Tag: anushka shetty

  • ದೇವಸೇನಾಳಿಂದ ದೂರವಾದ್ರಾ ಬಾಹುಬಲಿ?- ಮೂವರು ಕನ್ನಡತಿಯರ ನಡ್ವೆ ಡಾರ್ಲಿಂಗ್

    ದೇವಸೇನಾಳಿಂದ ದೂರವಾದ್ರಾ ಬಾಹುಬಲಿ?- ಮೂವರು ಕನ್ನಡತಿಯರ ನಡ್ವೆ ಡಾರ್ಲಿಂಗ್

    ಬೆಂಗಳೂರು: ಟಾಲಿವುಡ್ ದೇವಸೇನಾ ಅನುಷ್ಕಾ ಶೆಟ್ಟಿಯಿಂದ ಡಾರ್ಲಿಂಗ್ ಬಾಹುಬಲಿ ದೂರ ಆಗ್ತಿದ್ದೀರಾ ಅನ್ನೋ ಮಾತು ಬಣ್ಣದ ಲೋಕದಲ್ಲಿ ಸುಳಿದಾಡುತ್ತಿದೆ. ಬಾಹುಬಲಿ ಸಿನಿಮಾ ಬಳಿಕ ಪ್ರಭಾಸ್ ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ. ಬಾಹುಬಲಿಯಲ್ಲಿ ಅನುಷ್ಕಾ ಮತ್ತು ಪ್ರಭಾಸ್ ಕೆಮಿಸ್ಟ್ರಿ ನೋಡಿದ ಅಭಿಮಾನಿಳು ರಿಯಲ್ ಲೈಫ್ ನಲ್ಲಿಯೂ ಒಂದಾದ್ರೆ ಚೆನ್ನಾಗಿರುತ್ತೆ ಅಂತ ಕನಸು ಕಂಡಿದ್ದರು. ಆದ್ರೆ ಅಭಿಮಾನಿಗಳು ಕಂಡ ಕನಸು ಕನಸಾಗಿಯೇ ಉಳಿಯಲಿದೆಯಾ ಅನ್ನೋ ಪ್ರಶ್ನೆಯನ್ನು ಖುದ್ದು ಪ್ರಭಾಸ್ ಮುನ್ನಲೆಗೆ ತಂದಿದ್ದಾರೆ.

    ಪ್ರಭಾಸ್ ಮುಂದಿನ ಸಿನಿಮಾ ರಾಧೆ-ಶ್ಯಾಮ್ ಚಿತ್ರದ ಫಸ್ಟ್ ಲುಕ್ ಭಾರತೀಯ ಸಿನಿ ಅಂಗಳದಲ್ಲಿ ಸೆನ್ಸಷನಲ್ ಕ್ರಿಯೇಟ್ ಮಾಡಿದೆ. ಚಿತ್ರದ ಫಸ್ಟ್ ಲುಕ್ ನಲ್ಲಿ ಮಾಸ್ ಪ್ರಭಾಸ್ ಲವರ್ ಬಾಯ್ ಆಗಿ ಕನ್ನಡತಿ ಪೂಜಾ ಹೆಗ್ಡೆ ರೊಮ್ಯಾಂಟಿಕ್ ಪೋಸ್ ನೀಡಿದ್ದಾರೆ. ರಾಧೆ ಶ್ಯಾಮ್ ಟೀಂಗೆ ಬಾಲಿವುಡ್ ಪದ್ಮಾವತಿ, ಗುಳಿ ಕೆನ್ನೆಯ ಚೆಲುವೆ ದೀಪಿಕಾ ಪಡುಕೋಣೆ ಎಂಟ್ರಿ ಕೊಟ್ಟಿದ್ದಾರೆ. ಫಿಲಂ ಟೀಂಗೆ ಎಂಟ್ರಿ ಕೊಡುತ್ತಿದ್ದಂತೆ ದೀಪಿಕಾ ಇನ್‍ಸ್ಟಾಗ್ರಾಂ ಖಾತೆಯನ್ನು ಪ್ರಭಾಸ್ ಫಾಲೋ ಮಾಡಲಾರಂಭಿಸಿದ್ದಾರೆ.

    ಪ್ರಭಾಸ್ ಇನ್‍ಸ್ಟಾಗ್ರಾಂನಲ್ಲಿ ಕೇವಲ ಐವರು ಫಾಲೋ ಮಾಡುತ್ತಿದ್ದಾರೆ. ಗೆಳೆಯ ಸುಜಿತ್, ನಟಿಯರಾದ ದೀಪಿಕಾ ಪಡುಕೋಣೆ, ಪೂಜಾ ಹೆಗ್ಡೆ, ಶ್ರದ್ಧಾ ಕಪೂರ್ ಮತ್ತು ಭಾಗ್ಯಶ್ರೀಯವರ ಖಾತೆಗಳನ್ನು ಫಾಲೋ ಮಾಡುತ್ತಿದ್ದಾರೆ. ಆದ್ರೆ ಬಹುದಿನಗಳ ಗೆಳತಿ ಅನುಷ್ಕಾ ಶೆಟ್ಟಿಯ ಖಾತೆಯನ್ನು ಮಾತ್ರ ಫಾಲೋ ಮಾಡಿಲ್ಲ. ಇತ್ತ ದೇವಸೇನಾ ಗೆಳಯ ಬಾಹುಬಲಿಯ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ.

    ಇತ್ತೀಚೆಗೆ ನಟಿಸುತ್ತಿರುವ ನಟಿಯರ ಖಾತೆಗಳನ್ನು ಫಾಲೋ ಮಾಡುತ್ತಿರುವ ಪ್ರಭಾಸ್ ಹಳೆಯ ಗೆಳತಿ ಅರುಂಧತಿಯನ್ನು ಮರೆತ್ರಾ ಅನ್ನೋ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ದೀಪಿಕಾ, ಅನುಷ್ಕಾ ಮತ್ತು ಪೂಜಾ ಮೂವರು ಕರ್ನಾಟಕದವರಾಗಿದ್ದು, ಕನ್ನಡತಿಯರ ನಡುವೆ ಪ್ರಭಾಸ್ ಸಿಲುಕಿಕೊಂಡಿದ್ದಾರೆ ಅನ್ನೋ ಚರ್ಚೆಗಳು ಟಾಲಿವುಡ್ ಅಂಗಳದಲ್ಲಿ ಆರಂಭಗೊಂಡಿವೆ.

  • ಲಾಕ್‍ಡೌನ್ ಕುರಿತು ಕನ್ನಡತಿ ಅನುಷ್ಕಾ ಶೆಟ್ಟಿ ಸುದೀರ್ಘ ಪತ್ರ

    ಲಾಕ್‍ಡೌನ್ ಕುರಿತು ಕನ್ನಡತಿ ಅನುಷ್ಕಾ ಶೆಟ್ಟಿ ಸುದೀರ್ಘ ಪತ್ರ

    ನವದೆಹಲಿ: ಅಭಿಮಾನಿಗಳಿಗಾಗಿ ಅನುಷ್ಕಾ ಶೆಟ್ಟಿ ಸುಧೀರ್ಘ ಪತ್ರ ಬರೆದಿದ್ದು, ಈ ಮೂಲಕ ತಮ್ಮ ಕಾಳಜಿಯನ್ನು ತೋರಿದ್ದಾರೆ. ಕೊರೊನಾ ಹಾಗೂ ಲಾಕ್‍ಡೌನ್ ಕುರಿತು ಬಹುತೇಕ ನಟರು ಜಾಗೃತಿ ಮೂಡಿಸುತ್ತಿದ್ದಾರೆ. ಈ ಮೂಲಕ ಹೊರಗೆ ಬರಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಆದರೆ ಅನುಷ್ಕಾ ಶೆಟ್ಟಿ ಪತ್ರವನ್ನೇ ಬರೆದು ಮಾನವೀಯತೆಯ ಬಗ್ಗೆ ವಿವರಿಸಿದ್ದಾರೆ.

    ಕೊರೊನಾ ವೈರಸ್ ಹರಡುವಿಕೆಯಿಂದಾಗಿ ಇಡೀ ದೇಶವೇ ತಲ್ಲಣಗೊಂಡಿದ್ದು, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದಂಹ ಸಂದರ್ಭದಲ್ಲಿ ಸರ್ಕಾರದ ಜೊತೆ ಸಹಕರಿಸಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ. ಅಲ್ಲದೆ ಈ ಕುರಿತು ಜಾಗೃತಿಯನ್ನು ಸಹ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಹಲವು ನಟ ನಟಿಯರು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಹೊರಗೆ ಬಾರದಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

    ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಅನುಷ್ಕಾ ಈ ಕುರಿತು ಬೆಳಕು ಚೆಲ್ಲಿದ್ದು, ಎ ಮೆಸೇಜ್ ಟು ಆಲ್ ಅರೌಂಡ್ ದಿ ವಲ್ರ್ಡ್, ಥ್ಯಾಂಕ್ ಯೂ ಎಂಬ ಸಾಲುಗಳನ್ನು ಬರೆದು, ಇಂಗ್ಲಿಷ್‍ನಲ್ಲಿ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ನಾವೆಲ್ಲರೂ ಬೇರೆ ಆಗಿದ್ದೇವೆ. ಆದರೆ ನಾವು ಒಗ್ಗಟ್ಟಾಗಿ ನಿಂತಿದ್ದೇವೆ. ಇಡೀ ಜೀವನಕ್ಕೆ ಹೊಸ ಸ್ವರೂಪ ಸಿಕ್ಕಿದೆ. ಈ ಹಿಂದೆ ಕಲಿತಿದ್ದನ್ನೆಲ್ಲ ಮರೆತು ಹೊಸದಾಗಿ ಕಲಿಯಬೇಕಿದೆ. ಹೊಸ ದೃಷ್ಟಿಕೋನ ಬಂದಿದೆ. ಅಸಾಧ್ಯ ಎಂಬುದೆಲ್ಲ ಸಾಧ್ಯವಾಗಿದೆ ಹಾಗೂ ಸಾಧ್ಯ ಎಂಬುದೆಲ್ಲ ಕಣ್ಮರೆ ಆಗಿದೆ. ಈ ಸಮಯ ಹಾಗೂ ಭೌಗೋಳಿಕವಾಗಿ ನಾವೆಲ್ಲರೂ ದೂರಾಗಿದ್ದೇವೆ ಎನಿಸಿದರೂ ಹೃದಯದಲ್ಲಿನ ಪ್ರೀತಿ ಮತ್ತು ಪ್ರಾರ್ಥನೆಯಿಂದ ಜೊತೆಯಾಗಿದ್ದೇವೆ.

     

    View this post on Instagram

     

    A message to all around the world,Thank you ????

    A post shared by AnushkaShetty (@anushkashettyofficial) on

    ಇಂತಹ ಕಠಿಣ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸುತ್ತಿದ್ದಾರೆ, ಕಾಳಜಿ ವಹಿಸುತ್ತಿದ್ದಾರೆ. ಅಲ್ಲದೆ ನಾವು ಗುಣಮುಖರಾಗಲು ಪ್ರಾರ್ಥಿಸುತ್ತಿದ್ದಾರೆ. ಅಂತಹವರಿಗೆ ನಾವು ಧನ್ಯವಾದ ಅರ್ಪಿಸಬೇಕಿದೆ. ಕೃತಜ್ಞತೆ ಸಲ್ಲಿಸಬೇಕಿದೆ. ಈ ಸಮಸ್ಯೆ ನಿವಾರಣೆಯಾದ ಬಳಿಕ ನಮಗೆಲ್ಲರಿಗೂ ನಮ್ಮದೇ ಆದ ಕರ್ತವ್ಯಗಳಿವೆ ಎಂಬುದನ್ನು ಅರಿತುಕೊಳ್ಳಬೇಕು. ಇಲ್ಲಿ ಯಾರೂ ಮೇಲು-ಕೀಳು ಇಲ್ಲ. ಮಾನವೀಯತೆಯ ಕಡೆಗೆ ನಮಗಿರುವ ಜವಾಬ್ದಾರಿಯನ್ನು ನಿಭಾಯಿಸೋಣ ಎಂದು ಅಭಿಮಾನಿಗಳಿಗೆ ಈ ಭಾವುಕ ಪತ್ರವನ್ನು ಅನುಷ್ಕಾ ಬರೆದಿದ್ದಾರೆ. ಈ ಮೂಲಕ ಕೊರೊನಾ ಸಂಕಷ್ಟದ ಬಳಿಕ ನಾವೆಲ್ಲರೂ ಹೇಗೆ ಬದುಕಬೇಕು ಎಂಬ ಬಗ್ಗೆಯೂ ಅನುಷ್ಕಾ ಮಾತನಾಡಿದ್ದಾರೆ.

    ಅನುಷ್ಕಾ ಶೆಟ್ಟಿ ನಟನೆಯ ‘ನಿಶಬ್ದಂ’ ಸಿನಿಮಾ ಏ.3ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಲಾಕ್‍ಡೌನ್ ಪರಿಣಾಮವಾಗಿ, ಚಿತ್ರದ ಬಿಡುಗಡೆ ದಿನಾಂಕ ಅನಿರ್ಧಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಒಂದು ವಿಶೇಷ ಪಾತ್ರವನ್ನು ಅನುಷ್ಕಾ ಈ ಸಿನಿಮಾದಲ್ಲಿ ನಿಭಾಯಿಸಿದ್ದು, ಹೇಮಂತ್ ಮದುಕರ್ ನಿರ್ದೇಶನ ಮಾಡಿದ್ದಾರೆ.

  • ಮತ್ತೆ ಕನ್ನಡಿಗರ ಮನ ಗೆದ್ದ ಅನುಷ್ಕಾ ಶೆಟ್ಟಿ – ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ

    ಮತ್ತೆ ಕನ್ನಡಿಗರ ಮನ ಗೆದ್ದ ಅನುಷ್ಕಾ ಶೆಟ್ಟಿ – ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ

    ಹೈದರಾಬಾದ್: ಕನ್ನಡದ ಬೆಡಗಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕನ್ನಡದಲ್ಲಿಯೇ ಯುಗಾದಿ ಹಬ್ಬಕ್ಕೆ ಶುಭ ಕೋರುವ ಮೂಲಕ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ.

    ಅನುಷ್ಕಾ ತಮ್ಮ ಇನ್‍ಸ್ಟಾದಲ್ಲಿ, “ಯುಗಾದಿ ಶುಭಾಶಯಗಳು. ನಿಮಗೂ ಹಾಗು ನಿಮ್ಮ ಕುಟುಂಬದ ಎಲ್ಲರಿಗೂ ಈ ಯುಗಾದಿಯು ಸಂತೋಷ ಹಾಗೂ ಸಮೃದ್ಧತೆನ್ನು ತರಲಿ. ನಾವೆಲ್ಲರೂ ಈ ಸಮಯವನ್ನು ಕುಟುಂಬದೊಂದಿಗೆ ಆನಂದಿಸೋಣ. ಸರ್ಕಾರದ ಆದೇಶದಂತೆ ಎಲ್ಲರೂ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದು ವಿನಂತಿಸುತ್ತೇನೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಅನುಷ್ಕಾ ಅವರ ಪೋಸ್ಟ್ ಗೆ ಅಭಿಮಾನಿಗಳು ಕನ್ನಡದಲ್ಲಿಯೇ ಕಮೆಂಟ್ ಮಾಡುವ ಮೂಲಕ ಯುಗಾದಿ ಹಬ್ಬಕ್ಕೆ ಶುಭ ಕೋರಿದ್ದಾರೆ.

     

    View this post on Instagram

     

    ಯುಗಾದಿ ಶುಭಾಶಯಗಳು ???? ನಿಮಗೂ ಹಾಗು ನಿಮ್ಮ ಕುಟುಂಬದ ಎಲ್ಲರಿಗೂ ಈ ಯುಗಾದಿಯು ಸಂತೋಷ ಹಾಗು ಸಮೃದ್ಧತೆನ್ನು ತರಲಿ. ನಾವೆಲ್ಲರೂ ಈ ಸಮಯವನ್ನು ಕುಟುಂಬದೊಂದಿಗೆ ಆನಂದಿಸೋಣ. ಸರಕಾರದ ಆದೇಶದಂತೆ ಎಲ್ಲರೂ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದು ವಿನಂತಿಸುತ್ತೇನೆ???? #HappyUgadi #Statyindoor #Staysafe Ugadi wishes to all ???? Let this ugadi bring happiness & prosperity to you and your family. Let us all enjoy this time with family. I request everyone to obey the Government’s orders to stay at home and stay safe???? #HappyUgadi #Statyindoor #Staysafe

    A post shared by AnushkaShetty (@anushkashettyofficial) on

    ಈ ಹಿಂದೆ ಅನುಷ್ಕಾ ತಮ್ಮ ತಾಯಿಗೆ ಕನ್ನಡದಲ್ಲಿ ಹುಟ್ಟುಹಬ್ಬ ಶುಭಾಶಯ ತಿಳಿಸುವ ಮೂಲಕ ಕೋಟ್ಯಂತರ ಕನ್ನಡಿಗರ ಮನಸ್ಸು ಗೆದ್ದಿದ್ದರು. ತಮ್ಮ ತಾಯಿ ಪ್ರಫುಲ್ಲಾ ಅವರ ಹುಟ್ಟುಹಬ್ಬದ ದಿನದಂದು ತಾಯಿ ಹಾಗೂ ಇತರೆ ಕುಟುಂಬಸ್ಥರೊಂದಿಗೆ ಅನುಷ್ಕಾ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು. ಫೋಟೋ ಹಾಕಿ ಅದಕ್ಕೆ, “ಜನ್ಮ ದಿನದ ಹಾರ್ದಿಕ ಶುಭಾಶಯಗಳು ಅಮ್ಮಾ” ಎಂದು ಬರೆದಿದ್ದರು.

     

    View this post on Instagram

     

    ಜನ್ಮದಿನದ ಹಾರ್ದಿಕ ಶುಭಾಶಯಗಳು ಅಮ್ಮಾ ????????????????????❤️

    A post shared by AnushkaShetty (@anushkashettyofficial) on

    ಮಂಗಳೂರು ಮೂಲದವರಾದ ನಟಿ ಅನುಷ್ಕಾ ಶೆಟ್ಟಿ ಅವರು ಹೆಚ್ಚು ನಟಿಸಿದ್ದು ಮಾತ್ರ ತೆಲುಗು, ತಮಿಳು ಸಿನಿಮಾದಲ್ಲಿ. ಆದರೆ ಅನುಷ್ಕಾ ಕನ್ನಡ ಪ್ರೇಮ, ತಾಯ್ನಾಡಿಗೆ ಮಿಡಿಯುವ ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ. ಈ ಹಿಂದೆ ಅನುಷ್ಕಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ಬರೆದು ಅಭಿಮಾನಿಗಳ ಮನಗೆದ್ದಿದ್ದರು. ಅನುಷ್ಕಾ ಅವರ ಪೋಸ್ಟ್‍ಗೆ ಕನ್ನಡಿಗರು ಫಿದಾ ಆಗಿದ್ದರು.

    ಅನುಷ್ಕಾ ಶೆಟ್ಟಿ `ನಿಶಬ್ದಂ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈಗಾಗಲೆ ಟೀಸರ್ ಮತ್ತು ಪೋಸ್ಟರ್‍ಗಳ ಮೂಲಕ ಸಿನಿಮಾ ಬಹಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಸ್ವೀಟಿ ಹೊಸ ಚಿತ್ರದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾತುರದಿಂದ ಕಾದ ಕುಳಿತಿದ್ದಾರೆ.

  • ಕೆಲಸಕ್ಕಾಗಿ ನನಗೆ ಪ್ರಭಾಸ್‍ರನ್ನು ಬಿಡಲು ಸಾಧ್ಯವಿಲ್ಲ: ಅನುಷ್ಕಾ ಶೆಟ್ಟಿ

    ಕೆಲಸಕ್ಕಾಗಿ ನನಗೆ ಪ್ರಭಾಸ್‍ರನ್ನು ಬಿಡಲು ಸಾಧ್ಯವಿಲ್ಲ: ಅನುಷ್ಕಾ ಶೆಟ್ಟಿ

    ಹೈದರಾಬಾದ್: ಬಾಹುಬಲಿ ಬೆಡಗಿ, ನಟಿ ಅನುಷ್ಕಾ ಶೆಟ್ಟಿ ಕೆಲಸಕ್ಕಾಗಿ ನನಗೆ ಪ್ರಭಾಸ್ ಅವರನ್ನು ನಾನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆಯೊಂದನ್ನು ನೀಡಿದ್ದಾರೆ.

    ಅನುಷ್ಕಾ ತಮ್ಮ ಮುಂಬರುವ ‘ನಿಶಬ್ದಂ’ ಚಿತ್ರದ ಪ್ರಮೋಶನ್‍ಗಾಗಿ ರಿಯಾಲಿಟಿ ಶೋವೊಂದರಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಅನುಷ್ಕಾ, “ಕೆಲಸಕ್ಕಾಗಿ ನನಗೆ ಪ್ರಭಾಸ್ ಅವರ ಸ್ನೇಹವನ್ನು ಬಿಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಈ ಹಿಂದೆ ಸಂದರ್ಶನವೊಂದರಲ್ಲಿ ಅನುಷ್ಕಾ, “ಕಳೆದ 15 ವರ್ಷಗಳಿಂದ ನನಗೆ ಪ್ರಭಾಸ್ ಗೊತ್ತು. ಪ್ರಭಾಸ್ ನನ್ನ 3 ಎಎಂ ಫ್ರೆಂಡ್. ನಮ್ಮಿಬ್ಬರ ನಡುವೆ ಅದ್ಭುತವಾದ ಗೆಳತನವಿದೆ. ನಮ್ಮಿಬ್ಬರ ಬಗ್ಗೆ ಸಾಕಷ್ಟು ಗಾಸಿಪ್‍ಗಳು ಹರಿದಾಡುತ್ತಿರುತ್ತೆ. ನಮ್ಮಿಬ್ಬರಿಗೂ ಮದುವೆ ಆಗಿಲ್ಲ ಎಂದು ನಮ್ಮ ಬಗ್ಗೆ ಗಾಸಿಪ್‍ಗಳು ಹರಿದಾಡುತ್ತಲೇ ಇರುತ್ತೆ. ನಮ್ಮ ಆನ್‍ಸ್ಕ್ರೀನ್ ಕೆಮಿಸ್ಟ್ರೀ ತುಂಬಾ ಚನ್ನಾಗಿದೆ, ಅದಕ್ಕೆ ಹೀಗೆ ಕೆಲ ಗಾಸಿಪ್‍ಗಳು ಮಾಡಲಾಗುತ್ತೆ. ನಾವಿಬ್ಬರು ಒಳ್ಳೆಯ ಸ್ನೇಹಿತರು. ಇಬ್ಬರೂ ಒಂದೇ ತರಹದ ವ್ಯಕ್ತಿತ್ವ ಹೊಂದಿದ್ದೇವೆ, ನಮ್ಮ ಭಾವನೆಗಳನ್ನು ನಾವು ಮುಚ್ಚಿಡುವುದಿಲ್ಲ” ಎಂದು ಹೇಳಿದ್ದರು.

    ಅನುಷ್ಕಾ ಶೆಟ್ಟಿ `ನಿಶಬ್ದಂ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈಗಾಗಲೆ ಟೀಸರ್ ಮತ್ತು ಪೋಸ್ಟರ್‍ಗಳ ಮೂಲಕ ಸಿನಿಮಾ ಬಹಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಸ್ವೀಟಿ ಹೊಸ ಚಿತ್ರದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾತುರದಿಂದ ಕಾದ ಕುಳಿತಿದ್ದಾರೆ.

    ಇತ್ತ ಪ್ರಭಾಸ್ ‘ಓ ಡಿಯರ್’ ಎಂಬ ರೊಮ್ಯಾಂಟಿಕ್ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರಿಗೆ ನಾಯಕಿಯಾಗಿ ನಟಿ ಪೂಜಾ ಹೆಗ್ಡೆ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಧಾಕೃಷ್ಣ ಕುಮಾರ್ ನಿರ್ದೇಶಿಸುತ್ತಿದ್ದು, ಯುಗಾದಿ ಹಬ್ಬಕ್ಕೆ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗುತ್ತೆ ಎಂದು ಹೇಳಲಾಗುತ್ತಿದೆ.

  • ಪ್ರಭಾಸ್ ನನ್ನ 3AM ಫ್ರೆಂಡ್ ಎಂದ ಅನುಷ್ಕಾ ಶೆಟ್ಟಿ

    ಪ್ರಭಾಸ್ ನನ್ನ 3AM ಫ್ರೆಂಡ್ ಎಂದ ಅನುಷ್ಕಾ ಶೆಟ್ಟಿ

    ಹೈದರಾಬಾದ್: ತಮಿಳು- ತೆಲುಗು ಚಿತ್ರರಂಗದ ಬಹುಬೇಡಿಕೆಯ ನಟಿ, ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ಚಿತ್ರರಂಗಕ್ಕೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿದ್ದ ಸ್ವೀಟಿ ಖಾಸಗಿ ಸಂದರ್ಶನವೊಂದರಲ್ಲಿ ನಟ ಪ್ರಭಾಸ್ ನನ್ನ 3 ಎಎಂ ಫ್ರೆಂಡ್ ಎಂದು ಹೇಳಿಕೊಂಡಿದ್ದಾರೆ.

    ಸಂದರ್ಶನದಲ್ಲಿ ಅನುಷ್ಕಾ ತಮ್ಮ ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಸಿನಿ ಪಯಣದ ಹಾದಿಯನ್ನು ನೆನೆದಿದ್ದಾರೆ. ಅದರಲ್ಲೂ ಪ್ರಭಾಸ್ ಬಗ್ಗೆ ಮನಬಿಚ್ಚಿ ಅನುಷ್ಕಾ ಮಾತನಾಡಿದ್ದಾರೆ.

    ‘ಕಳೆದ 15 ವರ್ಷಗಳಿಂದ ನನಗೆ ಪ್ರಭಾಸ್ ಗೊತ್ತು. ಪ್ರಭಾಸ್ ನನ್ನ 3 ಎಎಂ ಫ್ರೆಂಡ್. ನಮ್ಮಿಬ್ಬರ ನಡುವೆ ಅದ್ಭುತವಾದ ಗೆಳತನವಿದೆ. ನಮ್ಮಿಬ್ಬರ ಬಗ್ಗೆ ಸಾಕಷ್ಟು ಗಾಸಿಪ್‍ಗಳು ಹರಿದಾಡುತ್ತಿರುತ್ತೆ. ನಮ್ಮಿಬ್ಬರಿಗೂ ಮದುವೆ ಆಗಿಲ್ಲ ಎಂದು ನಮ್ಮ ಬಗ್ಗೆ ಗಾಸಿಪ್‍ಗಳು ಹರಿದಾಡುತ್ತಲೇ ಇರುತ್ತೆ. ನಮ್ಮ ಆನ್‍ಸ್ಕ್ರೀನ್ ಕೆಮಿಸ್ಟ್ರೀ ತುಂಬಾ ಚನ್ನಾಗಿದೆ, ಅದಕ್ಕೆ ಹೀಗೆ ಕೆಲ ಗಾಸಿಪ್‍ಗಳು ಮಾಡಲಾಗುತ್ತೆ. ನಾವಿಬ್ಬರು ಒಳ್ಳೆಯ ಸ್ನೇಹಿತರು. ಇಬ್ಬರೂ ಒಂದೇ ತರಹದ ವ್ಯಕ್ತಿತ್ವ ಹೊಂದಿದ್ದೇವೆ, ನಮ್ಮ ಭಾವನೆಗಳನ್ನು ನಾವು ಮುಚ್ಚಿಡುವುದಿಲ್ಲ’ ಎಂದು ಹೇಳಿದ್ದಾರೆ.

    ಜೀವನದಲ್ಲಿ ಯಾರು ಅತಿ ಹೆಚ್ಚು ಮನಸ್ಸಿಗೆ ಇಷ್ಟವಾಗಿರುತ್ತಾರೋ, ನಮ್ಮಗೆ ಹೆಚ್ಚು ಹತ್ತಿರವಾಗಿರುತ್ತಾರೋ ಅವರನ್ನ 3 ಎಎಂ ಫ್ರೆಂಡ್ ಎಂದು ಹೇಳುತ್ತಾರೆ. ಒಬ್ಬರಿಗೊಬ್ಬರು ಅವಲಂಭಿಸಿರುತ್ತಾರೆ, ಏನೇ ವಿಚಾರವಿದ್ದರೂ ಒಬ್ಬರ ಬಳಿ ಇನ್ನೊಬ್ಬರು ಹಂಚಿಕೊಳ್ಳುತ್ತಾರೆ. ಈ ರೀತಿ ಗೆಳೆತನ ಪ್ರಭಾಸ್ ಹಾಗೂ ಅನುಷ್ಕಾ ನಡುವೆ ಇದೆ. ಹೀಗಾಗಿ ಅನುಷ್ಕಾ ಪ್ರಭಾಸ್ ನನ್ನ 3 ಎಎಂ ಫ್ರೆಂಡ್ ಎಂದು ಖುಷಿಯಿಂದ ಸ್ನೇಹದ ಬಗ್ಗೆ ತಿಳಿಸಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಅವರು ಸಿನಿಮಾ ರಂಗದಲ್ಲಿ 15 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಲು ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಎಸ್.ಎಸ್ ರಾಜಮೌಳಿ, ಪುರಿ ಜಗನ್ನಾಥ್, ಸುರೇಶ್ ಬಾಬು, ನಟಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್ ಸೇರಿದಂತೆ ಸಾಕಷ್ಟು ಗಣ್ಯರು ಭಾಗಿಯಾಗಿ, ಅನುಷ್ಕಾಗೆ ಶುಭಕೋರಿದ್ದರು. ಈ ವೇಳೆ ಅನುಷ್ಕಾ ಸಂತಸ ವ್ಯಕ್ತಪಡಿಸಿದ್ದರು. ಅಭಿಮಾನಿಗಳು ಇಷ್ಟು ವರ್ಷಗಳಿಂದ ತಮ್ಮ ಮೇಲೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದರು.

    ಸದ್ಯ ಅನುಷ್ಕಾ ಶೆಟ್ಟಿ ‘ನಿಶಬ್ದಂ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈಗಾಗಲೆ ಟೀಸರ್ ಮತ್ತು ಪೋಸ್ಟರ್‍ಗಳ ಮೂಲಕ ಸಿನಿಮಾ ಬಹಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಸ್ವೀಟಿ ಹೊಸ ಚಿತ್ರದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾತುರದಿಂದ ಕಾದ ಕುಳಿತಿದ್ದಾರೆ.

  • ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ

    ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ

    ಹೈದರಾಬಾದ್: ಬಾಹುಬಲಿ ಬೆಡಗಿ, ಸ್ವೀಟಿ ಅನುಷ್ಕಾ ಶೆಟ್ಟಿ ಅವರು ಚಿತ್ರರಂಗದಲ್ಲಿ 15 ವರ್ಷಗಳನ್ನು ಪೂರೈಸಿದ್ದಾರೆ. 2005ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಷ್ಕಾ ಈಗಲೂ ಬಹುಬೇಡಿಕೆಯ ನಟಿಯಾಗಿ ತಮ್ಮ ಸಿನಿ ಪಯಣ ಮುಂದುವರಿಸುತ್ತಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಅವರು ಸಿನಿಮಾ ರಂಗದಲ್ಲಿ 15 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಲು ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಎಸ್.ಎಸ್ ರಾಜಮೌಳಿ, ಪುರಿ ಜಗನ್ನಾಥ್, ಸುರೇಶ್ ಬಾಬು, ನಟಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್ ಸೇರಿದಂತೆ ಸಾಕಷ್ಟು ಗಣ್ಯರು ಭಾಗಿಯಾಗಿ, ಅನುಷ್ಕಾಗೆ ಶುಭಕೋರಿದ್ದರು. ಈ ವೇಳೆ ಅನುಷ್ಕಾ ಸಂತಸ ವ್ಯಕ್ತಪಡಿಸಿದ್ದರು. ಅಭಿಮಾನಿಗಳು ಇಷ್ಟು ವರ್ಷಗಳಿಂದ ತಮ್ಮ ಮೇಲೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ.

    ನನ್ನ 15 ವರ್ಷಗಳ ಈ ಕಠಿಣ ಶ್ರಮ ಉದ್ಯಮದ ಉಳಿದ ಕಲಾವಿದರಿಗೆ ಹೋಲಿಸಿದರೆ ಏನು ಅಲ್ಲ ಎಂಬುದು ನನ್ನ ಭಾವನೆ. ನಾನು ಅಭಿನಯಿಸಿರುವ ಪ್ರತಿಯೊಂದು ಸಿನಿಮಾವೂ, ನಿಶಬ್ದಂವರೆಗೂ ಸಿನಿಮಾವರೆಗೂ ನಾನು ಅನುಭವಿಸಿದ ಎಲ್ಲಾ ಪಾತ್ರ ಅನುಭವಗಳು ನನ್ನನ್ನು ಇಲ್ಲಿಯವರೆಗೆ ಕರೆತಂದಿದೆ ಎಂದು ಅನುಷ್ಕಾ ಖುಷಿಯನ್ನು ಹಂಚಿಕೊಂಡಿದ್ದಾರೆ.

    https://www.instagram.com/p/B9tXfJAnkFx/

    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅನುಷ್ಕಾ “15 ವರ್ಷದ ನನ್ನ ಸಿನಿ ಪಯಣವನ್ನು ಸಂಭ್ರಮ #TeamASF (ಅನುಷ್ಕಾ ಶೆಟ್ಟಿ ಅಭಿಮಾನಿ ಬಳಗ) ಜೊತೆ ಆಚರಣೆ, ನೀವು ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು ಎಂದು ಬರೆದುಕೊಂಡು, ಅಭಿಮಾನಿಗಳ ಜೊತೆ ತಾವು ಇರುವ ಫೋಟೋವನ್ನು ಅನುಷ್ಕಾ ಪೋಸ್ಟ್ ಮಾಡಿದ್ದಾರೆ.

    ಸದ್ಯ ಅನುಷ್ಕಾ ಶೆಟ್ಟಿ ‘ನಿಶಬ್ದಂ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈಗಾಗಲೆ ಟೀಸರ್ ಮತ್ತು ಪೋಸ್ಟರ್‍ಗಳ ಮೂಲಕ ಸಿನಿಮಾ ಬಹಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಸ್ವೀಟಿ ಹೊಸ ಚಿತ್ರದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾತುರದಿಂದ ಕಾದ ಕುಳಿತಿದ್ದಾರೆ.

  • ಯಾರಿಗೂ ತಮ್ಮ ಸಂಬಂಧವನ್ನು ಮುಚ್ಚಿಡಲು ಸಾಧ್ಯವಿಲ್ಲ: ಅನುಷ್ಕಾ ಶೆಟ್ಟಿ

    ಯಾರಿಗೂ ತಮ್ಮ ಸಂಬಂಧವನ್ನು ಮುಚ್ಚಿಡಲು ಸಾಧ್ಯವಿಲ್ಲ: ಅನುಷ್ಕಾ ಶೆಟ್ಟಿ

    ಹೈದರಾಬಾದ್: ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ಅವರು ಡಿವೋರ್ಸ್ ಆಗಿರುವ ನಿರ್ದೇಶನ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಇದೀಗ ಅನುಷ್ಕಾ ಈ ಗಾಸಿಪ್‍ಗಳಿಗೆ ಸ್ಪಷ್ಟನೆ ನೀಡಿದ್ದಾರೆ.

    ಅನುಷ್ಕಾ ತಮ್ಮ ಮುಂಬರುವ ‘ನಿಶ್ಯಬ್ದಂ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿರುವ ಅನುಷ್ಕಾ ಅವರನ್ನು ಮಾಧ್ಯಮದವರು ಮದುವೆ ಬಗ್ಗೆ ಪ್ರಶ್ನಿಸಿದರು. ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಅನುಷ್ಕಾ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.

    ಮದುವೆ ಬಗ್ಗೆ ಪ್ರತಿಕ್ರಿಯಿಸಿದ ಅನುಷ್ಕಾ, ಒಬ್ಬರು ಈ ರೀತಿಯ ಸುದ್ದಿಗಳನ್ನು ಹೇಗೆ ಬರೆಯುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಒಬ್ಬರ ಬಗ್ಗೆ ಸುಳ್ಳು ಸುದ್ದಿ ಬರೆಯುವುದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸುದ್ದಿ ಶುದ್ಧ ಸುಳ್ಳು. ಈ ಗಾಸಿಪ್‍ಗಳಿಗೆ ನಾನು ತಲೆ ಕಡೆಸಿಕೊಳ್ಳುವುದಿಲ್ಲ. ಆದರೆ ನನ್ನ ಮದುವೆ ಬಗ್ಗೆ ಬೇರೆಯವರಿಗೆ ಯಾಕೆ ಇಷ್ಟು ಚಿಂತೆ ಎಂಬುದು ಗೊತ್ತಾಗುತ್ತಿಲ್ಲ. ಯಾರಿಗೂ ತಮ್ಮ ಸಂಬಂಧವನ್ನು ಮುಚ್ಚಿಡಲು ಸಾಧ್ಯವಿಲ್ಲ. ಹೀಗಿರುವಾಗ ನಾನು ನನ್ನ ಮದುವೆ ಬಗ್ಗೆ ಹೇಗೆ ಸೀಕ್ರೆಟ್ ಮಾಡಲಿ. ಇದು ತುಂಬಾ ಸೂಕ್ಷ್ಮವಾದ ವಿಚಾರ ಎಂದರು.

    ಇದು ನನ್ನ ವೈಯಕ್ತಿಕ ಜೀವನ. ನನ್ನ ವೈಯಕ್ತಿಕ ಜೀವನದ ಬಗ್ಗೆ ಯಾರಾದರೂ ಮಾತನಾಡಿದರೆ ಅದು ನನಗೆ ಇಷ್ಟವಾಗುವುದಿಲ್ಲ. ಮದುವೆ ಎಂಬುದು ಒಂದು ಪವಿತ್ರವಾದ ಬಂಧ. ಬೇರೆಯವರಿಗೆ ಅದು ಹೇಗೆ ಮಹತ್ವವಾಗಿರುತ್ತೋ ಹಾಗೆಯೇ ನನಗೂ ಕೂಡ ಮಹತ್ವವಾಗಿರುತ್ತೆ. ನಾನು ಮದುವೆಯಾದಾಗ ಆಗ ಎಲ್ಲರಿಗೂ ತಿಳಿಯುತ್ತೆ. ನನಗೆ ಖುಷಿಯಾಗುವ ವಿಷಯವನ್ನು ಸಿಕ್ರೇಟ್ ಮಾಡಲು ಇಷ್ಟಪಡುವುದಿಲ್ಲ. ನಾನು ಯಾರನ್ನು ಮದುವೆಯಾಗುತ್ತಿದ್ದೇನೆ ಎಂದು ಎಲ್ಲರ ಮುಂದೆ ಹೇಳುವುದಿಲ್ಲ. ಆದರೆ ಈ ಬಗ್ಗೆ ಜನರು ನನ್ನನ್ನು ಪ್ರಶ್ನಿಸಬಹುದು. ನಾನು ಅವರಿಗೆ ಉತ್ತರ ನೀಡಲು ಯಾವಾಗಲೂ ತಯಾರಾಗಿರುತ್ತೇನೆ ಎಂದು ಅನುಷ್ಕಾ ತಿಳಿಸಿದರು.

    ಸದ್ಯಕ್ಕೆ ಅನುಷ್ಕಾ `ನಿಶ್ಯಬ್ದಂ’ ಸಿನಿಮಾದಲ್ಲಿ ಅಭಿನಯಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‍ನಲ್ಲಿ ತಯಾರಾಗುತ್ತಿದ್ದು, ಮಾಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. `ನಿಶ್ಯಬ್ದಂ’ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸುತ್ತಿರುವುದು ವಿಶೇಷವಾಗಿದೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ.

  • ಲೆಜೆಂಡರಿ ನಿರ್ದೇಶಕನ ಮಗನ ಜೊತೆ ಅನುಷ್ಕಾ ಮದ್ವೆ

    ಲೆಜೆಂಡರಿ ನಿರ್ದೇಶಕನ ಮಗನ ಜೊತೆ ಅನುಷ್ಕಾ ಮದ್ವೆ

    ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಮದುವೆ ಆಗುತ್ತಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕ್ರಿಕೆಟ್ ಆಟಗಾರನ ಜೊತೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಸುದ್ದಿ ಬಗ್ಗೆ ಸ್ವತಃ ಅನುಷ್ಕಾ ಸ್ಪಷ್ಟನೆ ನೀಡಿದ್ದರು. ಇದೀಗ ಲೆಜೆಂಡರಿ ನಿರ್ದೇಶಕರ ಮಗನ ಜೊತೆ ಅನುಷ್ಕಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

    ಹೌದು. ಲೆಜೆಂಡರಿ ನಿರ್ದೇಶಕ ರಾಘವೇಂದ್ರ ರಾವ್ ಅವರ ಪುತ್ರ ಪ್ರಕಾಶ್ ಕೋವೆಲಮುಡಿ ಜೊತೆ ಅನುಷ್ಕಾ ಮದುವೆಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನುಷ್ಕಾ ಮತ್ತು ಪ್ರಕಾಶ್ ಇಬ್ಬರು ಕೂಡ ಅನೇಕ ವರ್ಷಗಳಿಂದ ಪರಿಚಯವಿದ್ದು, ಪರಸ್ಪರ ಪ್ರೀತಿಸುತ್ತಿದ್ದರಂತೆ. ಆದರೆ ಪ್ರಕಾಶ್‍ಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಆಗಿದೆ.

    2014ರಲ್ಲಿ ಪ್ರಕಾಶ್, ಕನ್ನಿಕಾ ಧಿಲ್ಲಾನ್ ಜೊತೆ ವಿವಾಹವಾಗಿದ್ದರು. ಆದರೆ ಮದುವೆಯಾದ ಮೂರು ವರ್ಷಗಳ ನಂತರ ಅಂದರೆ 2017ರಲ್ಲಿ ಪತ್ನಿಯಿಂದ ದೂರ ಆಗಿ ಡಿವೋರ್ಸ್ ಪಡೆದುಕೊಂಡಿದ್ದರು. ಪ್ರಕಾಶ್ ವಿಚ್ಛೇದನ ಪಡೆದ ನಂತರ ಅನುಷ್ಕಾರನ್ನು ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಪ್ರಕಾಶ್ ಕೂಡ ತಂದೆಯಂತೆ ನಿರ್ದೇಶಕರಾಗಿದ್ದಾರೆ. ಸದ್ಯಕ್ಕೆ ಇವರಿಬ್ಬರು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ಅನುಷ್ಕಾ ಉತ್ತರ ಭಾರತ ಮೂಲದ ಕ್ರಿಕೆಟ್ ಆಟಗಾರನ ಜೊತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿತ್ತು.

    ಈ ಬಗ್ಗೆ ಮಾತನಾಡಿದ ಅನುಷ್ಕಾ, ನಾನು ಯಾವ ಕ್ರಿಕೆಟ್ ಆಟಗಾರನನ್ನು ಮದುವೆ ಆಗುತ್ತಿಲ್ಲ. ಯಾವುದಾದರು ವಿಷಯ ಬಗ್ಗೆ ಮಾತನಾಡುವ ಮೊದಲು ಅದರ ಬಗ್ಗೆ ಪರಿಶೀಲಿಸಿ. ನನ್ನ ಮದುವೆಯ ನಿರ್ಧಾರವನ್ನು ನಾನು ನನ್ನ ಪೋಷಕರಿಗೆ ಬಿಟ್ಟಿದ್ದೇನೆ. ನನ್ನ ತಂದೆ-ತಾಯಿ ಆಯ್ಕೆ ಮಾಡಿದ ಹುಡುಗನನ್ನು ನಾನು ಮದುವೆ ಆಗುತ್ತೇನೆ. ನಾನು ಶೀಘ್ರದಲ್ಲೇ ಮದುವೆ ಆಗುತ್ತಿದ್ದೇನೆ. ಆದರೆ ಯಾವುದೇ ಕ್ರಿಕೆಟ್ ಆಟಗಾರನನ್ನು ನಾನು ಮದುವೆ ಆಗುತ್ತಿಲ್ಲ ಎಂದಿದ್ದರು.

    ಸದ್ಯಕ್ಕೆ ಅನುಷ್ಕಾ ‘ನಿಶ್ಯಬ್ದಂ’ ಸಿನಿಮಾದಲ್ಲಿ ಅಭಿನಯಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‍ನಲ್ಲಿ ತಯಾರಾಗುತ್ತಿದ್ದು, ಮಾಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ನಿಶಬ್ದಂ’ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸುತ್ತಿರುವುದು ವಿಶೇಷವಾಗಿದೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ.

  • ಶೀಘ್ರದಲ್ಲೇ ಮದುವೆ ಆಗುತ್ತಿದ್ದೇನೆ: ಅನುಷ್ಕಾ ಶೆಟ್ಟಿ

    ಶೀಘ್ರದಲ್ಲೇ ಮದುವೆ ಆಗುತ್ತಿದ್ದೇನೆ: ಅನುಷ್ಕಾ ಶೆಟ್ಟಿ

    ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಕ್ರಿಕೆಟ್ ಆಟಗಾರನ ಜೊತೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಸುದ್ದಿ ಬಗ್ಗೆ ಸ್ವತಃ ಅನುಷ್ಕಾ ಸ್ಪಷ್ಟನೆ ನೀಡಿ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ.

    ಅನುಷ್ಕಾ ಉತ್ತರ ಭಾರತ ಮೂಲದ ಕ್ರಿಕೆಟ್ ಆಟಗಾರನ ಜೊತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿತ್ತು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಅನುಷ್ಕಾ ಇದೆಲ್ಲಾ ಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಅನುಷ್ಕಾ, ನಾನು ಯಾವ ಕ್ರಿಕೆಟ್ ಆಟಗಾರನನ್ನು ಮದುವೆ ಆಗುತ್ತಿಲ್ಲ. ಯಾವುದಾದರು ವಿಷಯ ಬಗ್ಗೆ ಮಾತನಾಡುವ ಮೊದಲು ಅದರ ಬಗ್ಗೆ ಪರಿಶೀಲಿಸಿ. ನನ್ನ ಮದುವೆಯ ನಿರ್ಧಾರವನ್ನು ನಾನು ನನ್ನ ಪೋಷಕರಿಗೆ ಬಿಟ್ಟಿದ್ದೇನೆ. ನನ್ನ ತಂದೆ-ತಾಯಿ ಆಯ್ಕೆ ಮಾಡಿದ ಹುಡುಗನನ್ನು ನಾನು ಮದುವೆ ಆಗುತ್ತೇನೆ. ನಾನು ಶೀಘ್ರದಲ್ಲೇ ಮದುವೆ ಆಗುತ್ತಿದ್ದೇನೆ. ಆದರೆ ಯಾವುದೇ ಕ್ರಿಕೆಟ್ ಆಟಗಾರನನ್ನು ನಾನು ಮದುವೆ ಆಗುತ್ತಿಲ್ಲ ಎಂದರು. ಇದನ್ನೂ ಓದಿ:  ಕ್ರಿಕೆಟ್ ಆಟಗಾರನ ಜೊತೆ ಅನುಷ್ಕಾ ಮ್ಯಾರೇಜ್

    ಸದ್ಯಕ್ಕೆ ಅನುಷ್ಕಾ ‘ನಿಶ್ಯಬ್ದಂ’ ಸಿನಿಮಾದಲ್ಲಿ ಅಭಿನಯಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‍ನಲ್ಲಿ ತಯಾರಾಗುತ್ತಿದ್ದು, ಮಾಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ನಿಶಬ್ದಂ’ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸುತ್ತಿರುವುದು ವಿಶೇಷವಾಗಿದೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ.

  • ಕ್ರಿಕೆಟ್ ಆಟಗಾರನ ಜೊತೆ ಅನುಷ್ಕಾ ಮ್ಯಾರೇಜ್

    ಕ್ರಿಕೆಟ್ ಆಟಗಾರನ ಜೊತೆ ಅನುಷ್ಕಾ ಮ್ಯಾರೇಜ್

    ಹೈದರಾಬಾದ್: ‘ಬಾಹುಬಲಿ’ ಸಿನಿಮಾ ರಿಲೀಸ್ ಆದಗಿನಿಂದ ನಟಿ ಅನುಷ್ಕಾ ಶೆಟ್ಟಿ ಮತ್ತು ನಟ ಪ್ರಭಾಸ್ ಇಬ್ಬರ ಮದುವೆ ಸುದ್ದಿಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇವೆ. ಇದೀಗ ಅನುಷ್ಕಾ ಶೆಟ್ಟಿ ಮದುವೆಯ ಬಗ್ಗೆ ಒಂದು ಸುರ್ಪ್ರೈಸ್ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

    ಹೌದು..ಇಷ್ಟು ದಿನ ಪ್ರಭಾಸ್ ಮತ್ತು ಅನುಷ್ಮಾ ತುಂಬಾ ಆತ್ಮೀಯರಾಗಿದ್ದಾರೆ. ಹೀಗಾಗಿ ಇವರಿಬ್ಬರು ಸದ್ಯದಲ್ಲೇ ಮದುವೆಯಾಗುತ್ತಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದರು. ಇದೀಗ ಅನುಷ್ಕಾ ಶೆಟ್ಟಿ ಅವರು ಕ್ರಿಕೆಟ್ ಆಟಗಾರನ ಜೊತೆ ವಿವಾಹವಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ.

    ಇದುವರೆಗೂ ಅನುಷ್ಕಾ ಶೆಟ್ಟಿ ಯಾವ ಕ್ರಿಕೆಟ್ ಆಟಗಾರನ ಜೊತೆಯೂ ಕಾಣಿಸಿಕೊಂಡಿಲ್ಲ. ಆದರೂ ಅನುಷ್ಕಾ ಶೆಟ್ಟಿ ಈಗ ಕ್ರಿಕೆಟ್ ಆಟಗಾರನ ಜೊತೆ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಅಚ್ಚರಿ ತಂದಿದೆ. ಉತ್ತರ ಭಾರತ ಮೂಲದ ಆಟಗಾರನ ಜೊತೆ ವಿವಾಹವಾಗಲು ಅನುಷ್ಕಾ ಶೆಟ್ಟಿ ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

    ಅನುಷ್ಕಾ ಶೆಟ್ಟಿ ಮದುವೆ ಕಿಕ್ರೆಟ್ ಆಟಗಾರನ ಜೊತೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಆ ಆಟಗಾರ ಯಾರು ಎಂಬುದರ ಬಗ್ಗೆ ಸಣ್ಣ ಸುಳಿವು ಕೂಡ ಸಿಕ್ಕಿಲ್ಲ. ಆದರೆ ಅಭಿಮಾನಿಗಳಂತೂ ಉತ್ತರ ಭಾರತದ ಆಟಗಾರ ಯಾರಿರಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಡುತ್ತಿದ್ದಾರೆ.

    ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ಪ್ರಭಾಸ್ ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಅನುಷ್ಕಾ ಬಗ್ಗೆ ಮಾತನಾಡಿ, “ನಾನು ಮತ್ತು ಅನುಷ್ಕಾ ಒಳ್ಳೆಯ ಗೆಳೆಯ-ಗೆಳತಿ ಅಷ್ಟೇ. ಆಕೆ ಜೊತೆ ನಾನು ಯಾವತ್ತೂ ಡೇಟಿಂಗ್ ಮಾಡಿಲ್ಲ. ಬಾಹುಬಲಿಯಲ್ಲಿ ಆಕೆ ನನಗೆ ತಾಯಿಯಾಗಿದ್ದಾಳೆ, ಪ್ರೇಯಸಿಯೂ ಆಗಿದ್ದಾಳೆ. ಈಗ ನೀವೇ ಹೇಳಿ ತಾಯಿಯನ್ನು ಯಾರಾದರೂ ಮದುವೆ ಆಗೋಕೆ ಸಾಧ್ಯನಾ?” ಎಂದು ಹೇಳಿದ್ದರು.

    ಸದ್ಯಕ್ಕೆ ಅನುಷ್ಕಾ ‘ನಿಶ್ಯಬ್ದಂ’ ಸಿನಿಮಾದಲ್ಲಿ ಅಭಿನಯಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‍ನಲ್ಲಿ ತಯಾರಾಗುತ್ತಿದ್ದು, ಮಾಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ನಿಶಬ್ದಂ’ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸುತ್ತಿರುವುದು ವಿಶೇಷವಾಗಿದೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ.