Tag: andra pradesh

  • ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    – ಕರಾವಳಿ ಪ್ರದೇಶದಲ್ಲಿರುವ ಜನರ ಸ್ಥಳಾಂತರ
    – ರೈಲು, ವಿಮಾನ ಸಂಚಾರಕ್ಕೆ ಚಂಡಮಾರುತ ಅಡ್ಡಿ

    ನವದೆಹಲಿ: ಮೊಂಥಾ ಚಂಡಮಾರುತ (Cyclone Montha) ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದೆ. ಪರಿಣಾಮ ಆಂಧ್ರಪ್ರದೇಶ ಮತ್ತು ಒಡಿಶಾದ (Odisha) ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.

    ಮಂಗಳವಾರ ಸಂಜೆ 7 ಗಂಟೆಗೆ ಮೊಂಥಾ ಆಂಧ್ರಪ್ರದೇಶದ ಕರಾವಳಿಯ ಭಾಗವಾದ ಮಚಲಿಪಟ್ಟಣ ಮತ್ತು ಮತ್ತು ಕಳಿಂಗಪಟ್ಟಣ ಮಧ್ಯೆ ಅಪ್ಪಳಿಸಿತು. ಗಂಟೆಗೆ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಕೊನಸೀಮಾ ಜಿಲ್ಲೆಯಲ್ಲಿ ಮರವೊಂದು ಮನೆಯ ಮೇಲೆ ಬಿದ್ದು ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

    ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯಾದ್ಯಂತ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 6 ಗಂಟೆಗಳಲ್ಲಿ ಅದರ ತೀವ್ರತೆಯನ್ನು ಕಾಯ್ದುಕೊಳ್ಳಲಿದೆ. 6 ಗಂಟೆಯ ನಂತರ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

    ಮುಂದಿನ 36 ಗಂಟೆಗಳಲ್ಲಿ ಇದು ಪೂರ್ವ-ಮಧ್ಯ ಅರಬ್ಬೀ ಸಮುದ್ರದಾದ್ಯಂತ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಕರಾವಳಿ ವೀಕ್ಷಣಾಲಯಗಳು, ಸ್ವಯಂಚಾಲಿತ ಹವಾಮಾನ ಕೇಂದ್ರಗಳು (AWS) , ಹಡಗುಗಳು ಮತ್ತು ಬೋಯ್‌ಗಳು ಮತ್ತು ಉಪಗ್ರಹಗಳ ಜೊತೆಗೆ ಮಚಲಿಪಟ್ಟಣಂ ಮತ್ತು ವಿಶಾಖಪಟ್ಟಣದಲ್ಲಿರುವ ಡಾಪ್ಲರ್ ಹವಾಮಾನ ರಾಡಾರ್ (DWR) ಮೂಲಕ ಈ ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

    ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕಾಕಿನಾಡ, ಕೃಷ್ಣ, ಎಲೂರು, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಮತ್ತು ಚಿಂತೂರು ಮತ್ತು ರಾಮಪಚೋಡವರಂ ಭಾಗಗಳು ಚಂಡಮಾರುತದ ಗರಿಷ್ಠ ಪರಿಣಾಮವನ್ನು ಕಾಣುತ್ತಿವೆ.

     

    ಮಂಗಳವಾರ ರಾತ್ರಿ 8:30 ರಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೆ ಈ ಏಳು ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಮಾಹಿತಿ ನೀಡಿದ್ದು ನೆಲ್ಲೂರು ಜಿಲ್ಲೆಯಲ್ಲಿ ಇದುವರೆಗೆ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದ್ದಾರೆ.

    ಮೊಂಥಾ ಎದುರಿಸಲು 22 ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ ಮಾಡಲಾಗಿದ್ದು ಕರಾವಳಿ ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರ ಮಾಡಲಾಗಿದೆ. 100ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಂಧ್ರ ಮತ್ತು ಒಡಿಶಾ ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

  • ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

    ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

    – 17 ವರ್ಷಗಳಿಂದ ಸಕ್ರಿಯವಾಗಿದ್ದ ಜಾಲ
    – ಆಂಧ್ರದ ಆಶಾ ಕಾರ್ಯಕರ್ತೆಯೇ ಇದರ ಕಿಂಗ್‌ಪಿನ್‌

    ಬೆಂಗಳೂರು: ಹೆಣ್ಣನ್ನು ಅತಿ ಹೆಚ್ಚು ಗೌರವಿಸುವ ಪುಣ್ಯ ನಾಡು ನಮ್ಮದು ಅಂತಲೇ ಹೆಮ್ಮೆಯಿಂದ ಬೆನ್ನುತಟ್ಟಿಕೊಳ್ಳುತ್ತೇವೆ. ಶತಮಾನಗಳ ಇತಿಹಾಸ, ಪುರಾಣ ಕಥನ, ಮಿಥ್ಯೆಗಳಲ್ಲೂ ಸಹ ಇದನ್ನು ಗುರುತಿಸುತ್ತೇವೆ. ಹೆಣ್ಣು ಮಕ್ಕಳ ಶಿಕ್ಷಣ, ಪೌಷ್ಟಿಕತೆ, ಆರೋಗ್ಯ ಮತ್ತು ಜೀವನೋಪಾಯದ ಮಾರ್ಗಗಳನ್ನು ಹಸನುಗೊಳಿಸಲು ನೂರಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ʻಬೇಟಿ ಬಚಾವೋ ಬೇಟಿ ಪಢಾವೋʼ ಕೂಡ ಒಂದು. ಹೀಗಿದ್ದೂ ಹೆಣ್ಣುಮಕ್ಕಳ ಭ್ರೂಣ ಹತ್ಯೆ (Foeticide) ಮತ್ತೊಂದೆಡೆ ಅವ್ಯಾಹತವಾಗಿ ನಡೆಯುತ್ತಿದೆ. ಗಂಡು ಮಗುವಿನ ಮೇಲಿನ ಆದ್ಯತೆ, ಹೆಣ್ಣುಮಕ್ಕಳ ಕುರಿತಾದ ತಾರತಮ್ಯ, ಸಾಮಾಜಿಕ ಕಟ್ಟುಪಾಡು, ಶಿಕ್ಷಣದ ಕೊರತೆಯಂತಹ ಕಾರಣಗಳಿಂದ ತಾಯಿ ಗರ್ಭದಲ್ಲಿರುವ ಹೆಣ್ಣು ಭ್ರೂಣವನ್ನ ಅಕ್ರಮವಾಗಿ ಲಿಂಗ ಪರೀಕ್ಷೆ ನಡೆಸಿ ಕೊಲ್ಲಲಾಗುತ್ತಿದೆ.

    ಕೆಲ ದಿನಗಳ ಹಿಂದಷ್ಟೇ ಮಂಡ್ಯದಲ್ಲಿ ಅಕ್ರಮವಾಗಿ ಭ್ರೂಣಹತ್ಯೆ ಮಾಡುತ್ತಿದ್ದ ಜಾಲವೊಂದು ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗ ಹೊಸ ಅವತಾರದಲ್ಲಿ ಭ್ರೂಣ ಹತ್ಯೆ ವ್ಯವಸ್ಥಿತವಾಗಿ ನಡೆಯುತ್ತಿದ್ದದ್ದು ಕಂಡುಬಂದಿದೆ. ಕರ್ನಾಟಕದ ಕೆಲವು ಮಹಿಳೆಯರು (Karnataka Womens) ನೆರೆಯ ರಾಜ್ಯದಲ್ಲಿ ಭ್ರೂಣ ಹತ್ಯೆ ಮಾಡಿಸಿಕೊಳ್ಳುತ್ತಿದ್ದದ್ದು ಆರೋಗ್ಯ ಇಲಾಖೆ (Health Department) ಅಧಿಕಾರಿಗಳ ಕುಟುಕು ಕಾರ್ಯಾಚರಣೆ ವೇಳೆ ಬಟಾ ಬಯಲಾಗಿದೆ.

    ಹೌದು. ಕರ್ನಾಟಕದ ಕೆಲ ತಾಯಂದಿರು ನೆರೆಯ ಆಂಧ್ರ ಪ್ರದೇಶದಲ್ಲಿ ಭ್ರೂಣ ಹತ್ಯೆ ಮಾಡಿಸಿಕೊಳ್ಳುತ್ತಿದ್ದ ಘೋರ ಕೃತ್ಯ ಆರೋಗ್ಯ ಇಲಾಖೆ ಕಾರ್ಯಚರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಿಚ್ಛೇದಿತೆಗೆ ಮದುವೆ ಆಗೋದಾಗಿ ನಂಬಿಸಿ ವಂಚನೆ ಆರೋಪ – ಬೆಂಗಳೂರಿನ ಕ್ರಿಕೆಟ್‌ ಕೋಚ್‌ ವಿರುದ್ಧ ಎಫ್‌ಐಆರ್‌

    ಏನಿದು ಘಟನೆ?
    30 ವರ್ಷದ ಮಹಿಳೆಯೊಬ್ಬರು ಮಳವಳ್ಳಿಯಲ್ಲಿ ಬಂಡೂರು ಬಸವಗುಡಿ ದೇವಸ್ಥಾನವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಳೆ ಎಂಬುದು ಆಶಾ ಕಾರ್ಯಕರ್ತೆಯರ ಗಮನಕ್ಕೆ ಬಂದಿತ್ತು. ತಕ್ಷಣ ವೈದ್ಯಕೀಯ ಸಿಬ್ಬಂದಿ ಮೂಲಕ ಆಕೆಯ ವಿಚಾರಣೆ ನಡೆಸಲಾಯಿತು. ಬಳಿಕ ಏಜೆಂಟ್‌ ಮೂಲಕ ಆಕೆಯ ಭ್ರೂಣ ಲಿಂಗ ಪತ್ತೆ ಮಾಡಿದಾಗ ಹೆಣ್ಣು ಅಂತಾ ಗೊತ್ತಾಯಿತು. ಈಗಾಗಲೇ ಮೂರು ಹೆಣ್ಣು ಮಕ್ಕಳು ಹೊಂದಿದ್ದ ಕಾರಣ ಹೆಣ್ಣು ಮಗುವಿಗೆ ದಂಪತಿ ಕೂಡ ನಿರಾಕರಿಸಿದ್ದರಂತೆ.

    ಈ ಬಗ್ಗೆ ಖಚಿತ ಮಾಹಿತಿ ಪಡೆದ ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ಅಲರ್ಟ್‌ ಆಗಿದ್ದಾರೆ. ಆಂಧ್ರ ಪ್ರದೇಶದ ಆಯುಕ್ತರಿಗೆ ಮಾಹಿತಿಯನ್ನೂ ನೀಡಿದ್ದಾರೆ. ನಂತ್ರ ಸೆ.21ರಂದು ಜಂಟಿಯಾಗಿ ಕರ್ನೂಲ್‌ನಲ್ಲಿರುವ ಭಾಷಾ ನರ್ಸಿಂಗ್ ಹೋಂಗೆ ವಿಸಿಟ್ ಮಾಡಿ ಸ್ಟಿಂಗ್‌ ಆಪರೇಷನ್‌ ನಡೆಸಿ ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಆಸ್ಪತ್ರೆ ಬಳ್ಳಾರಿ, ರಾಯಚೂರು, ವಿಜಯನಗರ, ಗಡಿ ಭಾಗಕ್ಕೂ ಹತ್ತಿರವಿದೆ. ಕಾರ್ಯಾಚರಣೆ ಬಳಿಕ ಎಲ್ಲಾ ಪುರಾವೆಗಳನ್ನು ಆಂಧ್ರದ ನೋಡಲ್ ಅಧಿಕಾರಿಗೆ ರವಾನಿಸಿದ್ದಾರೆ. ಇದನ್ನೂ ಓದಿ: ಪ್ರೀತಿಗೆ ಮನೆಯವರ ವಿರೋಧ – ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನ; ಯುವತಿ ಸಾವು, ಯುವಕ ಪಾರು 

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಮಳವಳ್ಳಿಯ ಈ ದಂಪತಿಗೆ ಭ್ರೂಣ ಕೊಲ್ಲಲು 20 ಸಾವಿರ ರೂ.ಗೆ ಬೇಡಿಕೆ ಇಡಲಾಗಿತ್ತು. ಆದ್ರೆ ಇದಕ್ಕೆ ಒಪ್ಪದ ದಂಪತಿ ವಾಪಸ್‌ ಆಗಿದ್ರು. ಬಳಿಕ ವೈದ್ಯಕೀಯ ಸಿಬ್ಬಂದಿ ಜೊತೆ ಮಾತುಕತೆ ನಡೆಸುವಾಗ ಈ ಬಗ್ಗೆ ಬಾಯ್ಬಿಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಆರೋಗ್ಯ ಇಲಾಖೆ ಈ ದಂಪತಿಗಳನ್ನೇ ಮುಂದಿಟ್ಟುಕೊಂಡು ಸ್ಟಿಂಗ್‌ ಆಪರೇಷನ್‌ ನಡೆಸಿತು. ಸದ್ಯ ಜಾಲವನ್ನು ಪತ್ತೆಹಚ್ಚಿದ ಆರೋಗ್ಯ ಇಲಾಖೆ ಆಂಧ್ರ ಪ್ರದೇಶದ ಭಾಷ ನರ್ಸಿಂಗ್ ಹೋಂಗೆ ಬೀಗ ಜಡಿದಿದೆ. ಇದನ್ನೂ ಓದಿ: ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

    ಕಾರ್ಯಾಚರಣೆ ಬಗ್ಗೆ ಡಾ. ವಿವೇಕ್ ಹೇಳಿದ್ದೇನು?
    ಸ್ಟಿಂಗ್‌ ಆಪರೇಷನ್‌ ಬಳಿಕ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ವೈದ್ಯಕೀಯ ಕಾಯ್ದೆ ಉಪನಿರ್ದೇಶಕರಾದ ಡಾ. ವಿವೇಕ್ ದೊರೈ, ಆಂಧ್ರದ ಆಶಾ ಕಾರ್ಯಕರ್ತೆಯೇ ಇದ್ರ ಕಿಂಗ್‌ಪಿನ್‌. 17 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.‌ ಭಾಷಾ ನರ್ಸಿಂಗ್‌ ಹೋಮ್‌ 50 ಹಾಸಿಗೆಗಳ ಆಸ್ಪತ್ರೆಯಾಗಿದ್ದು, ನಾವು ರೇಡ್‌ಗೆ ಹೋದ ತಕ್ಷಣ ಡಾಕ್ಟರ್‌ ಸ್ಪಾಟ್‌ನಿಂದ ಓಡಿ ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

    ಅಲ್ಲದೇ ಅಲ್ಲಿನ ಅಲ್ಲಿನ ನೋಡಲ್ ಅಧಿಕಾರಿಗೆ, ಏಜೆಂಟ್‌ಗಳಿಗೆ ಹಣ ನೀಡಿದ್ದು, ಎಲ್ಲ ಸಾಕ್ಷ್ಯವನ್ನು ನಮ್ಮ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಹ್ಯಾಂಡೋವರ್ ಮಾಡ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

  • ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್

    ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್

    – 1.45 ಕೋಟಿ ಮೌಲ್ಯದ ಬೈಕ್‌ಗಳು ವಶ

    ಬೆಂಗಳೂರು: 3 ವರ್ಷದಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಖದೀಮನನ್ನ ಕೆ.ಆರ್ ಪುರ (K.R Pura) ಪೊಲೀಸರು ಬಂಧಿಸಿದ್ದಾರೆ.

    ಆಂಧ್ರಪ್ರದೇಶದ (Andra Pradesh) ಬಂಗಾರುಪಾಳ್ಯಂ (Bangarupalyam) ನಿವಾಸಿ ಪ್ರಸಾದ್ ಬಾಬು ಬಂಧಿತ ಕಳ್ಳ. ದುಬಾರಿ ಬೆಲೆಯ ಬೈಕ್‌ಗಳನ್ನೇ ಟಾರ್ಗೆಟ್ ಮಾಡ್ತಿದ್ದ ಪ್ರಸಾದ್ ಬಾಬು, ಪ್ರತಿ ದಿನ ಸಂಜೆ ಬಸ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದ. ನಂತರ ಕೆಆರ್ ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ ಬೈಕ್‌ಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ – ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ!

    ಬಂದ ದಿನವೇ ಬೈಕ್ ಕದ್ದು, ಅದೇ ಬೈಕ್‌ನಲ್ಲಿ ಊರಿಗೆ ಎಸ್ಕೇಪ್ ಆಗುತ್ತಿದ್ದ. ಬೆಂಗಳೂರು, ತಿರುಪತಿ, ಚಿತ್ತೂರು ಸೇರಿ ಹಲವೆಡೆ ಕಳ್ಳತನ ಮಾಡುತ್ತಿದ್ದ. ಪ್ರಸಾದ್ ಬಾಬು ಕದ್ದ ಬೈಕ್‌ಗಳನ್ನ 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡಿ, ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಆರೋಪಿಯಿಂದ 20 ರಾಯಲ್ ಎನ್‌ಫೀಲ್ಡ್ ಬೈಕ್, 30 ಫಲ್ಸರ್ ಬೈಕ್, 40 ಆಕ್ಟಿವಾ ಹಾಗೂ ಇತರೆ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

    ಸುಮಾರು 1.45 ಕೋಟಿ ರೂ. ಮೌಲ್ಯದ 100 ಬೈಕ್ ವಶಕ್ಕೆ ಪಡೆದ ಕೆಆರ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಪುನೀತ್‌ ನೆನಪಲ್ಲಿ ಅನದಾನ ಮಾಡಿದ ಅಪ್ಪು ಅಭಿಮಾನಿಗೆ ಭೇಷ್‌ ಎಂದ ಫ್ಯಾನ್ಸ್

    ಪುನೀತ್‌ ನೆನಪಲ್ಲಿ ಅನದಾನ ಮಾಡಿದ ಅಪ್ಪು ಅಭಿಮಾನಿಗೆ ಭೇಷ್‌ ಎಂದ ಫ್ಯಾನ್ಸ್

    ಪ್ಪು (Appu) ಸದಾ ಕಣ್ಣ ಮುಂದಿನ ದೀಪ. ಅದು ಯಾವತ್ತೂ ಆರುವುದಿಲ್ಲ. ಅದೆಂಥ ಬಿರುಗಾಳಿ ಬಂದರೂ ಅಲುಗಾಡುವುದಿಲ್ಲ. ಅದಕ್ಕೆ ಆ ಜೀವವನ್ನು ಅಪ್ಪು ಎನ್ನುತ್ತಾರೆ. ಆ ಕನ್ನಡದ ಕಂದ ಮಾಡಿದ ಸಮಾಜ ಸೇವೆಯೆಷ್ಟೋ? ಹಸಿದವರಿಗೆ ಅನ್ನ ಬಡಿಸಿದ್ದೆಷ್ಟೊ? ದೇಹಿ ಎಂದವರಿಗೆ ಕೈ ತುಂಬಾ ಕೊಟ್ಟಿದ್ದೆಷ್ಟೋ? ಈಗ ಅದೇ ನೆನಪಲ್ಲಿ ಆಂಧ್ರ ಪ್ರದೇಶದ ಅಪ್ಪು ಅಭಿಮಾನಿ(Appu Fan) ನಿತ್ಯ ನೂರಾರು ಹಸಿದ ಹೊಟ್ಟೆಗಳಿಗೆ ಅನ್ನ ಕೊಡುತ್ತಿದ್ದಾರೆ. ಏನಿದು ಅಪ್ಪು ಅಭಿಮಾನಿ ಅನ್ನ ದಾನದ ಕಥೆ. ಇಲ್ಲಿದೆ ಮಾಹಿತಿ.

    ಆ ಕೂಸು ಜೀವಂತ ಇದ್ದಾಗ ಗೊತ್ತಾಗಲಿಲ್ಲ. ಆ ಕೂಸು ಉಸಿರಾಡುತ್ತಿದ್ದಾಗ ಅರಿವಿಗೆ ಬರಲಿಲ್ಲ. ಆ ಕೂಸು ನಡೆದಾಡುತ್ತಿದ್ದಾಗ…ಎರಡು ಕಣ್ಣಿಗೆ ನಿಲುಕಲಿಲ್ಲ. ಬಹುಶಃ ಈ ಗುಣವೇ ಇಂದು ಅವರನ್ನು ದೇವರ ಮುಂದಿನ ನಂದಾದೀಪವಾಗಿಸಿದೆ. ಸೂರ್ಯ ಚಂದ್ರ ಇರೋವರೆಗೂ ಮರೆಯದಂಥ ಪಾಠ ಕಲಿಸಿ ಹೋಗಿದೆ. ಪುನೀತ್ ರಾಜ್‌ಕುಮಾರ್ ಈ ರೀತಿ ನಮ್ಮನ್ನು ಈ ಕ್ಷಣಕ್ಕೂ ಕಾಡುತ್ತಿದ್ದಾರೆ, ಕಂಗಾಲಾಗಿಸುತ್ತಾರೆ, ಬೆರಗು ಮೂಡಿಸುತ್ತಾರೆ. ಕೊನೆಗೆ ನಿಷ್ಕಲ್ಮಶ ನಗುವಿನಿಂದ ಕಣ್ಣ ಪಾಪೆಯಲ್ಲಿ ಹನಿ ನೀರಾಗುತ್ತಾರೆ. ಜೊತೆಗೆ ಇರದ ಜೀವ ಎಂದೆಂದೂ ಜೀವಂತ. ಈ ಸಾಲು ನಮ್ಮ ಹೃದಯ ಬಡಿತವಾಗುವುದು ಹೀಗೆ. ತಾಯಿಯ ಸೀರೆ ಸೆರಗಲ್ಲಿ ಮಲಗಿದ ಹಸಗೂಸಿನ ಹಾಗೆ. ಇದನ್ನೂ ಓದಿ:ಅಕ್ಷಯ್ ನಟನೆಯ ‘ವೆಲ್‌ಕಮ್ 3’ ಸಿನಿಮಾದಲ್ಲಿ ಸ್ಟಾರ್ ಕಲಾವಿದರ ದಂಡು

    ಪುನೀತ್‌ ರಾಜ್‌ಕುಮಾರ್ (Puneeth Rajkumar) ಹೋಗಿ 2 ವರ್ಷ ಸಮೀಪ. ಕಂಠೀರವ ಸ್ಟುಡಿಯೋದಲ್ಲಿ ಅವರ ಸಮಾಧಿ ಮುಂದೆ ನಿತ್ಯ ನೂರಾರು ಜನರು ಹಣತೆ ಬೆಳಗುತ್ತಾರೆ. ಮಗುವಿನ ನಾಮಕರಣ ಮಾಡುತ್ತಾರೆ. ಜೋಡಿಗಳು ದಾಂಪತ್ಯಕ್ಕೆ ಕಾಲಿಡುತ್ತಾರೆ. ಇದ್ದಾಗ ನೋಡಲಾಗಲಿವಲ್ಲ ಅಣ್ಣಾವ್ರ ಮಗನೇ ಎನ್ನುತ್ತಾ ಬಿಕ್ಕುತ್ತಾರೆ. ಯಾರು ಏನು ಮಾಡಿದರೂ ಅಪ್ಪು ಅದೇ ರಾಜಕುಮಾರನ ನಗೆ ಚೆಲ್ಲುತ್ತಾ ನಿದ್ದೆ ಮಾಡುತ್ತಿದ್ದಾರೆ. ಪಕ್ಕದಲ್ಲಿ ಅಪ್ಪ-ಅಮ್ಮ ಅನಿವಾರ್ಯವಾಗಿ ಜೋಗುಳ ಹಾಡುತ್ತಾರೆ. ಜೀವಂತ ಇರುವ ಇಡೀ ಕರುನಾಡು ದೇವರು ಗೀಚಿದ ಕಪ್ಪು ಅಕ್ಷರಕ್ಕೆ ಹಿಡಿ ಶಾಪ ಹಾಕುತ್ತದೆ. ಆದರೆ ಅಪ್ಪು ಬಿಟ್ಟು ಹೋದ ದಾನ ಧರ್ಮದ ಪಾಠ. ಹೊಸ ದಿಕ್ಕಿಗೆ ದಾರಿ ತೋರಿಸುತ್ತದೆ. ಅದಕ್ಕೆ ಸಾಕ್ಷಿ ಆಂಧ್ರಪ್ರದೇಶ ಅನಂತಪುರದ ರನ್ನ ರೆಡ್ಡಿಯ(Ranna Reddy) ಅನ್ನ ದಾಸೋಹ.

    ಅಪ್ಪು ಕರುನಾಡಿನಲ್ಲಿ ಹುಟ್ಟಿ ಇಲ್ಲೇ ಮಣ್ಣಾದರು. ಆದರೆ ಅವರು ಹೋದ ಮೇಲೆ ನಡೆದ ಮನ್ವಂತರ ಇದೆಯಲ್ಲ. ಅದನ್ನು ಊಹಿಸಿಕೊಳ್ಳಲೂ ಸಾಧ್ಯ ಇಲ್ಲ. ಒಬ್ಬ ವ್ಯಕ್ತಿ ಜೀವಂತ ಇದ್ದಾಗ ಇಷ್ಟೆಲ್ಲ ಮಾಡಿದ್ದರಾ? ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈಗೆ ಗೊತ್ತಾಗಬಾರದು. ಹಾಗೆ ಬಿಚ್ಚುಗೈಯಾಗಿ ಬದುಕಿದ್ದರಾ? ಇದೆಲ್ಲವೂ ಹೊರಬಿದ್ದದ್ದು ಅವರು ಲೋಕ ಬಿಟ್ಟು ಹೋದ ಮೇಲೆ. ಅದೇ ಕೋಟಿ ಕೋಟಿ ಜನರಿಗೆ ಸ್ಪೂರ್ತಿಯಾಯಿತು. ಅನ್ನದಾನದಿಂದ ಹಿಡಿದು ನೇತ್ರದಾನವರೆಗೆ. ಮಾದರಿಯಾಯಿತು. ಅದನ್ನೆಲ್ಲ ನೋಡಿಯೇ ರನ್ನ ರೆಡ್ಡಿ ಸಂಜೀವಿನಿ ಟ್ರಸ್ಟ್ ಮೂಲಕ ಅನಂತಪುರದ ಸಾವಿರಾರು ಹಸಿದ ಹೊಟ್ಟೆಗಳಿಗೆ ನಿತ್ಯ ತಾಯಿಯಾಗಿದ್ದಾರೆ. ಬಡವರು, ವೃದ್ಧರು, ಅನಾಥರು ಇವರನ್ನು ಹುಡುಕಿಕೊಂಡು ಹೋಗಿ ತುತ್ತು ತಿನ್ನಿಸಿ ಪುನೀತರಾಗುತ್ತಾರೆ.

    ಒಬ್ಬ ವ್ಯಕ್ತಿ ಬಳಿ ಕೋಟಿ ಕೋಟಿ ಹಣ ಇರಬಹುದು. ಆದರೆ ಅದರ ಮುಷ್ಟಿ ಪಾಲನ್ನು ಹಂಚುವ ಗುಣ ಇರದಿದ್ದರೆ ಹೇಗೆ? ಆ ಆಕಾಂಕ್ಷೆ ಇದ್ದಿದ್ದರಿಂದಲೇ ಅಪ್ಪು ನೊಂದವರ ಪಾಲಿಗೆ ದೇವರು ಕೊಟ್ಟ ಮಗನಾದರು. ಅದನ್ನೆಲ್ಲ ನೋಡಿ ಕೇಳಿ ಓದಿಯೇ ರನ್ನ ರೆಡ್ಡಿ ಅನ್ನ ಸಂತರ್ಪಣೆಗೆ ಮನಸು ಮಾಡಿದರು. ಕೈಯಾರೆ ಕಾಸು ಸುರಿದು ಹಸಿದ ಜೀವಗಳಿಗೆ ಅಮೃತ ನೀಡಿದರು. ಅಪ್ಪು ನನ್ನ ಪಾಲಿನ ದೇವರು ಬದುಕು ಕಲಿಸಿದ ಹೆತ್ತವ್ವ ಹೀಗೆ ಹೇಳುತ್ತಾರೆ ಅವರು. ಇದು ನೋಡಿ ಒಬ್ಬ ಮನುಷ್ಯ ಕಲಿಯಬೇಕಾದ ನೀತಿ ಪ್ರೀತಿ. ಇಷ್ಟೆಲ್ಲ ಕೊಟ್ಟು ಕೆಲವನ್ನು ಇಲ್ಲೇ ಬಿಟ್ಟು ಅಪ್ಪು ಆಕಾಶದ ನಕ್ಷತ್ರವಾಗಿದ್ದಾರೆ. ಆ ನಕ್ಷತ್ರದ ಬೆಳಕಿನಲ್ಲಿ ದಾರಿ ಹುಡುಕುತ್ತಾ ನಡೆಯುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರು ಹೊರವಲಯದಲ್ಲಿ ಆಂಧ್ರ ಬಿಲ್ಡರ್‌ಗೆ ಗುಂಡೇಟು

    ಬೆಂಗ್ಳೂರು ಹೊರವಲಯದಲ್ಲಿ ಆಂಧ್ರ ಬಿಲ್ಡರ್‌ಗೆ ಗುಂಡೇಟು

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪಾತಕ ಲೋಕ ಹೆಡೆ ಎತ್ತಿದಂತಿದೆ. ಕೆಆರ್‌ಪುರಂನ ಸೀಗೆಹಳ್ಳಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಧ್ರ ಮೂಲದ ಬಿಲ್ಡರ್ (Builder) ಕಮ್ ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ನಾಲ್ಕೈದು ಸುತ್ತು ಗುಂಡಿನ ಮಳೆಗರೆದು ಎಸ್ಕೇಪ್‌ ಆಗಿದ್ದಾರೆ.

    ಬೆಂಗಳೂರಿನ (Bengaluru) ಕೆ.ಆರ್.ಪುರಂ ಠಾಣಾ ವ್ಯಾಪ್ತಿಯ ಕುರುಡುಸೊಣ್ಣೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಿವಶಂಕರ್ ರೆಡ್ಡಿ ಮದನಪಲ್ಲಿಯಲ್ಲಿ ಹಲವಾರು ಕ್ರೈಂಗಳಲ್ಲಿ ಭಾಗಿಯಾಗಿದ್ದಾನೆ. ಘಟನೆಯಲ್ಲಿ ಆಂಧ್ರಪ್ರದೇಶದ (Andhra Pradesh) ಮದನಪಲ್ಲಿಯ ರೌಡಿಶೀಟರ್ ಕಮ್ ಬಿಲ್ಡರ್ ಶಿವಶಂಕರರೆಡ್ಡಿ ಮತ್ತು ಆತನ ಕಾರು ಚಾಲಕ ಅಶೋಕ್ ರೆಡ್ಡಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಟಿಆರ್‌ಎಸ್‌ ಅಲ್ಲ, ಇನ್ಮುಂದೆ ಬಿಆರ್‌ಎಸ್‌ – ಕೆಸಿಆರ್‌ ಪಕ್ಷದ ಹೆಸರು ಬದಲಾವಣೆಗೆ ಚುನಾವಣಾ ಆಯೋಗ ಒಪ್ಪಿಗೆ

    crime

    ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಆಂಧ್ರ ಮೂಲದವರೆಂಬ ಶಂಕೆ ವ್ಯಕ್ತವಾಗಿದ್ದು, ಹಳೆದ್ವೇಷದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳ ಪತ್ತೆಗೆ ವೈಟ್ ಫೀಲ್ಡ್ ಡಿಸಿಪಿ ಮೂರು ತಂಡ ರಚನೆ ಮಾಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಕೆ ಆರ್ ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಬಂದ ಮಹಾರಾಷ್ಟ್ರ ಲಾರಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು

    Live Tv
    [brid partner=56869869 player=32851 video=960834 autoplay=true]

  • ತಿರುಪತಿಯಲ್ಲಿ ದರ್ಶನಕ್ಕೆ ಕಾಯಬೇಕು 50 ಗಂಟೆ

    ತಿರುಪತಿಯಲ್ಲಿ ದರ್ಶನಕ್ಕೆ ಕಾಯಬೇಕು 50 ಗಂಟೆ

    ತಿರುಪತಿ: ತಿರುಪತಿಯಲ್ಲಿ (Tirupati) ಭಕ್ತಸಾಗರ ತುಂಬಿ ತುಳುಕುತ್ತಿದೆ. ತಿರುಪತಿ ಬೆಟ್ಟದಲ್ಲಿ 6 ಕಿ.ಮೀ.ವರೆಗೆ ಭಕ್ತರ ಸಾಲು ನಿಂತಿದ್ದು, ತಿಮ್ಮಪ್ಪನ ದರ್ಶನ ಪಡೆಯಬೇಕು ಅಂದರೆ 50 ಗಂಟೆಗಳ ಕಾಲ ಕಾಯಬೇಕಿದೆ.

    ಹೌದು.. ಎಲ್ಲಿ ನೋಡಿದ್ರೂ ಜನವೋ ಜನ (People), ದೇಗುಲದ (Temple) ಕಾಂಪ್ಲೆಕ್ಸ್‌ನಿಂದ ಆಚೆ, ದೇವಾಲಯದ ಮುಂಭಾಗ, ಲಡ್ಡುಗೂ ಕ್ಯೂ ಮುಡಿ ಸೇವೆಗೂ ಕ್ಯೂ ಲಗೇಜ್ ಕೌಂಟರ್‌ನಲ್ಲೂ ಕ್ಯೂ ಎಲ್ಲಿ ನೋಡಿದ್ರೂ ಲಕ್ಷಾಂತರ ಭಕ್ತರು. ಇದು ಆಂಧ್ರಪ್ರದೇಶದ ತಿರುಪತಿ ತಿರುಮಲದ ಸ್ಥಿತಿಯಾಗಿದೆ. ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಕಳೆದ 2 ದಿನಗಳಿಂದ ತಿರುಮಲದಲ್ಲಿ ಭಕ್ತ ಸಾಗರ ಹರಿದು ಬರುತ್ತಿದೆ. ಈ ಭಕ್ತರನ್ನು ನಿಯಂತ್ರಿಸಲು ಟಿಟಿಡಿ ಆಡಳಿತ ಮಂಡಳಿ ಹರಸಾಹಸ ಪಡುತ್ತಿದೆ.

    ಜನರು ಹೆಚ್ಚಿರುವ ಹಿನ್ನೆಲೆಯಲ್ಲಿ ತಿರುಮಲನ ದರ್ಶನಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಆದರೂ ಉಚಿತ ದರ್ಶನದ ಸಾಲಿನಲ್ಲಿ 2 ಕಿ.ಮೀವರೆಗೆ ಭಕ್ತರು ನಿಂತಿದ್ದಾರೆ. ದರ್ಶನಕ್ಕಾಗಿ ಭಕ್ತರು 48 ಗಂಟೆಗಳ ಕಾಲ ಕಾಯುವಷ್ಟು ಜನದಟ್ಟಣೆ ಉಂಟಾಗಿದೆ. ಇದರಿಂದಾಗಿ ತಿರುಪತಿ ದೇವಾಲಯ, ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮುಂತಾದ ಕಡೆ ಭಕ್ತರೇ ಕಾಣಿಸುತ್ತಿದ್ದಾರೆ. ಭಾನುವಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಕೌಂಟರ್‌ಗಳಲ್ಲಿ ಭಕ್ತರನ್ನು ನಿಯಂತ್ರಿಸುವುದು ಟಿಟಿಡಿಗೆ ಸವಾಲಾಗಿ ಪರಿಣಮಿಸಿದೆ. ಇದನ್ನೂ ಓದಿ: ಕೊಡಗಿನಲ್ಲಿ 3ನೇ ಸಾಕಾನೆ ಶಿಬಿರ ಲೋಕಾರ್ಪಣೆ – ಹಾರಂಗಿ ವಿಶೇಷತೆ ಏನು?

    ಇನ್ನೂ ಪ್ರಪಂಚದಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ತಿಮ್ಮಪ್ಪನ ದರ್ಶನಕ್ಕೆ ಬೇರೆ ಬೇರೆ ರಾಜ್ಯಗಳಿಂದಲೂ ಲಕ್ಷಾಂತರ ಜನ ಆಗಮಿಸಿದ್ದಾರೆ. ಕಳೆದ 2 ವರ್ಷಗಳಿಂದ ಕೋವಿಡ್ (Covid) ಇದ್ದು ದರ್ಶನ ಮಾಡಲು ಸಾಧ್ಯವಾಗದವರು ಹಾಗೂ ನಿಯಮಗಳ ಸಡಿಲಿಕೆ ಬಳಿಕ ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ರಜಾ ದಿನಗಳಲ್ಲಿ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಟಿಡಿ ಭಕ್ತರು ಪ್ರವಾಸ ಮುಂದೂಡುವುದು ಉತ್ತಮ ಎಂದು ಮನವಿ ಮಾಡಿದೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ತಕ್ಕ ಪ್ರಾಶಸ್ತ್ಯ ಸಿಗುತ್ತಿಲ್ಲ: ಶರದ್ ಪವಾರ್ ಬೇಸರ

    Live Tv
    [brid partner=56869869 player=32851 video=960834 autoplay=true]

  • ದೇವರನ್ನು ಮೆಚ್ಚಿಸಲು ಮಗಳಿಗೆ ಅರಿಶಿಣ- ಕುಂಕುಮ ತಿನ್ನಿಸಿದ ತಂದೆ

    ದೇವರನ್ನು ಮೆಚ್ಚಿಸಲು ಮಗಳಿಗೆ ಅರಿಶಿಣ- ಕುಂಕುಮ ತಿನ್ನಿಸಿದ ತಂದೆ

    ಅಮರಾವತಿ: ದೇವರನ್ನು ಮೆಚ್ಚಿಸಲು ತಂದೆಯೊಬ್ಬ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮ ಹಾಗೂ ಅರಿಶಿಣವನ್ನು ತಿನ್ನಿಸಲು ಯತ್ನಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಆಂಧ್ರಪ್ರದೇಶದ ಆತ್ಮಕೂರು ಪುರಸಭಾ ವ್ಯಾಪ್ತಿಯ ಪೆರಾರೆಡ್ಡಿಪಲ್ಲಿ ಗ್ರಾಮದಲ್ಲಿ ಮೌಢ್ಯ ಆಚರಿಸಲಾಗಿದೆ. ಕಂಡ್ರಾ ವೇಣುಗೋಪಾಲ್ ಬಂಧಿತ ಆರೋಪಿ. ವೇಣುಗೋಪಾಲ್ ದೇವರನ್ನು ಮೆಚ್ಚಿಸಲು ಕುಂಕುಮ ಹಾಗೂ ಅರಿಶಿಣವನ್ನು ತೆಗೆದುಕೊಂಡು ಮನೆಯ ತುಂಬೆಲ್ಲಾ ಹಾಕಿದ್ದಾನೆ. ನಂತರ ಅಲ್ಲಿಯೇ ಇದ್ದ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮಾ ಹಾಗೂ ಅರಿಶಿಣವನ್ನು ತಿನ್ನಲು ಹೇಳಿದ್ದಾನೆ. ಅವಳು ನಿರಾಕರಿಸಿದಾಗ ಬಲವಂತವಾಗಿ ಅರಿಶಿಣ ಹಾಗೂ ಕುಂಕುಮವನ್ನು ಅವಳ ಬಾಯಿಗೆ ಹಾಕಿದ್ದಾನೆ. ಇದರಿಂದಾಗಿ ಆಕೆ ಕಿರುಚುತ್ತಾ ಅಲ್ಲೇ ಕುಸಿದು ಬಿದ್ದಿದ್ದಾಳೆ.

    ಇದನ್ನು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವೇಣುಗೋಪಾಲ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

    ಘಟನೆ ಸಂಬಂಧ ಕಳೆದ ಮೂರು ದಿನಗಳಿಂದ ವೇಣುಗೋಪಾಲ್ ತಮ್ಮ ನಿವಾಸದಲ್ಲಿ ವಿಚಿತ್ರ ಆಚರಣೆಗಳಲ್ಲಿ ತೊಡಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಆತ್ಮಕೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ

    Live Tv

  • ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!

    ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!

    ಅಮರಾವತಿ: ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿಯ ಕರಾವಳಿ ಪ್ರದೇಶಕ್ಕೆ ಬಂಗಾರ ಬಣ್ಣದ ರಥವೊಂದು ತೇಲಿ ಬಂದಿದೆ.

    ಸಮುದ್ರದಲ್ಲಿ ತೇಲುತ್ತಿದ್ದ ರಥವನ್ನು ನೋಡಿದ ಗ್ರಾಮಸ್ಥರು ಅದನ್ನು ಹಗ್ಗ ಕಟ್ಟಿ ಎಳೆದು ದಡಕ್ಕೆ ತಂದಿದ್ದಾರೆ. ಚಂಡಮಾರುತದ ತೀವ್ರತೆ ಹೆಚ್ಚಾಗಿರುವುದರಿಂದಾಗಿ ಇದು ಮಯನ್ಮಾರ್, ಮಲೇಷಿಯಾ ಅಥವಾ ಥೈಲೆಂಡ್‍ನಿಂದ ಬಂದಿರಬಹುದೆಂದು ಶಂಕಿಸಲಾಗಿದೆ.

    ಈ ರಥವು ನೋಡಲು ಏಷ್ಯಾ ರಾಷ್ಟ್ರಗಳ ಮಠದ ಆಕಾರವನ್ನು ಹೊಂದಿದೆ. ಚಂಡಮಾರುತದ ಪ್ರಭಾವದಿಂದಾಗಿ ಉಂಟಾದ ಎತ್ತರದ ಅಲೆಗಳ ಕಾರಣದಿಂದಾಗಿ ರಥವು ಕರಾವಳಿಗೆ ಕೊಚ್ಚಿ ಹೋಗಿರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ರಥವನ್ನು ನೋಡಲು ಸುತ್ತಮುತ್ತಲಿನ ಜನರೆಲ್ಲರೂ ಸಮದ್ರದ ದಡದಲ್ಲಿ ಸೇರಿದ್ದರು. ಜೋತೆಗೆ ಈನ ರಥವನ್ನು ಕೌತುಕದಿಂದ ವೀಕ್ಷಿಸಿದರು. ಇದನ್ನೂ ಓದಿ: ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದು ಮದುವೆ ಅಂದಾಗ ಮನೆಯಿಂದ ಹೊರಹಾಕ್ದ!

    ಈ ಬಗ್ಗೆ ಸಂತೆಬೊಮ್ಮಾಳಿ ತಹಸೀಲ್ದಾರ್ ಜೆ.ಚಲಮಯ್ಯ ಮಾತನಾಡಿ, ಯಾವುದೇ ದೇಶದಿಂದ ಬಂದಿರದಿರಬಹುದು ಅಥವಾ ಭಾರತೀಯ ಕರಾವಳಿಯಲ್ಲಿ ಎಲ್ಲೋ ಕೆಲವು ಚಲನಚಿತ್ರಗಳ ಚಿತ್ರೀಕರಣಕ್ಕಾಗಿ ರಥವನ್ನು ಬಳಸಲಾಗಿರಬಹುದು. ಇದು ಚಂಡಮಾರುತದ ಪ್ರಭಾವದಿಂದಾಗಿ ಶ್ರೀಕಾಕುಲಂ ತೀರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

  • ಯಾರು ಇಲ್ಲದ ಹಾಸ್ಟೆಲ್ ಕೋಣೆಯಲ್ಲಿ ಅವನು, ಅವಳು ಪತ್ತೆ – ಸ್ನೇಹಿತೆಯ ಸರಸಕ್ಕೆ ಸಹಪಾಠಿಗಳ ಸಾಥ್

    ಯಾರು ಇಲ್ಲದ ಹಾಸ್ಟೆಲ್ ಕೋಣೆಯಲ್ಲಿ ಅವನು, ಅವಳು ಪತ್ತೆ – ಸ್ನೇಹಿತೆಯ ಸರಸಕ್ಕೆ ಸಹಪಾಠಿಗಳ ಸಾಥ್

    – ಬೀಗ ಒಡೆದು ನೋಡಿದ ಸಿಬ್ಬಂದಿಗೆ ಶಾಕ್
    – ಹೊರಗೆ ಬೀಗ, ಒಳಗಿಬ್ಬರು ಲಾಕ್

    ಹೈದರಾಬಾದ್: ವಿದ್ಯಾರ್ಥಿನಿಯರ ಹಾಸ್ಟೆಲ್‍ನಲ್ಲಿ 16ರ ವಿದ್ಯಾರ್ಥಿ ಇಡೀ ರಾತ್ರಿ ಕಳೆದು, ಕೊನೆಗೆ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದ ಘಟನೆ ಆಂಧ್ರಪ್ರದೇಶದ ನುಜ್ವಿಡ್‍ನಲ್ಲಿ ಬೆಳಕಿಗೆ ಬಂದಿದೆ.

    ನುಜ್ವಿಡ್‍ನ ಐಐಐಟಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಫೆ. 16ರಂದು ಈ ಘಟನೆ ನಡೆದಿದ್ದು, ಹಾಸ್ಟೆಲ್‍ನಲ್ಲಿ ಇದ್ದ ಇತರೆ ವಿದ್ಯಾರ್ಥಿನಿಯರು ವಿಡಿಯೋವನ್ನು ಎಲ್ಲೆಡೆ ಹರಿಬಿಟ್ಟ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ಕೋಣೆಯ ಕಿಟಕಿ ಮೂಲಕ ಒಳಗೆ ನುಗ್ಗಿದ್ದ ವಿದ್ಯಾರ್ಥಿ ಇಡೀ ರಾತ್ರಿ ವಿದ್ಯಾರ್ಥಿಯೋರ್ವಳ ಜೊತೆ ಬೀಗ ಹಾಕಿದ್ದ ಕೋಣೆಯಲ್ಲಿ ಇದ್ದ. ಇದಕ್ಕೆ ವಿದ್ಯಾರ್ಥಿನಿಯ ಸಹಪಾಠಿಗಳು ಇಬ್ಬರು ಜೊತೆಗಿರಲು ಸಹಾಯ ಮಾಡಿದ್ದರು ಎಂಬುದು ಕೂಡ ತಿಳಿದು ಬಂದಿದೆ.

    ಬೀಗ ಹಾಕಿದ್ದ ಕೋಣೆಯಲ್ಲಿ ಯಾರೋ ಇದ್ದಾರೆ ಎಂದು ಅನುಮಾನ ಬಂದು ಭದ್ರತಾ ಸಿಬ್ಬಂದಿ ಬೀಗ ಮುರಿದು ನೋಡಿದಾಗ ಸತ್ಯಾಂಶ ಹೊರಬಿದ್ದಿದೆ. ಬೀಗ ಮುರಿದಾಗ ಕೊಣೆಯಲ್ಲಿ ವಿದ್ಯಾರ್ಥಿನಿ ಇದ್ದಿದ್ದನ್ನು ನೋಡಿ ಸಿಬ್ಬಂದಿ ಶಾಕ್ ಆಗಿದ್ದರು. ಬಳಿಕ ಕೋಣೆಯನ್ನು ಪರಿಶೀಲನೆ ನಡೆಸಿದಾಗ ಮಂಚದ ಕೆಳಗೆ ಅವಿತು ಕುಳಿತ್ತಿದ್ದ ವಿದ್ಯಾರ್ಥಿ ಪತ್ತೆಯಾಗಿದ್ದನು. ತಕ್ಷಣ ಈ ಬಗ್ಗೆ ಸಿಬ್ಬಂದಿ ಕಾಲೇಜು ಮಂಡಳಿಗೆ ಮಾಹಿತಿ ನೀಡಿದರು. ಆ ಬಳಿಕ ವಿದ್ಯಾರ್ಥಿ ಹಾಸ್ಟೆಲ್ ಕೋಣೆಗೆ ಬರಲು ಸಹಾಯ ಮಾಡಿದ ಎಲ್ಲಾ ವಿದ್ಯಾರ್ಥಿನಿಯರ ಪೋಷಕರನ್ನು ಕರೆಸಿ, ಈ ಬಗ್ಗೆ ವಿಷಯ ಮುಟ್ಟಿಸಲಾಯ್ತು.

    ವಿದ್ಯಾರ್ಥಿ ಹಾಸ್ಟೆಲ್ ಒಳಗೆ ಬರಲು ಸಹಾಯ ಮಾಡಿದ್ದ ಸಹಪಾಠಿಗಳು ಹಾಗೂ ವಿದ್ಯಾರ್ಥಿನಿ ಸೇರಿ 6 ಮಂದಿಯನ್ನು ಕಾಲೇಜಿನಿಂದ ಅಮಾನತು ಗೊಳಿಸಿದ್ದು, ವಿದ್ಯಾರ್ಥಿನಿಯರಿಗೆ ಕೌನ್ಸಿಲಿಂಗ್ ನೀಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ಕಾಲೇಜು ಆಡಳಿತ ಮಂಡಳಿ ಶಿಸ್ತಿನ ಸಮಿತಿ ರಚಿಸಿದೆ.

  • ಅಮರಾವತಿ ಯೋಜನೆಗೆ 2.5 ಸಾವಿರ ಕೋಟಿ ಸಾಲ ನೀಡಲು ವಿಶ್ವಬ್ಯಾಂಕ್ ಹಿಂದೇಟು

    ಅಮರಾವತಿ ಯೋಜನೆಗೆ 2.5 ಸಾವಿರ ಕೋಟಿ ಸಾಲ ನೀಡಲು ವಿಶ್ವಬ್ಯಾಂಕ್ ಹಿಂದೇಟು

    ಅಮರಾವತಿ: ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸುಸ್ಥಿರ ಮೂಲಸೌಕರ್ಯ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಯನ್ನು ವಿಶ್ವಬ್ಯಾಂಕ್ ಕೈ ಬಿಟ್ಟಿದ್ದು, ಇದರಿಂದ ಆಂಧ್ರದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ಅಡ್ಡಿ ಎದುರಾಗಿದೆ.

    ಈ ಹಿಂದೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅಮರಾವತಿ ಸುಸ್ಥಿರ ಮೂಲಸೌಕರ್ಯ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಗೆ ವಿಶ್ವಬ್ಯಾಂಕ್ ಸುಮಾರು 300 ಮಿಲಿಯನ್ ಡಾಲರ್(2.5 ಸಾವಿರ ಕೋಟಿ ರೂ.) ಸಾಲ ನೀಡಲು ಒಪ್ಪಿಕೊಂಡಿತ್ತು. ಆದರೆ ಈಗ ಈ ಯೋಜನೆಯನ್ನು ಕೈಬಿಡಲಾಗಿದೆ ಎಂದು ವಿಶ್ವಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ತೋರಿಸುತ್ತಿದೆ. ಅಲ್ಲದೆ ಯೋಜನೆಗೆ ಸಂಬಂಧಿಸಿದಂತೆ ವಿಶ್ವಬ್ಯಾಂಕ್ ಅಧಿಕಾರಿಗಳು ಕೂಡ ಯಾವುದೇ ಪ್ರತಿಕ್ರಿಯೆಯನ್ನು ನೀಡುತ್ತಿಲ್ಲ, ಜೊತೆಗೆ ಈ ಬಗ್ಗೆ ಯಾವುದೇ ಕಾರಣವನ್ನು ಸ್ಪಷ್ಟಪಡಿಸಿಲ್ಲ.

    ರಾಜಧಾನಿ ಅಭಿವೃದ್ಧಿಗಾಗಿ ಅಮರಾವತಿ ವಲಯದಲ್ಲಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ರೈತರು ದೂರು ದಾಖಲಿಸಿದ್ದರು. ಈ ದೂರನ್ನು ವಿಶ್ವಬ್ಯಾಂಕ್ ಪರಿಗಣನೆಗೆ ತೆಗೆದುಕೊಂಡಿದ್ದು, ಸಾಲ ನೀಡುವ ಒಪ್ಪಂದ ಕೈ ಬಿಡುವ ಬಂದಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

    ಟಿಡಿಪಿ(ತೆಲುಗು ದೇಶಂ ಪಕ್ಷ) ಸರ್ಕಾರವಿದ್ದಾಗ ಕೃಷ್ಣ ನದಿಗೆ ಹತ್ತಿರವಾಗಿರುವ ಅಮರಾವತಿ ಪ್ರದೇಶ ಅಭಿವೃದ್ಧಿ ಯೋಜನೆಗಾಗಿ ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಇದನ್ನು ವಿರೋಧಿಸಿ ಅನೇಕ ಎನ್‍ಜಿಓಗಳು ಹಾಗೂ ಪರಿಸರವಾದಿಗಳು ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಸಿ, ವಿರೋಧ ವ್ಯಕ್ತಪಡಿಸಿದ್ದರು.

    ಚಂದ್ರಬಾಬು ನಾಯ್ಡು ಸರ್ಕಾರವು ಇದನ್ನು ನರೇಂದ್ರ ಮೋದಿ ಸರ್ಕಾರ 2016 ರಲ್ಲಿ ಘೋಷಿಸಿದ ವಿಶೇಷ ಸಹಾಯ ಕ್ರಮಗಳ ಅಡಿಯಲ್ಲಿ, ಬಾಹ್ಯ ನೆರವಿನ ಯೋಜನೆಗಳ ಅಡಿಯಲ್ಲಿ ಪಟ್ಟಿಮಾಡಿದೆ ಎಂದು ವರದಿಯಾಗಿದೆ, ಆದ್ದರಿಂದಾಗಿ ಸಾಲ ಮರುಪಾವತಿ ಹೊರೆಯನ್ನು ಕೇಂದ್ರವು ತೆಗೆದುಕೊಳ್ಳಬೇಕಿತ್ತು.

    ಬಾಹ್ಯ ನೆರವಿನ ಯೋಜನೆಯ ಪ್ರಸ್ತಾವನೆಯಂತೆ ಅಮರಾವತಿ ಯೋಜನೆಗೆ ವಿಶ್ವಬ್ಯಾಂಕ್ 300 ಮಿಲಿಯನ್ ಡಾಲರ್ (ಸುಮಾರು 2.5 ಸಾವಿರ ಕೋಟಿ) ಹಾಗೂ ಎಐಐಬಿ 200 ಮಿಲಿಯನ್ ಡಾಲರ್ ಸಾಲ ನೀಡಲು ಒಪ್ಪಿಗೆ ಸೂಚಿಸಿದ್ದವು. ಆದರೆ ಇತ್ತ ವಿಶ್ವಬ್ಯಾಂಕ್ ಈ ಯೋಜನೆ ಕೈ ಬಿಟ್ಟಿದೆ, ಅತ್ತ ಎಐಐಬಿ ಇನ್ನೂ ತನ್ನ ನಿರ್ಧರದ ಬಗ್ಗೆ ಸ್ಪಷ್ಟಪಡಿಸಿಲ್ಲ. ಹೀಗಾಗಿ ಅಮರಾವತಿ ಯೋಜನೆ ಕಾರ್ಯರೂಪಕ್ಕೆ ಬರುವುದು ಕೊಂಚ ಅನುಮಾನವಾಗಿದೆ.