Tag: anushree

  • ಡ್ರಗ್ಸ್ ಪ್ರಕರಣದ ಬಗ್ಗೆ ಅಂದು ಕಣ್ಣೀರಿಟ್ಟು ಅನುಶ್ರೀ ಹೇಳಿದ್ದೇನು?

    ಡ್ರಗ್ಸ್ ಪ್ರಕರಣದ ಬಗ್ಗೆ ಅಂದು ಕಣ್ಣೀರಿಟ್ಟು ಅನುಶ್ರೀ ಹೇಳಿದ್ದೇನು?

    ಬೆಂಗಳೂರು: ಸ್ಯಾಂಡಲ್‍ವುಡ್ ಆ್ಯಂಕರ್ ಕಮ್ ನಟಿ ಅನುಶ್ರೀ ಹೆಸರು ಇದೀಗ ಮತ್ತೆ ಡ್ರಗ್ಸ್ ಕೇಸ್‍ನಲ್ಲಿ ಕೇಳಿ ಬರುತ್ತಿದ್ದಂತೆ ಅವರು ಹಿಂದೆ ಹೇಳಿದ ಮಾತುಗಳು ಕೂಡ ವೈರಲ್ ಆಗುತ್ತಿದೆ. ಎಲ್ಲವನ್ನು ಬಿಟ್ಟು ಒಬ್ಬಳೇ 14 ವರ್ಷದ ಹಿಂದೆ ಬೆಂಗಳೂರಿಗೆ ಬಸ್ ಹತ್ತಿಕೊಂಡು ಬಂದು ನನ್ನ ನೆಲೆ ಕಂಡುಕೊಂಡೆ. 12 ವರ್ಷ ನಾನು ಹಾಸ್ಟೆಲ್‍ನಲ್ಲೇ ಇದ್ದೆ. ತುಂಬಾ ಕಷ್ಟಪಟ್ಟು ಇಲ್ಲಿವರೆಗೂ ಬಂದಿದ್ದೇನೆ ಎಂದು ಸಿಸಿಬಿ ವಿಚಾರಣೆಗೆ ನೋಟಿಸ್ ನೀಡಿದ ಬಳಿಕ ವೀಡಿಯೋ ಮೂಲಕ ಅನುಶ್ರೀ ಗಳಗಳನೇ ಅತ್ತಿದ್ದರು.

    ಈ ಸಂಬಂಧ ವೀಡಿಯೋ ಮಾಡಿರುವ ಅವರು, ಈ ವೀಡಿಯೋವನ್ನು ನಾನು ನನ್ನನ್ನು ಸಮರ್ಥಿಸಿಕೊಳ್ಳಲು ಅಥವಾ ಕರುಣೆಗೋಸ್ಕರ ಮಾಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಸುತ್ತಮುತ್ತ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳು ನನ್ನ ಬಗ್ಗೆ ಇರುವುದರಿಂದ ಈ ವೀಡಿಯೋ ಮಾಡುತ್ತಿದ್ದೇನೆ ಎಂದು ಹೇಳಿ ಗಳಗಳನೇ ಕಣ್ಣೀರಿಟ್ಟಿದ್ದರು. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ವೀಡಿಯೋದಲ್ಲಿ ಹೇಳಿದ್ದೇನು?
    20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನೀವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದರು.

    ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಯಾವುದೇ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದರು.

    ಸದ್ಯ ಡ್ರಗ್ಸ್ ಪ್ರಕರಣದ ಆರೋಪ ಎದುರಿಸುತ್ತಿರುವ ಕಿಶೋರ್ ಅಮನ್ ಶೆಟ್ಟಿ ಅವರು ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ ಎಂದು ಇಂದು ಸುದ್ದಿಯಾಗಿದೆ. ಈ ಬೆನ್ನಲ್ಲೇ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಿಶೋರ್, ಅನುಶ್ರೀ ವಿರುದ್ಧ ನಾನು ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಇದೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

  • Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    – ನಾನು ಎರಡು ಬಾರಿ ಡ್ರಗ್ಸ್ ಸೇವಿಸಿದ್ದೇನೆ
    – ಅನುಶ್ರೀ ಕಷ್ಟಪಟ್ಟು ಬಂದಿದ್ದು, ಗೌರವಿಸುತ್ತೇನೆ

    ಮಂಗಳೂರು: ನಿರೂಪಕಿ ಅನುಶ್ರೀ ವಿರುದ್ಧ ನಾನು ಹೇಳಿಕೆ ಕೊಟ್ಟಿದ್ದೇನೆ ಎಂಬುದು ಸುಳ್ಳು. ಅವರ ವಿರುದ್ಧ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಇದು ಸುಳ್ಳು ಆರೋಪ ಎಂದು ಡ್ರಗ್ಸ್ ಆರೋಪ ಎದುರಿಸುತ್ತಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಿಶೋರ್ ಅಮನ್ ಶೆಟ್ಟಿ, ನನಗೂ ಅನುಶ್ರೀಗೂ ಯಾವುದೇ ರೀತಿಯ ಸಂಪರ್ಕ ಇಲ್ಲ. ಕುಣಿಯೋಣ ಬಾರಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪರಿಚಯ ಆಗಿದೆ. 2009ರಲ್ಲಿ ಡ್ಯಾನ್ಸ್ ಗೆ ಕೊರಿಯೋಗ್ರಾಫ್ ಮಾಡಿದ್ದೇ ಅದೇ ಮೊದಲು ಮತ್ತು ಕೊನೆ. ಬಳಿಕ 4-5 ವರ್ಷಗಳ ಹಿಂದೆ ಮಂಗಳೂರಲ್ಲಿ ನಡೆದ ಡ್ಯಾನ್ಸ್ ಕ್ಲಾಸ್ ಕಾರ್ಯಕ್ರಮದಲ್ಲಿ ನಾವು ಭೇಟಿಯಾಗಿದ್ದೆವು. ಬಳಿಕ ನಾವಿಬ್ಬರು ಎಲ್ಲೂ ಭೇಟಿಯಾಗಿಲ್ಲ, ಫೋನ್ ಸಂಪರ್ಕವೂ ಇಲ್ಲ. ಅವರ ಫೋನ್ ನಂಬರ್ ಕೂಡ ನನ್ನ ಬಳಿ ಇಲ್ಲ. ಇದೆಲ್ಲವೂ ಸುಳ್ಳು ಆರೋಪ ಎಂದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಖಾಸಗಿ ವಾಹಿನಿಯ ಶೋ ಒಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ ನಾನು. ಆ ಬಳಿಕ ಯಾವುದೇ ಸಂಪರ್ಕವಿಲ್ಲ. ಎಲ್ಲವೂ ಸುಳ್ಳು ಸುದ್ದಿಗಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಅಂತ್ರದಲ್ಲಿ ಇದೆಲ್ಲ ಮಾಡಲು ಸಾಧ್ಯವೇ ಎಂದು ಕಿಶೋರ್ ಹೇಳಿದರು. ಇದನ್ನೂ ಓದಿ: ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ಅನುಶ್ರೀ ಬಗ್ಗೆ ಇಂತಹ ಹೇಳಿಕೆಗಳನ್ನು ನಾನು ಕೊಡಲೇ ಇಲ್ಲ. ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಇದು ಕಿಶೋರ್ ಹೇಳುತ್ತಿರುವ ಪಕ್ಕಾ ಮಾಹಿತಿ ಎಂದರು. ಇದನ್ನೂ ಓದಿ: ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ನನ್ನ ಲೈಫ್ ಹಾಳು ಮಾಡುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಹುಟ್ಟಿದಾಗಿನಿಂದ ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವೆರಿಗೆ ಒಳ್ಳೆಯದಾಗಲಿ ಎಂದು ಬೆಸರ ವ್ಯಕ್ತಪಡಿಸಿದ ಅವರು, ಪಾರ್ಟಿಗೆ ಹೋಗುತ್ತಿದ್ದೇನೆ, ಆದರೆ ಡ್ರಗ್ಸ್ ಪಾರ್ಟಿಗಳಿಗೆಲ್ಲ ಹೋಗಿಲ್ಲ. ಡ್ರಗ್ಸ್ ಸೇವನೆ ಎರಡು ಬಾರಿ ಮಾಡಿದ್ದೇನೆ. ಆದರೆ ಪೆಡ್ಲಿಂಗ್- ಗಿಡ್ಲಿಂಗ್ ಎಲ್ಲ ಮಾಡಿಲ್ಲ ಎಂದರು. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

  • ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಮಂಗಳೂರು: ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ. ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ. ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು ಎಂದು ಸ್ಫೋಟಕ ಹೇಳಿಕೆಯನ್ನು ಕಿಶೋರ್ ಅಮನ್ ಶೆಟ್ಟಿ ಮಂಗಳೂರು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಕಿಶೋರ್ ಅಮನ್ ಶೆಟ್ಟಿ ಆರೋಪ:
    ಬೆಂಗಳೂರಿನಲ್ಲಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ನಾವು ಡ್ರಗ್ಸ್ ಸೇವನೆ ಮಾಡುತ್ತಿದ್ದೆವು. ಅನುಶ್ರೀಗೆ ದಂಧೆಕೋರರ ಪರಿಚಯವಿದೆ. ಅವರು ನಮಗೆ ಡ್ರಗ್ಸ್ ತಂದು ಕೊಡುತ್ತಿದ್ದರು ಕಿಶೋರ್ ಅಮನ್ ಶೆಟ್ಟಿ ಅನುಶ್ರೀ ವಿರುದ್ಧ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಡ್ರಗ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಪೊಲೀಸರ ತನಿಖೆ ವೇಳೆ ತರುಣ್ ಅನುಶ್ರೀ ರಿಯಾಲಿಟಿ ಶೋ ಅಲ್ಲಿ ಗೆದ್ದಿದ್ದಕ್ಕೆ ಡ್ರಗ್ಸ್ ಪಾರ್ಟಿ ಮಾಡಿದ್ರು. ಖಾಸಗಿ ವಾಹಿನಿ ರಿಯಾಲಿಟಿ ಶೋವನ್ನು ಅನುಶ್ರೀ ಗೆದ್ದಿದ್ದರು. ಇದಕ್ಕಾಗಿ ಡ್ರಗ್ಸ್ ಪಾರ್ಟಿ ಮಾಡಿದ್ವಿ. ಡ್ರಗ್ಸ್ ಪಾರ್ಟಿ ಮಾಡೋದು ಅವರಿಗೂ ಕೂಡ ಗೊತ್ತಿತ್ತು. ಡ್ರಗ್ಸ್ ಪಾರ್ಟಿಯಲ್ಲಿ ನಾನು ನಮ್ಮ ಕೋರಿಯೋಗ್ರಾಫರ್ ಅನುಶ್ರೀ ಜೊತೆ ಸೇರಿ ಪಾರ್ಟಿಯನ್ನು ಮಾಡಿದ್ವಿ ಎಂದಿದ್ದರು.

    ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು. ಸ್ನೇಹಿತರ ಜೊತೆಗೆ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದರು. ರೂಂನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ಡ್ಯಾನ್ಸ್ ಪ್ರಾಕ್ಟೀಸ್‍ಗೆ ಬರುವಾಗ ಡ್ರಗ್ಸ್ ತರುತ್ತಿದ್ದರು. ಅವರೇ ಹೆಚ್ಚು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಅವರೇ ಡ್ರಗ್ಸ್ ತಂದು ನಮಗೂ ಕೊಡುತ್ತಿದ್ದರು ಎಂದು ಕಿಶೋರ್ ಹೇಳಿದ್ದು, ಇದರಿಂದ ಅನುಶ್ರೀಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

    ಡ್ರಗ್ಸ್ ಜಾಲ ಬೆಳಕಿಗೆ ಬಂದಿದ್ದು ಹೇಗೆ?
    ಬೆಂಗಳೂರು ಸಿಸಿಬಿ ಪೊಲೀಸರು ದಾಖಲಿಸಿದ್ದ ಡ್ರಗ್ಸ್ ಕೇಸ್ ನಿಂದ ಮಂಗಳೂರು ಡ್ರಗ್ಸ್ ಜಾಲ ಬೆಳಕಿಗೆ ಬಂದಿತ್ತು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಈ ಪ್ರಕರಣದಲ್ಲಿ ಸುಮಾರು 20ಕ್ಕೂ ಹೆಚ್ಚು ಜನರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಓರ್ವ ಆರೋಪಿ ಕೊಟ್ಟ ಸುಳಿವಿನಿಂದ ಮಂಗಳೂರು ಡ್ರಗ್ಸ್ ಜಾಲ ಬೆಳಕಿಗೆ ಬಂದಿತ್ತು. ಎ.15 ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ ಸಿಕ್ಕಿದ್ದ ಮಹತ್ವದ ಸುಳಿವಿನಿಂದಾಗಿ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ತರುಣ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಬೆಂಗಳೂರು ಸಿಸಿಬಿ ಇನ್ಸ್‍ಪೆಕ್ಟರ್ ರಿಂದ ಮಂಗಳೂರು ಸಿಸಿಬಿಗೆ ಮಾಹಿತಿ ರವಾನೆ ಮಾಡಿತ್ತು. ಜೊತೆಗೆ ಡ್ರಗ್ಸ್ ಜಾಲದ ಬಗ್ಗೆ ಕಣ್ಣಿಡುವಂತೆ ಮಂಗಳೂರಿನ ಪೊಲೀಸರಿಗೆ ತಿಳಿಸಿದ್ದರು.

    ಬೆಂಗಳೂರು ಸಿಸಿಬಿ ಪೊಲೀಸರ ಮಾಹಿತಿ ಮೇರೆಗೆ ಅಲರ್ಟ್ ಆದ ಮಂಗಳೂರು ಸಿಸಿಬಿ ತನಿಖೆ ನಡೆಸಿ ಡ್ಯಾನ್ಸರ್ ಕಿಶೋರ್ ಶೆಟ್ಟಿ ಮತ್ತು ತರುಣ್ ಬಂಧಿಸಿದ್ದರು. ಡ್ಯಾನ್ಸರ್ ಕಿಶೋರ್ ಶೆಟ್ಟಿ ಜೊತೆಗಿನ ಸಂಪರ್ಕದಿಂದ ಆನುಶ್ರೀಗೆ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರು, ಕಿಶೋರ್ ಶೆಟ್ಟಿ ಹೇಳಿಕೆ ಮತ್ತು ಸಿಡಿಆರ್ ಆಧರಿಸಿ ಸಿಸಿಬಿ ಅನುಶ್ರೀ ವಿಚಾರಣೆ ನಡೆಸಿತ್ತು. ಅಲ್ಲದೇ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ ಪ್ರತೀಕ್ ಶೆಟ್ಟಿ, ಡ್ಯಾನ್ಸರ್ ಕಿಶೋರ್ ಶೆಟ್ಟಿ ಮತ್ತು ತರುಣ್ ಮೂವರು ಗೆಳೆಯರಾಗಿದ್ದರು ಎಂಬ ಅಂಶ ಆಗ ಬಯಲಾಗಿತ್ತು. ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದೇನು..?
    ತರುಣ್ ಮತ್ತು ಕಿಶೋರ್ ಶೆಟ್ಟಿ ಪರಿಚಯ ಇದ್ದರೂ ಅದಕ್ಕಾಗಿ ಮಂಗಳೂರಿಗೆ ಬಂದಿದ್ದೇ. ಅವರಿಬ್ಬರೂ ನನಗೆ ಕೋರಿಯಾಗ್ರಾಫರ್ ಆಗಿದ್ರು. ನನಗೆ 12 ವರ್ಷಗಳ ಮುಂಚೆ ಸಂಪರ್ಕವಿತ್ತು, ಈಗ ಇಲ್ಲ. ನನ್ನ ಜೊತೆ ಡ್ಯಾನ್ಸ್ ಪಾಟ್ರ್ನರ್ ಮಾಡಿದ್ದಕ್ಕಾಗಿ ನಾನು ಬಂದಿದ್ದೇನೆ ಅಷ್ಟೇ ನಾನು ಯಾವುದೇ ಪಾರ್ಟಿಗಳನ್ನು ಕೂಡ ಮಾಡಿಲ್ಲ. ಡ್ರಗ್ಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

    ಒಟ್ಟಿನಲ್ಲಿ ಸದ್ಯ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯಿಂದ ಇದೀಗ ಅನುಶ್ರೀಗೆ ಕಂಟಕ ಶುರುವಾಗಿದ್ದು, ಸಾಕ್ಷ್ಯಧಾರ ಕೊರತೆ ಇದ್ದರೆ ಚಾರ್ಜ್ ಶೀಟ್ ಅಲ್ಲಿ ಅನುಶ್ರೀ ಹೆಸರು ಉಲ್ಲೇಖ ಆಗುತ್ತಿರಲಿಲ್ಲ. ಇದೀಗ ಪೊಲೀಸರ ತನಿಖೆ ದಾಖಲೆಗಳು ಮತ್ತು ಕಿಶೋರ್ ಶೆಟ್ಟಿ ಅಮನ್ ಶೆಟ್ಟಿ ಹೇಳಿಕೆ ಮೇಲೆ ಮಂಗಳೂರು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

  • ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಮಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಕಮ್ ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಮತ್ತೆ ಅಂಟಿಕೊಂಡಿದೆ. ಇದೀಗ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್  ಶೀಟ್‍ನಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಲಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ, ಅನುಶ್ರೀ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದರು. ಅಲ್ಲದೆ ರೂಂಗೆ ಕೂಡ ತರುತ್ತಿದ್ದರು ಎಂದು  ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

    ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಈ ಮೂಲಕ ಅನುಶ್ರೀ ಮತ್ತೆ ಡ್ರಗ್ಸ್ ಶಾಕ್ ಎದುರಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

  • ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

    ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸಿದ್ದ ಆ್ಯಂಕರ್ ಕಂ ನಟಿ ಅನುಶ್ರೀಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಮೂಲಕ ಅನುಶ್ರೀ ಬಗ್ಗೆ ಸಾಕಷ್ಟು ಅರೋಪ ಇದ್ದರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಮೂಡಿದೆ.

    ಈ ಹಿಂದೆ ಅನುಶ್ರೀ ಮಾಜಿ ಮುಖ್ಯಮಂತ್ರಿ, ಮಗ ಹಾಗೂ ಕೆಲ ಪ್ರಭಾವಿ ರಾಜಕರಾಣಿಗಳ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಇದೀಗ ಅನುಶ್ರೀಗೆ ಕ್ಲೀನ್ ಚಿಟ್ ನೀಡುವ ಸಾಧ್ಯತೆಗಳಿವೆ. ಹೀಗಾಗಿ ಇದೀಗ ಪ್ರಭಾವಿ ವ್ಯಕ್ತಿಗಳ ಪ್ರಭಾವ ವರ್ಕೌಟ ಆಯ್ತಾ?, ಒತ್ತಡದಿಂದ ಅನುಶ್ರೀ ಬಚಾವ್ ಆದ್ರಾ ಎಂಬ ಪ್ರಶ್ನೆ ಎದ್ದಿದೆ.

    ಅನುಶ್ರೀಗೆ ಡ್ರಗ್ಸ್ ಟೆಸ್ಟ್ ಮಾಡಿಸಲು ಸಾಕಷ್ಟು ಆಧಾರ ಸಂಗ್ರಹ ಮಾಡಲಾಗಿತ್ತು. ಆದರೂ ಅನುಶ್ರೀಗೆ ಡ್ರಗ್ ಟೆಸ್ಟ್ ನಡಿಯೋದು ಡೌಟ್ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಅನುಶ್ರೀ ಪ್ರಕರಣದಲ್ಲಿ ಸರ್ಕಾರದ ಮೇಲೆ ಪ್ರಭಾವಿಗಳ ಒತ್ತಡ ಹೆಚ್ಚಾಯ್ತಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.  ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿತ್ತು. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    ಪ್ರಭಾವಿಗಳ ಮೊಬೈಲ್ ಸಂಖ್ಯೆ ನೋಡಿ ಪೊಲೀಸರಿಗೆ ಶಾಕ್ ಆಗಿದ್ದಾರೆ. ಅನುಶ್ರೀ ಕರೆ ಮಾಡಿದ್ದ ‘ಆ’ ಮೂವರು ಸಾಮಾನ್ಯರಲ್ಲ, ಮೂರು ದೊಡ್ಡ ಪಕ್ಷಗಳ ನಾಯಕರು ಎನ್ನಲಾಗಿದ್ದು, ಒಬ್ಬರು ರಾಜ್ಯದ ಅತಿ ದೊಡ್ಡ ರಾಜಕಾರಣಿ, ಮತ್ತೊಬ್ಬರು ಕರಾವಳಿಯ ಅತಿ ಪ್ರಭಾವಿ ನಾಯಕರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

  • ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    – ಆರು ಮಂದಿ ಮಾಜಿ ಸಿಎಂಗಳಿದ್ದೇವೆ
    – ಸರ್ಕಾರ, ಗೃಹ ಸಚಿವರಿಗೆ ಪತ್ರ ಬರೆಯುವೆ

    ಬೆಂಗಳೂರು: ನಿರೂಪಕಿ, ನಟಿ ಅನುಶ್ರೀ ಪ್ರಕರಣದಲ್ಲಿ ‘ಮಾಜಿ ಸಿಎಂ’ ಹೆಸರು ಪ್ರಸ್ತಾಪ ಆಗಿದ್ದು, ಈ ಹಿನ್ನೆಲೆಯಲ್ಲಿ ಆ ಮಾಜಿ ಸಿಎಂ ಯಾರು ಎಂದು ಬಹಿರಂಗ ಪಡಿಸಿ ಎಂದು ಹೆಚ್. ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡ್ರಗ್ಸ್ ಕೇಸ್ ಪ್ರಕರಣ ಹಳ್ಳ ಹಿಡಿಯುತ್ತೆ ಎಂದು ನಾನು ಮೊದಲೇ ಹೇಳಿದ್ದೆ. ದಿನಕ್ಕೊಂದು ಕಪೋಲ ಕಲ್ಪಿತ ವರದಿಗಳು ಬರುತ್ತಿವೆ. ಇತ್ತೀಚೆಗೆ ಟಿವಿ ಆ್ಯಂಕರ್ ಅನುಶ್ರೀ ವಿಚಾರವಾಗಿ ಲಿಂಕ್ ಗಳು ಶುರುವಾಗಿವೆ. ಸಿಸಿಬಿ ಪೊಲೀಸರು ನೋಟಿಸ್ ನೀಡಿದ ತಕ್ಷಣ ರಾಜ್ಯದ ಮೂರು ರಾಜಕೀಯ ಪಕ್ಷಗಳ ಪ್ರಭಾವಿ ನಾಯಕರಿಗೆ ಒತ್ತಡ ತರಲು ಆ ಹೆಣ್ಣು ಮಗಳು ಫೋನ್ ಮೂಲಕ ಚರ್ಚೆ ಮಾಡಿದ್ದಾರೆ. ಸಿಸಿಬಿ ಅಧಿಕಾರಿಗಳಿಗೆ ನಂಬರ್ ಸಿಕ್ಕಿದೆ ಅಂತೆ. ಅವರ ಕಾಲ್ ಲಿಸ್ಟ್‌ನಲ್ಲಿ ಪ್ರಭಾವಿ ನಾಯಕರ ನಂಬರ್ ನೋಡಿ ಸಿಸಿಬಿ ಪೊಲೀಸ್ ಶಾಕ್ ಆಗಿದ್ದಾರಂತೆ ಎಂಬ ವರದಿಯನ್ನು ನಾನು ನೋಡಿದೆ ಎಂದರು.

    ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರೋದು ನಾನು. ನಾನು ಬದುಕಿದ್ದೇನೆ. ಮಾಜಿ ಮುಖ್ಯಮಂತ್ರಿಗಳಲ್ಲಿ ನಾನು, ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ, ಮೊಯ್ಲಿ, ಜಗದೀಶ್ ಶೆಟ್ಟರ್, ಡಿವಿಎಸ್ ಇನ್ನೂ ಇದ್ದೇವೆ. ಯಾವ ಅಧಿಕಾರಿ ಮಾಜಿ ಸಿಎಂ ಅಂತ ಮಾಹಿತಿ ಕೊಟ್ಟಿದ್ದಾರೆ. ಯಾವ ಆಧಾರದ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಸರು ಬಂದಿದೆ. ಯಾರು ಆ ಮಾಜಿ ಸಿಎಂ ಹೇಳಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

    ಆ ಹೆಣ್ಣು ಮಗಳು ಮಾಜಿ ಸಿಎಂ ಜೊತೆ ಮಾತಾಡಿದ್ದರೆ ಸತ್ಯ ಗೊತ್ತಾಗಲಿ. ಯಾರು ಆ ಮಾಜಿ ಸಿಎಂ ಅಂತ ಸಾರ್ವಜನಿಕವಾಗಿ ಮೊದಲು ಜನರ ಮುಂದೆ ಇಡಲಿ. ಆ ಮಾಜಿ ಸಿಎಂಗೆ ಶಿಕ್ಷೆ ಆಗಲಿ. ಯಾವ ಮಾಜಿ ಸಿಎಂ ಮಗನ ಹೆಸರು ಇದೆ ಗೊತ್ತಾಗಲಿ. ನಾನು ಯಾರು ಈ ವರದಿ ಕೊಟ್ಟಿದ್ದಾರೋ ಆ ವರದಿಗಾರರ ಬಳಿ ಬೇರೆ ಮೂಲದಿಂದ ತಿಳಿದುಕೊಂಡೆ. ಒಂದು ನಂಬರ್‌ನಿಂದ ಮಾಹಿತಿ ಕೊಟ್ಟಿದ್ದಾನೆ ಎಂದು ನನಗೆ ವರದಿಗಾರ ಫೋನ್ ನಂಬರ್ ಕೊಟ್ಟಿದ್ದಾರೆ. ಆ ನಂಬರ್ ಯಾರದು ಎಂದು ಪರಿಶೀಲಿಸಿದೆ. ಇದು ಶಿವಪ್ರಕಾಶ್ ನಾಯಕ್ ಬಳಸುತ್ತಿದ್ದ ನಂಬರ್ ಆಗಿದೆ. ಹೀಗಾಗಿ ಇದರ ಬಗ್ಗೆ ಅಧಿಕಾರಿ ಶಿವಪ್ರಕಾಶ್ ನಾಯಕ್ ಸತ್ಯ ಹೇಳಬೇಕು. ಮಾಹಿತಿ ಕೊಟ್ಟಿರೋದು ಸತ್ಯನಾ ಅನ್ನೋದನ್ನ ಹೇಳಲಿ ಎಂದರು.

    ಯಾವ ಮಾಜಿ ಸಿಎಂ ಅಂತ ಜನರು ತಿಳಿದುಕೊಳ್ಳಬೇಕು. ನಾನು ಸರ್ಕಾರಕ್ಕೆ, ಸಿಎಂಗೆ, ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ. ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಸರ್ಕಾರ ಹೊರ ತರಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

    ಯಾರು ಆ ಮಾಜಿ ಮುಖ್ಯಮಂತ್ರಿ ಎಂಬುದನ್ನು ಮಾಧ್ಯಮಗಳಿಗೆ ಕೊಟ್ಟವರು ಯಾರು?, ಮಾಜಿ ಸಿಎಂ ಮಗ ಎಂದೂ ವರದಿಗಳು ಬರುತ್ತಿವೆ. ಈ ರೀತಿಯ ಕಪೋಲಕಲ್ಪಿತ ವರದಿಗಳನ್ನು ಸುಮ್ಮನೆ ಬಿಡಬಾರದು. ನಾನಂತೂ ಇದನ್ನು ತನಿಖೆಗೆ ಒತ್ತಾಯ ಮಾಡುತ್ತೇನೆ. ನಾನು ಅಷ್ಟು ಸುಲಭಕ್ಕೆ ಬಿಡೋನು ಅಲ್ಲ. ಯಾರು ಒತ್ತಡ ಹಾಕಿದವರು ಅನ್ನೋದು ಗೊತ್ತಾಗಬೇಕು?. ತನಿಖೆ ಹಳ್ಳ ಹಿಡಿಸಲು, ದಾರಿ ತಪ್ಪಿಸಲು ಬಿಡಲ್ಲ. ಒತ್ತಡ ಹಾಕಿದವನು ಯಾವನೇ ಆಗಿರಲಿ, ಅವನನ್ನ ಒದ್ದು ಒಳಗೆ ಹಾಕಲಿ. ಮಂಗಳೂರು ಕಮಿಷನರ್‌ಗೂ ನಾನು ಕರೆ ಮಾಡಿ ಮಾತಾಡಿದ್ದೇನೆ ಎಂದು ಎಚ್‍ಡಿಕೆ ಹೇಳಿದರು.

  • ಮಂಗ್ಳೂರು ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಗೆ ತಡೆ

    ಮಂಗ್ಳೂರು ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಗೆ ತಡೆ

    ಮಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಿಢೀರ್ ವರ್ಗಾವಣೆ ಮಾಡಿದ್ದರು. ಅಲ್ಲದೆ ಅವರ ಜಾಗಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಆಗಿದ್ದ ಮಹೇಶ್ ಪ್ರಸಾದ್ ನೇಮಕ ಮಾಡಲಾಗಿತ್ತು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಯನ್ನು ತಡೆ ಹಿಡಿದಿದೆ.

    ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಡ್ರಗ್ಸ್ ಪ್ರಕರಣ ಸಂಬಂಧ ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು ಎನ್ನಲಾಗಿತ್ತು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿತ್ತು.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಹೇಳಿದ್ದಾರೆ.

    ಅಲ್ಲದೇ ಪ್ರಕರಣದಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು.

  • ಡ್ರಗ್ಸ್ ಪ್ರಕರಣದ ಚೈನ್ ಲಿಂಕ್ ದೊಡ್ಡದಿದೆ: ಮಂಗ್ಳೂರು ಪೊಲೀಸ್ ಕಮಿಷನರ್

    ಡ್ರಗ್ಸ್ ಪ್ರಕರಣದ ಚೈನ್ ಲಿಂಕ್ ದೊಡ್ಡದಿದೆ: ಮಂಗ್ಳೂರು ಪೊಲೀಸ್ ಕಮಿಷನರ್

    – ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದಿರೋದು ಬೇರೆ ಕಾರಣ

    ಮಂಗಳೂರು: ಡ್ರಗ್ಸ್ ಪ್ರಕರಣ ಚೈನ್ ಲಿಂಕ್ ದೊಡ್ಡದಿದೆ. ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಇರೋದು ಬೇರೆ ಕಾರಣ ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ ಎಂದಿದ್ದಾರೆ.

    ಪ್ರಕರಣದಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ

    ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    ಅನುಶ್ರೀ ಬಚಾವ್ ಮಾಡಲು ದೆಹಲಿಯಿಂದಲೂ ಪ್ರಭಾವ ಬೀರಲಾಗುತ್ತಿದೆ. ದೆಹಲಿಯಲ್ಲಿರುವ ಪ್ರಭಾವಿ ನಾಯಕರು ಕೂಡ ಪ್ರಕರಣದಿಂದ ಅನುಶ್ರೀಯನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಅನುಶ್ರೀ ದೂರವಾಣಿ ಕರೆಗಳ ಸಾಕ್ಷ್ಯ ಕೆದಕಿರುವ ಸಿಸಿಬಿಗೆ ಅಚ್ಚರಿಯಾಗಿದೆ. 6 ಸಿಮ್ ಬಳಸ್ತಿದ್ದ ಅನುಶ್ರೀ, ಸಿಸಿಬಿ ನೋಟಿಸ್ ಬೆನ್ನಲ್ಲೇ ನಾಲ್ವರು ಪ್ರಭಾವಿಗಳಿಗೆ ಫೋನ್ ಮಾಡಿದ್ದಾರೆ. ಮಾಜಿ ಸಿಎಂ, ಮಾಜಿ ಸಿಎಂ ಮಗ ಹಾಗೂ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದರು. 3 ಪಕ್ಷಗಳ ಮೂವರು ನಾಯಕರಿಗೆ ಕಾಲ್ ಮಾಡಿದ್ದರು ಎಂದು ದೂರವಾಣಿ ಕರೆ ದಾಖಲೆ ಪರಿಶೀಲನೆ ವೇಳೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

  • ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    – ದೆಹಲಿಯಿಂದ್ಲೂ ಪೊಲೀಸರಿಗೆ ಒತ್ತಡ
    – 6 ಸಿಮ್ ಬಳಸ್ತಿದ್ದ ನಿರೂಪಕಿ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ ಪೆಕ್ಟರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದ್ದು, ಇದರ ಹಿಂದೆ ಸ್ಥಳೀಯ ಶಾಸಕರೊಬ್ಬರ ಕೈವಾಡವಿದೆ ಎಂಬ ಮಾಹಿತಿ ಸಿಸಿಬಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ವರ್ಗಾವಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಇಷ್ಟು ಮಾತ್ರವಲ್ಲದೆ ಅನುಶ್ರೀ ಬಚಾವ್ ಮಾಡಲು ದೆಹಲಿಯಿಂದಲೂ ಪ್ರಭಾವ ಬೀರಲಾಗುತ್ತಿದೆ. ದೆಹಲಿಯಲ್ಲಿರುವ ಪ್ರಭಾವಿ ನಾಯಕರು ಕೂಡ ಪ್ರಕರಣದಿಂದ ಅನುಶ್ರೀಯನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ

    ಅನುಶ್ರೀ ದೂರವಾಣಿ ಕರೆಗಳ ಸಾಕ್ಷ್ಯ ಕೆದಕಿರುವ ಸಿಸಿಬಿಗೆ ಅಚ್ಚರಿಯಾಗಿದೆ. 6 ಸಿಮ್ ಬಳಸ್ತಿದ್ದ ಅನುಶ್ರೀ, ಸಿಸಿಬಿ ನೋಟಿಸ್ ಬೆನ್ನಲ್ಲೇ ನಾಲ್ವರು ಪ್ರಭಾವಿಗಳಿಗೆ ಫೋನ್ ಮಾಡಿದ್ದಾರೆ. ಮಾಜಿ ಸಿಎಂ, ಮಾಜಿ ಸಿಎಂ ಮಗ ಹಾಗೂ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದರು. 3 ಪಕ್ಷಗಳ ಮೂವರು ನಾಯಕರಿಗೆ ಕಾಲ್ ಮಾಡಿದ್ದರು ಎಂದು ದೂರವಾಣಿ ಕರೆ ದಾಖಲೆ ಪರಿಶೀಲನೆ ವೇಳೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

  • ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ

    ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ವಿಚಾರಣೆ ಎದುರಿಸಿರುವ ನಿರೂಪಕಿ, ನಟಿ ಅನುಶ್ರೀ, ತನಿಖೆ ಮೇಲೆ ಪ್ರಭಾವ ಬೀರಿದ್ದರಾ ಎಂಬ ಪ್ರಶ್ನೆ ಎದ್ದಿದೆ?

    ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ.

    ಪ್ರಭಾವಿಗಳ ಮೊಬೈಲ್ ಸಂಖ್ಯೆ ನೋಡಿ ಪೊಲೀಸರಿಗೆ ಶಾಕ್ ಆಗಿದ್ದಾರೆ. ಅನುಶ್ರೀ ಕರೆ ಮಾಡಿದ್ದ ‘ಆ’ ಮೂವರು ಸಾಮಾನ್ಯರಲ್ಲ, ಮೂರು ದೊಡ್ಡ ಪಕ್ಷಗಳ ನಾಯಕರು ಎನ್ನಲಾಗಿದ್ದು, ಒಬ್ಬರು ರಾಜ್ಯದ ಅತಿ ದೊಡ್ಡ ರಾಜಕಾರಣಿ, ಮತ್ತೊಬ್ಬರು ಕರಾವಳಿಯ ಅತಿ ಪ್ರಭಾವಿ ನಾಯಕರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಇದನ್ನೂ ಓದಿ: ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಪ್ರಕರಣದ ಕುರಿತು ಇಂದು ಸ್ಪಷ್ಟನೆ ನೀಡಿ ವಿಡಿಯೋ ಮಾಡಿದ್ದ ಅನುಶ್ರೀ, ಈ ವೀಡಿಯೋವನ್ನು ನಾನು ನನ್ನನ್ನು ಸಮರ್ಥಿಸಿಕೊಳ್ಳಲು ಅಥವಾ ಕರುಣೆಗೋಸ್ಕರ ಮಾಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಸುತ್ತಮುತ್ತ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳು ನನ್ನ ಬಗ್ಗೆ ಇರುವುದರಿಂದ ಈ ವೀಡಿಯೋ ಮಾಡುತ್ತಿದ್ದೇನೆ ಎಂದು ಹೇಳಿ ಗಳಗಳನೇ ಕಣ್ಣೀರಿಟ್ಟಿದ್ದರು. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ