Tag: animal

  • ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ

    ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ

    `ಪುಷ್ಪ’ (Pushpa) ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಸದಾ ಹೊಸ ಹೊಸ ಫೋಟೋಶೂಟ್ (Photoshoot) ಮೂಲಕ ಇಂಟರ್‌ನೆಟ್‌ಗೆ ಬೆಂಕಿ ಹಚ್ಚುತ್ತಿರುತ್ತಾರೆ. ಈಗ ಮತ್ತೊಮ್ಮೆ ಬೋಲ್ಡ್ ಲುಕ್‌ನಿಂದ ಕ್ರಶ್ಮಿಕಾ ಎಲ್ಲರ ಗಮನ ಸೆಳೆದಿದ್ದಾರೆ.

    ಕನ್ನಡದ `ಕಿರಿಕ್’ ಬ್ಯೂಟಿಯ ರಶ್ಮಿಕಾ ಮೇಲಿನ ಕ್ರೇಜ್ (Craze) ಹೆಚ್ಚಾಗುತ್ತಲೇ ಇದೆ. ಪುಷ್ಪ, ವಾರಿಸು (Varisu) ಸಿನಿಮಾ ಸಕ್ಸಸ್ ನಂತರ ರಶ್ಮಿಕಾಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿಯಾಗಿದೆ. ಸಂಭಾವನೆ ವಿಚಾರದಲ್ಲೂ ನಟಿ ಸೌಂಡ್ ಮಾಡ್ತಿದ್ದಾರೆ. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‌ ಬಾಸ್‌ ಬೆಡಗಿ ಅಕ್ಷತಾ ಕುಕಿ

    ಇದೀಗ ಸಮಾರಂಭವೊಂದರಲ್ಲಿ ಹಾಟ್ ರಶ್ಮಿಕಾ ಮಂದಣ್ಣ ಎಂಟ್ರಿ ಕೊಟ್ಟಿದ್ದಾರೆ. ಇವೆಂಟ್ ಬಳಿಕ ಚೆಂದದ ಫೋಟೋಶೂಟ್ ಕೂಡ ಮಾಡಿಸಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕಪ್ಪು ಮತ್ತು ಸಿಲ್ವರ್ ಮಿಶ್ರಿತ ಡ್ರೆಸ್‌ನಲ್ಲಿ ರಶ್ಮಿಕಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ರಶ್ಮಿಕಾಳ ಮಾದಕ ನೋಟ ಪಡ್ಡೆಹುಡುಗರ ನಿದ್ದೆಗೆಡಿಸಿದೆ.

    ರಶ್ಮಿಕಾ ಮಂದಣ್ಣ, ಸದ್ಯ ಪುಷ್ಪ 2, ಅನಿಮಲ್ ಮತ್ತು ನಟ ನಿತಿನ್ ಜೊತೆಗಿನ ಹೊಸ ಪ್ರಾಜೆಕ್ಟ್ನಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಬ್ರ್ಯಾಂಡ್‌ಗಳಿಗೆ ರಾಯಭಾರಿಯಾಗಿ ಕಾಣಿಸಿಕೊಳ್ತಿದ್ದಾರೆ.

  • `ಪುಷ್ಪ 2′ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇಲ್ಲಿದೆ ಅಪ್‌ಡೇಟ್

    `ಪುಷ್ಪ 2′ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇಲ್ಲಿದೆ ಅಪ್‌ಡೇಟ್

    `ಪುಷ್ಪ’ (Pushpa) ಚಿತ್ರದ ಸೂಪರ್ ಸಕ್ಸಸ್ ನಂತರ ಪುಷ್ಪ 2 ಚಿತ್ರದ ಶೂಟಿಂಗ್‌ನಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ. `ಪುಷ್ಪ 2′ (Pushpa 2) ನಂತರ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.

    ಸ್ಟೈಲೀಶ್ ಸ್ಟಾರ್ `ಪುಷ್ಪ-2′ ಚಿತ್ರೀಕರಣ ಮುಗಿಯೋ ಮೊದಲೇ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ. ಪುಷ್ಪ-2 ಬಳಿಕ ಅಲ್ಲು ಅರ್ಜುನ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಆದರೀಗ ಕುತೂಹಲಕ್ಕೆ ತೆರೆಬಿದ್ದಿದೆ. ಪ್ಯಾನ್ ಇಂಡಿಯಾ ಸ್ಟಾರ್ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ‌ʻಅರ್ಜುನ್ ರೆಡ್ಡಿʼ ಖ್ಯಾತಿಯ ಸಂದೀಪ್ ರೆಡ್ಡಿ ವಾಂಗ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ.‌ ಇದನ್ನೂ ಓದಿ: ರಶ್ಮಿಕಾ ಬಳಿಕ ಮತ್ತೊಬ್ಬ ಕನ್ನಡತಿ ಜೊತೆ ವಿಜಯ್‌ ದೇವರಕೊಂಡ ರೊಮ್ಯಾನ್ಸ್

    ಮೊದಲ ಸಿನಿಮಾ `ಅರ್ಜುನ್ ರೆಡ್ಡಿ’ (Arjun Reddy) ಸೂಪರ್ ಸಕ್ಸಸ್ ಕಂಡ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ತೆಲುಗಿನಲ್ಲಿ ಅರ್ಜುನ್ ರೆಡ್ಡಿ ಬ್ಲಾಕ್‌ಬಸ್ಟರ್ ಆದ ಬಳಿಕ ಹಿಂದಿಗೆ ಹಾರಿದರು. ಬಾಲಿವುಡ್‌ನಲ್ಲಿ ಕಬೀರ್ ಸಿಂಗ್ ಹೆಸರಿನಲ್ಲಿ `ಅರ್ಜುನ್ ರೆಡ್ಡಿ’ ಸಿನಿಮಾವನ್ನು ರಿಮೇಕ್ ಮಾಡಿದರು. ಕಬೀರ್ ಸಿಂಗ್ ಕೂಡ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತು.

    ಶಾಹಿದ್ ಕಪೂರ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ಸಂದೀಪ್ ರೆಡ್ಡಿ- ರಣ್‌ಬೀರ್‌ ಕಪೂರ್ ಜೊತೆ `ಅನಿಮಲ್’ ಸಿನಿಮಾ ಮಾಡುತ್ತಿದ್ದಾರೆ. `ಅನಿಮಲ್’ನಲ್ಲಿ ರಣಬೀರ್ ಕಪೂರ್ (Ranbir Kapoor) ಜೊತೆ ರಶ್ಮಿಕಾ ಮಂದಣ್ಣ (Rashmika Mandanna) ಕಾಣಿಸಿಕೊಳ್ಳುತ್ತಿದ್ದಾರೆ. `ಅನಿಮಲ್’ (Animal) ಸಿನಿಮಾದ ಚಿತ್ರೀಕರಣ ಮುಗಿಯೋ ಮುನ್ನವೇ ಸಂದೀಪ್ ರೆಡ್ಡಿ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    `ಅರ್ಜುನ್ ರೆಡ್ಡಿ’ ಚಿತ್ರದ ಸಕ್ಸಸ್‌ಫುಲ್ ಡೈರೆಕ್ಷರ್ ಈಗ ಅಲ್ಲು ಅರ್ಜುನ್ ಅವರಂತಹ ಸ್ಟಾರ್ ನಟನ ಜೊತೆ ಕೈ ಜೋಡಿಸಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿ ಬರುತ್ತಿರೋದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

  • ಸೆನ್ಸೇಷನಲ್ ಡೈರೆಕ್ಟರ್ ಜೊತೆ ರಣಬೀರ್ ಕಪೂರ್ ಪ್ಯಾನ್ ಇಂಡಿಯಾ ಸಿನಿಮಾ

    ಸೆನ್ಸೇಷನಲ್ ಡೈರೆಕ್ಟರ್ ಜೊತೆ ರಣಬೀರ್ ಕಪೂರ್ ಪ್ಯಾನ್ ಇಂಡಿಯಾ ಸಿನಿಮಾ

    ರ್ಜುನ್ ರೆಡ್ಡಿ ಚಿತ್ರದ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರೋ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ‘ಕಬೀರ್ ಸಿಂಗ್’ ಮೂಲಕ ಬಾಲಿವುಡ್ ಅಂಗಳದಲ್ಲೂ ಛಾಪು ಮೂಡಿಸಿದ್ದಾರೆ. ಇದೀಗ ಬಿ ಟೌನ್ ಸ್ಟಾರ್ ನಟ  ರಣಬೀರ್ ಕಪೂರ್ ಜೊತೆಗೂಡಿ ಪ್ಯಾನ್ ಇಂಡಿಯಾ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಚಿತ್ರಕ್ಕೆ ‘ಅನಿಮಲ್’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರದ ಮೂಲಕ ರಣಬೀರ್ ಕಪೂರ್ ಆಕ್ಷನ್ ಹೀರೋ ಆಗಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಹೊಸ ವರ್ಷದ ಸಂಭ್ರಮಕ್ಕೆ ‘ಅನಿಮಲ್’ ಚಿತ್ರದ ಫಸ್ಟ್ ಲುಕ್ ಚಿತ್ರತಂಡ ರಿಲೀಸ್ ಮಾಡಿದ್ದು, ರಣಬೀರ್ ನಯಾ ಅವತಾರ ಕಂಡು ಬಿಟೌನ್ ಮಂದಿ ಥ್ರಿಲ್ ಆಗಿದ್ದಾರೆ.

    ‘ಅನಿಮಲ್’ ಚಿತ್ರದಲ್ಲಿ ರಣಬೀರ್ ಕಪೂರ್ ಹಿಂದೆಂದೂ ಕಾಣದ ಹೊಸ ಅವತಾರ ತಾಳಿದ್ದಾರೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮೊದಲ ಬಾರಿ ರಣಬೀರ್ ಕಪೂರ್ ರನ್ನು ಆಕ್ಷನ್ ಹೀರೋ ಆಗಿ ತೆರೆ ಮೇಲೆ ಡಿಫ್ರೆಂಟ್ ಆಗಿ ತೋರಿಸಲು ಸಜ್ಜಾಗಿದ್ದಾರೆ. ರಕ್ತಸಿಕ್ತವಾಗಿರೋ ದೇಹ, ಉದ್ದವಾದ ಕೂದಲು, ಕೈಯಲ್ಲಿ ಕೊಡಲಿ ಹಿಡಿದು ಸಿಗರೇಟ್ ಸೇದುತ್ತಿರುವ ರಣಬೀರ್ ರಗಡ್ ಲುಕ್ ‘ಅನಿಮಲ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಸಬ್ಜೆಕ್ಟ್ ಚಿತ್ರ ಎನ್ನೋದನ್ನು ಖಾತ್ರಿ ಪಡಿಸಿದೆ. ರಣಬೀರ್ ಅಭಿಮಾನಿಗಳು ಕೂಡ ಫಸ್ಟ್ ಲುಕ್ ಕಂಡು ಸಖತ್ ಥ್ರಿಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದನ್ನೂ ಓದಿ: ನಾನಿ ಜೊತೆ ಡುಯೆಟ್ ಹಾಡಲು ರೆಡಿಯಾದ್ರು `ಸೀತಾರಾಮಂ’ ನಟಿ

     

    ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರ್ತಿರುವ ‘ಅನಿಮಲ್’ ಚಿತ್ರದಲ್ಲಿ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಅನಿಲ್ ಕಪೂರ್ ಚಿತ್ರದ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದು, ಉಳಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿರಲಿದ್ದು ಸದ್ಯದಲ್ಲೇ ಚಿತ್ರತಂಡ ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ. ಫಸ್ಟ್ ಲುಕ್ ಜೊತೆಗೆ ಸಿನಿಮಾ ಬಿಡುಗಡೆ ಡೇಟ್ ಕೂಡ ರಿವೀಲ್ ಮಾಡಿರುವ ಚಿತ್ರತಂಡ ಆಗಸ್ಟ್ 11, 2023ಕ್ಕೆ ‘ಅನಿಮಲ್’ ಸಿನಿಮಾವನ್ನು ಹಿಂದಿ, ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಯಲ್ಲಿ ಬಿಡುಗಡೆ ಮಾಡುತ್ತಿದೆ. ಬಿಗ್ ಬಜೆಟ್ ನಲ್ಲಿ ಸಿದ್ದವಾಗುತ್ತಿರುವ ಈ ಚಿತ್ರವನ್ನು ಟಿ ಸಿರೀಸ್, ಬದ್ರಕಾಳಿ ಪಿಕ್ಚರ್ಸ್ ನಡಿ ಭೂಷಣ್ ಕುಮಾರ್, ಪ್ರನಯ್ ರೆಡ್ಡಿ ವಾಂಗ ನಿರ್ಮಾಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ

    ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ

    ಚೆನ್ನೈ: ಕೆಲವೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ‌ (Social Media) ಕಂಡು ಬರುವ ಮುಗ್ದ ಪ್ರಾಣಿಗಳ ವೀಡಿಯೋಗಳು (Animal Video) ಜನರನ್ನು ನಕ್ಕು ನಗಿಸದೇ ಇರಲಾರದು. ಪ್ರಾಣಿಗಳ ಆಟಾಟೋಪಗಳನ್ನು ನೋಡುವುದು ಜನರ ಖಿನ್ನತೆಗೆ ರಾಮಬಾಣವೂ ಹೌದು. ಇಂತಹುದೇ ಒಂದು ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಎಂದಾದರೂ ನೀವು ಜಿಂಕೆಯ (Deer) ಮೇಲೆ ಕೋತಿ (Monkey) ಸವಾರಿ ಮಾಡಿರುವುದನ್ನು ನೋಡಿದ್ದೀರಾ? ಇಲ್ಲ ಎಂದಾದರೆ ಇಲ್ಲೊಂದು ಅಂತಹುದೇ ವೀಡಿಯೋ ವೈರಲ್ ಆಗುತ್ತಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (IIT Madras) ಕ್ಯಾಂಪಸ್‌ನಲ್ಲಿ ಸೆರೆಹಿಡಿಯಲಾದ ಈ ವೀಡಿಯೋ ನೆಟ್ಟಿಗರ ಮನ ಗೆದ್ದಿದೆ.

    ವೀಡಿಯೋದಲ್ಲಿ ಜಿಂಕೆಯೊಂದು ಕ್ಯಾಂಪಸ್‌ನ ಕಟ್ಟಡಗಳ ಸಮೀಪ ಹುಲ್ಲನ್ನು ಮೇಯಲು ಅಡ್ಡಾಡುತ್ತಿದೆ. ಅದರ ಮೇಲೆ ಆರಾಮವಾಗಿ ಕುಳಿತ ಕೋತಿಯೊಂದು ಆ ಗಳಿಗೆಯನ್ನು ಆನಂದಿಸುತ್ತಿದೆ. ತನ್ನ ಮೇಲೆ ಮಂಗ ಸವಾರಿ ಮಾಡುತ್ತಿದ್ದರೂ ಜಿಂಕೆ ಕಿಂಚಿತ್ತೂ ವಿಚಲಿತವಾಗದೇ ಹಾಯಾಗಿ ಓಡಾಡಿಕೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿ `108′ ಸಮಸ್ಯೆ – 2 ತಿಂಗಳಲ್ಲಿ ಬಗೆಹರಿಯಲಿದೆ ಎಂದ ಸುಧಾಕರ್

    ಇದೀಗ ವೀಡಿಯೋ ಭಾರೀ ವೈರಲ್ ಆಗುತ್ತಿರುವುದು ಮಾತ್ರವಲ್ಲದೇ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಐಐಟಿ ಮದ್ರಾಸ್‌ನಲ್ಲಿ ಮಂಗಗಳು ಹೀಗಿರುತ್ತವೆ ಎಂದು ಕೆಲವರು ಹೇಳಿದರೆ, ಇನ್ನೊಬ್ಬರು, ಮಂಗಗಳು ಮನುಷ್ಯರಂತೆ ಪ್ರಾಣಿಗಳ ಮೇಲೆ ಸವಾರಿ ಮಾಡಲು ಹೇಗೆ ಸಾಧ್ಯ ಎಂದು ಆಶ್ಚರ್ಯಪಟ್ಟಿದ್ದಾರೆ. ಇನ್ನೊಬ್ಬರು ಅದು ಐಐಟಿ ಕ್ಯಾಂಪಸ್‌ನ ಮಂಗ, ಹೀಗಾಗಿ ಇಷ್ಟೊಂದು ಸ್ಮಾರ್ಟ್ ಆಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

    ಐಐಟಿ ಮದ್ರಾಸ್ ಕ್ಯಾಂಪಸ್ ಅನ್ನು ಚೆನ್ನೈನ ಗಿಂಡಿ ರಾಷ್ಟ್ರೀಯ ಉದ್ಯಾನವನದ ಬಳಿ ನಿರ್ಮಿಸಲಾಗಿದ್ದು, ಅದರ ಹೆಚ್ಚಿನ ಭಾಗ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ. ಹೀಗಾಗಿ ಅಲ್ಲಿನ ಕ್ಯಾಂಪಸ್‌ನಲ್ಲಿ ಜಿಂಕೆ, ಕೋತಿ ಸೇರಿದಂತೆ ಅನೇಕ ಜಾತಿಯ ಪ್ರಾಣಿಗಳು ಕಂಡುಬರುವುದು ಸರ್ವೇಸಾಮಾನ್ಯವಾಗಿದೆ. ಇದನ್ನೂ ಓದಿ: ಅಪ್ಪು ಗುಣಗಳನ್ನ ಅಳವಡಿಸಿಕೊಳ್ಳಬೇಕು ಎಂದು ಫ್ಯಾನ್ಸ್‌ಗೆ ಉಪ್ಪಿ ಸಂದೇಶ

    Live Tv
    [brid partner=56869869 player=32851 video=960834 autoplay=true]

  • ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಗೋವನ್ನು (Cow) ರಾಷ್ಟ್ರೀಯ ಪ್ರಾಣಿ (National Animal) ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.

    ಇದು ನ್ಯಾಯಲಯದ ಕೆಲಸವಲ್ಲ ಎಂದು ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ನ್ಯಾ. ಅಭಯ್ ಎಸ್.ಓಕಾ ಪೀಠ ಖಾರವಾಗಿ ಪ್ರತಿಕ್ರಿಯಿಸಿದೆ. ಗೋವಂಶ್ ಸೇವಾ ಸದನ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಪೀಠ, ಇದು ನ್ಯಾಯಾಲಯದ ಕೆಲಸವೇ? ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಇಂತಹ ವಿಷಯಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಮತ್ತು ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಹೇಳಿ ಎಂದು ಅರ್ಜಿದಾರರಿಗೆ ಕೇಳಿತು. ಇದನ್ನೂ ಓದಿ: ಮಗಳ ಹೆರಿಗೆಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ

    ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ. ಸರ್ಕಾರವು ಇದನ್ನು ಪರಿಗಣಿಸಲಿ. ನಾನು ಒತ್ತಾಯಿಸುವುದಿಲ್ಲ, ನಾವು ಗೋವುಗಳಿಂದ ಎಲ್ಲವನ್ನೂ ಪಡೆಯುತ್ತೇವೆ ಎಂದು ಹೇಳಿದರು. ಆದಾಗ್ಯೂ, ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು. ಈ ಹಿನ್ನೆಲೆ ಅರ್ಜಿದಾರರು ಅದನ್ನು ಹಿಂಪಡೆಯಲು ನಿರ್ಧರಿಸಿದರು. ಇದನ್ನೂ ಓದಿ:  ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ – ಪೊಲೀಸ್ ಮಹಾಸಂಘ ಸೇರಿ ಎಲ್ಲ ಅರ್ಜಿಗಳು ವಜಾ

    Live Tv
    [brid partner=56869869 player=32851 video=960834 autoplay=true]

  • ಪೊಲೀಸರಿಂದ ಕೊಲೆಯ ಸಾಕ್ಷ್ಯಾಧಾರಗಳನ್ನು ಕದ್ದ ಕೋತಿ!

    ಪೊಲೀಸರಿಂದ ಕೊಲೆಯ ಸಾಕ್ಷ್ಯಾಧಾರಗಳನ್ನು ಕದ್ದ ಕೋತಿ!

    ಜೈಪುರ: ಕೊಲೆ ಮಾಡುವುದು ಅಪರಾಧ. ಕೊಲೆಗೆ ಸಹಕರಿಸುವುದು, ಸಾಕ್ಷ್ಯಾಧಾರಗಳನ್ನೇ ಕಳವು ಮಾಡಿ ಬಚ್ಚಿಡುವುದು, ಅದಕ್ಕಿಂತಲೂ ದೊಡ್ಡ ಅಪರಾಧ. ಆದರಿಲ್ಲಿ ಕೋತಿಯೊಂದು ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮುಖ್ಯ ಸಾಕ್ಷ್ಯಾಧಾರಗಳನ್ನೇ ಕದ್ದು ಪರಾರಿಯಾಗಿರುವ ಅಪರೂಪದ ಘಟನೆ ರಾಜಾಸ್ಥಾನದ ಜೈಪುರದಲ್ಲಿ ಬೆಳಕಿಗೆ ಬಂದಿದೆ.

    MONKEY (1)

    ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಸಾಕ್ಷ್ಯಾಧಾರಗಳನ್ನು ಹಾಜರುಪಡಿಸುವಂತೆ ಸೂಚನೆ ನೀಡಿದಾಗ ಆರೋಪಿಗಳು ಕೊಲೆಗೆ ಬಳಸಿದ್ದ ಚಾಕು ಹಾಗೂ ಇತರ 15 ಸಾಕ್ಷ್ಯಾಧಾರಗಳಿದ್ದ ಬ್ಯಾಗ್ ಅನ್ನು ಕೋತಿ ಕದ್ದಿರುವ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    ಯಾವ ಪ್ರಕರಣದ ಸಾಕ್ಷ್ಯ?: 2016ರಲ್ಲಿ ಶಶಿಕಾಂತ್ ಶರ್ಮಾ ಎಂಬ ವ್ಯಕ್ತಿಯು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಚಾಂದ್ವಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು, ಶವ ಪತ್ತೆಯಾದ ನಂತರ, ಮೃತರ ಸಂಬಂಧಿಕರು ಈ ಬಗ್ಗೆ ತನಿಖೆಗೆ ಒತ್ತಾಯಿಸಿ ಜೈಪುರ-ದೆಹಲಿ ಹೆದ್ದಾರಿಯಲ್ಲಿ ರಸ್ತೆತಡೆ ಪ್ರತಿಭಟನೆಯನ್ನೂ ನಡೆಸಿದ್ದರು. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    MONKEY (1)

    ಇದರಿಂದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು 5 ದಿನಗಳ ಹಿಂದೆಯಷ್ಟೇ ರಾಹುಲ್ ಕಂದೆರಾ ಮತ್ತು ಮೋಹನ್‌ಲಾಲ್ ಕಂದೇರಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣ ದಾಖಲಿಸಿ, ಇಬ್ಬರು ಆರೋಪಿಗಳನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಿತ್ತು. ಈ ಹೊತ್ತಿನಲ್ಲೇ ಆರೋಪಿಗಳಿಂದ ಸಂಗ್ರಹಿಸಲಾಗಿದ್ದ ಸಾಕ್ಷ್ಯಾಧಾರಗಳ ಬ್ಯಾಗ್‌ನ್ನು ಕೋತಿಯೊಂದು ಹೊತ್ತೊಯ್ದಿದೆ. ಕೊಲೆ ಮಾಡಲು ಬಳಸಿದ್ದ ಪ್ರಾಥಮಿಕ ಸಾಕ್ಷ್ಯವಾದ ಚಾಕು ಸಹ ಇದೇ ಬ್ಯಾಗ್‌ನಲ್ಲಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    CRIME 2

    ಬ್ಯಾಗ್ ಕದ್ದದ್ದು ಹೇಗೆ?: ಕೊಲೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ಪೊಲೀಸರು ಕೊಲೆಗೆ ಬಳಸಿದ ಚಾಕು ಹಾಗೂ ಇತರ 15 ಮುಖ್ಯ ಸಾಕ್ಷ್ಯಾಧಾರಗಳನ್ನು ಬ್ಯಾಗ್‌ವೊಂದರಲ್ಲಿಟ್ಟಿದ್ದರು. ಮಲ್ಖಾನದಲ್ಲಿ (ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕೊಠಡಿ) ಸ್ಥಳಾವಕಾಶದ ಕೊರತೆ ಇದ್ದುದರಿಂದ ಬ್ಯಾಗ್ ಅನ್ನು ಮರದ ಕೆಳಗೆ ಇಡಲಾಗಿತ್ತು. ಈ ವೇಳೆ ಕೋತಿ ಅದನ್ನು ಹೊತ್ತಿಕೊಂಡು ಓಡಿಹೋಗಿದೆ. ನ್ಯಾಯಾಲಕ್ಕೆ ಸಾಕ್ಷ್ಯವನ್ನು ಹಾಜರುಪಡಿಸುವಂತೆ ಸೂಚನೆ ನೀಡಿದಾಗ ಪೊಲೀಸರು ಈ ವಿಷಯವನ್ನು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

  • ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್  ನಲ್ಲೂ ರಶ್ಮಿಕಾ ಹವಾ

    ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    ರಶ್ಮಿಕಾ ಮಂದಣ್ಣ ನಟನೆಯ ಬಾಲಿವುಡ್ ನ ಒಂದೇ ಒಂದು ಸಿನಿಮಾ ಕೂಡ ರಿಲಿಸ್ ಆಗಿಲ್ಲ. ಮೂರು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದರೂ, ಒಂದೇ ಒಂದು ಖಾತೆ ಕೂಡ ತೆರೆದಿಲ್ಲ. ಆದರೆ, ಸಾಕಷ್ಟು ಅಭಿಮಾನಿಗಳನ್ನು ಅವರು ಸಂಪಾದನೆ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ನಿನ್ನೆ ಮುಂಬೈಗೆ ಅವರು ಬಂದಿಳಿದಾಗ ಮುತ್ತಿಕೊಂಡ ಅಭಿಮಾನಿಗಳ ಗುಂಪು. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ರಣಬೀರ್ ಕಪೂರ್ ನಟನೆಯ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಮನಾಲೆಯಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಹಾಗಾಗಿ ಆ ಚಿತ್ರೀಕರಣದಲ್ಲಿ ಅವರು ಪಾಲ್ಗೊಂಡಿದ್ದರು. ಸಣ್ಣದೊಂದು ಶೆಡ್ಯೂಲ್ ಮುಗಿಸಿದ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಮುಂಬೈಗೆ ವಾಪಸ್ಸಾಗಿದೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಶೂಟಿಂಗ್ ನಲ್ಲಿ ಪಾಲ್ಗೊಂಡು ಹೈರಾಣಾಗಿದದ್ ರಶ್ಮಿಕಾ ಮಂದಣ್ಣ ರಿಲ್ಯಾಕ್ಸ್ ಗಾಗಿ ರೆಸ್ಟೋರೆಂಟ್ಗೆ ಹೋಗಿದ್ದಾರೆ. ಅಲ್ಲಿಂದ ಆಚೆ ಬರುವಾಗ ನೂರಾರು ಅಭಿಮಾನಿಗಳೂ ರಶ್ಮಿಕಾ ಅವರನ್ನು ಮುತ್ತಿಕೊಂಡಿದ್ದಾರೆ. ಸೆಲ್ಫಿಗಾಗಿ ಕೇಳಿಕೊಂಡಿದ್ದಾರೆ. ನಗುತ್ತಲೇ ಎಲ್ಲರಿಗೂ ಸೆಲ್ಫಿಕೊಟ್ಟಿರುವ ಅವರು, ಅಭಿಮಾನಿಗಳ ಜತೆ ಕೆಲ ಕಾಲ ಕಳೆದಿದ್ದಾರೆ. ಇದನ್ನೂ ಓದಿ : ಪ್ರಧಾನಿ ಮೋದಿ ಕೈ ಸೇರಿದ ಅನುಪಮ್ ಖೇರ್ ತಾಯಿ ಕೊಟ್ಟ ರುದ್ರಾಕ್ಷಿ

    ಕನ್ನಡ ಸಿನಿಮಾ ರಂಗದಿಂದಲೇ ಚಿತ್ರೋದ್ಯಮಕ್ಕೆ ಕಾಲಿಟ್ಟ ರಶ್ಮಿಕಾ, ಮೊದಲ ಸಿನಿಮಾದಲ್ಲೇ ಭಾರೀ ಸಕ್ಸಸ್ ಪಡೆದರು. ಆನಂತರ ಕನ್ನಡದ ಹಲವು ಸ್ಟಾರ್ ನಟರ ಜತೆ ನಟಿಸಿದರು. ಅಲ್ಲಿಂದ ತೆಲುಗು ಸಿನಿಮಾ ರಂಗಕ್ಕೆ ಹಾರಿದರು. ತೆಲುಗಿನಿಂದ ತಮಿಳಿನಲ್ಲೂ ಅನೇಕ ಚಿತ್ರಗಳನ್ನು ಮಾಡಿದರು. ಇತ್ತೀಚೆಗಷ್ಟೇ ತೆರೆ ಕಂಡ ಪುಷ್ಪಾ ಸಿನಿಮಾದ ಮೂಲಕ ನ್ಯಾಷಿನಲ್ ಕ್ರಶ್ ಆಗಿ ರೂಪಗೊಂಡರು. ಇದೀಗ ಬಾಲಿವುಡ್ ನಲ್ಲೂ ರಶ್ಮಿಕಾ ತಮ್ಮ ಛಾಪು ಮೂಡಿಸುತ್ತಿದ್ದಾರೆ.

  • ತಮ್ಮ ಮನೆಯ ಮುದ್ದು ಸದಸ್ಯನನ್ನು ಪರಿಚಯ ಮಾಡಿಸಿದ ಹರಿಪ್ರಿಯಾ

    ತಮ್ಮ ಮನೆಯ ಮುದ್ದು ಸದಸ್ಯನನ್ನು ಪರಿಚಯ ಮಾಡಿಸಿದ ಹರಿಪ್ರಿಯಾ

    ಹುಭಾಷಾ ನಟಿ ಹರಿಪ್ರಿಯಾ ತಮ್ಮ ಮುದ್ದು ನಟನೆ ಮೂಲಕ ಕನ್ನಡಿಗರ ಗಮನ ಸೆಳೆದಿದ್ದಾರೆ. ನಟನೆ ಜೊತೆಗೆ ಪ್ರಾಣಿಗಳ ಮೇಲೆ ಹೆಚ್ಚು ಕಾಳಜಿ ಇರುವ ಈ ನಟಿ ತಮ್ಮ ಮನೆಗೆ ಹೊಸದಾಗಿ ತಂದಿರುವ ಮುದ್ದು ಸದಸ್ಯನನ್ನು ಅಭಿಮಾನಿಗಳಿಗೆ ಪರಿಚಯ ಮಾಡಿಕೊಟ್ಟಿದ್ದಾರೆ.

    ಪ್ರಾಣಿಗಳ ಜೊತೆ ಮನುಷ್ಯರ ಸಂಬಂಧ ಮೀರಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ತಮ್ಮ ವೈಯಕ್ತಿಕ ಜೀವನಕ್ಕೆ ಹೆಚ್ಚು ಸ್ಪಂದಿಸುವ ಜೀವಗಳಾಗಿ ಈ ಮುದ್ದು ಪ್ರಾಣಿಗಳು ಮನುಷ್ಯರಲ್ಲಿ ಬೆರೆತು ಹೋಗಿರುತ್ತೆ. ಇದಕ್ಕೆ ಹರಿಪ್ರಿಯಾ ಸಹ ಹೊರತಲ್ಲ. ಅವರು ಎಲ್ಲೇ ಹೋದರು ಪ್ರಾಣಿಗಳ ಜೊತೆ ಕಾಲ ಕಳೆಯುತ್ತಾ ಇರುತ್ತಾರೆ. ಇದನ್ನೂ ಓದಿ: ಡ್ಯಾನ್ಸ್ ಮಾಸ್ಟರ್‌ಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ

    ಈ ನಟಿ ತಮ್ಮ ಮನೆಗೆ ಹೊಸದಾಗಿ ಸೇರುತ್ತಿರುವ ಮುದ್ದು ಸದಸ್ಯನ ಬಗ್ಗೆ ಟ್ವಟ್ಟರ್‌ನಲ್ಲಿ, ಕ್ರಿಸ್ಟಲ್‍ನನ್ನು ಮೀಟ್ ಮಾಡಿ. ನಮ್ಮ ಕುಟುಂಬಕ್ಕೆ ಹೊಸ ಸೇರ್ಪಡೆ. 3.5 ತಿಂಗಳ ವಯಸ್ಸಿನ ನೀಲಿ ಕಣ್ಣಿನ ಹಸ್ಕಿ. ನಾನು ನನ್ನ ಲಕ್ಕಿಯನ್ನು ಕಳೆದುಕೊಂಡ ನಂತರ, ನಮ್ಮ ಮನೆಗೆ 2 ತಿಂಗಳ ಹಿಂದೆ ಸರ್ಪ್ರೈಸ್ ಗಿಫ್ಟ್ ಆಗಿ ಇವನು ಬಂದನು. ನಾನು ಮತ್ತೆ ನಿಮಗೆ ಲಕ್ಕಿಯನ್ನು ಭೇಟಿ ಮಾಡಿಸುತ್ತಿದ್ದೇನೆ. ಏಕೆಂದರೆ ಲಕ್ಕಿ ಕೂಡ ಡಿಸೆಂಬರ್ 6 ರಂದು ಜನಿಸಿದ್ದು, ಕ್ರಿಸ್ಟಲ್ ಸಹ ಅದೇ ದಿನ ಜನಿಸಿದ್ದಾನೆ. ನಿಮ್ಮ ಆಶೀರ್ವಾವಾದವನ್ನು ಕ್ರಿಸ್ಟಲ್‍ಗೆ ನೀಡಿ ಎಂದು ಬರೆದು ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

    ಈ ಫೋಟೋದಲ್ಲಿ ಮುದ್ದು ಹಸ್ಕಿ ಕ್ಯಾಮರಾ ಕಡೆ ನೋಡುತ್ತಿದ್ದು, ಮುದ್ದಾಗಿ ಕಾಣಿಸುತ್ತಿದೆ. ಹರಿಪ್ರಿಯಾ ತಮ್ಮ ಮನೆಯಲ್ಲಿ ಸಾಕು ಪ್ರಾಣಿಗಳ ಜೊತೆ ಕಾಲಕಳೆಯುವ ವೀಡಿಯೋ ಮತ್ತು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಅಲ್ಲದೆ ಶಿವರಾತ್ರಿ ಸಮಯದಲ್ಲಿ ಉಡುಪಿ ಮಠಕ್ಕೆ ಹೋಗಿದ್ದ ಈ ನಟಿ ಆನೆಗಳ ಜೊತೆ ಸಮಯ ಕಳೆದಿದ್ದು, ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಿನಿಜರ್ನಿಯನ್ನ ಕೊನೆಗೊಳಿಸುತ್ತಾರಾ ನಾಟ್ಯಸುಂದರಿ ಸಾಯಿ ಪಲ್ಲವಿ?

    ಹರಿಪ್ರಿಯಾ ತಮ್ಮ ಬೋಲ್ಡ್ ನಟನೆ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದರು ಪ್ರಸ್ತುತ ಯಾವುದೇ ಹೊಸ ಸಿನಿಮಾಗಳನ್ನು ಘೋಷಣೆ ಮಾಡಿಲ್ಲ.

  • ರಣಬೀರ್ ಕಪೂರ್ ಸ್ಪೆಷಲ್ ಸಾಂಗ್‍ಗೆ ರಶ್ಮಿಕಾ ಸ್ಟೆಪ್

    ರಣಬೀರ್ ಕಪೂರ್ ಸ್ಪೆಷಲ್ ಸಾಂಗ್‍ಗೆ ರಶ್ಮಿಕಾ ಸ್ಟೆಪ್

    ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ತಮ್ಮ ಸಿನಿಜರ್ನಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ಮತ್ತು ಹೆಚ್ಚು ಬೇಡಿಕೆಯಲ್ಲಿರುವ ನಟಿಯರಲ್ಲಿ ಆಗ್ರಸ್ಥಾನದಲ್ಲಿದ್ದಾರೆ. ಬಹುಭಾಷೆಗಳಲ್ಲಿ ಏಕಕಾಲಕ್ಕೆ ನಟಿಸುತ್ತಿರುವ ಈ ನಟಿಗೆ ಮತ್ತೊಂದು ಬಿಗ್ ಆಫರ್ ಸಿಕ್ಕಿದೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಜೊತೆ ವಿಶೇಷ ಸಾಂಗ್‍ವೊಂದಕ್ಕೆ ರಶ್ಮಿಕಾ ಸ್ಟೆಪ್ ಹಾಕಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಸಖತ್ ಸದ್ದು ಮಾಡಿದೆ.

    ‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ, ತಮ್ಮ ಮುಂದಿನ ಬಾಲಿವುಡ್ ಬಿಗ್ ಸಿನಿಮಾ ‘ಅನಿಮಲ್’ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಇದು ಇವರಿಬ್ಬರ ಚೊಚ್ಚಲ ಕಾಂಬಿನೇಷನ್ ಚಿತ್ರ. ಈ ಸಿನಿಮಾದಲ್ಲಿ ವಿಶೇಷ ಸಾಂಗ್‍ವೊಂದು ಬರಲಿದ್ದು, ಇದಕ್ಕೆ ದಕ್ಷಿಣದ ಬ್ಯೂಟಿ ರಶ್ಮಿಕಾ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಒಂದು ವೇಳೆ ರಶ್ಮಿಕಾ ಗ್ರೀನ್ ಸಿಗ್ನಲ್ ಕೊಟ್ರೆ ಈ ಬ್ಯೂಟಿಯನ್ನ ರಣಬೀರ್ ಜೊತೆ ನೋಡಬಹುದು. ಇದನ್ನೂ ಓದಿ: ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್

    Ranbir Kapoor and his hot looks | IWMBuzz

    ‘ಅನಿಮಲ್’ ಸಿನಿಮಾ ಬಗ್ಗೆ ಬಾಲಿವುಡ್‍ನಲ್ಲಿ ನಿರೀಕ್ಷೆ ಇದೆ. ಇದಕ್ಕೆ ಕಾರಣವೇ ರಣಬೀರ್ ಕಪೂರ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ಕಾಂಬಿನೇಷನ್. ‘ಅನಿಮಲ್’ ಸಿನಿಮಾದಲ್ಲಿ ಹೆಚ್ಚು ಸ್ಟಾರ್ ನಟ, ನಟಿಯರನ್ನು ಹಾಕಬೇಕು ಎಂದು ಚಿತ್ರತಂಡ ಚಿಂತಿಸುತ್ತಿದೆ

    Photo Alert!] Rashmika Mandanna Hot Avatar - Mind Block song - RitzyStar

    ಇತ್ತೀಚೆಗೆ ತೆರೆಕಂಡ ‘ಆದವಳು ಮೀಕು ಜೋರು’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಶರ್ವಾನಂದ್ ಜೊತೆ ಕಾಣಿಸಿಕೊಂಡಿದ್ದರು. ಅಲ್ಲದೆ ಬಾಲಿವುಡ್‍ನಲ್ಲಿಯೂ ಮಿಂಚಲು ರೆಡಿ ಇರುವ ರಶ್ಮಿಕಾ ‘ಪುಷ್ಪ’ ಸೀಕ್ವೆಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಮತ್ತೆ ಬರ್ತಿದ್ಯ ಬಾಹುಬಲಿ 3 – ಪ್ರಭಾಸ್ ಉತ್ತರವೇನು? 

  • ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಸಿಎಂ

    ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಸಿಎಂ

    ಬೆಂಗಳೂರು: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರದ, ಅರಣ್ಯ ಭವನದ ಆವರಣದಲ್ಲಿರುವ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಹುತಾತ್ಮರಿಗೆ ಗೌರವ ಸಮರ್ಪಿಸಿದರು.

    ಬಳಿಕ ಮಾತನಾಡಿದ ಸಿಎಂ, ರಾಜ್ಯದಲ್ಲಿ ಅರಣ್ಯ ಸಂರಕ್ಷಣೆಗೆ ಒತ್ತು ಕೊಡಬೇಕು. ನಾವು ಕಾಡು ನಾಶ ಮಾಡಿದರೆ ಆ ಪ್ರಾಣಿಗಳು ನಮ್ಮ ಬಳಿ ಬರುತ್ತದೆ. ಇಲಾಖೆಯ ಹುತಾತ್ಮರ ಜೊತೆ ಪ್ರಾಣಿಗಳ ದಾಳಿಯಿಂದ ಮರಣ ಹೊಂದಿದ ನಾಗರಿಕರು ಕೂಡ ಹುತಾತ್ಮರು. ಅರಣ್ಯ ಇಲಾಖೆಯ ಕಾರ್ಯಚಟುವಟಿಕೆ ಇನ್ನಷ್ಟು ಮುಂದುವರಿಯಲಿ. ದಕ್ಷತೆಯಿಂದ ಕಾಡನ್ನು ಉಳಿಸುವಂತಹ ಕಾರ್ಯ ಅರಣ್ಯ ಇಲಾಖೆಯಿಂದ ಆಗಲಿ ಎಂದು ಶುಭ ಹಾರೈಸಿದರು.  ಇದನ್ನೂ ಓದಿ: ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

    ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ