Tag: anekal

  • ರೇವ್ ಪಾರ್ಟಿ ಜಾಗದಲ್ಲಿ ಗೋಶಾಲೆ ನಿರ್ಮಾಣ – ಮಾಲೀಕರಿಗಾಗಿ ಪೊಲೀಸರ ಹುಡುಕಾಟ

    ರೇವ್ ಪಾರ್ಟಿ ಜಾಗದಲ್ಲಿ ಗೋಶಾಲೆ ನಿರ್ಮಾಣ – ಮಾಲೀಕರಿಗಾಗಿ ಪೊಲೀಸರ ಹುಡುಕಾಟ

    – ಸ್ಥಳಕ್ಕೆ ಭೇಟಿ ನೀಡಿದ ಎಸ್‍ಪಿ ವಂಶಿಕೃಷ್ಣ

    ಆನೇಕಲ್: ಕಳೆದ ಶನಿವಾರ ಆನೇಕಲ್ ತಾಲೂಕಿನ ತಮ್ಮನಾಯಕನಹಳ್ಳಿಯ ಹಸಿರು ವ್ಯಾಲಿ ರೆಸಾರ್ಟ್ ನಲ್ಲಿ ಅಕ್ರಮವಾಗಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಗ್ರಾಮಾಂತರ ಎಸ್‍ಪಿ ವಂಶಿಕೃಷ್ಣ ಹಸಿರು ವ್ಯಾಲಿ ರೆಸಾರ್ಟ್ ಗೆ ಭೇಟಿ ಕೊಟ್ಟಿದ್ದಾರೆ.

    ಪಾರ್ಟಿ ನಡೆದಿದ್ದ ಜಾಗದಲ್ಲಿ ರಾತ್ರೋರಾತ್ರಿ ಗೋಶಾಲೆ ನಿರ್ಮಾಣವಾಗಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆದಿದ್ಯಾ? ಎಂಬ ಅನುಮಾನ ವ್ಯಕ್ತವಾಗಿದೆ. ನಿನ್ನೆ ಪಾರ್ಟಿ ನಡೆದ ಸುತ್ತಮುತ್ತಲ ಜಾಗದಲ್ಲಿದ್ದ ಟೆಂಟ್ ಹೌಸ್, ಊಟದ ಟೇಬಲ್‍ಗಳು ಇಂದು ಮಾಯವಾಗಿದ್ದವು. ಇದನ್ನೂ ಓದಿ:  ವಿಸರ್ಜನೆ ಸಂಬಂಧ ಜಿಲ್ಲಾಡಳಿತ, ಗಣಪತಿ ಮಂಡಳಿ ನಡುವೆ ಜಟಾಪಟಿ

    ಬಿದಿರಿನ ಒಳಭಾಗದಲ್ಲಿ ಪಾರ್ಟಿ ನಡೆದಿದ್ದ ಜಾಗ ಸಂಪೂರ್ಣ ಸ್ವಚ್ಛವಾಗಿತ್ತು. ಹೀಗಾಗಿ ಪಾರ್ಟಿ ವೇಳೆ ಅನೈತಿಕ ಚಟುವಟಿಕೆಗಳು ನಡೆದಿದ್ಯಾ? ಎಂಬ ಅನುಮಾನ ಪೊಲೀಸರಿಗೆ ಕಾಡತೊಡಗಿದೆ. ಅಲ್ಲದೇ ಪಾರ್ಟಿ ವೇಳೆ ವಶಕ್ಕೆ ಪಡೆದಿರುವ 37 ಜನರನ್ನು ಮಾಜಿಸ್ಟ್ರೆಟ್ ಮುಂದೆ ಹಾಜರುಪಡಿಸಿದ್ದು, ಅವರ ರಕ್ತ ಹಾಗೂ ಮೂತ್ರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಅಲ್ಲದೇ ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ವಂಶಿಕೃಷ್ಣ ತಿಳಿಸಿದ್ದಾರೆ.

    ಅಕ್ರಮ ರೇವ್ ಪಾರ್ಟಿ ಆಯೋಜನೆ ಮಾಡಿದ್ದ ಆಶಿಶ್ ಗೌಡ ಹಾಗೂ ಅಶುತೋಶ್ ಉಗ್ರ ಎಂಬುವವರನ್ನು ತಮ್ಮ ವಶಕ್ಕೆ ಪಡೆದಿರುವ ಆನೇಕಲ್ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೆಸಾರ್ಟ್ ಮಾಲೀಕ ನಾಪತ್ತೆಯಾಗಿದ್ದು ಆತನ ಪತ್ತೆಗಾಗಿ ಬಲೆ ಬೀಸಲಾಗಿದೆ. ಇದನ್ನೂ ಓದಿ:  ಪ್ರಚಾರದ ಹುಚ್ಚಿಗೆ ಬಿದ್ದು ಯಡವಟ್ಟು ಮಾಡಿಕೊಂಡ್ವಿ -ಪೊಲೀಸರ ಮುಂದೆ ಕಣ್ಣೀರಿಟ್ಟ ಯುವಕರು

    ಪಾರ್ಟಿ ಆಯೋಜನೆ ಮಾಡಿದ್ದು ಹೇಗೆ? ಯುವಕ-ಯುವತಿಯರನ್ನು ಹೇಗೆ ಸಂಪರ್ಕ ಮಾಡಿದ್ದಿರಾ? ಪಾರ್ಟಿಗೆ ಒಬ್ಬರಿಗೆ ಎಷ್ಟು ಶುಲ್ಕ ನಿಗದಿ ಮಾಡಿದ್ರಿ? ಇದೇ ಮೊದಲ ಪಾರ್ಟಿಯಾ? ಈ ಹಿಂದೆ ಬೇರೆ ಎಲ್ಲಾದರೂ ಇದೇ ರೀತಿಯ ಪಾರ್ಟಿ ಆಯೋಜನೆ ಮಾಡಿದ್ದಿರಾ? ಎಂಬ ಪ್ರಶ್ನೆಗಳನ್ನು ಆಯೋಜಕರನ್ನು ಕೇಳಲಾಗುತ್ತಿದೆ. ಈ ನಡುವೆ ಹಸಿರು ವ್ಯಾಲಿ ರೆಸಾರ್ಟ್ ನಡೆಸಲು ಅನುಮತಿ ಇದೆಯೇ? ಇಲ್ಲ ಅಕ್ರಮವಾಗಿ ಹಸಿರು ವ್ಯಾಲಿ ರೆಸಾರ್ಟ್ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ಮಾಹಿತಿಗಾಗಿ ಆನೇಕಲ್ ತಹಶೀಲ್ದಾರ್ ಅವರಿಗೆ ಪತ್ರವನ್ನು ಬರೆದಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ.

    ಪಾರ್ಟಿ ನಡೆದು ಆರೋಪಿಗಳನ್ನು ಬಂಧಿಸಿದ ಎರಡು ದಿನಗಳ ಬಳಿಕ ಬೆಂಗಳೂರು ಗ್ರಾಮಾಂತರ ಎಸ್‍ಪಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಸಿರು ವ್ಯಾಲಿ ರೆಸಾರ್ಟ್ ಸಿಬ್ಬಂದಿಯ ಕಳ್ಳಾಟವೂ ಕೂಡ ಬಯಲಾಗಿದ್ದು, ಹೆಸರಾಂತ ಪ್ರವಾಸಿತಾಣ ಮುತ್ಯಾಲಮಡುವಿಗೆ ಹೋಗುವ ಗೂಗಲ್ ಮ್ಯಾಪ್ ಅನ್ನು ಹಸಿರು ವ್ಯಾಲಿಗೆ ಬದಲಾವಣೆ ಮಾಡುವ ಮೂಲಕ ತಮ್ಮ ಕಳ್ಳಾಟವನ್ನು ತೋರಿದ್ದಾರೆ. ಇದನ್ನೂ ಓದಿ:  ಕೊನೆಗೂ ತನ್ನ ಆಸೆ ನೆರವೇರಿಸಿಕೊಂಡ ವಿಜಯ್ ದೇವರಕೊಂಡ

  • ಆನೇಕಲ್ ರೇವ್ ಪಾರ್ಟಿ ಪ್ರಕರಣ- 35 ಜನರ ಬಂಧನ

    ಆನೇಕಲ್ ರೇವ್ ಪಾರ್ಟಿ ಪ್ರಕರಣ- 35 ಜನರ ಬಂಧನ

    – ಕಾಡಿನಲ್ಲೇ ಅವಿತಿದ್ದ 30ಕ್ಕೂ ಹೆಚ್ಚು ಜನ

    ಬೆಂಗಳೂರು: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬರೋಬ್ಬರಿ 35 ಜನರನ್ನು ಬಂಧಿಸಿದ್ದಾರೆ.

    ನಗರದ ಹೊರವಲಯದ ಆನೇಕಲ್ ಬಳಿ ನಡೆದ ರೇವ್ ಪಾರ್ಟಿ ಬಗ್ಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ತಪ್ಪಿಸಿಕೊಳ್ಳುತ್ತಿದ್ದ ಯುವಕರನ್ನು ಅಟ್ಟಾಡಿಸಿ ಹಿಡಿದಿದ್ದಾರೆ. ಬರೋಬ್ಬರಿ 35 ಜನರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ ಪೊಲೀಸರು ಪಾರ್ಟಿ ನಡೆಯುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಯುತ್ತಿದ್ದಂತೆ ಇವರೆಲ್ಲರೂ ಕಾಡಿನಲ್ಲಿಯೇ ಅವಿತಿದ್ದರು. ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬಹುತೇಕರನ್ನು ಹೆಡೆಮುರಿ ಕಟ್ಟಿದ್ದಾರೆ.

    ಆಶಿಸ್ ಗೌಡ ಪ್ರಕರಣದ ಕಿಂಗ್ ಪಿನ್ ಆಗಿದ್ದು, ಸರ್ವೇಶ್ ಕುಮಾರ್ ಅಲಿಯಾಸ್ ಉಗ್ರ ಪಾರ್ಟಿಯ ಪ್ರಮುಖ ಆಯೋಜಕನಾಗಿದ್ದಾನೆ. ಸರ್ವೇಶ್ ಕುಮಾರ್ ಪಾರ್ಟಿ ಆಯೋಜನೆ ಮಾಡುತ್ತಿದ್ದ. ಸರ್ವೇಶ್ ಅಣತಿಯಂತೆ ಆಶಿಸ್ ಗೌಡ ಪಾರ್ಟಿಗೆ ಜನರನ್ನು ಕರೆತರುತ್ತಿದ್ದ. ಇದೀಗ ಇವರಿಬ್ಬರು ಸೇರಿದಂತೆ ಒಟ್ಟು 35 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ರೇವ್ ಪಾರ್ಟಿ- ಆ್ಯಪ್‍ನಲ್ಲಿ ಬುಕ್ಕಿಂಗ್ , ಇಬ್ಬರು ಅರೆಸ್ಟ್, 30 ಜನ ವಶಕ್ಕೆ

    ಇದರಲ್ಲಿ ಬಹುತೇಕರು ಕೇರಳ ಮೂಲದವರು. ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರು ಎಂದು ತಿಳಿದು ಬಂದಿದೆ. 30ಕ್ಕೂ ಹೆಚ್ಚು ಜನ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರು ದಾಳಿ ಮಾಡುತ್ತಿದ್ದಂತೆ ಬಹುತೇಕ ಜನ ತಪ್ಪಿಸಿಕೊಂಡಿದ್ದರು. ಅಲ್ಲರಿಗೂ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಬ್ಲಡ್, ಯೂರಿನ್ ಹಾಗೂ ಹೇರ್ ಫಾಲಿಕಲ್ ಟೆಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರೆಸ್ಟ್ ಆದವರಲ್ಲಿ ಬಹುತೇಕರು ಕೇರಳದವರು ಎನ್ನಲಾಗಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

    ಪೊಲೀಸರು ಈಗಾಗಲೇ ಯುವಕ, ಯುವತಿಯರ 6 ಕಾರು ಸೇರಿದಂತೆ 15ಕ್ಕೂ ಹೆಚ್ಚು ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ನ ನಿರ್ಜನ ಪ್ರದೇಶದಲ್ಲಿ ರೇವ್ ಪಾರ್ಟಿ ನಡೆಸಿ, ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ ಹುಚ್ಚೆದ್ದು ಕುಣಿದಿದ್ದಾರೆ. ಅರ್ಧಂಬಂರ್ಧ ಬಟ್ಟೆ ಹಾಕಿದ್ದ ಯುವಕ, ಯುವತಿಯರು ಡ್ರಗ್ಸ್ ನಶೆಯಲ್ಲಿ ತೇಲಿದ್ದರು. ಇದೀಗ ಪೊಲೀಸರು ಎಲ್ಲರ ಹೆಡೆಮುರಿ ಕಟ್ಟಿದ್ದಾರೆ.

  • ರೇವ್ ಪಾರ್ಟಿ- ಆ್ಯಪ್‍ನಲ್ಲಿ ಬುಕ್ಕಿಂಗ್ , ಇಬ್ಬರು ಅರೆಸ್ಟ್, 30 ಜನ ವಶಕ್ಕೆ

    ರೇವ್ ಪಾರ್ಟಿ- ಆ್ಯಪ್‍ನಲ್ಲಿ ಬುಕ್ಕಿಂಗ್ , ಇಬ್ಬರು ಅರೆಸ್ಟ್, 30 ಜನ ವಶಕ್ಕೆ

    – ಪೊಲೀಸ್ ದಾಳಿಗೆ ಹೆದರಿ ಕಾಡಿನಲ್ಲೇ ಅವಿತ 30ಕ್ಕೂ ಹೆಚ್ಚು ಜನ
    – ಬಂಧಿತರಿಗೆ ಮೆಡಿಕಲ್, ಹೇರ್ ಫಾಲಿಕಲ್ ಟೆಸ್ಟ್

    ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯದ ಆನೇಕಲ್ ಬಳಿ ನಡೆದ ರೇವ್ ಪಾರ್ಟಿ ಬಗ್ಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಗಲೇ ಇಬ್ಬರನ್ನು ಬಂಧಿಸಿದ್ದಾರೆ. 30 ಜನರನ್ನು ವಶಕ್ಕೆ ಪಡೆದಿದ್ದಾರೆ. ಇವರೆಲ್ಲರೂ ರೆಸಾರ್ಟ್ ಪಕ್ಕದ ಕಾಡಿನಲ್ಲೇ ಉಳಿದುಕೊಂಡಿದ್ದರು. ಇದರಲ್ಲಿ ಬಹುತೇಕರು ಕೇರಳ ಮೂಲದವರು. ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರು ಎಂದು ತಿಳಿದು ಬಂದಿದೆ.

    30ಕ್ಕೂ ಹೆಚ್ಚು ಜನ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರು ದಾಳಿ ರೇಡ್ ಮಾಡುತ್ತಿದ್ದಂತೆ ಬಹುತೇಕ ಜನ ತಪ್ಪಿಸಿಕೊಂಡಿದ್ದಾರೆ. ರೇಡ್ ವೇಳೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ 30 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಬ್ಲಡ್, ಯೂರಿನ್ ಹಾಗೂ ಹೇರ್ ಫಾಲಿಕಲ್ ಟೆಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

    ಹಿಮಾಚಲ ಪ್ರದೇಶ ಮೂಲದ ಉಗ್ರ ಆ್ಯಪ್ ಕ್ರಿಯೇಟ್ ಮಾಡಿ ಬುಕ್ ಮಾಡಿಸಿಕೊಳ್ಳುತ್ತಿದ್ದ. ಬೆಂಗಳೂರಿನ ಅಭಿಲಾಷ್ ಎಂಬಾತ ಪಾರ್ಟಿ ಆಯೋಜನೆ ಮಾಡುತ್ತಿದ್ದ. ಹೈ.ಏಪ್ ಡಾಟ್ ಕಾಮ್ ಆ್ಯಪ್ ಮೂಲಕ ಬುಕ್ ಮಾಡಿ, ಯುವಕ, ಯುವತಿಯರು ಬಂದಿದ್ದರು. ಅಲ್ಲದೆ ಐಸಿಕೆ ಲುಕ್ ಎನ್ನುವ ಆ್ಯಪ್ ಬಳಸಿ ಮಾಡೆಲ್ ಹಾಗೂ ಡಿಜೆಗಳನ್ನು  ಬುಕ್ ಮಾಡಲಾಗುತ್ತಿತ್ತು.

    ಅದೇ ರೀತಿ ನಿನ್ನೆ ರಾತ್ರಿ 8 ಗಂಟೆಗೆ ಪಾರ್ಟಿ ಪ್ರಾರಂಭವಾಗಿತ್ತು. ಆಯೋಜಕ ತಡರಾತ್ರಿ ಡಿಜೆ ಪ್ರಾರಂಭಮಾಡಿದ್ದ. ಈ ಪಾರ್ಟಿಗೆ ಗೋವಾ ಮೂಲದ ಡಿಜೆ ಬರಬೇಕಿತ್ತು. ತಡರಾತ್ರಿ ಪಾರ್ಟಿಗೆ ಬರಲು ಮಾತುಕತೆ ನಡೆದಿತ್ತು. ಕೊನೆ ಹಂತದಲ್ಲಿ ಆಯೋಜಕರಿಗೆ ಹಾಗೂ ಮಹಿಳೆಗೆ ಕಿರಿಕ್ ಆಗಿತ್ತು ಎನ್ನುವ ಮಾಹಿತಿ ಇದೆ. ಜಂಗಲ್ ಕ್ವೀನ್ ಎಂಬ ಮಾಡೆಲ್ ಪಾರ್ಟಿಗೆ ಬರಬೇಕಿತ್ತು. ಕೊನೆಗೆ ಈಕೆಯೇ ಪಾರ್ಟಿ ನಡೆಯುತ್ತಿರುವುದನ್ನು ಲೀಕ್ ಮಾಡಿರುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?

    ಈ ಆಪ್ ಮೂಲಕ ಬುಕ್ ಮಾಡಿ ಪಾರ್ಟಿಗೆ ಬಂದಿದ್ದರು. ನಿಷೇಧಿತ ಪ್ರದೇಶದಲ್ಲಿ ಪಾರ್ಟಿ ನಡೆಯುತ್ತಿತ್ತು. ವೀಕೆಂಡ್ ಮಸ್ತಿಗೆ ಈ ಪ್ರದೇಶ ಹೇಳಿಮಾಡಿಸಿದಂತಿತ್ತು. ಕಾಡಿನ ಮಧ್ಯದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಕಾಡಿನ ಮಧ್ಯದಲ್ಲಿ ಸುತ್ತಮುತ್ತ ಬಿದಿರು ಬೆಳೆದಿದ್ದು, ರೆಸಾರ್ಟ್ ಸುತ್ತಮುತ್ತ ಯಾರು ಬಂದರು ಗೊತ್ತಾಗಲ್ಲ. ಕಳೆದ ರಾತ್ರಿ ಸಹ ಬಿದಿರಿನ ಮಧ್ಯದಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು.

    ಪಾರ್ಟಿ ಆಯೋಜನೆ ಮಾಡಿದ ಜಾಗದಲ್ಲಿ ಮದ್ಯದ ಬಾಟಲಿಗಳು, ಬಟ್ಟೆಗಳು ಪತ್ತೆಯಾಗಿವೆ. ರೆಸಾರ್ಟ್ ಗೆ ಯಾವುದೇ ಅನುಮತಿ ಇರಲಿಲ್ಲ. ಇಂತಹ ಜಾಗದಲ್ಲಿ ಹಸಿರು ವ್ಯಾಲಿ ಮಾಲೀಕ ಪಾರ್ಟಿಗೆ ಅವಕಾಶ ನೀಡಿದ್ದ. ಪಾರ್ಟಿ ಆಯೋಜನೆ ಮಾಡಲು ಹಿಮಾಚಲ ಪ್ರದೇಶ ಮೂಲದ ಉಗ್ರ ಎಂಬಾತನಿಗೆ ನೇತೃತ್ವ ನೀಡಲಾಗಿತ್ತು. ಪಾರ್ಟಿಗೆ ಬಂದಿದ್ದವರು ಬಹುತೇಕ ಕೇರಳ ಹಾಗೂ ಕರ್ನಾಟಕ ಮೂಲದವರು. ನಿಷೇಧಿತ ಪ್ರದೇಶ ಬನ್ನೇರುಘಟ್ಟ ಕಾಡಂಚಿನಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ. ಪೊಲೀಸರು ರೈಡ್ ಮಾಡುವಾಗ ಡಿಜೆ ಹಾಕಿ ಕುಣಿದು ಕುಪ್ಪಳಿಸುತ್ತಿದ್ದರು. ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ, ಯುವತಿಯರು, ವಾಹನಗಳು, ಡಿಜೆಗೆ ಬಳಸಿದ್ದ ಸೌಂಡ್ ಸಿಸ್ಟಮ್ ವಶಕ್ಕೆ ಪಡೆಯಲಾಗಿದೆ. ಮೂವತ್ತಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.


    ರಾತ್ರಿ ಪೊಲೀಸರು ದಾಳಿ ಮಾಡಿದ ವೇಳೆ ತಪ್ಪಿಸಿಕೊಂಡು ರೆಸಾರ್ಟ್ ಪಕ್ಕದ ಕಾಡಿನಲ್ಲೇ 30ಕ್ಕೂ ಹೆಚ್ಚು ಜನ ಉಳಿದಿದ್ದರು. ಆನೇಕಲ್ ಪೊಲೀಸರು ಬೆಳಗ್ಗೆ ಕಾರ್ಯಾಚರಣೆಗಿಳಿದಾಗ ಯುವಕರು ಗುಡ್ಡ ಹಾಗೂ ಕಾಡಿನಲ್ಲಿ ನಡೆದು ಬರುತ್ತಿದ್ದರು. ಬಹುತೇಕ ಯುವಕರು ಬೆಂಗಳೂರಿನ ಖಾಸಗಿ ಕಂಪನಿ ಹಾಗೂ ಕಾಲೇಜು ವಿದ್ಯಾರ್ಥಿಗಳು ಎಂಬ ಮಾಹಿತಿ ಲಭ್ಯವಾಗಿದೆ.

  • ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

    ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

    – ವಿದ್ಯಾರ್ಥಿಗಳು ಸೇರಿ 20 ಜನ ವಶಕ್ಕೆ

    ಬೆಂಗಳೂರು: ನಗರದ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆದಿರುವುದು ಮತ್ತೆ ಬೆಳಕಿಗೆ ಬಂದಿದ್ದು, ಒಟ್ಟು 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ರೆಸಾರ್ಟ್‍ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಖಾಕಿ ಪಡೆ ಹಿಡಿದಿದೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ನಗರದ ಹೊರ ವಲಯದ ಆನೇಕಲ್ ಬಳಿಯ ತಮ್ಮನಾಯಕನಹಳ್ಳಿ ಸಮೀಪವಿರುವ ಹಸಿರು ವ್ಯಾಲ್ಯೂ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಎಗ್ಗಿಲದೇ ನಡೆಯುತ್ತಿದ್ದು, ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ, ತುಂಡುಡುಗೆ ತೊಟ್ಟು ಮಹಿಳೆಯರು ಹುಚ್ಚೆದ್ದು ಕುಣಿದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆನೇಕಲ್ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ. 6 ಕಾರು ಸೇರಿದಂತೆ 15ಕ್ಕೂ ಹೆಚ್ಚು ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಉತ್ತಮ ಪ್ರತಿಕ್ರಿಯೆ – ಎರಡನೇ ದಿನದ ಕಾರ್ಯಕ್ರಮಗಳು ಏನು?

    ರೆಸಾರ್ಟ್ ನ ನಿರ್ಜನ ಪ್ರದೇಶದಲ್ಲಿ ಹುಡುಗ, ಹುಡಿಗಿಯರು ರೇವ್ ಪಾರ್ಟಿ ನಡೆಸಿದ್ದು, ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ ಹುಚ್ಚೆದ್ದು ಕುಣಿದಿದ್ದಾರೆ. ಅರ್ಧಂಬಂರ್ಧ ಬಟ್ಟೆ ಹಾಕಿರುವ ಯುವಕ, ಯುವತಿಯರು ಡ್ರಗ್ಸ್ ನಶೆಯಲ್ಲಿ ತೇಲಿದ್ದಾರೆ.

    ಮಧ್ಯ ರಾತ್ರಿ ನಡೆದ ಡ್ರಗ್ಸ್ ಪೆಡ್ಲರ್ ಗಳನ್ನು ಹಿಡಿಯೋ ಆಪರೇಷನ್ ಇದಾಗಿದ್ದು, ಪೊಲೀಸರು ರೆಸಾರ್ಟ್‍ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಖಾಕಿ ಪಡೆ ಹಿಡಿದು ಹಾಕಿದೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್ ಸೇವಿಸಿ ಅರೆನಗ್ನ ಸ್ಥಿತಿಯಲ್ಲಿ ಕುಣಿದಿದ್ದಲ್ಲದೆ ನಾವು ತಪ್ಪೇ ಮಾಡಿಲ್ಲ ಎಂದು ಪೋಸ್ ನೀಡಿದ್ದಾರೆ.

  • ಕುಡಿದ ಮತ್ತಿನಲ್ಲಿ ಮಚ್ಚಾ ಎಂದಿದ್ದಕ್ಕೆ ಜೋಡಿ ಕೊಲೆ – ಆರೋಪಿಗಳ ಬಂಧನ

    ಕುಡಿದ ಮತ್ತಿನಲ್ಲಿ ಮಚ್ಚಾ ಎಂದಿದ್ದಕ್ಕೆ ಜೋಡಿ ಕೊಲೆ – ಆರೋಪಿಗಳ ಬಂಧನ

    ಆನೇಕಲ್: ಇಡೀ ಆನೇಕಲ್ ಭಾಗವನ್ನೇ ಬೆಚ್ಚಿ ಬೀಳಿಸಿದ್ದ ನಿಗೂಢ ಜೋಡಿ ಕೊಲೆಯನ್ನು ಇದೀಗ ಹೆಬ್ಬಗೋಡಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮದ್ಯ ಸೇವಿಸಿದ ಮತ್ತಿನಲ್ಲಿ ಮಚ್ಚಾ ಎಂದಿದ್ದೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

    ಕಳೆದ ನಾಲ್ಕೈದು ದಿನಗಳ ಹಿಂದೆ ಸಿಂಗೇನ ಅಗ್ರಹಾರದ ನೀಲಗಿರಿ ತೋಪಿನ ಸಂಪಿಗೆ ನಗರದ ನಿವಾಸಿ ರವಿಕುಮಾರ್ ಹಾಗೂ ಕೋಲ್ಕತ್ತಾ ಮೂಲದ ಚಂದನ್ ದಾಸ್ ಕೊಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಈ ಘಟನೆ ತಾಲೂಕಿನಾದ್ಯಂತ ಸಂಚಲನ ಮೂಡಿಸಿತ್ತು. ಹೆಬ್ಬಗೋಡಿ ಸಿಐ ಗೌತಂ ತಂಡ ಕೊಲೆಗೂ ಮುನ್ನ ನಡೆದ ಘಟನಾವಳಿಗಳ ಹಿಂದೆ ಬಿದ್ದಿದ್ದಾರೆ. ಈ ಹಿನ್ನೆಲೆ ಶವಗಳ ನಡುವೆ ಇದ್ದ ಮದ್ಯದ ಬಾಟಲಿಗಳನ್ನು ಎಲ್ಲಿಂದ ತಂದಿದ್ದಾರೆ ಎಂದು ಹುಡುಕುತ್ತಾ ಹೋಗಿದ್ದಾರೆ. ಆಗ ಬಾರ್ ಕಂಡುಹಿಡಿದಿದ್ದು, ಆ ಮೂಲಕ ಸಿಸಿಟಿವಿಯನ್ನು ನೋಡಿ ಕೊಲೆಗಾರರ ಸುಳಿವನ್ನು ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಯ ಕೊಲೆ ಯತ್ನ ಪ್ರಕರಣ – ಪ್ರಮುಖ ಆರೋಪಿಯ ಬಂಧನ

    ನಡೆದಿದ್ದೇನು?
    ರವಿಕುಮಾರ್, ಚಂದನ್ ದಾಸ್ ಮತ್ತು ದಾರುಲ್ ಆಲಂ ಕುಡಿಯಲು ಆರಂಭಿಸಿದ್ದಾರೆ. ಈ ವೇಳೆ ಇನ್ನೂ ಎಣ್ಣೆ ಬೇಕು ಎಂದು ಅಬ್ಸುಲ್ ಕರೀಂ ಅವರನ್ನು ಮದ್ಯ ತರಲು ರವಿ ಬೈಕ್‍ನಲ್ಲಿ ಕಳುಹಿಸಿದ್ದಾರೆ. ಬಾರ್ ನಿಂದ ಎಣ್ಣೆ ತಂದ ಕರೀಂ, ರವಿಕುಮಾರ್ ಗೆ ‘ತಗೋ ಮಚ್ಚಾ’ ಎಂದಿದ್ದೇ ತಡ ಕರೀಂ ಮೇಲೆ ಹಿಗ್ಗಾಮುಗ್ಗ ರವಿಕುಮಾರ್ ಮುಗಿಬಿದ್ದು ಹೊಡೆದಿದ್ದಾರೆ. ಇರುವ ನಾಲ್ವರಲ್ಲಿ ದಾಸ್ ರವಿಗೆ ಸಾಥ್ ನೀಡಿದ್ರೆ, ಆಲಂ ಕರೀಂಗೆ ಸಾಥ್ ನೀಡಿ ರವಿ ಮತ್ತು ದಾಸ್ ನನ್ನು ಮುಗಿಸಿ ಕರೀಂ ಮತ್ತು ಆಲಂ ಪರಾರಿಯಾಗಿದ್ದಾರೆ. ಇದನ್ನೂ ಓದಿ:  ಬೆಂಗಳೂರಿನಲ್ಲಿ ಕೋಳಿ ಪಂದ್ಯ ಪ್ರಕರಣ – ಜೂಜಾಟಕ್ಕೆ ಬ್ರೇಕ್ ಹಾಕಲು ಪೊಲೀಸರ ಹಿಂದೇಟು

    ಈ ಹಿನ್ನೆಲೆ ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಬಂದಿದ್ದು, ಐಜಿಪಿ ಚಂದ್ರಶೇಖರ್, ಎಸ್ಪಿ ವಂಶಿಕೃಷ್ಣ, ಎಎಸ್ಪಿ ಲಕ್ಣ್ಮಿ ಗಣೇಶ್, ಡಿವೈಎಸ್ಪಿ ಮಲ್ಲೇಶ್ ಆದಿಯಾಗಿ ಎಲ್ಲ ಆನೇಕಲ್ ಉಪವಿಭಾಗದ ಇನ್ಸ್‍ಪೆಕ್ಟರ್ ಗಳ ದಂಡು ಈ ಕೊಲೆ ಪ್ರಕರಣ ಭೇದಿಸಲು ಇಳಿದಿತ್ತು. ಇದನ್ನೂ ಓದಿ: ಕರಿಯಮ್ಮದೇವಿಯ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಹೊತ್ತೊಯ್ದ ಖದೀಮರು

    ಅಸ್ಸಾಂನ ಅಬ್ಸುಲ್ ಕರೀಂ(22) ಮತ್ತು ದಾರುಲ್ ಆಲಂ(23) ಕೊಲೆ ಮಾಡಿ ವಿಮಾನದ ಮೂಲಕ ಅಸ್ಸಾಂ ತೆರಳುವ ಸಿದ್ಧತೆಯಲ್ಲಿದ್ದರು. ಇದನ್ನು ತಿಳಿದ ಪೊಲೀಸರು ಅವರು ವಿಮಾನ ಹತ್ತುವ ಮುನ್ನವೇ ಬಂಧಿಸಿದ್ದಾರೆ.

  • ಒಂದೂವರೆ ಕೋಟಿ ವೆಚ್ಚದ ಸರ್ಕಾರಿ ಹೈಟೆಕ್ ಆಸ್ಪತ್ರೆ ನಿರ್ಮಾಣ

    ಒಂದೂವರೆ ಕೋಟಿ ವೆಚ್ಚದ ಸರ್ಕಾರಿ ಹೈಟೆಕ್ ಆಸ್ಪತ್ರೆ ನಿರ್ಮಾಣ

    ಆನೇಕಲ್: ಸರ್ಕಾರಿ ಆಸ್ಪತ್ರೆ ಎಂದರೆ ಬಡವರು ಹೋಗುವಂತದ್ದು ಎಂದು ಮೂಗು ಮುರಿಯುವ ಜನರಿದ್ದಾರೆ. ಆದರೆ ಈಗ ಯಾವ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲ ಎಂಬಂತೆ ಆನೇಕಲ್ ನಲ್ಲಿ ಒಂದೂವರೆ ಕೋಟಿ ವೆಚ್ಚದ ಹೈಟೆಕ್ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗಿದೆ.

    ಕೊರೊನಾ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಎಜಿಐ ಮಿಲ್‍ಟೆಕ್ ಖಾಸಗಿ ಕಂಪನಿಯು ಸಿ.ಎಸ್.ಆರ್ ಪೌಂಡ್ ನಿಂದ ಬೆಂಗಳೂರು ಹೊರವಲಯ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೈಟೆಕ್ ಐಸಿಯು ಬೆಡ್ ಗಳ ಸಿದ್ಧತೆ ಮಾಡಲಾಗಿದೆ. ಈ ಆಸ್ಪತ್ರೆಗೆ ಸುಮಾರು ಒಂದೂವರೆ ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದನ್ನೂ ಓದಿ: ಕರ್ತವ್ಯಕ್ಕೆ ತೆರಳುತ್ತಿದ್ದ ವಕೀಲ ಅಪಘಾತದಲ್ಲಿ ಸಾವು

    ಕೊರೊನಾ ಎರಡನೇ ಅಲೆಯ ಸೋಂಕಿಗೆ ತುತ್ತಾಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳು ಸಿಗದೆ ಸಾಕಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಎಜಿಐ ಮಿಲ್‍ಟೆಕ್ ಕಂಪನಿಯು ಸಿಎಸ್‍ಆರ್ ಪೌಂಡ್ ನಿಂದ ಹತ್ತು ಬೆಡ್ ಗಳ ಹೈಟೆಕ್ ಐಸಿಯು ವಾರ್ಡ್ ನ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು ಒಂದೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ಕಳೆದ ಮೂರು ತಿಂಗಳಿನಿಂದ ಇ ಆಸ್ಪತ್ರೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಐಸಿಯು ಬೆಡ್ ಗಳು, ಆಮ್ಲಜನಕಯುಕ್ತ ಹಾಸಿಗೆಗಳು ಮತ್ತು ವೆಂಟಿಲೇಟರ್‍ಗಳನ್ನು ಒಳಗೊಂಡಿರುವ ಅತ್ಯುತ್ತಮ ವೈದ್ಯಕೀಯ ಸೌಲಭ್ಯವಿರುವ ಐಸಿಯು ವಾರ್ಡ್ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ:  ಜನರ ಬಳಿ ಸುಲಿಗೆ ಮಾಡ್ಕೊಂಡು ನಿಂತಿದ್ದೀರಾ?- ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್

    ಈ ಕುರಿತು ಪ್ರತಿಕ್ರಿಯಿಸಿದ ಎಜಿಐ ಮಿಲ್ಟೆಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರನ್, ಈಗಾಗಲೇ ಹೊರರಾಜ್ಯಗಳಲ್ಲಿ ಮತ್ತು ಗಡಿಪ್ರದೇಶಗಳಲ್ಲಿ ಹೆಚ್ಚು ಕೊರೊನಾ ಸೋಂಕು ಹರಡುತ್ತಿದ್ದು, ಮೂರನೇ ಅಲೆಯು ಬಂದ ಸಂದರ್ಭದಲ್ಲಿ ಅದನ್ನು ದಿಟ್ಟವಾಗಿ ಎದುರಿಸುವ ನಿಟ್ಟಿನಲ್ಲಿ ಹಾಗೂ ಮಕ್ಕಳ ಆರೈಕೆಗಾಗಿ ಮಲ್ಟಿಸ್ಪೆಶಾಲಿಟಿ ಐಸಿಯು ಸೌಲಭ್ಯ ಕಲ್ಪಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ಆನೇಕಲ್ ತಾಲೂಕು ಗ್ರಾಮೀಣ ಭಾಗವಾಗಿದ್ದು, ಇಲ್ಲಿ ಹೆಚ್ಚು ರೈತಾಪಿ ಹಾಗೂ ಬಡ ಜನರಿದ್ದಾರೆ. ಕೊರೊನಾ ಸೇರಿದಂತೆ ಯಾವುದೇ ರೀತಿ ಆರೋಗ್ಯದಲ್ಲಿ ಏರುಪೇರು ಆದಾಗ ಐಸಿಯು ಬೆಡ್ ಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಅವರ ಬಳಿ ಹಣ ಇರುವುದಿಲ್ಲ. ಈ ಕಾರಣ ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆ ದೊರೆಯದೆ ಸಾವಿಗೀಡಾಗುತ್ತಾರೆ. ಆದರೆ ಈ ಐಸಿಯು ವಾರ್ಡ್ ಆಸ್ಪತ್ರೆ ಬರುವ ಬಡ ರೋಗಿಗಳಿಗೆ ಸಹಕಾರವಾಗಲಿದೆ ಎಂದು ತಿಳಿಸಿದರು.

  • ಫೀಲ್ಡಿಗಿಳಿದ ಪೊಲೀಸರು – ವೀಲಿಂಗ್ ಪುಂಡರು ಅಂದರ್

    ಫೀಲ್ಡಿಗಿಳಿದ ಪೊಲೀಸರು – ವೀಲಿಂಗ್ ಪುಂಡರು ಅಂದರ್

    ಆನೇಕಲ್: ಕೆ.ಆರ್.ಪುರಂ ಸಂಚಾರ ಪೊಲೀಸರು ಪುಂಡರನ್ನು ಹಿಡಿಯಲು ಮತ್ತೆ ಫೀಲ್ಡಿಗಿಳಿದಿದ್ದು, ವೀಲಿಂಗ್ ಮಾಡುತ್ತಿದ್ದ ಯುವಕರನ್ನು ಬಂಧಿಸಲಾಗಿದೆ.

    ಎರಡು ವಾರಗಳಲ್ಲಿ ಸುಮಾರು 6 ವೀಲಿಂಗ್ ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಆರ್.ಪುರಂ ಸಂಚಾರ ಪೊಲೀಸರು, ಇಂದು ಮತ್ತೆ 3 ಪ್ರಕರಣಗಳನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಕ್ಕಳಿಗಾಗಿ ಮಿಡಿದ ಹೃದಯ – ರಕ್ತದಾನ ಮಾಡಿ ಮಾನವೀಯತೆ ಮೆರೆದ ಪೊಲೀಸರು

    ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯ ಇನ್ಪೆಕ್ಟರ್ ಮಹಮದ್.ಎಂ.ಎ ಅವರ ಠಾಣಾ ವ್ಯಾಪ್ತಿಯಲ್ಲಿ ವೀಲಿಂಗ್ ಸ್ಕ್ವಾಡ್ ತಯಾರು ಮಾಡಿ ಕಾರ್ಯಾಚರಣೆ ಕೈಗೊಂಡಿದ್ದು, ವೀಲಿಂಗ್ ನಿರತರಾಗಿದ್ದ 3 ದ್ವಿಚಕ್ರ ವಾಹನಗಳನ್ನು ಮತ್ತು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:  ವ್ಯಾಕ್ಸಿನ್ ಪಡೆದ ನಂತರ ಮಗನ ಸಾವು – ಪೋಷಕರ ಆರೋಪ

    ಹಳೆ ಮದ್ರಾಸ್ ರಸ್ತೆ, ಟಿಸಿ ಪಾಳ್ಯ ಮತ್ತು ಅಯ್ಯಪ್ಪನಗರ ಮುಖ್ಯರಸ್ತೆಗಳಲ್ಲಿ ವಾಹನಗಳನ್ನು ಮತ್ತು ವಾಹನ ಸವಾರರನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ವಾಹನಗಳ ಸೈಲೆನ್ಸರ್ ಗಳನ್ನು ಹೆಚ್ಚು ಶಬ್ದ ಬರುವ ರೀತಿಯಲ್ಲಿ ವಿಶೇಷವಾಗಿ ವಿನ್ಯಾಸ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

    ವಾಹನ ಸವಾರರಾದ ಸಾಗರ್, ಫೈರೋಜ್, ಸಂಜಯ್ ಗೌಡ ಮೊದಲಾದವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಇನ್ನೂ ಈ ಕಾರ್ಯಾಚರಣೆಯಲ್ಲಿ ಕೆ.ಆರ್.ಪುರಂ ಸಂಚಾರ ಠಾಣೆಯ ಪಿಎಸ್‍ಐ ಸಯ್ಯದ್ ನಿಜಾಮುದ್ದೀನ್, ಅಶ್ವಥ್, ಪ್ರವೀಣ್ ಹಾಗೂ ಸಿಬ್ಬಂದಿ ನಂದೀಶ್, ಪ್ರಸನ್ನ, ಸುನಿಲ್ ಮೊದಲಾದವರು ಭಾಗವಹಿಸಿದ್ದರು.

  • ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

    ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

    ಆನೇಕಲ್: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

    ಭಾನುವಾರ ಅತ್ತಿಬೆಲೆ ಮಂಡಲದ ವತಿಯಿಂದ ಆಯೋಜಿಸಿದ್ದ ಜನಾಶಿರ್ವಾದ ಯಾತ್ರೆಯ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ದೇಶದಲ್ಲಿ ಯಾವ ರೀತಿ ಆಡಳಿತ ನಡೆಸಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. 60 ವರ್ಷ ಅವರ ಆಡಳಿತ ವೈಖರಿಯಿಂದಾಗಿ ಹಾಗೂ ಕೊರೊನಾ ಸಂಕಷ್ಟದಿಂದ ಬೆಲೆ ಏರಿಕೆ ಆಗಿದೆ ಹೊರತು ಬಿಜೆಪಿಯಾಗಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಗಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಎಂದು ಕೂಡ ನಡೆದುಕೊಳ್ಳುವುದಿಲ್ಲ. ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದರು.

    ಅಧಿಕಾರ ಸಿಕ್ಕಾಗ ನಾವು ಜನಪರ ಯೋಜನೆಗಳನ್ನು ಜಾರಿಗೆ ತರಬೇಕು. ಜನ ನಮಗೆ ಅಧಿಕಾರ ನೀಡುವುದು ಸ್ಥಳೀಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎನ್ನುವ ಕಾರಣಕ್ಕೆ ಆದರೆ ಕೆಲವರು ಅಧಿಕಾರ ಸಿಕ್ಕಾಗ ಅದರ ಅಮಲಿನಲ್ಲಿ ಇರುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:ಯಾದಗಿರಿಯಲ್ಲಿ ವರುಣಾರ್ಭಟ – ವೀರಾಂಜನೇಯ, ಕಂಗಳೇಶ್ವರ ದೇವಾಲಯ ಜಲಾವೃತ್ತ

    ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ!

    ಚುನಾವಣೆ ಸಂದರ್ಭದಲ್ಲಿ ಯಾರು ಬಿಜೆಪಿ ಪಕ್ಷದಲ್ಲೇ ಇದ್ದು, ಬೇರೆ ಪಕ್ಷದವರ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಾರೋ ಅವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸೋಲಿಗೆ ಯಾರು ಕೆಲಸ ಮಾಡುತ್ತಾರೆ ಅವರನ್ನು ಯಾರೂ ಕೂಡ ಕ್ಷಮಿಸುವ ಮಾತೇ ಇಲ್ಲ ಎಂದು ಹೇಳುವ ಮೂಲಕ ವೇದಿಕೆಯಲ್ಲಿ ಹಾಜರಿದ್ದ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಕಿವಿಮಾತು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಮಾತ್ರ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಲಾಗುತ್ತಿದೆ. ಆದರೆ ಈ ಹಿಂದೆ ದೇಶವನ್ನು ಆಳಿದವರು ಎಷ್ಟು ಲೂಟಿ ಹೊಡೆದಿದ್ದಾರೆ ಎನ್ನುವ ಮಾಹಿತಿ ಜನರಿಗೂ ಕೂಡ ಇದೆ. ಈ ನಿಟ್ಟಿನಲ್ಲಿ ಇದೆಲ್ಲವನ್ನು ಅರಿತು ಸುಭದ್ರ ದೇಶ ಕಟ್ಟಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಬಿಜೆಪಿಯಿಂದ ಗೆದ್ದು ಬಂದವರು ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು. ನಮಗೆ ಅಧಿಕಾರ ನೀಡಿದ ಪಕ್ಷ ತಾಯಿಗೆ ಸಮಾನ. ಈ ನಿಟ್ಟಿನಲ್ಲಿ ನಾವು ತಾಯಿಗೆ ದ್ರೋಹ ಮಾಡದಂತೆ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ:ಬೆಲೆ ಏರಿಕೆ, ಜನ ಸಾಮಾನ್ಯರ ದುಸ್ಥಿಗೆ ಸರ್ಕಾರ ಹೊಣೆ: ನಾರಾಯಣಸ್ವಾಮಿ

    ಆನೇಕಲ್ ತಾಲೂಕಿಗೆ ಶಿಂಶಾ ನದಿ ನೀರನ್ನು ತರುವ ಬಗ್ಗೆ ನಾನೇ ಹೇಳಿದ್ದೆ. ಇದಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ಮಾತನಾಡಿರುವುದು ನನ್ನ ಕಿವಿಗೆ ಬಿದ್ದಿದೆ. ನನ್ನ ಮನದಲ್ಲಿರುವ ಅನಿಸಿಕೆಯನ್ನು ಹೇಳಿಕೊಳ್ಳುವುದು, ಅಂತಹ ಕಾರ್ಯಕ್ರಮಗಳನ್ನು ರೂಪಿಸುವುದು ನನಗೆ ಬಿಟ್ಟ ವಿಚಾರವಾಗಿದೆ. ಇದಕ್ಕೆ ಮೂಗು ತೂರಿಸಲು ಅವರ್ಯಾರು ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ಸಿನ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿ.ಕೆ ಸುರೇಶ್ ಅವರಿಗೆ ತಿರುಗೇಟು ನೀಡಿದರು.

    ಬಿಜೆಪಿ ಭದ್ರಕೋಟೆ!

    ಆನೇಕಲ್ ತಾಲೂಕು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಬಸವರಾಜು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಆನೇಕಲ್ ತಾಲೂಕು ಎಂದಿಗೂ ಕೂಡ ಬಿಜೆಪಿ ಭದ್ರಕೋಟೆ, ತಾಲೂಕಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಸಾಕಷ್ಟು ಜನ ಇದ್ದು, ಅವರೆಲ್ಲರನ್ನೂ ಇಂತಹ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕು. ನಾಲ್ಕು ಬಾರಿ ಆನೇಕಲ್ಲಿನಲ್ಲಿ ಶಾಸಕರಾಗಿ ಸೋತ ಬಳಿಕ ಚಿತ್ರದುರ್ಗ ಲೋಕಸಭಾ ಸಂಸದರಾಗಿ ಕೇಂದ್ರ ಸಚಿವರಾಗಿರುವ ನಾರಾಯಣಸ್ವಾಮಿ ಅವರು ರೂಢಿಸಿಕೊಂಡ ಸರಳತೆ ಪಕ್ಷದ ಸಿದ್ಧಾಂತದಿಂದಾಗಿ ಕೇಂದ್ರದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿಕೊಂಡಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಲು ಬಿಜೆಪಿ ಪಕ್ಷದಲ್ಲಿ ಇರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾತ್ರ ಸಾಧ್ಯ ಎಂದು ಪ್ರಶಂಸಿದ್ದಾರೆ. ಇದನ್ನೂ ಓದಿ:ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಎಫೆಕ್ಟ್ – ಹೊಸ ಸಂಶೋಧನೆ ವರದಿ ಆತಂಕ

    narendra modi
    narendra Modi

    ಅತ್ತಿಬೆಲೆ ವೃತ್ತದಿಂದ ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರು ಬಿದರಗುಪ್ಪೆಯವರೆಗೆ ಮೆರವಣಿಗೆ ನಡೆಸಿ ನಂತರ ಅತ್ತಿಬೆಲೆಯ ಕಲ್ಯಾಣ ಮಂಟಪವೊಂದರಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನಾರಾಯಣಸ್ವಾಮಿ ಅವರನ್ನು ಅದ್ದೂರಿಯಾಗಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

    ಹಿರಿಯ ಬಿಜೆಪಿ ಮುಖಂಡ ಯಂಗಾ ರೆಡ್ಡಿ, ಬಿ.ಜಿ.ಆಂಜಿನಪ್ಪ, ಅತ್ತಿಬೆಲೆ ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್, ಎನ್.ಶಂಕರ್, ಬಿದರಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಅತ್ತಿಬೆಲೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ರೆಡ್ಡಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

     

  • ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಆನೇಕಲ್: ದೇಶದಲ್ಲೆ ಮೊಟ್ಟಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿರುವ ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾದ ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ಬೈಯಪ್ಪನಹಳ್ಳಿ ನೂತನ ರೈಲ್ವೆ ನಿಲ್ದಾಣದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರೈಲ್ವೆ ಯಾರ್ಡ್ ನ ಕಾರ್ಯಕಾರಿ ಅಂಶಗಳು, ಸೌಲಭ್ಯಗಳು ಮತ್ತು ನಿಲ್ದಾಣದಲ್ಲಿ ಒದಗಿಸಲಾದ ನವೀನ ವೈಶಿಷ್ಟ್ಯಗಳನ್ನು ಪರಿಶೀಲಿಸಿದರು. ಪರಿಶೀಲನೆಗೂ ಮುನ್ನ ಸಚಿವರಿಗೆ ರೈಲ್ವೆ ಪೊಲೀಸರಿಂದ ಗೌರವ ಗೌರವ ವಂದನೆ ಅರ್ಪಿಸಲಾಯಿತು.

    ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ನೇತೃತ್ವದ ಎಸ್‍ಡಬ್ಲ್ಯೂಆರ್‍ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಈ ಟರ್ಮಿನಲ್ ನಿಂದ ಪಾರ್ಸೆಲ್ ಸಾಗಿಸುವ ಸಾಮರ್ಥ್ಯದ ಕುರಿತು ಚರ್ಚಿಸಿದರು. ನಿಲ್ದಾಣ ನಿರ್ಮಾಣವನ್ನು ನೋಡಿ ತುಂಬಾನೆ ಸಂತೋಷ ವ್ಯಕ್ತಪಡಿಸಿದ ಸಚಿವರು ಟರ್ಮಿನಲ್ ನ ಇಂಚಿಂಚೂ ಮಾಹಿತಿಯನ್ನ ಅಧಿಕಾರಿಗಳಿಂದ ಪಡೆದರು. ನಂತರ ಮಾತನಾಡಿದ ಸಚಿವರು, ಈ ಪ್ರದೇಶದಲ್ಲಿ ತಯಾರಿಸಿದ ಬಿಳಿ ಸರಕುಗಳು, ಕೈಗಾರಿಕಾ ಉಪಕರಣಗಳು, ಜವಳಿ ಮತ್ತು ಇತರ ಉತ್ಪನ್ನಗಳನ್ನು ಸಾಗಿಸಲು ಪಾರ್ಸೆಲ್ ವಿಶೇಷ ರೈಲುಗಳ ಓಡಾಟದಿಂದ ಆದಾಯವನ್ನು ಗಳಿಸಲು ಪ್ರಸ್ತಾಪಗಳನ್ನು ರೂಪಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ

    ಈ ವಿಮಾನ ನಿಲ್ದಾಣ ರೀತಿಯಲ್ಲಿ ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ಎಂಜಿನಿಯರ್‍ಗಳ ತಂಡವನ್ನು ವೈಷ್ಣವ್ ಶ್ಲಾಘಿಸಿದರು. ಸರ್ ಎಂವಿ ಟರ್ಮಿನಲ್‍ನಲ್ಲಿ ಪ್ರಯಾಣಿಕರ ಸೌಕರ್ಯ ಮತ್ತು ಸೌಕರ್ಯವನ್ನು ಹೆಚ್ಚಿಸಲು ಒದಗಿಸಲಾದ ಸೌಲಭ್ಯಗಳು ಮತ್ತು ಸೌಕರ್ಯಗಳು ಭವಿಷ್ಯದಲ್ಲಿ ದೇಶದಾದ್ಯಂತ ನಿರ್ಮಾಣಗೊಳ್ಳುವ ನಿಲ್ದಾಣಗಳಿಗೆ ಮಾನದಂಡವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

    ಇಡೀ ದೇಶಕ್ಕೆ ಮಾದರಿಯಾದ ನಿಲ್ದಾಣ:
    ಈ ನಿಲ್ದಾಣವು 7 ಪ್ಲಾಟ್‍ಫಾರ್ಮ್‍ಗಳನ್ನು ಹೊಂದಿದ್ದು, ದಿನಕ್ಕೆ 1 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಸಾಮಥ್ರ್ಯವನ್ನು ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಎಸ್ಕಲೇಟರ್‍ಗಳು ಮತ್ತು ಲಿಫ್ಟ್‍ಗಳನ್ನು ಹೊರತುಪಡಿಸಿ ಸಬ್‍ವೇಗೆ ಪ್ರವೇಶಿಸಲು ಬ್ರೈಲ್ ಚಿಹ್ನೆಗಳು, ಅಂಡರ್ ಪಾಸ್ ಗಳ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ದಿವ್ಯಾಂಗ(ಅಂಗವಿಕಲರ) ಸ್ನೇಹಿ ನಿಲ್ದಾಣವಾಗಿದೆ. ನಿಲ್ದಾಣದಲ್ಲಿ ಪರಿಸರ ಸ್ನೇಹಿ ನೀರಿನ ಮರುಬಳಕೆ ಘಟಕವೂ ಇದೆ. ಬಿಬಿಎಂಪಿಯೊಂದಿಗೆ ಸಮಾಲೋಚಿಸಿ ಟರ್ಮಿನಲ್‍ಗೆ ಪ್ರವೇಶಕ್ಕೆ ಕಿರಿದಾದ ರಸ್ತೆಗಳ ಪ್ರವೇಶದ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಶೀಘ್ರದಲ್ಲೇ ನಿಲ್ದಾಣ ಉದ್ಘಾಟನೆ ಆಗಲಿದೆ ಎಂದು ಸಚಿವರು ಹೇಳಿದರು.

    ಇದೇ ಸಂದರ್ಭದಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆಗೆ ಸಚಿವ ಜೊತೆಗೆ ಸಂಸದ ಪಿ.ಸಿ.ಮೋಹನ್, ಜನರಲ್ ಮ್ಯಾನೇಜರ್ ಎಸ್ ಡಬ್ಲ್ಯುಆರ್ ಸಂಜೀವ್ ಕಿಶೋರ್, ಪ್ರಿನ್ಸಿಪಾಲ್ ಚೀಫ್ ಆಪರೇಷನ್ ಮ್ಯಾನೇಜರ್ ಹರಿ ಶಂಕರ್ ವರ್ಮಾ, ಡಿ ಆರ್ ಎಂ ಬೆಂಗಳೂರು ಶ್ಯಾಮ್ ಸಿಂಗ್, ಮುಖ್ಯ ಆಡಳಿತಾಧಿಕಾರಿ, ನಿರ್ಮಾಣ ದೇಶ್ ರತನ್ ಗುಪ್ತಾ, ಮತ್ತು ರೈಲ್ವೇಸ್ ನ ಹಿರಿಯ ಅಧಿಕಾರಿಗಳು ಭಾಸ್ಕರ್ ರಾವ್, ಮುಖ್ಯ ಆಯುಕ್ತ ಬಿಬಿಎಂಪಿ ಗೌರವ್ ಗುಪ್ತಾ ಭಾಗವಹಿಸಿದ್ದರು.

  • ಲೆಕ್ಕದಲ್ಲಿ ಎಡವಟ್ಟು ಆರೋಪ – ಗ್ರಾಮ ಲೆಕ್ಕಿಗ ಆತ್ಮಹತ್ಯೆ ಯತ್ನ

    ಲೆಕ್ಕದಲ್ಲಿ ಎಡವಟ್ಟು ಆರೋಪ – ಗ್ರಾಮ ಲೆಕ್ಕಿಗ ಆತ್ಮಹತ್ಯೆ ಯತ್ನ

    ಆನೇಕಲ್: ಲೆಕ್ಕದಲ್ಲಿ ಎಡವಟ್ಟು ಮಾಡಿದ ಆರೋಪಕ್ಕೆ ಪ್ರತಿಯಾಗಿ ಬಿಲ್ ಕಲೆಕ್ಟರ್ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ ಘಟನೆ ಆನೇಕಲ್‍ನಲ್ಲಿ ನಡೆದಿದೆ.

    ಚಂದ್ರಶೇಖರ್(ರವಿ) ಕರ ವಸೂಲಿಗಾರರಾಗಿದ್ದು. ಸಿಡಿಹೊಸಕೋಟೆಯ ನಿವಾಸಿಯಾಗಿದ್ದಾರೆ. ಆನೇಕಲ್ ತಾಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:  ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯನ್ನು ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

    ಹಿಂದೆ ಇದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಕರ ವಸೂಲಿಗಾರನ ವಿರುದ್ಧ ಟ್ಯಾಕ್ಸ್ ವಸೂಲಿಯಲ್ಲಿ ಅಕ್ರಮದ ಆರೋಪ ಹೊರಿಸಿ ನೋಟೀಸ್ ನೀಡಿದ್ದರು. ಇದರಿಂದ ಮನ ನೊಂದ ಚಂದ್ರಶೇಖರ್ ಸಭೆಯಲ್ಲಿಯೇ ಮಾತಿಗೆ ಮಾತು ಬೆಳೆದು ವಿಷ ಸೇವಿಸಿದ್ದರು. ತಕ್ಷಣವೇ ಜೊತೆಗಿದ್ದ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ನೀಡಲಾಗಿದ್ದು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.