ಎಚ್‍ಡಿಕೆ

    ಬೆಂಗಳೂರು: ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದುಗೂಡಿಸುವ ಕೆಲಸವನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಾಡುತ್ತಿದ್ದು, ಇದೇ ಕಾರಣಕ್ಕೆ ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

    ದೀಪಾವಳಿ ಹಬ್ಬದ ಶುಭಾಶಯ ತಿಳಿಸುವ ನೆಪದಲ್ಲಿ ಎಚ್.ಡಿ.ದೇವೇಗೌಡ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿ ಸ್ಥಾಪಿಸಲು ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಪದ್ಮನಾಭನಗರ ನಿವಾಸಕ್ಕೆ ಆಗಮಿಸಿದ ಚಂದ್ರಬಾಬು ನಾಯ್ಡು ಅವರನ್ನು ಸ್ವತಃ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತ್ಮೀಯವಾಗಿ ಬರ ಮಾಡಿಕೊಂಡರು. ಹೂಗುಚ್ಚ ನೀಡಿ ಸ್ವಾಗತ ಮಾಡಿದರು. ಆತ್ಮೀಯವಾಗಿ ದೇವೇಗೌಡ ಅಭಿನಂದನೆ ಸ್ವೀಕಾರ ಮಾಡಿದ ಚಂದ್ರಬಾಬು ನಾಯ್ಡು, ತಿರುಪತಿ ವೆಂಕಟೇಶ್ವರ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸಿದರು. ಬಳಿಕ ರಾಷ್ಟ್ರ ರಾಜಕಾರಣದ ಕುರಿತು ಸುಮಾರು 45 ನಿಮಿಷ ನಾಯಕರು ಚರ್ಚೆ ಮಾಡಿದರು. ಈ ವೇಳೆ ಎಚ್.ಡಿ.ಕುಮಾರಸ್ವಾಮಿ ಇಬ್ಬರು ನಾಯಕರಿಗೆ ಸಾಥ್ ನೀಡಿದರು.

    ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ದೇಶದಲ್ಲಿ ಅನೇಕ ಸಮಸ್ಯೆ ಹುಟ್ಟು ಹಾಕಿದೆ. ಸ್ವಾಯತ್ತತೆಯ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿದೆ. ಕಾಂಗ್ರೆಸ್ ಸೇರಿ ದೇಶದ ಪ್ರಾದೇಶಿಕ ಪಕ್ಷಗಳು ಈ ಬಗ್ಗೆ ಹೋರಾಟ ಮಾಡಬೇಕಿದೆ. ಚಂದ್ರಬಾಬು ನಾಯ್ಡು ಇದರ ನೇತೃತ್ವವಹಿಸಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.

    ಈ ಕುರಿತು ನನ್ನನ್ನು ಭೇಟಿ ಮಾಡಿ ಇಂದು ಮಾತುಕತೆ ನಡೆಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಬೇಕು ಎನ್ನುವುದು ನಮ್ಮ ಗುರಿ. ಜಾತ್ಯಾತೀತ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕು. ಕಾಂಗ್ರೆಸ್ ಪಕ್ಷ ಕೂಡ ನಮ್ಮ ಜೊತೆ ಕೈ ಜೋಡಿಸುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಜೊತೆ ಮುಂದಿನ ಹೋರಾಟದ ಬಗ್ಗೆ ಇಂದು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

    ಚಂದ್ರಬಾಬು ನಾಯ್ಡು ಮಾತನಾಡಿ, ಮಹಾಘಟಬಂಧನ್‍ಗೆ ಬೆಂಬಲ ಸಿಕ್ಕಿದೆ. ದೇಶ ರಕ್ಷಣೆ, ಪ್ರಜಾಪ್ರಭುತ್ವ ರಕ್ಷಣೆಯಾಗಬೇಕಿದೆ. ಸಿಬಿಐ, ಇಡಿ, ಆರ್‍ಬಿಐ ಸೇರಿದಂತೆ ಎಲ್ಲಾ ಸಂಸ್ಥೆಗಳು ಕೇಂದ್ರದ ಬಿಜೆಪಿ ಸರ್ಕಾರದ ಕಪಿಮುಷ್ಠಿಯಲ್ಲಿವೆ. ಈ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ತಡೆಯಲು ಯತ್ನಿಸುತ್ತಿವೆ. ನೋಟ್ ಬ್ಯಾನ್‍ನಿಂದ ಏನು ಆಗಿಲ್ಲ. ತೈಲ ಬೆಲೆ ಏರಿಕೆಯಾಗಿದ್ದು ಇದು ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ. ಸರ್ಕಾರದ ಧೋರಣೆಯಿಂದ ರೈತರಿಗೆ ಅನ್ಯಾಯವಾಗಿದೆ. ಎಲ್ಲಾ ಸಂಸ್ಥೆಗಳು ಇವತ್ತು ಭಯದಲ್ಲಿ ಕಾಲಕಳೆಯುತ್ತಿವೆ. ಕೇಂದ್ರ ಸಂಸ್ಥೆಗಳನ್ನು ಉಳಿಸುವ ಕೆಲಸ ಈ ಮಿಷನ್ ನ ಉದ್ದೇಶ ಎಂದು ಹೇಳಿದರು.

    ಪ್ರಧಾನಿ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ಕೋಪಗೊಂಡ ಚಂದ್ರಬಾಬು ನಾಯ್ಡು, ಮಾಧ್ಯಮಗಳಿಗೆ ಪ್ರಧಾನಿ ಅಭ್ಯರ್ಥಿ ಚಿಂತೆ. ಆದರೆ ನಮ್ಮ ಇಂಟ್ರೆಸ್ಟ್ ದೇಶ, ಪ್ರಜಾಪ್ರಭುತ್ವ ಉಳಿಸುವುದು ಅಂತ ಮಾಧ್ಯಮಗಳ ಮೇಲೆ ವಾಗ್ದಾಳಿ ನಡೆಸಿದರು. ದೆಹಲಿ ಮಾಧ್ಯಮಗಳು ಮೋದಿ ಪರ ಕೆಲಸ ಮಾಡುತ್ತಿವೆ. ವಿರೋಧ ಪಕ್ಷಕ್ಕೆ ಮಾಧ್ಯಮಗಳು ಸಹಾಯ ಮಾಡುತ್ತಿಲ್ಲ. ಹೀಗಾಗಿ ಮೋದಿ ಕೈಗೊಂಬೆಯಲ್ಲಿ ಮಾಧ್ಯಮಗಳಿವೆ. ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದನ್ನ ಎಲ್ಲಾ ಪಕ್ಷದ ನಾಯಕರು ಕುಳಿತು ನಿರ್ಧಾರ ಮಾಡುತ್ತೇವೆ. ಈಗಾಗಲೇ ಎಲ್ಲಾ ನಾಯಕರ ಜೊತೆ ನಾನು ಮಾತುಕತೆ ನಡೆಸಿದ್ದೇನೆ. ಈ ಮಿಷನ್ ದೇವೇಗೌಡರ ನೇತೃತ್ವದಲ್ಲಿ ಮುಂದುವರಿಸುತ್ತೇವೆ ಎಂದರು.

    ಮಹಾಘಟಬಂಧನ್ ಗೆಲುವು ಸಾಧಿಸುವುದಿಲ್ಲ ಎನ್ನುವ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ ಚಂದ್ರಬಾಬು ನಾಯ್ಡು ಅವರು, ನಿನ್ನೆ ಕರ್ನಾಟಕ ಉಪಚುನಾವಣೆಯಲ್ಲಿ ಜನ ಬಿಜೆಪಿಗೆ ಪಾಠ ಕಲಿಸಿದ್ದಾರೆ. ದೇಶದ ಜನರಲ್ಲೂ ಇದೇ ವಿಚಾರವಾಗಿದೆ. ಮಹಾಘಟಬಂಧನ್ ಯಶಸ್ವಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ದೇವೇಗೌಡ ಅನುಭವದಿಂದ ಬಿಜೆಪಿ ವಿರೋಧಿ ಪಕ್ಷಗಳ ಒಗ್ಗೂಡಿಸಬೇಕು ಅಂತ ಚಂದ್ರಬಾಬು ನಾಯ್ಡು ಬೆಂಬಲ ಕೇಳಿದ್ದಾರೆ. 2019 ಲೋಕಸಭೆಯಲ್ಲಿ 1996 ಫಲಿತಾಂಶ ಮರುಕಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಷ್ಟ್ರೀಯ ಸಂಸ್ಥೆಗಳನ್ನು ನುಂಗುತ್ತಿರೋ ಅನಾಕೊಂಡ ಮೋದಿ: ಆಂಧ್ರಪ್ರದೇಶ ಸಚಿವ

    ರಾಷ್ಟ್ರೀಯ ಸಂಸ್ಥೆಗಳನ್ನು ನುಂಗುತ್ತಿರೋ ಅನಾಕೊಂಡ ಮೋದಿ: ಆಂಧ್ರಪ್ರದೇಶ ಸಚಿವ

    ನವದೆಹಲಿ: ಆಂಧ್ರಪ್ರದೇಶದ ಹಣಕಾಸು ಸಚಿವ ಹಾಗೂ ತೆಲಗುಂ ದೇಶಂ ಪಕ್ಷದ (ಟಿಡಿಪಿ) ಮುಖಂಡ ಯನಮಲ ರಾಮ ಕೃಷ್ಣುಡು ಅವರು, ಪ್ರಧಾನಿ ನರೇಂದ್ರ ಮೋದಿ ‘ಅನಕೊಂಡ’ ಇದ್ದಂತೆ ಎಂದು ಹೇಳಿಕಿ ನೀಡಿ, ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ, ಆರ್‍ಬಿಐ ಸೇರಿದಂತೆ ವಿವಿಧ ರಾಷ್ಟ್ರೀಯ ಸಂಸ್ಥೆಗಳನ್ನು ನುಂಗುತ್ತಿದ್ದಾರೆ. ಇಂತಹ ಧೋರಣೆ ಹೊಂದಿರುವ ಅವರು ಹೇಗೆ ಸಂರಕ್ಷಕರಾಗಲು ಸಾಧ್ಯ ಎಂದು ಸಚಿವರು ಪ್ರಶ್ನಿಸಿದ್ದಾರೆ.

    ಅಷ್ಟೇ ಅಲ್ಲದೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎಲ್ಲರೂ ಟಾಮ್, ಡಿಕ್ ಮತ್ತು ಹ್ಯಾರಿ ಹಾಗೆ ಆಡುತ್ತಿದ್ದಾರೆ. ಹಿಂದೆ ಆಗಿ ಹೋಗಿರುವ ಬಗ್ಗೆ ಮಾತನಾಡುತ್ತಿದ್ದಾರೆ. ಆಗಿರುವುದು ಈಗ ಮತ್ತು ಭವಿಷ್ಯದಲ್ಲಿ ಬರುವುದಿಲ್ಲ ಎಂದ ಅವರು, ಕಾಂಗ್ರೆಸ್ ಮತ್ತು ಜನಸೇನಾ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆಯೇ ಹೊರತು ದೇಶದ ಬಗ್ಗೆ ಯಾವುದೇ ಹೊಣೆಗಾರಿಕೆ ಅವರಿಗಿಲ್ಲ ಎಂದು ಕುಟುಕಿದ್ದಾರೆ.

    ಸಚಿವರ ಹೇಳಿಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಕನ್ನ ಲಕ್ಷ್ಮೀನಾರಾಯಣ ಅವರು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭ್ರಷ್ಟಾಚಾರದ ರಾಜ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಒಡಿಶಾ, ಆಂಧ್ರಪ್ರದೇಶದಲ್ಲಿ ತಿತ್ಲಿ ಚಂಡಮಾರುತ ತೀವ್ರಗೊಂಡಿದೆ. ಗಂಟೆಗೆ 145 ಕಿಮೀ ವೇಗದಲ್ಲಿ ಗಾಳಿ ಬೀಸ್ತಿದೆ. ಮುಂದಿನ 18 ಗಂಟೆಗಳಲ್ಲಿ ಅದು ಮತ್ತಷ್ಟು ತೀವ್ರಗೊಳ್ಳಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಒಡಿಶಾ ಸರ್ಕಾರ ಕರಾವಳಿಯ ತಟದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಅಲ್ಲದೇ ಶಾಲೆ-ಕಾಲೇಜಿಗೂ ರಜೆ ಘೋಷಿಸಲಾಗಿದೆ. ಈ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರದಲ್ಲಿ ಕರಾವಳಿ ತೀರದಲ್ಲಿ ಕಡಲಬ್ಬರ ಜೋರಾಗಿದೆ.

    ಉಲ್ಲಾಳದಲ್ಲಿ ಮನೆ ಮಸೀದಿಗಳಿಗೆ ನೀರು ನುಗ್ಗಿದೆ. ಅಲೆಗಳ ಹೊಡೆತ ತಾಳಲಾರದೆ ಮುಕ್ಕಚ್ಚೇರಿ ಕಿಲೇರಿಯಾ ನಗರ, ಕೈಕೋದ ಎಂಟು ಮನೆ ಮಂದಿ ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ. ಹೀಗಾಗಿ ಯಾರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಒಡಿಶಾದ ಗೋಪಾಲ್ಪುರ ಹಾಗೂ ಆಂಧ್ರ ಪ್ರದೇಶದ ಕಳಿಂಗಪಟ್ಟಣಂ ನಡುವೆ ಗುರುವಾರ ಬೆಳಗ್ಗೆ 145 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಸಲಾಗಿತ್ತು. ತಿತ್ಲಿ ಗಂಟೆಗೆ 10 ಕಿ.ಮೀ. ವೇಗದಲ್ಲಿ ಬೀಸಲಿದ್ದು ಚಂಡಮಾರುತ ಪ್ರಭಾವವು ಒಡಿಶಾದ ಗೋಪಾಲ್ಪುರದಿಂದ 370 ಕಿಮೀ ಆಗ್ನೇಯಕ್ಕೆ ಹೆಚ್ಚಾಗಿರಲಿದೆ ಎಂದು ಐಎಂಡಿ ಬುಲೆಟಿನ್ ನಲ್ಲಿ ಹೇಳಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಕ್ಸಲರ ಗುಂಡಿಗೆ ಟಿಡಿಪಿ ಮಾಜಿ, ಹಾಲಿ ಶಾಸಕರು ಬಲಿ!

    ನಕ್ಸಲರ ಗುಂಡಿಗೆ ಟಿಡಿಪಿ ಮಾಜಿ, ಹಾಲಿ ಶಾಸಕರು ಬಲಿ!

    ಹೈದರಾಬಾದ್: ತೆಲಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕಿದರಿ ಸರ್ವೇಶ್ವರ ರಾವ್ ಹಾಗೂ ಮಾಜಿ ಶಾಸಕ ಶಿವಾರಿ ಸೋಮಾ ಅವರನ್ನು ಇಂದು ನಕ್ಸಲರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

    ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಕಣಿವೆಯ ಪ್ರದೇಶದ ದುಂಬ್ರಿಗುಡ ಮಂಡಲದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ಪಕ್ಷದ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಬರುತ್ತಿದ್ದಾಗ ನಕ್ಸಲರು ದಾಳಿ ಮಾಡಿದ್ದಾರೆ.

    ಸರ್ವೇಶ್ವರ ಹಾಗೂ ಶಿವಾರಿ ಸೋಮಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದ ನಕ್ಸಲರು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಶಾಸಕರು ಮೃತಪಟ್ಟಿದ್ದಾರೆ.

    2014ರ ವಿಧಾನಸಭಾ ಚುನಾವಣೆಯಲ್ಲಿ ವಾಯ್‍ಎಸ್‍ಆರ್‍ಸಿಪಿ ಯಿಂದ ಸ್ಪರ್ಧಿಸಿದ್ದ ಸರ್ವೇಶ್ವರ್, ಟಿಡಿಪಿಯಿಂದ ಅಭ್ಯರ್ಥಿಯಾಗಿದ್ದ ಸೋಮಾ ಅವರನ್ನು ಸೋಲಿಸಿದ್ದರು. ಚುನಾವಣೆ ಬಳಿಕ 2016ರಲ್ಲಿ ಸರ್ವೇಶ್ವರ್ ಟಿಡಿಪಿಗೆ ಸೇರಿಕೊಂಡರು. ಈ ಇಬ್ಬರು ನಾಯಕರಿಗೂ ನಕ್ಸಲರಿಂದ ಕೊಲೆ ಬೆದರಿಕೆ ಕರೆಗಳು ಬೆದರಿಕೆಗಳು ಬರುತ್ತಿದ್ದವು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರಂಟ್ ಜಾರಿ

    ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರಂಟ್ ಜಾರಿ

    ಹೈದರಾಬಾದ್: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ವಿರುದ್ಧ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನ್ಯಾಯಾಲಯ ಬಂಧನದ ವಾರಂಟ್  ಜಾರಿ ಮಾಡಿದೆ.

    ಮಹಾರಾಷ್ಟ್ರದ ನಾಂದೇಡ್ ನಲ್ಲಿರುವ ಧರ್ಮಬಾದ್ ಕೋರ್ಟ್ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಆಂಧ್ರಪ್ರದೇಶ ಕ್ಯಾಬಿನೆಟ್ ಮಿನಿಸ್ಟರ್ ಡಿ ಉಮಾಮಹೇಶ್ವರ್ ರಾವ್ ಹಾಗೂ 14 ಮಂದಿ ವಿರುದ್ಧ ವಾರಂಟ್ ಜಾರಿ ಮಾಡಿದೆ. ಅಲ್ಲದೇ ಸೆಪ್ಟೆಂಬರ್ 21ರ ಒಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

    ಅವಿಭಜಿತ ಆಂಧ್ರಪ್ರದೇಶ ಇದ್ದಾಗ 2010ರಲ್ಲಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥರು ಆಗಿರುವ ಸಿಎಂ ಚಂದ್ರಬಾಬು ನಾಯ್ಡು ಅವರು, ಮಹಾರಾಷ್ಟ್ರದ ಬಾಬ್ಲಿ ಯೋಜನೆ ಕುರಿತು ಪ್ರತಿಭಟನೆ ನಡೆಸಿದ್ದರು. ಟಿಡಿಪಿ ತನ್ನ ಶಾಸಕರೊಂದಿಗೆ ಮಹಾರಾಷ್ಟ್ರದ ನಿಷೇಧಿತ ಪ್ರದೇಶವಾದ ಬಾಬ್ಲಿ ಯೋಜನೆ ಪ್ರದೇಶಕ್ಕೆ ಪ್ರತಿಭಟನಾ ಯಾತ್ರೆ ನಡೆಸಿತ್ತು. ಈ ವೇಳೆ ಗೋದಾವರಿ ನದಿಗೆ ಮಹಾರಾಷ್ಟ್ರ ಸರ್ಕಾರ ನಿರ್ಮಾಣ ಮಾಡುತ್ತಿರುವ ಬಾಬ್ಲಿ ಯೋಜನೆ ನಿಯಮಗಳ ವಿರುದ್ಧವಾಗಿದೆ ಎಂದು ಆರೋಪಿಸಿತ್ತು.

    ಅಂದು ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧಿ ಪಕ್ಷದ ನಾಯಕತ್ವದ ಸ್ಥಾನ ಹೊಂದಿದ್ದರು. ಯಾತ್ರೆಯ ವೇಳೆ ಭಾಗವಹಿಸಿದ್ದ 40 ಶಾಸಕರು ಹಾಗೂ ಚಂದ್ರಬಾಬು ನಾಯ್ಡುರನ್ನು ಅಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದರು. ಇತ್ತೀಚೆಗೆ ಈ ಪ್ರಕರಣವನ್ನು ಮರುವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

    ಸದ್ಯ ಕೋರ್ಟ್ ನೋಟಿಸ್ ಪಡೆದಿರುವ ಟಿಡಿಪಿ ಮುಖಂಡ ಬುದ್ಧ ವೆಂಕಣ್ಣ ಈ ಕುರಿತು ವಿಜಯವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದಲ್ಲಿ ತಮಗೆ ಸಮನ್ಸ್ ಜಾರಿಯಾಗಲು ಪ್ರಧಾನಿ ನರೇಂದ್ರಮೋದಿ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೇ ತಮ್ಮನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಸ್ಥಾನದ ಬಳಿಕ ಪೆಟ್ರೋಲ್ ತೆರಿಗೆ ಇಳಿಸಿದ ಆಂಧ್ರ ಸಿಎಂ

    ರಾಜಸ್ಥಾನದ ಬಳಿಕ ಪೆಟ್ರೋಲ್ ತೆರಿಗೆ ಇಳಿಸಿದ ಆಂಧ್ರ ಸಿಎಂ

    ಹೈದರಾಬಾದ್: ರಾಜಸ್ಥಾನ ಸರ್ಕಾರದ ಬಳಿಕ ಆಂಧ್ರಪ್ರದೇಶ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 2 ರೂ. ಖಡಿತಗೊಳಿಸಿದೆ.

    ಈ ನಿರ್ಧಾರದಿಂದ ಸರ್ಕಾರಕ್ಕೆ 1,120 ಕೋಟಿ ರೂ. ಅಧಿಕ ಹೊರೆ ಆಗಲಿದ್ದು, ಸಿಎಂ ಚಂದ್ರಬಾಬು ನಾಯ್ಡು ಈ ಕುರಿತು ಘೋಷಣೆ ಮಾಡಿದ್ದಾರೆ. ಸದ್ಯ ಸರ್ಕಾರ ನೀಡಿರುವ ಆದೇಶ ನಾಳೆಯಿಂದಲೇ ಜಾರಿ ಆಗಲಿದೆ.

    ರಾಜಸ್ಥಾನ ಸರ್ಕಾರ ಭಾನುವಾರವಷ್ಟೇ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ಶೇ.4 ರಷ್ಟು ಇಳಿಕೆ ಮಾಡಿತ್ತು. ಇದರಿಂದ ಶೇ.30 ರಷ್ಟಿದ್ದ ಪೆಟ್ರೋಲ್ ಮೇಲಿನ ವ್ಯಾಟ್ ಶೇ.26ಕ್ಕೆ ಇಳಿಕೆಯಾಗಿತ್ತು. ಇತ್ತ ಡೀಸೆಲ್ ಮೇಲಿನ ಶೇ.22 ವ್ಯಾಟ್ ಶೇ. 18 ಇಳಿಕೆಯಾಗಿತ್ತು.

    ಕರ್ನಾಟಕದಲ್ಲೂ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆಯಾಗುವ ಸಾಧ್ಯತೆಯಿದ್ದು, ಇನ್ನು ಈ ಕುರಿತು ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡದೆ ಇದ್ದರೂ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಗರ್ಭಿಣಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸ್ತಿದ್ದಾಗ ಅರಣ್ಯದಲ್ಲೇ ಹೆರಿಗೆ: ತಾಯಿ, ಮಗು ಆರೋಗ್ಯ

    ಗರ್ಭಿಣಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸ್ತಿದ್ದಾಗ ಅರಣ್ಯದಲ್ಲೇ ಹೆರಿಗೆ: ತಾಯಿ, ಮಗು ಆರೋಗ್ಯ

    ಹೈದರಾಬಾದ್: ರಸ್ತೆ ಸಂಪರ್ಕವಿಲ್ಲದ ಗ್ರಾಮದಿಂದ ಕಾಲ್ನಡಿಗೆ ಮೂಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಗರ್ಭಿಣಿಗೆ ಹೆರಿಗೆಯಾಗಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿಷ್ಕಾಳಜಿಯಿಂದ ಇಂತಹ ಘಟನೆ ಸಂಭವಿಸುತ್ತಿವೆ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಮಾಸಿಕ ವಾಲಾಸ ಚಿಂತಾಲಾ ಸಾಲುರ್ ಗ್ರಾಮದ ಮುತ್ತಮ್ಮ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರ ಪತಿ ಹಾಗೂ ಸಂಬಂಧಿಕರು, ಬಿದಿರಿನ ಕಟ್ಟಿಗೆಗೆ ಸೀರೆಯನ್ನು ಕಟ್ಟಿ, ಜೋಳಿಗೆ ಮಾಡಿ ಮುತ್ತಮ್ಮ ಅವರನ್ನು ಕೂರಿಸಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಗರ್ಭಿಣಿಗೆ ಏನು ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಗ್ರಾಮದ ಕೆಲವು ಪುರುಷರು ಹಾಗೂ ಮಹಿಳೆಯರು ಆಸ್ಪತ್ರೆಗೆ ಹೊರಟಿದ್ದರು. ಇದನ್ನು ಓದಿ: ಅಂಬುಲೆನ್ಸ್ ಸೇವೆಗೆ ಗರ್ಭಿಣಿಯನ್ನ 12 ಕಿ.ಮೀ. ಹೊತ್ತು ನಡೆದ ಗ್ರಾಮಸ್ಥರು: ಮಗು ಸಾವು

    ಅರಣ್ಯ ಪ್ರದೇಶದ ಕಲ್ಲು ಮಣ್ಣು ಮಿಶ್ರಿತ ಗುಡ್ಡ ಬೆಟ್ಟದ ದಾರಿಯಲ್ಲಿಯೇ ಅವರು ನಡೆಯಬೇಕಾಗಿತ್ತು. ಬಳಿಕ ಅವರು ಮುಖ್ಯರಸ್ತೆ ಸೇರಿ ವಾಹನದ ಮೂಲಕ ಮುತ್ತಮ್ಮ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ ಗ್ರಾಮದಿಂದ 6 ರಿಂದ 7 ಕಿ.ಮೀ. ನಡೆಯುತ್ತಿದ್ದಂತೆ ದಾರಿಯ ಮಧ್ಯದಲ್ಲಿ ಮುತ್ತಮ್ಮಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಅವರನ್ನು ಅಲ್ಲಿಯೇ ಕೆಳಗೆ ಇಳಿಸಿ, ಇಬ್ಬರು ಮಹಿಳೆಯರ ಸಹಾಯದಿಂದ ಹೆರಿಗೆ ಮಾಡಿಸಲಾಗಿದೆ.

    ಈ ದೃಶ್ಯವನ್ನು ಸ್ಥಳೀಯ ಯುವಕನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಅನಾರೋಗ್ಯಕ್ಕೆ ತುತ್ತಾದವರನ್ನು ಹಾಗೂ ಗರ್ಭಿಣಿಯರನ್ನು ಹೀಗೆ ಹೊತ್ತುಕೊಂಡು ಮುಖ್ಯರಸ್ತೆ ಸೇರಬೇಕಾಗಿದೆ. ನಮ್ಮ ಸಮಸ್ಯೆಗೆ ಯಾವುದೇ ಅಧಿಕಾರಿ ಹಾಗೂ ಜನಪ್ರತಿನಿಧಿ ಸ್ಪಂಧಿಸುತ್ತಿಲ್ಲ ಎಂದು ವಿಡಿಯೋ ಮಾಡಿದ್ದ ಬುಡಕಟ್ಟು ಯುವಕ ಆರೋಪಿಸಿದ್ದಾನೆ.

    2017ರಲ್ಲಿ ಬುಡಕಟ್ಟು ಜನಾಂಗದ 15 ಪ್ರದೇಶಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು 5.5 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಆದರೆ ಗುಡ್ಡಗಾಡು ಪ್ರದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಯಾವುದೇ ಗುತ್ತಿಗೆದಾರರು ಮುಂದಾಗುತ್ತಿಲ್ಲ ಎಂದು ಬುಡಕಟ್ಟು ಪ್ರದೇಶಗಳ ಅಧಿವೃದ್ಧಿ ಯೋಜನಾ ಅಧಿಕಾರಿ ಲಕ್ಷ್ಮಿಶ್ ತಿಳಿಸಿದ್ದಾರೆ.

    ಇಂತಹದ್ದೇ ಘಟನೆಯೊಂದು ಜೂನ್ ತಿಂಗಳಿನಲ್ಲಿ ನಡೆದಿತ್ತು. ಅರಣ್ಯ ಪ್ರದೇಶ ವಾಸಿಯಾಗಿರುವ 8 ತಿಂಗಳ ಗರ್ಭಿಣಿ ಜಿದಮ್ಮ (22) ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲು, ಪತಿ ಹಾಗೂ ಗ್ರಾಮಸ್ಥರು ಪಟ್ಟ ಕಷ್ಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೆಲಂಗಾಣ ವಿಧಾನಸಭೆ ವಿಸರ್ಜನೆ- ಗುರುವಾರದಂದೇ ವಿಸರ್ಜಿಸಿದ್ದು ಯಾಕೆ?

    ತೆಲಂಗಾಣ ವಿಧಾನಸಭೆ ವಿಸರ್ಜನೆ- ಗುರುವಾರದಂದೇ ವಿಸರ್ಜಿಸಿದ್ದು ಯಾಕೆ?

    ಹೈದರಾಬಾದ್: ತೆಲಂಗಾಣ ರಾಜ್ಯದ ಸಿಎಂ ಕೆ ಚಂದ್ರಶೇಖರ್ ರಾವ್ ಗುರುವಾರ ಸಚಿವ ಸಂಪುಟ ಸಭೆ ನಡೆಸಿ ವಿಧಾನಸಭೆ ವಿಸರ್ಜನೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ.

    ವಿಧಾನಸಭೆ ವಿಸರ್ಜನೆ ಹಿನ್ನೆಲೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥ, ಸಿಎಂ ಕೆ ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಕಳೆದ 5 ದಿನಗಳಲ್ಲಿ 2 ಬಾರಿ ಸಂಪುಟ ಸಭೆ ನಡೆಸಲಾಗಿದ್ದು, ಬಳಿಕ ವಿಧಾನಸಭೆ ವಿಸರ್ಜನೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯೇ ಪೂರ್ವಭಾವಿ ಚುನಾವಣೆ ನಡೆಸುವ ಕುರಿತು ಹಲವು ವರದಿಗಳು ಕೇಳಿಬಂದಿತ್ತು. ಸದ್ಯ ತೆಲಂಗಾಣ ರಾಜಭವನ ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

    ಆಂಧ್ರಪ್ರದೇಶ ವಿಭಜನೆ ಬಳಿಕ ದೇಶದ 29 ರಾಜ್ಯವಾಗಿ ಉದಯವಾದ ತೆಲಂಗಾಣದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷ ಅಧಿಕಾರ ಪಡೆದಿತ್ತು. ಆದರೆ ಸರ್ಕಾರಕ್ಕೆ ಇನ್ನು 8 ತಿಂಗಳ 26 ದಿನಗಳ ಅಧಿಕಾರದ ಅವಧಿ ಬಾಕಿ ಇದ್ದು, ಅವಧಿ ಮುನ್ನವೇ ವಿಧಾನಸಭೆ ವಿಸರ್ಜನೆ ಮಾಡಲಾಗಿದೆ. ರಾಜ್ಯದಲ್ಲಿ ಆಡಳಿತ ಪಕ್ಷ ತೆಲಂಗಾಣ ರಾಷ್ಟ್ರ ಪಕ್ಷದ ಪರ ಜನಾಭಿಪ್ರಾಯವಿದ್ದು, ಇದರ ಲಾಭ ಪಡೆಯಲು ಸಿಎಂ ಕೆಸಿಆರ್ ಈ ತೀರ್ಮಾನ ಕೈಗೊಂಡಿದ್ದಾರೆ.

    ಇಂದೇ ಏಕೆ?
    ಸಿಎಂ ಕೆಸಿಆರ್ ಹೆಚ್ಚು ಸಂಖ್ಯಾ ಶಾಸ್ತ್ರ ನಂಬುತ್ತಾರೆ ಎನ್ನಲಾಗಿದ್ದು, `6′ ಕೆಸಿಆರ್ ಅದೃಷ್ಟ ಸಂಖ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದೇ ವಿಧಾನಸಭೆ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ. ವಿಧಾನಸಭೆ ವಿಸರ್ಜನೆ ಬಳಿಕ ಕೆಸಿಆರ್ ಅವರೇ ಹೊಸ ಸರ್ಕಾರ ರಚನೆಯಾಗುವ ವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ತಿಳಿದು ಬಂದಿದೆ.

    ತೆಲಂಗಾಣ ವಿಧಾನಸಭೆಯಲ್ಲಿ 119 ಸ್ಥಾನಗಳಿದ್ದು, ಈ ಹಿಂದಿನ ಚುನಾವಣೆಯಲ್ಲಿ ಟಿಆರ್‍ಎಸ್ ಪಕ್ಷ 63 ಸ್ಥಾನಗಳಿಸಿತ್ತು. ಕಾಂಗ್ರೆಸ್ 21, ಟಿಡಿಪಿ 15, ವೈಎಸ್‍ಆರ್ ಕಾಂಗ್ರೆಸ್ 3, ಬಿಜೆಪಿ 7, ಓವೈಸಿ ಅವರ ಎಐಎಂಐಎಂ ಪಕ್ಷ 5 ಸ್ಥಾನ ಪಡೆದಿತ್ತು.

    ವಿಧಾನಸಭೆ ವಿಸರ್ಜನೆ ಬಳಿಕ ಕೇಂದ್ರ ಚುನಾವಣಾ ಆಯೋಗ ತೆಲಂಗಾಣದಲ್ಲಿ ಯಾವಾಗ ಚುನಾವಣೆ ನಡೆಸಬೇಕು ಎನ್ನುವುದನ್ನು ನಿರ್ಧಾರ ಮಾಡಲಿದೆ. ಮುಂದಿನ ಡಿಸೆಂಬರ್ ನಲ್ಲಿ ದೇಶದ 3 ರಾಜ್ಯಗಳಿಗೆ (ರಾಜಸ್ಥಾನ, ಚತ್ತೀಸ್‍ಘಡ, ಮಧ್ಯಪ್ರದೇಶ) ವಿಧಾನಸಭೆ ಚುನಾವಣೆ ಇದ್ದು, ಈ ವೇಳೆಯೇ ಚುನಾವಣೆ ನಡೆಸುವ ಸಾಧ್ಯತೆ ಇದೆ.

    ಕಾಂಗ್ರೆಸ್ ಪ್ರತಿಸ್ಪರ್ಧಿ:
    ಕೆಸಿಆರ್ ಅವರ ಈ ನಿರ್ಧಾರ ಅಚ್ಚರಿ ಉಂಟುಮಾಡಿದ್ದು, ಈ ತೀರ್ಮಾನದ ಹಿಂದೆ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ತೆಲಂಗಾಣದಲ್ಲಿ ಟಿಆರ್‍ಎಸ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷ ಪ್ರಬಲ ವಿರೋಧಿ ಪಕ್ಷವಾಗಿದ್ದು, ಅದ್ದರಿಂದಲೇ ರಾಷ್ಟ್ರಮಟ್ಟದ ತೃತೀಯ ರಂಗದಲ್ಲಿ ಕೆಸಿಆರ್ ಗುರುತಿಸಿಕೊಂಡಿರಲಿಲ್ಲ. ಇನ್ನು ಕಳೆದ ಕೆಲ ದಿನಗಳ ಹಿಂದೆ ಕೆಸಿಆರ್ ಅವರು ಪ್ರಧಾನಿ ಮೋದಿರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ವಿಧಾನಸಭೆ ವಿಸರ್ಜನೆ ಹಿಂದಿನ ಉದ್ದೇಶದ ಕುರಿತು ಕೆಸಿಆರ್ ಇನ್ನಷ್ಟೇ ಮಾಹಿತಿ ನೀಡಬೇಕಿದೆ.

  • ಸೂರ್ಯಗ್ರಹಣದ ದಿನದಂದೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನಕ್ಕೆ ಗ್ರಹಣ!

    ಸೂರ್ಯಗ್ರಹಣದ ದಿನದಂದೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನಕ್ಕೆ ಗ್ರಹಣ!

    ತಿರುಪತಿ/ಹೈದರಾಬಾದ್: ತಿಮ್ಮಪ್ಪನ ಸನ್ನಿಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣ ಇಂದಿನಿಂದ ಆರಂಭಗೊಳ್ಳಲಿದೆ.

    ಪೂಜೆಯ ಭಾಗವಾಗಿ ಇಂದು ರಾತ್ರಿ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ತಿಮ್ಮಪ್ಪನ ವಿಗ್ರಹದ ಭವ್ಯ ಮೆರವಣಿಗೆ ನಡೆಯಲಿದ್ದು, ಭಾನುವಾರ ಬೆಳಗ್ಗೆ 6 ಗಂಟೆಯಿಂದ ಆಗಮಶಾಸ್ತ್ರದ ಪ್ರಕಾರ ಧಾರ್ಮಿಕ ವಿಧಿವಿಧಾನ ಆರಂಭವಾಗಲಿದೆ. ವಿಶೇಷ ಮಹಾಸಂಪ್ರೋಕ್ಷಣೆ ಕಾರ್ಯವನ್ನು ಆಂಧ್ರ, ಕರ್ನಾಟಕ, ತೆಲಂಗಾಣದ 45 ಆಗಮ ಪಂಡಿತರು ನಡೆಸಲಿದ್ದಾರೆ. ಬಳಿಕ ಗುರುವಾರದವರೆಗೂ ತಿಮ್ಮಪ್ಪನ ಪದತಳದಲ್ಲಿ ಅಷ್ಟಬಂಧನ ಬಾಲಾಲಯ ಮಹಾ ಸಂಪ್ರೋಕ್ಷಣೆ ಮಾಡಲಾಗುತ್ತದೆ.

    ಮಹಾ ಯಾಗಕ್ಕಾಗಿ ತಿರುಮಲದ ಯೋಗಶಾಲೆಯಲ್ಲಿ 28 ಹೋಮ ಗುಂಡಿ ನಿರ್ಮಾಣ ಮಾಡಲಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿ ತುಪ್ಪದ ದೀಪದ ಬೆಳಕಿನಲ್ಲೇ ಹೋಮ ಹವನ ನಡೆಸಲು ತೀರ್ಮಾನ ಮಾಡಲಾಗಿದೆ. ಈ ವೇಳೆ ಭಕ್ತರ ದರ್ಶನಕ್ಕೆ ದೇವಾಲಯದ ಟಿಟಿಡಿ ಸಮಿತಿ ನಿರ್ಬಂಧ ಹೇರಿದೆ. ಟಿಟಿಡಿ ಗುರುವಾರದಿಂದಲೇ ತಿಮ್ಮಪ್ಪನ ದಿವ್ಯ ದರ್ಶನ, ಸರ್ವದರ್ಶನ ಟೋಕನ್ ನೀಡುವುದನ್ನು ರದ್ದು ಮಾಡಿದ್ದು, ಸರತಿ ಸಾಲಿನಲ್ಲಿ ಬರುವ ಭಕ್ತರಿಗೂ ಮಿತಿ ಹೇರಿದೆ.

    ಏನಿದು ಬಾಲಾಲಯ ಮಹಾಸಂಪ್ರೋಕ್ಷಣೆ?: ತಿಮ್ಮಪ್ಪನ ಮೂಲವಿರಾಟ್ ಮತ್ತು ಇತರೆ ದೇವರ ವಿಗ್ರಹಗಳ ಶಕ್ತಿಯನ್ನು ಬಿಂಬದಿಂದ ಕುಂಭದೊಳಕ್ಕೆ ಆವಾಹನೆ ಮಾಡುವ ಪ್ರಕ್ರಿಯೆಯಾಗಿದೆ. ಧಾರ್ಮಿಕ ಆಚಾರಣೆಯನ್ನು 12 ವರ್ಷಗಳಿಗೆ ಒಮ್ಮೆ ಮಾತ್ರ ಮಾಡಲಾಗುತ್ತದೆ.

    ಅಷ್ಟಬಂಧನ: 8 ರೀತಿಯ ವಸ್ತುಗಳಿಂದ ತಯಾರು ಮಾಡಿದ ಚೂರ್ಣ. ಈ ಚೂರ್ಣದ ಆಯಸ್ಸು 12 ವರ್ಷಗಳ ಕಾಲ ಇರುತ್ತದೆ. ಈ ಅಷ್ಟ ಬಂಧನವನ್ನು ತಿಮ್ಮಪ್ಪನ ಪಾದದಲ್ಲಿ ಇರಿಸುತ್ತಾರೆ. ವಿಶೇಷವಾಗಿ ಮಹಾಸಂಪ್ರೋಕ್ಷಣೆ ವೇಳೆ ದೇಗುಲದ ಸಿಬ್ಬಂದಿಗೂ ರಾಮುಲವಾರಿ ಮೇಡ ದಾಟಲು ಅವಕಾಶ ಇರಲ್ಲ.

    30 ಸಾವಿರ ಭಕ್ತಿಗೆ ಮಾತ್ರ ಅವಕಾಶ: ದೇವರಿಗೆ ನಡೆಯುವ ಪ್ರಕ್ರಿಯೆ ಬಾಲಾಲಯ ಮಹಾಸಂಪ್ರೋಕ್ಷಣೆ ವಿಶೇಷ ಪೂಜಾ ಕಾರ್ಯದ ದಿನಗಳಲ್ಲಿ ಟಿಟಿಡಿ ಸಮಿತಿ 30 ಸಾವಿರ ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಿದೆ. ಆಗಸ್ಟ್ 16 ರ ವರೆಗೂ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಟಿಟಿಡಿ ಸಮಿತಿ ತಿಳಿಸಿದೆ. ಈ ಹಿಂದಿನ ವರ್ಷಗಳಲ್ಲಿ ಆಗಸ್ಟ್ ತಿಂಗಳಿನಲ್ಲಿ ಪ್ರತಿನಿತ್ಯ ಸುಮಾರು 1 ಲಕ್ಷ ಮಂದಿ ದೇವರ ದರ್ಶನ ಪಡೆಯುತ್ತಿದ್ದರು.

    ಈ ಹಿಂದೆ ಬಾಲಾಲಯ ಮಹಾಸಂಪ್ರೋಕ್ಷಣೆ ನಡೆಯುವ 6 ದಿನಗಳ ಅವಧಿಯಲ್ಲಿ ಭಕ್ತರಿಗೆ ದೇವರ ದರ್ಶನ ಕಾರ್ಯ ನೀಡದಿರಲು ಟಿಟಿಡಿ ನಿರ್ಧರಿಸಿತ್ತು. ಆದರೆ ಈ ಬಳಿಕ ನಡೆದ ಚರ್ಚೆಗಳಲ್ಲಿ ಭಕ್ತರಿಂದ ಒತ್ತಡ ಹೆಚ್ಚಾಗಿದ್ದರಿಂದ ಸದ್ಯ 30 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಗ್ರಾನೈಟ್ ಕಲ್ಲುಗಳ ಕ್ವಾರಿಯಲ್ಲಿ ಸ್ಫೋಟ- 10 ಮಂದಿ ದುರ್ಮರಣ

    ಗ್ರಾನೈಟ್ ಕಲ್ಲುಗಳ ಕ್ವಾರಿಯಲ್ಲಿ ಸ್ಫೋಟ- 10 ಮಂದಿ ದುರ್ಮರಣ

    ಹೈದಾರಬಾದ್: ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಗ್ರಾನೈಟ್ ಕಲ್ಲುಗಳ ಕ್ವಾರಿಯಲ್ಲಿ ಸ್ಫೋಟಗೊಂಡು 10 ಮಂದಿ ಮೃತಪಟ್ಟಿದ್ದಾರೆ.

    ಈ ಅವಘಡ ಶುಕ್ರವಾರ ರಾತ್ರಿ ಕರ್ನೂಲ್‍ನ ಹಾಥಿ ನೆಲ್ಗಾಲ್ ನಲ್ಲಿ ಸಂಭವಿಸಿದ್ದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕರ್ನೂಲ್‍ನ ಎಸ್ ಪಿ ಹೇಳಿದ್ದಾರೆ.

    ಕಲ್ಲುಗಳು ಮುರಿದು ಬೀಳುತ್ತಿದ್ದಂತೆಯೇ ಬೆಂಕಿ ಸ್ಫೋಟಗೊಂಡಿದ್ದು, ಸುತ್ತಮುತ್ತ ಸ್ಥಳಗಳಿಗೂ ಬೆಂಕಿ ಆವರಿಸಿದೆ. ಅಷ್ಟೇ ಅಲ್ಲದೇ 3 ಟ್ರಾಕ್ಟರ್, 1 ಲಾರಿ ಮತ್ತು 2 ಶೆಡ್‍ಗಳು ಬೆಂಕಿಗೆ ಆಹುತಿಯಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ತೊಡಗಿದ್ದಾರೆ.

    ಈ ಪ್ರಕರಣವನ್ನು ಯು/ಎಸ್ 304, ಭಾಗ-2 ರ ಸ್ಫೋಟಕಕಾರಿ ವಸ್ತುಗಳ ಕಾಯ್ದೆಯಡಿ ಐಪಿಸಿ ಸೆಕ್ಷನ್ 3 ಮತ್ತು 5 ರಲ್ಲಿ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಎಸ್‍ಪಿ ಹೇಳಿದ್ದಾರೆ.

    ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವಘದ ಬಗ್ಗೆ ಮರುಕ ವ್ಯಕ್ತಪಡಿಸಿದ್ದು, ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಿದರು. ಹಾಗೂ ಘಟನೆ ಬಗ್ಗೆ ತೀವ್ರ ಕಾರ್ಯಚರಣೆ ಕೈಗೊಳ್ಳುವಂತೆ ಆದೇಶ ನೀಡಿದರು.