Tag: annasaheba jolle

  • ಬಿಜೆಪಿ ಸೇರ್ಪಡೆ ಆಗುವಂತೆ ಸವದಿಗೆ ಆಹ್ವಾನ ಕೊಟ್ಟಿದ್ದೇವೆ: ಅಣ್ಣಾಸಾಹೇಬ ಜೊಲ್ಲೆ

    ಬಿಜೆಪಿ ಸೇರ್ಪಡೆ ಆಗುವಂತೆ ಸವದಿಗೆ ಆಹ್ವಾನ ಕೊಟ್ಟಿದ್ದೇವೆ: ಅಣ್ಣಾಸಾಹೇಬ ಜೊಲ್ಲೆ

    ಬೆಳಗಾವಿ: ಲಕ್ಷ್ಮಣ ಸವದಿಯವರನ್ನು ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ನಾನಿರಬಹುದು, ಈರಣ್ಣಾ ಕಡಾಡಿ, ಮಹಾಂತೇಶ್ ದೊಡ್ಡಗೌಡರ, ರಮೇಶ್ ಕತ್ತಿ (Ramesh Katti) ಸೇರಿ ಜಿಲ್ಲೆಯ ಎಲ್ಲ ನಾಯಕರ ಮೇಲಿದ್ದು ಸವದಿ ಬಿಜೆಪಿ ಬಂದ್ರೆ ಅನುಕೂಲ ಆಗುತ್ತದೆ ಎಂದ ಸಂಸದ ಅಣ್ಣಾಸಾಹೇಬ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿಯನ್ನ (Laxman Savadi) ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ಈ ಬಗ್ಗೆ ಸವದಿ ಅವರು ಒಪ್ಪಿಗೆ ಕೊಡಬೇಕು. ಕೇಂದ್ರದರ ಮುಖಂಡರ ಜೊತೆಗೆ ಚರ್ಚೆ ಆಗಬೇಕು. ಸವದಿಯವರು ಬರಲಿ ಅನ್ನೋದು ನಮ್ಮ ಆಶಯ ಬಂದರೆ ಪಕ್ಷಕ್ಕೆ, ಬೆಳಗಾವಿ (Belagavi) ಜಿಲ್ಲೆಗೆ ಒಳ್ಳೆಯದಾಗುತ್ತೆ. ನಮ್ಮ ಪಕ್ಷದಿಂದ ಹೊರ ಹೋದವರಿಗೆ ನಾವು ಆಹ್ವಾನ ಕೊಟ್ಟಿದ್ದೇವೆ. ಸವದಿಯರಿಗೆ ನಾವು ಕೂಡ ಆಹ್ವಾನ ಕೊಟ್ಟಿದ್ದೇವೆ. ನಮ್ಮ ರಾಜ್ಯಾಧ್ಯಕ್ಷರು, ಎಲ್ಲರು ಕೂಡ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

    ಅದೇ ರೀತಿ ಎಷ್ಟು ಜನ ಬಿಜೆಪಿಗೆ ಬರ್ತಾರೆ ಅಂತಾ ಹೇಳಲು ಆಗಲ್ಲ. ಬಿಟ್ಟು ಹೋದವರು ಎಲ್ಲರೂ ಬರಬಹುದು. ಯಾಕೆಂದರೆ ಬಿಜೆಪಿಯಲ್ಲಿದ್ದವರು ಹೊರಗೆ ಇರುವುದೇ ಕಷ್ಟ ಹೀಗಾಗಿ ನಮ್ಮ ಪಕ್ಷಕ್ಕೆ ಬರ್ತಾರೆ. ಚುನಾವಣೆ ಮೊದಲು ಸವದಿಯವರು ಪಕ್ಷಕ್ಕೆ ಬಂದ್ರೆ ಒಳ್ಳೆಯದಾಗುತ್ತೆ. ಸವದಿಯವರು ಪಕ್ಷಕ್ಕೆ ಬರಲು ಒಲವು ತೋರಿಸಬಹುದು ಅನಿಸುತ್ತೆ. ಅವರು ಬರುವವರೆಗೂ ಪಾಸಿಟಿವ್ ಇದ್ದಾರೆ ಅಂತಾನೇ ಹೇಳ್ತಾ ಹೋಗೊದು ಎಂದರು. ಇದನ್ನೂ ಓದಿ: ಮಾಜಿ ಪ್ರಧಾನಿಯೊಬ್ಬರ ಮಗ ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ: ಚಲುವರಾಯಸ್ವಾಮಿ

    ಒಟ್ಟಾರೆ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದ ಬಳಿಕ ಶತಾಯಗತಾಯ ಲಕ್ಷ್ಮಣ ಸವದಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕೇಸರಿ ಪಡೆ ರಣತಂತ್ರ ರೂಪಿಸುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಸವದಿ ಮಾತ್ರ ನಾನು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅಂತಿಮವಾಗಿ ಸವದಿ ಕೂಡ ಮರಳಿ ಗೂಡು ಸೇರುತ್ತಾರಾ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.‌

  • ದೇಶ ಕಾಯುವ ಯೋಧರಿಂದ್ಲೇ ನಾವು ಸುರಕ್ಷಿತ- ಮೃತ ಸೈನಿಕರ ಕುಟುಂಬಗಳಿಗೆ ಜೊಲ್ಲೆ ಸಾಂತ್ವನ

    ದೇಶ ಕಾಯುವ ಯೋಧರಿಂದ್ಲೇ ನಾವು ಸುರಕ್ಷಿತ- ಮೃತ ಸೈನಿಕರ ಕುಟುಂಬಗಳಿಗೆ ಜೊಲ್ಲೆ ಸಾಂತ್ವನ

    ಚಿಕ್ಕೋಡಿ (ಬೆಳಗಾವಿ): ದೇಶ ಕಾಯುವ ಯೋಧರಿಂದಲೇ ನಮ್ಮ ದೇಶ ಸುರಕ್ಷಿತವಾಗಿದ್ದು, ಅವರಿಂದಲೇ ನಾವೆಲ್ಲ ನಿರಾಳವಾಗಿ ಜೀವನ ಸಾಗಿಸುತ್ತಿದ್ದೇವೆ ಎಂದು ಚಿಕ್ಕೋಡಿ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ (Annasaheba Jolle) ಹೇಳಿದರು.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವಾಗಲೇ ಅನಾರೋಗ್ಯದಿಂದ ಸಾವನ್ನಪ್ಪಿದ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ (Soldier) ಶಿವಾನಂದ ಶಿರಗಾಂವಿ ಹಾಗೂ ಬೋರಗಲ್ ಗ್ರಾಮದ ಯೋಧ ಕೆಂಪಣ್ಣ ಚೌಗಲಾ ಅವರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಇದನ್ನೂ ಓದಿ: 30 ಸಾವಿರ ವಾಟ್ಸಾಪ್ ಉಸ್ತುವಾರಿಗಳ ನೇಮಕ – ಗುಜರಾತ್‍ನಲ್ಲಿ ಹೇಗಿದೆ ಬಿಜೆಪಿ ಸೋಶಿಯಲ್ ಮೀಡಿಯಾ ಮ್ಯಾನೇಜ್ಮೆಂಟ್?

    ಒಂದೇ ದಿನ ಎರಡು ಕುಟುಂಬಗಳ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ ಸಂಸದ ಜೊಲ್ಲೆ ಯೋಧರನ್ನ ಕಳೆದುಕೊಂಡಿರುವುದು ಕುಟುಂಬಸ್ಥರಿಗೆ ಅಷ್ಟೇ ನೋವು ತಂದಿಲ್ಲ. ನನ್ನನ್ನ ಸೇರಿ ಇಡೀ ಗ್ರಾಮವೇ ದುಃಖದಲ್ಲಿದೆ. ಯೋಧರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ನಿಮ್ಮ ನೋವಿನಲ್ಲಿ ನಾವು ಭಾಗಿಯಾಗಿದ್ದೇವೆ ಎಂದರು.

    ಯೋಧರ ಕುಟುಂಬಗಳಿಗೆ ಯಾವುದೇ ತೊಂದರೆಗಳಿದ್ದರೆ ನಾನು ಸಹಾಯ ಮಾಡಲು ಸಿದ್ಧ ಎಂದರು. ಈ ಸಂದರ್ಭದಲ್ಲಿ ಬಿಜೆಪಿ (BJP) ಮುಖಂಡರಾದ ಶಶಿಕಾಂತ ನಾಯಿಕ, ರವಿ ಹಂಜಿ, ಪರಗೌಡ ಪಾಟೀಲ, ಮಹಾವೀರ ಭಾಗಿ, ಚಿದಾನಂದ ಕಿಲ್ಲೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]