Tag: Anna Bhagya Yojana

  • ದುಡ್ಡು ಕೊಡಿ ಪ್ಲೀಸ್‌ – ಇನ್ನೂ ಬಗೆಹರಿಯದ ಗೃಹಲಕ್ಷ್ಮಿ, ಅನ್ನಭಾಗ್ಯ ಸಮಸ್ಯೆ

    ದುಡ್ಡು ಕೊಡಿ ಪ್ಲೀಸ್‌ – ಇನ್ನೂ ಬಗೆಹರಿಯದ ಗೃಹಲಕ್ಷ್ಮಿ, ಅನ್ನಭಾಗ್ಯ ಸಮಸ್ಯೆ

    – ಪಬ್ಲಿಕ್‌ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಮಹಿಳೆಯರ ಆಕ್ರೋಶ

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ (Congress Guarantee) ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆ ಹಳ್ಳಹಿಡಿಯುತ್ತಿದ್ಯಾ ಎಂಬ ಅನುಮಾನ ಶುರುವಾಗಿದೆ.

    ಬೆಂಗಳೂರು, ಹಾಸನ, ರಾಯಚೂರು, ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ಕೆಲವು ಮಹಿಳೆಯರಿಗೆ (Women) ಮೊದಲ ತಿಂಗಳ ಹಣ ಮಾತ್ರ ಬಂದಿದ್ದರೆ, ಕೆಲವರಿಗೆ ಮೂರು ತಿಂಗಳ ಹಣ ಬಂದಿದೆ. ಆದರೆ ಕಡು ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ಒಂದು ತಿಂಗಳ ಹಣವೂ ಬಂದಿಲ್ಲ. ಇದನ್ನೂ ಓದಿ: ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟು – ಅಂದು 30 ಪೈಪ್‌, 5 ಸ್ಪ್ರಿಂಕ್ಲರ್‌ಗೆ 1,876 ರೂ. – ಈಗ 4,667 ರೂ.ಗೆ ಏರಿಕೆ

     

    ಅಧಿಕಾರಿಗಳನ್ನು ಪ್ರಶ್ನಿಸಿದರೆ ಆಧಾರ್ ಕಾರ್ಡ್ ನಂಬರ್, ಫೋನ್ ನಂಬರ್ ಸರಿಯಲ್ಲ ಎನ್ನುತ್ತಾರೆ. ಎಲ್ಲವನ್ನು ಸರಿಪಡಿಸಿದರೂ ಸಹ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ.  ಇದನ್ನೂ ಓದಿ: ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

    ಬ್ಯಾಂಕ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಗ್ಯಾರೆಂಟಿ ಯೋಜನೆ ಹಣದ ಬಗ್ಗೆ ವಿಚಾರಿಸಿ ನಿರಾಶರಾಗಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿದೆ.

     

    ಅನ್ನಭಾಗ್ಯದ ಹಣವೂ ಇಲ್ಲ:
    ಗ್ಯಾರಂಟಿಗಳನ್ನು ಈಡೇರಿಸುವ ಜಂಬದಲ್ಲಿರುವ ರಾಜ್ಯ ಸರ್ಕಾರ ಸಾಕಷ್ಟು ಜನ ಮಹಿಳೆಯರಿಗೆ ಗೃಹ ಲಕ್ಷ್ಮಿ ಇರಲಿ ಅನ್ನಭಾಗ್ಯ ಹಣವನ್ನೂ (Anna Bhagya Yojana) ಕೊಡುತ್ತಿಲ್ಲ

     

    ಕೋಲಾರ ನಗರದ ನೂರ್ ನಗರದಲ್ಲಿ ಸಾಕಷ್ಟು ಜನ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಹಣ ಮಾತ್ರವಲ್ಲ ಅನ್ನಭಾಗ್ಯ ಯೋಜನೆಯ ಹಣ ಕೂಡ ಸಿಕ್ಕಿಲ್ಲ. ಅಧಿಕಾರಿಗಳನ್ನು ಕೇಳಿದರೆ ಬರುತ್ತೆ ಹೋಗಿ ಎನ್ನುತ್ತಾರೆ. ಅಲ್ಲದೆ ಆಹಾರ ಇಲಾಖೆಯಲ್ಲಿ ಕೇಳಿದರೆ ಬ್ಯಾಂಕ್ ಆಧಾರ್ ಲಿಂಕ್ ಮಾಡಿ ಎನ್ನುತ್ತಾರೆ. ಬ್ಯಾಂಕ್‌ನಲ್ಲಿ ವಿಚಾರಿಸಿದರೆ ಆಹಾರ ಇಲಾಖೆಯಲ್ಲಿ ಕೇಳಿ ಎನ್ನುತ್ತಾರೆ. ಹಾಗಾಗಿ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಹಿಳೆಯರು ಸಿಟ್ಟು ಹೊರ ಹಾಕಿದ್ದಾರೆ.

     

  • ಅನ್ನಭಾಗ್ಯ ಯೋಜನೆಗಿಲ್ಲ ಕೇಂದ್ರದ ಅಕ್ಕಿ – ಆಶಾಭಾವನೆಯಿಂದ ಬಂದ ನಮಗೆ ಎರಡನೇ ಬಾರಿ ನಿರಾಸೆ: ಮುನಿಯಪ್ಪ

    ಅನ್ನಭಾಗ್ಯ ಯೋಜನೆಗಿಲ್ಲ ಕೇಂದ್ರದ ಅಕ್ಕಿ – ಆಶಾಭಾವನೆಯಿಂದ ಬಂದ ನಮಗೆ ಎರಡನೇ ಬಾರಿ ನಿರಾಸೆ: ಮುನಿಯಪ್ಪ

    ನವದೆಹಲಿ: ರಾಜ್ಯದ ಅನ್ನಭಾಗ್ಯ ಯೋಜನೆಗೆ (Anna Bhagya Yojana) ಬೇಕಿರುವ ಅಗತ್ಯ ಅಕ್ಕಿ (Rice) ಪೂರೈಸಲು ಸಾಧ್ಯವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ ಎಂದು ರಾಜ್ಯದ ಆಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಪ್ರತಿಕ್ರಿಯಿಸಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಅನ್ನಭಾಗ್ಯ ಯೋಜನೆಗೆ ಅಗತ್ಯ ಅಕ್ಕಿ ಪೂರೈಕೆಗೆ ಮನವಿ ಮಾಡಿದೆ. ಆದರೆ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆಶಾ ಭಾವನೆಯಿಂದ ಬಂದ ನಮಗೆ ಎರಡನೇ ಬಾರಿಗೆ ನಿರಾಸೆಯಾಗಿದೆ ಎಂದು ಅವರು ತಿಳಿಸಿದರು.

    ಕೇಂದ್ರ ಸರ್ಕಾರದ ಬಳಿ ಸಾಕಷ್ಟು ಪ್ರಮಾಣದ ಅಕ್ಕಿ ಇದೆ. ಇದರಲ್ಲಿ ಪ್ರತಿ ತಿಂಗಳು ರಾಜ್ಯಕ್ಕೆ ಅಗತ್ಯ ಇರುವ 2.29 ಲಕ್ಷ ಮೆಟ್ರಿಕ್ ಟನ್ ಕೊಡಿ ಅಂತ ಕೇಳಿದರೂ ಕೊಡುತ್ತಿಲ್ಲ. ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎನಿಸುತ್ತಿದೆ. ಹೆಚ್ಚಿನ ಸ್ಟಾಕ್ ಇದ್ದರೂ ಯಾಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿದ ಒತ್ತಡ; ಸಾರ್ವಜನಿಕರ ಎದುರೇ ಆಧಾರ್ ಕೇಂದ್ರದ ಸಿಬ್ಬಂದಿ ಕಣ್ಣೀರು

    ಕೇಂದ್ರ ನಿರಾಕರಿಸಿರುವ ಹಿನ್ನೆಲೆ ನಾವು ನಮ್ಮ ದಾರಿ ಕಂಡುಕೊಳ್ಳಬೇಕಿದೆ. ಅನ್ನಭಾಗ್ಯ ಘೋಷಣೆ ಮಾಡಿದ್ದೇವೆ, ಅದನ್ನು ಜಾರಿ ಮಾಡುತ್ತೇವೆ. ಕೇಂದ್ರೀಯ ಭಂಡಾರ, ನಾಫೆಡ್ ಸೇರಿ 3 ಸ್ವತಂತ್ರ ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಅವರ ಪ್ರತಿಕ್ರಿಯೆ ಬಳಿಕ ಎಲ್ಲಿಂದ ಅಕ್ಕಿ ಖರೀದಿಸಬೇಕು ಎಂಬುದನ್ನು ಪರಿಶೀಲಿಸುತ್ತೇವೆ. ಬೆಲೆಯಲ್ಲಿ ದೊಡ್ಡ ವ್ಯತಾಸ ಆಗುವುದಿಲ್ಲ ಎಂದುಕೊಂಡಿದ್ದೇವೆ. ಯೋಜನೆಗೆ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದರು. ಇದನ್ನೂ ಓದಿ: ಗೃಹಲಕ್ಷ್ಮಿಯನ್ನ ನಾನೇ ಹೋಲ್ಡ್ ಮಾಡಿಸಿದ್ದೇನೆ – ಡಿಸಿಎಂ ಡಿಕೆಶಿ

  • 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸಿದ್ದುಗೆ ಡಿವಿಎಸ್ ಟಾಂಗ್

    13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸಿದ್ದುಗೆ ಡಿವಿಎಸ್ ಟಾಂಗ್

    ಚಾಮರಾಜನಗರ: 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ (Rice) ಕೊಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಮಾಜಿ ಸಿಎಂ ಡಿವಿ ಸದಾನಂಗೌಡ (DV Sadananda Gowda) ಟಾಂಗ್ ನೀಡಿದ್ದಾರೆ.

    ಚಾಮರಾಜನಗರದಲ್ಲಿ (Chamarajanagar) ಮಾತನಾಡಿದ ಅವರು, ಕೇಂದ್ರ ಅಕ್ಕಿ ಕೊಡುತ್ತಿಲ್ಲವೆಂಬ ಕಾಂಗ್ರೆಸ್ (Congress) ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಣಿಯಲಾರದವನು ನೆಲಡೊಂಕು ಅಂದನಂತೆ. ಹಾಗೆ ಏನೇನೋ ಸಬೂಬು ಹೇಳುತ್ತಿದ್ದಾರೆ. ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ? ನನಗೂ, ನಿಮಗೂ ನಮ್ಮ ಮನೆಯವರಿಗೂ, ನಿಮ್ಮ ಮನೆಯವರಿಗೂ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಟವಲ್ ಹೆಗಲಿನಿಂದ ಎಲ್ಲೋಯ್ತು? ಏನಾದ್ರೂ ಆಗ್ಲಿ ಕೊಡ್ತೀನಿ ಎಂದು ದೊಂಬರ ಲಾಗ ಹಾಕಿದ್ದರು. ಒಬ್ಬ ಸಿಎಂ ಆಗುವವನಿಗೆ ಮುಂದಾಲೋಚನೆ ಇರಬೇಕು ಎಂದು ವಾಗ್ದಾಳಿ ನಡೆಸಿದರು.

    ಅಕ್ಕಿ ಮಾರಾಟ ಮಾಡಬಾರದು ಎಂಬ ನೀತಿಯನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಮಾಡಿದ್ದಲ್ಲ. ಇದು ದೇಶದಲ್ಲಿ ಆಹಾರ ಭದ್ರತೆಗೆ ಕೇಂದ್ರ ಕೈಗೊಂಡ ನಿಲುವು. ಇದು ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಕೇಂದ್ರ ಕೈಗೊಂಡ ನಿರ್ಧಾರ. ರಾಜ್ಯಕ್ಕೆ ಅಕ್ಕಿ ಕೊಡಬಾರದೆಂದು ಹೇಳುವ ನೀಚ ಬುದ್ದಿ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕಾಂಗ್ರೆಸ್‌ನವರಂತೆ ಚೀಪ್ ಪಾಲಿಟಿಕ್ಸ್ ಮಾಡಿ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ನಾವು ಮಾಡಲ್ಲ. ಕರ್ನಾಟಕದ ಪ್ರತಿಯೊಬ್ಬ ನಾಗರಿಕನಿಗೂ ಅಕ್ಕಿ ಸಿಗಬೇಕೆಂಬುದು ಬಿಜೆಪಿ ನಿಲುವು ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದರು.

    ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ:
    ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂಬ ಸ್ವಪಕ್ಷದ ನಾಯಕರ ಆರೋಪವನ್ನು ಸದಾನಂದಗೌಡ ಅಲ್ಲಗೆಳೆದಿದ್ದಾರೆ. ನಮ್ಮ ಪಕ್ಷದಲ್ಲಿ ಬಿಲ್‌ಕುಲ್ ಪೊಲಿಟಿಕಲ್ ಅಡ್ಜಸ್ಟ್ಮೆಂಟ್ ನಡೆದಿಲ್ಲ. ಹೊಂದಾಣಿಕೆ ರಾಜಕೀಯ ಮಾಡಿಕೊಂಡಿದ್ರೆ ಖಂಡಿತ ನಾವು ಬಹುಮತ ಪಡೆಯುತ್ತಿದ್ದೆವು ಎಂದರು. ಇದನ್ನೂ ಓದಿ: ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ಗೆಲ್ಲುವ ನಿರೀಕ್ಷೆ ಇದ್ದ ಕಡೆಯು ಸಹ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಸಮಯ, ಸಂದರ್ಭ ನೋಡಿ ಪೊಲಿಟಿಕಲ್ ಸ್ಟ್ರಾಟಜಿ ಮಾಡಬೇಕು. ಅದನ್ನೆಲ್ಲಾ ಮಾಧ್ಯಮದವರ ಬಳಿ ಹೇಳಲು ಆಗಲ್ಲ. ಪೊಲಿಟಿಕಲ್ ಅಡ್ಜಸ್ಟ್ಮೆಂಟ್ ರಾಜಕಾರಣದಲ್ಲಿ ಇರಬಾರದು ಅಂತೇನೂ ಇಲ್ಲ. ಯಾವಾಗ ಅವಶ್ಯಕತೆ ಇದೆ, ಆಗ ಮಾಡಬೇಕು ಎಂದು ಅವರು ಹೇಳಿದರು.

    ಜು.3 ರೊಳಗೆ ವಿಪಕ್ಷ ನಾಯಕರ ನೇಮಕ:
    ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜುಗಲ್ ಬಂದಿಗೆ ಸವಾಲ್ ಹಾಕುವ ವಿಪಕ್ಷ ನಾಯಕನನ್ನು ಆರಿಸ್ತೇವೆ. ಅಧಿವೇಶನ ಪ್ರಾರಂಭವಾಗುವ ಮುನ್ನವೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಬೇಕಿತ್ತು. ಆದರೆ ಸೋಲಿನ ಪರಾಮರ್ಶೆ ಹಾಕಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕೆಂದಿರುವುದರಿಂದ ತಡವಾಗಿದೆ. ಜುಲೈ 3 ರೊಳಗೆ ಒಳ್ಳೆ ವಿಪಕ್ಷ ನಾಯಕನ ಆಯ್ಕೆ ಆಗಲಿದೆ. ನಮ್ಮ ರಾಷ್ಟ್ರೀಯ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ ಆಯ್ಕೆ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ಒಂದು ಶಿಸ್ತು ಇದೆ. ಈ ಪ್ರಕಾರ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕ ಯಾರಾಗಬೇಕು ಎಂದು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!

  • ಗೋವಿನ ಮೇಲಿನ ನಂಬಿಕೆಗೂ ಸಂವಿಧಾನಕ್ಕೂ ವ್ಯತ್ಯಾಸ ಇದೆ: ಜಿ ಪರಮೇಶ್ವರ್

    ಗೋವಿನ ಮೇಲಿನ ನಂಬಿಕೆಗೂ ಸಂವಿಧಾನಕ್ಕೂ ವ್ಯತ್ಯಾಸ ಇದೆ: ಜಿ ಪರಮೇಶ್ವರ್

    ತುಮಕೂರು: ಜನೋಪಕಾರಿ ಅಲ್ಲದ ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ ಪಡೆಯುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಪುನರುಚ್ಚರಿಸಿದ್ದಾರೆ.

    ತುಮಕೂರಿನಲ್ಲಿ (Tumakuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋವಿನ ಮೇಲೆ ಇರುವ ನಂಬಿಕೆ, ಪ್ರೀತಿಗೂ, ಸಂವಿಧಾನಕ್ಕೂ ವ್ಯತ್ಯಾಸ ಇದೆ. ಆರ್ಥಿಕತೆಯೇ ಬೇರೆ, ನಂಬಿಕೆಯೇ ಬೇರೆ. ಹೀಗಾಗಿ ಈ ಎರಡೂ ಕಾನೂನನ್ನು ರದ್ದುಗೊಳಿಸುತ್ತೇವೆ ಎಂದಿದ್ದಾರೆ.

    ಅನ್ನ ಭಾಗ್ಯ ಯೋಜನೆ ಕುರಿತಂತೆ ಮಾತನಾಡಿದ ಪರಮೇಶ್ವರ್, ಈಗಾಗಲೇ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಏನು ಮಾತುಕತೆಯಾಗಿದೆ ಎಂಬುದು ಗೊತ್ತಿಲ್ಲ. ಯಾವುದೋ ಮುಲಾಜಿಗೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ. ಪ್ರತಿ ರಾಜ್ಯಕ್ಕೆ ಕೊಟ್ಟಂತೆ ಕರ್ನಾಟಕಕ್ಕೂ ಕೊಡುತ್ತಿದೆ. ಕೇಂದ್ರ ಕೊಟ್ಟ 5 ಕೆಜಿ ಸೇರಿಸಿ ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಣ್ಣ, ನಮಗೆಲ್ಲಾ ವಿಷದ ಬಾಟ್ಲಿ ಭಾಗ್ಯನೂ ಕೊಟ್ಬಿಡಿ: ಅಳಲು ತೋಡಿಕೊಂಡ ಆಟೋ ಚಾಲಕ

    ಈ ನಡುವೆ ಬಿಜೆಪಿ ಸಾಧನಾ ಸಮಾವೇಶ ಕುರಿತಂತೆ ಮಾತನಾಡಿದ ಅವರು, ಬಿಜೆಪಿಯವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ? 40% ಕಮಿಷನ್ ಪಡೆದಿದ್ದು, 15 ಲಕ್ಷ ರೂ. ಖಾತೆಗೆ ಹಾಕ್ತಿನಿ ಅಂದಿದ್ದು ಸಾಧನೆನಾ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಣ್ಣೆ ಹೊಡೆದ್ರೆ ಕಿಕ್ ಬರಲ್ಲ, ರೇಟ್ ಕೇಳಿದ್ರೇನೆ ಕಿಕ್ ಹೊಡೆಯುತ್ತೆ – ಅಶೋಕ್ ಲೇವಡಿ

  • ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

    ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

    ನವದೆಹಲಿ: ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣದಿಂದ ಅಕ್ಕಿ (Rice) ಹೊಂದಿಸಿಕೊಳ್ಳುತ್ತಿರುವುದು ಸ್ವಲ್ಪ ವಿಳಂಬವಾಗುತ್ತಿದೆ. ಇದರಿಂದಾಗಿ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ (Anna Bhagya Yojana) ಜಾರಿ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೊಂದಿಸಲು ಬೇರೆ ಬೇರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಯಾವ ರಾಜ್ಯಗಳಲ್ಲೂ ಬೇಡಿಕೆ ಇರುವಷ್ಟು ಸಾಮರ್ಥ್ಯದಲ್ಲಿ ಪೂರೈಕೆಯಾಗದ ಹಿನ್ನೆಲೆ ಯೋಜನೆ ಜಾರಿ ಮಾಡುವುದು ಕಷ್ಟವಾಗುತ್ತಿದೆ ಎಂದರು.

    ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಟ್ಟ ರಾಜಕೀಯ ಮಾಡುತ್ತಿದೆ. ಈಗಾಗಲೇ ತೆಲಂಗಾಣ, ಪಂಜಾಬ್ ಸೇರಿದಂತೆ ಎಲ್ಲಾ ಕಡೆ ಕೇಳಿದ್ದೇವೆ. ಆಂಧ್ರಪ್ರದೇಶದಿಂದ ಅಕ್ಕಿ ಆಮದು ಮಾಡಿಕೊಂಡರೆ ಪ್ರತಿ ಕೆಜಿಗೆ 42 ರೂ. ಆಗಲಿದೆ. 1 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ ಆದರೆ ಅದು ಕೇವಲ ಒಂದು ತಿಂಗಳು ನೀಡಲು ಸಾಧ್ಯ ಎಂದು ಛತ್ತೀಸ್‌ಗಢ ಸರ್ಕಾರ ಹೇಳಿದೆ. ತೆಲಂಗಾಣ ಕೇವಲ ಗೋಧಿ ಮಾತ್ರ ಕೊಡೋಕೆ ಸಾಧ್ಯ ಅಂತ ಹೇಳಿದೆ ಎಂದು ತಿಳಿಸಿದರು. ಇದನ್ನೂ ಓದಿ: E-Rupi ಪೈಲಟ್ ಪ್ರಾಜೆಕ್ಟ್‌ಗೆ ಅನುಮತಿ ನೀಡಲು ಹೆಚ್.ಸಿ ಮಹದೇವಪ್ಪ ಮನವಿ

    ಕರ್ನಾಟಕದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲ. ಹೀಗಾಗಿ ಓಪನ್ ಮಾರ್ಕೆಟ್‌ಗೆ ಹೋಗಬೇಕು. ಇದಕ್ಕೆ ಟೆಂಡರ್ ಕರೆಯಬೇಕು ಈ ಎಲ್ಲ ಪ್ರಕ್ರಿಯೆಗೆ 2 ತಿಂಗಳು ಸಮಯ ತೆಗೆದುಕೊಳ್ಳಲಿದೆ. ಕೇಂದ್ರೀಯ ಭಂಡಾರ, ಎನ್‌ಸಿಸಿಎಫ್, ನಾಫೆಡ್‌ನಿಂದ ಅಕ್ಕಿ ಖರೀದಿಗೆ ಕೊಟೆಷನ್ ಕೇಳಿದೆ. ನಾಳೆ ಅವರು ದರಪಟ್ಟಿ ನೀಡಿದ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. ಇದರಿಂದಾಗಿ ಜುಲೈ 1 ರಿಂದ ಅಕ್ಕಿ ನೀಡುವುದು ಕಷ್ಟ ಆಗಬಹುದು ಎಂದರು.

    ಪೂರ್ಣಾವಧಿಯ ಸಿಎಂ ಎನ್ನುವ ಧೈರ್ಯ ಸಿದ್ದರಾಮಯ್ಯ ಅವರಿಗೆ ಇದೆಯೇ ಎನ್ನುವ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾನು ಸಿಎಂ ಆಗಿದ್ದೇನೆ. ನಮ್ಮದು ಸಮ್ಮಿಶ್ರ ಸರ್ಕಾರ ಅಲ್ಲಾ, 136 ಶಾಸಕರು ನಮ್ಮ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಅವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಉಳಿದ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

  • ಪ್ರತಾಪ್‌ ಸಿಂಹಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ – ಎಂ.ಬಿ ಪಾಟೀಲ್‌ ಗುಡುಗು

    ಪ್ರತಾಪ್‌ ಸಿಂಹಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ – ಎಂ.ಬಿ ಪಾಟೀಲ್‌ ಗುಡುಗು

    ಮೈಸೂರು: ಸಂಸದ ಪ್ರತಾಪ್‌ ಸಿಂಹ (Pratap Simha) ಅವರಿಗೆ ತಲೆ ಕೆಟ್ಟಿದೆ. ಅರ್ಥವಿಲ್ಲದ ಹೇಳಿಕೆ ನೀಡುತ್ತಾ ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಗುಡುಗಿದ್ದಾರೆ.

    ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ (Siddaramaiah) ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್‌ಗೆ ತಗುಲಿಲ್ವಾ?ʼ ಎಂಬ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಜನರನ್ನು ಲೆಕ್ಕಿಸದೇ ಗುಂಡು ಹಾರಿಸಿದ ದುಷ್ಕರ್ಮಿಗಳು – ಸಹೋದರನನ್ನು ಕಾಪಾಡಲು ಹೋಗಿ ಸಹೋದರಿಯರಿಬ್ಬರು ಬಲಿ

    ಪ್ರತಾಪ್‌ ಸಿಂಹ ಅವರಿಗೆ ತಲೆ ಕೆಟ್ಟಿದೆ, ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಅವರ ಚಿಲ್ಲರೆ ಮನಸ್ಥಿತಿ ತೋರಿಸುತ್ತಿದೆ. ಸಿದ್ದರಾಮಯ್ಯ ಅವ್ರು ನನ್ನ ಹೆಗಲ ಮೇಲೆ ಗನ್‌ ಇಟ್ಟು ಯಾರಿಗೂ ಗುಂಡು ಹೊಡೆಯುವ ಕೆಲಸ ಮಾಡಿಲ್ಲ. ನಾನೂ ಕೂಡ ಅದಕ್ಕೆ ಆಸ್ಪದ ಕೊಟ್ಟಿಲ್ಲ. ಹೊಡೆಯೋದಿದ್ದರೆ ನಾವೇ ಡೈರೆಕ್ಟ್‌ ಆಗಿ ಹೊಡಿಯುತ್ತೇವೆ. ನನ್ನ ಡಿ.ಕೆ ಶಿವಕುಮಾರ್‌ ಸಂಬಂಧ ಉತ್ತಮವಾಗಿದೆ. ಒಂದು ವಿಚಾರ ಬಂದಾಗ ಅಭಿಪ್ರಾಯ, ಭಿನ್ನಾಭಿಪ್ರಾಯ ಇರಬಹುದು. ಅದು ಪ್ರಜಾಪ್ರಭುತ್ವದಲ್ಲಿ ಸಹಜ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ

    ಇದೇ ವೇಳೆ BJP ಕೇಂದ್ರ ಸರ್ಕಾರ ಅಕ್ಕಿ ತಡೆಹಿಡಿದ ವಿಚಾರವಾಗಿ ಮಾತನಾಡಿ, ನಾವು ಕೇಂದ್ರಕ್ಕೆ ಉಚಿತವಾಗಿ ಅಕ್ಕಿ ಕೊಡಿ ಅಂತಾ ಹೇಳಿಲ್ಲ, ಹಣ ಕೊಡುತ್ತೇವೆ. ಮೊದಲು FCI ಅಧಿಕಾರಿಗಳು ಅಕ್ಕಿ ಕೊಡೋದಕ್ಕೆ ಒಪ್ಪಿದ್ದರು. ಆಮೇಲೆ ಕೇಂದ್ರ ಸರ್ಕಾರ ತಡೆಹಿಡಿದಿದೆ. ಇದು ಬಡವರ ವಿರುದ್ಧವಾಗಿ ಬಿಜೆಪಿ ಮಾಡುತ್ತಿರುವ ಸೇಡಿನ ರಾಜಕರಾಣವಾಗಿದೆ. ನಮ್ಮ ರಾಜ್ಯದ ಬಿಜೆಪಿ ನಾಯಕರು ರಾಜಕೀಯ ಮಾಡೋದು ಬಿಟ್ಟು, ಒಗ್ಗಟ್ಟಾಗಿ ಅಕ್ಕಿ ಕೊಡುವಂತೆ ಮನವಿ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಪ್ರತಾಪ್‌ ಸಿಂಹ ಹೇಳಿದ್ದೇನು?
    ಎರಡು ದಿನಗಳ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರತಾಪ್‌ ಸಿಂಹ, ಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್‌ಗೆ ತಗುಲಿಲ್ವಾ? ಯಡಿಯೂರಪ್ಪ ಜೈಲಿಗೆ ಹೋದರು ಎಂದು ಹಾದಿ ಬೀದಿಯಲ್ಲಿ ಎಂ.ಬಿ ಪಾಟೀಲ್, ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಏನೂ ಮಾಡಿದೆ? ನನ್ನ ಹೆಗಲ ಮೇಲೆ ಯಾರು ಬಂದೂಕು ಇಟ್ಟಿಲ್ಲ. ಎಂ.ಬಿ ಪಾಟೀಲ್ ಮೇಲೆ ಯಾಕೆ ಸಿದ್ದರಾಮಯ್ಯ ಬಂದೂಕು ಇಟ್ಟು ಕೊಂಡಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋಗಲು ಕಾರಣ ಕಾಂಗ್ರೆಸ್ ನವರು. ಅಂದಿನ ರಾಜ್ಯಪಾಲ ಭಾರದ್ವಾಜ್ ಹೆಗಲ ಮೇಲೆ ಬಂದೂಕು ಇಟ್ಟು ಯಡಿಯೂರಪ್ಪ ಅವರ ಎದೆಗೆ ಹಾರಿಸಿದರು. ಭಾರದ್ವಾಜ್ ಅವರನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಯಡಿಯೂರಪ್ಪ ವಿಚಾರದಲ್ಲಿ ಆಟ ಆಡಿದ್ದು ಮರೆತು ಹೋಯ್ತಾ? ಎಂದು ಪ್ರಶ್ನಿಸಿದ್ದರು.

  • ವಿಜಯೇಂದ್ರ ಮಿಲ್‌ನಲ್ಲಿ ಇದೆಯಾ ಅಷ್ಟು ಅಕ್ಕಿ?: ಸಿಎಂ ಸಿದ್ದರಾಮಯ್ಯ ತಿರುಗೇಟು

    ವಿಜಯೇಂದ್ರ ಮಿಲ್‌ನಲ್ಲಿ ಇದೆಯಾ ಅಷ್ಟು ಅಕ್ಕಿ?: ಸಿಎಂ ಸಿದ್ದರಾಮಯ್ಯ ತಿರುಗೇಟು

    ಬೆಂಗಳೂರು: ಕಮಿಷನ್‌ಗಾಗಿ ಹೊರ ರಾಜ್ಯಗಳಿಂದ ಅಕ್ಕಿ (Rice) ಖರೀದಿ ಮಾಡುತ್ತಾರೆ ಎಂದು ಶಾಸಕ ವಿಜಯೇಂದ್ರ (BY Vijayendra) ಮಾಡಿದ ಆರೋಪಕ್ಕೆ ಶನಿವಾರ ಸಿಎಂ ಸಿದ್ದರಾಮಯ್ಯ (Siddaramaiah) ಗುಡುಗಿದ್ದಾರೆ. ಇಲ್ಲಿ ಬೇಕೆಂದರೆ ಅವರೇ ಅಕ್ಕಿ ಕೊಡಿಸಲಿ. ವಿಜಯೇಂದ್ರ ಮಿಲ್‌ನಲ್ಲಿ ಇದೆಯಾ ಅಷ್ಟು ಅಕ್ಕಿ? ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿದ ಸಿಎಂ, ತೆಲಂಗಾಣದ ಸಿಎಂ ಅವರೊಂದಿಗೆ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಅಲ್ಲಿ ಅಕ್ಕಿ ಸಿಗುತ್ತಿಲ್ಲವಂತೆ. ನಮ್ಮ ಸಿಎಸ್ ಅವರಿಗೂ ಈ ಬಗ್ಗೆ ಮಾತನಾಡಲು ಹೇಳಿದ್ದೇನೆ. ಛತ್ತೀಸ್‌ಗಢ ರಾಜ್ಯದವರು 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ – ಡಿಕೆ ಸುರೇಶ್ ವೈರಾಗ್ಯದ ಮಾತು

    ಆಂಧ್ರ ಪ್ರದೇಶದವರೊಂದಿಗೆ ನಮ್ಮ ಸಿಎಸ್ ಅವರನ್ನು ಮಾತನಾಡಲು ಹೇಳಿದ್ದೇನೆ. ಛತ್ತೀಸ್‌ಗಢದ ಅಕ್ಕಿಗೆ ಸ್ವಲ್ಪ ದರ ಜಾಸ್ತಿ ಇದೆ. ಸಾಗಾಣೆಯ ವೆಚ್ಚವೂ ಜಾಸ್ತಿ ಬೀಳಲಿದೆ. ಈ ಬಗ್ಗೆ ಸಂಜೆ ಸಭೆ ಮಾಡಿ ಹೆಚ್ಚಿನ ಮಾಹಿತಿ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಉಚಿತ ಪ್ರಯಾಣ ಹಿನ್ನೆಲೆ ಒಂದು ಇಡೀ ಬಸ್ ಬುಕ್ ಮಾಡೋಕೆ ಬಂದ ಅಜ್ಜಿ

  • ಶಿವಕುಮಾರ್ ಅಣ್ಣ.. ಭರವಸೆ ಕೊಟ್ಟಿರೋದು ನೀವು, ಮೋದಿ ಅಲ್ಲ: ಅಶೋಕ್ ಕಿಡಿ

    ಶಿವಕುಮಾರ್ ಅಣ್ಣ.. ಭರವಸೆ ಕೊಟ್ಟಿರೋದು ನೀವು, ಮೋದಿ ಅಲ್ಲ: ಅಶೋಕ್ ಕಿಡಿ

    ಬೆಂಗಳೂರು: ಶಿವಕುಮಾರ್ ಅಣ್ಣ ನೀವು ಕೊಟ್ಟಿರೋ ಭರವಸೆ, ಮೋದಿ ಕೊಟ್ಟಿರೋ ಭರವಸೆ ಅಲ್ಲ. ನೀವು ಈಡೇರಿಸಬೇಕು. ಗ್ಯಾರಂಟಿ ಕೊಡಲು ಆಗದೇ ಹೋದರೆ ಅಧಿಕಾರ ಬಿಟ್ಟು ಹೋಗಿ. ಮೋದಿ ಮೇಲೆ ಯಾಕೆ ಆರೋಪ ಮಾಡ್ತೀರಾ ಎಂದು ಮಾಜಿ ಸಚಿವ ಆರ್ ಅಶೋಕ್ (R Ashok) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಗ್ಯಾರಂಟಿ ಘೋಷಣೆ ಮಾಡೋವಾಗ ಕೇಂದ್ರ ಸರ್ಕಾರದ ಅನುಮತಿ ಪಡೆದಿದ್ರಾ? ಕೇಂದ್ರವನ್ನು ಕೇಳಿ ಭರವಸೆ ಕೊಟ್ಟಿದ್ದೀರಾ? ನಿಮ್ಮ ಗ್ಯಾರಂಟಿ ಜಾರಿ ಮಾಡೋದು ನಿಮ್ಮ ಕರ್ತವ್ಯ. ಅದಕ್ಕೆ ಮೋದಿ (Narendra Modi) ಮೇಲೆ ಯಾಕೆ ಮಾತಾಡ್ತೀರಾ? ಎಂದು ಪ್ರಶ್ನಿಸಿದ್ದಾರೆ.

    ಅಕ್ಕಿ ಬಗ್ಗೆ ಈಗ ಆರೋಪ ಮಾಡುತ್ತಾರೆ. ಕೇಂದ್ರ ಸರ್ಕಾರ ಅತ್ತೆ ಮನೆ ಅಲ್ಲ. ಸುರ್ಜೆವಾಲ ಮಂತ್ರಿ ಹಾಗೆ ಆಡ್ತಿದ್ದಾರೆ. ಘೋಷಣೆ ಮಾಡೋವಾಗ ಪರಿಜ್ಞಾನ ಇರಲಿಲ್ಲವಾ? ಮಾತು ಕೊಡೋವಾಗ ನೀವು ಕೇಂದ್ರ ಸರ್ಕಾರವನ್ನು ಕೇಳಿದ್ರಾ? ನಾವೇನು ಅಕ್ಕಿ ರಾಜಕೀಯ ಮಾಡಲ್ಲ. ಇಡೀ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉಚಿತವಾಗಿ ಅಕ್ಕಿ ಕೊಡ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಬೇಕು. ಮೋದಿ ಅಕ್ಕಿ ಮೇಲೆ ಸಿದ್ದರಾಮಯ್ಯ ಫೋಟೋ ಹಾಕಿದ್ರು. ಯಾಕೆ ಅವತ್ತು ಅದನ್ನು ಮೋದಿ ಅಕ್ಕಿ ಅಂತ ಹೇಳಿಲ್ಲ? ಈಗ ಕೇಂದ್ರದ ಮೇಲೆ ಹಾಕ್ತೀರಾ? ಹೀಗೆ ಆದ್ರೆ ಒಂದು ವರ್ಷದಲ್ಲಿ ರಾಜ್ಯ ದಿವಾಳಿ ಆಗುತ್ತೆ ಬರೆದಿಟ್ಟುಕೊಳ್ಳಿ ಎಂದು ಎಚ್ಚರಿಕೆ ನೀಡಿದರು.

    ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡುವುದಾಗಿ ಡಿಕೆಶಿ ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪ್ರತಿಭಟನೆ ಮಾಡಲಿ. ಅವರಿಗೆ ಶಾಮಿಯಾನ ಕಡಿಮೆ ಆದರೆ ನಾವೇ ಹಾಕಿಸಿಕೊಡುತ್ತೇವೆ. ಡಿಕೆಶಿಗೆ ದಮ್ಮು ತಾಕತ್ತು ಇದ್ದರೆ ಮೊದಲು ಷರತ್ತು ಇಲ್ಲದೆ 5 ಗ್ಯಾರಂಟಿ ಜಾರಿ ಮಾಡಲಿ. ಗ್ಯಾರಂಟಿ ಕೊಟ್ಟ ಕಾಂಗ್ರೆಸ್ ಮೊದಲು ಕಂಡಿಷನ್ ಇಲ್ಲದೆ ಜಾರಿ ಮಾಡಲಿ. ಮೊದಲು ನಿಮ್ಮ ದಮ್ಮು, ತಾಕತ್ತು ಉಚಿತ, ಖಚಿತ, ನಿಶ್ಚಿತ ಕೊಟ್ಟು ತೋರಿಸಲಿ. ಆಮೇಲೆ ನಾವು ಮಾತನಾಡುತ್ತೇವೆ ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ

    ಮತಾಂತರ ನಿಷೇಧ ಕಾಯ್ದೆ ರದ್ದು ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಯುಗ ಸ್ಥಾಪನೆ ಮಾಡೋ ಕೆಲಸ ಕಾಂಗ್ರೆಸ್ ಮತ್ತೆ ಶುರು ಮಾಡಿದೆ. ಮತಾಂತರ ರಾಯಭಾರಿ ಆಗೋಕೆ ಕಾಂಗ್ರೆಸ್ ಹೊರಟಿದೆ. 35 ಲಕ್ಷಕ್ಕೂ ಹೆಚ್ಚು ಹಿಂದೂಗಳು ಆಮಿಷಕ್ಕೆ ಮತಾಂತರ ಆಗಿರೋ ಮಾಹಿತಿ ಇದೆ. ಬಿಷಪ್ ಇದನ್ನು ಸ್ವಾಗತ ಮಾಡಿದ್ದಾರೆ. ನೀವು ಯಾವುದಾದರೂ ಸ್ವಾಮೀಜಿಗಳ ಅಭಿಪ್ರಾಯ ಪಡೆದಿದ್ದೀರಾ? ಯಾರಿಗಾಗಿ ಮತಾಂತರ ಕಾಯ್ದೆ ತರುತ್ತಿದ್ದೀರಾ? ಅಂಬೇಡ್ಕರ್, ಗಾಂಧಿಯವರು ಮತಾಂತರಕ್ಕೆ ವಿರೋಧ ಮಾಡಿದ್ರು. ಬಲವಂತ, ಆಮಿಷದ ಮೂಲಕ ಮತಾಂತರ ಮಾಡಬಾರದು ಅಂತ ನಮ್ಮ ಕಾಯ್ದೆಯಲ್ಲಿ ಇತ್ತು ಎಂದು ತಿಳಿಸಿದರು.

    ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಮತಾಂತರ ಆಗಬಾರದು ಅಂತ ಸಹಿ ಹಾಕಿದ್ರು. ಈಗ ಒಂದು ಸಮುದಾಯ ಸಂತೃಪ್ತಪಡಿಸೋಕೆ ಈ ಕಾಯ್ದೆ ತಡೆದಿದ್ದಾರೆ. ಕಾಂಗ್ರೆಸ್ ವೋಟ್‌ಗಾಗಿ ಯಾವ ಮಟ್ಟಕ್ಕೆ ಬೇಕಾದ್ರು ಹೋಗುತ್ತೆ. ಕಾಂಗ್ರೆಸ್ ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ. ನಾವು ಕಾಯ್ದೆ ತಂದಾಗ ಯಾರಾದ್ರು ವಿರೋಧ ಮಾಡಿದ್ರಾ? ಪಿಎಫ್‌ಐ, ಕೆಫ್‌ಡಿ ಸೇರಿದಂತೆ ಕೆಲ ಸಂಘಟನೆಗಳು ವಿರೋಧ ಮಾಡಿದ್ರು. ಹಾಗಾದ್ರೆ ಕಾಂಗ್ರೆಸ್ ಪಿಎಫ್‌ಐ ಪರ ಇದೆಯಾ? ಕಾಯ್ದೆ ರದ್ದು ಮಾಡಲು ಬಿಜೆಪಿ ಬಿಡಲ್ಲ ಎಂದರು. ಇದನ್ನೂ ಓದಿ: ಬಡವರಿಗೆ ಕೇಂದ್ರದಿಂದ ದ್ರೋಹ – ಜೂ.20ಕ್ಕೆ ಕಾಂಗ್ರೆಸ್‌ನಿಂದ ರಾಜ್ಯವ್ಯಾಪಿ ಪ್ರತಿಭಟನೆ: ಡಿಕೆಶಿ

  • ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ

    ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ

    ನವದೆಹಲಿ: ರಾಷ್ಟ್ರೀಯ ಆಹಾರ ನಿಗಮದ ನೀತಿ ಬದಲಾಗಿರುವ ಹಿನ್ನೆಲೆ ಕರ್ನಾಟಕ (Karnataka) ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಅಕ್ಕಿ (Rice) ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧ್ಯಕ್ಷ ಅಶೋಕ್ ಕುಮಾರ್ ಮೀನಾ (Ashok kumar Meena) ಹೇಳಿದ್ದಾರೆ.

    ರಾಜಕೀಯ ಆರೋಪಗಳ ಬೆನ್ನಲ್ಲೇ ದೆಹಲಿಯ ಕೃಷಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ ಅವರು, ಹೆಚ್ಚುವರಿ ಅಕ್ಕಿಗಾಗಿ ಕರ್ನಾಟಕ ಸರ್ಕಾರದಿಂದ ಮನವಿ ಬಂದಿತ್ತು. ನಮ್ಮ ಕರ್ನಾಟಕ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಹೆಚ್ಚುವರಿ ಧಾನ್ಯ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ನಮ್ಮ ನೀತಿ ಬದಲಾವಣೆ ಆಗಿರುವ ಮಾಹಿತಿ ಇಲ್ಲದೇ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಎಫ್‌ಸಿಐ ಸದ್ಯ ನೀತಿಯಲ್ಲಿ ಬದಲಾವಣೆಯಾಗಿದೆ. ರಾಜ್ಯಗಳಿಗೆ ನೇರವಾಗಿ ಅಕ್ಕಿ ಮಾರಾಟ ನಿಲ್ಲಿಸಲಾಗಿದೆ ಎಂದರು.

    ಮಾರುಕಟ್ಟೆಯಲ್ಲಿ ಅಕ್ಕಿ, ಗೋಧಿ ಬೆಲೆ ನಿಯಂತ್ರಿಸಲು ಮುಕ್ತ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ರಾಜ್ಯಗಳಿಗೆ ನೀಡುತ್ತಿದ್ದ ಹೆಚ್ಚುವರಿ ಧಾನ್ಯದ ಸರಬರಾಜು ತಡೆಹಿಡಿದಿದೆ. ಈ ಹಿಂದೆ ರಾಜ್ಯಗಳಿಗೆ ಹೆಚ್ಚಿನ ಧಾನ್ಯ ಪೂರೈಕೆ ಮಾಡಲಾಗುತ್ತಿತ್ತು. ಈ ನಡುವೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ, ಗೋಧಿ ಬೆಲೆ ಏರಿಕೆಯಾಗುತ್ತಿದೆ. ಬೆಲೆ ನಿಯಂತ್ರಣ ಮಾಡಲು ಹೊಸ ಕ್ರಮ ತೆಗೆದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

    ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಲ್ಲಿ ಎಲ್ಲ ರಾಜ್ಯಗಳಿಗೆ ಎಷ್ಟು ಪ್ರಮಾಣದ ಅಕ್ಕಿ ನೀಡಬೇಕು ಅದರ ಪೂರೈಕೆ ಮಾಡಲಾಗುತ್ತಿದೆ. ದೇಶದಲ್ಲಿ 80 ಕೋಟಿ ಜನರು ಗರೀಬ್ ಕಲ್ಯಾಣ್ ವ್ಯಾಪ್ತಿಯಲ್ಲಿದ್ದಾರೆ. ಬಾಕಿ 60 ಕೋಟಿ ಜನರ ಬಗ್ಗೆಯೂ ನಾವು ಯೋಚಿಸಬೇಕಿದೆ. ಈ ಹಿನ್ನೆಲೆ ನಿಯಮ ಬದಲಾಯಿಸಿದೆ. ಈ ನೀತಿ ಬದಲಾವಣೆಯಾಗಿರುವ ಬಗ್ಗೆ ಮಾಹಿತಿ ಇಲ್ಲದೆ ನಮ್ಮ ಅಧಿಕಾರಿಗಳು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನಮಗೆ ಮಾಹಿತಿ ಬಂದ ಬಳಿಕ ಆ ಪತ್ರವನ್ನು ಹಿಂಪಡೆಯಲಾಗಿದೆ ಎಂದರು.

    ಅನ್ನಭಾಗ್ಯ ಯೋಜನೆಗೆ ಬೇಕಾಗುವ ಹೆಚ್ಚುವರಿ ಅಕ್ಕಿ ಪಡೆಯುವ ಬಗ್ಗೆ ನಮ್ಮ ಜೊತೆಗೆ ಈ ಮುಂಚೆ ಚರ್ಚಿಸಿಲ್ಲ. ಒಂದು ವೇಳೆ ಚರ್ಚಿಸಿದ್ದರೆ ಎಫ್‌ಸಿಐ ನೀತಿ ಬದಲಾಗಿರುವ ಬಗ್ಗೆ ನಾವು ಮಾಹಿತಿ ನೀಡುತ್ತಿದ್ದೇವು. ಕೇವಲ ಕರ್ನಾಟಕಕ್ಕೆ ಮಾತ್ರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿಲ್ಲ. ತಮಿಳುನಾಡಿಗೂ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ್ದೇವೆ ಎಂದು ಮೀನಾ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

  • ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

    ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಬಡವರ ವಿರೋಧಿ ಮತ್ತು ದ್ವೇಷಪೂರಿತ ನಿಲುವು ಬಹಿರಂಗವಾಗಿದೆ. ಕರ್ನಾಟಕಕ್ಕೆ (Karnataka) ಅಕ್ಕಿ ನೀಡಲು ಎಫ್‌ಸಿಐ (FCI) ನಿರಾಕರಿಸಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ (BJP) ನಾಯಕರು ಸೋಲಿನ ಬಳಿಕ ಬಡವರಿಗೆ ಆಹಾರ ಧಾನ್ಯವನ್ನು ನಿರಾಕರಿಸುವಷ್ಟು ಕುರುಡರಾಗಬಹುದಾ? ಎಂದು ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೆವಾಲ (Randeep Surjewala) ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯಲ್ಲಿ (Delhi) ಮಾತನಾಡಿದ ಸುರ್ಜೆವಾಲ, ಅನ್ನ ಭಾಗ್ಯ ನೀಡುವುದು ಕಾಂಗ್ರೆಸ್ ಸರ್ಕಾರದ ಆಶಯವಾಗಿತ್ತು. ಸುಮಾರು 4.42 ಕೋಟಿ ಜನರಿಗೆ ಅಕ್ಕಿ ನೀಡುವ ಉದ್ದೇಶ ಹೊಂದಿತ್ತು. ಕೇಂದ್ರ ಸರ್ಕಾರಕ್ಕೆ ಖಾಸಗಿ ಅವರಿಗೆ ಅಕ್ಕಿ ನೀಡಲು ಸಮಸ್ಯೆ ಇಲ್ಲ. ಆದರೆ ರಾಜ್ಯ ಸರ್ಕಾರಗಳಿಗೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಮೂಲಕ ಬಿಜೆಪಿ ಬಡವರ ವಿರೋಧಿಸಿ ಎನ್ನುವುದು ಸಾಬೀತಾಗಿದೆ ಎಂದರು.

    ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸೋಲಿನ ಬಳಿಕ ಬಡವರಿಗೆ ಆಹಾರ ಧಾನ್ಯವನ್ನು ನಿರಾಕರಿಸುವಷ್ಟು ಕುರುಡರಾಗಬಹುದಾ? ಎಫ್‌ಸಿಐ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿಯನ್ನು ವ್ಯಾಪಾರಿಗಳಿಗೆ ಮಾರಾಟ ಮಾಡಲು ಅನುಮತಿ ಇದೆ. ಆದರೆ ಸರಿಯಾದ ಹಣ ಪಾವತಿಯ ನಂತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಏಕೆ ನಿಷೇಧಿಸಲಾಗಿದೆ? ಕಾಂಗ್ರೆಸ್ ಸರ್ಕಾರವು ಬಡವರಿಗೆ ಅಕ್ಕಿಯನ್ನು ನೀಡುವಂತೆ ಎಫ್‌ಸಿಐಗೆ ಕೇಳಿದ ಮರುದಿನವೇ ಮೋದಿ ಸರ್ಕಾರವು ಎಫ್‌ಸಿಐ ಅಕ್ಕಿಯನ್ನು ರಾಜ್ಯಗಳಿಗೆ ಮಾರಾಟ ಮಾಡಬಾರದು ಆದರೆ ವ್ಯಾಪಾರಿಗಳಿಗೆ ಮಾತ್ರ ಮಾರಾಟ ಮಾಡಬಹುದು ಎಂದು ನಿರ್ದೇಶಿಸಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ಯ ಸಾಗಿಸುತ್ತಿದ್ದ ಆರ್ಮಿ ಫ್ಯಾಮಿಲಿಯನ್ನು ಬಸ್‌ನಿಂದ ಇಳಿಸಿದ್ದಕ್ಕೆ ಕಿರಿಕ್

    ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕುಟುಂಬಗಳು, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಬಡವರಿಗೆ ಉಚಿತ ಅಕ್ಕಿ ನೀಡುವುದನ್ನು ತಡೆಯುವುದು ಇದರ ಹುನ್ನಾರ ಅಲ್ಲವೇ? ಖಾಸಗಿ ಅವರಿಗೆ ಮಾರಾಟ ಮಾಡಿ ಲಾಭ ಗಳಿಸಲು ಅವಕಾಶ ನೀಡುತ್ತಿದ್ದಿಯೇ? ಕರ್ನಾಟಕದ ಜನರಿಗೆ ಅನ್ಯಾಯವಾಗುವಾಗ ಸಂಸದರು ಯಾಕೆ ಸುಮ್ಮನೆ ಕೂತಿದ್ದಾರೆ? ಅವರು ಯಾಕೆ ರಾಜೀನಾಮೆ ನೀಡಬಾರದು? ಮೋದಿ ಸರ್ಕಾರದ ನೀತಿ ಬಗ್ಗೆ ಜೆಡಿಎಸ್ ಯಾಕೆ ಮೌನವಾಗಿದೆ? ಮೋದಿ ಸರ್ಕಾರ ಅನ್ನಭಾಗ್ಯ ತಡೆಯಲು ಏನೇ ಮಾಡಿದರು ಅದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

    ಬಿಜೆಪಿ, ಜೆಡಿಎಸ್ ಒತ್ತಡಕ್ಕೆ ಒಳಗಾಗಿವೆ. ನಾನು ಹೋಟೆಲ್‌ನಲ್ಲಿದ್ದೆ. ಅದೇ ಹೋಟೆಲ್‌ನಲ್ಲಿ ನಮ್ಮ ಪಿಸಿಸಿ ಅಧ್ಯಕ್ಷರು, ಸಚಿವರು ಸಭೆ ನಡೆಸುತ್ತಿದ್ದರು. ಸಭೆ ಬಳಿಕ ನಾನು ಕಾಫಿ ಕುಡಿಯಲು ಅಲ್ಲಿಗೆ ತೆರಳಿದ್ದೆ. ನಾನು ನಮ್ಮ ಪಕ್ಷದ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಜೆಪಿ ನಡ್ಡಾ ಯಾವುದೇ ರಾಜ್ಯದ ಸಿಎಂ ಭೇಟಿಯಾದರೆ ಸಮಸ್ಯೆ ಇಲ್ಲ. ನಾನು ನಮ್ಮ ನಾಯಕರನ್ನು ಭೇಟಿಯಾದರೆ ಅದರಲ್ಲಿ ಅಪರಾಧ ಏನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ