Tag: Anirudha Ravichandran

  • ಜೈಲರ್, ಜವಾನ್ ಮ್ಯೂಸಿಕ್ ಡೈರೆಕ್ಟರ್ ಜೊತೆ ಕೀರ್ತಿ ಸುರೇಶ್ ಮದುವೆ? ನಟಿ ತಂದೆ ಸ್ಪಷ್ಟನೆ

    ಜೈಲರ್, ಜವಾನ್ ಮ್ಯೂಸಿಕ್ ಡೈರೆಕ್ಟರ್ ಜೊತೆ ಕೀರ್ತಿ ಸುರೇಶ್ ಮದುವೆ? ನಟಿ ತಂದೆ ಸ್ಪಷ್ಟನೆ

    ಹಾನಟಿ ಕೀರ್ತಿ ಸುರೇಶ್ (Keerthy Suresh) ಸಿನಿಮಾಗಿಂತ ಹೆಚ್ಚೆಚ್ಚು ಅವರ ಖಾಸಗಿ ವಿಚಾರವಾಗಿಯೇ ಹೆಚ್ಚೆಚ್ಚು ಟ್ರೆಂಡ್‌ನಲ್ಲಿದ್ದಾರೆ. ಇದೀಗ ಜೈಲರ್ (Jailer), ಜವಾನ್ ಸಿನಿಮಾದ ಸಕ್ಸಸ್‌ಫುಲ್ ಮ್ಯೂಸಿಕ್ ಡೈರೆಕ್ಟರ್ ಜೊತೆ ದಾಂಪತ್ಯ ಜೀವನಕ್ಕೆ ನಟಿ ಕೀರ್ತಿ ಸುರೇಶ್ ಕಾಲಿಡಲಿದ್ದಾರೆ. ಈ ಸುದ್ದಿ ನಿಜನಾ? ಈ ಬಗ್ಗೆ ಕೀರ್ತಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.

    30ರ ವಯಸ್ಸು ಗಡಿ ದಾಟಿರೋ ಕೀರ್ತಿ ಸುರೇಶ್‌ಗೆ ಈಗಲೂ ಚಿತ್ರರಂಗದಲ್ಲಿ ಡಿಮ್ಯಾಂಡ್ ಇದೆ. ಸ್ಟಾರ್ ನಟರಿಗೆ ನಾಯಕಿಯಾಗುವ ಮೂಲಕ ಚಾರ್ಮ್ ಉಳಿಸಿಕೊಂಡಿದ್ದಾರೆ. ಇದರ ಜೊತೆಗೆ ಮದುವೆ ಮ್ಯಾಟರ್ ಕೂಡ ಚಾಲ್ತಿಯಲ್ಲಿದೆ. ಜೈಲರ್, ಜವಾನ್ (Jawan) ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ (Anirudh Ravichander) ಜೊತೆ ಕೀರ್ತಿ ಮದುವೆಯಂತೆ (Wedding) ಹಾಗಂತ ಕೆಲ ದಿನಗಳಿಂದ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ.

    ಈ ಬಗ್ಗೆ ಕೀರ್ತಿ ತಂದೆ ಮಾತನಾಡಿ, ಅನಿರುದ್ಧ ಜೊತೆ ಕೀರ್ತಿ ಮದುವೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿದ್ದಾರೆ. ಮೇಲಾಗಿ ಇದು ಯಾರೋ ಸೃಷ್ಟಿಸಿದ ವದಂತಿಗಳು, ಈ ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:‘ತೋತಾಪುರಿ 2’ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಶಿವರಾಜ್ ಕುಮಾರ್

    ಕೆಲದಿನಗಳ ಹಿಂದೆ ಕೀರ್ತಿ ಸುರೇಶ್ ಮದುವೆ ಬಗ್ಗೆ ಪ್ರತಿಕ್ರಿಯಿಸಿ, ನನ್ನ ಮಿಸ್ಟರಿ ಮ್ಯಾನ್ ನಾನು ಪರಿಚಯಿಸುತ್ತೇನೆ. ಸಮಯ ಬಂದಾಗ ನಾನೇ ಹೇಳುತ್ತೇನೆ. ಸದ್ಯಕ್ಕೆ ಮದುವೆ ಬಗ್ಗೆ ಪ್ಲ್ಯಾನ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಹಾಸನ್ ಸಿನಿಮಾದ ಹಾಡಿನಲ್ಲಿ ಕೇಂದ್ರ ಸರಕಾರ ಅಣಕ : ದೂರು ದಾಖಲು

    ಕಮಲ್ ಹಾಸನ್ ಸಿನಿಮಾದ ಹಾಡಿನಲ್ಲಿ ಕೇಂದ್ರ ಸರಕಾರ ಅಣಕ : ದೂರು ದಾಖಲು

    ಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾದ ಹಾಡು ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಬಿಡುಗಡೆ ಆದ ಕೆಲವೇ ಗಂಟೆಗಳಲ್ಲೇ ಈ ಹಾಡು ಸಾಕಷ್ಟು ಸದ್ದು ಮಾಡಿತ್ತು. ‘ಪಾತಾಳ.. ಪಾತಾಳ’ ಎಂಬ ಸಾಹಿತ್ಯದಿಂದ ಶುರುವಾಗುವ ಈ ಗೀತೆಗೆ ಕಂಟಕ ಎದುರಾಗಿದೆ. ಈ ಹಾಡಿನಲ್ಲಿ ಕೇಂದ್ರ ಸರಕಾರವನ್ನು ಅಣಕ ಮಾಡಲಾಗಿದೆ ಎಂಬ ಕಾರಣಕ್ಕಾಗಿ ದೂರು ದಾಖಲಾಗಿದೆ. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಈ ಹಾಡನ್ನು ಸ್ವತಃ ಕಮಲ್ ಹಾಸನ್ ಅವರೇ ಬರೆದಿರುವುದರಿಂದ ಉರಿವ ಬೆಂಕಿಗೆ ತುಪ್ಪ ಹಾಕಿದಂತಾಗಿದೆ. ಅಷ್ಟಕ್ಕೂ ಈ ಹಾಡಿನಲ್ಲಿ ಏನಿದೆ ಎಂದರೆ, ಕೇಂದ್ರ ಸರಕಾರ ಯೋಜನೆ ಮತ್ತು ಕೋವಿಡ್ ನಿಧಿ ಸಂಗ್ರಹದ ಕುರಿತಾಗಿ ನಕಾರಾತ್ಮಕ ಸಾಲುಗಳನ್ನು ಬರೆಯಲಾಗಿದೆ ಎನ್ನುವುದು ಈ ಹಾಡಿನ ಮೇಲಿರುವ ಆರೋಪ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ಖಜಾನೆ ಖಾಲಿ ಖಾಲಿ, ಖಜಾನೆಯಲ್ಲಿ ಹಣವೇ ಇಲ್ಲ. ರೋಗಗಳು ಹೆಚ್ಚುತ್ತಿರುವ ಈ ಸಮಯದಲ್ಲಿ ಖಜಾನೆ ಖಾಲಿ ಖಾಲಿ. ಅಲ್ಲದೇ, ಕೀ ಕಳ್ಳನ ಬಳಿ ಇದೆ ಎಂದು ಅರ್ಥ ಬರುವ ಸಾಲುಗಳನ್ನು ಹಾಡಾಗಿಸಿದ್ದಾರೆ ಎಂದು ಚೆನ್ನೈನ ಕೊರುಕ್ಕುಪೆಟ್ಟೈ ನಿವಾಸಿಯಾದ ಸೆಲ್ವಂ ಅನ್ನುವವರು ಕಮಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ಮೇ 12 ರಂದು ಚೆನ್ನೈ ಪೊಲೀಸ್ ಕಮಿಷ್ನರ್ ಬಳಿ ದೂರು ದಾಖಲಿಸಿರುವ ಸೆಲ್ವಂ, ಪೊಲೀಸ್ ನವರು ಅಗತ್ಯ ಕ್ರಮ ತಗೆದುಕೊಳ್ಳದೇ ಇದ್ದರೆ, ತಾವು ಮದರಾಸ್ ಹೈಕೋರ್ಟ್ ಮೊರೆ ಹೋಗುವುದಾಗಿಯೂ ತಿಳಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ನೋಡುಗರ ಸಂಖ್ಯೆ ಮತ್ತೆ ಹೆಚ್ಚಿದೆ. ಈಗಾಗಲೇ 15 ಮಿಲಿಯನ್ ಗೂ ಹೆಚ್ಚು ಜನರು ಈ ಹಾಡನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ : ಸೀಮಂತದ ಖುಷಿಯಲ್ಲಿ ಸಂಜನಾ: ತಿಂಗಳಾಂತ್ಯಕ್ಕೆ ಮಡಿಲಿಗೆ ಮಗುವಿನ ಆಗಮನ

    ಜೂನ್ 3 ರಂದು ತೆರೆಗೆ ಬರಲಿರುವ ವಿಕ್ರಮ್ ಸಿನಿಮಾ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಅನಿರುದ್ಧ ರವಿಚಂದ್ರನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶ್ವರೂಪಮ್ 2 ಸಿನಿಮಾದ ನಾಲ್ಕು ವರ್ಷದ ನಂತರ ಈ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ನಿರೀಕ್ಷೆಯಂತೂ ಹೆಚ್ಚಿದೆ.