Tag: Anna

  • ಹುಡುಗಿ ತಂಟೆಗೆ ಹೋಗಬೇಡ ಎಂದರೂ ಕೇಳಲಿಲ್ಲ ನಾಗೇಶ್ – ಪೊಲೀಸರ ಬಳಿ ಆರೋಪಿಯ ಅಣ್ಣ ಹೇಳಿಕೆ

    ಹುಡುಗಿ ತಂಟೆಗೆ ಹೋಗಬೇಡ ಎಂದರೂ ಕೇಳಲಿಲ್ಲ ನಾಗೇಶ್ – ಪೊಲೀಸರ ಬಳಿ ಆರೋಪಿಯ ಅಣ್ಣ ಹೇಳಿಕೆ

    ಬೆಂಗಳೂರು: ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ಆರೋಪಿ ಪಾಗಲ್ ಪ್ರೇಮಿ ನಾಗೇಶ್‍ನ ಅಣ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ನಿನ್ನೆ ರಾತ್ರಿ ಮಾಗಡಿ ರಸ್ತೆ ಬಳಿ ನಾಗೇಶ್ ಅಣ್ಣ ರಮೇಶ್ ಬಾಬು ಅಡಗಿ ಕುಳಿತಿದ್ದ. ಈ ವೇಳೆ ಪೊಲೀಸರು ನಾಗೇಶ್ ಅಣ್ಣನ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯ ಮೇಲೆ ಆ್ಯಸಿಡ್ ಸುರಿದ ಬಳಿಕ ಆರೋಪಿ ನಾಗೇಶ್ ತನ್ನ ಅಣ್ಣನಿಗೆ ಫೋನ್ ಮಾಡಿದ್ದ. ಫೋನ್ ಮಾಡಿ ಆ್ಯಸಿಡ್ ಹಾಕಿದ್ದೀನಿ, ಪೊಲೀಸರು ಬರ್ತಾರೆ ಎಸ್ಕೇಪ್ ಆಗು ಎಂದಿದ್ದ. ಬಳಿಕ ಆರೋಪಿ ಅಣ್ಣ ಪೊಲೀಸರ ಕೈಗೆ ಸಿಗದೆ ಎಸ್ಕೇಪ್ ಆಗಿದ್ದ. ಇದನ್ನೂ ಓದಿ:  ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಚಿಕಿತ್ಸೆಗೆ 1 ಲಕ್ಷ ರೂ. ಚಕ್ ಕೊಟ್ಟ 

    ಪೊಲೀಸರು ನಿನ್ನೆ ಸಂಜೆ ಆರೋಪಿ ಅತ್ತಿಗೆಯನ್ನು ಕರೆತಂದು ವಿಚಾರಣೆ ಮಾಡಿದ್ದರು. ನಂತರದಲ್ಲಿ ರಾತ್ರಿ ನಾಗೇಶ್ ಅಣ್ಣನ ಕರೆತಂದು ವಿಚಾರಣೆ ಮಾಡಿದ್ದಾರೆ. ಆ್ಯಸಿಡ್ ದಾಳಿಕೋರ ನಾಗೇಶ್‍ನ ಅಣ್ಣ, ಅತ್ತಿಗೆ ಹಾಗೂ ಪೋಷಕರನ್ನು ಸಹ ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ನಮಗೆ ಈ ಬಗ್ಗೆ ಗೊತ್ತಿಲ್ಲ ಸರ್. ಆತ ಕಾಲ್ ಮಾಡಿ ಈ ರೀತಿ ಆ್ಯಸಿಡ್ ಹಾಕಿರುವ ಬಗ್ಗೆ ಹೇಳಿದಾಗ ಕೂಡಲೇ ನಾವೆಲ್ಲರೂ ಭಯಭೀತರಾಗಿ ಮನೆ ಬಿಟ್ಟು ಓಡಿ ಹೋದೆವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ

    ಆರೋಪಿ ಅಣ್ಣನು ಏಪ್ರಿಲ್ 27ರ ರಾತ್ರಿ ನಾಗೇಶ್ ಮನೆಗೆ ಬಂದಿದ್ದ. ಅಣ್ಣನ ಜೊತೆಗೆ ಕೆಲ ಸಂಬಂಧಿಕರು ಸಹ ಬಂದಿದ್ದರು. ಈ ವೇಳೆ, ನಾಗೇಶ್‍ನಿಗೆ ತಡರಾತ್ರಿವರೆಗೂ ಬುದ್ಧಿವಾದ ಹೇಳಿದ್ದರು. ಮನೆಗೆ ಬಂದಿದ್ದ ಐದಾರು ಜನರಿಂದ ನಾಗೇಶ್ ಬುದ್ಧಿವಾದ ಹೇಳಿಸಿಕೊಂಡಿದ್ದ. ಯುವತಿ ಪೋಷಕರು ಅಣ್ಣನಿಗೆ ವಿಚಾರ ತಿಳಿಸಿದ ನಂತರ ಬಂದು ಬುದ್ಧಿವಾದ ಹೇಳಿದ್ದರು. ಅಷ್ಟು ಹೇಳಿದರೂ ಮಾತು ಕೇಳದೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ ಎಂದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

    ಆರೋಪಿಯು ಯುವತಿ ಮನೆಯಿಂದ 300 ಮೀಟರ್ ದೂರದಲ್ಲೇ ಮನೆ ಮಾಡಿಕೊಂಡಿದ್ದ. ಹೆಗ್ಗನಹಳ್ಳಿ ಕ್ರಾಸ್‍ನ ಸಂಜೀವಿನಿ ನಗರದಲ್ಲಿ ಐದು ವರ್ಷದಿಂದ ಇದೇ ಮನೆಯಲ್ಲಿ ವಾಸವಿದ್ದ. ನಾಗೇಶ್ ತಂದೆ-ತಾಯಿ ಜೊತೆಗೆ ವಾಸವಿದ್ದ. ಸದ್ಯ ಪೊಲೀಸರು ಆರೋಪಿಯ ಪೋಷಕರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

  • ಬುದ್ದಿ ಮಾತು ಹೇಳಿದ ತಮ್ಮನನ್ನೆ ಕೊಂದ ಅಣ್ಣ

    ಬುದ್ದಿ ಮಾತು ಹೇಳಿದ ತಮ್ಮನನ್ನೆ ಕೊಂದ ಅಣ್ಣ

    ಯಾದಗಿರಿ: ಬುದ್ದಿ ಮಾತು ಹೇಳಿದ ಎಂದು ಕೋಪಗೊಂಡ ಅಣ್ಣ, ತಮ್ಮನನ್ನು ಕೊಂದಿರುವ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ತಮ್ಮ ದೇವಿಂದ್ರ ಚವ್ಹಾಣ್(28)ನನ್ನು ಅಣ್ಣ ಜಯರಾಮ್ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ರೈಲಲ್ಲಿ ಊರಿಗೆ ಹೊರಟ್ಟಿದ್ದ ಪಬ್‌ಜಿ ಪಾರ್ಟ್ನರ್‌ಗಾಗಿ ಹುಸಿ ಬಾಂಬ್‌ ಕರೆ ಮಾಡಿದ ಬಾಲಕ

    ನಡೆದಿದ್ದೇನು?
    ಜಯರಾಮ್ ಹಾಗೂ ದೇವಿಂದ್ರ ಸಹೋದರರು ಯುಗಾದಿ ಹಿನ್ನೆಲೆ ಊರಿಗೆ ಬಂದಿದ್ದರು. ಈ ವೇಳೆ ಭಾನುವಾರ ರಾತ್ರಿ ದೇವಿಂದ್ರ ಹಾಗೂ ಜಯರಾಮ ನಡುವೆ ಜಗಳ ಪ್ರಾರಂಭವಾಗಿದೆ. ಈ ವೇಳೆ ದೇವಿಂದ್ರ ಜಮ್ಲಾನಾಯಕ ಮಕ್ಕಳ ಸಹವಾಸ ಮಾಡಬೇಡ ಎಂದು ಜಯರಾಮ್‍ಗೆ ಬುದ್ದಿ ಹೇಳಿದ್ದಾನೆ.

    ಬುದ್ದಿ ಮಾತು ಹೇಳಿದ್ದಕ್ಕೆ ಕೋಪಗೊಂಡ ಜಯರಾಮ್ ಕುಟುಂಬಸ್ಥರ ಮುಂದೆಯೇ ದೇವಿಂದ್ರನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೆಪ್ ಆಗಿದ್ದಾನೆ. ಪ್ರಸ್ತುತ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಲೆಕೂದಲು ಬೋಳಿಸಿಕೊಂಡ ಫೋಟೋ ಶೇರ್ ಮಾಡಿದ ಗರ್ಭಿಣಿ ಸಂಜನಾ

    ಗುರಮಠಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತಂಗಿಯ ಪತಿಯನ್ನು ಹತ್ಯೆಗೈದು ಠಾಣೆಗೆ ರುಂಡ ತಂದ ಅಣ್ಣ

    ತಂಗಿಯ ಪತಿಯನ್ನು ಹತ್ಯೆಗೈದು ಠಾಣೆಗೆ ರುಂಡ ತಂದ ಅಣ್ಣ

    ಭೂಪಾಲ್: ಓಡಿ ಹೋಗಿ ಮದುವೆಯಾದ ಸಹೋದರಿ ಕುರಿತಾಗಿ ಕೋಪಗೊಂಡ ಅಣ್ಣ ಆಕೆಯ ಪತಿಯ ರುಂಡ ಕತ್ತರಿಸಿ ಠಾಣೆಗೆ ತಂದು ಶರಣಾಗಿರುವ ಘಟನೆ ಮಧ್ಯಪ್ರದೇಶದ ಜಬುಲ್ಪುರದಲ್ಲಿ ನಡೆದಿದೆ.

    ಶಿವರಾಮ್ ಶುಕ್ಲಾ ಅಲಿಯಾಸ್ ಧೀರಜ್ ಬಂಧಿತ ಆರೋಪಿಯಾಗಿದ್ದಾನೆ. ಮೃತನನ್ನು ವಿಜೇತ್ ಕಶ್ಯಪ್(32) ಎಂದು ಗುರುತಿಲಾಗಿದೆ. ಸಹೋದರಿ ಪ್ರೀತಿಸಿ ಮದುವೆಯಾಗಿದ್ದಾಳೆ ಎಂದು ಕೊಂಪಗೊಂಡ ಸಹೋದರ ಆಕೆಯ ಪತಿಯನ್ನು ಕೊಲೆ ಮಾಡಿದ್ದಾನೆ.

    ವಿಜೇತ್ ಕಶ್ಯಪ್ ಕಳೆದ ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಮದುವೆಯಾಗಿ ಮನೆಗೆ ಮರಳಿ ಬಂದಿದ್ದರು. ಈ ವೇಳೆ ಕುಪಿತಗೊಂಡು ಈ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಲ್ವಾರಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಸತೀಶ್ ಪಟೇಲ್ ತಿಳಿಸಿದ್ದಾರೆ.

    ಹೊಲದಲ್ಲಿ ಬಿದ್ದಿದ್ದ ರುಂಡ ವಿಲ್ಲದ ದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಇದು ಕೊಲೆಯೇ ಅಥವಾ ಆತ್ಮಹತ್ಯೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯವರ ವಿರುದ್ಧವಾಗಿ ಪ್ರೀತಿಸಿ ಮದುವೆಯಾಗಿ ಯುವತಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

  • ಸೋದರಿಯ ಶವಸಂಸ್ಕಾರಕ್ಕೆ ಬಂದು ಬಾವನನ್ನು ಹತೈಗೈದ ಅಣ್ಣ

    ಸೋದರಿಯ ಶವಸಂಸ್ಕಾರಕ್ಕೆ ಬಂದು ಬಾವನನ್ನು ಹತೈಗೈದ ಅಣ್ಣ

    – ಆರು ಗಂಟೆಗಳಲ್ಲೇ ಆರೋಪಿಗಳ ಬಂಧನ

    ಬೆಂಗಳೂರು: ಭಾನುವಾರ ಕಾಡುಗೋಡಿಯಲ್ಲಿ ನಡೆದ ಹೆಚ್.ಎ.ಎಲ್ ಉದ್ಯೋಗಿ ರಾಜೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆ ನಡೆದ ಆರು ಗಂಟೆಗಳಲ್ಲಿ ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಗಳನ್ನು ಜಾನ್‍ಪಾಲ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್‍ಪಾಲ್ ತಂಗಿ ಜಾಸ್ಮಿನ್‍ಗೆ ಏಳು ವರ್ಷಗಳ ಹಿಂದೆ ರಾಜೇಶ್ ಜೊತೆ ವಿವಾಹ ಮಾಡಲಾಗಿತ್ತು. ಇವರಿಗೆ ಐದು ವರ್ಷದ ಗಂಡು ಹಾಗೂ ಮೂರು ತಿಂಗಳ ಹೆಣ್ಣು ಮಗು ಇದ್ದು, ಕಾಡುಗೋಡಿಯ ವೀರಸ್ವಾಮಿರೆಡ್ಡಿ ಬಡಾವಣೆಯಲ್ಲಿ ವಾಸವಾಗಿದ್ದರು.

    ಕಳೆದ ನಾಲ್ಕು ತಿಂಗಳ ಹಿಂದೆ ಜಾಸ್ಮಿನ್ ಮತ್ತು ರಾಜೇಶ್ ನಡುವೆ ಜಗಳವಾಗಿದ್ದು, ಜಾಸ್ಮಿನ್ ಕೆಜಿಎಫ್‍ನಲ್ಲಿರುವ ತನ್ನ ತವರು ಮನೆಗೆ ಹೋಗಿ ಅಲ್ಲೆ ವಾಸವಿದ್ದಳು. ಆದರೆ ಇದೇ ತಿಂಗಳ 15 ರಂದು ಜಾಸ್ಮಿನ್ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ವಿಷಯ ತಿಳಿದ ಜಾಸ್ಮಿನ್ ಅಣ್ಣ ಯೋಧನಾಗಿರುವ ಜಾನ್‍ಪಾಲ್ ರಜೆಯ ಮೇಲೆ ತಂಗಿಯ ಶವಸಂಸ್ಕಾರಕ್ಕೆ ಬಂದಿದ್ದನು. ತಂಗಿಯ ಸಾವಿಗೆ ಆಕೆಯ ಪತಿಯೇ ಕಾರಣ ಎಂದು ತಿಳಿದು ತನ್ನ ಚಿಕ್ಕಪ್ಪನ ಮಗನಾದ ದಿನೇಶ್ ಜೊತೆಗೂಡಿ ಕೊಲೆ ಮಾಡಲು ಪ್ಲಾನ್ ಮಾಡಿದ್ದನು. ಅದರಂತೆಯೇ ಕೆಜಿಎಫ್‍ನಿಂದ ಕಾಡುಗೋಡಿಗೆ ಬಂದಿದ್ದ ರಾಜೇಶ್‍ನನ್ನು ಕಾಡುಗೋಡಿ ವೀರಸ್ವಾಮಿರೆಡ್ಡಿ ಲೇಔಟ್‍ನ ಮಯೂರ ಬೇಕರಿ ಬಳಿ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು.

    ವಿಷಯ ತಿಳಿದ ಕಾಡುಗೋಡಿ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ಕೊಲೆ ನಡೆದ ಆರು ಗಂಟೆಗಳಲ್ಲಿಯೇ ಇಬ್ಬರು ಆರೋಪಿಗಳನ್ನು ಬಂಗಾರ ಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.