Tag: anganwadi activist

  • ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ

    ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ

    ತುಮಕೂರು: ಅಂಗನವಾಡಿ ಕಾರ್ಯಕರ್ತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಣಿಗಲ್ ತಾಲೂಕಿನ ನಾಗೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

    ಗೀತಾ (29) ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ. ಕಾರ್ಯಕರ್ತೆಯು ಹಿಂಬಡ್ತಿ ನೀಡಿದ ಕಾರಣಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಗೇನಹಳ್ಳಿ ಮಿನಿ ಅಂಗನವಾಡಿ ಕೇಂದ್ರದಿಂದ ಕಟ್ಟಿಗೇನಹಳ್ಳಿ ಕೇಂದ್ರಕ್ಕೆ ಮುಂಬಡ್ತಿ ನೀಡಿತ್ತು. ಮುಂಬಡ್ತಿಯಿಂದ ಹಿಂಬಡ್ತಿ ಆದೇಶ ನೀಡಿದಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    ಗೀತಾ ಅವರು ಮನೆಯಲ್ಲೇ ಸೀರೆಯಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಕುಟುಂಬದವರೇ ಅವರು ನೇಣು ಹಾಕಿಕೊಳ್ಳುವುದನ್ನು ಕಂಡು ನೇಣಿನ ಕುಣಿಕೆಯನ್ನ ಬಿಚ್ಚಿದ್ದಾರೆ. ಅವರು ಕಳೆದ ಎರಡು ದಿನಗಳಿಂದಲೂ ಊಟ ಮಾಡದೇ ಇದ್ದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ

    ಗೀತಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಸಿಡಿಪಿಒ ಅನುಷಾ, ಗಂಗಭೈರಮ್ಮ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈಗ ಅವರಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆಯು ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಪೋಷನ್ ಅಭಿಯಾನದ ಪ್ರಗತಿ ಸಭೆ ನಡೆಸಿದ ಶಶಿಕಲಾ ಜೊಲ್ಲೆ

    ಪೋಷನ್ ಅಭಿಯಾನದ ಪ್ರಗತಿ ಸಭೆ ನಡೆಸಿದ ಶಶಿಕಲಾ ಜೊಲ್ಲೆ

    ಬೆಂಗಳೂರು: ರಾಷ್ಟ್ರೀಯ ಪೋಷನ್ ಅಭಿಯಾನದ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಗುರಿ ನೀಡಿದ್ದಾರೆ.

    ಪೋಷನ್ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಬಹುಮಹಡಿ ಕಟ್ಟಡದ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ಶಶಿಕಲಾ ಜೊಲ್ಲೆಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಅಭಿಯಾನದ ಕುರಿತಂತೆ ಪ್ರತಿಯೊಂದು ಜಿಲ್ಲೆಗಳ ಉಪನಿರ್ದೇಶಕರ ಜೊತೆಗೆ ಮಾತನಾಡಿ ಚಟುವಟಿಕೆಗಳ ಭೌತಿಕ ಹಾಗೂ ಆರ್ಥಿಕ ಮಾಹಿತಿ ಪಡೆದರು. ಅಲ್ಲದೆ ಅಭಿಯಾನದ ಜಾರಿಗೆ ಇರುವ ಸಮಸ್ಯೆಗಳ ಕುರಿತಂತೆಯೂ ಮಾಹಿತಿ ಪಡೆದರು. ಪೋಷನ್ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ಐಎಲ್‍ಎ ತರಬೇತಿ ಕಾರ್ಯಕ್ರಮ, ಇ-ಐಎಲ್‍ಎ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಇದೇ ವೇಳೆ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಸಚಿವೆಯರ ಗಮನಕ್ಕೆ ತಂದರು. ನಂತರ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆಯನ್ನು ಲಿಖಿತ ರೂಪದಲ್ಲಿ ಆಯುಕ್ತರಿಗೆ ಸಲ್ಲಿಸುವಂತೆ ಸೂಚಿಸಿದರು. ಅಲ್ಲದೆ ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

    ಇದೇ ಸಮಯದಲ್ಲಿ ಈ ಅಭಿಯಾನದ ಜಾರಿಯಲ್ಲಿ ಎರಡನೇ ಸ್ಥಾನದಲ್ಲಿರುವುದಕ್ಕೆ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಮುಂದಿನ ಸಭೆಯ ವೇಳೆಗೆ ದೇಶದಲ್ಲಿ ಈ ಅಭಿಯಾನ ಜಾರಿಗೊಳಿಸುವುದರಲ್ಲಿ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗೆಳಿಗೆ ಗುರಿ ನೀಡಿದರು. ಸರ್ಕಾರದ ಯೋಜನೆ ಜಾರಿಯಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.