Tag: Anti Terrorism Squad

  • ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

    ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

    ಮುಂಬೈ: ಪಾಕಿಸ್ತಾನಿ (Pakistan) ಏಜೆಂಟ್‍ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation) ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬನನ್ನು (Scientist) ಮಹಾರಾಷ್ಟ್ರ (Maharastra) ಭಯೋತ್ಪಾದನಾ ನಿಗ್ರಹ ದಳ (Anti Terrorism Squad) ಬಂಧಿಸಿದೆ.

    ಉನ್ನತ ಹುದ್ದೆಯಲ್ಲಿದ್ದ ಆರೋಪಿಯು ವಾಟ್ಸಾಪ್ (WhatsApp) ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ( Honey Trap) ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆ – ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು

    ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಆರೋಪಿಯ ವಿರುದ್ಧ ಮುಂಬೈನ (Mumbai) ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ (Official Secrets Act) ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೀಟ್ ಅಭ್ಯರ್ಥಿಗಳಿಗೆ ಸಂಚಾರದ ಆತಂಕ – ಬೆಂಗಳೂರಲ್ಲಿ ಮೋದಿ ರೋಡ್ ಶೋನಲ್ಲಿ ಮತ್ತೆ ಬದಲಾವಣೆ

  • ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಮುಂಬೈ: ನಗರದಲ್ಲಿ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳವನ್ನು ಸ್ಥಾಪಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಅಫ್ತಾಬ್ ಅಹ್ಮದ್ ಖಾನ್ ಶುಕ್ರವಾರ ನಿಧನರಾಗಿದ್ದಾರೆ.

    ಮೂರು ದಶಕಗಳ ಹಿಂದೆ ಮುಂಬೈ ಪೊಲೀಸ್ ಇಲಾಖೆಯಲ್ಲಿ ಭಯೋತ್ಪಾದನಾ ನಿಗ್ರಹ ದಳವನ್ನು ಸ್ಥಾಪಿಸಿದ ಕೀರ್ತಿ ಹೊಂದಿರುವ ಅಫ್ತಾಬ್ ಅಹ್ಮದ್ ಖಾನ್ ತಮ್ಮ 81ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

    ಅಫ್ತಾಬ್ ಒಬ್ಬ ಹೆಸರಾಂತ ಪೊಲೀಸ್ ಅಧಿಕಾರಿಯಾಗಿದ್ದು, ತಮ್ಮ ಅಧಿಕಾರ ಅವಧಿಯಲ್ಲಿ ಮುಂಬೈನ ದರೋಡೆಕೋರರು ಹಾಗೂ ಭಯೋತ್ಪಾದಕರ ವಿರುದ್ಧ ಹಲವಾರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಅಫ್ತಾಬ್ ತಮ್ಮ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇದನ್ನೂ ಓದಿ: ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!

    ಕೆಲವು ದಿನಗಳ ಹಿಂದೆ ಖಾನ್‌ರಿಗೆ ಕೋವಿಡ್ ಸೋಂಕು ತಗುಲಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯೂ ಹೊಂದಿದ್ದರು. ಶುಕ್ರವಾರ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    1963ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಖಾನ್, 1995ರಲ್ಲಿ ಮಹಾರಾಷ್ಟ್ರದ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು. 1990ರಲ್ಲಿ ಖಾನ್ ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆಯನ್ನು ಸ್ಥಾಪಿಸಿದ್ದು, ಅದು ದೇಶದಲ್ಲೇ ಸ್ಥಾಪಿತವಾದ ಮೊದಲ ಭಯೋತ್ಪಾದನಾ ನಿಗ್ರಹ ಸಂಘಟನೆಯಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಐಎಸ್‌ಐ ಮಾರ್ಕ್ ಇಲ್ಲದ 70 ಲಕ್ಷ ಮೌಲ್ಯದ ಚೀನಾ ಆಟಿಕೆ ವಶ