Tag: Andhra Pradesh

  • ಅಂಬುಲೆನ್ಸ್ ಸೇವೆಗೆ ಗರ್ಭಿಣಿಯನ್ನ 12 ಕಿ.ಮೀ. ಹೊತ್ತು ನಡೆದ ಗ್ರಾಮಸ್ಥರು: ಮಗು ಸಾವು

    ಅಂಬುಲೆನ್ಸ್ ಸೇವೆಗೆ ಗರ್ಭಿಣಿಯನ್ನ 12 ಕಿ.ಮೀ. ಹೊತ್ತು ನಡೆದ ಗ್ರಾಮಸ್ಥರು: ಮಗು ಸಾವು

    ಹೈದರಾಬಾದ್: ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಪತಿ ಹಾಗೂ ಕೆಲ ಗ್ರಾಮಸ್ಥರು 12 ಕಿ.ಮೀ. ಕ್ರಮಿಸಿ ಅಂಬುಲೆನ್ಸ್ ಸೇವೆ ಪಡೆದಿದ್ದರೂ, ತಾಯಿ ಮಾತ್ರ ಬದುಕುಳಿದು ಮಗು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಅರಣ್ಯ ಪ್ರದೇಶ ವಾಸಿಯಾಗಿರುವ 8 ತಿಂಗಳ ಗರ್ಭಿಣಿ ಜಿದಮ್ಮ (22) ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲು, ಪತಿ ಹಾಗೂ ಗ್ರಾಮಸ್ಥರು ಪಟ್ಟ ಕಷ್ಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಜಿದಮ್ಮ ಅವರ ಗ್ರಾಮದ ಸುತ್ತಮತ್ತಲು ಯಾವುದೇ ಆಸ್ಪತ್ರೆಗಳಿಲ್ಲ. ಗ್ರಾಮದವರೆಗೆ ರಸ್ತೆ ನಿರ್ಮಾಣವಾಗಿಲಿಲ್ಲ. ಹೀಗಾಗಿ ಅಂಬುಲೆನ್ಸ್ ಸೌಲಭ್ಯ ಪಡೆಯಲು ಗ್ರಾಮಸ್ಥರು ಅರಣ್ಯ ಭಾಗದಲ್ಲಿರು ಕಿರಿದಾದ 12 ಕಿ.ಮೀ. ಕ್ರಮಿಸುವುದು ಅನಿವಾರ್ಯ. ಹೆರಿಗೆ ನೋವಿಗೆ ಒಳಗಾಗಿದ್ದ ಜಿದಮ್ಮ ಅವರನ್ನು ಉಳಿಸಿಕೊಳ್ಳಲು ಪತಿ ಆಕೆಯನ್ನು ಸೀರೆಯಿಂದ ಮರೆ ಮಾಡಿ, ಒಂದು ಬಿದಿರಿನ ಬುಟ್ಟಿಯಲ್ಲಿ ಕುಳ್ಳಿರಿಸಿ, ಬುಟ್ಟಿಯ ನಾಲ್ಕು ಬದಿಗೆ ಹಗ್ಗ ಹಾಕಿ ಅದನ್ನು ಬಿದಿರಿನ ಬೊಂಬಿಗೆ ಕಟ್ಟಿ ಇಬ್ಬರು ಹೊತ್ತುಕೊಂಡು ಸಾಗಿದ್ದರು.

    ವಿಜಯನಗರಂನಲ್ಲಿ ಇದು ವಿಶೇಷ ಪ್ರಕರಣವಲ್ಲ. ರಸ್ತೆಗಳಿಲ್ಲದ ಗ್ರಾಮಗಳಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ ಎಂದು ವರದಿಯಾಗಿದೆ.

    ಬುಡಕಟ್ಟು ಜನಾಂಗ ಎದುರಿಸುತ್ತಿರುವ ರಸ್ತೆ ಹಾಗೂ ಆರೋಗ್ಯ ಸಮಸ್ಯೆ ಕುರಿತು ನಟ ಹಾಗೂ ಜನ ಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಪ್ರಸ್ತಾಪ ಮಾಡಿದ್ದರು. ಸದ್ಯ ಜಿದಮ್ಮ ಪ್ರಕರಣದ ಕುರಿತು ಆಡಳಿತ ಪಕ್ಷವನ್ನು ತರಾಟೆಗೆ ತಗೆದುಕೊಂಡಿದ್ದಾರೆ.

  • ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಸಿಎಂ- ರಾಜ್ಯದ ಒಳಿತು ಕೋರಿ ಪೂಜೆ ಅಂದ್ರು ಎಚ್‍ಡಿಕೆ

    ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಸಿಎಂ- ರಾಜ್ಯದ ಒಳಿತು ಕೋರಿ ಪೂಜೆ ಅಂದ್ರು ಎಚ್‍ಡಿಕೆ

    ಬೆಂಗಳೂರು: ಇಂದು ಶತಮಾನದ ಸುದೀರ್ಘ ರಕ್ತ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು ಇದೀಗ ಅಷ್ಟೇ ಸಿಎಂ ಕುಮಾರಸ್ವಾಮಿ ಅವರು ಕೂಡ ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

    ಸುಪ್ರಭಾತ ಸೇವೆ ಮತ್ತು ತೋಮಾಲಾ ಸೇವೆಯಲ್ಲಿ ಸಿಎಂ ಕುಮಾರಸ್ವಾಮಿ ದಂಪತಿ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಪತ್ನಿ ಸಮೇತರಾಗಿ ಪಾಲ್ಗೊಂಡಿದ್ರು. ಈ ವೇಳೆ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಟಿಟಿಡಿ ವತಿಯಿಂದ ರೇಷ್ಮೇ ಶಾಲು ಹೊದಿಸಿ ಸನ್ಮಾನಿಸಲಾಯ್ತು.

    ತಿಮ್ಮಪ್ಪನ ದರುಶನ ಬಳಿಕ ಮಾತನಾಡಿದ ಕುಮಾರಸ್ವಾಮಿ, ತಿರುಪತಿ ಭೇಟಿ ಹಿಂದೆ ವಿಶೇಷವೇನೂ ಇಲ್ಲ. ರಾಜ್ಯದ ಒಳಿತು ಕೋರಿ ತಿಮ್ಮಪ್ಪನಿಗೆ ವಿಶೆಷ ಪೂಜೆ ಸಲ್ಲಿಸಿರುವೆ ಅಂತಾ ಹೇಳಿದ್ರು.

    ನಿನ್ನೆ ಒಂದೇ ದಿನ ಬರೋಬ್ಬರಿ 6.28 ಕೋಟಿ ರೂಪಾಯಿ ಸಂಗ್ರಹವಾಗಿದ್ದು ದಾಖಲೆಯಾಗಿದೆ. ಇನ್ನು 2012 5.73 ಕೋಟಿ ರೂಪಾಯಿ ಸಂಗ್ರಹವಾಗಿದ್ದೆ ಅತ್ಯಧಿಕ ಮೊತ್ತವಾಗಿತ್ತು.

  • ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

    ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

    ತಿರುಪತಿ: ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಹೊಂದಿರುವ ತಿರುಪತಿ ತಿರುಮಲ ದೇವಾಲಯ ಅಷ್ಟಬಂಧನ ಧಾರ್ಮಿಕ ಕಾರ್ಯಕ್ರಮದಿಂದ 7 ದಿನಗಳ ಕಾಲ ಭಕ್ತರಿಗೆ ದರ್ಶನ ಲಭ್ಯವಿಲ್ಲ ಎಂದು ಟಿಟಿಡಿ ಸಮಿತಿ ತಿಳಿಸಿದೆ.

    ಈ ಕುರಿತು ಮಾಹಿತಿ ನೀಡಿದ ಟಿಟಿಡಿ ಸಮಿತಿಯ ಮುಖ್ಯಸ್ಥ ಪುಟ್ಟ ಸುಧಾಕರ್ ಯಾದವ್, ಆಗಸ್ಟ್ 9 ರಿಂದ 17 ರವೆಗೂ ಅಷ್ಟ ಬಂಧನ ಬಾಲಾಲಯ ಮಹಾಸಂಪ್ರೋಕ್ಷಣೆ ನಡೆಯುವುದರಿಂದ ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಟಿಟಿಡಿ ಸಮಿತಿ ಶನಿವಾರ ನಡೆಸಿದ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಆಗಸ್ಟ್ 11 ರ ಮುಂಜಾನೆ 6 ರಿಂದ ದೇವರ ದರ್ಶನ ಕಾರ್ಯ ಸ್ಥಗಿತಗೊಳ್ಳಲಿದೆ. ಆದರೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೇವೆಯನ್ನು ಮುಂದುವರೆಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ.

    ಆಗಸ್ಟ್ 11 ರಂದು ದೇವರಿಗೆ ವಿಶೇಷ ಪೂಜೆ ಆರಂಭ ಮಾಡಲಾಗುತ್ತದೆ. ಈ ಪ್ರಕ್ರಿಯೇ 9 ತಿಂಗಳು ಕಾಲ ಮುಂದುವರೆಯಲಿದ್ದು, ಈ ಅವಧಿಯಲ್ಲಿ ದೇವರ ದರ್ಶನ ಭಾಗ್ಯ ಲಭ್ಯವಾಗುವುದಿಲ್ಲ. ಸದ್ಯ ಟಿಟಿಡಿ ಸಮಿತಿ ನಿರ್ಧಾರಕ್ಕೆ ಭಕ್ತ ಸಮೂಹದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ಏನಿದು ಬಾಲಾಲಯ ಮಹಾಸಂಪ್ರೋಕ್ಷಣೆ? ತಿಮ್ಮಪ್ಪನ ಮೂಲವಿರಾಟ್ ಮತ್ತು ಇತರೆ ದೇವರ ವಿಗ್ರಹಗಳ ಶಕ್ತಿಯನ್ನು ಬಿಂಬದಿಂದ ಕುಂಭದೊಳಕ್ಕೆ ಆವಾಹನೆ ಮಾಡುವ ಪ್ರಕ್ರಿಯೆಯಾಗಿದೆ. ಧಾರ್ಮಿಕ ಆಚಾರಣೆಯನ್ನು 12 ವರ್ಷಗಳಿಗೆ ಒಮ್ಮೆ ಮಾತ್ರ ಮಾಡಲಾಗುತ್ತದೆ.

    ಅಷ್ಟಬಂಧನ: 8 ರೀತಿಯ ವಸ್ತುಗಳಿಂದ ತಯಾರು ಮಾಡಿದ ಚೂರ್ಣ. ಈ ಚೂರ್ಣದ ಆಯಸ್ಸು 12 ವರ್ಷಗಳ ಕಾಲ ಇರುತ್ತದೆ. ಈ ಅಷ್ಟ ಬಂಧನವನ್ನು ತಿಮ್ಮಪ್ಪನ ಪಾದದಲ್ಲಿ ಇರಿಸುತ್ತಾರೆ. ವಿಶೇಷವಾಗಿ ಮಹಾಸಂಪ್ರೋಕ್ಷಣೆ ವೇಳೆ ದೇಗುಲದ ಸಿಬ್ಬಂದಿಗೂ ರಾಮುಲವಾರಿ ಮೇಡ ದಾಟಲು ಅವಕಾಶ ಇರಲ್ಲ.

  • ಜಮೀನಿನಲ್ಲಿ ಕಾಜಲ್ ಅಗರ್ವಾಲ್ ಕಟೌಟ್ -ಯಶಸ್ವಿಯಾಯ್ತು ರೈತನ ಪ್ರಯೋಗ

    ಜಮೀನಿನಲ್ಲಿ ಕಾಜಲ್ ಅಗರ್ವಾಲ್ ಕಟೌಟ್ -ಯಶಸ್ವಿಯಾಯ್ತು ರೈತನ ಪ್ರಯೋಗ

    ಹೈದರಾಬಾದ್: ಬೆಳೆ ಹಾಳಾಗುವುದನ್ನು ತಡೆಯಲು ಜಮೀನಿನಲ್ಲಿ ರೈತರೊಬ್ಬರು ಕಾಜಲ್ ಅಗರ್ವಾಲ್  ಕಟೌಟ್ ಹಾಕಿದ್ದು, ಈ ಪ್ರಯೋಗ ಈಗ ಯಶಸ್ವಿಯಾಗಿದೆ.

    ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಾರೆಡ್ಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 30 ವರ್ಷದ ರೈತ ಅನ್ವರ್ ಎರಡು ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಹೆದ್ದಾರಿಯ ಪಕ್ಕದಲ್ಲಿಯೇ ಇರುವ ಜಮೀನಿನಲ್ಲಿ ಶ್ರಮ ಹಾಕಿ ತರಕಾರಿ ಬೆಳೆ ಚೆನ್ನಾಗಿ ಬಂದರೂ ಕೊನೆ ಹಂತದಲ್ಲಿ ಒಣಗಿ ಹೋಗುತ್ತಿತ್ತು.

    ಬೆಳೆ ಒಣಗುತ್ತಿರುವುದು ಯಾಕೆ ಎಂದು ಮನಸ್ಸಿನಲ್ಲೇ ಪ್ರಶ್ನಿಸಿದಾಗ, ರಸ್ತೆಯಲ್ಲಿ ಹೋಗುವ ಮಂದಿ ಪದೇ ಪದೇ ತನ್ನ ಜಮೀನಿನತ್ತ ನೋಡುವುದರಿಂದ ದೃಷ್ಟಿ ತಾಗಿ ಬೆಳೆ ಒಣಗುತ್ತಿದೆ ಎನ್ನುವ ಉತ್ತರ ಅನ್ವರ್ ಅವರಿಗೆ ಸಿಕ್ಕಿದೆ.

    ಈ ಸಮಸ್ಯೆಗೆ ಪರಿಹಾರ ಏನು ಎಂದು ಆಲೋಚಿಸುತ್ತಿದ್ದಾಗ ಅವರಿಗೆ ಕಾಜಲ್ ಅಗರ್ವಾಲ್  ಕಟೌಟ್ ಹಾಕಿದರೆ ಹೇಗೆ ಎನ್ನುವ ಉಪಾಯ ಹೊಳೆದಿದೆ. ಐಡಿಯಾ ಹೊಳೆದಿದ್ದೆ ತಡ ಜಮೀನಿನ ಮಧ್ಯದಲ್ಲಿ ನೆಚ್ಚಿನ ನಟಿ ಕಾಜರ್ ಅಗರ್‍ವಾಲ್ ಕಟೌಟ್ ಹಾಕಿದ್ದಾರೆ. ಮೊದಲೆಲ್ಲ ಬೆಳೆಗಳನ್ನು ನೋಡುತ್ತಿದ್ದ ಜನ ಈಗ ಕಟೌಟ್ ನೋಡುತ್ತಿದ್ದಾರೆ. ಹೀಗಾಗಿ ಈಗ ಜಮೀನಿನ ಮೇಲೆ ಕೆಟ್ಟ ದೃಷ್ಟಿ ಬೀಳದ ಕಾರಣ ಬೆಳೆ ಒಣಗುತ್ತಿಲ್ಲ ಎಂದು ಅನ್ವರ್ ಹೇಳಿದ್ದಾರೆ.

    ಹೊಲದಲ್ಲಿ ಕೆಲ ದಿನಗಳ ಹಿಂದೆ ಕಾಜಲ್ ಅಗರ್ವಾಲ್  ಅವರ ಎರಡು ಕಟೌಟ್ ಗಳನ್ನು ನಿಲ್ಲಿಸಿದ್ದೇನೆ. ಈಗ ಬೆಳೆಯಲ್ಲಿ ಸಾಕಷ್ಟು ವ್ಯತ್ಯಾಸ ಕಾಣುತ್ತಿದ್ದೇನೆ. ಮೊದಲು ಬೆಳೆಗಳು ಒಣಗಿ ಹೋಗುತ್ತಿದ್ದವು. ಇದರಿಂದ ನಾನು ಹಾಕಿದ ಸಾಕಷ್ಟು ಹಣ ಹಾಗೂ ಶ್ರಮ ನಷ್ಟವಾಗುತ್ತಿತ್ತು. ಆದರೆ ಕಾಜಲ್ ಅಗರ್ವಾಲ್  ಕಟೌಟ್ ನಿಲ್ಲಿಸಿದಾಗಿನಿಂದ ಬೆಳೆಗಳು ಚೆನ್ನಾಗಿವೆ ಅಂತಾರೆ ರೈತ ಅನ್ವರ್.

    ಈಗ ಎಲ್ಲರೂ ನನ್ನ ಬೆಳೆಗಳನ್ನು ನೋಡುವುದನ್ನು ಮರೆತು ಕಟೌಟ್ ನೋಡುತ್ತಿದ್ದಾರೆ. ಇದರಿಂದ ಬೆಳೆಗಳಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳುತ್ತಿಲ್ಲ ಎಂದು ತನ್ನ ಉಪಾಯವನ್ನು ಸಮರ್ಥಿಸಿಕೊಂಡಿದ್ದಾರೆ. ನನ್ನ ಈ ವಿಚಾರವನ್ನು ನೋಡಿ ಮೊದಲು ನಗುತ್ತಿದ್ದವರೆಲ್ಲ ಇಂದು ನನ್ನ ಬೆಳೆಗಳ ಕಡೆಗೆ ನೋಡದೇ ಕಟೌಟ್‍ಗಳನ್ನೇ ನೋಡುತ್ತಿದ್ದಾರೆ ಎಂದಿದ್ದಾರೆ.

    ಯಾಕೆ ಕಾಜಲ್ ಅಗರ್ವಾಲ್  ಕಟೌಟ್ ಹಾಕಿದ್ದು ಎಂದು ಪ್ರಶ್ನಿಸಿದ್ದಕ್ಕೆ, ನಾನು ಕಾಜಲ್ ಅಗರ್ವಾಲ್  ರ ದೊಡ್ಡ ಅಭಿಮಾನಿ ಎನ್ನುವುದು ನನ್ನ ತಂದೆಯವರಿಗೆ ಗೊತ್ತಿತ್ತು. ಹಾಗಾಗಿ ನನ್ನ ತಂದೆಯೇ ಕಾಜಲ್ ಅವರ ಕಟೌಟ್‍ಗಳನ್ನು ಜಮೀನಿನಲ್ಲಿ ಇಡುವಂತೆ ಸಲಹೆ ನೀಡಿದರು ಎಂದು ಅನ್ವರ್ ಉತ್ತರಿಸಿದ್ದಾರೆ.

    ಕೆಲ ತಿಂಗಳ ಹಿಂದೆಯಷ್ಟೇ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಚೆನ್ನಾರೆಡ್ಡಿ ಎಂಬ ರೈತ ತನ್ನ ಜಮೀನಿಲ್ಲಿ ಬೆಳೆದ ಬೆಳೆಗಳಿಗೆ ದೃಷ್ಟಿ ತಾಗದಿರಲಿ ಎಂದು ಸನ್ನಿಲಿಯೋನ್ ರ ಅರೆನಗ್ನ ಕಟೌಟ್ ನ್ನು ಜಮೀನಿನಲ್ಲಿ ನಿಲ್ಲಿಸಿದ್ದರು.

  • 18 ವರ್ಷ ತುಂಬುತ್ತಿದ್ದಂತೆ ತಂದೆಯಿಂದಲೇ ಮಗಳ ಕೊಲೆ!

    18 ವರ್ಷ ತುಂಬುತ್ತಿದ್ದಂತೆ ತಂದೆಯಿಂದಲೇ ಮಗಳ ಕೊಲೆ!

    ಅಮರಾವತಿ: ಮಗಳು ಅನ್ಯ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂಬ ಸಂಶಯದಿಂದ ತಂದೆಯೇ ಮಗಳನ್ನು ಬರ್ಬರವಾಗಿ ಕೊಲೆಗೈದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.

    ಚಂದ್ರಲಪಡು ಎಂಬ ಹಳ್ಳಿಯ ನಿವಾಸಿಯಾದ ಚಂದ್ರಿಕಾ ಎಂಬವಳೇ ಕೊಲೆಯಾದ ದುರ್ದೈವಿ. ಚಂದ್ರಿಕಾ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಕಳೆದ ಶನಿವಾರವಷ್ಟೇ ಅವಳಗೆ 18 ವರ್ಷ ತುಂಬಿತ್ತು. ಆ ಖುಷಿಗೆ ಆವಳು ಸ್ನೇಹಿತರೊಂದಿಗೆ ಸೇರಿ ಕೇಕ್ ಕತ್ತರಿಸಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಮನೆಗೆ ಮರಳಿದ್ದಳು.

    ಮನೆಗೆ ಮರಳಿದ ಚಂದ್ರಿಕಾ, ಮೊಬೈಲ್ ನಲ್ಲಿ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ತಂದೆ ಕೊಟ್ಟಯ್ಯ ತನ್ನ ಮಗಳು ಅನ್ಯ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಅನುಮಾನಗೊಂಡು ಕೊಡಲಿಯ ಕಟ್ಟಿಗೆ ಹಿಡಿಯಿಂದ ಚಂದ್ರಿಕಾಳ ತಲೆಗೆ ಬಲವಾಗಿ ಹೊಡೆದಿದ್ದಾನೆ. ತಕ್ಷಣ ಚಂದ್ರಿಕಾ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.

    ಈಗಾಗಲೇ ಆರೋಪಿ ಕೊಟ್ಟಯ್ಯನನ್ನು ಬಂಧಿಸಿರುವ ಪೊಲೀಸರು ಈ ಕುರಿತಂತೆ ವಿಚಾರಣೆ ನಡೆಸಿದ್ದಾರೆ. ಚಂದ್ರಿಕಾಗೆ ಮೊದಲೇ ಯುವಕನೊಂದಿಗೆ ಸಂಬಂಧವಿತ್ತು. ಈಗ 18 ವರ್ಷ ತುಂಬಿದ್ದ ಹಿನ್ನೆಲೆಯಲ್ಲಿ ಆಕೆ ಪೋಷಕರ ಅನುಮತಿಗಾಗಿ ಕಾಯುತ್ತಿದ್ದಳು. ಮಗಳು ಯುವಕನ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ತಿಳಿದು ಕೊಟ್ಟಯ್ಯ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಕೊಟ್ಟಯ್ಯ ತನ್ನ ಮಗಳಿಂದ ಮನೆತನ ಮರ್ಯಾದೆ ಹಾಳಾಗುತ್ತದೆ ಎನ್ನುವ ಚಿಂತೆಯಲ್ಲಿದ್ದ. ಈ ಕಾರಣಕ್ಕಾಗಿ ಮಗಳಿಗೆ ಪಾಠ ಕಲಿಸಲು ಈ ಕೃತ್ಯ ಎಸಗಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

  • ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್

    ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್

    ಅಮರಾವತಿ: ನನ್ನ ಮೇಲೆ ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಂಧ್ರಪ್ರದೇಶದ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

    ತನ್ನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಳೆದ ವರ್ಷ ಹುಟ್ಟು ಹಬ್ಬದ ಪಾರ್ಟಿಗೆ ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅದನ್ನು ವಿಡಿಯೋ ಮಾಡಿ ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತಂತೆ ಪೊಲೀಸರು ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದಕ್ಕಾಗಿ ಐಟಿ ಕಾಯ್ದೆಗೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಈ ಕುರಿತು ಸಂತ್ರಸ್ತ ವಿದ್ಯಾರ್ಥಿನಿ ಕೃಷ್ಣಾ ಜಿಲ್ಲೆಯಲ್ಲಿರುವ ಅಗಿರಿಪಳ್ಳಿಯಲ್ಲಿನ ತನ್ನ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಳು. ಆದರೆ ಆಡಳಿತ ಮಂಡಳಿ ಈ ಕುರಿತಂತೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬದಲಾಗಿ ಆ ಯುವಕರನ್ನು ಕರೆಸಿ ವಿಡಿಯೋ ಡಿಲೀಟ್ ಮಾಡಿ, ನನ್ನಲ್ಲಿ ಕ್ಷಮೆ ಕೇಳುವಂತೆ ಹೇಳಿದ್ದಾರೆಂದು ಯುವತಿ ಆರೋಪಿಸಿದ್ದಾಳೆ.

    ಕಾಲೇಜಿನ ಆಡಳಿತ ಮಂಡಳಿ ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯ ಗೌರವ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಕುರಿತು ಪೊಲೀಸರಿಗೆ ತಿಳಿಸಲಿಲ್ಲ ಎಂದು ಹೇಳಿದೆ. ಕಾಲೇಜಿನ ಮಾತುಕತೆ ನಂತರವೂ ವಂಶಿ ಹಾಗೂ ಶಿವಾ ರೆಡ್ಡಿ ಎಂಬವರು ತಮ್ಮ ಸ್ನೇಹಿತರೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ.

    ಕಳೆದ ಎರಡು ತಿಂಗಳ ಹಿಂದೆ ವಿದ್ಯಾರ್ಥಿ ಪ್ರವೀಣ್ ಎಂಬಾತ ಕರೆ ಮಾಡಿ ನನ್ನ ಹತ್ತಿರ ವಿಡಿಯೋ ಇದೆ. ನನಗೆ 10 ಲಕ್ಷ ರೂ. ನೀಡಬೇಕು. ಅಲ್ಲದೇ ತನ್ನ ಜೊತೆಗೆ ದೈಹಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ನೊಂದ ವಿದ್ಯಾರ್ಥಿನಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರವೀಣ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

  • ರಾಯಚೂರಲ್ಲಿ ಕಳೆಕಟ್ಟಿದ ಕಾರಹುಣ್ಣಿಮೆ ಸಂಭ್ರಮ..!

    ರಾಯಚೂರಲ್ಲಿ ಕಳೆಕಟ್ಟಿದ ಕಾರಹುಣ್ಣಿಮೆ ಸಂಭ್ರಮ..!

    ರಾಯಚೂರು: ಮುಂಗಾರು ಸಾಂಸ್ಕೃತಿಕ ಹಬ್ಬ ಕಾರಹುಣ್ಣಿಮೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಾರಹುಣ್ಣಿಮೆ ನಿಮಿತ್ಯ ಜೋಡೆತ್ತುಗಳಿಗೆ ಆಯೋಜಿಸಿದ್ದ ಸ್ಪರ್ಧೆ ಹಬ್ಬದ ಸಂಭ್ರಮಕ್ಕೆ ಕಳೆಕಟ್ಟಿತ್ತು.

    ಜಿಲ್ಲೆಯಾದ್ಯಂತ ಕಾರಹುಣ್ಣಿಮೆ ಮುಂಗಾರು ಸಾಂಸ್ಕೃತಿಕ  ಹಬ್ಬದ ಸಂಭ್ರಮ ಮನೆ ಮಾಡಿದೆ. ಮುನ್ನೂರು ಕಾಪು ಸಮಾಜದವರು ಆಚರಿಸುವ ಮುಂಗಾರು ಹಬ್ಬದಿಂದ ನಗರದಲ್ಲಿ ಸಾಂಸ್ಕೃತಿಕ ಲೋಕವೇ ಅನಾವರಣಗೊಂಡಿತ್ತು.

    ಜೂನ್ 27 ರಿಂದ 29ರ ವರೆಗೆ ಮೂರು ದಿನಗಳ ಕಾಲ ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಒಟ್ಟಿನಲ್ಲಿ ಕಾರ ಹುಣ್ಣಿಮೆ ಬಳಿಕ ಬರುವ ಮುಂಗಾರು ನಮ್ಮ ಕೈ ಹಿಡಿಯಲಿ ಎನ್ನುವುದು ಅನ್ನದಾತರ ಆಶಯ. ಇದು ಕೇವಲ ಜಿಲ್ಲೆಯ ಉತ್ಸವವಾಗದೆ ರಾಜ್ಯದ ಉತ್ಸವವಾಗಬೇಕು ಎನ್ನುವ ಉದ್ದೇಶದಿಂದ ವರ್ಷದಿಂದ ವರ್ಷಕ್ಕೆ ಅತೀ ಸಡಗರದಿಂದ ಆಚರಿಸಲಾಗುತ್ತಿದೆ.

    ಪ್ರತಿ ವರ್ಷದಂತೆ ಈ ಬಾರಿಯೂ ಕಾರಹುಣ್ಣಿಮೆಯನ್ನ ಮುಂಗಾರು ಹಬ್ಬವಾಗಿ ಸಡಗರದಿಂದ ಆಚರಿಸಲಾಗುತ್ತಿದೆ. ವರುಣದೇವ ರೈತರ ಮೇಲೆ ಕರುಣೆ ತೋರಲಿ ಅನ್ನೋದು ಹಬ್ಬದ ಉದ್ದೇಶ. ಆನೆ ಗಾತ್ರದ ಎತ್ತುಗಳು ಭಾರದ ಕಲ್ಲನ್ನ ಎಳೆಯುವ ಸ್ಪರ್ಧೆ ಈ ಹಬ್ಬಕ್ಕೆ ನಿಜವಾಗಿಯೂ ಕಳೆಕಟ್ಟುತ್ತದೆ.

    ಒಂದೂವರೆ ಟನ್, ಎರಡು ಟನ್, ಎರಡು ವರೆ ಟನ್ ತೂಕದ ಕಲ್ಲುಗಳನ್ನು ಎಳೆಯುವ ಸ್ಪರ್ಧೆಯನ್ನು ಎತ್ತುಗಳಿಗೆ ಏರ್ಪಡಿಸಲಾಗಿದೆ. ಒಟ್ಟು 6 ಲಕ್ಷ ರೂಪಾಯಿಯ ಬಹುಮಾನಗಳನ್ನ ವಿಜೇತ ಎತ್ತಿನ ಜೋಡಿಗಳಿಗೆ ನೀಡಲಾಗುತ್ತೆ. ಈ ಬಾರಿ ಒಟ್ಟು 60 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ.

    ಈ ಹಬ್ಬದ ನಿಮಿತ್ಯವಾಗಿ ಮೊದಲ ದಿನ ರಾಜ್ಯದ ಎತ್ತುಗಳ ಒಂದುವರೆ ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ 18 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಪಶುಸಂಗೋಪನಾ ಸಚಿವರಾದ ವೆಂಕಟರಾವ್ ನಾಡಗೌಡ ರವರು ಉತ್ಸವಕ್ಕೆ ಚಾಲನೆ ನೀಡಿದರು.

     

    ಕಳೆದ 18 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಸ್ಪರ್ಧೆಗೆ ಈ ಬಾರಿಯೂ ಬೃಹದಾಕಾರದ ಎತ್ತುಗಳು ಆಗಮಿಸಿದ್ದವು. ರಾಜ್ಯ ಮಾತ್ರವಲ್ಲದೆ ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಜೋಡಿ ಎತ್ತುಗಳ ಪೈಪೋಟಿ ನೋಡುಗರನ್ನ ಮೂಕವಿಸ್ಮಿತಗೊಳಿಸುತ್ತದೆ. ಮುಂಗಾರು ಸಾಂಸ್ಕೃತಿಕ ಹಬ್ಬ ವೀಕ್ಷಣೆಗೆ ಆಂಧ್ರಪ್ರದೇಶ, ತೆಲಂಗಾಣದಿಂದಲೂ ಜನ ಆಗಮಿಸುತ್ತಿದ್ದಾರೆ.

  • ಲೈನ್ ಇನ್ಸ್‌ಪೆಕ್ಟರ್‌  ಮನೆ ಮೇಲೆ ಎಸಿಬಿ ದಾಳಿ – 100 ಕೋಟಿ ರೂ. ಆಸ್ತಿ ಪತ್ತೆ

    ಲೈನ್ ಇನ್ಸ್‌ಪೆಕ್ಟರ್‌ ಮನೆ ಮೇಲೆ ಎಸಿಬಿ ದಾಳಿ – 100 ಕೋಟಿ ರೂ. ಆಸ್ತಿ ಪತ್ತೆ

    ಹೈದರಾಬಾದ್: ಆಂಧ್ರಪ್ರದೇಶ ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳು (ಎಸಿಬಿ) ಗುರುವಾರ ನೆಲ್ಲೂರು ಜಿಲ್ಲೆಯ ಲೈನ್ ಇನ್ಸ್‌ಪೆಕ್ಟರ್‌ ಒಬ್ಬರ ಮನೆಯ ಮೇಲೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.

    ನೆಲ್ಲೂರು ಜಿಲ್ಲೆಯ ಸಹಾಯಕ ನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಇನ್ಸ್‌ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಎಸ್ ಲಕ್ಷ್ಮೀ ರೆಡ್ಡಿ (56) ಮನೆಯಲ್ಲಿ ಆದಾಯಕ್ಕಿಂತ ಹೆಚ್ಚಿನ ಮೊತ್ತದ ಆಸ್ತಿ ಪತ್ತೆಯಾಗಿದೆ. ಇದೇ ವೇಳೆ ಎಸಿಬಿ ಅಧಿಕಾರಿಗಳು ನೆಲ್ಲೂರು ಮತ್ತು ಪ್ರಕಾಶಂ ಜಿಲ್ಲೆಯ ಕೆಲ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

    ಲಕ್ಷ್ಮಿ ರೆಡ್ಡಿ ಮನೆ ಮೇಲೆ ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಸಂಜೆ ವರೆಗೂ ಶೋಧ ನಡೆಸಿ ಎರಡು ಜಿಲ್ಲೆಗಳಲ್ಲಿ ಆತ ಮಾಡಿದ್ದ ಕೃಷಿ ಆಸ್ತಿ, ನಿವೇಶನ ಕುರಿತ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ. ಸದ್ಯ ಇವುಗಳ ಮೌಲ್ಯ 100 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ. 1993 ರಲ್ಲಿ ಸರ್ವೀಸ್ ಮ್ಯಾನ್ ಆಗಿ ಕೆಲಸಕ್ಕೆ ಸೇರಿದ್ದ ಈತ ಬಡ್ತಿ ಪಡೆದು 1996-97 ಅವಧಿಯಲ್ಲಿ ಲೈನ್ ಮನ್ ಆಗಿ ಕಾರ್ಯನಿರ್ವಹಿಸಿದ್ದ. 2013 ರ ಬಳಿಕ ಈತ ಲೈನ್ ಇನ್ಸ್‌ಪೆಕ್ಟರ್‌ ಆಗಿ ಮಗ್ಗುರು ಎಂಬ ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ.

    ಲಕ್ಷ್ಮಿ ರೆಡ್ಡಿ ತಂದೆ ಮಲಕೊಂಡ ರೆಡ್ಡಿ ಹಾಗೂ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಲಾಗಿದ್ದು, ಈ ವೇಳೆ 57.50 ಎಕರೆ ಕೃಷಿ ಭೂಮಿ, ಆರು ಐಶಾರಾಮಿ ಮನೆ ಮತ್ತು ಎರಡು ಫ್ಲ್ಯಾಟ್ ಗಳಿಗೆ ಸಂಬಂಧಿಸಿದ ಆಸ್ತಿ ವಿವರಗಳು ಸೇರಿದಂತೆ 9.95 ಲಕ್ಷ ರೂ. ಬ್ಯಾಂಕ್ ಬ್ಯಾಲೆನ್ಸ್ ಪತ್ತೆಯಾಗಿದೆ. ಲಕ್ಷ್ಮಿ ರೆಡ್ಡಿಯವರ ಹೆಚ್ಚಿನ ಆಸ್ತಿಗಳು ಪತ್ನಿ ಸುಭಾಶಿಣಿ ಅವರ ಹೆಸರಿನಲ್ಲಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಲು ಲಕ್ಷ್ಮಿ ರೆಡ್ಡಿ ಇಲಾಖೆಗೆ ಸಂಬಂಧಿಸಿದ ಗೋದಾಮಿನಿಂದ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಿ ಹಣಗಳಿಸಿರುವ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾಗಿ ಸ್ಥಳಿಯ ಮಾಧ್ಯಮವೊಂದು ವರದಿ ಮಾಡಿದೆ.

  • ಬೈಕ್ ವೀಲಿಂಗ್ ವಿಡಿಯೋ ಪೋಸ್ಟ್ ಮಾಡಿ ಜೈಲು ಸೇರಿದ ಯುವಕರು!

    ಬೈಕ್ ವೀಲಿಂಗ್ ವಿಡಿಯೋ ಪೋಸ್ಟ್ ಮಾಡಿ ಜೈಲು ಸೇರಿದ ಯುವಕರು!

    ವಿಜಯವಾಡ: ಆಂಧ್ರಪ್ರದೇಶ ವಿಜಯವಾಡ ಜಿಲ್ಲೆಯ ಕೃಷ್ಣಲಂಕಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ರೀತಿಯಲ್ಲಿ ಬೈಕ್ ವೀಲಿಂಗ್ ಮಾಡಿ ವಿಡಿಯೋವನ್ನು ಪ್ರದರ್ಶಿಸಿದ ಬಳಿಕ ಪೊಲೀಸರು ಈ ಆರು ಯುವಕರನ್ನು ಬಂಧಿಸಿದ್ದಾರೆ.

    ಎ ನಿಖಿಲ್(23), ಎಂ.ಮಹೇಶ್(19), ಎ ಶಿವ(20), ಎನ್ ರಘುರಾಮ್(22), ಶ್ರೀನಿವಾಸ್ ಪ್ರವೀಣ್(19) ಮತ್ತು ಎಸ್ ರಂಜೀತ್ ಬಂಧಿತ ಯುವಕರು. ಆರು ಮಂದಿ ಯುವಕರು ಸಹ ಹೈದರಾಬಾದ್ ಮೂಲದವರಾಗಿದ್ದಾರೆ. ಜೂನ್ 10 ರಂದು ಕೆಟಿಎಮ್ ಕಂಪೆನಿ ಆಯೋಜಿಸಿದ್ದ “ಆರೆಂಜ್ ಡೇ” ಕಾರ್ಯಕ್ರಮಕ್ಕಾಗಿ ವಿಜಯವಾಡಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಿಂದ ಹಿಂದಿರುಗುವ ವೇಳೆ ಈ ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸರು, ಯುವಕರು ತಮ್ಮನ್ನು ತಾವು ಅಪಾಯಕ್ಕೆ ತಳ್ಳಿಕೊಂಡಿದ್ದಲ್ಲದೇ ಇತರೆ ಜನರನ್ನು ಸಹ ಅಪಾಯಕ್ಕೆ ತಳ್ಳುತ್ತಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು ಮೋಟಾರ್ ವೆಹಿಕಲ್ಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

    ಸಿಕ್ಕಿ ಬಿದ್ದಿದ್ದು ಹೇಗೆ: ಬೈಕ್ ವೀಲಿಂಗ್ ಮಾಡಿದ್ದ ದೃಶ್ಯಗಳನ್ನು ಸೆರೆ ಹಿಡಿದಿದ್ದ ಯುವಕರ ಗುಂಪು ತಮ್ಮ ಸಾಹಸವನ್ನು ಕೆಲ ಸಾಮಾಜಿಕ ಜಾಲತಾಣ ಹಾಗೂ ವಾಟ್ಸಪ್ ಗ್ರೂಪ್ ಗಳ್ಲಿ ಹಂಚಿಕೊಂಡಿದ್ದರು.

    ಈ ವಿಡಿಯೋದಲ್ಲಿ ಯಾವುದೇ ಸುರಕ್ಷತಾ ಸಾಧನಗಳನ್ನು ಧರಿಸದ ಯುವಕರು ಬೈಕನ್ನು ವೇಗವಾಗಿ ಚಾಲನೆ ಮಾಡಿ ವೀಲಿಂಗ್ ಮಾಡಿದ್ದಾರೆ. ಅಲ್ಲದೇ ತ್ರಿಬಲ್ ರೈಡಿಂಗ್ ಸಹ ಮಾಡಿರುವ ಯುವಕರು ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರೇ ವಾಹನ ಸವಾರರಿಗೂ ಕಿರಿ ಕಿರಿ ಉಂಟುಮಾಡಿದ್ದಾರೆ.

    ಸದ್ಯ ಆರೋಪಿಗಳ ವಿರುದ್ಧ ವಿಜಯವಾಡದ ಕೃಷ್ಣ ಲಂಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ದಕ್ಷಿಣ ವಲಯದ ಎಸಿಪಿ ಕೆ ಶ್ರೀನಿವಾಸ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

    ಆಂಧ್ರಪ್ರದೇಶದ ಟ್ರಾಫಿಕ್ ಪೊಲೀಸರು ಕೆಲ ತಿಂಗಳ ಹಿಂದೆ ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಂಡಿದ್ದು, ಹಲವರನ್ನು ವಶಕ್ಕೆ ಪಡೆದು ದೂರು ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ ಘಟನೆಯನ್ನು ಸ್ಮರಿಸಬಹುದಾಗಿದೆ. ಅಲ್ಲದೇ ಕಳೆದ ನಾಲ್ಕು ದಿನಗಳಿಂದ ವಿಜಯವಾಡ ಪೊಲೀಸರು 1,802 ಮಂದಿ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಕೇಸು ದಾಖಲಿಸಿದ್ದಾರೆ. ಇದರಲ್ಲಿ 91 ಜನರಿಗೆ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಪ್ರಸ್ತುತ ರಸ್ತೆ ಸುರಕ್ಷತೆಯನ್ನು ಉತ್ತೇಜಿಸಲು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಕಠಿಣ ಕ್ರಮವನ್ನು ಕೈಗೊಂಡಿದ್ದಾರೆ.

  • ಶಿವನ ಪೂಜೆ ಮಾಡುತ್ತಾ ಲಿಂಗದ ಮೇಲೆಯೇ ಪ್ರಾಣಬಿಟ್ಟ ಅರ್ಚಕ!

    ಶಿವನ ಪೂಜೆ ಮಾಡುತ್ತಾ ಲಿಂಗದ ಮೇಲೆಯೇ ಪ್ರಾಣಬಿಟ್ಟ ಅರ್ಚಕ!

    ಅಮರಾವತಿ: ಶಿವಲಿಂಗದ ಪೂಜೆ ಮಾಡುತ್ತಲೆ ಶಿವನ ಮೆಲೆ ಬಿದ್ದು ಭಕ್ತನೊಬ್ಬ ಪ್ರಾಣಬಿಟ್ಟ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಸೋಮೇಶ್ವರ ಜನಾರ್ದನ ಸ್ವಾಮಿ ದೇವಾಲಯದಲ್ಲಿ ಪೂಜೆ ಮಾಡುತ್ತಲೇ ಪ್ರಧಾನ ಅರ್ಚಕ ವೆಂಕಟರಾಮಾರಾವ್ ಪ್ರಾಣಬಿಟ್ಟಿದ್ದಾರೆ. ಜೂನ್ 11 ರಂದು ಪೂಜಾರಿ ವೆಂಕಟರಾಮಾರಾವ್ ಪೂಜೆಗೆಂದು ದೇವಸ್ಥಾನಕ್ಕೆ ಹೋಗಿದ್ದರು. ತೀವೃ ಹೃದಯಾಘಾತ ಸಂಭವಿಸಿದ್ದರಿಂದ ಶಿವಲಿಂಗದ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

    ಪ್ರದಕ್ಷಿಣೆ ಹಾಕುವಾಗ ವೆಂಕಟರಾಮಾರಾವ್ ಮೊದಲ ಬಾರಿಗೆ ಕುಸಿದು ಬಿದ್ದಿದ್ದಾರೆ. ಪಕ್ಕದಲ್ಲಿದ್ದ ಅರ್ಚಕರೋರ್ವರು ಅವರಿಗೆ ಮೇಲೇಳಲು ಸಹಾಯ ಮಾಡಿದ್ದಾರೆ. ಎದ್ದುನಿಂತ ಕೂಡಲೇ ಅರ್ಚಕ ನೇರವಾಗಿ ಶಿವಲಿಂಗದ ಮೇಲೆಯೇ ಬಿದ್ದು ಪ್ರಾಣಬಿಟ್ಟಿದ್ದಾರೆ. ಈ ಎಲ್ಲಾ ದೃಶ್ಯ ದೇವಸ್ಥಾನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    https://youtu.be/kKbwTD6vXqA

    ಅರ್ಚಕ ವೆಂಕಟರಾಮಾರಾವ್ ಶಿವನ ಅಪ್ರತಿಮ ಭಕ್ತರಾಗಿದ್ದರು. ಶಿವ ಪೂಜೆ ಮಾಡುತ್ತಲೇ ಪೂಜಾರಿ ಶಿವನಲ್ಲಿ ಲೀನರಾದದ್ದು ಗ್ರಾಮಸ್ಥರಲ್ಲಿ ಅಚ್ಚರಿಯನ್ನು ಮೂಡಿಸಿದೆ.