Tag: andhrapradesh

  • ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ವೆಚ್ಚದ ಕಟ್ಟಡ ಧ್ವಂಸ

    ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ವೆಚ್ಚದ ಕಟ್ಟಡ ಧ್ವಂಸ

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.

    ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ.

    2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಈ ಕಟ್ಟಡವನ್ನು ನಿರ್ಮಾಣ ಮಾಡಿತ್ತು. 5 ಕೋಟಿ ವೆಚ್ಚದಲ್ಲಿ ಆರಂಭವಾಗಿದ್ದ ಈ ಕಟ್ಟಡ, ಕಾಮಗಾರಿ ಪೂರ್ಣಗೊಂಡಾಗ 8 ಕೋಟಿ ವೆಚ್ಚ ವ್ಯಯಿಸಲಾಗಿತ್ತು. ಚಂದ್ರ ಬಾಬು ಅವರು ಈ ಕಟ್ಟಡವನ್ನು ಅವರು ಪಕ್ಷದ ಕಾರ್ಯಕರ್ತರು ಮತ್ತು ಜನರನ್ನು ಭೇಟಿಯಾಗಲು ಉಪಯೋಗಿಸುತ್ತಿದ್ದರು. ಆದರೆ ಈ ಕಟ್ಟಡ ಅಕ್ರಮವಾಗಿದ್ದರಿಂದ ಜಗನ್ ಧ್ವಂಸಗೊಳಿಸಲು ಆದೇಶ ನೀಡಿದ್ದರು.

    2017ರಲ್ಲಿ ನಾಯ್ಡು ಮನೆ ಸಮೀಪದಲ್ಲೇ 8 ಕೋಟಿ ರೂ. ವೆಚ್ಚದಲ್ಲಿ ಈ ವೇದಿಕೆ ನಿರ್ಮಿಸಿದ್ದರು. ಮುಖ್ಯಮಂತ್ರಿ ಆದ ನಂತರ ಜಗನ್ ಮೊದಲ ಬಾರಿಗೆ ಪ್ರಜಾ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನೂ ನಡೆಸಿದ್ದರು. ಈ ವೇಳೆ, ಇದೇ ಕೊನೇ ಸಭೆ. ಪಾರದರ್ಶಕತೆ ನಿಟ್ಟಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಈ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಹೇಳಿದ್ದರು.

    ಕೆಲ ವಾರಗಳ ಹಿಂದೆಯಷ್ಟೇ ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಸರ್ಕಾರ ವಾಪಸ್ ಪಡೆಯಲಾಗಿತ್ತು. ಇತ್ತ ಜೂನ್ 4 ರಂದು ಪ್ರಜಾ ವೇದಿಕಾ ಬಳಿ ಇರುವ ಮನೆಯಲ್ಲೇ ಇರಲು ಅವಕಾಶ ಕೊಡುವಂತೆ ನಾಯ್ಡು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಅಲ್ಲದೇ `ಪ್ರಜಾ ವೇದಿಕಾ’ ಹಾಲ್ ಅನ್ನು ಪಕ್ಷದ ಕಾರ್ಯಗಳನ್ನು ನಡೆಸಲು ಬಳಕೆ ಮಾಡಲು ನೀಡಬೇಕೆಂದು ಪತ್ರದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಜಗನ್ ಸರ್ಕಾರ ಕೃಷ್ಣ ನದಿಯ ತಟದಲ್ಲಿ ನಿರ್ಮಾಣ ಮಾಡಿರುವ ಈ ಮನೆಯೂ ಕೂಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದೆ.

  • ಆಂಧ್ರದಲ್ಲಿ ಪಟ್ಟಕ್ಕೇರಿದ ಜಗನ್ ಮೋಹನ್ ರೆಡ್ಡಿ- ಸಂತಸದಲ್ಲಿ ರಾಮುಲು-ರೆಡ್ಡಿ!

    ಆಂಧ್ರದಲ್ಲಿ ಪಟ್ಟಕ್ಕೇರಿದ ಜಗನ್ ಮೋಹನ್ ರೆಡ್ಡಿ- ಸಂತಸದಲ್ಲಿ ರಾಮುಲು-ರೆಡ್ಡಿ!

    ಬಳ್ಳಾರಿ: ಮಾಜಿ ಸಚಿವ, ಗಣಿಧಣಿ, ಜನಾರ್ದನ ರೆಡ್ಡಿ ಹಾಗೂ ಶಾಸಕ ಶ್ರೀರಾಮುಲುರ ಅದೃಷ್ಟ ಖುಲಾಯಿಸಿದೆ. ಕಷ್ಟದಲ್ಲಿ ಕೈಬಿಡದೇ ಜಗನ್ ಜೊತೆಗಿದ್ದ ರೆಡ್ಡಿ-ರಾಮುಲುರ ವೈಭವ ಮರುಕಳಿಸುವ ಕಾಲ ಸನ್ನಿಹಿತವಾಗಿದೆ. ಆಂಧ್ರಪ್ರದೇಶದಲ್ಲಿ ಆಪ್ತಮಿತ್ರ ವೈಎಸ್‍ಆರ್ ಜಗನ್, ಸಿಎಂ ಆಗೋ ಮೂಲಕ ಲೋಕಕಣದಲ್ಲಿ ಭರ್ಜರಿ ಗೆಲುವು ಸಾಧಿಸಿರುವುದು ರೆಡ್ಡಿ-ರಾಮುಲು ಬಳಗದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

    ಆಂಧ್ರದ ಮಾಜಿ ಸಿಎಂ ವೈಎಸ್ ರಾಜಶೇಖರರೆಡ್ಡಿಗೂ ಬಳ್ಳಾರಿಯ ಗಾಲಿ ಜರ್ನಾದನರೆಡ್ಡಿಗೂ ಎಲ್ಲಿಲ್ಲದ ನಂಟು. ಇದೀಗ ಆಂಧ್ರದಲ್ಲಿ ರಾಜಶೇಖರ ರೆಡ್ಡಿ ಮಗ ಜಗನ್ ಮೋಹನ್‍ರೆಡ್ಡಿ ಗೆಲುವಿನಿಂದ ರಾಮುಲು ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಯಾಕಂದ್ರೆ ಜಗನ್ ಗೆಲುವಿನಿಂದ ರೆಡ್ಡಿ ರಾಮುಲುರ ವೈಭವದ ದಿನಗಳು ಮತ್ತೆ ಮರುಕಳಿಸೋ ಸಾಧ್ಯತೆ ಇದೆ.

    ರಾಜಶೇಖರ್ ರೆಡ್ಡಿ ಜೊತೆಗೆ ವ್ಯಾವಹಾರಿಕ ಹಾಗೂ ರಾಜಕೀಯ ನಂಟು ಹೊಂದಿದ್ದ ರೆಡ್ಡಿ-ರಾಮುಲು ಜಗನ್ ಮೋಹನ್ ರೆಡ್ಡಿಯ ಕಷ್ಟ ಕಾಲದಲ್ಲೂ ಜೊತೆಗಿದ್ದರು. ಅಲ್ಲದೆ ಬಳ್ಳಾರಿ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಗಡಿಗೆ ಹೊಂದಿಕೊಂಡಿರೋ ಆಂಧ್ರದ ಹಲವೆಡೆ ಜಗನ್ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಲು ಶ್ರಮವಹಿಸಿದ್ದರು. ಹೀಗಾಗಿ ಜಗನ್ ಇದೀಗ ಅಧಿಕಾರಕ್ಕೆ ಬಂದಿರೋದು ಆಂಧ್ರದಲ್ಲಿ ಅರ್ಧಕ್ಕೆ ನಿಂತಿರೋ ರೆಡ್ಡಿ-ರಾಮುಲುರ ಹಲವು ಯೋಜನೆಗಳಿಗೆ ಮತ್ತೆ ಚಾಲನೆ ಸಿಗಲಿದೆ.

    ವೈಎಸ್‍ಆರ್ ಕುಟುಂಬದ ಸಹಾಯ ಪಡೆದೇ ರೆಡ್ಡಿ, ಓಎಂಸಿ ಗಣಿಗಾರಿಕೆ ಹಾಗೂ ಬ್ರಹ್ಮಣಿ ಸ್ಟ್ರೀಲ್ ಆರಂಭಿಸಿದ್ದರು. ಇದೀಗ ಜಗನ್ ಸಿಎಂ ಆಗ್ತಿರೋದು ರೆಡ್ಡಿ-ರಾಮುಲುರ ಅದೃಷ್ಟ ಖುಲಾಯಿಸುವಂತೆ ಮಾಡಿದೆ ಅಂದರೆ ತಪ್ಪಾಗಲಾರದು.

  • ತಿನ್ನಲು ಊಟವಿಲ್ಲದೆ ಮಣ್ಣು ತಿಂದು ಮಕ್ಕಳಿಬ್ಬರ ದುರ್ಮರಣ!

    ತಿನ್ನಲು ಊಟವಿಲ್ಲದೆ ಮಣ್ಣು ತಿಂದು ಮಕ್ಕಳಿಬ್ಬರ ದುರ್ಮರಣ!

    ಚಿಕ್ಕಬಳ್ಳಾಪುರ: ತಿನ್ನಲು ಊಟವಿಲ್ಲದೆ ಮಣ್ಣು ತಿಂದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ತಾಲೂಕಿನ ಕುಮ್ಮರವಾಂಡ್ಲಪಲ್ಲಿಯಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಮೂಲದ ಮಹೇಶ್-ನಾಗಮಣಿ ಬಡ ದಂಪತಿ ಕೂಲಿ ಅರಸಿ ಕಳೆದ 10 ವರ್ಷಗಳ ಹಿಂದೆ ಅನಂತಪುರ ಜಿಲ್ಲೆಗೆ ತೆರಳಿದ್ದರು. ಜಿಲ್ಲೆಯ ಕದಿರಿ ತಾಲೂಕಿನ ಕುಮ್ಮರವಾಂಡ್ಲಪಲ್ಲಿ ಹಮಾಲಿ ಕಾಲೋನಿಯಲ್ಲಿ ಕಳೆದ 3 ವರ್ಷಗಳಿಂದ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದ ಮಹೇಶ್, ಕಲ್ಲು ಹೊಡೆಯುವ ಕೆಲಸ ಮಾಡುತ್ತಿದ್ದರು.

    ಈ ಬಡ ದಂಪತಿಗೆ ಆರು ಜನ ಮಕ್ಕಳಿದ್ದು ಪತಿ ಮಹೇಶ್ ಕೆಲಸಕ್ಕೆ ಹೋದರೆ, ಪತ್ನಿ ನಾಗಮಣಿ ಮದ್ಯವ್ಯಸನಿಯಾಗಿದ್ದಾಳೆ. ಹೀಗಾಗಿ ವಿಪರೀತ ಕುಡಿದು ಆಡುಗೆ ಮಾಡದೆ ಹಾಗೆಯೇ ಮಲಗಿ ಬಿಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ಒಂದು ಗಂಡು ಮಗು ಹಾಗೂ ಹೆಣ್ಣು ಮಗು ಊಟ ಇಲ್ಲದೆ ಮಣ್ಣು ತಿಂದು ಸಾವನ್ನಪ್ಪಿದ್ದಾರೆ.

    ಘಟನೆ ನಂತರ ಸ್ಥಳೀಯರು ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಇವರ ಪರಿಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳೀಯ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳ ಸಹಾಯದಿಂದ ಉಳಿದ ನಾಲ್ಕು ಮಕ್ಕಳಿಗೆ ಆಶ್ರಯ ಕಲ್ಪಿಸಲಾಗಿದೆ. ಉಳಿದಂತೆ ಪೊಲೀಸರೇ ಬಡ ದಂಪತಿಗೆ ಮನೆ ಕಟ್ಟಿಸಿಕೊಡಲು ಮುಂದಾಗಿದ್ದಾರೆ.

    ಬಡ ದಂಪತಿಯ ಸ್ಥಿತಿ ಬಹಳಷ್ಟು ಶೋಚನೀಯವಾಗಿದ್ದು ತಿನ್ನಲು ಊಟವೂ ಇಲ್ಲ. ಮಲಗಲು ಮನೆಯೂ ಇಲ್ಲ. ಮುರುಕಲು ಗುಡಿಸಲಿನಲ್ಲೇ ವಾಸ ಮಾಡುತ್ತಿದ್ದು, ಇವರ ದಯನೀಯ ಸ್ಥಿತಿಗೆ ಇಬ್ಬರು ಮಕ್ಕಳು ಮಣ್ಣು ತಿಂದು ಅಸುನೀಗಿದ್ದಾರೆ.

  • ಇವಿಎಂ ಒಡೆದು ಹಾಕಿದ ಅಭ್ಯರ್ಥಿ!

    ಇವಿಎಂ ಒಡೆದು ಹಾಕಿದ ಅಭ್ಯರ್ಥಿ!

    ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೇ ಇವಿಎಂ ಒಡೆದು ಹಾಕಿದ ಘಟನೆ ಅನಂತರಪುರ ಜಿಲ್ಲೆಯ ಗುತ್ತಿಯಲ್ಲಿ ನಡೆದಿದೆ.

    ಜನಸೇನಾ ಪಾರ್ಟಿ ಅಭ್ಯರ್ಥಿ ಮಧುಸೂದನ್ ಗುಪ್ತಾನೇ ಮತ ಯಂತ್ರವನ್ನು ಪೀಸ್ ಪೀಸ್ ಮಾಡಿರುವ ಅಭ್ಯರ್ಥಿಯಾಗಿದ್ದಾರೆ. ಪೋಲಿಂಗ್ ಬಾಕ್ಸ್ ಗೆ ಎಂಪಿ ಅಥವಾ ಎಂಎಲ್‍ಎ ಎಂದು ಪೋಸ್ಟ್ ಅಂಟಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗುಪ್ತಾ, ಇವಿಎಂ ಒಡೆದು ಹಾಕುವ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

    ಸಾವಿರಾರು ಸಂಖ್ಯೆಯಲ್ಲಿ ಜನ ಮತದಾನ ಮಾಡಲು ಬಂದಿದ್ದಾರೆ. ಆದ್ರೆ ಒಬ್ಬ ಪೊಲೀಸ್ ಸಿಬ್ಬಂದಿಯೂ ಇಲ್ಲದೇ ಜನ ಪರದಾಡಿದ್ದಾರೆ. ಈ ವೇಳೆ ಮಧುಸೂದನ್ ಗುಪ್ತಾ ಬೆಂಬಲಿಗರು ಹಾಗೂ ಪೊಲೀಸರ ಮಧ್ಯೆ ವಾಗ್ವಾದವೂ ನಡೆಯಿತು. ಸದ್ಯ ಆಂಧ್ರ ಪ್ರದೇಶದ ಪೊಲೀಸರು ಗುಪ್ತಾರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ಆಂಧ್ರದ ವಿಜಯನಗರ ಲೋಕಸಭಾ ಕ್ಷೇತ್ರದಿಂದ ಟಿಡಿಪಿ ಅಭ್ಯರ್ಥಿಯಾಗಿ ಅಶೋಕ್ ಗಜಪತಿರಾಜು, ವಿಶಾಖಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪುರಂದರೇಶ್ವರಿ ಕಣದಲ್ಲಿದ್ದಾರೆ.

    ಐಇಡಿ ಬ್ಲಾಸ್ಟ್!:
    ಮತದಾನದ ದಿನ ಬೆಳ್ಳಂಬೆಳಗ್ಗೆ ನಕ್ಸಲರು ಅಟ್ಟಹಾಸ ಮೆರೆದಿದ್ದು, ಛತ್ತೀಸ್‍ಗಡದ ನಾರಾಯಣಪುರದಲ್ಲಿ ಐಇಡಿ ಬ್ಲಾಸ್ಟ್ ಮಾಡಲಾಗಿದೆ. ಘಟನೆ ನಡೆದ ಕೂಡಲೇ ಪೊಲೀಸರು ದೌಡಾಯಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದಾಗಿ ತಿಳಿದುಬಂದಿದೆ.

    ಮೊದಲ ಹಂತದ ಮತದಾನ:
    ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಈಗಾಗಲೇ ಆರಂಭಗೊಂಡಿದ್ದು, 18 ರಾಜ್ಯಗಳು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 91 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

    ಒಂದು ಲಕ್ಷದ 66 ಸಾವಿರ ಮತಗಟ್ಟೆಗಳಲ್ಲಿ 1961 ಅಭ್ಯರ್ಥಿಗಳ ಭವಿಷ್ಯ ಮೊದಲ ಹಂತದದಲ್ಲಿ ನಿರ್ಧಾರ ಆಗಲಿದೆ. ಕ್ಷೇತ್ರವಾರು ಮತದಾನಕ್ಕೆ ಚುನಾವಣಾ ಆಯೋಗ ಸಮಯ ನಿಗದಿ ಮಾಡಿದ್ದು ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್ ನಲ್ಲಿ ಬೆಳಗ್ಗೆ ಏಳರಿಂದ ಸಂಜೆ ಆರು ಗಂಟೆ, ಉತ್ತಾರಖಂಡ್ ಮತ್ತು ಈಶಾನ್ಯ ರಾಜ್ಯಗಳಲ್ಲಿ ಬೆಳಗ್ಗೆ ಏಳರಿಂದ ಸಂಜೆ ಐದು ಗಂಟೆ, ಅರುಣಾಚಲ ಪ್ರದೇಶ, ಮಿಜೋರಾಂ, ಸಿಕ್ಕಿಂ, ತ್ರಿಪುರ, ಮಣಿಪುರ, ನಾಗಲ್ಯಾಂಡ್, ಮೇಘಾಲಯ ದಲ್ಲಿ ಬೆಳಗ್ಗೆ ಏಳರಿಂದ ಸಂಜೆ ನಾಲ್ಕು ಗಂಟೆವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾನದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಸರಕಾರದಲ್ಲಿ ಕೇಂದ್ರ ಭದ್ರತಾ ಪಡೆಗಳನ್ನು ಸುರಕ್ಷತೆಗೆ ನೇಮಕ ಮಾಡಲಾಗಿದೆ.

  • ಬಿಜೆಪಿ ವಿರುದ್ಧ ನಟ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆ

    ಬಿಜೆಪಿ ವಿರುದ್ಧ ನಟ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆ

    ಆಂಧ್ರಪ್ರದೇಶ: ಲೋಕಸಭಾ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ನನಗೆ ಹೇಳಿತ್ತು ಅಂತಾ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

    ಕಡಪ ಜಿಲ್ಲೆಯಲ್ಲಿ ಪಕ್ಷದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ನಾನು ನಿಮಗೆ 2 ವರ್ಷದ ಹಿಂದೆಯೇ ಯುದ್ಧ ನಡೆಯುವ ಬಗ್ಗೆ ಹೇಳಿದ್ದೆ. ದೇಶದಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ನೀವೇ ಅರ್ಥ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.

    ಪುಲ್ವಾಮಾ ದಾಳಿಯಿಂದ ಭಾರತ-ಪಾಕ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಸಮಸ್ಯೆಗೆ ಯುದ್ಧವೊಂದೇ ಪರಿಹಾರವಲ್ಲ. ಯುದ್ಧವಾದ್ರೆ ಉಭಯ ರಾಷ್ಟ್ರಗಳಿಗೆ ಅಪಾರ ಹಾನಿಯಾಗಲಿದೆ ಅಂದಿದ್ದಾರೆ.

    ದೇಶದಲ್ಲಿ ಬಿಜೆಪಿಯವರು ತಾವು ಮಾತ್ರ ದೇಶಪ್ರೇಮಿಗಳು ಅನ್ನೋ ರೀತಿ ವರ್ತಿಸ್ತಿದ್ದಾರೆ. ನಾವು ಬಿಜೆಪಿಗಿಂತ 10 ಪಟ್ಟು ದೇಶಾಭಿಮಾನಿಗಳು ಎಂದು ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಿರುಪತಿಯಲ್ಲಿ 3 ವಜ್ರಖಚಿತ ಚಿನ್ನದ ಕಿರೀಟ ನಾಪತ್ತೆ..!

    ತಿರುಪತಿಯಲ್ಲಿ 3 ವಜ್ರಖಚಿತ ಚಿನ್ನದ ಕಿರೀಟ ನಾಪತ್ತೆ..!

    ಹೈದರಾಬಾದ್: ತಿರುಪತಿಯಲ್ಲಿರುವ ಶ್ರೀ ಗೋವಿಂದರಾಜಸ್ವಾಮಿ ದೇವಸ್ಥಾನದ ಮೂರು ವಜ್ರಖಚಿತ ಚಿನ್ನದ ಕಿರೀಟಗಳು ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.

    ತಿರುಪತಿ ತಿರುಮಲ ದೇವಸ್ಥಾನ(ಟಿಟಿಡಿ) ಅಧೀನದಲ್ಲಿ ಬರುವ ಈ ದೇವಸ್ಥಾನದಲ್ಲಿ ಶನಿವಾರ ಸಂಜೆ 5.45ರ ಸುಮಾರಿಗೆ ಅರ್ಚಕರು ಬಾಗಿಲು ಓಪನ್ ಮಾಡಿದ ವೇಳೆ ಕಿರೀಟಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

    ದೇವಸ್ಥಾನದ ಪೂಜಾ ಕಾರ್ಯಗಳು ಹಾಗೂ ಭಕ್ತರ ದರ್ಶನದ ಬಳಿಕ ಅಂದ್ರೆ 5 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗಿತ್ತು. ನಂತರ 45 ನಿಮಿಷ ಬಿಟ್ಟು ಮತ್ತೆ ಪೂಜಾ ಕಾರ್ಯಗಳಿಗಾಗಿ ದೇವಸ್ಥಾನದ ಬಾಗಿಲು ತೆರೆದ ವೇಳೆ ಕಿರೀಟಗಳು ನಾಪತ್ತೆಯಾಗಿದ್ದವು ಎಂದು ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಭಾಸ್ಕರ್ ತಿಳಿಸಿದ್ದಾರೆ.

    ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ರವಾನಿಸಿದ್ದು, ಕೂಡಲೇ ಕಾರ್ಯನಿರ್ವಹಣಾಧಿಕಾರಿ, ಮುಖ್ಯಸ್ಥ ಮತ್ತಿತರರು ದೇವಸ್ಥಾನಕ್ಕೆ ರಾತ್ರಿಯೇ ದೌಡಾಯಿಸಿ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಈ ಬಗ್ಗೆ ದೇವಸ್ಥಾನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೇವಸ್ಥಾನದ ಸಿಬ್ಬಂದಿಯನ್ನು ಕೂಡ ತನಿಖೆ ನಡೆಸಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮೂರು ಗಂಟು, 6 ಮದುವೆಗಳು: ಕೊನೆಗೆ ಸಿಕ್ಕಿಬಿದ್ದಳು ಖತರ್ನಾಕ್ ಸುಂದರಿ!

    ಮೂರು ಗಂಟು, 6 ಮದುವೆಗಳು: ಕೊನೆಗೆ ಸಿಕ್ಕಿಬಿದ್ದಳು ಖತರ್ನಾಕ್ ಸುಂದರಿ!

    ಹೈದರಾಬಾದ್: ನೋಡೋಕೆ ಸುಂದರವಾಗಿದ್ದ ಐನಾತಿ ಸುಂದರಿಯೊಬ್ಬಳು ಬರೋಬ್ಬರಿ ಆರು ಬಾರಿ ಮದುವೆಯಾಗಿ, ಈಗ ಪೊಲೀಸರಿಗೆ ಅತಿಥಿಯಾಗಿದ್ದಾಳೆ.

    ಪ್ರಕಾಶಂ ಜಿಲ್ಲೆಯ ಮಾದಿನಿಪುರಂ ಗ್ರಾಮದ ನಿವಾಸಿಯಾಗಿರುವ ಅನಂತರೆಡ್ಡಿ ಮಗಳು ಮೌನಿಕಾ ಆರು ಮದುವೆಗಳನ್ನ ಮಾಡಿಕೊಂಡ ಐನಾತಿ ಸುಂದರಿ.

    ಈಕೆ ಮೂರು ತಿಂಗಳ ಹಿಂದೆ ಖಾಜಿಪೇಟದ ಕೊಮ್ಮಲೂರು ಗ್ರಾಮದ ನಿವಾಸಿ ರಾಮಕೃಷ್ಣಾರೆಡ್ಡಿ ಎಂಬುವವರ ಜೊತೆ ಮದುವೆಯಾಗಿದ್ದಳು. ಅವಳ ಅಂದಕ್ಕೆ ಮನಸೋತಿದ್ದ ರಾಮಕೃಷ್ಣಾರೆಡ್ಡಿ ಆಕೆಯ ಕುಟುಂಬಸ್ಥರ ಬಳಿ ವರದಕ್ಷಿಣೆ ತೆಗೆದುಕೊಳ್ಳದೆ ಮತ್ತು ವಧುದಕ್ಷಿಣೆ ನೀಡಿ ಮದುವೆ ಮಾಡಿಕೊಂಡಿದ್ದರು.

    ದಾಂಪತ್ಯದಲ್ಲಿ ಏನೂ ಕೊರತೆಯಿಲ್ಲದೆ ಇಬ್ಬರು ಸುಖವಾಗಿ ಜೀವನ ನಡೆಸುತ್ತಿದ್ದರು. ಆದರೆ ಆಗಸ್ಟ್ 25 ರಂದು ಮೌನಿಕಾಳ ತಂದೆ ಅನಂತರೆಡ್ಡಿ ಮಗಳನ್ನು ಊರಿಗೆ ಕರೆದೊಯ್ಯುವುದಾಗಿ ಹೇಳಿ, ಗಂಡನನ್ನ ಬಿಟ್ಟು ತಂದೆಯ ಜೊತೆ ಸ್ವಗ್ರಾಮಕ್ಕೆ ತೆರಳದೇ ಬೇರೆಡೆ ಹೊರಟಿದ್ದರು.

    ಈಗಷ್ಟೆ ಮದುವೆಯಾಗಿದ್ದ ರಾಮಕೃಷ್ಣನಿಗೆ ಹೆಂಡತಿಯನ್ನ ಬಿಟ್ಟಿರಲು ಸಾಧ್ಯವಾಗದ ಕಾರಣ, ಅವಳ ತವರು ಮನೆಗೆ ಕರೆ ಮಾಡಿ ವಿಚಾರಿಸುತ್ತಾರೆ. ಆದರೆ ಅಪ್ಪ-ಮಗಳು ಊರಿನ ಬಾರದೇ ಇರುವ ವಿಷಯವನ್ನ ತಿಳಿದ ಪತಿ ಗಾಬರಿಗೊಂಡು ಎಲ್ಲೆಡೆ ಹುಡುಕಾಟ ನಡೆಸುತ್ತಾರೆ.

    ಪತ್ನಿಯನ್ನ ಎಷ್ಟು ಹುಡುಕಿದರೂ ಪತ್ತೆಯಾಗದ ಕಾರಣ ಕೊನೆಯಲ್ಲಿ ಪೊಲೀಸರ ಬಳಿ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರನ್ನ ನೀಡುತ್ತಾರೆ. ಈ ಸಂಬಂಧ ತನಿಖೆಯನ್ನ ಆರಂಭಿಸಿದ ಪೊಲೀಸರಿಗೆ ಪತ್ನಿ ಮೌನಿಕಳಾ ನಿಜವಾದ ರೂಪ ಬಯಲಾಗಿದೆ.

    ಮೌನಿಕಾ ಪತ್ತೆಯಾಗಿದ್ದು ಹೇಗೆ?
    ತನಿಖೆ ಆರಂಭಿಸಿದ ಪೊಲೀಸರು ಮೌನಿಕಾಳ ಮೊಬೈಲ್ ಫೋನ್ ಟ್ರಾಕ್ ಮಾಡುವ ಮೂಲಕ ಆಕೆಯನ್ನ ಪತ್ತೆಹಚ್ಚಿದ್ದಾರೆ. ಮೊದಲು ವಿಜಯವಾಡದಲ್ಲಿದ್ದ ಅಪ್ಪ-ಮಗಳು ನಂತರ ವಿಶಾಖಪಟ್ಟಣಂಗೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತದೆ. ವಿಶಾಖಪಟ್ಟಣಂನಿಂದ ಹೈದರಾಬಾದ್‍ಗೆ ಬಂದಿದ್ದ ಮೌನಿಕಾ, ಒಬ್ಬ ಯುವಕನ ಜೊತೆ ಇದ್ದಾಳೆಂಬ ಮಾಹಿತಿ ಮೇರೆಗೆ ಪೊಲೀಸರು ಆಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಆರು ಮದುವೆಯ ಜಾಲ ಪತ್ತೆ!
    ತೀವ್ರ ವಿಚಾರಣೆಯನ್ನ ನಡೆಸಿದ ಪೊಲೀಸರಿಗೆ ಮೌನಿಕಾಳಿಂದ ಆಶ್ಚರ್ಯಕರ ಮಾಹಿತಿ ಹೊರಬಿದ್ದಿದೆ. ಈಕೆ ಪ್ರಕಾಶಂ ಜಿಲ್ಲಾ ಮಾರ್ಕಾಪುರಕ್ಕೆ ಸೇರಿದ ವ್ಯಕ್ತಿಯ ಜೊತೆ ಮೊದಲ ಮದುವೆ ಮಾಡಿಕೊಂಡಿದ್ದು, ವಿವಾಹವಾದ ಸ್ವಲ್ಪ ದಿನದ ನಂತರ ಪ್ರಕಾಶಂ ಜಿಲ್ಲಾ ಪಂದಿಲ್ಲಪಲ್ಲೆ ಗ್ರಾಮದ ವ್ಯಕ್ತಿಯ ಜೊತೆ ಎರಡನೇ ಮದುವೆ ಮಾಡಿಕೊಂಡಿದ್ದಾಳೆ.

    ಇನ್ನೂ ಮೂರನೇ ಮದುವೆಯನ್ನು ಗಿದ್ದಲೂರು ಗ್ರಾಮದ ವ್ಯಕ್ತಿಯ ಜೊತೆ ಮಡಿಕೊಂಡಿದ್ದು, ತೆನಾಲಿ ಗ್ರಾಮದ ವ್ಯಕ್ತಿಯ ಜೊತೆ ನಾಲ್ಕನೇ ವಿವಾಹವಾಗಿ ಕೆಲ ದಿನ ಅವನ ಜತೆ ಸಂಸಾರ ನಡೆಸಿದ್ದಾಳೆ. ಅದಾದ ಬಳಿಕ ಅಲ್ಲಿಂದಲೂ ಕಾಲ್ಕಿತ್ತಿದ್ದ ಮೌನಿಕಾ ರಾಮಕೃಷ್ಣರೆಡ್ಡಿ ಜೊತೆ ಐದನೇ ಮದುವೆಯಾಗಿದ್ದಾಳೆ. ಈತನಿಗೂ ಕೈಕೊಟ್ಟು ಕೊನೆಯಲ್ಲಿ ವಿಜಯವಾಡಕ್ಕೆ ಹಾರಿ, ಅಲ್ಲಿಯ ಹೈದರಾಬಾದ್ ಯುವಕನನ್ನು ಬುಟ್ಟಿಗೆ ಬೀಳಿಸಿಕೊಂಡು ಅನ್ನಾವರಂನಲ್ಲಿ ಆರನೇ ಮದುವೆ ಆಗಿದ್ದಾಳೆ.

    ಖತರ್ನಾಕ್ ಸುಂದರಿ!
    ಈ ಸುಂದರಿ ಈ ಆರು ವ್ಯಕ್ತಿಗಳೊಂದಿಗೆ ಮದುವೆಯಾಗಿ, ಕೆಲ ದಿನಗಳು ಹಾಗೂ ಕೆಲ ತಿಂಗಳುಗಳ ಕಾಲ ಸಂಸಾರ ನಡೆಸುತ್ತಿದ್ದಳು. ಬಳಿಕ ಅವರ ತಂದೆ ಆಕೆಯನ್ನು ಕರೆದೊಯ್ಯುತ್ತಿದ್ದನು. ಕರೆದೊಯ್ಯುವ ಹಿಂದಿನ ದಿನ ಮನೆಯಲ್ಲಿದ್ದ ನಗದು, ಬಂಗಾರವನ್ನು ಲಪಾಟಾಯಿಸಿ ಅಲ್ಲಿಂದ ಪರಾರಿಯಾಗುತ್ತಿದ್ದಳು. ಈ ರೀತಿ ಆರು ಜನರ ಕುಟುಂಬಸ್ಥರನ್ನ ನಂಬಿಸಿ ನಂತರ ಅವರ ಮನೆಗೆ ಕನ್ನ ಹಾಕುತ್ತಿದ್ದಳು.

    ಈ ಸಂಬಂಧ ಪ್ರಕರಣವನ್ನ ಪೊಲೀಸರು ಐಪಿಸಿ ಸೆಕ್ಷನ್ 420 ಯ ಅಡಿಯಲ್ಲಿ ಮೌನಿಕಾಳಾ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ವಿಚಾರಣೆಯನ್ನ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗೂಡ್ಸ್ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ- ವೈರಲ್ ವಿಡಿಯೋ ನೋಡಿ

    ಗೂಡ್ಸ್ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ- ವೈರಲ್ ವಿಡಿಯೋ ನೋಡಿ

    ಅಮರಾವತಿ: ಗೂಡ್ಸ್ ರೈಲಿನ ಅಡಿ ಮಲಗಿ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನು ಉಳಿಸಿಕೊಂಡ ಘಟನೆ ಆಂಧ್ರಪ್ರದೇಶದ ಅನಂತಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

    ಶನಿವಾರ ರೈಲು ನಿಲ್ದಾಣದಲ್ಲಿ ಲಕ್ನೋ-ಯಶವಂತಪುರ ಟ್ರೈನ್‍ನಿಂದ ಇಳಿದ ಅಪರಿಚಿತ ವ್ಯಕ್ತಿಯೊಬ್ಬರು, ತಮ್ಮ 2ನೇ ಪ್ಲಾಟ್ ಫಾರಂನಿಂದ 1ನೇ ಪ್ಲಾಟ್ ಫಾರಂಗೆ ಹೋಗಲು ಮೇಲುಸೇತುವೆಯನ್ನು ಬಳಸದೇ, ರೈಲ್ವೇ ಹಳಿಗಳನ್ನು ದಾಟುವ ಯತ್ನ ಮಾಡುತ್ತಿದ್ದರು. ಈ ವೇಳೆ ಅದೇ ಮಾರ್ಗವಾಗಿ ಗೂಡ್ಸ್ ರೈಲು ಬಂದಿದೆ.

    ತಾನಿದ್ದ ಹಳಿಯಲ್ಲೇ ರೈಲು ಬರುತ್ತಿರುವುದನ್ನು ಅರಿತ ವ್ಯಕ್ತಿ ಧೃತಿಗೆಡದೇ ಟ್ರಾಕ್ ಮೇಲೆಯೇ ಮಲಗಿದ್ದಾರೆ. ನಂತರ ಗೂಡ್ಸ್ ರೈಲು ಆ ವ್ಯಕ್ತಿಯ ಮೇಲೆ ಹರಿದು ಹೋಗಿದೆ. ರೈಲು ಹೋದ ಬಳಿಕ ತನ್ನಪಾಡಿಗೆ ತಾನು ಎದ್ದು, ಏನೂ ಆಗದಂತೆ ವ್ಯಕ್ತಿ ಹೋಗಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ಅನಂತಪುರ ರೈಲ್ವೇ ಪೊಲೀಸರು ಪ್ರತಿಕ್ರಿಯಿಸಿ, ವ್ಯಕ್ತಿಯೊಬ್ಬರು ರೈಲ್ವೇ ಹಳಿಯನ್ನು ದಾಟುತ್ತಿರುವಾಗ ಏಕಾಏಕಿ ಗೂಡ್ಸ್ ರೈಲು ಆಗಮಿಸಿತ್ತು. ಈ ವೇಳೆ ವ್ಯಕ್ತಿ ಹಳಿ ಮೇಲೆಯೇ ಮಲಗಿಕೊಂಡು, ಆಗಬಹುದಾಗಿದ್ದ ಅನಾಹುತದಿಂದ ಪಾರಾಗಿದ್ದಾರೆ. ಆದರೆ ಈ ಬಗ್ಗೆ ರೈಲ್ವೇ ನಿಲ್ದಾಣದಲ್ಲಿದ್ದ ಯಾವುದೇ ಪ್ರಯಾಣಿಕರು ನಮ್ಮ ಗಮನಕ್ಕೆ ತಂದಿರಲಿಲ್ಲ. ವಿಡಿಯೋ ವೈರಲ್ ಬಳಿಕ ಮಾಹಿತಿ ಲಭಿಸಿದೆ. ಈ ಘಟನೆ ಶನಿವಾರ ನಡೆದಿದೆ. ಪ್ರಯಾಣಿಕ ಹಳಿಯನ್ನು ದಾಟುವುದಕ್ಕೆ ಮೇಲುಸೇತುವೆಯನ್ನು ಬಳಸದೇ ಇರುವುದೇ ಕಾರಣ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಮಗೆ ಈ ಸಂಬಂಧ ಇಷ್ಟವಿಲ್ಲ ಅಂದ್ರಂತೆ ಅನಿತಾಕುಮಾರಸ್ವಾಮಿ!

    ನಮಗೆ ಈ ಸಂಬಂಧ ಇಷ್ಟವಿಲ್ಲ ಅಂದ್ರಂತೆ ಅನಿತಾಕುಮಾರಸ್ವಾಮಿ!

    ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್ ಗೆ ಆಂಧ್ರ ಮೂಲದ ಹುಡುಗಿಯೊಂದಿಗೆ ವಿವಾಹ ಮಾಡಲು ಮಾತುಕತೆ ನಡೆದಿದೆ ಎಂಬ ಸುದ್ದಿಗೆ ಇಂದು ಮತ್ತೊಂದು ಟ್ವಿಸ್ಟ್ ದೊರೆತಿದೆ.

    ಶುಕ್ರವಾರ ಕುಮಾರಸ್ವಾಮಿ ದಂಪತಿ ಆಂಧ್ರದ ಉದ್ಯಮಿ ಬೋಡಪುಡಿ ಶಿವ ಕೋಟೇಶ್ವರ್ ರಾವ್ ಮನೆಗೆ ಹೋಗಿದ್ದರು. ವಿಜಯವಾಡದಲ್ಲಿರುವ ಉದ್ಯಮಿಯ ಮನೆಗೆ ಹೋಗಿ ದಂಪತಿ ಮದ್ವೆ ಮಾತುಕತೆ ನಡೆಸಿದ್ದರು. ಆದ್ರೆ ಈ ಸಂಬಂಧ ಅನಿತಾ ಕುಮಾರಸ್ವಾಮಿಗೆ ಇಷ್ಟನೇ ಇರಲಿಲ್ಲ. ಆದ್ರೆ ಮನೆಗೆ ಬರ್ತಿವಿ ಅಂತ ಕುಮಾರಸ್ವಾಮಿ ಮೊದಲೇ ಹುಡುಗಿ ಮನೆಯವರಿಗೆ ಮಾತು ಕೊಟ್ಟಿದ್ದರು. ಕೊಟ್ಟ ಮಾತು ಉಳಿಸಿಕೊಳ್ಳಲು ಅನಿವಾರ್ಯವಾಗಿ ಕುಮಾರಸ್ವಾಮಿ ದಂಪತಿ ಹುಡುಗಿ ಮನೆಗೆ ಹೋಗಿದ್ದರು. ಮಾತುಕತೆ ವೇಳೆ ಅನಿತಾ ಕುಮಾರಸ್ವಾಮಿ ಅವರು `ನಮಗೆ ಈ ಸಂಬಂಧ ಇಷ್ಟ ಇಲ್ಲ’ ಅಂತ ಹುಡುಗಿ ಮನೆಯವರಿಗೆ ತಿಳಿಸಿದ್ದಾರೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಇತ್ತ ಮದ್ವೆ ಮಾತುಕತೆ ಸುದ್ದಿಯ ಬಗ್ಗೆ ಪುತ್ರ ನಿಖಿಲ್ ತಾಯಿ ಬಳಿ ವಿಚಾರಿಸಿದ್ದಾರೆ. ಈ ವೇಳೆ `ಕರ್ನಾಟಕ ಬಿಟ್ಟು ಬೇರೆ ಕಡೆಯಿಂದ ಹೆಣ್ಣು ತರಲ್ಲ, ತಲೆಕೆಡಿಸಿಕೊಳ್ಳಬೇಡ’ ಅಂತ ಅನಿತಾ ಅವರು ತಮ್ಮ ಪುತ್ರನಿಗೆ ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಂಧ್ರ ಅಲ್ಲ, ಕನ್ನಡದ ಹುಡುಗಿಯನ್ನೇ ವರಿಸಲಿದ್ದಾರೆ ನಿಖಿಲ್

    ನಿನ್ನೆ ನಿಖಿಲ್ ಅವರಿಗೆ ಹುಡುಗಿ ನೋಡುವುದಕ್ಕಾಗಿ ಸಿಎಂ ದಂಪತಿ ಆಂಧ್ರಕ್ಕೆ ತೆರಳಿದ್ದರು ಎಂಬ ಸುದ್ದಿಯ ಬೆನ್ನಲ್ಲೇ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ನಿಖಿಲ್ ಅವರ ಮ್ಯಾನೇಜರ್, ಈ ಕುರಿತು ಶೀಘ್ರವೇ ಅಧಿಕೃತವಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಲಿದ್ದಾರೆ. ಆದರೆ ನಿಖಿಲ್ ಅವರು ಆಂಧ್ರ ಹುಡುಗಿಯನ್ನು ಮದುವೆಯಾಗಲಿದ್ದಾರೆ ಎನ್ನುವುದು ಸುಳ್ಳು. ಅವರು ಕನ್ನಡ ಹುಡುಗಿಯನ್ನೇ ಮದುವೆಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

    ಈ ವೇಳೆ ಆಂಧ್ರ ಪ್ರದೇಶದ ಖ್ಯಾತ ಉದ್ಯಮಿ ಬೋಡೆಪುಡಿ ಶಿವ ಕೋಟೇಶ್ವರ ರಾವ್ ಕೂಡ ಪ್ರತಿಕ್ರಿಯೆ ನೀಡಿದ್ದು, ಸಿಎಂ ಕುಮಾರಸ್ವಾಮಿ ಅವರು ನಾವು ಸ್ನೇಹಿತರಾಗಿದ್ದು, ಸಹಜವಾಗಿ ಇಂದು ಮನೆಗೆ ಭೇಟಿ ನೀಡಿದ್ದಾರೆ. ನಿಖಿಲ್‍ರೊಂದಿಗೆ ಮದುವೆಯ ಸುದ್ದಿ ಬಗ್ಗೆ ಈ ವೇಳೆ ಚರ್ಚೆ ನಡೆದಿಲ್ಲ. ಸ್ನೇಹಿತರಾದ ಕಾರಣಕ್ಕೆ ಮಾತ್ರ ಭೇಟಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=yCWzT5DwKiM

    https://www.youtube.com/watch?v=gRdK_wrERMI

  • ಎಚ್‍ಡಿಕೆ ಪ್ರಮಾಣವಚನಕ್ಕೆ ದುಬಾರಿ ವೆಚ್ಚ – ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ್ರು ಆಂಧ್ರ ಸಿಎಂ

    ಎಚ್‍ಡಿಕೆ ಪ್ರಮಾಣವಚನಕ್ಕೆ ದುಬಾರಿ ವೆಚ್ಚ – ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ್ರು ಆಂಧ್ರ ಸಿಎಂ

    ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರ ಪ್ರಮಾಣವಚನ ಸಮಾರಂಭದ ದುಬಾರಿ ವೆಚ್ಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಲೆಕ್ಕ ಕೇಳಿದ್ದಾರೆ.

    ದುಬಾರಿ ವೆಚ್ಚದ ಬಿಲ್ ನೋಡಿ ನೆರೆಯ ಆಂಧ್ರ ಸಿಎಂ ಕಕ್ಕಾಬಿಕ್ಕಿಯಾಗಿದ್ದಾರೆ. ನಾನು ಉಳಿದುಕೊಂಡಿದ್ದು ಕೇವಲ 4-5 ಗಂಟೆ ಮಾತ್ರವಾಗಿದ್ದು, ಉಳಿದುಕೊಳ್ಳಲು ಪ್ರೆಸಿಡೆನ್ಶಿಯಲ್ ಸೂಟ್‍ಕೊಟ್ಟಿದ್ದರು. ಹೀಗಾಗಿ ಇದ್ದ ಕೆಲವೇ ಗಂಟೆಗೆ 9 ಲಕ್ಷ ಬಿಲ್ ಹೇಗೆ ಮಾಡಿದ್ರು. ಈ ಕುರಿತು ತನಿಖೆ ಆಗಬೇಕು. ನಮ್ಮ ಹೆಸರಲ್ಲಿ ಸುಳ್ಳು ಲೆಕ್ಕ ಕೊಡಲು ಸಾಧ್ಯವಿಲ್ಲ. ನಾಲ್ಕೈದು ಗಂಟೆ ವಾಸ್ತವ್ಯಕ್ಕೆ ಇಷ್ಟೊಂದು ಖರ್ಚಾಗಿದ್ಯಾ ಅಂತ ಅವರು ಪ್ರಶ್ನಿಸಿದ ಅವರು ಲೆಕ್ಕ ಕೊಡುವಂತೆ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ.

    ಚಂದ್ರಬಾಬು ನಾಯ್ಡು ತಾಜ್ ವೆಸ್ಟೆಂಡ್‍ನಲ್ಲಿ ಒಂದು ರಾತ್ರಿ ಉಳಿದುಕೊಳ್ಳಲು 2 ಲಕ್ಷ ಬಿಲ್ ಮಾಡಲಾಗಿದೆ. ಇಷ್ಟು ಮಾತ್ರವಲ್ಲದೇ ಚಂದ್ರಬಾಬು ಹೆಸರಲ್ಲಿ ಮತ್ತೆ ಮೂರು ಇನ್‍ವಾಯ್ಸ್‍ಗಳು ರೆಡಿ ಮಾಡಿರುವುದು ಪತ್ತೆಯಾಗಿದೆ. ಪ್ರತಿಯೊಂದು ಇನ್‍ವಾಯ್ಸ್‍ಗೆ 15 ಸಾವಿರ ರೂ. ಬಿಲ್ ಮಾಡಲಾಗಿದೆ. ಎಲ್ಲಾ ಸೇರಿಸಿದ್ರೂ ಆಗೋದು ಎರಡೂವರೆ ಲಕ್ಷ. ಆದ್ರೆ ಅದು ಹೇಗೆ 9 ಲಕ್ಷ ಬಿಲ್ ಮಾಡಿದ್ರು ಎಂಬ ಪ್ರಶ್ನೆಯೊಂದು ಉದ್ಭವವಾಗಿದೆ. ಇದನ್ನೂ ಓದಿ: 7 ನಿಮಿಷದ ಪ್ರಮಾಣವಚನ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚು: ಯಾರಿಗೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

    ಒಟ್ಟಿನಲ್ಲಿ ಪ್ರಮಾಣವಚನ ನೆಪದಲ್ಲಿ ಅಧಿಕಾರಿಗಳು ಫೇಕ್ ಬಿಲ್ ಸೃಷ್ಟಿಸಿ ದುಡ್ಡು ಹೊಡೆಯೋಕೆ ಹೊರಟಿದ್ದಾರಾ ಎಂಬ ಪ್ರಶ್ನೆಯೊಂದು ಎದುರಾಗಿದ್ದು, ಈ ಕುರಿತು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ಇದನ್ನೂ ಓದಿ: ದುಂದುವೆಚ್ಚಕ್ಕೆ ಕಡಿವಾಣ ಹಾಕ್ತೀನಿ ಅಂದಿದ್ದ ಸಿಎಂ ಪ್ರಮಾಣವಚನಕ್ಕೆ ಖರ್ಚಾಗಿರೋದು ಬರೋಬ್ಬರಿ 42ಲಕ್ಷ ರೂ.!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews