Tag: anganwadi

  • ಅಂಗನವಾಡಿಯಲ್ಲಿ ಕಳಪೆ ಆಹಾರ- ಕೆಂಡಾಮಂಡಲವಾಗಿ ಸಭೆಯಲ್ಲಿ ಅಧಿಕಾರಿಗಳ ಮೈಚಳಿ ಬಿಡಿಸಿದ ಜಿ.ಪಂ. ಅಧ್ಯಕ್ಷೆ

    ಅಂಗನವಾಡಿಯಲ್ಲಿ ಕಳಪೆ ಆಹಾರ- ಕೆಂಡಾಮಂಡಲವಾಗಿ ಸಭೆಯಲ್ಲಿ ಅಧಿಕಾರಿಗಳ ಮೈಚಳಿ ಬಿಡಿಸಿದ ಜಿ.ಪಂ. ಅಧ್ಯಕ್ಷೆ

    ಗದಗ: ಬಡ ಮಕ್ಕಳಿಗೆ ಪೌಷ್ಟಿಕ ಆಹಾರಕ್ಕಾಗಿ ಸರ್ಕಾರ ಕೋಟಿ ಕೋಟಿ ಹಣ ನೀಡುತ್ತಿದೆ. ಆದರೆ ಜಿಲ್ಲೆಯ ಅಂಗನವಾಡಿಯ ಅಧಿಕಾರಿಗಳು ಮಕ್ಕಳಿಗೆ ಕಳಪೆ ಆಹಾರವನ್ನು ನೀಡುತ್ತಿದ್ದಾರೆ.

    ರವೆ, ಶೇಂಗಾದಲ್ಲಿ ಹುಳಗಳು ಸಾರ್ ಹುಳಗಳು, ಕಳಪೆ ಗುಣಮಟ್ಟದ ಹೆಸರುಕಾಳು, ಕಡಲೆಕಾಳು, ತೊಗರಿ ಬೆಳೆ, ಕೆಟ್ಟು ಹೋಗಿರುವ ಬೆಲ್ಲ ಇದು ಬಡ ಮಕ್ಕಳ ಅಪೌಷ್ಟಿಕತೆ ನೀಗಿಸಲು ಅಂಗನವಾಡಿ ಕೇಂದ್ರಗಳಿಗೆ ಸರ್ಕಾರ ನೀಡುವ ಆಹಾರದಲ್ಲಿ ಕಂಡು ಬಂದಿದೆ.

    ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ರೂಪಾ ಅಂಗನವಾಡಿ ಎಮ್.ಎಸ್.ಪಿ.ಸಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದಾಗ ಈ ಕಳಪೆ ಆಹಾರ ಮತ್ತು ಅಧಿಕಾರಿಗಳ ನಿಜ ಬಣ್ಣ ಬಯಲಾಗಿದೆ. ಇಂತಹ ಕಳಪೆ ಆಹಾರವನ್ನು ಮಕ್ಕಳು ತಿಂದ್ರೆ ಪೌಷ್ಟಿಕಾಂಶ ಬರಲು ಹೇಗೆ ಸಾಧ್ಯ ಅಂತ ಅಧ್ಯಕ್ಷೆ ರೂಪಾ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

    ಗದಗದ ಎಂಎಸ್‍ಪಿಸಿ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಸಾಮಗ್ರಿಗಳ ಪೂರೈಕೆ ಮಾಡುತ್ತಿದ್ದು, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹೀಗಾಗಿ ಕಳಪೆ ಆಹಾರ ಪೂರೈಕೆ ಮಾಡಿದ ಅಧಿಕಾರಿಗಳು, ಗುತ್ತಿಗೆದಾರರನ್ನ ಸಸ್ಪೆಂಡ್ ಮಾಡುವಂತೆ ಜಿಲ್ಲಾ ಪಂಚಾಯ್ತಿ ಸಿಇಓ ಮಂಜುನಾಥ್ ಹಾಗೂ ಡಿಸಿಗೆ ಜಿಪಂ ಅಧ್ಯಕ್ಷೆ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಹೇಳಿದ್ದಾರೆ.

    ಪ್ರತಿಯೊಂದು ಆಹಾರ ಪದಾರ್ಥಗಳ ತೂಕದಲ್ಲೂ ಭಾರೀ ಮೋಸ ನಡೆಯುತ್ತಿರುವುದು ಸಹ ಕಂಡು ಬಂದಿದೆ. ಇದರಲ್ಲಿ ಎಂಎಸ್‍ಪಿಸಿ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂಬ ಆರೋಪವಿದೆ. ಇನ್ನಾದರೂ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿ ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕುದಿಯುತ್ತಿದ್ದ ಬೇಳೆ ಸಾರಿನ ಪಾತ್ರೆಗೆ ಬಿದ್ದು 5ರ ಬಾಲೆ ಸಾವು!

    ಕುದಿಯುತ್ತಿದ್ದ ಬೇಳೆ ಸಾರಿನ ಪಾತ್ರೆಗೆ ಬಿದ್ದು 5ರ ಬಾಲೆ ಸಾವು!

    ಭೋಪಾಲ್: ಕುದಿಯುತ್ತಿದ್ದ ಬೇಳೆ ಸಾರಿನ ಪಾತ್ರೆಗೆ ಜಾರಿ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ 5 ವರ್ಷದ ಬಾಲಕಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಶಾಹೆದೊಲ್ ಜಿಲ್ಲೆಯ ಅಂಗನವಾಡಿಯೊಂದರಲ್ಲಿ ನಡೆದಿದೆ.

    ಸುಹಾಸಿನಿ ಬೈಗಾ ಮೃತಪಟ್ಟ ಬಾಲಕಿ. ಘಟನೆ ನಡೆದು 5 ದಿನಗಳಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬಾಲಕಿಯು ಜಬಲ್ಪುರ್ ಖಾಸಗಿ ಆಸ್ಪತೆಯಲ್ಲಿ ಮೃತಪಟ್ಟಿದ್ದಾಳೆ.

    ನಡೆದದ್ದು ಏನು?
    ನಾನು ಪಕ್ಕದ ಕೊಠಡಿಯಲ್ಲಿ ಇದ್ದ ಅಕ್ಕಿಯನ್ನು ತರಲು ಹೋಗಿದ್ದೆ. ಆಗ ಯಾರೋ ಕಿರುಚಿದ ಶಬ್ಧ ಕೇಳಿಸಿತು. ತಕ್ಷಣವೇ ಬಂದು ನೋಡಿದಾಗ ಬಾಲಕಿ ಸಾರ್ ಪಾತ್ರೆಯ ಒಳಗಡೆ ಬಿದ್ದಿದ್ದಳು. ತಕ್ಷಣವೇ ಆಕೆಯನ್ನು ಹೊರ ತೆಗೆದು, ಬಾಲಕಿಯ ತಂದೆಗೆ ಮಾಹಿತಿ ನೀಡಿದೆ. ಅವರು ಶಾಹೆದೊಲ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರು ಎಂದು ಅಂಗನವಾಡಿ ಸಹಾಯಕಿ ಬೈಗಾ ತಿಳಿಸಿದ್ದಾರೆ.

    ಬಾಲಕಿಯ ಚಿಕಿತ್ಸೆಗೆ ಅಡುಗೆ ಸಹಾಯಕಿ 250 ರೂ. ನೀಡಿದ್ದರು. ನಾಲ್ಕು ದಿನಗಳ ಕಾಲ ಚಿಕಿತ್ಸೆ ನೀಡಿದ್ದರೂ, ಪ್ರಕರಣದ ಕುರಿತು ಶಾಹೆದೊಲ್ ಜಿಲ್ಲಾಸ್ಪತ್ರೆ ವೈದ್ಯರು ಪೊಲೀಸರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಮಂಗಳವಾರ ಬಾಲಕಿ ಸ್ಥಿತಿ ಗಂಭೀರವಾಗಿದ್ದರಿಂದ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಇತ್ತ ಬಾಲಕಿ ಪೋಷಕರು ಆಕೆಯನ್ನು ಜಿಲ್ಲಾಸ್ಪತ್ರೆಯಿಂದ ಜಬಲ್ಪುರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪ್ರಕರಣದ ಕುರಿತ ತನಿಖೆ ನಡೆಸುವಂತೆ ಮತ್ತು ನಿಷ್ಕಾಳಜಿ ತೋರಿದ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಹಾರ ಕೇಳಿದ್ದಕ್ಕೆ ಬಾಣಂತಿ ಮೇಲೆ ಅಂಗನವಾಡಿ ಸಹಾಯಕಿಯಿಂದ ಹಲ್ಲೆ!

    ಆಹಾರ ಕೇಳಿದ್ದಕ್ಕೆ ಬಾಣಂತಿ ಮೇಲೆ ಅಂಗನವಾಡಿ ಸಹಾಯಕಿಯಿಂದ ಹಲ್ಲೆ!

    ಕೋಲಾರ: ಮಾತೃಪೂರ್ಣ ಯೋಜನೆಯ ಆಹಾರ ಕೇಳಿದ್ದಕ್ಕೆ ಬಾಣಂತಿಯನ್ನ ಅಂಗನವಾಡಿ ಸಹಾಯಕಿ ಹಾಗೂ ಅವರ ಕುಟುಂಬಸ್ಥರು ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ವಡಗೂರು ಗ್ರಾಮದ ಮಮತಾ ಹಲ್ಲೆಗೊಳಗಾದ ಬಾಣಂತಿ. ಗುರುವಾರ ಮಧ್ಯಾಹ್ನ ಅಂಗನವಾಡಿ ಅಡುಗೆ ಸಹಾಯಕಿ ನಾರಾಯಣಮ್ಮಳನ್ನ ಮಮತಾ ಆಹಾರ ಪದಾರ್ಥ ನೀಡುವಂತೆ ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಬಾಣಂತಿ ಮಮತಾ ಅವರನ್ನ ಅಂಗನವಾಡಿ ಸಹಾಯಕಿ ನಾರಾಯಣಮ್ಮ ಹಾಗೂ ಸಂಬಂಧಿಗಳಾದ ಸಹನಾ, ಪ್ರಮೋದ, ಹನುಮಕ್ಕ ಎಂಬುವವರು ಹಿಗ್ಗಾಮುಗ್ಗಾ ಮನಬಂದಂತೆ ಥಳಿಸಿದ್ದಾರೆ. ಇದರಿಂದ ಅಸ್ವಸ್ಥಳಾಗಿದ್ದ ಮಮತಾಳನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಹಿಂದೆಯೇ ಇಬ್ಬರ ಮಧ್ಯೆ ಮನಸ್ತಾಪ ಇದ್ದು, ಆಹಾರ ಪದಾರ್ಥಗಳನ್ನ ಸರಿಯಾಗಿ ವಿತರಣೆ ಮಾಡುತ್ತಿರಲಿಲ್ಲ. ಹಾಗಾಗಿ ಪ್ರಶ್ನೆ ಮಾಡುತ್ತಿದ್ದ ನನ್ನ ವಿರುದ್ಧ ಜಗಳ ತೆಗೆಯುತ್ತಿದ್ದಳು ಎಂದು ಮಮತಾ ಆರೋಪಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಕುರಿತು ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾತೃ ಪೂರ್ಣ ಯೋಜನೆಯ ಅವ್ಯವಸ್ಥೆ- ಗರ್ಭಿಣಿ, ಮಕ್ಕಳಿಂದ ಬಯಲಲ್ಲೇ ಊಟ!

    ಮಾತೃ ಪೂರ್ಣ ಯೋಜನೆಯ ಅವ್ಯವಸ್ಥೆ- ಗರ್ಭಿಣಿ, ಮಕ್ಕಳಿಂದ ಬಯಲಲ್ಲೇ ಊಟ!

    ಬೆಂಗಳೂರು: ಮಾತೃ ಪೂರ್ಣ ಯೋಜನೆಯ ಅವ್ಯವಸ್ಥೆಯಿಂದಾಗಿ ಗರ್ಭಿಣಿ ಮತ್ತು ಮಕ್ಕಳು ಬಯಲಲ್ಲೇ ಊಟ ಮಾಡುತ್ತಿರುವ ಶೋಚನಿಯ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪುಟ್ಟೇಗೌಡನಪಾಳ್ಯದಲ್ಲಿ ವರದಿಯಾಗಿದೆ.

    ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಪುಟ್ಟೇಗೌಡನಪಾಳ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಮಾತೃ ಪೂರ್ಣ ಯೋಜನೆ ಊಟ ವಿತರಣೆಯು ಅವ್ಯವಸ್ಥೆಯ ಆಗರವಾಗಿದೆ. ಅಂಗನವಾಡಿ ಕೇಂದ್ರದಲ್ಲಿ ನೀಡುವ ಮಾತೃಪೂರ್ಣ ಯೋಜನೆಯ ಊಟಕ್ಕಾಗಿ ಗರ್ಭಿಣಿ ಮತ್ತು ಮಕ್ಕಳು ಪರಿಪಾಟಲು ನಡೆಸುತ್ತಿದ್ದಾರೆ.

    ಗ್ರಾಮದಲ್ಲಿ ಸಾಕಷ್ಟು ವರ್ಷದಿಂದ ಸೂಕ್ತ ಸೂರಿಲ್ಲದೆ ಗರ್ಭಿಣಿ ಮತ್ತು ಮಕ್ಕಳು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ಗ್ರಾಮಸ್ಥರು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಮೊದಲು ಗರ್ಭಿಣಿಯರಿಗೆ ಹಾಗೂ ಪುಟಾಣಿ ಮಕ್ಕಳಿಗೆ ನೇರವಾಗಿ ಮನೆಗೆ ಧವಸ-ಧಾನ್ಯ ನೀಡುತಿದ್ದರು. ಆದರೆ ಈಗ ಮಾತೃ ಪೂರ್ಣ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರದಲ್ಲಿ ಊಟ ನೀಡುವ ವ್ಯವಸ್ಥೆಯಿಂದಾಗಿ ಅವ್ಯವಸ್ಥೆಗೆ ಕಾರಣವಾಗಿದೆ.

    ಜೆಡಿಎಸ್ ಶಾಸಕ ಆಯ್ಕೆಯಾಗಿರುವ ಕ್ಷೇತ್ರದಲ್ಲಿ ಬಯಲಲ್ಲಿ ಊಟ ಮಾಡುವ ಪರಿಸ್ಥಿತಿ ಎದುರಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನಿಮಗೆ ಮತ ನೀಡಿರುವ ಕ್ಷೇತ್ರದ ದುಸ್ಥಿತಿ ಹಾಗೂ ನೆಲಮಂಗಲ ಜೆಡಿಎಸ್ ಶಾಸಕ ಶ್ರೀನಿವಾಸ ಮೂರ್ತಿಯವರು ಇತ್ತ ಕಡೆ ಗಮನ ಹರಿಸಬೇಕೆಂದು ಗ್ರಾಮಸ್ಥರು ಮನವಿಮಾಡಿಕೊಂಡಿದ್ದಾರೆ.

  • ಯೋಗಿಯನ್ನು ವರಿಸಿದ ಅಂಗನವಾಡಿ ಕಾರ್ಯಕರ್ತೆ!

    ಯೋಗಿಯನ್ನು ವರಿಸಿದ ಅಂಗನವಾಡಿ ಕಾರ್ಯಕರ್ತೆ!

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಂಗನವಾಡಿ ಕಾರ್ಯಕರ್ತೆ ಒಬ್ಬರು ವಿವಾಹವಾಗಿದ್ದಾರೆ.

    ಸುದ್ದಿ ಓದಿ ಕನ್‍ಫ್ಯೂಸ್ ಆಗಬೇಡಿ. ರಾಜ್ಯ ಸರ್ಕಾರದ ಗಮನ ಸೆಳೆಯಲು ಅಂಗನವಾಡಿ ಕಾರ್ಯಕರ್ತೆಯೊಬ್ಬರು ಯೋಗಿ ಆದಿತ್ಯನಾಥ್ ಅವರನ್ನು ವಿವಾಹವಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಉತ್ತರಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಸೀತಾಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ಮಹಿಳಾ ಅಂಗನವಾಡಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷೆ ನೀತು ಸಿಂಗ್ ಅವರು ಆದಿತ್ಯನಾಥ್ ಅವರನ್ನು ವರಿಸಿದ್ದಾರೆ.

    ಪ್ರತಿಭಟನಾ ನಿರತ ಸಾವಿರಾರು ಕಾರ್ಯಕರ್ತೆಯರ ಮಧ್ಯೆ ಯೋಗಿ ಆದಿತ್ಯನಾಥ್ ಅವರ ಭಾವಚಿತ್ರಕ್ಕೆ ಹಾರ ಹಾಕಿ ಅವರನ್ನು ವಿವಾಹವಾಗಿದ್ದಾರೆ. ಈ ಬಗ್ಗೆ ನೀತು ಸಿಂಗ್ ಪ್ರತಿಕ್ರಿಯಿಸಿ, ಶುಕ್ರವಾರ ಯೋಗಿ ಆದಿತ್ಯನಾಥ್ ಅವರು ಸೀತಾಪುರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ನಮ್ಮ ಸಮಸ್ಯೆಯನ್ನು ಬಗೆಹರಿಸುವ ಸಾಧ್ಯತೆಯಿದೆ. ಸಮಸ್ಯೆ ಬಗೆಹರಿದರೆ 4 ಲಕ್ಷ ಮಹಿಳಾ ಕಾರ್ಯಕರ್ತೆಯರಿಗೆ ಸಹಾಯವಾಗಲಿದೆ ಎಂದು ಹೇಳಿದರು.

    ಅಂಗನವಾಡಿ ಕಾರ್ಯಕರ್ತೆಯರು ನಮ್ಮ ಸಮಸ್ಯೆಯನ್ನು ಬಗೆ ಹರಿಸಲು ಹೊಸದಾಗಿ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ 4 ತಿಂಗಳ ಡೆಡ್ ಲೈನ್ ನೀಡಿದ್ದರು. ಈ ಅವಧಿ ಮುಗಿದ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ.ಇದನ್ನೂ ಓದಿ: 15 ಸರ್ಕಾರಿ ರಜೆಗಳನ್ನ ರದ್ದು ಮಾಡಿದ ಯೋಗಿ ಆದಿತ್ಯನಾಥ್

    ಗುಜರಾತ್ ನಲ್ಲಿ ಯೋಗಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಗುಜರಾತ್ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

  • ಪಾಠ ಮಾಡೋ ಜಾಗದಲ್ಲೇ ಅಡುಗೆ- ಗದಗ ಹೆದ್ದಾರಿಯಲ್ಲೊಂದು ಡೇಂಜರಸ್ ಅಂಗನವಾಡಿ

    ಪಾಠ ಮಾಡೋ ಜಾಗದಲ್ಲೇ ಅಡುಗೆ- ಗದಗ ಹೆದ್ದಾರಿಯಲ್ಲೊಂದು ಡೇಂಜರಸ್ ಅಂಗನವಾಡಿ

    ಗದಗ: ಜಿಲ್ಲೆಯ ಬೆಟಗೇರಿಯ ಟರ್ನಲ್ ಪೇಟೆಯಲ್ಲಿ ಅಂಗನವಾಡಿಯಿದೆ. ಕಲಿಯೋಕೆ ನಲಿಯೋಕೆ ಎಂದು ಈ ಅಂಗನವಾಡಿಗೆ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಬರುತ್ತಿದ್ದಾರೆ. ಆದರೆ ಇದರ ಸ್ಥಿತಿ ಆ ದೇವರಿಗೆ ಪ್ರೀತಿ.

    ಈ ಅಂಗನವಾಡಿಯಲ್ಲಿ ಮಕ್ಕಳಿಗೆ ಕೂರಕ್ಕೆ ಜಾಗ ಸಾಕಾಗಲ್ಲ ಅಂತಾದರಲ್ಲಿ ಅಲ್ಲೇ ಅಡುಗೆ ಕೂಡ ಮಾಡುತ್ತಾರೆ. ಸಿಲಿಂಡರ್ ಅಲ್ಲಿಯೇ ಇರೋದರಿಂದ ಅಗ್ನಿ ಅವಘಡ ಸಂಭವಿಸೋ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಪಾಲಾ ಬದಾಮಿ ರಾಜ್ಯ ಹೆದ್ದಾರಿ ಪಕ್ಕದಲ್ಲೇ ಈ ಅಂಗನವಾಡಿ ಇರೋದ್ರಿಂದ ವಾಹನ ಸಂಚಾರ ಕೂಡ ಯಥೇಚ್ಚವಾಗಿದೆ.

    ಡೇಂಜರ್ ಝೋನ್ ನಲ್ಲಿರುವ ಈ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರಿಸಿ, ಮಕ್ಕಳ ಜೀವ ಕಾಪಾಡಿ ಎಂದು ಸಿಡಿಪಿಒ ಸೇರಿದಂತೆ ಹಲವು ಅಧಿಕಾರಿಗಳಿಗೆ ಇಲ್ಲಿನ ಸಾರ್ವಜನಿಕರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಾವು ಮಕ್ಕಳನ್ನು ಅಂಗನವಾಡಿಗೆ ಕಳಿಸೋಕೆ ಹಿಂದು-ಮುಂದು ನೋಡುವಂತಾಗಿದೆ ಎಂದು ಪೋಷಕರು ಹೇಳುತ್ತಾರೆ.

    ಇನ್ನು ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಕುರಿತು ಸಿಡಿಪಿಓ ಅವರಿಗೆ ತಿಳಿಸಿದ್ದೇನೆ. ಶೀಘ್ರದಲ್ಲಿ ನಾನು ಭೇಟಿ ನೀಡಿ ಪರಿಶೀಲಿಸಿ ಒಂದು ವಾರದಲ್ಲಿ ಈ ಅಂಗನವಾಡಿ ಕೇಂದ್ರವನ್ನ ಸ್ಥಳಾಂತರ ಮಾಡಿಸುತ್ತೀವಿ ಎಂದು ಹೇಳುತ್ತಾರೆ.


  • ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಬೇಡಿಕೆಗೆ ಮಣಿದ ಸರ್ಕಾರ

    ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಬೇಡಿಕೆಗೆ ಮಣಿದ ಸರ್ಕಾರ

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ರಸ್ತೆಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.

    ಬಜೆಟ್‍ನಲ್ಲಿ ಕಾರ್ಯಕರ್ತೆಯರಿಗೆ 1 ಸಾವಿರ ಗೌರವ ಧನ ಹೆಚ್ಚಿಸಿದ್ದ ಸರ್ಕಾರ, ಇದೀಗ ಮತ್ತೆ 1 ಸಾವಿರ ರೂ ಗೌರವ ಧನ ಹೆಚ್ಚಳ ಮಾಡಿದೆ. ಅಂಗನವಾಡಿ ಸಹಾಯಕಿಯರಿಗೆ ಮತ್ತೆ 500 ಗೌರವಧನ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 8000 ಸಾವಿರ ಗೌರವಧನ ಸಿಕ್ಕಿದರೆ, ಸಹಾಯಕಿಯರಿಗೆ 4 ಸಾವಿರ ರೂ. ಸಿಗಲಿದೆ.

    ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ನಿರ್ಧಾರಕ್ಕೆ ಸಂಘಟನೆಗಳು ಒಪ್ಪಿಕೊಂಡಿದೆ. ಹತ್ತು ಸಾವಿರಕ್ಕೆ ಅವ್ರು ಬೇಡಿಕೆ ಇಟ್ಟಿದ್ರು. ಆದ್ರೆ ಅಷ್ಟೊಂದು ಆಗಲ್ಲ ಎಂದು ಸಭೆಯಲ್ಲಿ ಹೇಳಿದ್ದೇವೆ. ಮುಂದಿನ ಬಜೆಟ್ ನಲ್ಲಿ ಮತ್ತೆ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಕೇಳಬಾರದು ಎಂದು ಹೇಳಿದ್ದೇವೆ. ಸರ್ಕಾರದ ತೀರ್ಮಾನವನ್ನ ಅವ್ರು ಸ್ವಾಗತಿಸಿದ್ದಾರೆ ಎಂದರು.

    ಇದೇ ವೇಳೆ ಮಾತನಾಡಿದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಂಡಿದೆ. ಅಂಗನವಾಡಿಯಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭದ ಬೇಡಿಕೆಯನ್ನು ಇಟ್ಟಿದ್ವಿ, ಸರ್ವಿಸ್ ರೂಲ್ಸ್ ಗೆ  ಸಮಿತಿ ರಚನೆಗೆ ಒಪ್ಪಿಗೆ ನೀಡಲಾಗಿದೆ. ಹೋರಾಟದಲ್ಲಿ ಶೇ. 50 ರಷ್ಟು ಸಫಲರಾಗಿದ್ದೀವಿ ಎಂದು ತಿಳಿಸಿದರು.

    ಕೇಂದ್ರ ಮಾಡಲಿ:
    ಸಂಬಳ ಹೆಚ್ಚಳ ಮಾಡಿದ ಬಳಿಕ ಟ್ವಿಟ್ಟರ್‍ನಲ್ಲಿ ರಾಜ್ಯ ಸರ್ಕಾರ ಈ ಬಾರಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಸಹಾಯಕಿಯರಿಗೆ 1 ಸಾವಿರ ರೂ. ಸಂಬಳವನ್ನು ಹೆಚ್ಚಳ ಮಾಡಿದ್ದೇವೆ. ಇದೇ ರೀತಿ ನೀವು ಸಂಬಳವನ್ನು ಏರಿಸಿ ಎಂದು ಪ್ರಧಾನಿ ಮೋದಿ ಅವರಲ್ಲಿ  ಮನವಿ ಮಾಡಿದ್ದಾರೆ.

    ಮಾರ್ಚ್ 20ರಂದು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 4 ದಿನಗಳ ಕಾಲ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಕಾರ್ಯಕರ್ತೆಯರ ಜೊತೆ ಮಾತುಕತೆ ನಡೆಸಿದ್ದ ಸರ್ಕಾರ, ಈಗ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಚುನಾವಣೆ ಮುಗಿದ ಬಳಿಕ ಏಪ್ರಿಲ್ 10 ರಂದು ಸಭೆ ನಡೆಸಿ ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು.

    ಕಾರ್ಯಕರ್ತೆಯರ ಬೇಡಿಕೆ ಏನಿತ್ತು?
    ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

    ಯಾರ ಪಾಲು ಎಷ್ಟು?
    ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

    ಪ್ರತಿಭಟನೆ ಯಾಕೆ?
    ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

    width=”800″ height=”650″ />

  • ಸಂಧಾನ ಸಕ್ಸಸ್: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

    ಸಂಧಾನ ಸಕ್ಸಸ್: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

    ಬೆಂಗಳೂರು: ಕಳೆದ 4 ದಿನಗಳಿಂದ ನಗರದ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಸರ್ಕಾರದ ಭರವಸೆಯ ಮೇರೆಗೆ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದುಕೊಂಡಿದ್ದಾರೆ.

    ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನಾ ನಿರತರು ಹೋರಾಟವನ್ನು ಕೈಬಿಟ್ಟಿದ್ದಾರೆ. ಸ್ಥಳದಲ್ಲಿ ಮಾತನಾಡಿದ ಉಮಾಶ್ರೀ, ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಏಪ್ರಿಲ್ ರಂದು 10 ರಂದು ಸಭೆ ನಡೆಸಲಾಗುವುದು. ವೇತನ ಸೇರಿದಂತೆ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಹೇಳಿದ್ದಾರೆ. ನಾವು ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಸರ್ಕಾರದ ಮೇಲೆ ವಿಶ್ವಾಸವಿಡಿ ಎಂದು ಹೇಳಿದರು.

    ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ತೀವ್ರಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಹಾಗೂ ಇತರ ಮುಖಂಡರನ್ನು ಸಿಎಂ ಗೃಹ ಕಚೇರಿಗೆ ಕರೆದೊಯ್ದಿದ್ದರು.

    ಅಂಗನವಾಡಿ ನೌಕರರ ಪರವಾಗಿ ಗೀತಸಾಹಿತಿ ವಿ.ನಾಗೇಂದ್ರ ಪ್ರಸಾದ್ ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಿ ಬೆಂಬಲ ವ್ಯಕ್ತಪಡಿಸಿದ್ದರು.

    ನರ ಹರಿಯೆಕೂಗಿದರೂ ಮೊರೆ ಕೇಳದೇ ನರಹರಿಯೇ?
    ಬಾಲವಾಡಿಯ ತಾಯಿ ಬಾಗಿಲು ಬಡಿದು ಹೈರಾಣಾಗಿ ಬೀದಿಯಲ್ಲಿ ಮಲಗಿದ್ದಾಳೆ.
    ಅವಳಿಗೆ ಗೊತ್ತಿಲ್ಲ ನಿಮ್ಮ ಬಜೆಟ್ಟು…ಲೆಕ್ಕಾಚಾರ
    ಗೊತ್ತಿರುವುದು ಸ್ಲೇಟು ಮತ್ತು ಅಕ್ಷರ
    ಅವರು ಕೇಳುತ್ತಿರುವುದು ದಿನಕ್ಕೆ 500ರೂಪಾಯಿ.

    ಇಡೀ ಮಂತ್ರಿ ಮಂಡಲ ಒಂದುದಿನ ಗೂಟದ ಕಾರು ನಿಲ್ಲಿಸಿದರೆ ಉಳಿಯುವ ಹಣದಲ್ಲಿ ಒಂದುವರ್ಷ ಆ ತಾಯಂದಿರ ಸಂಬಳ ಕೊಡಬಹುದು.

    ಸಂಯಮದ ಸಮಯ ಮೀರಿ ಹೋಗಿದೆ.. “ಹೆಣ್ಣು ಅಬಲೆ ಎಷ್ಟು ದಿನ ಧರಣಿ ಕೂರುತ್ತಾಳೆ ಬಿಡು” ಎಂಬ ನಿಮ್ಮ ಹಳೇ ಥಿಯರಿಗಳನ್ನು ಬಿಡಿ.
    ಜನ ಅವರ ಜೊತೆ ಇದ್ದಾರೆ. ಜನರ ಜೊತೆ ನೀವೂ ಇದ್ದರೆ ಕ್ಷೇಮ.

    ಕಾರ್ಯಕರ್ತೆಯರ ಬೇಡಿಕೆ ಏನಿತ್ತು?
    ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

    ಯಾರ ಪಾಲು ಎಷ್ಟು?
    ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

    ಪ್ರತಿಭಟನೆ ಯಾಕೆ?
    ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

  • ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

    ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಸಂಬಳ ಏರಿಕೆಗೆ ಆಗ್ರಹಿಸಿ ಬೀದಿಯಲ್ಲಿ ನಿಂತು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೆ, ಸರ್ಕಾರ ಸಮಸ್ಯೆಯನ್ನು ಬಗೆ ಹರಿಸುವ ಬದಲು ಕೇಂದ್ರ ಸರ್ಕಾರ ಅನುದಾನ ಕೊಡುತ್ತಿಲ್ಲ ಎನ್ನುವ ವಾದವನ್ನು ಮುಂದಿಟ್ಟಿದೆ.

    ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ನಿಯಮ 69ರ ಅಡಿ ಚರ್ಚೆ ಆರಂಭವಾಯಿತು. ಪ್ರತಿಪಕ್ಷದ ನಾಯಕರು ಸರ್ಕಾರ ನಡೆಯನ್ನು ಟೀಕಿಸಿ ವಾಗ್ದಾಳಿ ನಡೆಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಮಾತನಾಡಿ ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಅಸಮಾಧಾನ ವ್ಯಕ್ತಪಡಿಸಿದರು.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿರಾಗಾಂಧಿ ಕಾಲದಲ್ಲಿ ಗೌರವ ಧನ ಕೊಡಲು ಆರಂಭವಾಗಿದ್ದು, ಅಂದಿನಿಂದಲೂ ಕೇಂದ್ರ ಸರ್ಕಾರ ಶೇ.90 ರಷ್ಟು ಗೌರವಧನ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಾಲು ಕಡಿತಗೊಳಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಪ್ರತಿ ವರ್ಷ ನಾವು 500 ರೂ ಹೆಚ್ಚಳ ಮಾಡಿದ್ದೇವೆ. ಆದ್ರೆ 2016-17ರಲ್ಲಿ ಹೆಚ್ಚಳ ಮಾಡಿಲ್ಲ, ಅದು ಕೇಂದ್ರ ಸರ್ಕಾರದ ಕ್ರಮದಿಂದ ಆಗಿಲ್ಲ. ಬರೀ ಮಾತನಾಡಬಹುದು, ಕಾಳಜಿ ತೋರಿಸಬಹುದು.ಆದ್ರೆ ಕೇಂದ್ರ ಸರ್ಕಾರ ಪಾಲು ಕಡಿಮೆ ಮಾಡಿದ್ದು ಯಾಕೆ? ಇದು ಮಹಿಳಾ ಪರ ಕಾಳಜಿನಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು

    ಸಿಎಂ ಈ ರೀತಿ ಮಾತನ್ನು ಆಡಿದಾಗ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಶಾಸಕ ಸಿಟಿ ರವಿ ಮಾತನಾಡಿ, ಹೆಚ್ಚಿನ ಹಣ ನೀಡಲು ನಿಮಗೇನು ಬಂದಿದೆ? ಗೋವಾ, ತಮಿಳುನಾಡಿನಲ್ಲಿ ಕೊಟ್ಟಿಲ್ವಾ ಎಂದು ಮರು ಪ್ರಶ್ನೆ ಹಾಕಿದರು.

    ಈ ವೇಳೇ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕಾಂಗ್ರೆಸ್ ಶಾಸಕರು ‘ಶೇಮ್ ಶೇಮ್’ ಎಂದು ಘೋಷಣೆ ಕೂಗಿದರೆ, ಸದನದ ಬಾವಿಗಿಳಿದು ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಬಿಜೆಪಿ ಅವರದ್ದು ಭಂಡತನದ ಪರಮಾವಧಿ ಎಂದು ಸಿಎಂ ಹೇಳುತ್ತಿದ್ದಂತೆ ಪ್ರತಿಭಟನೆ ಜೋರಾಗಿ ಕೊನೆಗೆ ಸ್ಪೀಕರ್ ಸದನವನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

    ಹೊರೆಯಾಗಲ್ಲ: ಜಗದೀಶ್ ಶೆಟ್ಟರ್ ಮಾತನಾಡಿ, ಹಿಂದೆ ನಾನು ಸಿಎಂ ಆಗಿದ್ದಾಗ ದಿನಗೂಲಿ ನೌಕರರ ಖಾಯಂ ಮಾಡಿದ್ದೇನೆ. ಕೆಳಹಂತದ ನೌಕರರ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಪೌರ ಕಾರ್ಮಿಕರನ್ನು ಖಾಯಂ ಮಾಡಿ. ಅದಕ್ಕೆ ಸಂಬಂಧಿಸಿದ ಯಾವುದೇ ಬಿಲ್ ತಂದ್ರೂ ಬೆಂಬಲಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಟ 10,000 ರೂ ವೇತನ ನಿಗದಿ ಪಡಿಸಿ. ಹೆಣ್ಣುಮಕ್ಕಳು ಕಣ್ಣೀರು ಹಾಕಿ ಶಾಪ ಹಾಕಿದ್ರೆ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ. ನಿನ್ನೆ ಇಡೀ ರಾತ್ರಿ ಬೀದಿಯಲ್ಲಿ ಮಹಿಳೆಯರು ಮಲಗಿದ್ದಾರೆ. ಸಂಬಳ ಏರಿಕೆ ಮಾಡಿದರೆ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುವುದಿಲ್ಲ ಎಂದರು.

    ಶೀಘ್ರವೇ ಸ್ಪಂದಿಸಿ: ಯಾವುದೇ ಒಂದು ಸಮುದಾಯದವರು ಮಾತ್ರ ಕಾರ್ಯ ನಿರ್ವಹಿಸುತ್ತಿಲ್ಲ. ಎಲ್ಲ ಸಮುದಾಯಕ್ಕೆ ಸೇರಿದವರು ಅಂಗನವಾಡಿ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತರ ಮನವಿಗೆ ಸರ್ಕಾರ ಸ್ಪಂದಿಸಲೇಬೇಕು. ಕನಿಷ್ಠ ವೇತನ ಹತ್ತು ಸಾವಿರ ಕೇಳ್ತಿದ್ದಾರೆ ಇದ್ರಲ್ಲಿ ನ್ಯಾಯ ಇದೆ ಎಂದು ಎಚ್‍ಡಿ ಕುಮಾರಸ್ವಾಮಿ ಹೇಳಿದರು.

    ಕಾರ್ಯಕರ್ತೆಯರ ಬೇಡಿಕೆ ಏನು?
    ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದಾರೆ.

    ಪ್ರತಿಭಟನೆ ಯಾಕೆ?
    ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.