Tag: anushree

  • ನುಗ್ಗೆಸೊಪ್ಪಿನ ಎಗ್‌ಬುರ್ಜಿ ಜೊತೆಗೆ ದೋಸೆ – ಪತಿ ರೋಶನ್ ಕೈರುಚಿಗೆ ಅನುಶ್ರೀ ಫಿದಾ

    ನುಗ್ಗೆಸೊಪ್ಪಿನ ಎಗ್‌ಬುರ್ಜಿ ಜೊತೆಗೆ ದೋಸೆ – ಪತಿ ರೋಶನ್ ಕೈರುಚಿಗೆ ಅನುಶ್ರೀ ಫಿದಾ

    ತ್ತೀಚೆಗಷ್ಟೇ ರೋಶನ್ (Roshan) ಜೊತೆ ಮದುವೆಯಾದ ಆ್ಯಂಕರ್ ಅನುಶ್ರೀ (Anushree) ದಾಂಪತ್ಯ ಜೀವನದ ಖುಷಿಯಲ್ಲಿದ್ದಾರೆ. ಮದುವೆ ಬಳಿಕ ಪತಿ ಜೊತೆ ಪ್ರವಾಸ ಮಾಡ್ತಿರುವ ಫೋಟೋಗಳನ್ನ ಇತ್ತೀಚೆಗೆ ಅನುಶ್ರೀ ಹಂಚಿಕೊಂಡಿದ್ದರು. ಈಗ ಪತಿ ಅಡುಗೆ ಮಾಡಿ ತಮಗೆ ತಿನ್ನಿಸಿರುವ ವೀಡಿಯೋ ಹಂಚಿಕೊಂಡಿದ್ದಾರೆ.

    ಮದುವೆ ಶಾಸ್ತ್ರದ ಬಳಿಕ ಮಾಧ್ಯಮದ ಜೊತೆ ಅನುಶ್ರೀ ಮಾತನಾಡುತ್ತಾ ಪತಿ ರೋಶನ್ ಚೆನ್ನಾಗಿ ಅಡುಗೆ ಮಾಡ್ತಾರೆ. ನಾನು ಆರಾಮಾಗಿ ತಿನ್ಕೊಂಡ್ ಇರ್ತೀನಿ ಎಂದು ಹೇಳಿ ನಕ್ಕಿದ್ದರು.

    ಇದೀಗ ಅದೇ ಚಿತ್ರಣವನ್ನ ತೋರಿಸಿದ್ದಾರೆ. ರೋಶನ್ ತಮ್ಮ ಕೈಯಾರೇ ನುಗ್ಗೆಸೊಪ್ಪಿನ ಎಗ್‌ಬುರ್ಜಿ ಮಾಡಿ ದೋಸೆ ಜೊತೆ ಅನುಶ್ರೀಗೆ ತಿನ್ನಿಸಿದ್ದಾರೆ. ಈ ವೀಡಿಯೋವನ್ನ ಅನುಶ್ರೀ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.  ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ನಿಮಿಷಕ್ಕೆ ಸಾವಿರಾರು ವೀವ್ಸ್ ಲೈಕ್ಸ್ ಬರುತ್ತಿದೆ. ಅನುಶ್ರೀಯ ಸುಖ ಸಂಸಾರಕ್ಕೆ ಯಾರ ದೃಷ್ಟಿಯೂ ಬೀಳದಿರಲಿ ಎಂದು ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಕಳೆದ ಆಗಸ್ಟ್ 28 ರಂದು ಅನುಶ್ರೀ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ರೋಶನ್ ಜೊತೆ ವಿವಾಹವಾಗಿದ್ದರು. ಇದೀಗ ಮದುವೆಯ ನಂತರದ ಸುಖೀ ಜೀವನದ ದರ್ಶನವನ್ನ ಪ್ರಪಂಚದ ಮುಂದೆ ತೆರೆದಿಟ್ಟಿದ್ದಾರೆ.

  • ಮದ್ವೆಯಲ್ಲಿ ಅನುಶ್ರೀ ಉಟ್ಟ ಸೀರೆಯ ಬೆಲೆ 2.5 ಲಕ್ಷ ಅಲ್ಲ ಕೇವಲ 2,700 ರೂ.

    ಮದ್ವೆಯಲ್ಲಿ ಅನುಶ್ರೀ ಉಟ್ಟ ಸೀರೆಯ ಬೆಲೆ 2.5 ಲಕ್ಷ ಅಲ್ಲ ಕೇವಲ 2,700 ರೂ.

    ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ (Kannada Anchor Anushree) ಸದ್ಯಕ್ಕೆ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಸರಳ ವಿವಾಹ ಅಂತ ಅವರು ಹೇಳಿಕೊಂಡಿದ್ದರೂ ಅದ್ಧೂರಿಯಂತೆ ಕಂಡುಬಂದಿತ್ತು. ಬಳಿಕ ಮದುವೆಯ ಒಂದೊಂದೇ ವೀಡಿಯೋಗಳನ್ನ ತಮ್ಮ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡುತ್ತಾ ಬರ್ತಿದ್ದಾರೆ ಅನುಶ್ರೀ.

    ಇದೀಗ ಮದುವೆಯ (AnuShree Marriage) ಶಾಸ್ತ್ರಕ್ಕೆ ಧರಿಸಿದ್ದ ಒಂದು ಸೀರೆ ಬಗ್ಗೆ ಹಾಗೂ ಆ ಸೀರೆಯ ಅಸಲಿ ಬೆಲೆ ಬಗ್ಗೆ ಬಹಿರಂಗವಾಗಿ ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ: ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್‌ ತಾಯಿ ಪುಷ್ಪ ಅರುಣ್‌ಕುಮಾರ್

    ಮುಹೂರ್ತಕ್ಕೂ ಮುನ್ನ ನಡೆಯುವ ದೇವತಾ ಕಾರ್ಯ ಶಾಸ್ತ್ರಕ್ಕಾಗಿ ಅನುಶ್ರೀ ಸಿಲ್ವರ್ ಬಣ್ಣದ ಸೀರೆ ಧರಿಸಿದ್ದರು. ನೋಡೋದಕ್ಕೆ ಬೆಲೆ ಬಾಳುವ ಸೀರೆಯಂತೆ ಕಾಣುತ್ತಿತ್ತು. ಇದೀಗ ಆ ಸೀರೆಯ ಬೆಲೆಯನ್ನ ಹೇಳುವ ಮೂಲಕ ಅಚ್ಚರಿ ಮೂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಇಲ್ಲದ ರೂಲ್ಸ್ ದರ್ಶನ್‌ಗೆ ಯಾಕೆ?- ವಕೀಲರ ವಾದ

    ಸಿಲ್ವರ್ ಬಣ್ಣದ ಸೀರೆಯ ಫೋಟೋಗಳನ್ನ ತಮ್ಮ ಇನ್‌ಸ್ಟಾದಲ್ಲಿ ಹಂಚಿಕೊಂಡಿರುವ ಅನುಶ್ರೀ ʻಎಲ್ಲಾ ಪೋಸ್ಟ್‌ಗಳು ಹೇಳ್ತಿವೆ, ಈ ಸೀರೆ ಬೆಲೆ 2.5 ಲಕ್ಷ ಅಂತ. ಆದ್ರೆ ಈ ಸೀರೆಯ ಅಸಲಿ ಬೆಲೆ 2,700 ರೂಪಾಯಿʼ ಎಂದಿದ್ದಾರೆ. ಜೊತೆಗೆ ʻಈ ಕ್ಷಣದ ನಗು ನಾ ಆರಾಧಿಸುವ ದೇವರು, ಆಶೀರ್ವಾದ ಮಾಡಿದ ಪ್ರೀತಿಯ ಕನ್ನಡಿಗರು ಕೊಟ್ಟ ವರʼ ಎಂದು ಹೇಳುವ ಮೂಲಕ ಮದುವೆಯ ಖುಷಿಯನ್ನ ಮೊದಲ ಬಾರಿ ಪದಗಳಲ್ಲಿ ವರ್ಣಿಸಿದ್ದಾರೆ.  ಇದನ್ನೂ ಓದಿ: ಹಿಂದೆಂದೂ ಕಂಡು ಕೇಳರಿಯದ ರುಕ್ಮಿಣಿ ವಸಂತ್ ಬೋಲ್ಡ್ ಫೋಟೋಶೂಟ್

    ಕುಶಾಲನಗರದ ರೋಷನ್ ಜೊತೆ ಅನುಶ್ರೀ ಕಳೆದ ಆಗಸ್ಟ್ 28 ರಂದು ಸಪ್ತಪದಿ ತುಳಿದಿದ್ದರು. ಅದಕ್ಕವರು ಸರಳ ವಿವಾಹ ಎಂದು ಹೇಳಿದ್ದರು. ಇನ್ನೂ ಸರಳವಾಗಿ ಮಂತ್ರಮಾಂಗಲ್ಯ ಮಾಡಿಕೊಳ್ಳಲು ಅನುಶ್ರೀ ಇಷ್ಟಪಟ್ಟಿದ್ದರಂತೆ. ಆದರೆ ಸಾಧ್ಯವಾಗಲಿಲ್ಲ ಎಂದಿದ್ದಾರೆ. ಇದೀಗ ಅನುಶ್ರೀ ಮದುವೆಯಲ್ಲಿ ಉಟ್ಟ ಸೀರೆಯ ಅಸಲಿ ಬೆಲೆ ಹೇಳುವ ಮೂಲಕ ನೀವ್ ಅಂದುಕೊಂಡಿದ್ದೆಲ್ಲ ತಪ್ಪು ಅಸಲಿ ವಿಷಯ ಬೇರೆಯೇ ಇರುತ್ತೆ ಅನ್ನೋದನ್ನ ಮಾರ್ಮಿಕವಾಗಿ ನುಡಿದಿದ್ದಾರೆ.  ಇದನ್ನೂ ಓದಿ: ಕೀನ್ಯಾದಲ್ಲಿ ರಾಜಮೌಳಿ ಗಸ್ತು, ಕೀನ್ಯಾ ಸಚಿವ ಬಿಚ್ಚಿಟ್ಟರು `ಆ’ ರಹಸ್ಯ

  • ನಮ್ಮಿಬ್ಬರನ್ನು ಒಂದು ಮಾಡಿದ್ದೇ ಅಪ್ಪು ಸರ್‌ – ಲವ್‌ ಸ್ಟೋರಿ ಬಗ್ಗೆ ಅನುಶ್ರೀ ಮಾತು

    ನಮ್ಮಿಬ್ಬರನ್ನು ಒಂದು ಮಾಡಿದ್ದೇ ಅಪ್ಪು ಸರ್‌ – ಲವ್‌ ಸ್ಟೋರಿ ಬಗ್ಗೆ ಅನುಶ್ರೀ ಮಾತು

    ನಮ್ಮಿಬ್ಬರನ್ನು ಒಂದು ಮಾಡಿದ್ದೇ ಅಪ್ಪು ಸರ್‌, ಒಂದು ಲೆಕ್ಕದಲ್ಲಿ ಹೇಳೋದಾದರೆ ಈ ಪ್ರೀತಿಗೆ ಅವರೇ ಕಾರಣ ಎಂದು ನಿರೂಪಕಿ ಅನುಶ್ರೀ (Anchor Anushree) ತಮ್ಮ ಲವ್‌ ಸ್ಟೋರಿ ಬಗ್ಗೆ ಹೇಳಿಕೊಂಡಿದ್ದಾರೆ.

    ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದನ್ನೂ ಓದಿ: ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸುಂದರ ಹಾಗೂ ಸರಳವಾಗಿ ನಡೆದಿದೆ, ಕಡಿಮೆ ಜನರನ್ನು ಸೇರಿಸಿ ಮದುವೆಯಾಗಬೇಕು ಅನ್ನೋದು ನಮ್ಮಿಬ್ಬರ ಆಸೆಯಾಗಿತ್ತು. ಜೊತೆಗೆ ತುಂಬಾ ಕಡೆಯಿಂದ ಬಹಳ ಜನರು ಬಂದಿದ್ದರು. ‌ಆ ಎಲ್ಲಾ ಪ್ರೀತಿ-ಪಾತ್ರರಿಗೂ ಧನ್ಯವಾದಗಳು ಎಂದಿದ್ದಾರೆ.

    ಇದೇ ವೇಳೆ ತಮ್ಮ ಲವ್‌ ಸ್ಟೋರಿ ಶುರುವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಸಿಂಪಲ್‌ ಲವ್ ಸ್ಟೋರಿ. ನಾವಿಬ್ಬರು ಮೊದಲು ಸ್ನೇಹಿತರಾದ್ವಿ. ಆಮೇಲೆ ಒಟ್ಟಿಗೆ ಕಾಫಿ ಕುಡಿದ್ವಿ. ಒಬ್ಬರಿಗೊಬ್ಬರು ಇಷ್ಟ ಆದ್ವಿ, ಲವ್‌ ಆಯ್ತು. ಇವಾಗ ಮದ್ವೆ ಆದ್ವಿ. ರೋಷನ್‌ ಕೂಡ ಅಪ್ಪು ಅವರ ಅಭಿಮಾನಿ. ಅಪ್ಪು ಸರ್‌ ಅವರ ʻಪುನೀತ್‌ ಪರ್ವʼ ಕಾರ್ಯಕ್ರಮದ ಮೂಲಕವೇ ನಮ್ಮಿಬ್ಬರ ಪರಿಚಯವಾಗಿದ್ದು. ಒಂದು ಲೆಕ್ಕದಲ್ಲಿ ಹೇಳೋದಾದರೆ ನಮ್ಮಿಬ್ಬರನ್ನು ಸೇರಿಸಿದ್ದೇ ಅಪ್ಪು ಸರ್‌ ಎಂದು ತಿಳಿಸಿದ್ದಾರೆ.

    ಮದುವೆಗೆ ಶಿವಣ್ಣ, ಗೀತಕ್ಕ ಸೇರಿದಂತೆ ಹಲವರು ಬಂದು ಆಶೀರ್ವಾದ ಮಾಡಿದ್ದಾರೆ. ಶಿವಣ್ಣ ರೋಷನ್ ಅವರನ್ನ ಮುಂಚೆಯೇ ನೋಡಿದ್ರು. ರಚಿತಾ ಅವ್ರು ನಮ್ಮ ಮದುವೆಗೆ ಬಂದಿದ್ದು ಸಾಕಷ್ಟು ಖುಷಿ ಕೊಟ್ಟಿದೆ. ನನಗೆ ಮಂತ್ರ ಮಾಂಗಲ್ಯ ಆಗಬೇಕು ಅಂತ ಬಹಳ ಆಸೆ ಇತ್ತು. ಆದ್ರೆ ಅದರದ್ದು ಕೆಲವೊಂದು ರೂಲ್ಸ್ ಇದೆ ಹಾಗಾಗಿ ಕಷ್ಟ ಆಯ್ತು. ಇನ್ನೂ ಮದುವೆ ಅನ್ನೋದು ಒಂದು ಹೆಣ್ಣಿನ ಬಹು ದೊಡ್ಡ ಕನಸು. ನಾವು ಮದುವೆ ಹೇಗೆ ಆಗ್ತೀವಿ ಅನ್ನೋದು ಮುಖ್ಯ ಅಲ್ಲ, ಮದುವೆ ಬಳಿಕ ಹೇಗೆ ಬದುಕ್ತೀವಿ ಅನ್ನೋದು ಮುಖ್ಯ ಎಂದಿದ್ದಾರೆ.

    ಇದೇ ವೇಳೆ ರೋಷನ್‌ ಮಾತನಾಡಿ, ಕಳೆದ 5 ವರ್ಷಗಳಿಂದ ನನಗೆ ಅನು ಪರಿಚಯವಿದೆ. 3 ವರ್ಷಗಳ ಹಿಂದೆ ನಾವಿಬ್ಬರು ಕ್ಲೋಸ್‌ ಆದ್ವಿ. ಯಾವತ್ತೂ ಆಕೆ ನನಗೆ ಸೆಲಿಬ್ರಿಟಿ ಅಂತ ಅನಿಸಿಲ್ಲ ಎಂದು ಹೇಳಿದ್ದಾರೆ.

    ಇನ್ನೂ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ.ಇದನ್ನೂ ಓದಿ: ಏಕಾಂಗಿ ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

  • ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ

    ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ

    – ʻಬಂದರೋ ಬಂದರೋ ಬಾವ ಬಂದರೋʼ ಹಾಡಿಗೆ ಭಾವಿ ದಂಪತಿ ಭರ್ಜರಿ ಡಾನ್ಸ್‌

    ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ (Anushree) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಆಗಸ್ಟ್‌ 28ರಂದು ಹಸೆಮಣೆ ಏರುತ್ತಿದ್ದು, ಹಳದಿ ಶಾಸ್ತ್ರದಲ್ಲಿ (Haldi Ceremony) ಮಿಂದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಹೌದು. ಆಗಸ್ಟ್ 28ರ ಗುರುವಾರ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದು, ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿಬಿಟ್ಟಿದೆ.

    ಮದುವೆಗೂ ಮುನ್ನಾದಿನವಾದ ಇಂದು ಹಳದಿ ಶಾಸ್ತ್ರದ ಫೋಟೋಗಳು ವೈರಲ್‌ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್‌ ಸು ಫ್ರಂ ಸೋ ಚಿತ್ರದ ʻಬಂದರೋ ಬಂದರೋ ಬಾವ ಬಂದರೋʼ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.

    ಗುರುವಾರ ಬೆಳಗ್ಗೆ 10:56ರ ಶುಭ ಮುಹೂರ್ತದಲ್ಲಿ ಅನುಶ್ರೀ ಹಾಗೂ ರೋಷನ್ ಮದುವೆ ನಡೆಯಲಿದೆ. ಅಂದಹಾಗೆ, ಇವರಿಬ್ಬರ ಮದುವೆಯು (Anushree Roshan Wedding) ಬೆಂಗಳೂರಿನ ಹೊರವಲಯದ ಕಗ್ಗಲಿಪುರದಲ್ಲಿರುವ ಒಂದು ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದೆ.

    ಮೂಲತಃ ಉದ್ಯಮಿ ಆಗಿರುವ ರೋಷನ್ ಜೊತೆ ಅನುಶ್ರೀ ಮದುವೆಯಾಗುತ್ತಿದ್ದಾರೆ. ಕೂರ್ಗ್‌ನವರಾದ ರೋಷನ್ ತಂದೆ ಹೆಸರು ರಾಮಮೂರ್ತಿ ಹಾಗೂ ತಾಯಿ ಹೆಸರು ಸಿಸಿಲಿಯಾ ಎಂದು. ಇದು ಲವ್‌ ಕಂ ಅರೇಂಜ್ಡ್‌ ಮ್ಯಾರೇಜ್‌ ಅಂತ ಹೇಳಲಾಗುತ್ತಿದೆ.

    ಕನ್ನಡದಲ್ಲಿ ಬಹು ಬೇಡಿಕೆಯುಳ್ಳ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಶ್ರೀ ಮದುವೆ ಬಗ್ಗೆ ಅವರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿತ್ತು. ಅವರು ಎಲ್ಲೇ ಹೋದರೂ, ʻಮದುವೆ ಯಾವಾಗ?ʼ ಅನ್ನೋ ಪ್ರಶ್ನೆಯನ್ನ ಅಭಿಮಾನಿಗಳಲ್ಲದೇ ನಟ-ನಟಿಯರೂ ಕೇಳುತ್ತಲೇ ಇದ್ದರು. ಆಗೆಲ್ಲಾ ಫನ್ನಿಯಾಗಿ ಏನನ್ನಾದರೂ ಉತ್ತರಿಸಿ ಅನುಶ್ರೀ ಸುಮ್ಮನಾಗಿ ಬಿಡುತ್ತಿದ್ದರು. ಆದರೆ, ʻಈ ವರ್ಷ ಮದುವೆ ಆಗುತ್ತೇನೆʼ ಎಂದು ಇತ್ತೀಚೆಗೆ ಹೇಳಿಕೊಂಡಿದ್ದರು. ಅದರಂತೆಯೇ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಸುದ್ದಿ ಕೇಳಿ ಅನುಶ್ರೀ ಅವರ ಅಭಿಮಾನಿಗಳಿಗೆ ಖುಷಿಯಾಗಿದೆ.

    ರಿಯಾಲಿಟಿ ಶೋಗಳನ್ನು ನಿರೂಪಣೆ ಮಾಡಿ ಸೈ ಎನಿಸಿಕೊಂಡಿರುವ ಅನುಶ್ರೀ, ʻಬಿಗ್‌ ಬಾಸ್‌ʼನಲ್ಲಿಯೂ ಸ್ಪರ್ಧಿಸಿದ್ದರು. ನಟಿಯಾಗಿಯೂ ತಮ್ಮ ಪ್ರತಿಭೆಯನ್ನು ತೋರಿದ ಅನುಶ್ರೀ, ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

  • ಈ ವರ್ಷವೇ ನನ್ನ ಮದುವೆ: ಹುಡುಗನ ಬಗ್ಗೆ ಅನುಶ್ರೀ ಮಾತು

    ಈ ವರ್ಷವೇ ನನ್ನ ಮದುವೆ: ಹುಡುಗನ ಬಗ್ಗೆ ಅನುಶ್ರೀ ಮಾತು

    ನ್ನಡದ ಖ್ಯಾತ ನಿರೂಪಕಿ ಅನುಶ್ರೀ (Anchor Anushree) ಇದೀಗ ಮದುವೆಯ (Wedding) ಬಗ್ಗೆ ಮಾತಾಡಿದ್ದಾರೆ. ನಾನಾ ಕಾರ್ಯಕ್ರಮಗಳಲ್ಲಿ ಅನುಶ್ರೀಗೆ ಮದುವೆಯ ಬಗ್ಗೆ ಪ್ರಶ್ನಿಸಿದಾಗ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರ ನೀಡುತ್ತಿದ್ದರು. ಇದೀಗ ಅಧಿಕೃತವಾಗಿಯೇ ಮದುವೆಯ ಬಗ್ಗೆ ಅನುಶ್ರೀ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ವರ್ಷವೇ ತಾವು ಮದುವೆ ಆಗೋದಾಗಿ ಹೇಳಿದ್ದಾರೆ. ಇದನ್ನೂ ಓದಿ:‘ಡೆವಿಲ್’ ಸಿನಿಮಾ ತುಂಬಾ ಡಿಫರೆಂಟ್ ಆಗಿದೆ: ಅಪ್‌ಡೇಟ್ ಕೊಟ್ಟ ವಿನಯ್

    ಮದುವೆ ಬಗ್ಗೆ ಅಷ್ಟೇ ಅಲ್ಲ, ಮದುವೆಯಾಗೋ ಹುಡುಗ ಕೂಡ ಹೇಗಿರಬೇಕು? ಎಂದು ಅನುಶ್ರೀ ಮನಬಿಚ್ಚಿ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್‌ಗೆ ಬಂದಿದ್ದ ಅನುಶ್ರೀಗೆ ನಟಿ ಮಲೈಕಾ ವಸುಪಾಲ್ ಹಾಗೂ ನಟ ನಾಗಭೂಷಣ್ ಮದುವೆ ಕುರಿತು ಪ್ರಶ್ನಿಸಿದ್ದಾರೆ. ನಿಮ್ಮ ಹುಡುಗ ಹೇಗಿರಬೇಕು? ಮದುವೆ ಯಾವಾಗ ಎಂದು ಕೇಳಿದ್ದಾರೆ. ಇದನ್ನೂ ಓದಿ: ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

    ಅದಕ್ಕೆ ಮಾತನಾಡಿದ ನಿರೂಪಕಿ, ಹುಡುಗ ತುಂಬ ರೆಸ್ಪಾನ್ಸಿಬಲ್ ಆಗಿರಬೇಕು. ನನ್ನ ಪರವಾಗಿ ಅಲ್ಲ ಅವನ ಲೈಫ್ ಪರವಾಗಿ ರೆಸ್ಪಾನ್ಸಿಬಲ್ ಆಗಿದ್ರೆ ಸಾಕು. ಅವನು ಬದುಕಬೇಕು, ನನ್ನನ್ನು ಬದುಕೋಕೆ ಬಿಡಬೇಕು ಎಂದಿದ್ದಾರೆ. ಈ ವರ್ಷವೇ ಮದುವೆ ಆಗುತ್ತೆ ಗ್ಯಾರಂಟಿ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ. ಅನುಶ್ರೀ ಮಾತಿಗೆ ಮಲೈಕಾ ವಸುಪಾಲ್ ಮತ್ತು ನಾಗಭೂಷಣ್ ಹೌದಾ ಎಂದು ಮತ್ತೊಮ್ಮೆ ಕೇಳಿದ್ದಾರೆ. ಹೌದು. ಈ ವರ್ಷವೇ ಮದುವೆ ಆಗ್ತೀನಿ ಎಂದು ಅಧಿಕೃತವಾಗಿ ಹೇಳಿದ್ದಾರೆ.

    ಇತ್ತೀಚೆಗಷ್ಟೇ ಮಾರ್ಚ್‌ನಲ್ಲಿ ಸಿಹಿ ಸುದ್ದಿ ಕೊಡುವುದಾಗಿ ಅವರು ಹೇಳಿಕೊಂಡಿದ್ದರು. ಅಪ್ಪು ಕಟ್ಟಾ ಅಭಿಮಾನಿಯಾಗಿರುವ ಅನುಶ್ರೀ ಅವರು ಪುನೀತ್‌ ಹುಟ್ಟಿದಹಬ್ಬದಂದು ಸರ್ಪ್ರೈಸ್ ಇದೆ ಅಂತೆಲ್ಲಾ ಅವರದ್ದೇ ಯೂಟ್ಯೂಬ್ ಚಾನೆಲ್‌ನ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಆದರೆ, ಅಂದು ಯಾವ ಸರ್ಪ್ರೈಸ್ ಕೊಡಲಿಲ್ಲ. ಈಗ ತಮ್ಮ ಇನ್‌ಸ್ಟಾದಲ್ಲಿ ಲೈವ್ ಮಾಡಿದ್ದ ಸಮಯದಲ್ಲಿ 2025ರ ಒಳಗೆ ಮದುವೆ ಆಗೋದಾಗಿ ಘೋಷಿಸಿದ್ದಾರೆ.

  • ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ: ಅನುಶ್ರೀ

    ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ: ಅನುಶ್ರೀ

    ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆ ನಿರೂಪಕಿ ಅನುಶ್ರೀ (Anushree), ನಮ್ರತಾ ಗೌಡ, ‘ಬಿಗ್ ಬಾಸ್’ ರಂಜಿತ್ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ, ಅನುಶ್ರೀ ಮಾಧ್ಯಮಕ್ಕೆ ಮಾತನಾಡಿ, ಒಳ್ಳೆತನದಲ್ಲಿ ಅಪ್ಪು ಸರ್ ಯಾವತ್ತಿಗೂ ಜೀವಂತವಾಗಿರುತ್ತಾರೆ ಎಂದು ಪುನೀತ್ ಅವರನ್ನು ಸ್ಮರಿಸಿದ್ದಾರೆ.

    ಅನುಶ್ರೀ ಮಾತನಾಡಿ, ಅಪ್ಪು ಸ್ಮಾರಕಕ್ಕೆ ಇವತ್ತು ಜಾತ್ರೆ ಹಾಗೇ ಜನ ಸೇರಿದ್ದಾರೆ. ಈ ರೀತಿ 50ನೇ ವರ್ಷದ ಹುಟ್ಟುಹಬ್ಬ ಯಾರಿಗೂ ಆಗಿರಲಿಲ್ಲ. ಲಕ್ಷಾಂತರ ಜನ ಅವರ ಹೆಸರನ್ನು ಕೂಗೋ ರೀತಿ ನೋಡಿದ್ರೆ ನಿಜಕ್ಕೂ ಅಪ್ಪು ಸರ್ ಇದೆನ್ನೆಲ್ಲಾ ಕೇಳಿಸಿಕೊಳ್ತಾರೆ ಎಂದಿದ್ದಾರೆ. ಇದನ್ನೂ ಓದಿ:ಅಪ್ಪು ಕೇವಲ ಹೆಸರಲ್ಲ, ಕನ್ನಡಿಗರಿಗೆ ಅದೊಂದು ಭಾವನೆ: ಶ್ರೀದೇವಿ ಭೈರಪ್ಪ

    ದಿನದಿಂದ ದಿನಕ್ಕೆ ಅಪ್ಪು ಸರ್ ಮೇಲಿನ ಅಭಿಮಾನಿಗಳ ಅಭಿಮಾನ ಜಾಸ್ತಿ ಆಗ್ತಿದೆ. ಸೂರ್ಯ ಚಂದ್ರ ಇರೋವರೆಗೂ ಅಪ್ಪು ಸರ್ ಅಭಿಮಾನಿಗಳ ಪ್ರೀತಿ ಯಾವತ್ತಿಗೂ ಗ್ರೇಟ್ ಆಗಿರುತ್ತದೆ. ಆ ಎಲ್ಲಾ ಅಭಿಮಾನಿಗಳಲ್ಲಿ ನಾನು ಒಬ್ಬಳು. ಸುಖದಲ್ಲಿ ತುಂಬಾ ಜನ ನಿಮ್ಮೊಂದಿಗೆ ಬಂದು ನಿಲ್ಲಬಹುದು. ಆದರೆ ಕಷ್ಟದಲ್ಲಿ ನಿಮ್ಮೊಂದಿಗೆ ನಿಲ್ಲವವರೇ ನಿಜವಾದ ಹೀರೋ. ನನ್ನೊಂದಿಗೆ ನನ್ನ ಕಷ್ಟದಲ್ಲಿ ನಿಂತಿದ್ದು ಅಪ್ಪು ಸರ್. ಅದನ್ನು ನಾನ್ ಯಾವತ್ತು ಮರೆಯೊಲ್ಲ. ನಾನು ಮಾಡೋ ಪ್ರತಿ ಕೆಲಸವನ್ನು ಅವರು ಪ್ರಶಂಸಿಸುತ್ತಿದ್ದರು. ಇವತ್ತಿಗೂ ಅವರನ್ನು ನೆನಪು ಮಾಡಿಕೊಂಡ್ರೆ ಸಾಕಷ್ಟು ವಿಚಾರಗಳು ನೆನಪಾಗುತ್ತದೆ ಎಂದು ಪುನೀತ್‌ರನ್ನು ನೆನೆದು ನಟಿ ಭಾವುಕರಾಗಿದ್ದಾರೆ.

    ಮೊನ್ನೆ ‘ಅಪ್ಪು’ ಸಿನಿಮಾ ನೋಡಿದಾಗ ಶುರುವಿನಲ್ಲಿ ಅವರಿಲ್ಲ ಅಂತ ಎಲ್ಲೂ ಅನಿಸಲಿಲ್ಲ. ಕಡೆಯಲ್ಲಿ ಸಿನಿಮಾ ಮುಗಿತಾ ಮತ್ತೆ ಒಂದು ವರ್ಷ ಕಾಯಬೇಕಾ ಅನಸ್ತು. ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ ಮಾನಸಿಕವಾಗಿ ನಮ್ಮ ಜೊತೆ ಇರುತ್ತಾರೆ. ಒಳ್ಳೆತನದಲ್ಲಿ ಅಪ್ಪು ಸರ್ ಯಾವತ್ತಿಗೂ ಜೀವಂತವಾಗಿರುತ್ತಾರೆ ಎಂದರು.

    ಬಳಿಕ ಅಭಿಮಾನಿಗಳು ತಂದ ಕೇಕ್ ಅನ್ನು ಅಪ್ಪು ಸ್ಮಾರಕದ ಬಳಿ ಅನುಶ್ರೀ ಕತ್ತರಿಸಿದರು. ಫ್ಯಾನ್ಸ್‌ಗೆ ತಿನ್ನಿಸಿ ಸಂಭ್ರಮಿಸಿದರು.

  • ಪುನೀತ್‌ ಸರ್ ಫ್ಯಾನ್ಸ್‌ಗೆ ಇವತ್ತು ಹಬ್ಬ – ಅಪ್ಪು ರೀ-ರಿಲೀಸ್‌  ಬಗ್ಗೆ ಅನುಶ್ರೀ ಮಾತು

    ಪುನೀತ್‌ ಸರ್ ಫ್ಯಾನ್ಸ್‌ಗೆ ಇವತ್ತು ಹಬ್ಬ – ಅಪ್ಪು ರೀ-ರಿಲೀಸ್‌ ಬಗ್ಗೆ ಅನುಶ್ರೀ ಮಾತು

    ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಇಂದು (ಮಾ.14) ‘ಅಪ್ಪು’ ಚಿತ್ರ ರೀ- ರಿಲೀಸ್ ಆಗಿದೆ. ವೀರೇಶ್ ಥಿಯೇಟರ್‌ಗೆ ಆಗಮಿಸಿ ಅಭಿಮಾನಿಗಳೊಂದಿಗೆ ‘ಅಪ್ಪು’ ಚಿತ್ರವನ್ನು ನಿರೂಪಕಿ ಅನುಶ್ರೀ (Anushree) ವೀಕ್ಷಿಸಿ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪು ಸರ್ ಫ್ಯಾನ್ಸ್‌ಗೆ ಇವತ್ತು ಹಬ್ಬ ಎಂದು ಅನುಶ್ರೀ ಮಾತನಾಡಿದ್ದಾರೆ.

    ಅನುಶ್ರೀ ಮಾತನಾಡಿ, ‘ಅಪ್ಪು’ ಸಿನಿಮಾ ಇವತ್ತು ರೀ-ರಿಲೀಸ್ ಆಗಿದೆ. ಆದರೆ ಅಪ್ಪು ಸರ್ ಫ್ಯಾನ್ಸ್‌ಗೆ ಇವತ್ತು ಹಬ್ಬ. ಅವರ ಸಿನಿಮಾ ನೋಡೋಕೆ, ಶಿಳ್ಳೆ ಹೊಡೆಯೋಕೆ ಮತ್ತೆ ಒಂದು ವರ್ಷ ಕಾಯಬೇಕು. ಅವರ ಚಿತ್ರದ ಲಾಂಚ್ ಟೈಮ್‌ನಲ್ಲಿ ನಾವು ಹೇಗೆ ಸಂಭ್ರಮಿಸುತ್ತಿದ್ದೆವೋ ಈಗಲೂ ಹಾಗೇ ಸಂಭ್ರಮಿಸುತ್ತಿದ್ದೇವೆ ಎಂದಿದ್ದಾರೆ.

    ಮತ್ತೊಂದು ವಿಶೇಷ ಅಂದ್ರೆ, ಇವತ್ತು ಅಶ್ವಿನಿ ಮೇಡಂ ಅವರ ಹುಟ್ಟುಹಬ್ಬ. ಹಾಗಾಗಿ ಎಲ್ಲಾ ಅಪ್ಪು ಅಭಿಮಾನಿಗಳ ಪರವಾಗಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಲವ್ ಯೂ ಅಪ್ಪು ಸರ್ ಎಂದಿದ್ದಾರೆ.

    ಇನ್ನೂ ಪುರಿ ಜಗನ್ನಾಥ್ ನಿರ್ದೇಶನದ ‘ಅಪ್ಪು’ ಸಿನಿಮಾದಲ್ಲಿ ಪುನೀತ್‌ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಾಣ ಮಾಡಿದ್ದರು.

  • ಪ್ರಯಾಗ್‌ರಾಜ್‌ನಿಂದ ಕಾಶಿಗೆ ಬಂದ ರಾಜ್ ಬಿ ಶೆಟ್ಟಿ, ಆ್ಯಂಕರ್ ಅನುಶ್ರೀ

    ಪ್ರಯಾಗ್‌ರಾಜ್‌ನಿಂದ ಕಾಶಿಗೆ ಬಂದ ರಾಜ್ ಬಿ ಶೆಟ್ಟಿ, ಆ್ಯಂಕರ್ ಅನುಶ್ರೀ

    ಹಾ ಕುಂಭಮೇಳದಲ್ಲಿ ನಟ ರಾಜ್ ಬಿ ಶೆಟ್ಟಿ, ಅನುಶ್ರೀ (Anchor Anushree) ಭಾಗಿಯಾದ ಬಳಿಕ ಸದ್ಯ ಕಾಶಿಯಲ್ಲಿದ್ದಾರೆ. ಸ್ನೇಹಿತರ ಜೊತೆ ರಾಜ್ ಮತ್ತು ಅನುಶ್ರೀ ಕಾಲ ಕಳೆಯುತ್ತಿದ್ದಾರೆ. ಕಾಶಿಗೆ ಭೇಟಿ ನೀಡಿರುವ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ಕುಂಭಮೇಳದಲ್ಲಿ ಅನುಶ್ರೀ, ರಾಜ್ ಬಿ ಶೆಟ್ಟಿ (Raj B Shetty) ಮತ್ತು ಸ್ನೇಹಿತರು ಪವಿತ್ರಾ ಸ್ನಾನ ಮಾಡಿ ದೇವರ ದರ್ಶನ ಪಡೆದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿಗೆ ಆಗಮಿಸಿದ್ದಾರೆ. ಅಲ್ಲಿನ ಬೀದಿ ನಾಯಿ ಜೊತೆ ಸಮಯ ಕಳೆಯುತ್ತಾ ನಟ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಕುರಿತ ಸುಂದರ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮಿಸ್ಟರಿ ಮ್ಯಾನ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ಖುಷಿ ಕಪೂರ್

     

    View this post on Instagram

     

    A post shared by Raj B Shetty (@rajbshetty)

    ಇನ್ನೂ ಅನುಶ್ರೀ ರಿಯಾಲಿಟಿ ಶೋ ನಿರೂಪಣೆಯಲ್ಲಿ ಬ್ಯುಸಿಯಿದ್ರೆ, ರಾಜ್ ಬಿ ಶೆಟ್ಟಿ ಕೈಯಲ್ಲಿ ಹಲವು ಸಿನಿಮಾಗಳಿವೆ. ಕನ್ನಡ, ಮಲಯಾಳಂ, ಹಿಂದಿ ಚಿತ್ರಗಳಲ್ಲಿ ರಾಜ್ ಬಿ ಶೆಟ್ಟಿ ತೊಡಗಿಸಿಕೊಂಡಿದ್ದಾರೆ.

    ಇನ್ನೂ ಕನ್ನಡದ ಟೋಬಿ, ಮಲಯಾಳಂ ‘ಟರ್ಬೊ’ ಚಿತ್ರದಲ್ಲಿನ ರಾಜ್ ಬಿ ಶೆಟ್ಟಿ ನಟನೆ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಅವರ ಮುಂಬರುವ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

  • ನಾವು ಪುಣ್ಯ ಮಾಡಿದ್ವಿ ಅದಕ್ಕೆ ಈ ಅವಕಾಶ ಸಿಕ್ಕಿದೆ – ಮಹಾ ಕುಂಭ ಮೇಳದಲ್ಲಿ ಅನುಶ್ರೀ ಮಾತು

    ನಾವು ಪುಣ್ಯ ಮಾಡಿದ್ವಿ ಅದಕ್ಕೆ ಈ ಅವಕಾಶ ಸಿಕ್ಕಿದೆ – ಮಹಾ ಕುಂಭ ಮೇಳದಲ್ಲಿ ಅನುಶ್ರೀ ಮಾತು

    ಪ್ರಯಾಗ್‌ರಾಜ್‌: ಮಹಾ ಕುಂಭಮೇಳಕ್ಕೆ (Maha Kumbhmela) ತೆರಳಿರುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀಯವರು (Anchor Anushree) ತಮ್ಮ ದೈವಿಕ ಅನುಭವವನ್ನು `ಪಬ್ಲಿಕ್‌ ಟಿವಿ’ ಮುಂದೆ ಬಿಚ್ಚಿಟ್ಟಿದ್ದಾರೆ. ಪುಣ್ಯ ನದಿಯಲ್ಲಿ ಮುಳುಗಿ ಏಳುವಾಗ ತುಂಬಾ ಭಾವುಕ ಅನುಭವವನ್ನು ನಾನು ಅನುಭವಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಆ ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ. ಒಂದು ಬಿಸಿ ವಸ್ತುವನ್ನು ಮುಟ್ಟಿದವರಿಗೆ ಹೇಗೆ ತಿಳಿಯುತ್ತದೆಯೋ ಈ ಅನುಭವ ಸಹ ಹಾಗೆಯೇ. ಆ ಅದ್ಭುತ ಅನುಭವವನ್ನು ಸುಧಾರಿಸಿಕೊಳ್ಳಲು ಸ್ವಲ್ಪ ಸಮಯಬೇಕು. ಹರಹರ ಮಹಾದೇವ ಎಂದು ತೆರಳುವಾಗ ಅಲ್ಲಿನ ದೀಪಾಲಂಕಾರಗಳಲ್ಲಿ ಶಿವನೇ ಆಶೀರ್ವಾದ ಮಾಡುವಂತೆ ಕಾಣುತ್ತದೆ. ನಾನಂತೂ ನೀರಿನಲ್ಲಿ ಮುಳುಗಿದಾಗೆಲ್ಲ ಕಣ್ಣೀರು ಹಾಕಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

    144 ವರ್ಷಕ್ಕೆ ಒಮ್ಮೆ ಇದು ನಡೆಯೋದು, ಎಷ್ಟು ಜನರಿಗೆ ಈ ಅವಕಾಶ ಸಿಗುತ್ತೆ? ಎಲ್ಲಾ ಹೇಳ್ತಾರೆ ಇದು ಕಲಿಗಾಲ ಎಲ್ಲ ಪಾಪ ಮಾಡಿದವರು ಅಂತಾರೆ. ಆದರೆ ನನಗೆ ಅನ್ನಿಸಿದ್ದು, ಈ ಭಾಗ್ಯ ನಮಗೆ ಸಿಕ್ಕಿದೆ. ನಾವು ಪುಣ್ಯವಂತರು ಎಂದು ಹೇಳಿಕೊಂಡಿದ್ದಾರೆ.

    ಇಲ್ಲಿ ಮಹಿಳೆಯರಿಗೆ ಸುರಕ್ಷತೆ ಇದೆ. ಇಂತಹ ವ್ಯವಸ್ಥೆ ಬಗ್ಗೆ ಹೆಮ್ಮೆ ಇದೆ. ಪೊಲೀಸ್‌ ಸಿಬ್ಬಂದಿ ಸಹ ಬಹಳ ಸಹಾಯ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

    ನಾವು ಐದು ದಿನಗಳ ಕಾಲ ಪ್ಲ್ಯಾನ್‌ ಮಾಡಿಕೊಂಡಿದ್ದೇವೆ. ಇನ್ನೂ ನಾವು ವಾರಣಾಸಿಗೆ ಹೋಗಬೇಕು. ಅಯೋಧ್ಯೆಯ ಬಾಲ ರಾಮನ ದರ್ಶನಕ್ಕೆ ಹೋಗಲು ಪ್ರಯತ್ನಿಸುತ್ತೇವೆ. ಇಂದು ಅಖಾಡಕ್ಕೆ ಹೋಗಿ ಸಾಧುಗಳ ಆಶೀರ್ವಾದ ಪಡೆಯಲು ತೆರಳುತ್ತಿದ್ದೇವೆ ಎಂದು ತಿಳಿಸಿದರು.

    ಸಂಗಮದಲ್ಲಿ ಮಿಂದು.. ಕಣ್ಣುಗಳು ನೆಂದು ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು.. ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು. ಕೋಟಿ ಜನ ಸೇರೋ ಜಾಗ. ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ದ್ರೆ ಈ ದೈವಿಕ ಅನುಭವ ಸಿಗುತ್ತಿರಲಿಲ್ಲ ಎಂದು ಅನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಕನ್ನಡಿಗರಿಗೆ ಅನುಶ್ರೀ ಕಿವಿ ಮಾತು
    ಇದು ಹಾಲಿಡೇ ಟ್ರಿಪ್‌ ಅಲ್ಲ. ಬರುವವರು ತುಂಬಾ ಹಗುರ ಬ್ಯಾಗ್‌ ತಂದರೂ ಸಾಕು. ಇಲ್ಲಿ ತುಂಬಾ ನಡೆಯಬೇಕು, ಅದಕ್ಕಾಗಿ ಕಂಫರ್ಟ್‌ ಆಗಿರುವ ಶೂ ಬಳಸಬೇಕು.

    ಅಂತಹ ಚಳಿ ಏನೂ ಇಲ್ಲ. ಒಂದು ಜಾಕೆಟ್‌ ತಂದರೂ ಸಾಕು, ಸೋಶಿಯಲ್‌ ಮೀಡಿಯಾ ನಂಬಿ ಏನನ್ನೂ ನಿರ್ಧರಿಸಬೇಡಿ. ಇಲ್ಲಿ ಎಲ್ಲಾ ವ್ಯವಸ್ಥೆ ಚೆನ್ನಾಗಿದೆ. ಆರಾಮಾಗಿ ಬಂದು ಬಂದು ಪವಿತ್ರ ಸ್ನಾನ ಮಾಡಬಹುದು.

    ದೈವಿಕ ಅನುಭವದ ಬಗ್ಗೆ ಅನುಶ್ರೀ ಪೋಸ್ಟ್‌ : ಸಂಗಮದಲ್ಲಿ ಮಿಂದು… ಕಣ್ಣುಗಳು ನೆಂದು, ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು, ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು. ಕೋಟಿ ಜನ ಸೇರೋ ಜಾಗ, ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ದ್ರೆ ಈ ದೈವಿಕ ಅನುಭವ ಸಿಗ್ತಿರ್ಲಿಲ್ಲ, ಮೌನಿ ಅಮಾವಾಸ್ಯ, ಹರ ಹರ ಮಹದೇವ್! ಎಂದು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

  • ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

    ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

    ಪುನೀತ್‌ ರಾಜ್‌ಕುಮಾರ್‌‌ (Puneeth Rajkumar) ಅವರು ಅಗಲಿ ಇಂದಿಗೆ (ಅ.29) 3 ವರ್ಷಗಳು ಕಳೆದಿವೆ. ಇದೀಗ ಅವರ ಪುಣ್ಯಸ್ಮರಣೆಯಂದು ಆ್ಯಂಕರ್ ಅನುಶ್ರೀ (Anushree) ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದು ಅಪ್ಪು ಅವರನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ:ಅಪ್ಪು ಪುಣ್ಯಸ್ಮರಣೆ: ನಿಮ್ಮ ಅಭಿಮಾನಿ ಎಂದು ಭಾವುಕ ಪೋಸ್ಟ್‌ ಹಂಚಿಕೊಂಡ ಶ್ರೀದೇವಿ ಭೈರಪ್ಪ

    ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ.ನಿಮ್ಮ ನಗುವ ಮೊಗವ ನೋಡಲು ಕೋಟಿ ಕಂಗಳು ಕಾಯುತ್ತಿದೆ. ಮಿಸ್ ಯೂ ಅಪ್ಪು ಸರ್ ಎಂದು ಬರೆದಿದ್ದಾರೆ. ನೀವಿಲ್ಲದೆ ಅಭಿಮಾನ ಇಲ್ಲ. ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದು ಬರೆದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.


    ಇನ್ನೂ ಅನುಶ್ರೀ ಅವರು ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿ. ಅಪ್ಪು ಅಗಲಿಕೆಯ ನೋವು ಇಂದಿಗೂ ಅವರನ್ನು ಕಾಡುತ್ತಿದೆ. ಇದೀಗ ಅವರು ಬರೆದಿರುವ ಭಾವನ್ಮಾತಕ ಸಾಲುಗಳನ್ನು ನೋಡಿ ಫ್ಯಾನ್ಸ್‌ ಕೂಡ ಭಾವುಕರಾಗಿದ್ದಾರೆ.