Tag: Anirudh

  • ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ

    ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ

    ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಡಾ. ವಿಷ್ಣುವರ್ಧನ್ (Dr Vishnuvardhan) ಅವರ ಸಮಾಧಿಯನ್ನು ಅಭಿಮಾನಿಗಳ ವಿರೋಧದ ನಡುವೆಯೇ ಗುರುವಾರ ರಾತ್ರೋರಾತ್ರಿ ತೆರವು ಮಾಡಲಾಗಿತ್ತು. ಈ ಕುರಿತು ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ (Anirudh) ಪ್ರತಿಕ್ರಿಯೆ ನೀಡಿ, ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

    ಸಮಾಧಿ ನಿರ್ಮಾಣ ಮಾಡಲಾದ ಜಾಗ ವಿವಾದಾತ್ಮಕ ಸ್ಥಳ ಇತ್ತು ಎಂಬುದು ನಮಗೆ ಗೊತ್ತಿರಲಿಲ್ಲ. ನಾವು ಅಲ್ಲೇ ಹೋಗಿ ಸಂಸ್ಕಾರ ಮಾಡಬೇಕು ಅಂದುಕೊಂಡಿದ್ದೆವು. ಕುಮಾರಸ್ವಾಮಿ ಅವರು ಹೇಳಿದ್ರು ದೇವೇಗೌಡರು ಹೇಳಿದ್ದಾರೆ. ವಿಷ್ಣುವರ್ಧನ್ ಅವರಿಗೆ ಅವರದ್ದೇ ಆದ ಗೌರವ ಇದೆ. ಹಾಗಾಗಿ ಅಭಿಮಾನ್ ಸ್ಟುಡಿಯೋದಲ್ಲಿ ಗೌರವಯುತವಾಗಿ ಮಾಡಿ ಎಂದಿದ್ರು. ಹಾಗಾಗಿ ನಾವು ಒಪ್ಪಿಕೊಂಡಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ

    ದಯವಿಟ್ಟು ಅಭಿಮಾನಿಗಳು ದೂರ ಆಗಬೇಡಿ. ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತಾನಾಡಬೇಡಿ. ಏನೇ ಇದ್ದರೂ ನನ್ನನ್ನೇ ನೇರವಾಗಿ ಸಂಪರ್ಕ ಮಾಡಿ. ಅಭಿಮಾನಿಗಳ ಪ್ರಯತ್ನದಿಂದ ಬೆಂಗಳೂರಿನಲ್ಲೇ ಸ್ಮಾರಕ ಆದರೆ ತುಂಬಾ ಒಳ್ಳೆಯದು. ಬೇಕಿದ್ದರೆ ಸರ್ಕಾರದ ಬಳಿ ಮಾತನಾಡಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 3.15 ಕೋಟಿ ವಂಚನೆ ಆರೋಪ; ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್

    ನಾನು ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಕೊಡಿ ಎಂದು ಕೇಳಿದ್ದೇನೆ. ಕೇವಲ ಅಪ್ಪಾವ್ರಿಗೆ ಮಾತ್ರ ಅಲ್ಲ. ಎಲ್ಲಾ ಕಲಾವಿದರಿಗೂ ಕೊಟ್ಟು ಗೌರವಿಸಿ ಎಂದು ಕೇಳಿದ್ದೇನೆ. ಚಿತ್ರರಂಗದ ಪರವಾಗಿ ನಾನೇ ಧ್ವನಿ ಎತ್ತಿದ್ದೇನೆ. ಅಲ್ಲದೇ ಈ ಬಗ್ಗೆ ಲೇಖನ ಕೂಡ ಬರೆದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ

    ಬೆಂಗಳೂರಲ್ಲೇ ಅಪ್ಪಾವ್ರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 2 ಕೋಟಿ ರೂ. ಹಣ ಕೊಟ್ಟಿತ್ತು. ಆದರೆ ಆ ಜಾಗ ಕೋರ್ಟ್ನಲ್ಲಿದ್ದಿದ್ದರಿಂದ ಸರ್ಕಾರಕ್ಕೆ ಜಾಗ ಕೊಂಡುಕೊಳ್ಳಲು ಆಗಲಿಲ್ಲ. ಕೇವಲ 2 ಎಕ್ರೆ ಜಾಗ ಕೊಡಿ ಎಂದು ಕೇಳಿದ್ದೆವು. ಅಭಿಮಾನ್ ಸ್ಟುಡಿಯೋ ಜಾಗವನ್ನ ಮನಸ್ಸು ಮಾಡಿದ್ರೆ ಸರ್ಕಾರವೇ ವಶ ಪಡಿಸಿಕೊಳ್ಳಬಹುದಾಗಿತ್ತು. ಆದರೆ ಸರ್ಕಾರ ಆ ಕೆಲಸ ಮಾಡಲಿಲ್ಲ. ಹೀಗಾಗಿ ನಾವು ಮೈಸೂರಿಗೆ ಹೋದೆವು ಎಂದು ಹೇಳಿದ್ದಾರೆ.

    ಭಾರತೀ ಅಮ್ಮ ಈ ಬಗ್ಗೆ ತಿಳಿದು ತುಂಬಾ ನೊಂದುಕೊಂಡಿದ್ದಾರೆ. ಯಾರೇ ಈ ರೀತಿ ನಡೆದುಕೊಂಡಿದ್ದರೂ ಶಿಕ್ಷೆ ಆಗಲಿ ಎಂದಿದ್ದಾರೆ. ಅದು ಖಾಸಗಿ ಜಾಗ ಆಗಿದ್ದರೂ ಭಾವನಾತ್ಮಕವಾಗಿ ಸಮಾಧಿ ಇದ್ದ ಜಾಗ, ಅದು ಕನ್ನಡಿಗರ ಜಾಗವಾಗಿತ್ತು. ಬಾಲಣ್ಣ ಅವರ ಮೇಲೆ ನಮಗೆ ತುಂಬಾ ಗೌರವ ಇದೆ ಎಂದಿದ್ದಾರೆ.

  • ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ‘chef ಚಿದಂಬರ’ (Chef Chidambara) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಕೂಡ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ ಚೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ಅನಿರುದ್ದ್ (Anirudh) ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದು, ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.  ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಎಂ.ಆನಂದರಾಜ್ (Anand Raj) ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ (Rachel David) ಹಾಗೂ ನಿಧಿ ಸುಬ್ಬಯ್ಯ (Nidhi Subbaiah) ಈ ಚಿತ್ರದ ನಾಯಕಿಯರು.

     

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ.  ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್  ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು ಆಕ್ಸಿಡೆಂಟ್ ಮೂಲಕ ಅನಿರುದ್ಧಗೆ ಗುಡ್ ಬೈ ಹೇಳಿದ ಜೊತೆ ಜೊತೆಯಲಿ ಟೀಮ್

    ಕಾರು ಆಕ್ಸಿಡೆಂಟ್ ಮೂಲಕ ಅನಿರುದ್ಧಗೆ ಗುಡ್ ಬೈ ಹೇಳಿದ ಜೊತೆ ಜೊತೆಯಲಿ ಟೀಮ್

    ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ತಮಗೆ ಮತ್ತೆ ಅವಕಾಶ ಸಿಗಬಹುದು ಎಂದು ಕಾಯುತ್ತಿದ್ದ ನಟ ಅನಿರುದ್ದ ಅವರಿಗೆ ಕೊನೆಗೂ ನಿರಾಸೆ ಮೂಡಿಸಿದ್ದಾರೆ ನಿರ್ಮಾಪಕರು. ಅನಿರುದ್ದ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಅಪಘಾತ ಮಾಡಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಆಸ್ಪತ್ರೆಗೆ ಸೇರಿರುವ ಆರ್ಯವರ್ಧನ್ ಬದುಕಿ ಬರಬಹುದು, ಮತ್ತೆ ಅನಿರುದ್ದ ಅವರೇ ಈ ಪಾತ್ರವನ್ನು ಮಾಡಬಹುದು ಎಂದುಕೊಂಡಿದ್ದ ಅಭಿಮಾನಿಗಳಿಗೂ ಮೆಗಾ ಟ್ವಿಸ್ಟ್ ಕೊಟ್ಟಿದ್ದಾರೆ.

    ಈಗಾಗಲೇ ನಟ ಹರೀಶ್ ರಾಜ್ ಧಾರಾವಾಹಿಗೆ ಎಂಟ್ರಿಕೊಟ್ಟು ಆಗಿದೆ. ಇವರೇ ಆರ್ಯವರ್ಧನ್ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲಿಗೆ ಅನಿರುದ್ದ ಅವರಿಗೆ ಗೇಟ್ ಪಾಸ್ ನಿಕ್ಕಿ ಎಂದೇ ಭಾವಿಸಲಾಗಿತ್ತು. ಆದರೆ, ಆರ್ಯವರ್ಧನ್ ಅವರ ಸಹೋದರನ ಪಾತ್ರವನ್ನು ಹರೀಶ್ ರಾಜ್ ಮಾಡಿದ್ದರಿಂದ ಅನಿರುದ್ದ ಅವರಿಗೆ ಮತ್ತೆ ಅವಕಾಶ ಸಿಗುತ್ತದೆ ಅನ್ನುವ ನಿರೀಕ್ಷೆ ಅವರ ಅಭಿಮಾನಿಗಳಿಗೆ ಇತ್ತು. ಅದಕ್ಕೂ ತಣ್ಣೀರು ಎರೆಚಿದೆ ಧಾರಾವಾಹಿ ತಂಡ. ಇದನ್ನೂ ಓದಿ: ಏನ್ ಐಡ್ಯಾ ಗುರೂ: ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ಫಿಕ್ಸ್: ಫೇಸ್ ಟ್ರಾನ್ಸ್ ಪ್ಲಾಂಟ್ ಬಳಸಿ ಅನಿರುದ್ಧಗೆ ಗೇಟ್ ಪಾಸ್

    ಎರಡು ದಿನದಿಂದ ಪ್ರಸಾರವಾಗುತ್ತಿರುವ ಕಥೆಯಲ್ಲಿ ಅನಿರುದ್ದ ಮತ್ತು ಹರೀಶ್ ರಾಜ್ ನಿರ್ವಹಿಸುತ್ತಿರುವ ಪಾತ್ರಗಳು ಆಸ್ಪತ್ರೆ ಸೇರಿವೆ. ಅನಿರುದ್ದ ಪಾತ್ರಕ್ಕೆ ಆಕ್ಸಿಡೆಂಟ್ ಆಗಿದ್ದರೆ, ಹರೀಶ್ ರಾಜ್ ಮಾಡುತ್ತಿರುವ ಪಾತ್ರ ಆತ್ಮಹತ್ಯೆ ಮಾಡಿಕೊಂಡಿದೆ. ಅಲ್ಲದೇ ಹರೀಶ್ ರಾಜ್ ಮಾಡುತ್ತಿರುವ ಪಾತ್ರವನ್ನು ಜೀವಂತವಾಗಿ ಉಳಿಸಿಲ್ಲ. ಕಡೆ ಆರ್ಯವರ್ಧನ್ ಮುಖಕ್ಕೆ ತೀವ್ರ ಪೆಟ್ಟಾಗಿದ್ದರಿಂದ ಪ್ಲಾಸ್ಟಿಕ್ ಸರ್ಜರಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಈಗ ಪ್ಲಾಸ್ಟಿಕ್ ಸರ್ಜರಿ ಬದಲು ಫೇಸ್ ಟ್ರಾನ್ಸ್ ಪ್ಲೆಂಟ್ ಮಾಡುವ ಕಥೆ ಶುರುವಾಗಿದೆ. ಇದನ್ನೂ ಓದಿ: ‘ಲೈಫ್ ಇಸ್ ಬ್ಯುಟಿಫುಲ್’ ಹನಿಮೂನ್ ಮೂಡ್ ನಲ್ಲಿ ಮಹಾಲಕ್ಷ್ಮಿ ಮತ್ತು ರವೀಂದರ್

    ಅಂದರೆ ಹರೀಶ್ ರಾಜ್ ಪಾತ್ರದ ಮುಖವನ್ನು ಅನಿರುದ್ದ ನಿರ್ವಹಿಸುವ ಪಾತ್ರಕ್ಕೆ ವರ್ಗಾಯಿಸಲಾಗುತ್ತಿದೆ. ಅಲ್ಲಿಗೆ ಅನಿರುದ್ದ ಇನ್ಮುಂದೆ ಧಾರಾವಾಹಿಯಲ್ಲಿ ಅಧಿಕೃತವಾಗಿ ಇರುವುದಿಲ್ಲ. ಈ ವಿಷಯ ತಿಳಿಯುತ್ತಿದ್ದಂತೆಯೇ ಅನಿರುದ್ದ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಆ ಧಾರಾವಾಹಿ ಬಿಟ್ಟಾಕಿ, ನೀವೇ ಹೊಸ ಸೀರಿಯಲ್ ಶುರು ಮಾಡಿ ಎಂದಿದ್ದಾರೆ. ಈ ಪ್ರೀತಿಗೆ ಸ್ವತಃ ಅನಿರುದ್ದ ಕೂಡ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಮಕ್ಕಳ ಜೊತೆ ತೀರ್ಥಯಾತ್ರೆ ಮಾಡಿದ ಅನಿರುದ್ಧ

    ಮಕ್ಕಳ ಜೊತೆ ತೀರ್ಥಯಾತ್ರೆ ಮಾಡಿದ ಅನಿರುದ್ಧ

    ಬೆಂಗಳೂರು: ಕಿರುತೆರೆಯಲ್ಲಿ ಮಿಂಚುತ್ತಿರುವ ನಟ ಅನಿರುದ್ಧ, ಮಕ್ಕಳ ಜೊತೆಗೆ ತೀರ್ಥಯಾತ್ರೆಯ ಮಾಡಿಕೊಂಡು ಬಂದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ನಾವು ವೈಷ್ಣೋದೇವಿಗೆ ಹೋಗಿ ಬಂದೆವು. ಕೀರ್ತಿಯವರು ಕೆಲವು ವರ್ಷಗಳ ಹಿಂದೆ ಹೋಗಿ ಬಂದಿದ್ದಾರೆ. ಈ ಬಾರಿ ನಮ್ಮ ಜೊತೆ ಬಂದಿಲ್ಲ. ಸರ್ವೇ ಜನಃ ಸುಖಿನೋ ಭವಂತು. ತಾಯಿಯ ಅನುಗ್ರಹ ನಮ್ಮೆಲ್ಲರ ಮೇಲೂ ಇರಲಿ ಎಂದು ಅನಿರುದ್ಧ ಬರೆದುಕೊಂಡು ತೀರ್ಥಯಾತ್ರಗೆ ಹೋಗಿ ಬಂದಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:   ನನಗೆ ಅಕ್ರಮ ಸಂಬಂಧ ಇಲ್ಲ- ಟ್ರೋಲಿಗರ ವಿರುದ್ಧ ಕುಟುಕಿದ ಸಮಂತಾ

     

    View this post on Instagram

     

    A post shared by Aniruddha Jatkar (@aniruddhajatkar)

    ನಟ ಅನಿರುದ್ಧ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಶೂಟಿಂಗ್‍ನಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಪತ್ನಿ ಮತ್ತು ಮಕ್ಕಳಿಗಾಗಿ ಸಮಯ ಮೀಸಲಿಡುತ್ತಾರೆ. ಇತ್ತೀಚೆಗೆ ಮಕ್ಕಳ ಜೊತೆ ಅನಿರುದ್ಧ ತೀರ್ಥಯಾತ್ರೆ ಮಾಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್ ನಡುವೆ ಬ್ರೇಕ್ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ. ಇದನ್ನೂ ಓದಿ:  ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ

    ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸೀರಿಯಲ್‍ನಲ್ಲಿ ಅನಿರುದ್ಧ ಮಿಂಚುತ್ತಿದ್ದಾರೆ. ಅವರ ಅಭಿಮಾನಿಗಳ ಬಳಗವು ಅಪಾರ ಪ್ರಾಮಾಣದಲ್ಲಿ ಬೆಳೆದಿದೆ.

  • ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

    ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

    – ನಿಮ್ಮ ಹೆಸ್ರು ಗೊತ್ತಾದ ದಿನ ದೇಶ ಬಿಟ್ಟು ಹೋಗಿ

    ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು ಹೋಗಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿರುವ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ.

    ವಿಷ್ಣು ಸರ್ ಪ್ರತಿಮೆ ಧ್ವಂಸಗೊಳಿಸಿರುವ ವಿಷಯ ನನಗೆ ತಡವಾಗಿ ತಿಳಿಯಿತು. ವಿಷ್ಣು ಸರ್ ಅಭಿಮಾನಿಯಾಗಿ ಮೂರ್ತಿಯನ್ನ ಒಡೆದು ಹಾಕಿರೋರಿಗೆ ಕೆಲ ವಿಷಯಗಳನ್ನ ಹೇಳಲು ಇಷ್ಟಪಡುತ್ತೇನೆ. ಮೂರ್ತಿ ಒಡೆದು ಹಾಕಿರುವ ಧ್ವಂಸಕರು ಸಿಕ್ಕರೆ ವಿಷ್ಣು ಸರ್ ಅಭಿಮಾನಿಗಳು ನಿಮ್ಮನ್ನ ಅದಕ್ಕಿಂತ ಹೀನಾಯವಾಗಿ ಒಡೆದು ಹಾಕುತ್ತಾರೆ. ಮೂರ್ತಿ ಒಡೆದು ಹಾಕಿರುವವರು ಮನುಷ್ಯರೇ ಅಲ್ಲ. ಎಲ್ಲಿಯೂ ಸಿಕ್ಕಿ ಹಾಕಿಕೊಳ್ಳದಂತೆ ನೋಡಿಕೊಳ್ಳಿ. ನಿಮ್ಮ ಹೆಸರು ಗೊತ್ತಾದ ದಿನ ಏನು ನಡೆಯುತ್ತೆ ಅದನ್ನ ಯಾರಿಂದಲೂ ತಡೆಯಲು ಆಗಲ್ಲ.

    ಆ ಮೂರ್ತಿಯನ್ನ ಒಡೆಯುವ ಮುನ್ನ ಒಂದು ಸಲ ನೀವೂ ಯೋಚನೆ ಮಾಡಿದ್ದರೆ ಒಬ್ಬ ಮನುಷ್ಯನಾಗಿ ಮಾಡೋ ಕೆಲಸವೇ ಅಲ್ಲ. ಎಂತಹವರು ಅಂತ ಹೇಳೋಕೆ ಹೋದ್ರೆ ಸೆನ್ಸಾರ್ ಸ್ಟಾರ್ಟ್ ಆಗುತ್ತೆ. ನಿಮ್ಮ ಹೆಸರು ಗೊತ್ತಾದ ದಿನ ದಯವಿಟ್ಟು ದೇಶ ಬಿಟ್ಟು ಓಡಿ ಹೋಗಿಬಿಡಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್ ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.

    ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ ವಿಷ್ಣು ಪ್ರತಿಮೆ ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರತಿಮೆ ತೆಗೆಯುವ ಮೂಲಕ ಕನ್ನಡಿಗರಿಗೆ ಅವಮಾನಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿರುದ್ಧ, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು.

    ನಮ್ಮ ಕುಟುಂಬ ಎಲ್ಲರನ್ನ ಗೌರವಿಸುತ್ತೆ. ನಾವು ಯಾರ ಮಾತಿಗೆ ತಿರುಗೇಟು ನೀಡುವುದು ನಮಗೆ ಗೊತ್ತಿಲ್ಲ. ಸಚಿವರಾಗಿರುವ ಸೋಮಣ್ಣ ಅವರ ಮಾತುಗಳಿಗೆ ನಾವು ಗೌರವ ನೀಡುತ್ತೇವೆ. ಒಂದು ಪುತ್ಥಳಿಯನ್ನ ಪ್ರತಿಷ್ಠಾಪನೆ ಮಾಡುವಾಗಲೇ ಎಲ್ಲ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಪ್ರತಿಷ್ಠಾಪನೆ ವಿಚಾರದಲ್ಲಿ ಯಾವ ತೊಂದರೆಯೂ ಇಲ್ಲ ಅಂದ್ಮೇಲೆ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಅಪ್ಪಾಜಿ ಅವರ ಬಗ್ಗೆಯೇ ಈ ರೀತಿ ಯಾಕೆ ಆಗ್ತಿದೆ. ಒಂದು ವೇಳೆ ಪ್ರತಿಮೆ ಸ್ಥಳಾಂತರಿಸುವದಿದ್ದರೆ ಎಲ್ಲರ ಜೊತೆ ಮಾತುಕತೆ ನಡೆಸಿ ಗೌರವಯುತವಾಗಿ ತೆಗೆಯಬಹದಿತ್ತು ಎಂದರು.

    ವಿ.ಸೋಮಣ್ಣ ಹೇಳಿದ್ದೇನು?: 40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.

  • ಎರಡು ದೇಹಗಳು ಒಂದೇ ಧ್ವನಿ – ವಿಷ್ಣು, ಎಸ್‍ಪಿಬಿ ಬಾಂಧವ್ಯದ ಬಗ್ಗೆ ಅನಿರುದ್ಧ್ ಮಾತು

    ಎರಡು ದೇಹಗಳು ಒಂದೇ ಧ್ವನಿ – ವಿಷ್ಣು, ಎಸ್‍ಪಿಬಿ ಬಾಂಧವ್ಯದ ಬಗ್ಗೆ ಅನಿರುದ್ಧ್ ಮಾತು

    – ಇಬ್ಬರು ಏಕವಚನದಲ್ಲಿ ಮಾತನಾಡುತ್ತಿದ್ರು
    – ಕಪ್ಪು ಬಣ್ಣ ಹಾಕಿ ಕಂಬನಿ

    ಬೆಂಗಳೂರು: ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಯಣ್ಯಂ ಇಂದು ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿರುತೆರೆ ನಟ ಅನಿರುದ್ಧ್ ಅತ್ಯಂತ ಕೆಟ್ಟ ದಿನವಿದು ಎಂದು ಹೇಳುವ ಮೂಲಕ ಕಪ್ಪು ಬಣ್ಣ ಹಾಕಿ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಕೊನೆಯ ಬಾರಿ ಕೊರೊನಾ ಜಾಗೃತಿ ಗೀತೆಗೆ ದನಿಯಾಗಿದ್ರು ಎಸ್‍ಪಿಬಿ

    ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಪ್ರೊಫೈಲ್ ಫೋಟೋವನ್ನು ಡಿಲೀಟ್ ಮಾಡಿ ಕಪ್ಪು ಬಣ್ಣ ಹಾಕುವ ಮೂಲಕ ಎಸ್.ಪಿ.ಬಾಲಸುಬ್ರಹ್ಯಣ್ಯಂ ಅಗಲಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ತಮ್ಮ ಎಸ್‍ಪಿಬಿ ಅವರ ಮಧ್ಯೆ ಇದ್ದ ಬಾಂಧವ್ಯದ ಬಗ್ಗೆ ಮಾತನಾಡಿದ್ದಾರೆ.

    ಎಲ್ಲರಿಗೂ ನಮಸ್ಕಾರ ಎಸ್‍ಪಿಬಿ ಸರ್ ಇಂದು ನಮ್ಮನೆಲ್ಲಾ ಶಾರೀರಿಕವಾಗಿ ಬಿಟ್ಟು ಹೋಗಿದ್ದಾರೆ. ಇದರಿಂದ ತುಂಬಾ ಬೇಸರ, ದುಃಖ, ಸಂಕಟ ಆಗುತ್ತಿದೆ. ಬಾಲಸುಬ್ರಹ್ಮಣ್ಯಂ ಮತ್ತು ಡಾ.ವಿಷ್ಣುವರ್ಧನ್ ಅವರ ಸಂಬಂಧ ಯಾವ ರೀತಿ ಇತ್ತು ಎಂದು ನಿಮ್ಮೆಲ್ಲರಿಗೂ ಗೊತ್ತಿದೆ. ಅವರಿಬ್ಬರು ತುಂಬಾ ಒಳ್ಳೆಯ ಸ್ನೇಹಿತರು. ಪರಸ್ಪರ ಏಕವಚನದಲ್ಲಿ ಮಾತನಾಡುತ್ತಿದ್ದರು. ಅವರ ಬಾಂಧವ್ಯ ಎರಡು ದೇಹಗಳು ಒಂದೇ ಧ್ವನಿ ಆಗಿತ್ತು ಎಂದು ಹೇಳಿದರು.

    ನನ್ನ ಕೆಲ ಸಿನಿಮಾಗಳಿಗೆ ಅವರು ಧ್ವನಿಯಾಗಿದ್ದುದ್ದು ನನ್ನ ಅದೃಷ್ಟ. ಅಪ್ಪ ಅವರು ಶಾರೀರಿಕವಾಗಿ ಬಿಟ್ಟು ಹೋದ ಮೇಲೂ ಸಹ ಎಸ್‍ಪಿಬಿ ಸರ್ ನಮ್ಮ ಕುಟುಂಬದವರ ಜೊತೆ ತುಂಬಾ ಪ್ರೀತಿಯಿಂದ ಗೌರವದಿಂದ ಇದ್ದರು. 2011ರಲ್ಲಿ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ವಿ. ಆ ಕಾರ್ಯಕ್ರಮದಲ್ಲಿ ಅಪ್ಪ ಅವರನ್ನು ನೆನಪಿಸಿಕೊಂಡು ಅನೇಕ ಹಾಡಗಳನ್ನು ಹಾಡಿದ್ದರು. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಅನಿರುದ್ಧ್ ನೋವಿನಿಂದ ಹೇಳಿದ್ದಾರೆ.

    https://www.facebook.com/Anirudhofficialpage/photos/a.107512207315687/400945701305668/

    ಎಸ್‍ಪಿಬಿ ಸರ್ ಭೇಟಿ ಮಾಡಿದಾಗಲೆಲ್ಲಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಅಂತಹ ಮಹಾನ್ ವ್ಯಕ್ತಿ, ಗಾಯಕರು ಸಿಗುವುದು ತುಂಬಾನೇ ವಿರಳ. ಎಷ್ಟು ಹಾಡು, ಎಷ್ಟು ಭಾಷೆಯಲ್ಲಿ ಹಾಡಿದ್ದಾರೆ. ಅತ್ಯಂತ ಉನ್ನತ ಮಟ್ಟಕ್ಕೆ ತಲುಪಿರುವ ಗಾಯಕರು. ಅಂತಹ ಗಾಯಕರನ್ನು ಮತ್ತೆ ನೋಡುತ್ತೇವೆ ಎಂದು ನಮಗನಿಸುತ್ತಿಲ್ಲ. ಇವತ್ತು ನಾವು ಅವರನ್ನು ಶಾರೀರಿಕವಾಗಿ ಕಳೆದುಕೊಂಡಿದ್ದೇವೆ. ಹೀಗಾಗಿ ನನಗೆ ಮಾತುಗಳೇ ಬರುತ್ತಿಲ್ಲ ಎಂದು ಭಾವುಕರಾದರು.

    ಎಸ್.ಪಿ.ಬಾಲಸುಬ್ರಹ್ಯಣ್ಯಂ ಹಾಡುಗಳನ್ನು ಕೇಳುತ್ತಲೇ ಬೆಳೆದಿದ್ದೇನೆ. ಅವರ ಹಾಡುಗಳು ಮೂಲಕ ಯಾವಾಗಲೂ ಶಾಶ್ವತವಾಗಿ ಉಳಿದುಕೊಳ್ಳುತ್ತಾರೆ. ಎಸ್‍ಪಿಬಿ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರಿಗೆ ಮೋಕ್ಷ ಸಿಗಲಿ. ತಮ್ಮ ಹಾಡುಗಳ ಮೂಲಕ ಎಸ್‍ಪಿಬಿ ಯಾವಾಗಲೂ ಅಮರರಾಗಿರುತ್ತಾರೆ ಎಂದು ಅನಿರುದ್ಧ್ ಹೇಳಿದರು.

  • ಎಂದೂ ನೀವಿಲ್ಲವೆಂದುಕೊಂಡಿಲ್ಲ, ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ – ಅನಿರುದ್ಧ್

    ಎಂದೂ ನೀವಿಲ್ಲವೆಂದುಕೊಂಡಿಲ್ಲ, ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ – ಅನಿರುದ್ಧ್

    – ‘ಯಜಮಾನ’ನನ್ನು ನೆನಪಿಸಿಕೊಂಡ ಸ್ಯಾಂಡಲ್‍ವುಡ್ ತಾರೆಯರು

    ಬೆಂಗಳೂರು: ಇಂದು ಕನ್ನಡ ನಾಡು ಕಂಡ ಅದ್ಭುತ ನಟ ಸಾಹಸ ಸಿಂಹ್ ವಿಷ್ಣುವರ್ಧನ್ ಅವರ 70ನೇ ವರ್ಷದ ಹುಟ್ಟುಹಬ್ಬ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಟ ಅನಿರುದ್ಧ್ ಸೇರಿದಂತೆ ಸಿನಿ ರಂಗದ ಕಲಾವಿದರು ವಿಷ್ಣುವರ್ಧನ್ ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಕನ್ನಡ ಚಿತ್ರರಂಗ ಕಂಡ ಮೇರು ಪ್ರತಿಭೆ ನಮ್ಮನ್ನು ಆಗಲಿ 9 ವರ್ಷಗಳಾಗಿವೆ. ಅವರ ನೆನಪಿಗಾಗಿ ರಾಜ್ಯ ಸರ್ಕಾರ ಮೈಸೂರಿನಲ್ಲಿ ಅವರ ಪುಣ್ಯಸ್ಮಾರಕವನ್ನು ನಿರ್ಮಾಣ ಮಾಡುತ್ತಿದೆ. ಇಂದು ಅವರ ಹುಟ್ಟುಹಬ್ಬದಂದು ಸಾವಿರಾರು ಅಭಿಮಾನಿಗಳು ಅವರನ್ನು ನೆನೆದಿದ್ದಾರೆ.

    https://www.facebook.com/Anirudhofficialpage/posts/394677755265796

    ವಿಷ್ಣು ಅವರ ಹುಟ್ಟುಹ್ಬದ ಪ್ರಯುಕ್ತ ಫೇಸ್‍ಬುಕ್ ಪೋಸ್ಟ್ ಹಾಕಿರುವ ಅನಿರುದ್ಧ್, ಮಗನಾಗಿ, ಅವರ ಗುಣಗಳಿಗೆ ಅಭಿಮಾನಿಯಾಗಿ ಕೋಟಿ ನೆನಪುಗಳು. ಅವರ ಸರಳತನ, ನಿಷ್ಕಲ್ಮಶ ಮನಸ್ಸು, ಮುಗ್ಧತೆ, ಔದಾರ್ಯ, ಸಜ್ಜನಿಕೆ, ಬಹುಶಃ ಒಬ್ಬ ವ್ಯಕ್ತಿ ಮತ್ತೊಬ್ಬರ ಜೀವನಕ್ಕೆ ಸ್ಫೂರ್ತಿಯಾಗಿ ಸಾಧಿಸಲು ಪ್ರಮುಖ ಕಾರಣಕರ್ತರಾಗುವವರೆಂದರೆ ನನಗೆ ಅದು ನೀವೇ. ಎಂದೂ ನೀವಿಲ್ಲವೆಂದುಕೊಂಡಿಲ್ಲ. ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ. ಜನ್ಮದಿನವಿಂದು ಚಿಕ್ಕವನು ನಾನು ನಾನೇನನು ಹೇಳಲಿ. ಎಲ್ಲರಿಗೂ ನಿಮ್ಮ ಆಶೀರ್ವಾದವಿರಲಿ. ಎಂದಿನಂತೆ ಕೈ ಹಿಡಿದು ಮುನ್ನಡೆಸಿ ಎಂದಿದ್ದಾರೆ.

    ನಿನ್ನೆ ವಿಷ್ಣು ಅವರ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿಯನ್ನು ಬಿಡುಗಡೆ ಮಾಡಿದ್ದ ನಟ ಸುದೀಪ್ ಅವರು, ಅವರನ್ನು ಭೇಟಿ ಮಾಡಲು ಸಮಯದ ಆಶೀರ್ವಾದವಿತ್ತು. ಅವರೊಂದಿಗೆ ಕೆಲಸ ಮಾಡಲು ಸಿನಿಮಾದ ಆಶೀರ್ವಾದವಿತ್ತು. ಎಲ್ಲಕ್ಕಿಂತ ದೊಡ್ಡ ಆಶೀರ್ವಾದ ಅವರು ನನ್ನನ್ನು ನನ್ನ ಹೆಸರಿಂದ ಗುರುತಿಸುತ್ತಿದ್ದರು. ನಾನು ಅವರ ಹುಟ್ಟು ಹಬ್ಬಕ್ಕೆ ಕಾಮನ್ ಡಿಪಿಯನ್ನು ಬಿಡುಗಡೆ ಮಾಡುತ್ತಿರುವುದು ನನಗೆ ಸಿಕ್ಕ ಭಾಗ್ಯ. ಎಂದಿಗೂ ಅವರ ಅಭಿಮಾನಿ ಎಂದು ಟ್ವೀಟ್ ಮಾಡಿದ್ದರು.

    ಇಂದು ವಿಷ್ಣುವರ್ಧನ್ ಅವರ ಜೊತೆ ಇರುವ ತನ್ನ ಬಾಲ್ಯದ ಫೋಟೋ ಹಂಚಿಕೊಂಡಿರುವ ಪುನೀತ್ ಅವರು, ಅವರ 70ನೇ ಹುಟ್ಟುಹಬ್ಬದಂದು ವಿಷ್ಣು ಸರ್ ಅವರನ್ನು ನೆನೆಯುತ್ತಾ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಡಾಲಿ ಧನಂಜಯ್ ಅವರು ಟ್ವೀಟ್ ಮಾಡಿ, ನಮ್ಮಲ್ಲಿ ಎಂದಿಗೂ ನೀವು ಶಾಶ್ವತ, ಅವರ ಹುಟ್ಟುಹಬ್ಬದಂದು ವಿಷ್ಣುದಾದನನ್ನು ನೆನೆಯುತ್ತಾ ಎಂದು ಬರೆದುಕೊಂಡಿದ್ದಾರೆ.

    ಇವರ ಜೊತೆಗೆ ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ, ನೀವು ನಮ್ಮ ಚಿತ್ರರಂಗದಲ್ಲಿ ಓರ್ವ ಶ್ರೇಷ್ಠ ನಟನಾಗಿ ಉಳಿದುಕೊಂಡಿದ್ದೀರಿ. ನಮ್ಮ ಮನಸ್ಸಿನಲ್ಲಿ ನೀವು ಯಾವಾಗಲೂ ಉಳಿಯುತ್ತೀರಾ ವಿಷ್ಣುವರ್ಧನ್ ಸರ್. ಅಭಿನಯ ಭಾರ್ಗವ, ಸಾಹಸಸಿಂಹ, ಪ್ರೀತಿಯ ವಿಷ್ಣುದಾದ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಹಿರಿಯ ನಟಿ ಮಾಳವಿಕಾ ಅವಿನಾಶ್, ನಟ ವಸಿಷ್ಠ ಸಿಂಹ, ನಟಿ ಮಾನ್ವಿತಾ ಸೇರಿದಂತೆ ಹಲವು ಅಭಿಮಾನಿಗಳು ವಿಷ್ಣುವರ್ಧನ್ ಅವರನ್ನು ನೆನಪಿಸಿಕೊಂಡಿದ್ದಾರೆ.

  • ಸ್ಯಾಂಡಲ್‍ವುಡ್‍ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದು: ಅನಿರುದ್ಧ್

    ಸ್ಯಾಂಡಲ್‍ವುಡ್‍ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದು: ಅನಿರುದ್ಧ್

    ಮೈಸೂರು: ನಾವು ಹಿರಿಯರನ್ನ ಸ್ಫೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು ಎಂದು ಸ್ಯಾಂಡಲ್‍ವುಡ್‍ನಲ್ಲಿ ನಟ-ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅನಿರುದ್ಧ್ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಬೇಕು: ಅನಿರುದ್ಧ

    ನಗರದಲ್ಲಿ ಮಾತನಾಡಿದ ನಟ ಅನಿರುದ್ಧ್, ಡ್ರಗ್ಸ್ ಅನ್ನೋ ಪಿಡುಗು ಪ್ರಪಂಚದಾದ್ಯಂತ ಇದೆ. ಇದು ಕೇವಲ ಸ್ಯಾಂಡಲ್‍ವುಡ್‍ನಲ್ಲಿ ಮಾತ್ರ ಅಲ್ಲ, ಎಲ್ಲ ರಂಗದಲ್ಲಿದೆ. ಕೆಲವು ವರ್ಷಗಳಿಂದ ಈ ಸಮಸ್ಯೆ ಇಲ್ಲ. ದಶಕಗಳಿಂದ ಈ ಸಮಸ್ಯೆ ಇದೆ. ಸ್ಯಾಂಡಲ್‍ವುಡ್‍ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಕೂಡ ಸ್ಯಾಂಡಲ್‍ವುಡ್ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಶಂಕು ಸ್ಥಾಪನೆ

    ನಟಿ ರಾಗಿಣಿ ಜೈಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅನಿರುದ್ಧ್, ಕನ್ನಡ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಿರುವುದು ನೋವಿನ ಸಂಗತಿ. ನಾವು ಹಿರಿಯರನ್ನ ಸ್ಫೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಹಾಳು ಮಾಡಬಾರದು. ಹಾಗಾಗಿ ಆ ಹಾದಿಯಲ್ಲಿ ನಾವು ಜವಾಬ್ದಾರಿಯುವತವಾಗಿ ಸಾಗಬೇಕಿದೆ ಎಂದರು.

    ಪ್ರತಿಯೊಬ್ಬರು ಅವರವರ ಜೀವನಕ್ಕೆ ಅವರೇ ಲೀಡರ್. ರಾಜಕುಮಾರ್ ಅವರು, ಅಪ್ಪಾಜಿ, ಅಂಬರೀಶ್ ಸೇರಿದಂತೆ ಅನೇಕರು ನಮಗೆ ಬುನಾದಿ ಹಾಕಿಕೊಟ್ಟು ಹೀಗಿದ್ದಾರೆ. ಅವರ ಪರಿಶ್ರಮವನ್ನು ಅರ್ಥ ಮಾಡಿಕೊಂಡು ನಾವು ಜವಾಬ್ದಾರಿಯಿಂದ ಇರುವುದು ನಮ್ಮ ಧರ್ಮ, ಕರ್ತವ್ಯವಾಗಿದೆ. ನಮ್ಮ ಮುಂದಿನ ಪೀಳಿಗೆ ನಮ್ಮ ನೋಡುತ್ತಿದೆ ಎಂದು ನಮಗೆ ಗೊತ್ತಿರಬೇಕು ಎಂದರು.

    ಇಂದು ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣು ಸ್ಮಾರಕಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಚಿವರೊಟ್ಟಿಗೆ ಆನ್‍ಲೈನ್ ಮೂಲಕ ಭೂಮಿ ಪೂಜೆಗೆ ಚಾಲನೆ ಕೊಟ್ಟಿದ್ದಾರೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆದಿದ್ದು, ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

    ಡಾ.ವಿಷ್ಣುವರ್ಧನ್ ಸ್ಮಾರಕ ಭವನ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸ್ಮಾರಕ ನಿರ್ಮಾಣದ ಗುತ್ತಿಗೆಯನ್ನು ಪೊಲೀಸ್ ವಸತಿ ನಿಗಮಕ್ಕೆ ನೀಡಲಾಗುತ್ತಿದೆ. ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದೆ. ಸ್ಮಾರಕದಲ್ಲಿ ವಿಷ್ಣು ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ ಇರುತ್ತದೆ.

  • ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಬೇಕು: ಅನಿರುದ್ಧ

    ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಬೇಕು: ಅನಿರುದ್ಧ

    ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಕೇಸ್ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ ಪ್ರತಿಕ್ರಿಯಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಡ್ರಗ್ಸ್ ಮಾಫಿಯಾ, ಡ್ರಗ್ಸ್ ಜಾಲದ ಬಗ್ಗೆ ಅರಿವಿಲ್ಲ. ಈ ವಿಚಾರ ಮನಸ್ಸಿಗೆ ತುಂಬಾ ಬೇಜಾರಾಗುತ್ತಿದೆ. ಇಡೀ ಜಗತ್ತಿನಲ್ಲೇ ಈ ಮಾಫಿಯಾ ಇರಬಾರದು. ಯುವ ಪೀಳಿಗೆಯನ್ನ ಇದರಿಂದ ರಕ್ಷಿಸಬೇಕು ಎಂದು ಇದೇ ವೇಳೆ ಮನವಿ ಮಾಡಿಕೊಂಡರು.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ರವಿಶಂಕರ್ ಹೇಳಿಕೆ ಆಧರಿಸಿ ನಟಿ ರಾಗಿಣಿಯನ್ನು ಬಂಧಿಸಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಹೇಳಿಕೆ ಆಧರಿಸಿ ನಿನ್ನೆ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಇವರನ್ನು ಕೂಡ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

    ಮಹಿಳಾ ಸಾಂತ್ವನ ಕೇಂದ್ರದ ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಮಂಗಳವಾರ ರಾತ್ರಿಯನ್ನು ಕಳೆದಿದ್ದಾರೆ. ಐದು ಹಾಸಿಗೆಯುಳ್ಳ ಈ ಕೊಠಡಿಯಲ್ಲಿ ಒಬ್ಬರನೊಬ್ಬರ ಮುಖವನ್ನು ನೋಡಿಕೊಂಡು ಪ್ರತ್ಯೇಕವಾಗಿ ನಟಿಯರು ಕುಳಿತಿದ್ದರು ಎಂಬ ವಿಚಾರ ಸಿಸಿಬಿ ಮೂಲಗಳಿಂದ ತಿಳಿದು ಬಂದಿದೆ.

    5 ಹಾಸಿಗೆಗಳ ಪೈಕಿ ಮೊದಲ ಮತ್ತು ಕೊನೆಯ ಹಾಸಿಗೆಯನ್ನು ಇಬ್ಬರಿಗೆ ನೀಡಿದ್ದರೆ ಮಧ್ಯದಲ್ಲಿರುವ ಮೂರು ಬೆಡ್‍ಗಳನ್ನು ಭದ್ರತೆಗೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸರಿಗೆ ನೀಡಲಾಗಿತ್ತು. ರಾಗಿಣಿ ನೋಡಿ ನಟಿ ಸಂಜನಾ ಈಗ ಸಮಾಧಾನ ಆಯ್ತಾ ಕೇಳಿದ್ದಾರೆ. ರಾತ್ರಿ ಊಟ ಬೇಡ ಎಂದು ಹೇಳಿದ್ದ ಸಂಜನಾ ಕಣ್ಣೀರು ಹಾಕುತ್ತಾ ಕುಳಿತಿದ್ದರು. ಕೆಪಿಎಲ್ ವಿಚಾರದಲ್ಲಿ ಇಬ್ಬರು ನಟಿಯ ನಡುವೆ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಮೊದಲೇ ಮಾತುಕತೆ ಕಡಿಮೆ ಇತ್ತು. ಹೀಗಾಗಿ ಮಂಗಳವಾರ ರಾತ್ರಿ ಇಬ್ಬರ ಮಧ್ಯೆ ಯಾವುದೇ ಜಾಸ್ತಿ ಮಾತುಕತೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

    https://www.youtube.com/watch?v=vAzz6njMaKU

  • ಯಾವ ಜನ್ಮದ ಪುಣ್ಯವೋ ಏನೋ ಈ ದೇವತೆ ನನಗೆ ತಾಯಿಯಾದ್ರು: ಅನಿರುದ್ಧ್

    ಯಾವ ಜನ್ಮದ ಪುಣ್ಯವೋ ಏನೋ ಈ ದೇವತೆ ನನಗೆ ತಾಯಿಯಾದ್ರು: ಅನಿರುದ್ಧ್

    ಬೆಂಗಳೂರು: ಇಂದು ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ಭಾರತಿ ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ನಟ ಅನಿರುದ್ಧ್ ಸೋಶಿಯಲ್ ಮೀಡಿಯಾದಲ್ಲಿ ಭಾರತಿ ಅವರಿಗೆ ಶುಭಾಶಯ ಕೋರಿದ್ದಾರೆ.

    ನಟ ಅನಿರುದ್ಧ್ ಫೇಸ್‍ಬುಕ್‍ನಲ್ಲಿ ಭಾರತಿ ಅಮ್ಮನವರ ಬಗ್ಗೆ ಬರೆದುಕೊಳ್ಳುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. “ಸದಾ ನನ್ನ ಜೀವನದ ದೇವತೆ ಎನ್ನುತ್ತಿದ್ದರು ಅಪ್ಪಾವ್ರು. ಯಾವ ಜನ್ಮದ ಪುಣ್ಯವೋ ಏನೋ ಆ ದೇವತೆ ನನಗೆ ತಾಯಿಯಾದರು. ಅಂದಿನಿಂದ ಇಂದಿನವರೆಗೂ ಅದೇ ಪ್ರೀತಿ, ಮಮತೆ, ವಾತ್ಸಲ್ಯ, ಮತ್ತೇನು ಹೇಳಲಿ ನಿಮ್ಮ ಬಗ್ಗೆ” ಎಂದು ಅಮ್ಮನ ಬಗ್ಗೆ ಪ್ರೀತಿಯಿಂದ ಬರೆದುಕೊಂಡಿದ್ದಾರೆ.

    ಅಷ್ಟೇ ಅಲ್ಲದೇ, “ನನ್ನ ಪ್ರತಿ ಪ್ರಾರ್ಥನೆಯಲ್ಲಿಯೂ ನೀವು ಸದಾ ಸಂತೋಷವಾಗಿರಲೆಂಬ ಕೋರಿಕೆ ಇದ್ದೇ ಇರುತ್ತದೆ. ನನ್ನ ಮುಂದಿನ ಜನ್ಮದಲ್ಲಿಯೂ ಈ ತಾಯಿಯ ಪ್ರೀತಿ ನನಗೆ ಸಿಗುವಂತಾಗಲಿ ಎಂದಷ್ಟೇ ಕೇಳಿಕೊಳ್ಳಬಲ್ಲೆ. ಹುಟ್ಟುಹಬ್ಬದ ಶುಭಾಶಯಗಳು ಅಮ್ಮ” ಎಂದು ಪ್ರೀತಿಯಿಂದ ಭಾರತಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

    ಅನಿರುದ್ಧ್ ಅವರು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ನಂತರ ಅಭಿಮಾನಿಗಳು ಕೂಡ ಕಮೆಂಟ್ ಮಾಡುವ ಮೂಲಕ ಭಾರತಿ ಅವರಿಗೆ ಶುಭ ಕೋರುತ್ತಿದ್ದಾರೆ. ನಟ ಅನಿರುದ್ಧ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಈ ಸೀರಿಯಲ್‍ನಲ್ಲಿ ಅನಿರುದ್ಧ್ ಆರ್ಯ ವರ್ಧನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

     

    ಭಾರತಿ ವಿಷ್ಣುವರ್ಧನ್ ಅವರು 1960ರಲ್ಲಿ ಕನ್ನಡ ಬೆಳ್ಳಿತೆರೆಗೆ ಕಾಲಿಟ್ಟಿದ್ದು, 80ರ ದಶಕದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡಿಗರು ಮನಗೆದ್ದಿದ್ದಾರೆ. ಡಾ.ರಾಜ್‍ಕುಮಾರ್, ಅಂಬರೀಶ್, ವಿಷ್ಣುವರ್ಧನ್, ಅನಂತ್‍ನಾಗ್ ಸೇರಿದಂತೆ ಅನೇಕ ಮೇರು ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಸುಮಾರು 100ಕ್ಕೂ ಅಧಿಕ ಕನ್ನಡ ಸಿನಿಮಾಗಳಲ್ಲಿ ಭಾರತಿ ವಿಷ್ಣುವರ್ಧನ್ ಅಭಿನಯಿಸಿದ್ದಾರೆ.