Tag: andhrapradesh

  • ಪ್ರಣಾಳಿಕೆಯನ್ನೇ ಮದ್ವೆ ಕಾರ್ಡ್‌ನಲ್ಲಿ ಮುದ್ರಿಸಿದ ಪವನ್ ಕಲ್ಯಾಣ್ ಬೆಂಬಲಿಗ!

    ಪ್ರಣಾಳಿಕೆಯನ್ನೇ ಮದ್ವೆ ಕಾರ್ಡ್‌ನಲ್ಲಿ ಮುದ್ರಿಸಿದ ಪವನ್ ಕಲ್ಯಾಣ್ ಬೆಂಬಲಿಗ!

    ಹೈದರಾಬಾದ್:‌ ಯಾವುದೇ ರಾಜಕೀಯ ಪಕ್ಷಕ್ಕೆ ಅದರ ಬೆಂಬಲಿಗರು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿರುತ್ತಾರೆ. ತಮ್ಮ ಪಕ್ಷದ ರಕ್ಷಣೆಗಾಗಿ ಇತರರೊಂದಿಗೆ ಹೋರಾಡಲು ಸಹ ಸಿದ್ಧರಾಗಿರುವ ಇಂತಹ ಅನೇಕ ಬೆಂಬಲಿಗರನ್ನು ನೀವು ಇಲ್ಲಿಯವರೆಗೆ ನೋಡಿರಬೇಕು. ಆದರೆ ಆಂಧ್ರಪ್ರದೇಶದ (Andhrapradesh) ವ್ಯಕ್ತಿಯೊಬ್ಬರು ತಮ್ಮ ನೆಚ್ಚಿನ ಪಕ್ಷದ ಬಗ್ಗೆ ಅಂತಹ ಉತ್ಸಾಹವನ್ನು ತೋರುವ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ.

    ಆಂಧ್ರಪ್ರದೇಶದ ಕಾಕಿನಾಡ ನಿವಾಸಿಯೊಬ್ಬರ ಮದುವೆ ಕಾರ್ಡ್‌ನಲ್ಲಿ ಜನಸೇನಾ ಪಕ್ಷದ (Janasena Party) ಪ್ರಣಾಳಿಕೆಯನ್ನು ಮುದ್ರಿಸಲಾಗಿದೆ. ವ್ಯಕ್ತಿ ಪಕ್ಷದ ನಾಯಕ ಪವನ್ ಕಲ್ಯಾಣ್ (Pawan Kalyan) ಅವರ ಬೆಂಬಲಿಗರಾಗಿದ್ದು, ಪಿಠಾಪುರಂನಲ್ಲಿ ಪವನ್ ಕಲ್ಯಾಣ್ ಅವರಿಗೆ ಮತ ನೀಡುವಂತೆ ಆಹ್ವಾನಿತರನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಲೂನ್‌ನಲ್ಲಿ ಜನರಿಗೆ ಕ್ಷೌರ ಮಾಡಿ ಮತಯಾಚನೆ- ಗಮನ ಸೆಳೆದ ಅಭ್ಯರ್ಥಿಯ ಚುನಾವಣಾ ಪ್ರಚಾರ

    ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿ ಜನರಿಗೆ ಮದುವೆ ಕಾರ್ಡ್‌ಗಳನ್ನು ವಿತರಿಸುತ್ತಿರುವುದನ್ನು ಕಾಣಬಹುದಾಗಿದೆ.

    ಬಿಜೆಪಿ-ಟಿಡಿಪಿ ಜೊತೆ ಮೈತ್ರಿ: ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಜನಸೇನಾ ಪಕ್ಷವನ್ನೂ ಕಟ್ಟಿದ್ದಾರೆ ಎಂಬುದು ಗಮನಾರ್ಹ. ಇತ್ತೀಚಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿತ್ತು. ‌ಪಕ್ಷವು ಮುಂಬರುವ ಲೋಕಸಭಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ-ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ.

  • ನಿಮ್ಮ ಜೀವನ ನಮಗೆ ಬಹಳ ಮುಖ್ಯ- ಟವರ್‌ನಿಂದ ಇಳಿಯುವಂತೆ ಜನರಿಗೆ ಮೋದಿ ಮನವಿ

    ನಿಮ್ಮ ಜೀವನ ನಮಗೆ ಬಹಳ ಮುಖ್ಯ- ಟವರ್‌ನಿಂದ ಇಳಿಯುವಂತೆ ಜನರಿಗೆ ಮೋದಿ ಮನವಿ

    ಅಮರಾವತಿ: ಆಂಧ್ರಪ್ರದೇಶದಲ್ಲಿ (Andhrapradesh) ಇಂದು ನಡೆದ ಎನ್‌ಡಿಎಯ ಮೊದಲ ಚುನಾವಣಾ ರ್ಯಾಲಿ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿದ್ಯುತ್ ಟವರ್‌ನಿಂದ ಕೆಳಗಿಳಿಯುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ನಮಾಡಿದ ಪ್ರಸಂಗ ನಡೆಯಿತು.

    ಪ್ರಧಾನಿ ಮೋದಿ ಅವರು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು (Chandra Babu Naidu) ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಅಂತೆಯೇ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆ ಪಟ್ಟಣದ ಸಮೀಪವಿರುವ ಬೊಪ್ಪುಡಿ ಗ್ರಾಮದಲ್ಲಿ ಸಭೆಯನ್ನುದ್ದೇಶಿಸಿ ಪವನ್‌ ಕಲ್ಯಾಣ್‌ (Pavan Kalyan) ಮಾಡುತ್ತಿದ್ದರು. ಈ ವೇಳೆ ಮೋದಿ (narendra Modi) ಗಮನಸೆಳೆಯಲು ಹಲವಾರು ಮಂದಿ ಲೈಟ್‌ ಟವರ್‌ ಏರಿರುವುದು ಪ್ರಧಾನಿ ಗಮನಕ್ಕೆ ಬಂದಿದೆ. ಕೂಡಲೇ ಮೋದಿಯವರು ಪವನ್‌ ಕಲ್ಯಾಣ್‌ ಬಳಿಯಿಂದ ಮೈಕ್‌ ತೆಗೆದುಕೊಂಡು ಟವರ್‌ನಿಂದ ಕೆಳಗಿಳಿಯುವಂತೆ ಮನವಿ ಮಾಡಿಕೊಂಡರು.

    ದಯವಿಟ್ಟು ಯಾರೂ ಟವರ್ ಹತ್ತಬೇಡಿ. ವಿದ್ಯುತ್ ತಂತಿಗಳು ಅಲ್ಲೊಂದು ಇಲ್ಲೊಂದು ಬಿದ್ದಿವೆ. ನಿಮ್ಮ ಜೀವನ ನಮಗೆ ಬಹಳ ಮುಖ್ಯ. ಏನಾದರೂ ಅವಘಡ ಸಂಭವಿಸಿದರೆ ನಮಗೆ ತುಂಬಾ ನೋವಾಗುತ್ತದೆ. ಹೀಗಾಗಿ ದಯವಿಟ್ಟು ಟವರ್‌ನಿಂದ ಕೆಳಗೆ ಇಳಿಯಿರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೆ ಜನರು ಟವರ್ ಹತ್ತದಂತೆ ಎಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಹೊಸ ದತ್ತಾಂಶ ರಿಲೀಸ್‌ – ಅತಿಹೆಚ್ಚು ದೇಣಿಗೆ ಪಡೆದ ಪಕ್ಷ ಯಾವುದು?

    ಈ ಹಿಂದೆ ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಯುವತಿಯೊಬ್ಬಳು ಲೈಟ್ ಟವರ್ ಅನ್ನು ಏರಿದ್ದಳು. ಈ ವೇಳೆಯೂ ಪ್ರಧಾನಿಯವರು ಆಕೆಯನ್ನು ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಅರುಣಾಚಲ, ಸಿಕ್ಕಿಂ ಅಸೆಂಬ್ಲಿ ಎಲೆಕ್ಷನ್ ಮತ ಎಣಿಕೆ ದಿನಾಂಕ ಬದಲಾವಣೆ

    ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಜೊತೆಗೆ ಲೋಕಸಭೆ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಲು ಹೊರಟಿದ್ದಾರೆ. ಚುನಾವಣೆಗೆ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಜೊತೆ ಮೈತ್ರಿ ಮಾಡಿಕೊಂಡಿದೆ. 2024ರ ಚುನಾವಣೆಯ ರ್ಯಾಲಿಯಲ್ಲಿ ಮೂವರೂ ನಾಯಕರು ವೇದಿಕೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲು.

    ಚುನಾವಣೆ: 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಆರಂಭವಾಗಿ ಜೂನ್ 1 ರಂದು ಮುಕ್ತಾಯವಾಗಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. 1 ನೇ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ, ಎರಡನೇ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಏಪ್ರಿಲ್ 26, ಮೇ 7 ರಂದು ಮೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20 ರಂದು 5 ನೇ ಹಂತ, ಮೇ 25 ರಂದು 6 ನೇ ಹಂತ ಮತ್ತು ಜೂನ್ 1 ರಂದು ಕೊನೆಯ ಮತ್ತು 7 ನೇ ಹಂತದ ಮತದಾನ ನಡೆಯಲಿದೆ. ಜೂನ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ.

    175 ಸದಸ್ಯ ಬಲದ ಆಂಧ್ರಪ್ರದೇಶ ವಿಧಾನಸಭೆಗೆ ಮೇ 13ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

  • ಕಾಂಡೋಮ್‌ ಪ್ಯಾಕ್‌ಗಳಲ್ಲಿ ರಾಜಕೀಯ ಪಕ್ಷಗಳ ಹೆಸರು!

    ಕಾಂಡೋಮ್‌ ಪ್ಯಾಕ್‌ಗಳಲ್ಲಿ ರಾಜಕೀಯ ಪಕ್ಷಗಳ ಹೆಸರು!

    ಭೋಪಾಲ್‌: ಲೋಕಸಭಾ ಚುನಾವಣೆಯ (Loksabha Election) ಹೊತ್ತಲ್ಲೇ ಕಾಂಡೋಮ್‌ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳು ಚುನಾವಣಾ ಪ್ರಚಾರದ ಸಾಧನವಾಗಿ ಮಾರ್ಪಟ್ಟಿವೆ.

    ಹೌದು. ಎರಡು ಪಕ್ಷಗಳ ಹೆಸರಿನಲ್ಲಿ ಕಾಂಡೋಮ್‌ ಪ್ಯಾಕ್‌ಗಳು (Condom Pack) ಮಾರಾಟವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. YSR ಕಾಂಗ್ರೆಸ್ ಪಕ್ಷ ಮತ್ತು ತೆಲುಗು ದೇಶಂ ಪಾರ್ಟಿ (TDP) ಪಕ್ಷದ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ವೀಡಿಯೋದಲ್ಲಿ ಏನಿದೆ..?: ಕಾಂಡೋಮ್‌ಗಳನ್ನು ಸಾರ್ವಜನಿಕರಿಗೆ ಹಂಚಲಾಗುತ್ತಿದೆ. ಈ ವೇಳೆ ವ್ಯಕ್ತಿಯೊಬ್ಬ ಕಾಂಡೋಮ್‌ಗಳನ್ನು ಏಕೆ ವಿತರಿಸಲಾಗುತ್ತಿದೆ ಎಂದು ಟಿಡಿಪಿ ಕಾರ್ಯಕರ್ತ ಎಂದು ಹೇಳಲಾದವನನ್ನು ಕೇಳಿದಾಗ, ಹೆಚ್ಚು ಮಕ್ಕಳಿದ್ದರೆ, ಹೆಚ್ಚಿನ ಹಣವನ್ನು ವಿತರಿಸಬೇಕು. ಅದಕ್ಕಾಗಿಯೇ ಈ ಕಾಂಡೋಮ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಉತ್ತರಿಸಿರುವುದನ್ನು ವೀಡಿಯೋದಲ್ಲಿ ಗಮನಿಸಬಹುದಾಗಿದೆ.

    ಒಟ್ಟಿನಲ್ಲಿ ಕಾಂಡೋಮ್ ಪ್ಯಾಕೆಟ್‌ಗಳು ಲೋಕಸಭಾ ಚುನಾವಣೆಗಾಗಿ ಮನೆ ಮನೆಗೆ ಪ್ರಚಾರ ನಡೆಸುತ್ತಿರುವ ಪಕ್ಷದ ಮುಖಂಡರು ಸಾರ್ವಜನಿಕರಿಗೆ ವಿತರಿಸಿದ ಕಿಟ್‌ನ ಭಾಗವಾಗಿವೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕಾಂಡೋಮ್‌ಗಳನ್ನು ವಿತರಿಸಿದ್ದಕ್ಕಾಗಿ ಎರಡೂ ಪಕ್ಷಗಳು ಪರಸ್ಪರ ಕೆಸರೆರಚಿಕೊಂಡಿರುವುದಾಗಿ ವರದಿಯಾಗಿದೆ.

    ವೈಎಸ್‌ಆರ್‌ಸಿಪಿ ತನ್ನ ಎಕ್ಸ್‌ ಖಾತೆಯಲ್ಲಿ ಟಿಡಿಪಿ ಪಕ್ಷವು ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ ಎಂದು ಇದರಿಂದ ಗೊತ್ತಾಗುತ್ತದೆ ಎಂಬುದಾಗಿ ವಾಗ್ದಾಳಿ ನಡೆಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, YSRCP ಲೋಗೋದೊಂದಿಗೆ ಟಿಡಿಪಿ ಇದೇ ರೀತಿಯ ಕಾಂಡೋಮ್ ಪ್ಯಾಕ್ ಅನ್ನು ಪೋಸ್ಟ್ ಮಾಡಿದೆ.

  • ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಿಂಹದ ಬಾಯಿಗೆ ಸಿಕ್ಕ- ಮುಂದೇನಾಯ್ತು?

    ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಿಂಹದ ಬಾಯಿಗೆ ಸಿಕ್ಕ- ಮುಂದೇನಾಯ್ತು?

    ಭೋಪಾಲ್:‌ ವ್ಯಕ್ತಿಯೊಬ್ಬ ಸೆಲ್ಫಿ ತೆಗೆದುಕೊಳ್ಳಲು ಸಿಂಹಗಳಿರುವ ಆವರಣಕ್ಕೆ ಹೋಗಿ ದುರಂತಕ್ಕೀಡಾದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್ (Sri Venkateswara Zoological Park) ನಲ್ಲಿ ಇಂದು ನಡೆದಿದೆ.

    ವ್ಯಕ್ತಿಯನ್ನು ಪ್ರಹ್ಲಾದ್ ಗುಜ್ಜರ್ (34) ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಬನ್ಸೂರ್ ಪುರಸಭೆಯ ನಿವಾಸಿ. ಈತ ಮೃಗಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಸೆಲ್ಫಿ (Selfie With Lion) ತೆಗೆದುಕೊಳ್ಳಲು ಸಿಂಹಗಳ ಆವರಣಕ್ಕೆ ನುಗ್ಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವ್ಯಕ್ತಿಯನ್ನು ತಿಂದಿಲ್ಲ: ನಿರ್ವಾಹಕರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಪ್ರವೇಶಿಸಬಹುದಾದ ಜಾಗದಿಂದ ಪ್ರವೇಶ ಕೊಟ್ಟಿದ್ದಾನೆ. ಝೂನಲ್ಲಿರುವ ಪ್ರಾಣಿ ಪಾಲಕರು ಗುಜ್ಜರ್‌ ನಿರ್ಬಂಧಿತ ಸ್ಥಳದಲ್ಲಿ ಪ್ರವೇಶಿಸುವುದನ್ನು ಗಮನಿಸಿ ಎಚ್ಚರಿಕೆ ನೀಡಿದರೂ ಆತ ಕ್ಯಾರೇ ಎಂದಿಲ್ಲ. 6 ಅಡಿ ಎತ್ತರದ ಬೇಲಿಯನ್ನು ದಾಟಿ ಸಿಂಹಗಳ ಆವರಣಕ್ಕೆ ಹಾರಿದ್ದಾನೆ. ಈ ವೇಳೆ ಸಿಂಹ (Lion Attack) ಆತನ ಮೇಲೆ ದಾಳಿ ಮಾಡಿದೆ. ದೇಹದ ಯಾವುದೇ ಭಾಗವನ್ನು ತಿನ್ನಲಿಲ್ಲ. ಆದರೆ ಗಂಭೀರ ಗಾಯಗೊಂಡ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಮೃಗಾಲಯದ ಕ್ಯೂರೇಟರ್ ಸಿ ಸೆಲ್ವಂ ತಿಳಿಸಿದ್ದಾರೆ. ಇದನ್ನೂ ಓದಿ: ‘ಕರಿಮಣಿ ಮಾಲೀಕ ನೀನಲ್ಲ’- ಪತ್ನಿ ರೀಲ್ಸ್‌ನಿಂದ ಬೇಸತ್ತು ಪತಿ ಸೂಸೈಡ್

    ಕೇರ್‌ಟೇಕರ್ ಸ್ಥಳಕ್ಕೆ ದೌಡಾಯಿಸುವ ಮುನ್ನವೇ ಗುಜ್ಜರ್‌ನನ್ನು ‘ಡೊಂಗಲ್‌ಪುರ’ ಎಂಬ ಸಿಂಹವು ಕೊಂದು ಹಾಕಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಘಟನೆಯ ಸಮಯದಲ್ಲಿ ಗುಜ್ಜರ್ ಮದ್ಯದ ಅಮಲಿನಲ್ಲಿದ್ನೋ ಎಂದು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ದಾಳಿಯ ಬಳಿಕ ಸಿಂಹದ ಆವರಣಕ್ಕೆ ಬೀಗ ಹಾಕಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

    ಘಟನೆಯ ಬಳಿಕ ವ್ಯಕ್ತಿಯ ಗುರುತು ಪತ್ತೆಗೆ ಸಿಂಹದ ಆವರಣ ಹುಡುಕಾಡಿದಾಗ ವ್ಯಕ್ತಿಯ ಪರ್ಸ್‌ ಪತ್ತೆಯಾಗಿದೆ. ಅದರಲ್ಲಿ ಆಧಾರ್ ಕಾರ್ಡ್‌ ಹಾಗೂ ಗುರುತಿನ ಚೀಟಿ ಪತ್ತೆಯಾಗಿದೆ. ಬಳಿಕ ಸಿಬ್ಬಂದಿ ವ್ಯಕ್ತಿಯ ಕುಟುಂಬವನ್ನು ಸಂಪರ್ಕಿಸಿದ್ದಾರೆ.

  • ಆಂಧ್ರದಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆಯಾಗಿ ವೈಎಸ್ ಶರ್ಮಿಳಾ ಆಯ್ಕೆ?

    ಆಂಧ್ರದಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆಯಾಗಿ ವೈಎಸ್ ಶರ್ಮಿಳಾ ಆಯ್ಕೆ?

    ಹೈದರಾಬಾದ್:‌ ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ವೈಎಸ್ ಶರ್ಮಿಳಾ (YS Sharmila) ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬುದಾಗಿ ವರದಿಯಾಗಿದೆ.

    ಮೂಲಗಳ ಪ್ರಕಾರ, ಆಂಧ್ರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಗಿಡುಗು ರುದ್ರರಾಜು  (Gidugu Rudra Raju) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರ ಸ್ಥಾನಕ್ಕೆ ವೈಎಸ್ ಶರ್ಮಿಳಾ ಅವರನ್ನು ನೇಮಕ ಮಾಡಿ ಶೀಘ್ರದಲ್ಲೇ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಲಿದೆ ಎನ್ನಲಾಗಿದೆ.

    ಈ ತಿಂಗಳ ಆರಂಭದಲ್ಲಿ ಆಂಧ್ರಪ್ರದೇಶದ (Andhpradesh) ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದರು. ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗಲಾಗ್ತಿಲ್ಲ, ಇದು ನನ್ನ ದುರದೃಷ್ಟ: ಜಗ್ಗಿ ವಾಸುದೇವ್

    ಕಾಂಗ್ರೆಸ್ ಅನ್ನು ಶ್ಲಾಘಿಸಿದ ಶರ್ಮಿಳಾ, ಇದು ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ ಯಾಕೆಂದರೆ ಅದು ಎಲ್ಲಾ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುತ್ತದೆ ಎಂದು ಹೇಳಿದರು.

    ಕಾಂಗ್ರೆಸ್ ಸೇರುವ ಮೊದಲು ವೈಎಸ್ ಶರ್ಮಿಳಾ ಅವರು ಪಕ್ಷಕ್ಕೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದರು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಎಂದಿದ್ದರು.

  • ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು

    ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು

    ಹೈದರಾಬಾದ್: ಆಂಧ್ರ ಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ (Chandrababu Naidu) ಆಂಧ್ರಪ್ರದೇಶ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಬಹುಕೋಟಿ ಕೌಶಲಾಭಿವೃದ್ಧಿ ನಿಗಮ ಹಗರಣ (Skill Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಜೈಲಿನಲ್ಲಿದ್ದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಇದೀಗ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

    ಅಕ್ಟೋಬರ್ 18 ರಂದು ಕುಟುಂಬದ ಸದಸ್ಯರು ಹಾಗೂ ಟಿಡಿಪಿ (TDP) ಮುಖಂಡರು ರಾಜಮಹೇಂದ್ರವರಂನ ಸೆಂಟ್ರಲ್ ಜೈಲಿಗೆ ತೆರಳಿದ್ದರು. ಪತ್ನಿ ಭುವನೇಶ್ವರಿ, ಪುತ್ರ ಲೋಕೇಶ್ ಮತ್ತು ಸೊಸೆ ಬ್ರಹ್ಮಣಿ ಅವರೊಂದಿಗೆ ಪಕ್ಷದ ಮುಖಂಡರಾದ ಚಿನರಾಜಪ್ಪ, ರಾಮಮೋಹನ್ ನಾಯ್ಡು, ಬುಚ್ಚಯ್ಯ ಚೌಧರಿ, ಕಲಾ ವೆಂಕಟರಾವ್ ಮತ್ತಿತರರು ನಾಯ್ಡು ಅವರನ್ನು ಭೇಟಿಯಾಗಿದ್ದರು. ಬಳಿಕ ನಾಯ್ಡು ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು.

    ಈ ಸಂಬಂಧ ಟಿಡಿಪಿ ನಾಯಕರು ಸುದ್ದಿಗಾರರೊಂದಿಗೆ ಮಾತನಾಡಿ, ನಾಯ್ಡು ಅವರನ್ನು ನೋಡಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅವರ ಆರೋಗ್ಯ ಬಗ್ಗೆ ಚಿಂತಿತರಾಗಿದ್ದಾರೆ. ಹೀಗಾಗಿ ಅವರಿಗೆ ವೈದ್ಯಕೀಯ ಪರೀಕ್ಷೆಯ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಗಳನ್ನು ಜೈಲು ಅಧಿಕಾರಿಗಳಿಂದ ಲಿಖಿತ ರೂಪದಲ್ಲಿ ಕೇಳಿದ್ದೇವೆ. ಅಲ್ಲದೆ ಪತಿಯ ಅನಾರೋಗ್ಯ ಕುರಿತಾಗಿ ಭುವನೇಶ್ವರಿ ಕೂಡ ಪತ್ರ ಬರೆದಿದ್ದಾರೆ ಎಂದಿದ್ದರು. ಇದನ್ನೂ ಓದಿ: ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

    ಹೈದರಾಬಾದ್ ಮತ್ತು ವಿಜಯವಾಡದಲ್ಲಿ ಚಂದ್ರಬಾಬು ನಾಯ್ಡು ಅವರು ವೈದ್ಯರ ತಂಡವನ್ನು ಹೊಂದಿದ್ದಾರೆ. ಹೀಗಾಗಿ ನಾಯ್ಡು ಆರೋಗ್ಯದ ರಿಪೋರ್ಟ್‍ಗಳನ್ನು ಅವರಿಗೆ ಕಳುಹಿಸಿದರೆ ಅವರು ಸೂಕ್ತ ವೈದ್ಯಕೀಯ ಸಲಹೆ ನೀಡಲು ಸಾಧ್ಯವಾಗುತ್ತದೆ ಎಂದು ಟಿಡಿಪಿ ನಾಯಕರು ಹೇಳಿದ್ದರು.

    ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿತ್ತು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಲಿನಿಂದ ಹೊಡೆದಾಡೋ ಜಾತ್ರೆ- ಮೂವರ ಸ್ಥಿತಿ ಗಂಭೀರ, ನೂರಕ್ಕೂ ಹೆಚ್ಚು ಮಂದಿಗೆ ಗಾಯ

    ಕೋಲಿನಿಂದ ಹೊಡೆದಾಡೋ ಜಾತ್ರೆ- ಮೂವರ ಸ್ಥಿತಿ ಗಂಭೀರ, ನೂರಕ್ಕೂ ಹೆಚ್ಚು ಮಂದಿಗೆ ಗಾಯ

    ಅಮರಾವತಿ: ಆಂಧ್ರದ ಕರ್ನೂಲು ಜಿಲ್ಲೆಯ ಹೊಳಗುಂದ ಮಂಡಲದ ದೇವರಗುಡ್ಡ ಎಂಬಲ್ಲಿ ಮತ್ತೊಮ್ಮೆ ರಕ್ತ ಸುರಿದಿದೆ. ಕೋಲುಗಳನ್ನು ಹಿಡಿದು ಬಡಿದಾಡಿಕೊಳ್ಳುವ (Stick Fight) ಸಂಪ್ರದಾಯದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

    ಆಂಧ್ರಪ್ರದೇಶದ (Andhrapradesh) ಗಡಿ ಭಾಗದಲ್ಲಿ ದೇವರ ಗುಡ್ಡದಲ್ಲಿ ವಿಜಯದಶಮಿಯ ರಾತ್ರಿ ವಿಶಿಷ್ಠ ಆಚರಣೆಯೊಂದು ನಡೆಯುತ್ತದೆ. ನೆರಣಕಿ ಗ್ರಾಮಕ್ಕೆ ಸೇರಿದ ಮೀಸಲು ಅರಣ್ಯಪ್ರದೇಶದ ಗುಡ್ಡದ ಮೇಲಿರೋ ಮಾಳ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನರಾತ್ರಿ ಇಲ್ಲಿನ ಮಾಳಮ್ಮ ಮತ್ತು ಮಲ್ಲೇಶ್ವರ ಸ್ವಾಮಿಗೆ ಕಲ್ಯಾಣೋತ್ಸವ ನಡೆಯುತ್ತದೆ. ಮಲ್ಲೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ನೆರಣಕಿ ಗ್ರಾಮದ ಭಕ್ತರು ಬೆಟ್ಟಕ್ಕೆ ಬರುತ್ತಾರೆ.

    ಬರುವಾಗ ಮತ್ತು ಹೋಗುವಾಗ ಈ ಉತ್ಸವ ಮೂರ್ತಿಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಬೇಕೆಂದು ಸುತ್ತಮುತ್ತಲಿನ ಗ್ರಾಮಸ್ಥರು ಪ್ರಯತ್ನಿಸುತ್ತಾರೆ. ಈ ವೇಳೆ ಪರಸ್ಪರ ಬಡಿಗೆ ಹಿಡಿದು ಕೊಂಡು ಹೊಡೆದಾಡಿಕೊಳ್ಳುತ್ತಾರೆ. ಇದನ್ನು ನೋಡಲು ಮತ್ತು ಅದರಲ್ಲಿ ಪಾಲ್ಗೊಳ್ಳಲು ಈ ಬೆಟ್ಟ ಪ್ರದೇಶದಕ್ಕೆ ಸಾವಿರಾರು ಜನ ಬಂದು ಸೇರುತ್ತಾರೆ. ಮಧ್ಯರಾತ್ರಿ 1 ರಿಂದ 3 ಗಂಟೆವರೆಗೆ ಈ ಕಾಳಗ ನಡೆಯುತ್ತದೆ. ಇದನ್ನೂ ಓದಿ: ಭಾರತ ಅಭಿವೃದ್ಧಿಯಾದರೆ ಕೆಲವರ ಆಟ ನಡೆಯಲ್ಲ: ಮೋಹನ್ ಭಾಗವತ್

    ಈ ಕಾಳಗಕ್ಕೆ ನಿಷೇಧವಿದ್ರೂ ಪೊಲೀಸರ ಎದುರಿಗೇ ಈ ಕಾಳಗ ನಡೆದು ಪರಸ್ಪರ ಬಡಿದಾಡಿಕೊಳ್ಳುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    – ಮೋದಿ, ಇಸ್ರೋ ಟೀಂಗೆ ಸಚಿವ ಧನ್ಯವಾದ

    ಶ್ರೀಹರಿಕೋಟಾ: ಇಂದು ಬೆಳಗ್ಗೆ 11.50ಕ್ಕೆ ಆಂಧ್ರಪ್ರದೇಶದ (Andhrapradesh) ಶ್ರೀಹರಿಕೋಟಾದಿಂದ (Sriharikota) ಸೂರ್ಯ ಶಿಕಾರಿಗೆ ಹೊರಟ ಆದಿತ್ಯ ಎಲ್ 1 (Aditya L1) ಮಿಷನ್ ಯಶಸ್ವಿಯಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದ್ದಾರೆ.

    ಮಿಷನ್ ಯಶಸ್ವಿ ಬಗ್ಗೆ ಘೋಷಣೆ ಮಾಡಿದ ಅವರು, ಯಶಸ್ವಿಯಾಗಿ ಆದಿತ್ಯ ಎಲ್1 ಆರ್ಬಿಟ್ ಗೆ ಇನ್ ಸರ್ಟ್ ಮಾಡಲಾಗಿದೆ ಎಂದರು. ಇದೇ ವೇಳೆ ಆದಿತ್ಯ ಐ1 ಟೀಂಗೆ ಸೋಮನಾಥ್ (S Somanath) ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    ಈ ಸಂದರ್ಭದಲ್ಲಿ ಚಂದ್ರಯಾನದ (Chandrayaan-3) ಬಗ್ಗೆ ಮಾಹಿತಿ ನೀಡಿದ ಸೋಮನಾಥ್, ಚಂದ್ರಯಾನದ ಲ್ಯಾಂಡರ್, ರೋವರ್ ಇನ್ನೂ ಯಶಸ್ವಿಯಾಗಿ ಕೆಲಸ ನಿರ್ವಹಣೆ ಮಾಡುತ್ತಿವೆ. ಗುಡ್ ನ್ಯೂಸ್ ಅಂದ್ರೆ ರೋವರ್ 100 ಮೀಟರ್ ವರೆಗೂ ಸಂಚಾರ ಮಾಡಿದೆ. ಚಂದ್ರಯಾನದ ಅಧ್ಯಯನ ಯಶಸ್ವಿಯಾಗಿ ಮುಂದುವರಿದಿದೆ ಎಂದರು.

    ಇತ್ತ ಸಚಿವ ಜೀತೇಂದ್ರ ಸಿಂಗ್ ಅವರು ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ಮೋದಿ ಹಾಗೂ ಇಸ್ರೋ ವಿಜ್ಞಾನಿಗಳಿಗೆ ಧನ್ಯವಾದ ಹೇಳ್ತೀನಿ. ಇಸ್ರೋ ವಿಜ್ಞಾನಿಗಳು ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಚಂದ್ರಯಾನ ಯಶಸ್ವಿ ಬಳಿಕ ಆದಿತ್ಯ ಎಲ್‌ 1 ಯಶಸ್ವಿಯಾಗಿದೆ. ಈ ಸಾಧನೆ ವಿಶ್ವದ ಗಮನ ಸೆಳೆದಿದೆ. ಆದಿತ್ಯ ಎಲ್‌ 1ಗೆ ಉಪಕರಣ ಸಿದ್ಧ ಮಾಡಿಕೊಂಡ ವಿವಿಧ ಸಂಸ್ಥೆಗಳಿಗೆ ಧನ್ಯವಾದಗಳು ಎಂದು ಅವರು ಹೇಳಿದರು.

    ಒಟ್ಟಿನಲ್ಲಿ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸೂರ್ಯಯಾನ ಯಶಸ್ವಿಯಾಗುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದು, ಭಾರತೀಯರ ಕನಸು ನನಸಾಗಿದೆ. ಇನ್ನು ಮುಂದೆ ಆದಿತ್ಯ ಎಲ್‌ 1 125 ದಿನ ತನ್ನ ಜರ್ನಿ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ಮುಂದೆ ತಿರುಪತಿ ಹೋಗುವವರು ಕೈಯಲ್ಲಿ ಕೋಲು ಹಿಡಿದುಕೊಳ್ಳಿ!

    ಇನ್ಮುಂದೆ ತಿರುಪತಿ ಹೋಗುವವರು ಕೈಯಲ್ಲಿ ಕೋಲು ಹಿಡಿದುಕೊಳ್ಳಿ!

    ಹೈದರಾಬಾದ್: ಇನ್ಮುಂದೆ ತಿರುಪತಿ (Tirupati) ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಕೈಯಲ್ಲಿ ಕೋಲು ಹಿಡಿದುಕೊಂಡು ಹೋಗಬಹುದೆಂದು ತಿರುಮಲ ತಿರುಪತಿ ದೇವಸ್ಥಾನ (TTD) ಹೇಳಿದೆ.

    ಹೌದು. ಇತ್ತೀಚೆಗೆ 6 ವರ್ಷದ ಬಾಲಕಿ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಟಿಟಿಡಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ಕೋಲು ಹಿಡಿದುಕೊಂಡು ಹೋಗುವಂತೆ ತಿಳಿಸಿದೆ.

    ಪಾದಾಚಾರಿ ಮಾರ್ಗವಾಗಿ ದೇವಾಸ್ಥಾನಕ್ಕೆ ಹೋಗುವಾಗ ಯಾತ್ರಾರ್ಥಿಗಳು ಬ್ಯಾಚ್ ಬ್ಯಾಚ್ ಆಗಿ ಹೋಗಬೇಕು. ಅಲ್ಲದೆ ಈ ಬ್ಯಾಚ್‍ಗೆ ಓರ್ವ ಸೆಕ್ಯುರಿಟಿ ಗಾರ್ಡ್ ಇರಲಿದ್ದಾರೆ ಎಂದು ಕೂಡ ತಿಳಿಸಿದೆ. ಇದನ್ನೂ ಓದಿ: ತಿರುಪತಿ ದೇವಾಲಯದ ಬಳಿ ಬಾಲಕಿಯನ್ನು ಕೊಂದಿದ್ದ ಚಿರತೆ ಸೆರೆ

    ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡುಪ್ರಾಣಿಗಳು ದಾಳಿ ಮಾಡಿದರೆ ಅವುಗಳಿಂದ ರಕ್ಷಿಸಿಕೊಳ್ಳುವ ಸಲುವಾಗಿ ಸಾಧ್ಯವಾದಷ್ಟು ಪ್ರತಿಯೊಬ್ಬ ಯಾತ್ರಿಗೂ ಕೋಲನ್ನು ನೀಡಲಾಗುತ್ತದೆ. ಇನ್ನು ದಾರಿಯಲ್ಲಿ ಹೋಗುವಾಗ ಕೋತಿ ಮುಂತಾದ ಪ್ರಾಣಿಗಳಿಗೆ ಆಹಾರ ನೀಡದಂತೆ ಹಾಗೂ ಕಸ ಹಾಕದಂತೆ ಸೂಚಿಸಲಾಗಿದೆ. ಈ ಮೂಲಕ ಪ್ರಾಣಿಗಳನ್ನು ಆಕರ್ಷಿಸದಂತೆ  ಟಿಟಿಡಿ ಅಧ್ಯಕ್ಷ ಬಿ ಕರುಣಾಕರ್ ರೆಡ್ಡಿ ಹೇಳಿದ್ದಾರೆ.

    ದೇವಾಲಯವು ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಪಾದಚಾರಿ ಪ್ರದೇಶಕ್ಕೆ ಬೇಲಿ ಹಾಕುವ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೆಲವೊಮ್ಮೆ ದೇಗುಲದಲ್ಲಿ ನೂಕುನುಗ್ಗಲು ಕಂಡುಬಂದರೂ ಕೆಲವು ಕ್ರಮಗಳು ಭಕ್ತರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಅಧಿಕಾರಿ ಹೇಳಿದರು.

    ಬಾಲಕಿ ಮೇಲೆ ಚಿರತೆ ದಾಳಿ: ಕಳೆದ ವಾರ 6 ವರ್ಷದ ಬಾಲಕಿ ಲಕ್ಷಿತಾ ತನ್ನ ಪೋಷಕರೊಂದಿಗೆ ತಿರುಮಲ ಬೆಟ್ಟಕ್ಕೆ ತೆರಳುತ್ತಿದ್ದಾಗ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಬಾಲಕಿ ಪೋಷಕರೊಂದಿಗೆ ಪಾದಯಾತ್ರೆಯಲ್ಲಿದ್ದಾಗ ಆಕೆ ಕಾಡಿಗೆ ಹೋಗಿದ್ದಾಳೆ ಎಂದು ಶಂಕಿಸಲಾಗಿದೆ. ಬಳಿಕ ತಿರುಪತಿಯ ಬೆಟ್ಟದ ದೇಗುಲಕ್ಕೆ ಹೋಗುವ ಪಾದಾಚಾರಿ ಮಾರ್ಗದಲ್ಲಿ ಪೊದೆ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಮೃತದೇಹದ ಮೇಲೆ ಕಾಡು ಪ್ರಾಣಿ ದಾಳಿ ಮಾಡಿದ್ದ ಗಾಯದ ಗುರುತುಗಳು ಪತ್ತೆಯಾಗಿತ್ತು. ಇದಾದ ಬಳಿಕ ಪ್ರದೇಶದಲ್ಲಿ 12 ಕ್ಯಾಮೆರಾಗಳನ್ನು ಅಳವಡಿಸಲಾಗತ್ತು. ಶನಿವಾರ ರಾತ್ರಿ ಪ್ರದೇಶದಲ್ಲಿ ಚಿರತೆಯ ಚಲನವಲನ ದಾಖಲಾಗಿತ್ತು. ಬಳಿಕ ಅರಣ್ಯಾಧಿಕಾರಿಗಳು ಬೋನು ಹಾಕಿ ಇದೀಗ ಚಿರತೆಯನ್ನು ಸೆರೆಹಿಡಿದಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರ, ಕರ್ನಾಟಕ, ಮಹಾರಾಷ್ಟ್ರದಿಂದ ಟೊಮೆಟೋ ಖರೀದಿಗೆ ಕೇಂದ್ರ ಸೂಚನೆ

    ಆಂಧ್ರ, ಕರ್ನಾಟಕ, ಮಹಾರಾಷ್ಟ್ರದಿಂದ ಟೊಮೆಟೋ ಖರೀದಿಗೆ ಕೇಂದ್ರ ಸೂಚನೆ

    ನವದೆಹಲಿ: ದೇಶಾದ್ಯಂತ ಟೊಮೆಟೋ ದರದಲ್ಲಿ ಏರಿಕೆ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬೆಲೆ ಏರಿಕೆಗೆ ಮೂಗುದಾರ ಹಾಕಲು ಮುಂದಾಗಿದೆ.

    ಹೌದು. ಕಳೆದ ಒಂದು ತಿಂಗಳಿಂದ ಟೊಮೆಟೋ ದರ (Tomato Price) ಗಗನಕ್ಕೇರಿದೆ. ಇದೀಗ ದರ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕರ್ನಾಟಕ, ಮಹಾರಾಷ್ಟ್ರ, ಆಂಧ್ರದ ಮಂಡಿಗಳಿಂದ ಟೊಮೆಟೋ ಖರೀದಿಸಿ ಸಾರ್ವಜನಿಕ ಬಳಕೆಗೆ ವಿತರಣೆ ಮಾಡುವಂತೆ ಸಹಕಾರಿ ಸಂಸ್ಥೆಗಳಾದ ನಾಫೆಡ್ ಮತ್ತು ಎನ್‍ಸಿಸಿಎಫ್‍ಗೆ ನಿರ್ದೇಶನ ನೀಡಿದೆ. ಟೊಮೆಟೋ ಬೆಲೆ ಹೆಚ್ಚಳವಿರುವ ನಗರಗಳಿಗೆ ಪೂರೈಕೆ ಮಾಡುವಂತೆ ಆದೇಶಿಸಿದೆ.

    ಭಾರೀ ಮಳೆಯಿಂದಾಗಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಟೊಮೆಟೋ ದರ 200 ರೂಪಯಿಯ ಗಡಿ ದಾಟಿದೆ. ಹೀಗಾಗಿ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ದಕ್ಷಿಣದ ರಾಜ್ಯಗಳಿಂದ ಟೊಮೆಟೋ ಖರೀದಿಸಲಿದೆ. ಇದನ್ನೂ ಓದಿ: ಜೈನಮುನಿ ಹಂತಕನ ಮನೆಯ ಮೂಕಪ್ರಾಣಿಗಳ ಪಾಲನೆ- ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ಸಾಮಾನ್ಯವಾಗಿ ಟೊಮೆಟೋಗಳಿಗೆ ಕಡಿಮೆ ಉತ್ಪಾದನೆಯ ತಿಂಗಳುಗಳಾಗಿವೆ. ಆದರೆ ಇದು ಬೇಡಿಕೆಗೆ ಅನುಗುಣವಾಗಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ದರ ಏರಿಕೆ ಈ ತಿಂಗಳುಗಳಲ್ಲಿ ಸಾಮಾನ್ಯವಾಗಿರುತ್ತದೆ. ಆಗಸ್ಟ್ ಹೊತ್ತಿಗೆ ಟೊಮೆಟೋ ದರ ಇಳಿಯಬಹುದು ಎಂದು ಸಚಿವಾಲಯ ತಿಳಿಸಿದೆ.

    ಈ ಮಧ್ಯೆ ರಾಜ್ಯದ ರೈತರಿಗೆ ಟೊಮೆಟೋ ಬೆಳೆ ಕಳ್ಳರ ಪಾಲಾಗೋದನ್ನು ತಡೆಯೋದೆ ದೊಡ್ಡ ಕೆಲಸವಾಗಿದೆ. ದಾವಣಗೆರೆಯ ಮಾಯಕೊಂಡದಲ್ಲಿ ರೈತರು ಟೊಮೆಟೋ ಹೊಲಗಳಲ್ಲಿ ಹಗಲುರಾತ್ರಿ ದೊಣ್ಣೆ ಹಿಡಿದು ನಾಯಿ ಸಮೇತ ಕಾವಲು ಕಾಯ್ತಿದ್ದಾರೆ. ಕೋಲಾರದ ಹುತ್ತೂರಿನಲ್ಲಿ ಸತೀಶ್ ಎನ್ನುವವರ ಹೊಲದಿಂದ ಟೊಮೆಟೋ ಕಳುವಾಗಿದೆ. ಹೀಗಾಗಿ ಸತೀಶ್ ಕುಟುಂಬ ಉಳಿದ ಬೆಳೆ ರಕ್ಷಿಸಿಕೊಳ್ಳಲು ಇಡೀ ರಾತ್ರಿ ನಿದ್ದೆಗೆಟ್ಟಿದೆ. ಚಿಕ್ಕಬಳ್ಳಾಪುರದಲ್ಲಿಯೂ ಇದೇ ಪರಿಸ್ಥಿತಿ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]