Tag: andrapradesh

  • ಹೆಂಡತಿ, ಇಬ್ಬರು ಪುತ್ರಿಯರನ್ನ ಕೊಂದು ತಾನೂ ವಿಷ ಕುಡಿದ

    ಹೆಂಡತಿ, ಇಬ್ಬರು ಪುತ್ರಿಯರನ್ನ ಕೊಂದು ತಾನೂ ವಿಷ ಕುಡಿದ

    ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಪುತ್ರಿಯರನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಇಲ್ಲಿನ ಕೃಷ್ಣಪುರಂನ ನಿವಾಸಿಯಾದ ರೈತ ರಾಮ ಸುಬ್ಬಾರೆಡ್ಡಿ ತನ್ನ ಹೆಂಡತಿ ಸುಲೋಚನಾ, ಪುತ್ರಿಯರಾದ ಪ್ರತಿಭಾ ಹಾಗೂ ಪ್ರತ್ಯುಶಾಳುನ್ನ ಕೊಂದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಮದ್ಯವ್ಯಸನಿಯಾಗಿದ್ದ ರೆಡ್ಡಿ ಮಂಗಳವಾರದಂದು ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳು ಮಲಗಿದ್ದ ವೇಳೆ ಅವರನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಕುಟುಂಬಸ್ಥರನ್ನು ಕೊಲೆ ಮಾಡಿ ರೆಡ್ಡಿ ಅಲ್ಲಿಂದ ಪರಾರಿಯಾಗಿದ್ದ. ಬುಧವಾರ ಬೆಳಿಗ್ಗೆ ರೆಡ್ಡಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತಡಿಪತ್ರಿ ಬಳಿ ಪತ್ತೆಯಾಗಿದ್ದಾನೆ. ಹೆಂಡತಿ ಮಕ್ಕಳನ್ನು ಕೊಂದ ನಂತರ ರೆಡ್ಡಿ ವಿಷ ಸೇವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ರೆಡ್ಡಿಯನ್ನು ಕೂಡಲೇ ಅನಂತಪುರ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಕೆಲವು ಗಂಟೆಗಳ ಬಳಿಕ ಸಾವನ್ನಪ್ಪಿದ್ದಾನೆ.

    ಘಟನೆ ನಡೆದಾಗ ರೆಡ್ಡಿಯ ಮತ್ತೊಬ್ಬ ಪುತ್ರಿಯಾದ ಪ್ರಸನ್ನ ಮನೆಯಲ್ಲಿ ಇರಲಿಲ್ಲವಾದ್ದರಿಂದ ಆಕೆ ಮಾತ್ರ ಈಗ ಬದುಕುಳಿದಿದ್ದಾರೆ. ರೆಡ್ಡಿ ಹೆಚ್ಚಾಗಿ ಜೂಜಾಟ ಆಡುತ್ತಿದ್ದರಿಂದ ಸಾಕಷ್ಟು ಹಣ ಕಳೆದುಕೊಂಡಿದ್ದನೆಂದು ಪೊಲೀಸರು ಹೇಳಿದ್ದಾರೆ.

    ಕೊಲೆಗೆ ಕಾರಣವೇನು?: ರೆಡ್ಡಿ ಆರ್ಥಿಕ ಸಂಕಷ್ಟಕ್ಕೆ ಈಡಾಗಿದ್ದು, ಇಬ್ಬರು ಪುತ್ರಿಯರನ್ನು ಉನ್ನತ ವಿದ್ಯಾಭ್ಯಾಸಕ್ಕೆ ಕಳಿಸಲು ಸಿದ್ಧವಿಲ್ಲದ ಕಾರಣ ಕೊಲೆ ಮಾಡಿದ್ದಾನೆಂದು ಪೊಲೀಸರು ಹೇಳಿದ್ದಾರೆ. ರೆಡ್ಡಿಯ ಕೊಲೆಯಾದ ಇಬ್ಬರು ಪುತ್ರಿಯರು ಎಂಬಿಎ ಸೀಟ್ ಪಡೆದಿದ್ದು, ಶೀಘ್ರದಲ್ಲೇ ತಿರುಪತಿಯಲ್ಲಿ ಕಾಲೇಜಿಗೆ ಸೇರಿಕೊಳ್ಳಬೇಕಿತ್ತು. ಸ್ವಲ್ಪ ಆಸ್ತಿಯನ್ನು ಮಾರಿ ಮಕ್ಕಳನ್ನು ಎಂಬಿಎ ವ್ಯಾಸಂಗಕ್ಕೆ ಕಳಿಸುವಂತೆ ಪತ್ನಿ ಸುಲೋಚನಾ ಗಂಡನಿಗೆ ಒತ್ತಾಯ ಮಾಡಿದ್ದರು. ಆದ್ರೆ ರೆಡ್ಡಿ ಮಾತ್ರ ಆಸ್ತಿ ಮಾರಲು ಸಿದ್ಧವಿರಲಿಲ್ಲ. ಇಬ್ಬರು ಪುತ್ರಿಯರ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಆಗಾಗ ಜಗಳ ಹಾಗೂ ಹೊಡೆಯೋದು ನಡೆಯುತ್ತಿತ್ತು ಎಂದು ಪೊಲೀಸರು ಹೇಳಿರುವುದಾಗ ಮಾಧ್ಯಮವೊಂದು ವರದಿ ಮಾಡಿದೆ.

  • ಬೆಂಗ್ಳೂರಿನಲ್ಲಿ 1200 ರೂ, ಆಂಧ್ರದಲ್ಲಿ ಬಾಹುಬಲಿ-2 ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

    ಬೆಂಗ್ಳೂರಿನಲ್ಲಿ 1200 ರೂ, ಆಂಧ್ರದಲ್ಲಿ ಬಾಹುಬಲಿ-2 ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

    ವಿಜಯವಾಡ: ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ಇಂದು ದೇಶದಾದ್ಯಂತ ತೆರೆಕಂಡಿದೆ. ಬೆಂಗ್ಳೂರಿನಲ್ಲಿ ಗುರುವಾರದಂದೇ ಬಾಹುಬಲಿ-2 ಚಿತ್ರದ ವಿಶೇಷ ಪ್ರದರ್ಶನ ಮಾಡಲಾಗಿದ್ದು, ಟಿಕೆಟ್ ದರ 1200 ರೂ. ನಿಂದ 1600 ರೂ.ವರೆಗೆ ಇತ್ತು. ಆದ್ರೆ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಲಾಭದಾಯಕ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಾಹುಬಲಿ-2 ಚಿತ್ರದ ಟಿಕೆಟ್‍ಗಳು 3500 ರಿಂದ 4 ಸಾವಿರ ರೂ.ಗೆ ಮಾರಾಟವಾಗಿವೆ.

    ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ!

    ಹೈದರಾಬಾದ್, ವಾರಂಗಲ್, ಕರೀಂನಗರ್, ಮೆಹಬೂಬ್‍ನಗರ್ ಹಾಗೂ ತೆಲಂಗಾಣದ ಇತರೆ ನಗರಗಳಲ್ಲಿ ಜನರು ಸುಡುಬಿಸಿಲಿನಲ್ಲೂ ಥಿಯೇಟರ್ ಮುಂದೆ ಸಾಲುಗಟ್ಟಿ ನಿಂತಿದ್ದರು. ನಾವು ಇಂದಿನ 11.30ರ ಪ್ರದರ್ಶನಕ್ಕೆ ಎರಡು ಟಿಕೆಟ್‍ಗಳನ್ನು 3 ಸಾವಿರ ರೂಪಾಯಿಗೆ ಕೊಂಡುಕೊಂಡೆವು ಎಂದು ನಿಜಾಮಾಬಾದ್‍ನ ಪ್ರಭಾಸ್ ಅಭಿಮಾನಿಯೊಬ್ಬರು ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ಇದನ್ನೂ ಓದಿ: ಟಿಕೆಟ್ ಬುಕ್ಕಿಂಗ್‍ನಲ್ಲೂ ಹೊಸ ದಾಖಲೆ: 24 ಗಂಟೆಯಲ್ಲಿ ಎಷ್ಟು ಬಾಹುಬಲಿ ಟಿಕೆಟ್ ಮಾರಾಟವಾಗಿದೆ ಗೊತ್ತಾ?

    ಆಂಧ್ರಪ್ರದೇಶದಲ್ಲಿ ಬಾಹುಬಲಿ ಮೇನಿಯಾ ಎಷ್ಟಿದೆಯೆಂದರೆ ಕೆಲವು ಗ್ಯಾಸ್ ಏಜೆಂನ್ಸಿಗಳು ಹೊಸ ಗ್ಯಾಸ್ ಸಂಪರ್ಕ ಪಡೆಯುವವರಿಗೆ ಬಾಹುಬಲಿ-2 ಚಿತ್ರಕ್ಕೆ ಉಚಿತ ಟಿಕೆಟ್ ಆಫರ್ ಕೂಡ ನೀಡಿದ್ದಾರೆ. ಅಲ್ಲದೆ ಕೆಲವು ಕಾರ್ಪೊರೇಟ್ ಸಂಸ್ಥೆಗಳು ಕೂಡ ಉಚಿತ ಟಿಕೆಟ್ ನೀಡಿವೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಕಲ್ಪನಾ ಲೋಕಕ್ಕೆ ಹೊಸ ಭಾಷ್ಯ ಬರೆದ ಬಾಹುಬಲಿ-2 ಚಿತ್ರದ ಫಸ್ಟ್ ರಿಪೋರ್ಟ್ 

    ಸಾಮಾನ್ಯ ದಿನಗಳಲ್ಲಿ ಟಿಕೆಟ್ ದರ 100 ರೂ. ಇದ್ದು, ಬಾಹುಬಲಿ ಚಿತ್ರದ ಟಿಕೆಟ್ ದರವನ್ನ 500 ರೂ.ಗೆ ಏರಿಸಲಾಗಿದೆ ಎಂದು ಇಲ್ಲಿನ ಚಿತ್ರಪ್ರೇಮಿಯೊಬ್ಬರು ಹೇಳಿದ್ದಾರೆ.

    ಇದನ್ನೂ ಓದಿ: ಕಟ್ಟಪ್ಪ ಬಾಹುಬಲಿಯನ್ನ ಕೊಂದಿದ್ದು ಏಕೆ? – ಮಿಲಿಯನ್ ಡಾಲರ್ ಪ್ರಶ್ನೆಗೆ ಇಲ್ಲಿದೆ ಉತ್ತರ

  • ರೌಡಿಶೀಟರ್ ಸುನಿಲ್ ಕೊಲೆ ಪ್ರಕರಣ- ಸ್ಪಾಟ್ ನಾಗ ಸೇರಿ 9 ಆರೋಪಿಗಳ ಬಂಧನ

    ರೌಡಿಶೀಟರ್ ಸುನಿಲ್ ಕೊಲೆ ಪ್ರಕರಣ- ಸ್ಪಾಟ್ ನಾಗ ಸೇರಿ 9 ಆರೋಪಿಗಳ ಬಂಧನ

    – ಆಂಧ್ರದಲ್ಲಿ ಸೆರೆಸಿಕ್ಕ ಆರೋಪಿಗಳು

    ಬೆಂಗಳೂರು: ಬಸವೇಶ್ವರ ನಗರದಲ್ಲಿ ನಡೆದ ರೌಡಿ ಶೀಟರ್ ಸುನಿಲ್ ಕೊಲೆ ಪ್ರಕರಣ ಸಂಬಂಧ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಕೊಲೆ ಪ್ರಕರಣ ಸಂಬಂಧ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಆಂಧ್ರ ಮತ್ತು ಧರ್ಮಸ್ಥಳಕ್ಕೆ ಪೊಲೀಸರ ತಂಡ ತೆರಳಿತ್ತು. ಇನ್ನೆರಡು ತಂಡ ಬೆಂಗಳೂರಿನಲ್ಲಿಯೇ ಹುಡುಕಾಟ ಆರಂಭಿಸಿತ್ತು. ಆಂಧ್ರದಲ್ಲಿ ಗುರುವಾರ ರಾತ್ರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ ಅಲಿಯಾಸ್ ಸ್ಪಾಟ್ ನಾಗ ಸೇರಿ 9 ಮಂದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ನಡೆದಿದ್ದೇನು?: ಕಳೆದ ಬುಧವಾರ ಬಸವೇಶ್ವರ ನಗರದಲ್ಲಿರೋ ಸುನಿಲ್ ಮನೆಗೆ ನುಗ್ಗಿದ ನಾಲ್ವರ ತಂಡ ಆತನನ್ನು ಮನೆಯಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿತ್ತು. ಬಳಿಕ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿತ್ತು. ಈ ವೇಳೆ ಸುನಿಲ್ ಪೋಷಕರಿಗೂ ಗಾಯಗಳಾಗಿತ್ತು.

    ಹಿಂದಿನ ದಾಳಿಗೆ ಸೇಡು: ಸ್ಪಾಟ್ ನಾಗನ ಮೇಲೆ ರೌಡಿ ಸುನಿಲ್ ಗ್ಯಾಂಗ್ 2016ರ ಮಾರ್ಚ್ ನಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಘಟನೆಯಿಂದ ಹೆಂಡತಿ ಮತ್ತು ಮಕ್ಕಳು ನಾಗನನ್ನು ತೊರೆದಿದ್ದರು. ಈ ಪ್ರಕರಣದಲ್ಲಿ ಜೈಲು ಸೇರಿದ್ದ ಸುನಿಲ್ 10 ದಿನದ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಬಿಡುಗಡೆಯಾದ ಬಳಿಕವೂ ನಾಗನನ್ನು ಕುಂಟ ಎಂದು ಲೇವಡಿ ಮಾಡುತ್ತಿದ್ದ. ಹಲ್ಲೆ ಮತ್ತು ಲೇವಡಿಯಿಂದ ಮನನೊಂದಿದ್ದ ನಾಗ ಒಂದು ವರ್ಷದ ಹಿಂದಿನ ದಾಳಿಗೆ ಸುನಿಲ್‍ನನ್ನು ಬುಧವಾರದಂದು ಕೊಲೆ ಮಾಡಿದ್ದ.

    https://www.youtube.com/watch?v=a3vmsD9DKZw