Tag: Anegundi utsava 2020

  • ಆನೆಗೊಂದಿ ಉತ್ಸವದಲ್ಲಿ ರಾಕ್ ಕ್ಲೈಂಬಿಂಗ್ ಸಾಹಸ ಪ್ರದರ್ಶನ

    ಆನೆಗೊಂದಿ ಉತ್ಸವದಲ್ಲಿ ರಾಕ್ ಕ್ಲೈಂಬಿಂಗ್ ಸಾಹಸ ಪ್ರದರ್ಶನ

    ಕೊಪ್ಪಳ: ಆನೆಗೊಂದಿ ಉತ್ಸವ 2020ರ ನಿಮಿತ್ತ ನಫಾಸನ ಸಂಸ್ಥೆ ವತಿಯಿಂದ ರಾಕ್ ಕ್ಲೈಂಬಿಂಗ್ ಸಾಹಸ ಪ್ರದರ್ಶನ ನಡೆಯಿತು.

    ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವದ ನಿಮಿತ್ತ ಇಂದು ನಡೆದ ರಾಕ್ ಕ್ಲೈಂಬಿಂಗ್ ಪ್ರದರ್ಶನಕ್ಕೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಋಷಿಮುಖ ಪರ್ವದಲ್ಲಿ ಚಾಲನೆ ನೀಡಿದರು. ಆನೆಗೊಂದಿಯ ಶ್ರೀ ಕೇಷ್ಣದೇವರಾಯ ವೇದಿಕೆ ರಸ್ತೆಯ ಪಕ್ಕದಲ್ಲಿ ನಡೆದ ರಾಕ್ ಕ್ಲೈಂಬಿಂಗ್ ಪ್ರದರ್ಶನದಲ್ಲಿ ರ‍್ಯಾಪ್ಲಿಂಗ್, ಜಿಫ್‍ಲೈನ್ ಕೃತಕ ಗೊಡೆ, ಆರ್ಚರಿ ಸೇರಿದಂತೆ ವಿವಿಧ ಪ್ರದರ್ಶನಗಳು ನಡೆದವು.

    ಈ ಪ್ರದರ್ಶನದಲ್ಲಿ ಭಾಗವಹಿಸಲು ಮಕ್ಕಳು ಸ್ವಇಚ್ಛೆಯಿಂದ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು ವಿಶೇಷವಾಗಿತ್ತು. ನಫಾಸನ ಸಂಸ್ಥೆಯ ಸಹಾಯಕ ನಿರ್ದೇಶಕ ವಿರೇಶ್.ಎಂ ಹಾಗೂ ಅವರ ಸಂಸ್ಥೆಯ ಸಾಹಸಿ ರಾಕ್ ಕ್ಲೈಂಬಿಂಗ್ ಪ್ರದರ್ಶನವನ್ನು ನಡೆಸಿಕೊಟ್ಟಿತು.

  • ಆನೆಗೊಂದಿ ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ:  ಸಾರ್ವಜನಿಕರಿಂದ ಹರ್ಷ

    ಆನೆಗೊಂದಿ ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: ಸಾರ್ವಜನಿಕರಿಂದ ಹರ್ಷ

    ಕೊಪ್ಪಳ: ಆನೆಗೊಂದಿ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ಸಾರ್ವಜನಿಕರು ಸ್ಪರ್ಧಾ ಸ್ಥಳಗಳಲ್ಲಿ ಪಾಲ್ಗೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

    ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ-2020ರ ನಿಮಿತ್ತ ಆನೆಗೊಂದಿಯ ಗ್ರಾಮದಲ್ಲಿ ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಪಗಡೆಯಾಟ, ಕೆಸರು ಗದ್ದೆ ಓಟ, ಹಗ್ಗ-ಜಗ್ಗಾಟ, ಕಲ್ಲುಗುಂಡು ಎತ್ತುವುದು, ಸಂಗ್ರಾಣಿ ಕಲ್ಲು ಎತ್ತುವುದು, ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ನಡೆದವು.

    ಚಿತ್ರಕಲಾ ಸ್ಪರ್ಧೆ:
    ಉತ್ಸವದ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾದ ಚಿತ್ರಕಲೆ ಸ್ಪರ್ಧೆಯಲ್ಲಿ 43 ಸ್ಪರ್ಧಾಳುಗಳು ಭಾಗವಹಿಸಿದ್ದರು. ಒಟ್ಟು 84 ಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು. ಅದರಲ್ಲಿ ಕೊಟ್ಟೂರು ಶಾಲೆಯ ಹನುಮೇಶ್ ಅವರ ಗಗನ್ ಮಹಲ್ ಚಿತ್ರಕ್ಕೆ ಪ್ರಥಮ ಸ್ಥಾನ ನೀಡಲಾಗಿದೆ. ರಾಜಶೇಖರ ಯಲಬುರ್ಗಾ ಅವರ ವಾಲಿಕೋಟೆ ಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದೆ. ಇಸ್ಲಾಂಪುರಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಶಿಭೂಷಣ್ ಎಂ.ಜಿ ಅವರ ವಾಲಿಕೋಟೆಯ ಚಿತ್ರಕ್ಕೆ ತೃತೀಯ ಸ್ಥಾನ ಲಭಿಸಿದೆ.

    ರಂಗೋಲಿ ಸ್ಪರ್ಧೆ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ರಂಗೋಲಿ ಸ್ಪರ್ಧೆಯಲ್ಲಿ 29 ಮಹಿಳೆಯರು ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಸ್ಥಾನ ಲಕ್ಷ್ಮಿ (ಸಾಣಾಪುರ), ದ್ವಿತೀಯ ಶೃತಿ ಹಿರೇಮಠ (ರಾಂಪುರ), ತೃತೀಯ ಧರ್ಮವತಿ (ಹನುಮನಹಳ್ಳಿ) ಸ್ಥಾನ ಪಡೆದಿದ್ದಾರೆ. ರಂಗೋಲಿ ಸ್ಪರ್ಧಾ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೇರಿದಂತೆ ಅನೇಕರು ಭೇಟಿ ನೀಡಿ ರಂಗೋಲಿ ವೀಕ್ಷಿಸಿದರು.

    ಪಗಡೆಯಾಟ:
    ಪಗಡೆ ಸ್ಪರ್ಧೆಯಲ್ಲಿ 05 ಮಹಿಳೆಯರು ಭಾಗವಹಿಸಿದ್ದರು. ಇದರಲ್ಲಿ ಆನೆಗೊಂದಿಯ ಗೀತಾ ಕೆ ಪ್ರಥಮ ಸ್ಥಾನ, ಗಂಗಾವತಿಯ ಮಂಜುಳಾ ಎಂ ದ್ವಿತೀಯ ಸ್ಥಾನ, ಬಸಪಟ್ಟಣದ ಜಯಲಕ್ಷ್ಮಿ ಕೆ.ಎಲ್ ತೃತೀಯ ಸ್ಥಾನ ಪಡೆದಿದ್ದಾರೆ. ಪುರುಷರ ಪಗಡೆ ಆಟ ಸ್ಪರ್ಧೆಯಲ್ಲಿ 03 ಪುರುಷರು ಭಾಗವಹಿಸಿದ್ದರು. ಇದರಲ್ಲಿ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಚರಂಡಯ್ಯ ಪ್ರಥಮ ಸ್ಥಾನ ಪಡೆದರೆ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಮಾನಪ್ಪ ದ್ವಿತೀಯ, ಗಂಗಾವತಿಯ ಎಸ್.ಕೆ.ಎನ್.ಜಿ ಕಾಲೇಜಿನ ವಿದ್ಯಾರ್ಥಿ ನಾಗರಾಜ ತೃತೀಯ ಸ್ಥಾನ ಪಡೆದಿದ್ದಾರೆ.

    ಕೆಸರು ಗದ್ದೆ ಓಟ:
    ಕೆಸರು ಗದ್ದೆ ಓಟಕ್ಕೆ ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಜಂಟಿಯಾಗಿ ಚಾಲನೆ ನೀಡಿದರು. ಓಟದಲ್ಲಿ ಒಟ್ಟು 45 ಸ್ಪರ್ಧಾಳುಗಳು ಭಾಗವಹಿಸಿದ್ದು, ಒಂದು ಭಾಗದಲ್ಲಿ 09 ಜನರಂತೆ ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಪ್ರಾರಂಭಿಸಿ, ಇದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ಅಂತಿಮ ಪಂದ್ಯಾವಳಿಗೆ ಆಯ್ಕೆ ಮಾಡಲಾಯಿತು. ಅಂತಿಮ ಸ್ಪರ್ಧೆಯಲ್ಲಿ ಒಟ್ಟು 10 ಜನ ಸ್ಪರ್ಧಿಗಳಿಂದ ಕೆಸರು ಗದ್ದೆ ಓಟ ನಡೆಯಿತು. ಇದರಲ್ಲಿ ಪ್ರಥಮ ಸ್ಥಾನ ಪ್ರೇಮರಾಜ್ ರಾಮಪ್ಪ, ದ್ವಿತೀಯ ಸ್ಥಾನವನ್ನು ಪೊಲೀಸ್ ಇಲಾಖೆಯ ಶರಣಪ್ಪ ಪಡೆದರೆ. ತೃತೀಯ ಸ್ಥಾನವನ್ನು ಎಂ.ಡಿ ಸಮೀರ್ ಪಡೆದರು.

    ಕೆಸರು ಗದ್ದೆಯಲ್ಲಿ ಹಗ್ಗ-ಜಗ್ಗಾಟ:
    ಉತ್ಸವದ ಅಂಗವಾಗಿ ಪೊಲೀಸ್, ಆರ್.ಡಿ.ಪಿ.ಆರ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಏರ್ಪಡಿಸಲಾದ ಹಗ್ಗ-ಜಗ್ಗಾಟ ಸ್ಪರ್ಧೆಗೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಚಾಲನೆ ನೀಡಿದರು. ಈ ಕೆಸರು ಗದ್ದೆಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಪ್ರಥಮ ಸ್ಥಾನ ಪೊಲೀಸ್ ಇಲಾಖೆ ಡಿ.ಆರ್ ಕೊಪ್ಪಳ ತಂಡ, ದ್ವಿತೀಯ ಸ್ಥಾನ ಆನೆಗೊಂದಿ ಮುಸ್ತಾಫ ತಂಡ, ತೃತೀಯ ಸ್ಥಾನ ಬಸವನದುರ್ಗ ವೆಂಕಟೇಶ ಬಾಬು ತಂಡ ಪಡೆದಿದೆ.

    ವ್ಹೀಲ್ ಚೇರ್ ಸ್ಪರ್ಧೆ:
    ಪುರುಷರ ವ್ಹೀಲ್ ಚೇರ್ ಸ್ಪರ್ಧೆಯಲ್ಲಿ ಒಟ್ಟು 4 ಸ್ಪರ್ಧಿಗಳು ಭಾಗವಹಿಸಿದ್ದು, ಗೊಂಡಬಾಳದ ಗಣೇಶ ಬಂಡಿವಡ್ಡರ ಪ್ರಥಮ, ವಡ್ಡರಹಟ್ಟಿಯ ಅಶೋಕ ಡಂಬರ್ ದ್ವಿತೀಯ, ವಡ್ಡರಹಟ್ಟಿ ಯಲ್ಲಪ್ಪ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

    ಸ್ಲೋ ಸೈಕಲ್ ರೈಸ್ ಸ್ಪರ್ಧೆ:
    ಸ್ಲೋ ಸೈಕಲ್ ರೇಸ್ ಸ್ಪರ್ಧೆಯಲ್ಲಿ ಒಟ್ಟು ಈ ಸ್ಪರ್ಧೆಯಲ್ಲಿ 29 ಸ್ಪರ್ಧಾಳುಗಳು ಭಾಗವಹಿಸಿದ್ದು, 3 ವಿಭಾಗಗಳಾಗಿ ವಿಂಗಡನೆ ಮಾಡಲಾಗಿದೆ. 1 ಗುಂಪಿಗೆ 10 ರಂತೆ ಸ್ಲೋ ಸೈಕಲ್ ರೈಸ್ ಮಾಡಿಸಲಾಗಿತ್ತು. ಇದರಲ್ಲಿ ಪ್ರಥಮ ಸ್ಥಾನ ವೆಂಕಟೇಶಬಾಬು (ಆನೆಗೊಂದಿ), ದ್ವಿತೀಯ ಬೋಗಪ್ಪ (ಗಂಗಾವತಿ), ತೃತೀಯ ವಿರನಗೌಡ ಕುಲಕರ್ಣಿ ಹಾರಳ ಸ್ಥಾನ ಪಡೆದಿದ್ದಾರೆ.

    ಸಂಗ್ರಹಣೆ ಕಲ್ಲು ಎತ್ತುವ ಸ್ಪರ್ಧೆ:
    ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಒಟ್ಟು 22 ಪುರುಷರ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿರುವ ಸಂಗ್ರಾಣಿ ಕಲ್ಲಿನ ತೂಕ 55, 57, 62, 65, 70, 72, 74, 77, 78, 80 ಕೆಜಿ ಭಾರವನ್ನು ಹೊಂದಿದ್ದವು. ಪ್ರಥಮ ಸ್ಥಾನ ಪಡೆದ ಹಾಲಪ್ಪ (ಕುಷ್ಟಗಿ) 77 ಕೆ.ಜಿ ತೂಕದ ಸಂಗ್ರಾಣಿ ಕಲ್ಲು ಎತ್ತಿದ್ದರೆ. ದ್ವಿತೀಯ ಸ್ಥಾನ ಪಡೆದ ಹನುಮಂತ ತುರುವಿಹಾಳ 74 ಕೆ.ಜಿ, ತೃತೀಯ ಸ್ಥಾನ ಪಡೆದ ಸೋಮನಾಥ (ಕುಷ್ಟಗಿ) 72 ಕೆ.ಜಿ ಸಂಗ್ರಾಣಿ ಕಲ್ಲು ಎತ್ತಿದ್ದಾರೆ.

    ಕಲ್ಲು ಎತ್ತುವ ಸ್ಪರ್ಧೆ:
    ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಒಟ್ಟು 11 ಸ್ಪರ್ಧಿಗಳು ಭಾಗವಹಿಸಿದ್ದರು. ಇದರಲ್ಲಿ 100 ಮತ್ತು 120 ಕೆಜಿ ಕಲ್ಲುಗಳನ್ನು ಇರಿಸಲಾಗಿತ್ತು. ಇದರಲ್ಲಿ ಪ್ರಥಮ ಸ್ಥಾನ ಪ್ರಭು ಸುಭಾಷ್ ಚಂದ್ರ ಜವಳಗೇರಾ, ದ್ವಿತೀಯ ಸ್ಥಾನ ಆಯಾನಿ ಮುದಕಪ್ಪ ಅರಳಹಳ್ಳಿ, ತೃತೀಯ ಸ್ಥಾನ ಎ. ಮಾರುತಿ ಕಂಪ್ಲಿ ಅವರು ಪಡೆದಿದ್ದಾರೆ.

  • ಆನೆಗೊಂದಿ ಉತ್ಸವ: ಆಕರ್ಷಕ ಸ್ಥಿರ, ಹಗ್ಗದ ಮಲ್ಲಕಂಬ ಪ್ರದರ್ಶನ

    ಆನೆಗೊಂದಿ ಉತ್ಸವ: ಆಕರ್ಷಕ ಸ್ಥಿರ, ಹಗ್ಗದ ಮಲ್ಲಕಂಬ ಪ್ರದರ್ಶನ

    ಕೊಪ್ಪಳ: ಆನೆಗೊಂದಿ ಉತ್ಸವದ ನಿಮಿತ್ತ ಲಕ್ಷ್ಮೇಶ್ವರದ ಕರ್ನಾಟಕ ಅಮೆಚೂರ್ ಮಲ್ಲಕಂಬ ಸಂಸ್ಥೆಯ ವತಿಯಿಂದ ಮಂಗಳವಾರ ಆಕರ್ಷಕ ಮಲ್ಲಕಂಬ ಪ್ರದರ್ಶನ ನಡೆಯಿತು.

    ಆನೆಗೊಂದಿ ಉತ್ಸವವು ಇದೇ ಜನವರಿ 09 ಮತ್ತು 10ರಂದು ನಡೆಯಲಿದ್ದು, ಉತ್ಸವದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೈಕ್ ಸ್ಟಂಟ್, ಗಾಳಿಪಟ ಉತ್ಸವ, ಕಬಡ್ಡಿ, ವಾಲಿಬಾಲ್, ಸೈಕಲ್ ಜಾಥಾ, ಹಗ್ಗ-ಜಗ್ಗಾಟ, ಕೆಸರು ಗದ್ದೆ ಓಟ ಸೇರಿದಂತೆ ಹಲವು ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಂಗಳವಾರ ಮಲ್ಲಗಂಬ, ಸ್ಲೋ ಸೈಕಲ್ ರೇಸ್ ಸ್ಪರ್ಧೆ ನಡೆಯಿತು.

    ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವದ ನಿಮಿತ್ತ ಹಮ್ಮಿಕೊಳ್ಳಲಾದ ಮಲ್ಲಕಂಬ ಪ್ರದರ್ಶನಕ್ಕೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಂಜನಾದೇವಿ ಅವರು ಚಾಲನೆ ನೀಡಿದರು. ತುಳಸಗಿ, ಬಾಗಲಕೋಟೆ, ಕಲದಗಿ, ರಾಮಗಿರಿ ಊರುಗಳನ್ನೊಳಗೊಂಡ ಲಕ್ಷ್ಮೇಶ್ವರದ ಕರ್ನಾಟಕ ಅಮೆಚೂರ್ ಮಲ್ಲಕಂಬ ಸಂಸ್ಥೆಯ ವಿದ್ಯಾರ್ಥಿಗಳು ಮಲ್ಲಗಂಬ ಪ್ರದರ್ಶನ ನೀಡಿದರು.

    ಹಗ್ಗದ ಮಲ್ಲಕಂಬ ಪ್ರದರ್ಶನದಲ್ಲಿ 37 ಜನ ಬಾಲಕಿಯರು ಹಾಗೂ ಸ್ಥಿರ ಮಲ್ಲಕಂಬ ಪ್ರದರ್ಶನದಲ್ಲಿ 36 ಜನ ಬಾಲಕರು ಪಾಲ್ಗೊಂಡಿದ್ದರು. ಯೋಗ ಸೇರಿದಂತೆ ವಿಭಿನ್ನ ರೀತಿಯಲ್ಲಿ ವ್ಯಾಯಾಮಗಳನ್ನು ಮಾಡುವುದರ ಮೂಲಕ ಸಾರ್ವಜನಿಕರ ಮನ ಸೆಳೆದರು.

    ಸ್ಲೋ ಸೈಕಲ್ ರೇಸ್:
    ಆನೆಗೊಂದಿಯ ಶ್ರೀ ಕೃಷ್ಣದೇವರಾಯ ವೇದಿಕೆ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ಸ್ಲೋ ಸೈಕಲ್ ರೇಸ್ ಪಂದ್ಯಕ್ಕೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಂಜನಾದೇವಿ ಚಾಲನೆ ನೀಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಆನೆಗೊಂದಿ ಉತ್ಸವ ಕ್ರೀಡಾ ಸಮಿತಿ ಅಧ್ಯಕ್ಷ ಆರ್.ಜಿ ನಾಡಗೀರ, ಜಿಲ್ಲೆಯ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಗಂಗಾವತಿ ತಹಶೀಲ್ದಾರ್ ಎಲ್.ಡಿ ಚಂದ್ರಕಾಂತ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೋಹನ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಚಂದ್ರಶೇಖರ ರಾಥೋಡ್, ಕರ್ನಾಟಕ ಅಮೆಚರ್ ಮಲ್ಲಕಂಬ, ಲಕ್ಷೆಮ್ಮೆಶ್ವರ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಫ್. ಕೊಡ್ಲಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಮನೆ ಮನೆಗೆ ತೆರಳಿ ಅರಿಶಿನ, ಕುಂಕಮ ಕೊಟ್ಟು ಆನೆಗುಂದಿ ಉತ್ಸವಕ್ಕೆ ಆಹ್ವಾನಿಸಿದ ಡಿಸಿ

    ಮನೆ ಮನೆಗೆ ತೆರಳಿ ಅರಿಶಿನ, ಕುಂಕಮ ಕೊಟ್ಟು ಆನೆಗುಂದಿ ಉತ್ಸವಕ್ಕೆ ಆಹ್ವಾನಿಸಿದ ಡಿಸಿ

    – ಜಿಲ್ಲಾಡಳಿತದ ಕೆಲಸಕ್ಕೆ ಸಾಥ್ ಕೊಟ್ಟ ಶ್ರೀ ಕೃಷ್ಣದೇವರಾಯ ವಂಶಸ್ಥರು

    ಕೊಪ್ಪಳ: ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ದಿನೆ ದಿನೇ ಹೊಸ ಹೊಸ ಕಾರ್ಯಕ್ರಮಗಳು ಮತ್ತು ಕ್ರೀಡೆಗಳನ್ನು ನಡೆಸುತ್ತಿದೆ.

    ಇಂದು ಸಹ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಮತ್ತು ಜಿಲ್ಲಾಡಳಿತ ಆನೆಗುಂದಿಯಲ್ಲಿ ನೆಲೆಸಿರುವ ವಿಜಯನಗರ ಸಾಮ್ರಾಜ್ಯದ ಶ್ರೀ ಕೃಷ್ಣದೇವರಾಯ ವಂಶಸ್ಥರ ಮನೆಗೆ ತೆರಳಿ ಆನೆಗುಂದಿ ಉತ್ಸವಕ್ಕೆ ಹಣ್ಣು ಹಂಪಲು ಜೊತೆಗೆ ತಾಂಬೂಲವನ್ನು ನೀಡಿದರು. ಸಾಂಪ್ರದಾಯಿಕವಾಗಿ ಮೆರವಣಿಗೆ ಮೂಲಕ ಮನೆ ಮನೆಗೆ ತೆರಳಿ ಉತ್ಸವಕ್ಕೆ ಆಹ್ವಾನವನ್ನು ನೀಡಿದರು. ಅಷ್ಟೆ ಅಲ್ಲದೆ ಆನೆಗುಂದಿಯಲ್ಲಿ ನೆಲಸಿರುವ ಪ್ರತಿಯೊಬ್ಬರ ಮನೆಗೆ ತೆರಳಿ ಅರಿಶಿನ, ಕುಂಕಮ, ಎಲೆ-ಅಡಿಕೆ ನೀಡಿ ಆಹ್ವಾನಿಸಿದ್ದು ವಿಶೇಷವಾಗಿತ್ತು.

    ಅಷ್ಟೇ ಅಲ್ಲದೆ ಆನೆಗುಂದಿ ಉತ್ಸವದ ಹಿನ್ನೆಲೆ ವಿಶೇಷ ಚೇತನರಿಗಾಗಿ ಕಬಡ್ಡಿ ಸ್ಪರ್ಧೆಯನ್ನು ಇಂದು ಆಯೋಜಿಸಲಾಗಿತ್ತು. ನಾನಾ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಹುಮ್ಮಸ್ಸಿನಿಂದಾನೆ ಕಬಡ್ಡಿಯನ್ನು ಆಡಿದರು. ನಂತರ ಮಹಿಳಾ ವಾಲಿಬಾಲ್ ಪಂದ್ಯಾವಳಿಯನ್ನು ಆನೆಗುಂದಿಯಲ್ಲಿ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನಿಂದ ಬಂದಿದ್ದ ತಂಡದ ಜೋತೆಗೆ ಸ್ಥಳೀಯ ಗ್ರಾಮೀಣ ಭಾಗದ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.

    ಈ ಸ್ಪರ್ಧೆಗಳಿಗೂ ಮುನ್ನ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟನೆ ಮಾಡಿದ ಜಿಲ್ಲಾಧಿಕಾರಿಗಳು ಕ್ರೀಡಾಪಟುಗಳ ಜೊತೆ ಒಂದು ಪಂದ್ಯವನ್ನು ಸಹ ಆಡಿದ್ದರು. ಜಿಲ್ಲಾಧಿಕಾರಿಗಳ ಜೊತೆಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು ಹಾಗೂ ಸಿಇಒ ಮತ್ತು ತಾಲೂಕು ಪಂಚಾಯ್ತಿ ಅಧಿಕಾರಿ, ತಹಶೀಲ್ದಾರ್ ಸೇರಿ ವಾಲಿಬಾಲ್ ಪಂದ್ಯವಳಿಯನ್ನು ಆಡಿದ್ದು ಕ್ರೀಡಾಸ್ಪೂರ್ತಿಗೆ ಸಾಕ್ಷಿಯಾಯಿತು.