Tag: anekal

  • Tamil Nadu | ಪ್ರೀತಿಗೆ ಪೋಷಕರ ವಿರೋಧ – ನೇಣಿಗೆ ಶರಣಾದ ಪ್ರೇಮಿಗಳು

    Tamil Nadu | ಪ್ರೀತಿಗೆ ಪೋಷಕರ ವಿರೋಧ – ನೇಣಿಗೆ ಶರಣಾದ ಪ್ರೇಮಿಗಳು

    ಚೆನ್ನೈ/ಆನೇಕಲ್: ಪ್ರೀತಿಗೆ (Love) ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳು (Lovers) ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ  (Tamil Nadu) ಡೆಂಕಣಿಕೊಟ್ಟೈನ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ನಡೆದಿದೆ.

    ಗೌತಾಲಂ ಗ್ರಾಮದ ನರಸಿಂಹಮೂರ್ತಿ (22) ಮತ್ತು ಬಾಚಪ್ಪನಟ್ಟಿ ಗ್ರಾಮದ 17 ವರ್ಷದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ನರಸಿಂಹಮೂರ್ತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಪೋಷಕರ ತೀವ್ರ ವಿರೋಧವಿತ್ತು.

    ನರಸಿಂಹಮೂರ್ತಿ ಯುವತಿಗೆ ಕಿರುಕುಳ ನೀಡುತ್ತಿದ್ದಾನೆಂದು ಕಳೆದ ತಿಂಗಳು ಯುವತಿ ಪೋಷಕರು ಡೆಂಕಣಿಕೊಟ್ಟೈ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಕಳೆದ ಹತ್ತು ದಿನಗಳ ಹಿಂದೆಯಷ್ಟೇ ನರಸಿಂಹಮೂರ್ತಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ. ಜೈಲಿನಿಂದ ಹೊರಬಂದ ಬಳಿಕ ಯುವತಿ ಜೊತೆ ನಿರಂತರವಾಗಿ ಫೋನ್ ಸಂಪರ್ಕ ಹೊಂದಿದ್ದ.

    ಆ.24ರ ಸಂಜೆ ಕಾಲೇಜು ಮುಗಿಸಿದ ಯುವತಿಯು ನರಸಿಂಹಮೂರ್ತಿಯ ಮನೆಗೆ ಹೋಗಿದ್ದಳು. ಪ್ರೀತಿಗೆ ಯುವತಿಯ ಪೋಷಕರು ವಿರೋಧದಿಂದ ಬೇಸತ್ತು ಅವರಿಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿರ್ಧಾರ ಮಾಡಿದ್ದರು. ಬಾಗಿಲು ಹಾಕಿಕೊಂಡ ಇಬ್ಬರು ಪ್ರಿಯಕರನ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು ಬಾಗಿಲು ಮುರಿದು ಒಳಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

    ಡೆಂಕಣಿಕೊಟ್ಟೈ ಡಿವೈಎಸ್ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಡೆಂಕಣಿಕೊಟ್ಟೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿಕೊಂಡು ಟೆಕ್ಕಿ ಆತ್ಮಹತ್ಯೆ

    ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿಕೊಂಡು ಟೆಕ್ಕಿ ಆತ್ಮಹತ್ಯೆ

    ಆನೇಕಲ್: ಪ್ಲಾಸ್ಟಿಕ್ ಕವರ್‌ಗೆ ಹೀಲಿಯಂ ಕವರ್ (Helium cover) ತುಂಬಿಸಿಕೊಂಡು ಟೆಕ್ಕಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electrnic City) ನಡೆದಿದೆ.

    ನಗರದ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ (Neeladri Nagar) ಹೋಟೆಲೊಂದರ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಟೆಕ್ಕಿ ಯಾಜ್ಙಿಕ್ (22) ಎಂದು ಗುರುತಿಸಲಾಗಿದೆ. ಪ್ರತಿಷ್ಟಿತ ಸಾಫ್ಟ್ವೇರ್ ಕಂಪನಿಯ ಉದ್ಯೋಗಿಯಾಗಿದ್ದ. ಮೂಲತಃ ಹಾಸನ (Hassan) ಜಿಲ್ಲೆಯ ಸಕಲೇಶಪುರದವನು (Sakaleshapur) ಎಂದು ತಿಳಿದುಬಂದಿದೆ.ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ: ಕಾಡಿನಿಂದ ನಾಳೆ ಗಜಪಯಣ ಆರಂಭ

    ಕಳೆದ ಕೆಲ ತಿಂಗಳಿನಿಂದ ವರ್ಕ್ ಫ್ರಂ ಹೋಂ  ಕೆಲಸ ಮಾಡುತ್ತಿದ್ದ. ಎಂಟೆಕ್ ಎಕ್ಸ್ಂ ಬರೆಯುವ ಸಲುವಾಗಿ ಬೆಂಗಳೂರಿಗೆ (Bangaluru) ಬಂದು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಹೋಟೆಲೊಂದರಲ್ಲಿ ರೂಂ ಮಾಡಿಕೊಂಡಿದ್ದ. ನಿನ್ನೆ (ಆ.19ರಂದು) ದೊಡ್ಡ ಬ್ಯಾಗ್ ತೆಗೆದುಕೊಂಡು ಪೀಣ್ಯಕ್ಕೆ (Peenya) ತೆರಳಿದ್ದ. ಹೀಲಿಯಂ ಗ್ಯಾಸ್ (Helium Gas) ಪರ್ಚೇಸ್ ಮಾಡಿ ಲಾಡ್ಜ್ಗೆ ಮರಳಿದ್ದ.

    ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೀಲಿಯಂ ಗ್ಯಾಸ್ ಬಳಸಿದರೆ ಅದು ದೇಹದೊಳಗೆ ಹೊಕ್ಕು ಕ್ಷಣಾರ್ಧದಲ್ಲಿ ಉಸಿರು ಕಟ್ಟುತ್ತದೆ. ಇದರಿಂದ ದೇಹದ ಆಕ್ಸಿಜನ್ ವರ್ಕ್ ಮಾಡದೆ ಕ್ಷಣಾರ್ಧದಲ್ಲಿ ಸಾಯುತ್ತಾರೆ. ಜೊತೆಗೆ ಸಾಯುವಾಗ ನೋವು ಕೂಡ ಆಗುವುದಿಲ್ಲ ಎಂದು ಕವರ್ ಮೂಲಕ ಹೀಲಿಯಂ ಗ್ಯಾಸ್ ಇನ್ ಹೇಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಇದನ್ನೂ ಓದಿ: ದಕ್ಷಿಣ ದೆಹಲಿಯ 3 ಮಾಲ್, ಒಂದು ಆಸ್ಪತ್ರೆಗೆ ಬಾಂಬ್ ಬೆದರಿಕೆ

    ಬಳಿಕ ಯಾಜ್ಙಿಕ್ ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಯಿತು. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

    ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

    – ಸೋಂಕಿತರಿದ್ದ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಡೆಂಗ್ಯೂ ಬೆನ್ನಲ್ಲೇ ಝಿಕಾ ವೈರಸ್ (Zika Virus) ಕೂಡ ನಗರಕ್ಕೆ ಕಾಲಿಟ್ಟಿದೆ. ಆನೇಕಲ್ ತಾಲೂಕು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಣಿಯಲ್ಲಿ (Jigani) ಎರಡು ವಾರಗಳಲ್ಲಿ ಒಟ್ಟು 5 ಝಿಕಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

    ಸೋಂಕು ಕಾಣಿಸಿಕೊಂಡ  ಹಿನ್ನೆಲೆ ರೋಗಿಗಳು ಹಾಗೂ ಕುಟುಂಬಸ್ಥರ ರಕ್ತದ ಸ್ಯಾಂಪಲ್‌ಗಳನ್ನು ಪಡದುಕೊಂಡು ಆರೋಗ್ಯ ಇಲಾಖೆ ಸೋಂಕಿತರ ಮೇಲೆ ನಿಗಾ ವಹಿಸಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 7 ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರು ಪತ್ತೆಯಾದ ಪ್ರದೇಶಗಳನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಿ ಆರೋಗ್ಯ ಇಲಾಖೆ (Health Department) ನಿಗಾ ವಹಿಸುತ್ತಿದೆ. ಇದನ್ನೂ ಓದಿ: ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ಈಡಿಸ್ ಸೊಳ್ಳೆಯಿಂದ ಝಿಕಾ ವೈರಸ್ ಹರಡುತ್ತದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ ದದ್ದುಗಳು ಕಾಣಿಸಿಕೊಳ್ಳುವುದು ಝಿಕಾ ವೈರಸ್‌ನ ಗುಣಲಕ್ಷಣ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಇದನ್ನೂ ಓದಿ: Maharashtra: ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿಯನ್ನು ಲ್ಯಾಬ್ ಟೆಸ್ಟ್‌ಗೆ ಒಳಪಡಿಸಬೇಕು. ಮನೆಯ ಸುತ್ತಮುತ್ತಲಿನ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋ ಮೀಟರ್ ವ್ಯಾಪ್ತಿಯನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಲಾಗುವುದು. ಝಿಕಾ ವೈರಸ್‌ ನಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್ 

  • ಆನೇಕಲ್‍ನಲ್ಲಿ ವಿದ್ಯುತ್ ಶಾಕ್‍ಗೆ ಯುವ ಇಂಜಿನಿಯರ್ ಬಲಿ

    ಆನೇಕಲ್‍ನಲ್ಲಿ ವಿದ್ಯುತ್ ಶಾಕ್‍ಗೆ ಯುವ ಇಂಜಿನಿಯರ್ ಬಲಿ

    -ಕಂಪನಿ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ

    ಆನೇಕಲ್: ವಿದ್ಯುತ್ ಶಾಕ್‍ನಿಂದ (Electricution) ಯುವ ಇಂಜಿನಿಯರ್ (Engineer) ಸಾವಿಗೀಡಾದ ಘಟನೆ ತಾಲೂಕಿನ (Anekal) ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ

    ಬೆಂಗಳೂರಿನ (Bengaluru) ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

    ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇರಲಿಲ್ಲ. ಹೀಗಾಗಿ ಕಾರ್ತಿಕ್ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಕಂಪನಿಯಿಂದ ಕೈಗೆ ಗ್ಲೌಸ್ ಸಹ ನೀಡದೆ ನಿರ್ಲಕ್ಷ ತೋರಿದೆ. ಇದರಿಂದ ಮಗನನ್ನು ಕಳೆದುಕೊಂಡಿದ್ದೇವೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.

    ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

    ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

    ಆನೇಕಲ್: ವರಮಹಾಲಕ್ಷ್ಮೀ (Varamahalakshmi Festival) ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ (Fraud) ಮಾಲೀಕ ಪರಾರಿಯಾದ ಘಟನೆ ಆನೇಕಲ್ (Anekal) ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ.

    ಚಿನ್ನ ಕೊಡುತ್ತೇನೆ ಎಂದು ಹಣ ಕಟ್ಟಿಸಿಕೊಂಡು ಸೇಟು ವಂಚನೆ ಮಾಡಿದ್ದಾನೆ. ಲಕ್ಷಾಂತರ ರೂ. ಸಾಲ ಮಾಡಿ ಮಹಿಳೆಯರು (Woman) ಹಣ ಕಟ್ಟಿದ್ದರು. ಇದೀಗ ಚಿನ್ನ ಅಡವಿಟ್ಟು ಮನೆ ಖಾಲಿ ಮಾಡಿಕೊಂಡು ಸೇಟು ಎಸ್ಕೇಪ್ ಆಗಿದ್ದಾನೆ. ಮುನಾರಾಮ್ ಎಂಬ ರಾಜಸ್ಥಾನಿ ಮೂಲದ ಮಾರ್ವಾಡಿ ಆನಂದ್ ಜ್ಯುವೆಲರ್ಸ್ ಅಂಡ್ ಕೇಸರ್ ಬ್ಯಾಂಕರ್ಸ್‌ನ ಮಾಲೀಕನಾಗಿದ್ದು, ಹತ್ತು ವರ್ಷಕ್ಕೂ ಹೆಚ್ಚು ದಿನದಿಂದ ಇಲ್ಲೇ ವಾಸವಿದ್ದ. ಈತ 150ಕ್ಕೂ ಹೆಚ್ಚು ಜನರಿಂದ ಚೀಟಿ ಹಾಕಿಸಿಕೊಂಡು ಚಿನ್ನ ಅಡಮಾನ ಇಟ್ಟುಕೊಂಡಿದ್ದ. ಹಬ್ಬ ಎಂದು ಚೀಟಿ ಹಾಕಿದ್ದವರು ಚಿನ್ನ ಬಿಡಿಸಿಕೊಂಡು ಬರಲು ಹೋದಾಗ ವಂಚನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ

    ಚಿನ್ನದ ಅಂಗಡಿ ಮಾಲೀಕ ಅಂಗಡಿ ಹಾಗೂ ಮನೆ ಖಾಲಿ ಮಾಡಿಕೊಂಡು ಎಸ್ಕೇಪ್ ಆಗಿದ್ದು ಕಂಡು ಆತಂಕಕ್ಕೊಳಗಾದ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ. ಸೇಟು ಇಂದ ವಂಚನೆಗೊಳಗಾದವರು ಸೂರ್ಯ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಎಂದು ಹಣ ಕಟ್ಟಿದವರು ಈಗ ಬೀದಿಗೆ ಬಿದ್ದಿದ್ದಾರೆ. ಇತ್ತ ಹಬ್ಬವೂ ಇಲ್ಲ, ಅತ್ತ ಹಣವೂ ಇಲ್ಲ, ಹಣ ಕಟ್ಟಿಸಿಕೊಂಡವನು ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆ ಕುರಿತು ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

  • ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ – ಓರ್ವ ಸಾವು

    ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ – ಓರ್ವ ಸಾವು

    ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ (Electronic City) ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಜುನಾಥ್ (52) ಮೃತ ದುರ್ದೈವಿ.

    ಫ್ಲೈಓವರ್ (Flyover) ಮೇಲೆ ಕಾರೊಂದು ಬ್ರೇಕ್ ಡೌನ್ ಆಗಿ ನಿಂತಿತ್ತು. ಅದನ್ನು ಸರಿಪಡಿಸಲು ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಹೋಗಿದ್ದರು. ಸಿಬ್ಬಂದಿ ಸತೀಶ್ ಹಾಗೂ ರಾಜಣ್ಣ ಎಂಬುವವರು ಟೋಯಿಂಗ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಫ್ಲೈಓವರ್ ಮೇಲೆ ವೇಗವಾಗಿ ಬಂದ ಬುಲೆರೋ ಪಿಕಪ್‌ವೊಂದು ಕಾರು ದುರಸ್ತಿ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: Udupi: ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಕೊಯ್ದ ಪತಿ – ಕತ್ತಿ ಹಿಡಿದು ನರ್ತಿಸುತ್ತಾ ವಿಕೃತಿ

    ಬುಲೆರೋ ಬರುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸತೀಶ್ ಪಕ್ಕಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಇದರಿಂದ ರಾಜಣ್ಣ ಎಂಬುವರಿಗೆ ಬುಲೆರೋ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬ್ರೇಕ್ ಡೌನ್ ಆಗಿದ್ದ ಕಾರಿನ ಫೋಟೋ ತೆಗೆಯುತ್ತಿದ್ದ ಮಂಜುನಾಥ್ ಅವರಿಗೂ ಬುಲೆರೋ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಪರಶುರಾಮ್‌ ಪತ್ನಿಗೆ ಸರ್ಕಾರಿ ಕೆಲಸ, ಪರಿಹಾರ ಕೊಡೋದಕ್ಕೆ ತೀರ್ಮಾನ – ಪರಮೇಶ್ವರ್‌

    ಡಿಕ್ಕಿ ಹೊಡೆದ ರಭಸಕ್ಕೆ ಮಂಜುನಾಥ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬುಲೆರೋ ಪಿಕಪ್ ಪಲ್ಟಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Wayanad Landslides | ಸೂಚಿಪ್ಪಾರ ಫಾಲ್ಸ್‌ನಲ್ಲಿ 11 ಶವ ಪತ್ತೆ – ಕಣ್ಣಿಗೆ ರಾಚುತ್ತಿದೆ ಹೃದಯವಿದ್ರಾವಕ ದೃಶ್ಯ

  • ಆನೇಕಲ್‌ನಲ್ಲಿ ತುಪಾಕಿ ಸದ್ದು – ಸಿನಿಮೀಯ ಶೈಲಿಯಲ್ಲಿ ಕಾಂಗ್ರೆಸ್‌ ಪುರಸಭಾ ಸದಸ್ಯ ಹಂತಕನ ಬಂಧನ

    ಆನೇಕಲ್‌ನಲ್ಲಿ ತುಪಾಕಿ ಸದ್ದು – ಸಿನಿಮೀಯ ಶೈಲಿಯಲ್ಲಿ ಕಾಂಗ್ರೆಸ್‌ ಪುರಸಭಾ ಸದಸ್ಯ ಹಂತಕನ ಬಂಧನ

    ಬೆಂಗಳೂರು: ಪುರಸಭೆಯ ಕಾಂಗ್ರೆಸ್‌ ಸದಸ್ಯ ರವಿ ಹಂತಕನ ಕಾಲಿಗೆ ಗುಂಡು ಹಾರಿಸಿ, ಸಿನಿಮೀಯ ಶೈಲಿಯಲ್ಲಿ ಆನೆಕಲ್‌ ಪೊಲೀಸರು ಹಂತಕನನ್ನು ಬಂಧಿಸಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ (Anekal) ನಡೆದಿದೆ. ಹಂತಕನನ್ನು ಕಾರ್ತಿಕ್ ಅಲಿಯಾಸ್‌ ಜೆಕೆ ಎಂದು ಗುರುತಿಸಲಾಗಿದೆ.

    ಸಿನಿಮೀಯ ಸ್ಟೈಲ್‌ನಲ್ಲಿ ಅರೆಸ್ಟ್‌:
    ಇತ್ತೀಚೆಗಷ್ಟೇ ನಡುರಸ್ತೆಯಲ್ಲೇ ಪುರಸಭಾ ಸದಸ್ಯ ರವಿ ಅವರನ್ನ ಬರ್ಬರವಾಗಿ ಕೊಲೆ ಮಾಡಿದ್ದ ಘಟನೆ ಆನೇಕಲ್ ಪಟ್ಟಣದ ಬಹದ್ದೂರ್‌ಪುರದ ಬಳಿ ನಡೆದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡ ಆನೇಕಲ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    ಆರೋಪಿ ಕಳೆದ ಒಂದು ವಾರದಿಂದಲೂ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ. ಈತನ ಬಂಧನಕ್ಕಾಗಿ ಎರಡು ವಿಶೇಷ ತಂಡಗಳನ್ನ ನಿಯೋಜಿಸಲಾಗಿತ್ತು. ಬುಧವಾರ (ಇಂದು) ಮುಂಜಾನೆ ಮೈಸೂರಮ್ಮನದೊಡ್ಡಿ ಬಳಿ ಆರೋಪಿ ಅಡಗಿರುವುದು ಗೊತ್ತಾಗಿ, ಆತನನ್ನ ಬಂಧಿಸಲು ಮುಂದಾಗಿದ್ದರು. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ – ಕಬಿನಿಯಿಂದ 80,000 ಕ್ಯುಸೆಕ್‌ ನೀರು ಹೊರಕ್ಕೆ

    ಪೊಲೀಸರು ಬಂಧಿಸಲು ಮುಂದಾದಾಗ ಪೇದೆ ಸುರೇಶ್‌ ಮೇಲೆಯೇ ಆರೋಪಿ ಕಾರ್ತಿಕ್‌ ಹಲ್ಲೆ ನಡೆಸಿದ್ದ. ಇದರಿಂದ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ ಪೊಲೀಸರು ಶರಣಾಗುವಂತೆ ಸೂಚನೆ ಕೊಟ್ಟರು. ಆದರೂ ಮಾರಕಸ್ತ್ರ ಹಿಡಿದು ಮುನ್ನುಗುತ್ತಿದ್ದ ವೇಳೆ ಆನೇಕಲ್‌ ಇನ್ಸ್‌ಪೆಕ್ಟರ್‌ ತಿಪ್ಪೇಸ್ವಾಮಿ ಅವರು, ಆರೋಪಿ ಕಾರ್ತಿಕ್‌ ಕಾಲಿಗೆ ಗುಂಡು ಹಾರಿಸಿದರು. ಆರೋಪಿ ಬಲಗಾಲಿಗೆ ಗುಂಡು ತಾಗಿತು. ಬಳಿಕ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು. ಇದನ್ನೂ ಓದಿ: ಮೂಳೆ ಶಸ್ತ್ರಚಿಕಿತ್ಸೆಯಾಗಿದೆ ಮನೆ ಊಟ ಕೊಡಿ – ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರ ಬರೆದ ದರ್ಶನ್‌!

  • ಆನೇಕಲ್‌: ಕಾಂಗ್ರೆಸ್‌ ಪುರಸಭಾ ಸದಸ್ಯನ ಬರ್ಬರ ಕೊಲೆ – ಹೊಂಚು ಹಾಕಿ ಹತ್ಯೆ

    ಆನೇಕಲ್‌: ಕಾಂಗ್ರೆಸ್‌ ಪುರಸಭಾ ಸದಸ್ಯನ ಬರ್ಬರ ಕೊಲೆ – ಹೊಂಚು ಹಾಕಿ ಹತ್ಯೆ

    ಬೆಂಗಳೂರು: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭಾ ಸದಸ್ಯನನ್ನ (Congress Municipal Councilor) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ (Anekal) ಪಟ್ಟಣದ ಬಹದ್ದೂರ್‌ಪುರದ ಬಳಿ ನಡೆದಿದೆ.

    ಕಾಂಗ್ರೆಸ್‌ ಪಕ್ಷದ (Congress Party) ಪುರಸಭಾ ಸದಸ್ಯ ರವಿ ಕೊಲೆಯಾದ ವ್ಯಕ್ತಿ. ಹೊಂಚು ಹಾಕಿ ಹಂತಕರು ಕೊಲೆ ಮಾಡಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಹಂತಕರು ಎಸ್ಕೇಪ್‌ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ದರ್ಶನ್ ಸರ್ ನರಕ ಅನುಭವಿಸ್ತಿದ್ದಾರೆ: ಜೈಲಿನಲ್ಲಿದ್ಧ ಖೈದಿ ಸಿದ್ಧಾರೂಢ

    ಏನಿದು ಭೀಕರ ಕೃತ್ಯ?
    ಕಳೆದ 15 ದಿನಗಳಿಂದಲೂ ಯುವಕರ ಗ್ಯಾಂಗ್‌ವೊಂದು ಲಾಂಗ್‌ ಹಿಡಿದು ಓಡಾಡುತ್ತಿತ್ತು. ಈ ಬಗ್ಗೆ ʻಪಬ್ಲಿಕ್‌ ಟಿವಿʼ ವರದಿ ಮಾಡಿ ಎಚ್ಚರಿಸಿತ್ತು. ಇದೀಗ ಲಾಂಗ್‌ ಹಿಡಿದು ಓಡಾಡುತ್ತಿದ್ದ ಅದೇ ಯುವಕರ ಗ್ಯಾಂಗ್‌ನಿಂದ ಬಹದ್ದೂರ್‌ಪುರದ ಬಳಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಿದ್ದಾರೆ.

    ಸದ್ಯ ಹಳೇ ವೈಷಮ್ಯಕ್ಕೆ ಹಂತಕರು ಸಿಕ್ಕ ಸಿಕ್ಕ ಕಡೆಗಳಲ್ಲಿ ಮಚ್ಚು ಬೀಸಿ ಕೊಲೆಗೈದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಭರದ ಸಿದ್ಧತೆ – 18 ಆನೆಗಳು ಗುರುತು

  • ಆನೇಕಲ್‌ನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿ

    ಆನೇಕಲ್‌ನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿ

    ಬೆಂಗಳೂರು: ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್‌ವೊಬ್ಬರು (Forest Guard) ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಮಾದಪ್ಪ (45) ಆನೆ ದಾಳಿಗೆ ಮೃತಪಟ್ಟ ಪಾರೆಸ್ಟ್ ಗಾರ್ಡ್. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

    ರಾತ್ರಿ 11 ಗಂಟೆ ಸುಮಾರಿಗೆ ಕಾಡಾನೆ ಬಂದಿತ್ತು. ಆನೆ ಬಂದಿರುವುದನ್ನು ನೋಡಿ ಫಾರೆಸ್ಟ್ ಗಾರ್ಡ್ ಓಡಿಸಲು ಹೋಗಿದ್ದರು. ಆಗ ಮಾದಪ್ಪನ ಮೇಲೆ ಆನೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾದಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕಳೆದ ಆರು ತಿಂಗಳಲ್ಲಿ ಒಂದೇ ಗ್ರಾಮದ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ರಾತ್ರಿ 11 ಗಂಟೆಯಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಿಣಾಮವಾಗಿ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ದುರ್ಮರಣ

    ಪದೇ ಪದೆ ಆನೆ ದಾಳಿಗೆ ಜನ ಬಲಿಯಾಗುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ದುಡಿಸಿಕೊಂಡು ಯಾವುದೇ ಪರಿಹಾರ ನೀಡುತ್ತಿಲ್ಲ. ಜೀವಕ್ಕೆ ಬೆಲೆ ಇಲ್ಲದಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

  • 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ – ತಂದೆ ಅರೆಸ್ಟ್

    – ಯಾರಿಗೂ ವಿಷಯ ಹೇಳದಂತೆ ತಾಯಿಗೆ ಆಮಿಷ

    ಬೆಂಗಳೂರು: 6 ವರ್ಷದ ಮೊಮ್ಮಗಳ (Grand Daughter) ಮೇಲೆ ಆಕೆಯ ತಾತನೇ (Grandfather) ಅತ್ಯಾಚಾರವೆಸಗಿರುವ (Rape) ಘಟನೆ ಹುಳಿಮಾವು (Hulimavu) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಈ ಬಗ್ಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಹುಳಿಮಾವು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ತಂದೆ ರಂಜಿತ್ ಕುಮಾರ್‌ನನ್ನು (35) ಬಂಧಿಸಲಾಗಿದೆ. ಆರೋಪಿಗಳು ಮೂಲತಃ ತಮಿಳುನಾಡು ಮೂಲದವರಾಗಿದ್ದು, ಪ್ರಸ್ತುತ ಹುಳಿಮಾವು ಸಮೀಪ ವೇಣುಗೋಪಾಲ್ ನಗರದ ನಿವಾಸಿಯಾಗಿದ್ದರು. ರಂಜಿತ್ ಕುಮಾರ್ ತಂದೆ ಚಕ್ರವರ್ತಿ (60), ಅತ್ತೆ ವಿಜಯಮ್ಮ (50) ಹಾಗೂ ಇಬ್ಬರು ಸಹೋದರರು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ – ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

    ತಂದೆ ರಂಜಿತ್ ಕುಮಾರ್ ಅಜ್ಜಿ, ಚಿಕ್ಕಂಪ್ಪದಿರು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದ ಎನ್ನಲಾಗಿದೆ. ತಾಯಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಯಾರಿಗೂ ಹೇಳಿದಂತೆ ತಾಯಿಯ ಬಳಿ ತಂದೆ, ಅತ್ತೆ, ಮಾವ ಹಾಗೂ ಚಿಕ್ಕಪ್ಪಂದಿರು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ, ಚಿನ್ನದ ಒಡವೆ ಕೊಡಿಸುತ್ತೇವೆ, ವಿಷಯ ಯಾರಿಗೂ ಗೊತ್ತಾಗಬಾರದು ಎಂದು ಧಮ್ಕಿ ಕೂಡ ಹಾಕಿದ್ದಾರೆ. ಬಳಿಕ ತಾಯಿ ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಹುಳಿಮಾವು ಪೊಲೀಸ್ ಠಾಣೆಗೆ ಬಂದು ಘಟನೆಯ ಬಗ್ಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಸುಳ್ಳು ಅತ್ಯಾಚಾರ ಕೇಸ್ – ದೂರುದಾರೆ ಸೇರಿ 13 ಜನರಿಗೆ ಜೈಲು

    ದೂರಿನ ಆಧಾರದಲ್ಲಿ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿ ಚಕ್ರವರ್ತಿ, ಅತ್ತೆ ವಿಜಯಮ್ಮ ಹಾಗೂ ಇಬ್ಬರು ಸಹೋದರರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಂತ್ರಸ್ತ ಬಾಲಕಿ ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಹಾಲನ್ನು ಹಾಲಾಹಲ ಮಾಡಿದೆ: ಆರ್.ಅಶೋಕ್