Tag: anushka shetty

  • ಸ್ವೀಟಿ ಕನ್ನಡ ಪ್ರೇಮಕ್ಕೆ ಕನ್ನಡಿಗರು ಫಿದಾ

    ಸ್ವೀಟಿ ಕನ್ನಡ ಪ್ರೇಮಕ್ಕೆ ಕನ್ನಡಿಗರು ಫಿದಾ

    ಬೆಂಗಳೂರು: ಟಾಲಿವುಡ್‍ನಲ್ಲಿ ಖ್ಯಾತಿ ನಟಿಯಾಗಿದ್ದರೂ ಅನುಷ್ಕಾ ಶೆಟ್ಟಿ ಅವರಿಗೆ ಕನ್ನಡದ ಮೇಲಿರುವ ಪ್ರೀತಿ ಕಿಂಚಿತ್ತು ಕಡಿಮೆಯಾಗಿಲ್ಲ. ಬೇರೆ ಭಾಷೆ ಸಿನಿಮಾಗಳಲ್ಲಿ ಚಾನ್ಸ್ ಸಿಕ್ಕ ಬಳಿಕ ಹಲವರು ಕನ್ನಡವನ್ನೇ ಮರೆತಂತೆ ಆಡುತ್ತಾರೆ. ಆದರೆ ಅನುಷ್ಕಾ ಶೆಟ್ಟಿ ಅವರು ಮಾತ್ರ ಅಭಿಮಾನಿಗಳಿಗೆ ಕನ್ನಡದಲ್ಲಿ ಸಂಕ್ರಾಂತಿ ಶುಭಾಶಯ ತಿಳಿಸಿ ಎಲ್ಲರ ಮನಗೆದ್ದಿದ್ದಾರೆ.

    ಮಂಗಳೂರು ಮೂಲದವರಾದ ನಟಿ ಅನುಷ್ಕಾ ಶೆಟ್ಟಿ ಅವರು ಹೆಚ್ಚು ನಟಿಸಿದ್ದು ಮಾತ್ರ ತೆಲುಗು, ತಮಿಳು ಸಿನಿಮಾದಲ್ಲಿ. ಆದರೆ ಸ್ವೀಟಿ ಕನ್ನಡ ಪ್ರೇಮ, ತಾಯ್ನಾಡಿಗೆ ಮಿಡಿಯುವ ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಮಕರ ಸಂಕ್ರಾಂತಿ ಹಬ್ಬ. ಹೌದು ಅನುಷ್ಕಾ ಶೆಟ್ಟಿ ಕನ್ನಡದಲ್ಲಿಯೇ ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ: ಒಂದು ಪೋಸ್ಟ್ ಮೂಲಕ ಕನ್ನಡಿಗರ ಮನಸ್ಸು ಗೆದ್ದ ಅನುಷ್ಕಾ

    https://www.facebook.com/AnushkaShetty/photos/a.10150245834470193/10163148769415193/?type=3&theater

    ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಅನುಷ್ಕಾ ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ಬರೆದು ಅಭಿಮಾನಿಗಳ ಮನಗೆದ್ದಿದ್ದಾರೆ. ತೆಲುಗು ತಮಿಳಿನ ಸ್ಟಾರ್ ನಟಿಯಾದರೂ ಕನ್ನಡದಲ್ಲಿಯೇ ಶುಭಕೋರಿದ ಅನುಷ್ಕಾ ಕನ್ನಡ ಪ್ರೀತಿಗೆ ಕನ್ನಡಿಗರ ದಿಲ್ ಖುಷ್ ಆಗಿದೆ.

    ಈ ಹಿಂದೆ ಅನುಷ್ಕಾ ಶೆಟ್ಟಿ ತಮ್ಮ ತಾಯಿಗೆ ಕನ್ನಡದಲ್ಲಿ ಹುಟ್ಟುಹಬ್ಬ ಶುಭಾಶಯ ತಿಳಿಸುವ ಮೂಲಕ ಕೋಟ್ಯಂತರ ಕನ್ನಡಿಗರ ಮನಸ್ಸು ಗೆದ್ದಿದ್ದರು. ತಮ್ಮ ತಾಯಿ ಪ್ರಫುಲ್ಲಾ ಅವರ ಹುಟ್ಟುಹಬ್ಬದ ದಿನದಂದು ತಾಯಿ ಹಾಗೂ ಇತರೆ ಕುಟುಂಬಸ್ಥರೊಂದಿಗೆ ಅನುಷ್ಕಾ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು.

    ಫೋಟೋ ಹಾಕಿ ಅದಕ್ಕೆ, “ಜನ್ಮ ದಿನದ ಹಾರ್ದಿಕ ಶುಭಾಶಯಗಳು ಅಮ್ಮಾ” ಎಂದು ಬರೆದಿದ್ದರು. ಅನುಷ್ಕಾ ಶೆಟ್ಟಿ ಅವರ ಕನ್ನಡ ಪ್ರೇಮ ನೋಡಿ ಅಭಿಮಾನಿಗಳು ಖುಷಿಯಾಗಿ ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು.

  • ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ?: ಅನುಷ್ಕಾ ಶೆಟ್ಟಿ ಆಕ್ರೋಶ

    ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ?: ಅನುಷ್ಕಾ ಶೆಟ್ಟಿ ಆಕ್ರೋಶ

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿತ್ತು. ಪಶುವೈದ್ಯೆಯ ಹತ್ಯೆಯ ವಿರುದ್ಧ ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ದಕ್ಷಿಣ ಭಾರತದ ಕಲಾವಿದರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ನಟಿ ಅನುಷ್ಕಾ ಶೆಟ್ಟಿ ತಮ್ಮ ಇನ್‍ಸ್ಟಾದಲ್ಲಿ, ಅಮಾಯಕಿ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿ ಕೊಲ್ಲಲಾಗಿದೆ. ಇದು ಇಡೀ ಮನುಕುಲವನ್ನೇ ಕದಲಿಸುವ ವಿಚಾರ. ಪೈಶಾಚಿಕ ಕೃತ್ಯವೆಸಗಿ ಪ್ರಿಯಾಂಕಾಳನ್ನು ಕೊಂದ ಪಾಪಿಗಳನ್ನು ಪ್ರಾಣಿಗಳಿಗೆ ಹೋಲಿಸಿದರೆ ಅವು ಕೂಡ ನಾಚಿಕೆ ಪಟ್ಟುಕೊಳ್ಳುತ್ತವೆ ಎಂದಿದ್ದಾರೆ. ಅಲ್ಲದೆ ಈ ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ ಎಂದು ಪ್ರಶ್ನಿಸಿದ್ದಾರೆ. ಶಿಕ್ಷೆ ಆಗೋವರೆಗೂ ಹೋರಾಟ ನಡೆಸೋಣ ಎಂದು ಪಶುವೈದ್ಯೆಯ ದಾರುಣ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

     

    View this post on Instagram

     

    #RIPPriyankaReddy ????

    A post shared by Anushka Shetty (@anushkashettyofficial) on

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೂಡ ತಮ್ಮ ಟ್ವಿಟ್ಟರಿನಲ್ಲಿ, ಸುರಕ್ಷತೆ ಎಲ್ಲಿದೆ? ಕೆಟ್ಟ ವಿಷಯಗಳು ಹಾಗೂ ಹಿಂಸಾಚಾರವನ್ನು ನಿರ್ಲಕ್ಷ್ಯಿಸುವುದರಿಂದ ಪರಿಹಾರ ಸಿಗುವುದಿಲ್ಲ. ನಿಮಗೆ ಅಸುರಕ್ಷತೆ ಎನಿಸಿದಾಗ ದಯವಿಟ್ಟು ಸಹಾಯಕ್ಕಾಗಿ ತಲುಪಿ. ಹಾಗೆಯೇ ನಿಮ್ಮ ಸಹಾಯದ ಅಗತ್ಯ ಇರುವವರ ಜೊತೆ ಇರಿ ಎಂದು ತೆಲಂಗಾಣ ರಾಜ್ಯದ ಪ್ರತಿ ಜಿಲ್ಲೆಯ ಪೊಲೀಸ್ ಠಾಣೆ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

    ನಟ ಅನಿರುದ್ಧ್ ಅವರು ಕೂಡ ತಮ್ಮ ಎಫ್‍ಬಿಯಲ್ಲಿ, ವಿಕೃತ ಮನಸ್ಸುಗಳು ಬದಲಾಗುವವರೆಗೂ ಇಂತಹ ಹೇಯ ಕೃತ್ಯ ನಿಲ್ಲದು. ಹೆಣ್ಣನ್ನು ನೋಡಿದಾಗ ಹೆತ್ತವಳು ನೆನಪಾಗಬೇಕೇ ಹೊರತು ಕೆಟ್ಟ ಆಲೋಚನೆಗಳಲ್ಲ. ಅಕ್ಕ- ತಂಗಿಯರ ಮನಸ್ಸು, ದೇಹ ಸುಟ್ಟು ಅದ್ಯಾವ ಸುಖವ ಪಡೆವರೋ. ಆ ದಿನ ರಾತ್ರಿ ಆ ಹೆಣ್ಣು ಮಗಳು ಇದ್ದ ಸ್ಥಿತಿಯ ಅರೆ ಕ್ಷಣ ಊಹಿಸಿಕೊಂಡರೂ ಮುಂದಿನ ಕ್ಷಣದ ಊಹೆ ಬೇಡವೆನಿಸುವುದು. ಹೆಣ್ಣೆಂದರೆ ಪೂಜಿಸುವ ಪವಿತ್ರವಾದ ದೇವರ ಸೃಷ್ಟಿಯೇ ಹೊರತು ತಿಂದು ಬಿಸಾಡುವ ಹಣ್ಣಲ್ಲ.

    ಆ ಹೆಣ್ಣು ಮಗಳ ಮತ್ತೆ ಬದುಕಿಸಲು ಯಾರಿಂದಲೂ ಸಾಧ್ಯವಿಲ್ಲವೆಂಬುದು ತಿಳಿದಿದೆ. ಆದರೆ ಕನಿಷ್ಟ ಪಕ್ಷ ಕಠಿಣ ಶಿಕ್ಷೆಯಿಂದಾದರೂ ಬೇರೆ ಕ್ರೂರ ಮನಸ್ಸುಗಳ ಒಳಗೆ ಭಯ ಮೂಡಿ ಮುಂದೆಂದೂ ಇಂತಹ ಹೇಯ ಕೃತ್ಯ ನಡೆಯದಿರಲಿ. ಹೆತ್ತವಳು ಹೆಣ್ಣು. ಜೊತೆಯಲ್ಲಿ ಹುಟ್ಟುವವಳು ಹೆಣ್ಣು. ಜೊತೆಯಾಗುವವಳು ಹೆಣ್ಣು. ನಮ್ಮ ಪ್ರತಿರೂಪವ ಹಡೆವವಳು ಹೆಣ್ಣು. ರಸ್ತೆಯಲ್ಲಿ ಒಬ್ಬ ಹೆಣ್ಣನ್ನು ನೋಡಿದಾಗ ಪ್ರತಿಯೊಬ್ಬ ಗಂಡು ಅಣ್ಣನಾಗಿ ನಿಂತರೆ ಯಾವ ಹೆಣ್ಣಿಗೂ ಇಂತಹ ಸ್ಥಿತಿ ಬಾರದು. ಕೆಟ್ಟ ಮನಸ್ಸುಗಳು ಬದಲಾಗಲಿ. ಕೆಟ್ಟ ಆಲೋಚನೆಗಳು ಬದಲಾಗಲಿ. ಕಷ್ಟವಾದರೂ, ಆ ತಂದೆ ತಾಯಿಗೆ ನೋವ ತಡೆಯುವ ಶಕ್ತಿ ನೀಡಿ ಬಿಡಲಿ ಭಗವಂತ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಪಶುವೈದ್ಯೆಯ ಹತ್ಯೆಗೆ ಭಾರತೀಯ ಚಿತ್ರರಂಗದ ಕಲಾವಿದರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

  • ನಟಿ ಅನುಷ್ಕಾ ಶೆಟ್ಟಿ ಹುಟ್ಟುಹಬ್ಬಕ್ಕೆ ಸಿಕ್ತು ದೊಡ್ಡ ಗಿಫ್ಟ್

    ನಟಿ ಅನುಷ್ಕಾ ಶೆಟ್ಟಿ ಹುಟ್ಟುಹಬ್ಬಕ್ಕೆ ಸಿಕ್ತು ದೊಡ್ಡ ಗಿಫ್ಟ್

    ಹೈದರಾಬಾದ್: ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಇಂದು 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬವಿರುವ ಹಿನ್ನೆಲೆಯಲ್ಲಿ ಅನುಷ್ಕಾ ಅವರಿಗೆ ದೊಡ್ಡ ಗಿಫ್ಟ್‌ವೊಂದು ದೊರೆತಿದೆ.

    ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸಿದ ‘ನಿಶಬ್ದಂ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಅನುಷ್ಕಾ ಮಾತು ಬಾರದ ಯುವತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅನುಷ್ಕಾ ಕೇವಲ ಮೂಕಾಭಿನಯದಲ್ಲಿ ನಟಿಸಿದ್ದಾರೆ.

    ನಿಶಬ್ದಂ ಹಾರರ್ ಚಿತ್ರವಾಗಿದ್ದು, ಟೀಸರ್‌ನಲ್ಲಿ ಅನುಷ್ಕಾಗೆ ಜೋಡಿಯಾಗಿ ನಟ ಮಾಧವನ್ ಕಾಣಿಸಿಕೊಂಡಿದ್ದಾರೆ. ಒಂದು ನಿಮಿಷ 14 ಸೆಕೆಂಡ್ ಇರುವ ಈ ವಿಡಿಯೋ ನೋಡಿ ಅನುಷ್ಕಾ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಟೀಸರಿನಲ್ಲಿ ಅನುಷ್ಕಾ ತುಂಬಾನೇ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

    ಈ ಹಿಂದೆ ಅನುಷ್ಕಾ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದರು. ಚೇರ್ ಮೇಲೆ ಕುಳಿತುಕೊಂಡು ಪೇಂಟಿಂಗ್ ಮಾಡುತ್ತಿರುವ ಪೋಸ್ಟರನ್ನು ಅನುಷ್ಕಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ಈ ಪೋಸ್ಟರ್ ಐದು ಭಾಷೆಯಲ್ಲಿ ರಿಲೀಸ್ ಆಗಿದೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.

    ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ಮಾಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. `ನಿಶಬ್ದಂ’ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸುತ್ತಿರುವುದು ವಿಶೇಷವಾಗಿದೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ.

  • ಅನುಷ್ಕಾ ತೂಕದ ಬಗ್ಗೆ ವರದಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು

    ಅನುಷ್ಕಾ ತೂಕದ ಬಗ್ಗೆ ವರದಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು

    ಹೈದರಾಬಾದ್: ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ದಪ್ಪ ಆಗಿದ್ದಾರೆ ಎಂದು ವರದಿ ಮಾಡಿದ ತೆಲುಗು ವೆಬ್‍ಸೈಟ್ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಶೆಟ್ಟಿ ಅವರು ತಮ್ಮ ಮುಂಬರುವ ‘ನಿಶಾಬ್ದಂ’ ಚಿತ್ರದ ಶೂಟಿಂಗ್ ಮುಗಿಸಿ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು ಅನುಷ್ಕಾ ಅವರ ಫೋಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

    https://twitter.com/Mirchi9/status/1168832293877637120?ref_src=twsrc%5Etfw%7Ctwcamp%5Etweetembed%7Ctwterm%5E1169492168932655104&ref_url=https%3A%2F%2Fwww.indiatoday.in%2Fmovies%2Fregional-cinema%2Fstory%2Ftelugu-website-fat-shames-baahubali-star-anushka-shetty-gets-roasted-online-1595848-2019-09-05

    ಈ ಫೋಟೋ ನೋಡಿ ತೆಲುಗು ವೆಬ್‍ಸೈಟ್ ಅನುಷ್ಕಾ ತೂಕದ ಬಗ್ಗೆ ವರದಿ ಮಾಡಿದೆ. ಅನುಷ್ಕಾ ಅವರು ‘ತುಂಬಾ ದಪ್ಪ’ ಆಗಿದ್ದಾರೆ ಹಾಗೂ ಅವರು ‘ಡಬಲ್ ಚಿನ್’ ಹೊಂದಿದ್ದಾರೆ ಎನ್ನುವ ಮಟ್ಟಕ್ಕೆ ವರದಿ ಮಾಡಿತ್ತು. ಈ ವರದಿ ನೋಡಿ ಅನುಷ್ಕಾ ಅಭಿಮಾನಿಗಳು ಗರಂ ಆಗಿದ್ದಾರೆ.

    ಅನುಷ್ಕಾ ಬಗ್ಗೆ ವರದಿ ನೋಡಿ ಕೆಲವು ಅಭಿಮಾನಿಗಳು, “ಒಬ್ಬರು ದೈಹಿಕವಾಗಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬುದರ ಆಧಾರದ ಮೇಲೆ ನೀವು ಅವರನ್ನು ಹೇಗೆ ವಿವರಿಸಬಹುದು? ನೀವು ಅವರ ಕಾಲ ಬೆರಳುಗಳಿಗೆ ಸಮವಲ್ಲ. ನೀವು ಮಾತನಾಡುವಾಗ ನಿಮ್ಮ ಬಾಯಿ ಹಾಗೂ ಟೈಪ್ ಮಾಡುವಾಗ ನಿಮ್ಮ ಕೈ ಸರಿಯಾಗಿ ಇರಲಿ. ನೀವು ಭಾರತದ ಮಹಿಳಾ ಸೂಪರ್ ಸ್ಟಾರ್ ರನ್ನು ನಿಂದಿಸಿದ್ದೀರಾ. ನೀವು ಈ ರೀತಿ ನಡೆದುಕೊಳ್ಳಬಾರದು” ಎಂದು ಕಮೆಂಟ್ ಮಾಡಿದ್ದಾರೆ.

    2018ರಲ್ಲಿ ಬಿಡುಗಡೆಯಾದ ‘ಭಾಗಮತಿ’ ಚಿತ್ರದ ನಂತರ ಅನುಷ್ಕಾ ಯಾವ ಸಿನಿಮಾದಲ್ಲೂ ನಟಿಸಿಲ್ಲ. ಸದ್ಯ ಅವರು ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿರುವ ‘ಸೈರಾ ನರಸಿಂಹರೆಡ್ಡಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ.

  • ಅನುಷ್ಕಾ ಸರಿಯಾದ ಸಮಯದಲ್ಲಿ ಕರೆ ಸ್ವೀಕರಿಸುವುದಿಲ್ಲ: ಪ್ರಭಾಸ್

    ಅನುಷ್ಕಾ ಸರಿಯಾದ ಸಮಯದಲ್ಲಿ ಕರೆ ಸ್ವೀಕರಿಸುವುದಿಲ್ಲ: ಪ್ರಭಾಸ್

    ಮುಂಬೈ: ಟಾಲಿವುಡ್ ನಟ ಪ್ರಭಾಸ್ ಅವರು ಈಗ ತಮ್ಮ ಮುಂಬರುವ ‘ಸಾಹೋ’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಪ್ರಭಾಸ್ ಅವರು ಅನುಷ್ಕಾ ಶೆಟ್ಟಿ ಬಗ್ಗೆ ಮಾತನಾಡಿದ್ದು, ಅವರು ಸರಿಯಾದ ಸಮಯದಲ್ಲಿ ಕರೆ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

    ಇತ್ತೀಚೆಗೆ ಪ್ರಭಾಸ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂದರ್ಶಕ ಪ್ರಭಾಸ್ ಅವರಿಗೆ ನಟಿಯರಾದ ಕಾಜಲ್ ಅಗರ್‌ವಾಲ್ ಹಾಗೂ ಅನುಷ್ಕಾ ಶೆಟ್ಟಿ ಅವರ ಪಾಸಿಟಿವ್ ಹಾಗೂ ನೆಗೆಟಿವ್ ಪಾಯಿಂಟ್ ಬಗ್ಗೆ ಪ್ರಶ್ನಿಸಿದ್ದರು.

    ಈ ವೇಳೆ ಪ್ರಭಾಸ್, ಕಾಜಲ್ ತುಂಬಾ ಸುಂದರವಾಗಿದ್ದಾರೆ. ಅಲ್ಲದೆ ಅವರಿಗೆ ಸಾಕಷ್ಟು ಎನರ್ಜಿ ಕೂಡ ಇದೆ. ಅವರ ನೆಗೆಟಿವ್ ಪಾಯಿಂಟ್ ಏನೆಂದರೆ, ನಾನು ಮೊದಲು ಕಾಜಲ್ ಡ್ರೆಸ್ಸಿಂಗ್ ಸೆನ್ಸ್ ಅಭಿಮಾನಿ ಆಗಿರಲಿಲ್ಲ. ಮೊದಲು ಕಾಜಲ್ ಡ್ರೆಸ್ಸಿಂಗ್ ಸೆನ್ಸ್ ಚೆನ್ನಾಗಿ ಇರಲಿಲ್ಲ. ಆದರೆ ಈಗ ಅವರ ಡ್ರೆಸ್ಸಿಂಗ್ ಸೆನ್ಸ್ ಚೆನ್ನಾಗಿ ಇದೆ ಎಂದು ಹೇಳಿದ್ದಾರೆ.

    ಬಳಿಕ ಮಾತನಾಡಿದ ಪ್ರಭಾಸ್, ಅನುಷ್ಕಾ ಪಾಸಿಟಿವ್ ಪಾಯಿಂಟ್ ಎಂದರೆ ಅದು ಅವರ ಎತ್ತರ ಹಾಗೂ ಸೌಂದರ್ಯ. ಅನುಷ್ಕಾ ಸರಿಯಾದ ಸಮಯದಲ್ಲಿ ಕರೆ ಸ್ವೀಕರಿಸುವುದಿಲ್ಲ ಇದು ಅವರು ನೆಗೆಟಿವ್ ಪಾಯಿಂಟ್ ಎಂದು ತಿಳಿಸಿದ್ದಾರೆ.

    ನನಗೆ ತೆರೆಯ ಮೇಲೆ ಕಿಸ್ಸಿಂಗ್ ಸೀನ್ ಮಾಡಲು ಮುಜುಗರ ಆಗುತ್ತದೆ ಎಂದು ಪ್ರಭಾಸ್ ಹೇಳಿದ್ದಾರೆ. ಅಲ್ಲದೆ ನಾನು ಸಿಂಗಲ್ ಆಗಿಯೇ ಇರುತ್ತೇನೆ. ಏಕೆಂದರೆ ನಾನು ಮದುವೆಯಾಗಿ ನನ್ನ ಮಹಿಳಾ ಅಭಿಮಾನಿಗಳ ಹೃದಯ ಒಡೆಯಲು ಇಷ್ಟಪಡುವುದಿಲ್ಲ ಎಂದು ಪ್ರಭಾಸ್ ಹೇಳಿದ್ದಾರೆ.

    ಸಾಹೋ ಚಿತ್ರವನ್ನು ನಿರ್ದೇಶಕ ಸುಜೀತ್ ನಿರ್ದೇಶನ ಮಾಡಿದ್ದಾರೆ. ವಂಶಿ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಚಿತ್ರದಲ್ಲಿ ನೀಲ್ ನಿತಿನ್ ಮುಖೇಶ್, ಮಂದಿರಾ ಬೇಡಿ ಹಾಗೂ ಜಾಕಿ ಶ್ರಾಫ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸಾಹೋ ಚಿತ್ರ ಅಗಸ್ಟ್ 30ರಂದು ಬಿಡುಗಡೆ ಆಗುತ್ತಿದೆ.

  • ಅನುಷ್ಕಾ ಬಗ್ಗೆ ಮೌನ ಮುರಿದ ಪ್ರಭಾಸ್

    ಅನುಷ್ಕಾ ಬಗ್ಗೆ ಮೌನ ಮುರಿದ ಪ್ರಭಾಸ್

    ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅವರು ನಟಿ ಅನುಷ್ಕಾ ಶೆಟ್ಟಿ ಜೊತೆಗಿನ ಸ್ನೇಹದ ಬಗ್ಗೆ ಮೌನ ಮುರಿದಿದ್ದಾರೆ.

    ಪ್ರಭಾಸ್ ಅವರು ತಮ್ಮ ಮುಂಬರುವ ‘ಸಾಹೋ’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಆಗ ನಿರೂಪಕರು ಅನುಷ್ಕಾ ಶೆಟ್ಟಿ ಜೊತೆಗಿನ ಸಂಬಂಧದ ಬಗ್ಗೆ ಪ್ರಭಾಸ್ ಅವರನ್ನು ಪ್ರಶ್ನಿಸಿದ್ದರು.

    ನಿರೂಪಕನ ಪ್ರಶ್ನೆಗೆ ಪ್ರಭಾಸ್ ಅವರು, “ನಾನು ಹಾಗೂ ಅನುಷ್ಕಾ ಒಳ್ಳೆಯ ಸ್ನೇಹಿತರು ಅಷ್ಟೇ. ನಮ್ಮಿಬ್ಬರ ನಡುವೆ ಬೇರೆ ಏನಾದರೂ ಇದ್ದಿದ್ದರೆ ಕಳೆದ ಎರಡು ವರ್ಷಗಳಲ್ಲಿ ಯಾರಾದರೂ ನಮ್ಮನ್ನು ಒಟ್ಟಿಗೆ ಗುರುತಿಸುತ್ತಿರಲಿಲ್ಲವೇ?” ಎಂದು ಮರು ಪ್ರಶ್ನೆ ಹಾಕಿದ್ದರು.

    ಈ ಹಿಂದೆ ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ `ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಪ್ರಭಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಭಾಸ್ ಜೊತೆ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಹಾಗೂ ನಟ ರಾಣಾ ದಗ್ಗುಬಾಟಿ ಕೂಡ ಪಾಲ್ಗೊಂಡಿದ್ದರು.

    ಈ ಕಾರ್ಯಕ್ರಮದಲ್ಲಿ ನಿರೂಪಕ ಕರಣ್ ಜೋಹರ್ ಅನುಷ್ಕಾ ಬಗ್ಗೆ ಮಾತನಾಡಿದ್ದರು. ಈ ವೇಳೆ ಪ್ರಭಾಸ್, “ನಾನು ಮತ್ತು ಅನುಷ್ಕಾ ಒಳ್ಳೆಯ ಗೆಳೆಯ-ಗೆಳತಿ ಅಷ್ಟೇ. ಆಕೆ ಜೊತೆ ನಾನು ಯಾವತ್ತೂ ಡೇಟಿಂಗ್ ಮಾಡಿಲ್ಲ. ಬಾಹುಬಲಿಯಲ್ಲಿ ಆಕೆ ನನಗೆ ತಾಯಿಯಾಗಿದ್ದಾಳೆ, ಪ್ರೇಯಸಿಯೂ ಆಗಿದ್ದಾಳೆ. ಈಗ ನೀವೇ ಹೇಳಿ ತಾಯಿಯನ್ನು ಯಾರಾದರೂ ಮದುವೆ ಆಗೋಕೆ ಸಾಧ್ಯನಾ?” ಎಂದು ಹೇಳಿದ್ದರು.

    ಪ್ರಭಾಸ್ ನಟನೆಯ ಸಾಹೋ ಆ್ಯಕ್ಷನ್ ಚಿತ್ರವಾಗಿದ್ದು, ನಿರ್ದೇಶಕ ಸುಜೀತ್ ನಿರ್ದೇಶನ ಮಾಡಿದ್ದಾರೆ. ವಂಶಿ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಚಿತ್ರದಲ್ಲಿ ನೀಲ್ ನಿತಿನ್ ಮುಖೇಶ್, ಮಂದಿರಾ ಬೇಡಿ, ಅರುಣ್ ವಿಜಯ್ ಹಾಗೂ ಜಾಕಿ ಶ್ರಾಫ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ತಿಂಗಳು ಅಗಸ್ಟ್ 30ರಂದು ಸಾಹೋ ಚಿತ್ರ ಬಿಡುಗಡೆ ಆಗಲಿದೆ.

  • ಒಂದು ಪೋಸ್ಟ್ ಮೂಲಕ ಕನ್ನಡಿಗರ ಮನಸ್ಸು ಗೆದ್ದ ಅನುಷ್ಕಾ

    ಒಂದು ಪೋಸ್ಟ್ ಮೂಲಕ ಕನ್ನಡಿಗರ ಮನಸ್ಸು ಗೆದ್ದ ಅನುಷ್ಕಾ

    ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ತಮ್ಮ ತಾಯಿಗೆ ಕನ್ನಡದಲ್ಲಿ ಹುಟ್ಟುಹಬ್ಬ ಶುಭಾಶಯ ತಿಳಿಸುವ ಮೂಲಕ ಕೋಟ್ಯಂತರ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.

    ಅನುಷ್ಕಾ ಶೆಟ್ಟಿ ಅವರ ತಾಯಿ ಪ್ರಫುಲ್ಲಾ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ನಟಿ ಅನುಷ್ಕಾ ಶೆಟ್ಟಿ ಅವರು ತಮ್ಮ ತಾಯಿ ಸೇರಿದಂತೆ ಹಾಗೂ ಬೇರೆಯವರ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ಫೋಟೋ ಹಾಕಿ ಅದಕ್ಕೆ, “ಜನ್ಮ ದಿನದ ಹಾರ್ದಿಕ ಶುಭಾಶಯಗಳು ಅಮ್ಮಾ” ಎಂದು ಬರೆದಿದ್ದಾರೆ. ಅನುಷ್ಕಾ ಶೆಟ್ಟಿ ಅವರ ಕನ್ನಡ ಪ್ರೇಮ ನೋಡಿ ಅಭಿಮಾನಿಗಳು ಖುಷಿಯಾಗಿದ್ದು, ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕೆಲವರು ಈ ಪೋಸ್ಟ್ ಗೆ “ಅನುಷ್ಕಾ ಶೆಟ್ಟಿಯವರೆ ನಿಮ್ಮ ಕನ್ನಡ ಪ್ರೇಮ ಕಂಡು ಸಂತೋಷವಾಯಿತು. ಪರಭಾಷೆಯಲ್ಲಿ ಅತ್ಯಂತ ಬೇಡಿಕೆ ನಟಿ ನೀವು. ನಾನು ಅಂದುಕೊಂಡಿದ್ದೆ ನೀವು ಕನ್ನಡ ಮರಿಯುತ್ತಿದ್ದಿರಾ ಎಂದು ಆದರೆ ಅದನ್ನು ನೀವು ಸುಳ್ಳಾಗಿಸಿದಿರಿ. ನಿಮ್ಮ ಕನ್ನಡ ಪ್ರೇಮ ಕಂಡು ನಿಮ್ಮ ಬಗ್ಗೆ ನನಗೆ ಗೌರವ ಉಂಟಾಗಿದೆ. ನಿಮಗೆ ನನ್ನ ಕಡೆಯಿಂದ ಧನ್ಯವಾದಗಳು. ಹಾಗೆಯೇ ನನ್ನ ಕಡೆಯಿಂದ ನಿಮ್ಮ ಅಮ್ಮನಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂದು ಕಮೆಂಟ್ ಮಾಡಿದ್ದಾರೆ.

    ಮತ್ತೆ ಕೆಲವರು, “ಈ ಒಂದು ಪೋಸ್ಟ್ ನಿಂದ ನೀವು ಕೋಟ್ಯಂತರ ಕನ್ನಡಿಗರ ಅಭಿಮಾನ ಗೆದ್ದುಬಿಟ್ಟಿರಿ” ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು “ತನ್ನ ತಾಯಿಗೆ ತನ್ನ ಮಾತೃ ಭಾಷೆ ಮೂಲಕ ಶುಭಾಶಯ ಕೋರಿದ ಕನ್ನಡತಿ ಅನುಷ್ಕಾ ಶೆಟ್ಟಿ ಅವರಿಗೆ ಧನ್ಯವಾದಗಳು. ನೀವು ಮನಸ್ಸು ಮಾಡಿದರೆ ನಿಮಗೆ ಅಪಾರ ಯಶಸ್ಸು, ಜನಪ್ರಿಯತೆ ತಂದು ಕೊಟ್ಟ ತೆಲುಗು ಭಾಷೆಯಲ್ಲಿ ಶುಭಾಶಯ ಹೇಳಬಹುದಿತ್ತು. ಆದರೆ ನೀವು ನಿಮ್ಮ ತಾಯ್ನಾಡು ಹಾಗೂ ತಾಯ್ನುಡಿಯನ್ನು ಮರೆಯಲಿಲ್ಲ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಅಭಿಮಾನಿಯೊಬ್ಬರು ಅನುಷ್ಕಾರಿಗೆ ಕನ್ನಡ ಸಿನಿಮಾದಲ್ಲಿ ನೀವು ನಟಿಸುತ್ತೀರಾ ಎಂದು ಪ್ರಶ್ನಿಸಿದ್ದರು. ಈ ವೇಳೆ ಅನುಷ್ಕಾ ಶೆಟ್ಟಿ ಸ್ಕ್ರಿಪ್ಟ್ ಚೆನ್ನಾಗಿದ್ದರೆ ಖಂಡಿತ ನಟಿಸುತ್ತೇನೆ ಎಂದು ಕನ್ನಡದಲ್ಲಿ ಉತ್ತರಿಸಿದ್ದರು. ಮೂಲತಃ ಕನ್ನಡ ಕರಾವಳಿಯ ಹುಡುಗಿಯಾಗಿರುವ ಅನುಷ್ಕಾ ಬೆಂಗಳೂರು ಮಹಾನಗರದಲ್ಲಿ ಹುಟ್ಟಿ ಬೆಳೆದಿದ್ದಾರೆ.

  • ಡಾರ್ಲಿಂಗ್ ಸರ್ಪ್ರೈಸ್‌ಗೆ ಅನುಷ್ಕಾ ಶೆಟ್ಟಿ ಎಕ್ಸೈಟ್

    ಡಾರ್ಲಿಂಗ್ ಸರ್ಪ್ರೈಸ್‌ಗೆ ಅನುಷ್ಕಾ ಶೆಟ್ಟಿ ಎಕ್ಸೈಟ್

    ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್ ಇಂದು ‘ಸಾಹೋ’ ಚಿತ್ರದ ಅಧಿಕೃತ ಪೋಸ್ಟರ್ ರಿಲೀಸ್ ಮಾಡಿ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್‌ ನೀಡಿದ್ದಾರೆ. ಪ್ರಭಾಸ್ ಅವರ ಸರ್ಪ್ರೈಸ್‌ಗೆ ನಟಿ ಅನುಷ್ಕಾ ಶೆಟ್ಟಿ ಎಕ್ಸೈಟ್ ಆಗಿ ಚಿತ್ರಕ್ಕೆ ತಮ್ಮ ಗೆಳೆಯ ಪ್ರಭಾಸ್‍ಗೆ ಶುಭ ಕೋರಿದ್ದಾರೆ.

    ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ `ಸಾಹೋ’ ಚಿತ್ರದ ಅಧಿಕೃತ ಪೋಸ್ಟರ್ ರಿಲೀಸ್ ಆಗಿದೆ. ಪ್ರಭಾಸ್ ಈ ಚಿತ್ರದ ಪೋಸ್ಟರ್ ನನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್‌ ನೀಡಿದ್ದಾರೆ. ನಟಿ ಅನುಷ್ಕಾ ಶರ್ಮಾ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಾಹೋ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ.

    ಅನುಷ್ಕಾ ಪೋಸ್ಟರ್ ಹಾಕಿ ಅದಕ್ಕೆ, ಅವರು ಮಾಡುವ ಪ್ರತಿಯೊಂದು ಕೆಲಸವೂ ನನಗೆ ಆಶ್ಚರ್ಯಗೊಳಿಸುವಂತಿರುತ್ತೆ. ಅವರು ಮಾಡುವ ಕೆಲಸಗಳು ಯಾವಾಗಲೂ ಒಂದು ಹೆಜ್ಜೆ ಮೇಲಿರುತ್ತದೆ. ಅಗಸ್ಟ್ 15ಕ್ಕೆ ಸಾಹೋ ಚಿತ್ರಕ್ಕಾಗಿ ಕಾಯುತ್ತಿದ್ದೇನೆ. ಪ್ರಭಾಸ್, ಯುವಿ ಕ್ರಿಯೆಶನ್ ಹಾಗೂ ಸುಜೀತ್‍ಗೆ ನನ್ನ ಕಡೆಯಿಂದ ಶುಭಾಶಯಗಳು. ಸಾಹೋ ಚಿತ್ರತಂಡದ ಪ್ರತಿಯೊಬ್ಬ ವ್ಯಕ್ತಿ ಹಾಗೂ ತಂತ್ರಜ್ಞರಿಗೂ ಶುಭಾಶಯಗಳು. ಎಕ್ಸೈಟೆಡ್ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಇಂದು ಪ್ರಭಾಸ್ ಚಿತ್ರದ ಪೋಸ್ಟರ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, “ಎಲ್ಲಾ ಡಾರ್ಲಿಂಗ್ಸ್ ಗೆ ಇಲ್ಲಿದೆ ಸರ್ಪ್ರೈಸ್‌. ನನ್ನ ಮುಂದಿನ ಸಾಹೋ ಚಿತ್ರದ ಅಧಿಕೃತ ಪೋಸ್ಟರ್. ಅಗಸ್ಟ್ 15ರಂದು ನಿಮ್ಮನ್ನು ಚಿತ್ರದ ಮೂಲಕ ಭೇಟಿ ಮಾಡುತ್ತೇನೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಸಾಹೋ ಆ್ಯಕ್ಷನ್ ಚಿತ್ರವಾಗಿದ್ದು, ನಿರ್ದೇಶಕ ಸುಜೀತ್ ನಿರ್ದೇಶನ ಮಾಡುತ್ತಿದ್ದಾರೆ. ವಂಶಿ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಚಿತ್ರದಲ್ಲಿ ನೀಲ್ ನಿತಿನ್ ಮುಖೇಶ್, ಮಂದಿರಾ ಬೇಡಿ, ಅರುಣ್ ವಿಜಯ್ ಹಾಗೂ ಜಾಕಿ ಶ್ರಾಫ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೈದರಾಬಾದ್, ಮುಂಬೈ, ಅಬುಧಾಬಿ, ದುಬೈ, ರೋಮಾನಿಯಾ ಹಾಗೂ ಯೂರೋಪ್‍ನ ಕೆಲವು ಭಾಗಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇದೇ ವರ್ಷ ಅಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಸಾಹೋ ಚಿತ್ರ ಬಿಡುಗಡೆ ಆಗಲಿದೆ.

  • ಬಿಗ್ ಬಾಸ್ ಹೊಸ ಸೀಸನ್‍ಗೆ ಅನುಷ್ಕಾ ಶೆಟ್ಟಿ ನಿರೂಪಣೆ!

    ಬಿಗ್ ಬಾಸ್ ಹೊಸ ಸೀಸನ್‍ಗೆ ಅನುಷ್ಕಾ ಶೆಟ್ಟಿ ನಿರೂಪಣೆ!

    ಹೈದರಾಬಾದ್: ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

    ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿ ಎಂಟ್ರಿ?

    ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

    ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

    ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

  • ಅಣ್ಣಾವ್ರ ಫೋಟೋ ಹಾಕಿ ನೆನಪಿಸಿಕೊಂಡ ಸ್ವೀಟಿ

    ಅಣ್ಣಾವ್ರ ಫೋಟೋ ಹಾಕಿ ನೆನಪಿಸಿಕೊಂಡ ಸ್ವೀಟಿ

    ಬೆಂಗಳೂರು: ಕನ್ನಡದ ಮೇರು ನಟ ಡಾ ರಾಜ್ ಕುಮಾರ್ ಅವರ 90ನೇ ಹುಟ್ಟುಹಬ್ಬವನ್ನು ನಾಡಿನಾದ್ಯಂತ ಆಚರಿಸಲಾಗಿದೆ. ಜೊತೆಗೆ ಕನ್ನಡ ಸ್ಟಾರ್ ನಟ-ನಟಿಯರು ರಾಜಣ್ಣ ಅವರನ್ನು ನೆನಪಿಸಿಕೊಂಡು ಅವರಿಗೆ ಶುಭಕೋರಿದ್ದರು. ಆದರೆ ಇದೀಗ ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಅವರು ಕೂಡ ಅವರನ್ನು ನೆನಪಿಸಿಕೊಂಡಿದ್ದಾರೆ.

    ಡಾ.ರಾಜ್ ಕುಮಾರ್ 90ನೇ ಹುಟ್ಟುಹಬ್ಬಕ್ಕೆ ಅನುಷ್ಕಾ ಅವರು ಸಹ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ. ನಟಿ ಅನುಷ್ಕಾ ತನ್ನ ಫೇಸ್‍ಬುಕ್ ಪೇಜಿನಲ್ಲಿ “90ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಲೆಜೆಂಡ್ ಡಾ.ರಾಜ್ ಕುಮಾರ್ ಸರ್ ಅವರ ನೆನಪು” ಎಂದು ಬರೆದುಕೊಂಡಿದ್ದಾರೆ. ಜೊತೆ ರಾಜ್‍ಕುಮಾರ್ ಅಭಿನಯದ ‘ಕಸ್ತೂರಿ ನಿವಾಸ’ ಸಿನಿಮಾದಲ್ಲಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

    ಅನುಷ್ಕಾ ಅವರು ರಾಜ್‍ಕುಮಾರ್ ಅವರಿಗೆ ವಿಶ್ ಮಾಡಿ ಪೋಸ್ಟ್ ಮಾಡಿದ ತಕ್ಷಣ ಅಭಿಮಾನಿಗಳು ರಾಜ್‍ಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ರಾಜಣ್ಣ ಮೇಲಿನ ಅಭಿಮಾನ ಕಂಡು ಅಣ್ಣಾವ್ರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

    ನಟಿ ಅನುಷ್ಕಾ ಶೆಟ್ಟಿವರು ಮೂಲತಃ ಕರ್ನಾಟಕದ ಕರಾವಳಿ ಮೂಲದವಾಗಿದ್ದಾರೆ. ಸದ್ಯಕ್ಕೆ ಅನುಷ್ಕಾ ಶೆಟ್ಟಿ ಅವರು ‘ಸೈಲೆನ್ಸ್’ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ.