Tag: Anusaya Bhardwaj

  • ವಿಜಯ್ ದೇವರಕೊಂಡ ವಿರುದ್ಧ ಹಳೆಯ ಸೇಡು ತೀರಿಸಿಕೊಂಡ ನಿರೂಪಕಿ ಅನಸೂಯ

    ವಿಜಯ್ ದೇವರಕೊಂಡ ವಿರುದ್ಧ ಹಳೆಯ ಸೇಡು ತೀರಿಸಿಕೊಂಡ ನಿರೂಪಕಿ ಅನಸೂಯ

    ವಿಜಯ್ ದೇವರಕೊಂಡ ನಟನೆಯ ಅರ್ಜುನ್ ರೆಡ್ಡಿ ಸಿನಿಮಾದ ಕಾರ್ಯಕ್ರಮದಲ್ಲಿ ನಿರೂಪಕಿ ಅನಸೂಯ ಮತ್ತು ವಿಜಯ್ ದೇವರಕೊಂಡ ನಡುವೆ ಜಟಾಪಟಿ ನಡೆದಿತ್ತು. ಮಹಿಳೆಯರ ಕುರಿತಾಗಿ ವಿಜಯ್ ದೇವರಕೊಂಡ ಅವಮಾನಕರ ರೀತಿಯಲ್ಲಿ ಸಂಭಾಷಣೆ ಹೇಳಿದರು ಎಂದು ವೇದಿಕೆಯ ಮೇಲೆಯೇ ಅನಸೂಯ ಆಕ್ಷೇಪಿಸಿದ್ದರು. ಈ ಘಟನೆಯಿಂದ ವಿಜಯ್ ಮುಜಗರ ಕೂಡ ಅನುಭವಿಸಿದ್ದರು. ಹೀಗಾಗಿ ಇಬ್ಬರ ಮಧ್ಯ ಮನಸ್ತಾಪ ಉಂಟಾಗಿತ್ತು.

    ಈ ಘಟನೆಯ ನಂತರ ವಿಜಯ್ ದೇವರಕೊಂಡ ಅವರ ಯಾವ ಕಾರ್ಯಕ್ರಮಕ್ಕೂ ಅನಸೂಯ ಇರುತ್ತಿರಲಿಲ್ಲ ಎನ್ನಲಾಗುತ್ತಿದೆ. ಮಹಿಳೆಯರ ಪರ ನಿಂತಿದ್ದಕ್ಕೆ ಅನಸೂಯ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರಂತೆ. ಈ ಘಟನೆ ನಡೆದು ಹಲವು ವರ್ಷಗಳಾದರೂ, ವಿಜಯ್ ದೇವರಕೊಂಡ ಮೇಲಿನ ಕೋಪ ಹಾಗೆಯೇ ಇತ್ತು. ವಿಜಯ್ ನಟನೆಯ ಲೈಗರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸೋಲುತ್ತಿದ್ದಂತೆಯೇ ಅನಸೂಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕರ್ಮ ಯಾವತ್ತಿದ್ದರೂ ವಾಪಸ್ಸು ಕೊಡುತ್ತೆ ಅಂದಿದ್ದಾರೆ. ಇದನ್ನೂ ಓದಿ:ರಮ್ಯಾ ಮನೆಯಲ್ಲೇ ಕಥೆ ಹೇಳಿದ್ರಂತೆ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ : ಪದ್ಮಾವತಿ ಕಮ್ ಬ್ಯಾಕ್ ಕನ್ಫರ್ಮ್

    ಲೈಗರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ನಿರೀಕ್ಷಿತ ಮಟ್ಟ ತಲುಪಿಲ್ಲ. ಜನರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಬಾಲಿವುಡ್ ಅಂಗಳದಲ್ಲೇ ಸಿನಿಮಾಗೆ ಅಷ್ಟೊಂದು ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಎಲ್ಲ ಕಾರಣದಿಂದಾಗಿ ಲೈಗರ್ ಸೋಲು ಎಂದು ಹೇಳಲಾಗುತ್ತಿದೆ. ಈ ಸೋಲನ್ನು ಅನಸೂಯ ಅವರು ಸಂಭ್ರಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]