Tag: anti-farmer laws

  • ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

    ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

    ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

    ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ದೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ

    ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರ್ಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಏರಿಕೆ ಆಯ್ತು ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳು

  • ಮೋದಿ, ಶಾ ಹೃದಯ ಕಲ್ಲಾಗಿದೆ : ಸಾಹಿತಿ ದೇವನೂರ ಮಹಾದೇವ

    ಮೋದಿ, ಶಾ ಹೃದಯ ಕಲ್ಲಾಗಿದೆ : ಸಾಹಿತಿ ದೇವನೂರ ಮಹಾದೇವ

    ಚಾಮರಾಜನಗರ: ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೃದಯ ಕಲ್ಲಾಗಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹದೇವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಚಾಮರಾಜನಗರದಲ್ಲಿ ರೈತ ನೇತಾರ ಪ್ರೊ. ಎಂ.ಡಿ ನಂಜುಂಡಸ್ವಾಮಿ 85 ನೇ ಜನ್ಮದಿನಾಚರಣೆ ಹಾಗೂ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಜಾಗೃತಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜನರಿಂದ ಆಯ್ಕೆಯಾದವರು ಇಂದು ಸರ್ಕಾರ ನಡೆಸುತ್ತಿಲ್ಲ. ಬಂಡವಾಳಶಾಹಿಗಳಿಂದ ನೇಮಕಗೊಂಡ ವಂಚಕ ರಾಜಕಾರಣಿಗಳು ಸರ್ಕಾರ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ ನೂರಾರು ರೈತರು ಮೃತ ಪಟ್ಟಿದ್ದರೂ ಸಹ ಪ್ರಧಾನಿ ಮೋದಿ ಹಾಗು ಅಮಿತ್ ಶಾ ಅವರ ಹೃದಯ ಕಲ್ಲಾಗಿದೆ ಎಂದು ಕಿಡಿಕಾರಿದರು.

    ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ವಿಚಾರಧಾರೆಗಳು ಇಂದು ನಿಜವಾಗುತ್ತಿವೆ. ಅವರು ಬದುಕಿದ್ದರೆ ಇಂದು ಕಾನೂನು ಬಾಹಿರ ತಡೆ ಕಾಯ್ದೆಯನ್ವಯ ಜೈಲಿನಲ್ಲಿರುತ್ತಿದ್ದರು. ದೇಶ ದ್ರೋಹಿ ಎನಿಸಿಕೊಂಡು ಜೈಲಿಗೆ ತಳ್ಳಲ್ಪಡುತ್ತಿದ್ದರು.

    ದೆಹಲಿಯಲ್ಲಿ ಹೋರಾಟನಿರತ ರೈತರು ತಮಗೆ ಪೊಲೀಸರು ಹಾಗೂ ಬಿಜೆಪಿಯವರು ಕೊಡುತ್ತಿರುವ ಕಿರುಕುಳ ಸಹಿಸಿಕೊಂಡು ಹೋರಾಟ ಮುಂದುವರಿಸಿದ್ದಾರೆ. ರೈತರೇನು ಮೂಢಾತ್ಮರಲ್ಲ. ಹಿಂದೆ ನರೇಂದ್ರ ಮೋದಿ ಕೃಷಿ ಮಾರುಕಟ್ಟೆ ಸುಧಾರಣಾ ಸಮಿತಿಗೆ ನೇಮಕಗೊಂಡಿದ್ದಾಗ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಕಡ್ಡಾಯಗೊಳಿಸಬೇಕು ಎಂದು ವರದಿ ನೀಡಿದ್ದರು. ಆದರೆ ಇಂದು ಅವರ ಮಾತು ಅವರೇ ಕೇಳುತ್ತಿಲ್ಲ ಎಂದು ಟೀಕಿಸಿದರು.

    ಲಂಗು ಲಗಾಮು ಇಲ್ಲದೆ ಕಾನೂನುಗಳು ಜಾರಿಯಾದರೆ, ರೈತ ಬೆಳೆದ ಬೆಳೆಗಳ ಕೃತಕ ಅಭಾವ ಸೃಷ್ಠಿಯಾಗುತ್ತದೆ. ಎಲ್ಲಾ ಪದಾರ್ಥಗಳ ಬೆಲೆ ಗಗನಕ್ಕೇರುತ್ತವೆ. ಮಧ್ಯಮವರ್ಗದವರು ಬಡತನದತ್ತ ದೂಡಲ್ಪಡುತ್ತಾರೆ. ಬಡವರು ಹಸಿವಿನ ದವಡೆಗೆ ಸಿಲುಕುತ್ತಾರೆ ಎಂದು ದೇವನೂರು ಮಹದೇವ ಎಚ್ಚರಿಸಿದರು.

    ಕೃಷಿ ಕಾನೂನು ಕೇವಲ ರೈತರಿಗೆ ಸಂಬಂಧಪಟ್ಟಿದ್ದಲ್ಲ. ಇದು ಎಲ್ಲಾ ವರ್ಗದ ಜನರಿಗೆ ಅನ್ವಯಿಸುತ್ತದೆ ಈ ನೆಲದ ಮೇಲೆ ಬದುಕುತ್ತಿರುವ ಪ್ರತಿಯೊಬ್ಬರೂ ಇದನ್ನು ಮನಗಾಣಬೇಕು ಎಂದು ಅವರು ಹೇಳಿದರು.