Tag: Anti-conversion Bill

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಎಚ್‍.ಡಿ ರೇವಣ್ಣ ಪ್ರಶ್ನಿಸಿದ್ದಾರೆ.

    ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯ ಉದ್ದೇಶ ಸಮುದಾಯದ ಟಾರ್ಗೆಟ್ ಅಲ್ಲ, ಇದು ವೋಟ್‍ಗಳು ಟಾರ್ಗೆಟ್ ಆಗಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಛೆ ಇದ್ದವರು ಮತಾಂತರ ಆಗುತ್ತಾರೆ, ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ:  ಶಾಸಕರೊಬ್ಬರ ಸಂತೃಪ್ತಿಗೆ ಡಿಕೆಶಿ ಎಂಇಎಸ್ ಪರ ಬ್ಯಾಟಿಂಗ್: ಸಚಿವ ಈಶ್ವರಪ್ಪ

    ನಮ್ಮದು ಪ್ರಾದೇಶಿಕ ಪಕ್ಷ, ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶವಿಟ್ಟೇ ಎಚ್.ಡಿಕೆ ಬೆಳಗಾವಿಯಲ್ಲಿ ಅಧಿವೇಶನಕ್ಕೆ ನಾಂದಿ ಹಾಡಿದರು. ಉತ್ತರ ಕರ್ನಾಟಕಕಕ್ಕೆ ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಷ್ಟ್ರೀಯ ಪಕ್ಷಗಳ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಚೋದನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂಬುದು ನಮ್ಮ ನಿಲುವು ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    BJP - CONGRESS

    ನಮ್ಮ ಪಕ್ಷದ ಶಾಸಕರು ಕಿಡಿಗೇಡಿಗಳ ಕೃತ್ಯವನ್ನು ಸದನದಲ್ಲಿ ಖಂಡಿಸಿದ್ದಾರೆ. ಆದರೆ ಬೆಳಗಾವಿಯ ನಾಯಕರು ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ವೋಟ್‍ಗಾಗಿ ಹಿಂದೆ ಬಿದ್ದಿವೆ. ಮತಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕರ್ನಾಟಕದ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಮಹದಾಯಿ ವಿವಾದ ಬಗೆಹರಿಸಲು ಇಷ್ಟು ವರ್ಷ ಬೇಕಾ? ಮಹದಾಯಿ, ಕೃಷ್ಣಾ, ಘಟಪ್ರಭಾ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಿಲುವಲಿ ಸೂಚನೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳ್ಳ ಸೇರುತ್ತಿದೆ ಉಮೇಶ್ ಕತ್ತಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರು

  • ಬೊಮ್ಮಾಯಿ 1 ತಿಂಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ ನಮ್ಮ ಶಾಪ ತಟ್ಟದೇ ಇರಲ್ಲ: ಬಸವಪ್ರಕಾಶ ಸ್ವಾಮೀಜಿ

    ಬೊಮ್ಮಾಯಿ 1 ತಿಂಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ ನಮ್ಮ ಶಾಪ ತಟ್ಟದೇ ಇರಲ್ಲ: ಬಸವಪ್ರಕಾಶ ಸ್ವಾಮೀಜಿ

    ಬೆಳಗಾವಿ: ಮುಂಬರುವ ಒಂದು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿಯವರ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ. ಸರ್ಕಾರ ಪೊಲೀಸರನ್ನು ಬಿಟ್ಟು ಖಾವಿ ಕುಲಕ್ಕೆ ಅವಮಾನ ಮಾಡಿದೆ ಎಂದು ಕೂಡಲ ಸಂಗಮ ಬಸವ ಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ ಹಾಗೂ ದಯಾನಂದ ಸ್ವಾಮಿಜಿಗಳು ಸಿಎಂಗೆ ಶಾಪ ಹಾಕಿದ್ದಾರೆ.

    ಸುವರ್ಣ ಗಾರ್ಡನ್ ಟೆಂಟ್ ಬಳಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕೈಬಿಡಬೇಕೆಂದು ಬಸವ ದಳ, ಸಸ್ಯಹಾರಿ ಸಂಘಟನೆ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಯಿತು. ಅನೇಕ ಸ್ವಾಮಿಜಿಗಳು, ಮಾತೆಯರು ಸರ್ಕಾರದ ನಿರ್ಧಾರ ವಿರುದ್ಧ ಪ್ರತಿಭಟಿಸಿದರು. ಬೆಳಗ್ಗೆಯಿಂದ ಸಾಯಂಕಾಲವರೆಗೆ ಟೆಂಟ್ ಬಳಿ ಯಾರೂ ಬರಲಿಲ್ಲ. ನಮ್ಮ ಆಹ್ವಾಲು ಸ್ವೀಕರಿಸಲಿಲ್ಲ ಎಂದು ಆಕ್ರೋಶಕ್ಕೊಳಗಾದರು. ಈ ಸಂದರ್ಭದಲ್ಲಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆಯಲು ಮುಂದಾದರು. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಇದನ್ನೂ ಓದಿ: ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

    ಈ ವೇಳೆ ಆಕ್ರೋಶಗೊಂಡ ಬಸವಪ್ರಕಾಶ ಸ್ವಾಮೀಜಿ ಹಾಗೂ ದಯಾನಂದ ಸ್ವಾಮೀಜಿ ಸರ್ಕಾರದ ವಿರುದ್ಧ ಹರಿಹಾಯ್ದ ಶಾಪ ಹಾಕಿದರು. ಈ ಅನ್ಯಾಯವನ್ನು ಲಿಂಗಾಯತ ಸಮುದಾಯ ಸಹಿಸಿಕೊಳ್ಳುವುದಿಲ್ಲ ಸ್ವಾಮೀಜಿಗಳನ್ನು, ಲಿಂಗನಿಷ್ಠರನ್ನು ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಾವೆಲ್ಲರೂ ಎಲ್ಲವನ್ನು ಬಿಟ್ಟ ಬಂದ್ಮೇಲೆ ಪೊಲೀಸರು ಅಕ್ಕ, ತಂಗಿ, ತಾಯಿ ಪದ ಬಳಕೆ ಮಾಡಿ ಬೈಯುವುದು ಅಷ್ಟೊಂದು ಸಮಂಜಸವಲ್ಲ ಎಂದು ಸ್ವಾಮಿಜಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ – ಡಿಕೆಶಿ ವಿರುದ್ಧ ಸಿ.ಟಿ.ರವಿ ಆಕ್ರೋಶ

    ನಾವು ಸುವರ್ಣಸೌಧಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದರು. ಹಿಗ್ಗಾಮುಗ್ಗಾ ಬೈದಿದ್ದಾರೆ. ನಮಗೆ ನ್ಯಾಯ ಸಿಗಬೇಕು. ನಮ್ಮಂತ ಸ್ವಾಮೀಜಿಗಳಿಗೆ ಈ ರೀತಿ ಆದರೆ ನಮ್ಮ ಶಾಪ ಅವರಿಗೆ ತಟ್ಟದೆ ಬಿಡುವುದಿಲ್ಲ. ನಮ್ಮ ಶಾಪ ತಟ್ಟಿಯೇ ತಟ್ಟುತ್ತದೆ. ಖಂಡಿತಾ ಅವರು ಒಂದು ತಿಂಗಳಲ್ಲಿ ಅಧಿಕಾರದಿಂದ ಕೆಳಗೆ ಇಳಿಯಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

  • ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

    ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

    ಬೆಳಗಾವಿ: ನಾಳೆ ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.

    ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷ ಮತಾಂತರ ತಡೆ ಕಾನೂನು ಜಾರಿಗೆ ತರಲು ಬಿಡಲ್ಲ ಎಂದು ಪಟ್ಟುಹಿಡಿದಿದೆ. ವಿರೋಧದ ಮಧ್ಯೆ ಸರ್ಕಾರ ಮತಾಂತರ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರವಾದವರ ಮೂಲ ಹುಡುಕಿದರೆ ಅವರೆಲ್ಲ ಹಿಂದುಗಳೇ. ಕೆಲವು ಕಡೆ ಗೌಪ್ಯವಾಗಿ ಮತಾಂತರ ನಡೆಯುತ್ತಿದೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸಲ್ಲ. ಕಾನೂನು ಮುಖಾಂತರ ಆಸೆ ಆಮಿಷ ಒತ್ತಡ ಮತಾಂತರವನ್ನು ತಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

    ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021
    ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು. ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ. ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಎಂದು ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ. ಸಾಮೂಹಿಕ ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓ ಪಾಲ್ಗೊಳ್ಳುವಂತಿಲ್ಲ. ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ನಿಲ್ಲಿಸಲಾಗುವುದು. ಇದನ್ನೂ ಓದಿ: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

    ದಂಡ ಎಷ್ಟು?
    ಎಸ್‍ಸಿ, ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು. ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು.ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

    ಪರಿಹಾರವೇನು?
    ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ ನೀಡಬೇಕಾಗುತ್ತದೆ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ ಮಾಡಬೇಕಾಗುತ್ತದೆ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

    ಮತಾಂತರ ಪ್ರಕ್ರಿಯೆ ಹೇಗೆ?
    ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಮತಾಂತರ ಆಗುವವರು, ಮಾಡುವವರಿಗೆ ಡಿಸಿ, ಪೊಲೀಸ್ ಸಮ್ಮುಖದಲ್ಲಿ ವಿಚಾರಣೆ ಇರುತ್ತದೆ. ಶಾಲೆ, ಕಾಲೇಜು ಸಕ್ಷಮ ಪ್ರಾಧಿಕಾರಕ್ಕೆ ಮತ ಬದಲಾವಣೆಗೆ ಡಿಸಿ ಸೂಚಿಸಬೇಕು. ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದುಗೊಳಿಸುವುದು ಪ್ರಸ್ತಾವಿತ ಮಸೂದೆಯಲ್ಲಿ ಇದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

  • ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

    ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

    ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಬಲವಾಗಿ ಖಂಡಿಸಲು ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಕಾಯ್ದೆ ಮಂಡನೆಗೆ ಮುಂದಾದರೆ ಅದರ ಪೀಠಿಕೆಗೆ ನಮ್ಮ ವಿರೋಧ ಇದೆ. ಚರ್ಚೆಯಲ್ಲಿ ಭಾಗವಹಿಸುವುದು ಬೇರೆ ಮಾತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

     

    ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಸಚಿವರಾಗಿರುವ ಬೈರತಿ ಬಸವರಾಜ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಆದೇಶ ನೀಡಿರುವ ಕುರಿತು ಶುಕ್ರವಾರ ನಾನು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಈ ಪ್ರಕರಣದಲ್ಲಿ ಇಬ್ಬರು ರಾಜಕಾರಣಿಗಳು ಆರೋಪಿ ಸ್ಥಾನದಲ್ಲಿದ್ದಾರೆ. ಒಬ್ಬರು ಬೈರತಿ ಬಸವರಾಜ್, ಇನ್ನೊಬ್ಬರು ವಿಧಾನ ಪರಿಷತ್ ಸದಸ್ಯ ಶಂಕರ್. ಇವರ ವಿರುದ್ಧ ನಕಲಿ ಸಹಿ, ಆಸ್ತಿ ಕಬಳಿಕೆ, ಕ್ರಿಮಿನಲ್ ಚಟುವಟಿಕೆ ಮುಂತಾದ ಗಂಭೀರ ಪ್ರಕರಣವಿದೆ. ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

    ಈ ಹಿಂದೆ ಡಿವೈಎಸ್‍ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾಗ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ತಪ್ಪಿಲ್ಲದಿದ್ದರೂ ಕೆ.ಜೆ ಜಾರ್ಜ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರು ನ್ಯಾಯಾಲಯದ ಆದೇಶ ಇದ್ದರೂ ಭಂಡತನದಿಂದ ಇನ್ನೂ ರಾಜೀನಾಮೆ ನೀಡಿಲ್ಲ. ಈ ನಾಚಿಕೆಗೆಟ್ಟ ಸರ್ಕಾರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕಿತ್ತು. ಅದನ್ನೂ ಮಾಡಿಲ್ಲ. ಈ ಪ್ರಕರಣವನ್ನು ತಾತ್ವಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂದು ತೀರ್ಮಾನ ಮಾಡಿದ್ದೆವು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

    ಆದರೆ ನಮ್ಮ ನಿಲುವಳಿ ಸೂಚನೆಯನ್ನು ತಿರಸ್ಕಾರ ಮಾಡಿದ್ದಾರೆ. ನಾವು ಚರ್ಚೆಗೆ ಅವಕಾಶ ನೀಡಿಲ್ಲ, ಮತ್ತು ಬೈರತಿ ಬಸವರಾಜ್ ರಾಜೀನಾಮೆ ಪಡೆಯಲಿಲ್ಲ ಎಂಬ ಕಾರಣಕ್ಕೆ ಶುಕ್ರವಾರ ಧರಣಿ ಪ್ರಾರಂಭ ಮಾಡಿದ್ದೆವು. ರಾಜ್ಯದಲ್ಲಿ ಸಾಕಷ್ಟು ಗಂಭೀರ ಸಮಸ್ಯೆಗಳಿವೆ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ದ್ವಂಸ ಮಾಡಲಾಗಿದೆ, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಳವಾಗಿದೆ, ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿದೆ, ಉತ್ತರ ಕರ್ನಾಟಕದ ಮಹದಾಯಿ, ಕೃಷ್ಣ ನದಿನೀರಿನ ವಿಚಾರ, ಎತ್ತಿನಹೊಳೆ ಯೋಜನೆ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಬಿಟ್ ಕಾಯಿನ್, 40% ಕಮಿಷನ್ ವಿಚಾರ ಮುಂತಾದ ಗಂಭೀರ ವಿಷಯಗಳ ಚರ್ಚೆ ನಡೆಸುವ ಉದ್ದೇಶದಿಂದ ಧರಣಿ ಕೈಬಿಟ್ಟಿದ್ದೇವೆ. ಇದನ್ನೂ ಓದಿ: ಮತಾಂತರ ಮಸೂದೆ: ದುಸ್ಸಾಹಸಕ್ಕೆ ಕೈ ಹಾಕಿ ಪಾಸ್ ಮಾಡಿದ್ರೆ 2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ – ಸಿದ್ದು

    ಈ ಎಲ್ಲಾ ವಿಷಯಗಳ ಚರ್ಚೆಗೆ ಸಮಯಾವಕಾಶದ ಕೊರತೆ ಇರುವುದರಿಂದ ಸದನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಣೆ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದೆ, ಈ ಮನವಿಯನ್ನು ಅವರ ಒಪ್ಪದ ಕಾರಣಕ್ಕೆ, ಎಂಇಎಸ್ ನವರ ಪುಂಡಾಟಿಕೆ, ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಕಾರಣಕ್ಕೆ ನಾವಿಂದು ಸಭಾತ್ಯಾಗ ಮಾಡಿದ್ದೇವೆ. ಅಧಿವೇಶನದ ಹೊರಗೆ ಈ ಎಲ್ಲಾ ವಿಚಾರಗಳ ಬಗ್ಗೆ ಪ್ರತಿಭಟನೆ ಮುಂದುವರೆಸುತ್ತೇವೆ ಮತ್ತು ಜನತಾ ನ್ಯಾಯಾಲಯಕ್ಕೆ ಇವನ್ನು ತೆಗೆದುಕೊಂಡು ಹೋಗುತ್ತೇವೆ. ಕಳಂಕ ಹೊತ್ತಿರುವ ವ್ಯಕ್ತಿಯನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ಅವರನ್ನು ಉಳಿಸಿಕೊಂಡರೆ ಸರ್ಕಾರ ಮುಂದುವರೆಯಲು ಯಾವುದೇ ನೈತಿಕ ಹಕ್ಕುಗಳು ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ಬೆಳಗಾವಿಯಲ್ಲಿ ಪುಂಡರು ನಡೆಸಿರುವ ದುಷ್ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂಬ ಸಿ.ಟಿ ರವಿ ಹೇಳಿಕೆ ಶುದ್ಧ ಸುಳ್ಳು ಮತ್ತು ಇದೊಂದು ರಾಜಕೀಯ ಪ್ರೇರಿತ ಹೇಳಿಕೆ. ಅವರು ಇದೇ ರೀತಿ ಕ್ಷುಲ್ಲಕ ಹೇಳಿಕೆ ನೀಡಿದರೆ ನಾವು ಕೂಡ ಜ್ವಲಂತ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯವರೇ ಗಲಾಟೆ ಎಬ್ಬಿಸುತ್ತಿದ್ದಾರೆಂದು ಆರೋಪ ಮಾಡಬೇಕಾಗುತ್ತದೆ. ಸಿ.ಟಿ ರವಿ ಅವರಿಗೆ ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳುವುದು ಒಳಿತು. ಆರೋಪ ಮಾಡಲು ನಮಗೂ ಬರುತ್ತದೆ ಎಂದು ತಿರುಗೇಟು ನೀಡಿದರು.

  • ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ

    ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ

    ಶಿವಮೊಗ್ಗ: ರಾಜ್ಯ ಸರ್ಕಾರ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದೆ. ಇದರ ನಡುವೆಯೇ ಶಿವಮೊಗ್ಗದ ಹೊರ ವಲಯದ ಲಾಡ್ಜ್‌ವೊಂದರಲ್ಲಿ ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ಯುವಕನ ಜೊತೆ ಸಿಕ್ಕಿ ಬಿದ್ದಿರುವುದು ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

    ಶಿವಮೊಗ್ಗದ ತೇವರ ಚಟ್ನಹಳ್ಳಿಯ ಲಾಡ್ಜ್‌ವೊಂದಕ್ಕೆ ದಾವಣಗೆರೆ ಮೂಲದ ಹಿಂದೂ ಯುವತಿ ಹಾಗೂ ದಾವಣಗೆರೆ ಜಿಲ್ಲೆಯ ಅನ್ಯಕೋಮಿನ ಯುವಕ ಬಂದಿದ್ದಾರೆ. ಇದನ್ನು ಸ್ಥಳೀಯ ಹಿಂದೂ ಯುವಕರು ಗಮನಿಸಿ ಬಜರಂಗದಳ ಕಾರ್ಯಕರ್ತರ ಗಮನಕ್ಕೆ ತಂದಿದ್ದಾರೆ. ತಕ್ಷಣ ಪೊಲೀಸರ ಜೊತೆ ಲಾಡ್ಜ್‌ಗೆ ಆಗಮಿಸಿದ ಬಜರಂಗದಳ ಕಾರ್ಯಕರ್ತರಿಗೆ ಲಾಡ್ಜ್ ವ್ಯವಸ್ಥಾಪಕ ನಮ್ಮಲ್ಲಿ ಈ ರೀತಿಯ ಯುವಕ – ಯುವತಿ ಯಾರು ಇಲ್ಲ ಎಂದು ತಿಳಿಸಿದ್ದಾನೆ. ಆದರೆ ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಕೊಠಡಿಯನ್ನು ತೆರೆದು ನೋಡಿದಾಗ ಹಿಂದೂ ಯುವತಿ, ಅನ್ಯಕೋಮಿನ ಯುವಕನ ಜೊತೆ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: ಹಿಂದೂ ಯುವತಿಯರ ಕೈಗೆ ತಲ್ವಾರ್ ಕೊಡ್ಬೇಕು, ಅನ್ಯಧರ್ಮೀಯರು ಕಣ್ಣೆತ್ತಿ ನೋಡಿದ್ರೆ ತಲೆ ಕಡೀಬೇಕು: ಸಾಧ್ವಿ ಸರಸ್ವತಿ

    ನಂತರ ಯುವಕ ಹಾಗೂ ಯುವತಿಯನ್ನು ಪೊಲೀಸರ ವಶಕ್ಕೆ ನೀಡಿ, ಲಾಡ್ಜ್ ಬಂದ್ ಮಾಡಿಸಿ ಬಜರಂಗದಳ ಕಾರ್ಯಕರ್ತರು ವಾಪಸ್ ತೆರಳಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಯುವತಿಯನ್ನು ಆಕೆಯ ಪೋಷಕರ ಜೊತೆ ಕಳುಹಿಸಿಕೊಟ್ಟಿದ್ದರು. ಯುವಕನನ್ನು ಕೂಡ ಬಿಟ್ಟು ಕಳುಹಿಸಿದ್ದಾರೆ. ಅಲ್ಲದೇ ಲಾಡ್ಜ್ ಮಾಲೀಕ ಮತ್ತೆ ಲಾಡ್ಜ್ ತೆರೆದುಕೊಂಡಿದ್ದ. ಇದರಿಂದ ಮತ್ತೆ ಕೆರಳಿದ ಬಜರಂಗದಳ ಕಾರ್ಯಕರ್ತರು ಲಾಡ್ಜ್ ಮುಂಭಾಗ ಪ್ರತಿಭಟನೆ ನಡೆಸಿದರು.ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

    ಶಿವಮೊಗ್ಗದ ಹೊರವಲಯದ ಲಾಡ್ಜ್‌ಗಳು ಮತಾಂತರ ಕೇಂದ್ರಗಳಾಗುತ್ತಿವೆ. ಯಾವುದೇ ದಾಖಲಾತಿ ಪಡೆಯದೇ ರೂಂ ನೀಡುತ್ತಿವೆ. ಈ ಕೂಡಲೇ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಲಾಡ್ಜ್‌ಗಳನ್ನು ಬಂದ್ ಮಾಡಿಸುವಂತೆ ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.