Tag: anushree

  • ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧದ ಅಭಿಪ್ರಾಯಗಳಿಂದ ಮನನೊಂದು ವೀಡಿಯೋ ಮಾಡಿ ಕಣ್ಣೀರು ಹಾಕಿದ ನಿರೂಪಕಿ, ನಟಿ ಅನುಶ್ರೀಗೆ ಕಿರುತೆರೆ ನಟಿ ಗೀತಾಭಾರತಿ ಭಟ್ ಧೈರ್ಯ ತುಂಬಿದ್ದಾರೆ.

    ಅನುಶ್ರೀ ಅವರು ಇನ್ಸ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋಗೆ ಕಮೆಂಟ್ ಮಾಡಿರುವ ‘ಬ್ರಹ್ಮಗಂಟು’ ನಟಿ, ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಧೈರ್ಯವಾಗಿದ್ದು, ಎದುರಿಸಿ. ನನ್ನ ಪ್ರೀತಿ ಹಾಗೂ ಧೈರ್ಯ ಸದಾ ನಿಮ್ಮೊಂದಿಗಿರುತ್ತೆ ಎಂದು ಸಾಂತ್ವನ ನೀಡಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಭಾರತಿ ಭಟ್ ಕೂಡ ಈ ಹಿಂದೆ ವಿಚಾರಣೆ ಎದುರಿಸಿದ್ದರು. ಅಲ್ಲದೆ ಮುಂದೆ ವಿಚಾರಣೆಗೆ ಕರೆದರೂ ಹಾಜರಾಗುವುದಾಗಿ ತಿಳಿಸಿದ್ದರು.

    ವೀಡಿಯೋದಲ್ಲಿ ಅನುಶ್ರೀ ಹೇಳಿದ್ದೇನು?
    20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನಿವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

    ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದಾರೆ.

  • 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಬೆಂಗಳೂರು: ಎಲ್ಲವನ್ನು ಬಿಟ್ಟು ಒಬ್ಬಳೇ 14 ವರ್ಷದ ಹಿಂದೆ ಬೆಂಗಳೂರಿಗೆ ಬಸ್ ಹತ್ತಿಕೊಂಡು ಬಂದು ನನ್ನ ನೆಲೆ ಕಂಡುಕೊಂಡೆ. 12 ವರ್ಷ ನಾನು ಹಾಸ್ಟೆಲ್‍ನಲ್ಲೇ ಇದ್ದೆ. ತುಂಬಾ ಕಷ್ಟಪಟ್ಟು ಇಲ್ಲಿವರೆಗೂ ಬಂದಿದ್ದೇನೆ ಎಂದು ನಿರೂಪಕಿ ಅನುಶ್ರೀ ಗಳಗಳನೇ ಅತ್ತಿದ್ದಾರೆ. ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಪಬ್ಲಿಕ್ ಟಿವಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಅನುಶ್ರೀ, ಕಳೆದ ಒಂದು ವಾರದಿಂದ ನನ್ನ ಬಗ್ಗೆ ಕೆಲವು ಅಭಿಪ್ರಾಯಗಳು, ಬೆಳವಣಿಗೆಗಳು ಸುತ್ತಮುತ್ತ ನಡೆಯುತ್ತಿತ್ತು. ಅಲ್ಲದೇ ಸಿಸಿಬಿ ವಿಚಾರಣೆ ಆದ ಮೇಲೂ ನನ್ನ ಬಗ್ಗೆ ಕೆಲ ಅಭಿಪ್ರಾಯಗಳು ಕೇಳಿ ಬರುತ್ತಿತ್ತು. ಹೀಗಾಗಿ ಇದಕ್ಕೆ ಉತ್ತರ ಕೊಡಬೇಕು ಎಂದು ಲೈವ್ ಬಂದು ಮಾತನಾಡಿದೆ. ಅನೇಕರು ಕಾಲ್ ಮಾಡಿ, ಮೆಸೇಜ್ ಮೂಲಕ ಅನುಶ್ರೀ ಅವರೇ ನೀವು ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳುತ್ತಿದ್ದರು. ಅವರಿಗೆ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿತ್ತು ಎಂದು ಹೇಳಿದರು.

    ನಾನು, ನನ್ನ ತಾಯಿ ಮತ್ತು ಸಂಬಂಧಿಕರು ಒಂದು ವಾರದಿಂದ ಟೆನ್ಶನ್ ತೆಗೆದುಕೊಂಡಿದ್ದೀವಿ. ಈ ರೀತಿ ನೋಟಿಸ್ ಬರುತ್ತೆ ಎಂದು ನಾವ್ಯಾರು ನಿರೀಕ್ಷಿಸಿರಲಿಲ್ಲ. ಆದರೆ ಬಂದಾಗ ಎಲ್ಲರಿಗೂ ಶಾಕ್ ಆಯಿತು. ಆದರೂ ನಾನೇನು ತಪ್ಪು ಮಾಡಿಲ್ಲ, ವಿಚಾರಣೆ ಕರೆದಿದ್ದಾರೆ ಅಷ್ಟೆ ಎಂದು ಹೋಗಿ ಮಾಹಿತಿ ಕೊಟ್ಟು ಬಂದೆ. ನನಗೆ ಅವರಿಬ್ಬರ ಪರಿಚಯವಿತ್ತು ಸಿಸಿಬಿ, ಮಾಧ್ಯಮಗಳಿಗೂ ಹೇಳಿದ್ದೇನೆ ಎಂದು ಅನುಶ್ರೀ ಹೇಳಿದರು.

    ಎಲ್ಲವನ್ನು ಬಿಟ್ಟು ಒಬ್ಬಳೇ 14 ವರ್ಷದ ಹಿಂದೆ ಬೆಂಗಳೂರಿಗೆ ಬಸ್ ಹತ್ತಿಕೊಂಡು ಬಂದು ನನ್ನ ನೆಲೆ ಕಂಡುಕೊಂಡೆ. 12 ವರ್ಷ ನಾನು ಹಾಸ್ಟೆಲ್‍ನಲ್ಲೇ ಇದ್ದೆ. ತುಂಬಾ ಕಷ್ಟಪಟ್ಟು ಇಲ್ಲಿವರೆಗೂ ಬಂದಿದ್ದೇನೆ. ಆದರೆ ಪೊಲೀಸ್ ಎಂದಾಗ ಸಹಜವಾಗಿ ಯಾವ ಹುಡುಗಿಗಾದರೂ ಭಯವಾಗುತ್ತದೆ. ನನಗೂ ಅದೇ ರೀತಿ ಭಯ ಆಯಿತು. ಆದರೆ ನನ್ನ ತಾಯಿ ನನಗೆ ಧೈರ್ಯ ಕೊಟ್ಟರು. ಹೀಗಾಗಿ ವಿಚಾರಣೆಗೆ ಹೋಗಿದ್ದೆ ಎಂದರು.

    ನನ್ನ ತಾಯಿಯೇ ನನಗೆ ಶಕ್ತಿ. ನಾವು ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ, ನಾನು ಮಾಡುವ ಕೆಲಸಕ್ಕೆ ಯಾವತ್ತೂ ಮೋಸ ಮಾಡಿಲ್ಲ. ಹೀಗಾಗಿ ನಾನ್ಯಾಕೆ ಭಯ ಪಡಲಿ ಎಂದು ಧೈರ್ಯವಾಗಿದ್ದೇನೆ. ಆದರೆ ಕೆಲ ಅಭಿಪ್ರಾಯಗಳಿಂದ ಮಾನಸಿಕವಾಗಿ ತುಂಬಾ ಕುಗ್ಗೋದೆ ಎಂದು ಅನುಶ್ರೀ ಗಳಗಳನೇ ಕಣ್ಣೀರು ಹಾಕಿದರು.

    ನೋಟಿಸ್ ಬಂದ ವೇಳೆ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮೆಸೇಜ್, ಫೋನ್ ಮೂಲಕ ಧೈರ್ಯ ಹೇಳಿದ್ದರು. ನನಗೆ ಪರಿಚಯ ಇಲ್ಲದವರು, ಅಜ್ಜಿ-ಅಜ್ಜಂದಿರು ಕೂಡ ನೀನು ಭಯಪಡಬೇಡ, ನಿನಗೆ ಏನು ಆಗಲ್ಲ ಎಂದು ಸಮಾಧನಾ ಮಾಡಿದರು. ಅಲ್ಲದೇ ದೇವರಲ್ಲಿ ನನಗಾಗಿ ಹರಕೆ ಕಟ್ಟಿಕೊಂಡು ಪೂಜೆ ಮಾಡಿದ್ದಾರೆ ಎಂದು ಅನುಶ್ರೀ ಕಣ್ಣೀರು ಹಾಕಿದರು.

  • ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    – ನನ್ನ ಅಪರಾಧಿಯಾಗಿ ಬಿಂಬಿಸಿದ್ದು ನೋವಾಗಿದೆ
    – 1 ವಾರದಿಂದ ನೆಮ್ಮದಿ ಹಾಳಾಗಿದೆ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ವಿಚಾರಣೆ ಎದುರಿಸಿರುವ ನಿರೂಪಕಿ, ನಟಿ ಅನುಶ್ರೀ ಇಂದು ಕಣ್ಣೀರು ಹಾಕಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿರುವ ಅವರು, ಈ ವೀಡಿಯೋವನ್ನು ನಾನು ನನ್ನನ್ನು ಸಮರ್ಥಿಸಿಕೊಳ್ಳಲು ಅಥವಾ ಕರುಣೆಗೋಸ್ಕರ ಮಾಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಸುತ್ತಮುತ್ತ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳು ನನ್ನ ಬಗ್ಗೆ ಇರುವುದರಿಂದ ಈ ವೀಡಿಯೋ ಮಾಡುತ್ತಿದ್ದೇನೆ ಎಂದು ಹೇಳಿ ಗಳಗಳನೇ ಕಣ್ಣೀರಿಟ್ಟಿದ್ದಾರೆ.

    ವೀಡಿಯೋದಲ್ಲಿ ಹೇಳಿದ್ದೇನು?
    20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನೀವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

    ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

    ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಯಾವುದೇ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದಾರೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗೇ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲುಪಾಲಾಗಿದ್ದಾರೆ. ಈ ಮಧ್ಯೆ ಮಂಗೂರಿನಲ್ಲಿ ಡ್ಯಾನ್ಸರ್ ಕಿಶೋರ್ ಹಾಗೂ ತರುಣ್, ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

    https://www.instagram.com/tv/CF0503kHBr2/?igshid=14r1wus7ksbwq

  • ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಮಂಡ್ಯ: ಸ್ಯಾಂಡಲ್‍ವುಡ್ ನಿರೂಪಕಿ ಕಂ ನಟಿ ಅನುಶ್ರೀ ಅವರು ಇಂದು ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಭೇಟಿ ನೀಡಿದ್ದಾರೆ.

    ಅನುಶ್ರೀ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‍ನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಿ ಸನ್ನಿಧಾನಕ್ಕೆ ಬಂದು ಹರಕೆ ಹೊತ್ತು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅನುಶ್ರೀಗೆ ಕುಟುಂಬಸ್ಥರು ಹಾಗೂ ಸ್ನೇಹಿತರು ಸಾಥ್ ನೀಡಿದ್ದಾರೆ.

    ಡ್ರಗ್ಸ್ ಕೇಸ್‍ನಲ್ಲಿ ಇತ್ತೀಚೆಗೆ ಅನುಶ್ರೀ ಸಿಸಿಬಿ ವಿಚಾರಣೆ ಎದುರಿಸಿದ್ದರು. ಹೀಗಾಗಿ ಡ್ರಗ್ಸ್ ಸಂಕಷ್ಟದಿಂದ ಪಾರು ಮಾಡುವಂತೆ ದೇವಿಯ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

    ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಂಗಳೂರಲ್ಲಿ ಡ್ಯಾನ್ಸರ್ ಕಿಶೋರ್, ತರುಣ್ ಹಾಗೂ ನೌಶೀನ್ ನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಡ್ಯಾನ್ಸರ್ ಕಿಶೋರ್ ಅನುಶ್ರೀ ಹೆಸರನ್ನು ಹೇಳಿದ್ದ ಎನ್ನಲಾಗಿದೆ. ಹೀಗಾಗಿ ಮಂಗಳೂರು ಪೊಲೀಸರು ಅನುಶ್ರೀಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅನುಶ್ರೀ ಮಂಗಳೂರಿಗೆ ಹೋಗಿ ವಿಚಾರಣೆಗೆ ಹಾಜರಾಗಿದ್ದರು.

    ಅನುಶ್ರೀ ವಿಚಾರಣೆ:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಿಶೋರ್, ತರುಣ್ ಹಾಗೂ ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

    ಮತ್ತೋರ್ವ ಕೋರಿಯೋಗ್ರಾಫರ್ ಅರೆಸ್ಟ್:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಕೋರಿಯೋಗ್ರಾಫರ್ನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಸ್ಯಾಮ್ ಫರ್ನಾಂಡೀಸ್ ನನ್ನು ಅರೆಸ್ಟ್ ಮಾಡಲಾಗಿದ್ದು, ಈತ ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಅನುಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನಟ-ನಟಿಯರ ಹೆಸರುಗಳನ್ನು ಹೇಳಿದ್ದಾನೆ. ಬೆಂಗಳೂರು, ಮಂಗಳೂರಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಕಿರುತೆರೆ ಕಲಾವಿದರು, ಡ್ಯಾನ್ಸರ್ ಗಳು ಭಾಗಿಯಾಗಿದ್ರು. ವಿಶೇಷವಾಗಿ ಕಿರುತೆರೆ ಸ್ಟಾರ್ ಗಳು ಪಾರ್ಟಿಯಲ್ಲಿ ಭಾಗಿರುವುದಾಗಿ ಹೇಳಿದ್ದಾನೆ. ಸದ್ಯ ಸ್ಯಾಮ್ ಹೇಳಿಕೆಯಿಂದ ಕಿರುತೆರೆ, ರಿಯಾಲಿಟಿ ಶೋಗಳ ಸ್ಟಾರ್ ಗಳಿಗೆ ಢವ ಢವ ಶುರುವಾಗಿದೆ.

  • ಡ್ರಗ್ಸ್ ಕೇಸ್ ಪ್ರಕರಣ – ಡ್ಯಾನ್ಸರ್ ಕಿಶೋರ್ ಕೇಸ್ ಕೈ ಬಿಡುವಂತೆ ಕರಾವಳಿ ಶಾಸಕನಿಂದ ಒತ್ತಡ

    ಡ್ರಗ್ಸ್ ಕೇಸ್ ಪ್ರಕರಣ – ಡ್ಯಾನ್ಸರ್ ಕಿಶೋರ್ ಕೇಸ್ ಕೈ ಬಿಡುವಂತೆ ಕರಾವಳಿ ಶಾಸಕನಿಂದ ಒತ್ತಡ

    ಮಂಗಳೂರು: ಆ್ಯಂಕರ್ ಕಂ ನಟಿ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಅನುಶ್ರೀ ಹೆಸರು ಹೇಳಿದ್ದ ಡ್ಯಾನ್ಸರ್ ಕಿಶೋರ್ ರಕ್ಷಣೆಗೆ ಭಾರೀ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಡ್ಯಾನ್ಸರ್ ಕಿಶೋರ್ ಅರೆಸ್ಟ್ ಆದ ದಿನವೇ ದೊಡ್ಡ ಲಾಬಿ ನಡೆದಿತ್ತು. ಪ್ರಕರಣದಿಂದ ಕಿಶೋರ್‍ನನ್ನು ಕೈ ಬಿಡುವಂತೆ ಕರಾವಳಿಯ ಶಾಸಕರೊಬ್ಬರು ಒತ್ತಡ ಹೇರುತ್ತಿದ್ದಾರೆ. ಶಾಸಕನ ಒತ್ತಡ ಸಫಲ ಆಗಿದ್ದರೆ ಅನುಶ್ರೀ ಸೇರಿದಂತೆ ಎಲ್ಲರು ಬಚಾವ್ ಆಗುತ್ತಿದ್ದರು ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

    ಡ್ರಗ್ ಪೆಡ್ಲರ್ ಗೂ ಶಾಸಕನಿಗೂ ಇರೋ ಸಂಬಂಧ ಏನು..?
    ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯೊಬ್ಬರು ಆ ಶಾಸಕನಿಗೆ ಆಪ್ತರಾಗಿದ್ದಾರೆ. ಆ ಪ್ರತಿಷ್ಠಿತ ವ್ಯಕ್ತಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ರೂವಾರಿ. ಕಿಶೋರ್ ಕೂಡ ಆತನ ಅಣತಿಯಂತೆ ಬುಕ್ಕಿಗಳಿಗೆ ಡ್ರಗ್ಸ್ ಪಾರ್ಟಿ ಕೊಟ್ಟಿದ್ದ. ಆ ಪ್ರತಿಷ್ಠಿತ ವ್ಯಕ್ತಿ ರಾಜಕೀಯ ಒತ್ತಡ ತಂದು ಕಿಶೋರ್ ನನ್ನು ಪ್ರಕರಣದಿಂದ ಕೈ ಬಿಡುವ ಯೋಜನೆ ಹಾಕಿದ್ದ. ಆದರೆ ಆ ಯೋಜನೆಯನ್ನು ಸಿಸಿಬಿ ಪೊಲೀಸರು ಸಂಪೂರ್ಣ ಪ್ಲಾಪ್ ಮಾಡಿದ್ದಾರೆ ಎನ್ನಲಾಗಿದೆ.

    ಮತ್ತೋರ್ವ ಕೋರಿಯೋಗ್ರಾಫರ್ ಅರೆಸ್ಟ್:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಕೋರಿಯೋಗ್ರಾಫರ್‍ನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಸ್ಯಾಮ್ ಫರ್ನಾಂಡೀಸ್ ನನ್ನು ಅರೆಸ್ಟ್ ಮಾಡಲಾಗಿದ್ದು, ಈತ ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಅನುಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನಟ-ನಟಿಯರ ಹೆಸರುಗಳನ್ನು ಹೇಳಿದ್ದಾನೆ. ಬೆಂಗಳೂರು, ಮಂಗಳೂರಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಕಿರುತೆರೆ ಕಲಾವಿದರು, ಡ್ಯಾನ್ಸರ್ ಗಳು ಭಾಗಿಯಾಗಿದ್ರು. ವಿಶೇಷವಾಗಿ ಕಿರುತೆರೆ ಸ್ಟಾರ್ ಗಳು ಪಾರ್ಟಿಯಲ್ಲಿ ಭಾಗಿರುವುದಾಗಿ ಹೇಳಿದ್ದಾನೆ. ಸದ್ಯ ಸ್ಯಾಮ್ ಹೇಳಿಕೆಯಿಂದ ಕಿರುತೆರೆ, ರಿಯಾಲಿಟಿ ಶೋಗಳ ಸ್ಟಾರ್ ಗಳಿಗೆ ಢವ ಢವ ಶುರುವಾಗಿದೆ.

    ಅನುಶ್ರೀ ವಿಚಾರಣೆ:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಿಶೋರ್, ತರುಣ್ ಹಾಗೂ ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್‍ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

  • ಸಿಸಿಬಿ ತನಿಖೆ ಬಳಿಕ ಅನುಶ್ರೀಗೆ ಕಾಡ್ತಿದೆ ಡೋಪಿಂಗ್ ಟೆಸ್ಟ್ ಭಯ

    ಸಿಸಿಬಿ ತನಿಖೆ ಬಳಿಕ ಅನುಶ್ರೀಗೆ ಕಾಡ್ತಿದೆ ಡೋಪಿಂಗ್ ಟೆಸ್ಟ್ ಭಯ

    ಮಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ದಿನದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ನಟಿ ಕಂ ಆ್ಯಂಕರ್ ಅನುಶ್ರೀ ಅವರನ್ನು ಸಿಸಿಬಿ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ನಿರೂಪಕಿಗೆ ಮತ್ತೊಂದು ಭಯ ಶುರುವಾಗಿದೆ.

    ಹೌದು. ಸಿಸಿಬಿ ಬಳಿಕ ಇದೀಗ ಅನುಶ್ರೀಗೆ ಡೋಪಿಂಗ್ ಟೆಸ್ಟ್ ಭಯ ಕಾಡುತ್ತಿದೆ. ಸಿಸಿಬಿ ತನಿಖೆ ಮುಗಿದ ಬಳಿಕ ಅನುಶ್ರೀ ಖುಷಿಯಾಗಿದ್ದರು. ಆದರೆ ಕಮಿಷನರ್ ಹೇಳಿಕೆ ಬಳಿಕ ನಟಿ ಚಿಂತಕ್ರಾಂತರಾಗಿದ್ದಾರೆ. ಇದನ್ನೂ ಓದಿ: ಡ್ರಗ್ಸ್‌ ನಟಿಯರಿಗೆ ಹೇರ್ ಫೋಲಿಕಲ್ ಟೆಸ್ಟ್‌ – ಏನಿದು ಟೆಸ್ಟ್‌? ನಿಖರ ಹೇಗೆ?

    ಡ್ರಗ್ಸ್ ಟೆಸ್ಟ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ. ಇದರಿಂದಾಗಿ ಅನುಶ್ರೀಗೆ ಚಿಂತೆ ಕಾಡಲು ಆರಂಭವಾಗಿದೆ. ಈ ಮಧ್ಯೆ ಡೋಪಿಂಗ್ ಟೆಸ್ಟ್ ಮಾಡಿಸದಂತೆ ಪ್ರಭಾವಿಯೊಬ್ಬರು ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಇದನ್ನೂ ಓದಿ: ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ: ವಿಚಾರಣೆ ಬಳಿಕ ಅನುಶ್ರೀ ಸ್ಪಷ್ಟನೆ

    ಇತ್ತ ಡ್ರಗ್ಸ್ ಪ್ರಕರಣ ಸಂಬಂಧ ಓರ್ವ ಪ್ರಮುಖ ಡ್ರಗ್ ಪೆಡ್ಲರ್‍ನನ್ನು ಸಿಸಿಬಿ ಬಂಧಿಸಿದೆ. ಮಹಮ್ಮದ್ ಶಾಕೀರ್ ಬಂಧಿತ ಆರೋಪಿಯಾಗಿದ್ದು, ಡ್ಯಾನ್ಸರ್ ಕಿಶೋರ್, ಕೋರಿಯೋಗ್ರಫರ್ ತರುಣ್ ರಾಜ್ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿದೆ. ಈ ಎಲ್ಲರಿಗೂ ಶಾಕೀರ್ ಡ್ರಗ್ಸ್ ಲಿಂಕ್ ಕೊಡಿಸಿದ್ದ ಎಂಬ ಮಾಹಿತಿ ದೊರೆತಿದ್ದು, ಶಾಕೀರ್ ವಿಚಾರಣೆ ವೇಳೆ ಹಲವು ಹೆಸರುಗಳ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

  • ನಿನ್ನೆ ಚಕ್ಕರ್, ಇಂದು ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರ್

    ನಿನ್ನೆ ಚಕ್ಕರ್, ಇಂದು ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರ್

    ಮಂಗಳೂರು: ಡ್ರಗ್ಸ್ ಕೇಸ್‍ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿದ್ದ ಹಿನ್ನೆಲೆಯಲ್ಲಿ ಇಂದು ನಿರೂಪಕಿ ಅನುಶ್ರೀ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಸಿಸಿಬಿ ನೋಟಿಸ್ – ಮಾಧ್ಯಮಗಳಲ್ಲಿ ಅನುಶ್ರೀ ಮನವಿ

    ಮಂಗಳೂರಿನ ಪಣಂಬೂರು ಠಾಣೆಯಲ್ಲಿ ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಹೋಗಿದ್ದರು. ಆದರೆ ಮಂಗಳೂರು ತಲುಪುತ್ತಿದ್ದಂತೆ ಅನುಶ್ರೀ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಪಣಂಬೂರು ಠಾಣೆಗೆ ಆಗಮಿಸಿದ್ದಾರೆ. ಸದ್ಯಕ್ಕೆ ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಪೊಲೀಸರಿಂದ ಅನುಶ್ರೀಯ ವಿಚಾರಣೆ ಆರಂಭಗೊಂಡಿದೆ.

    ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿತ್ತು. ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೋಲಿಸರಿಗೆ ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. ಆದರೆ ನಿನ್ನೆ ಅನುಶ್ರಿ ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ರಾತ್ರಿ ಸೋಷಿಯಲ್ ಮೀಡಿಯಾ ಫೇಸ್‍ಬುಕ್‍ನಲ್ಲಿ ಪತ್ರಿಕಾ ಪ್ರಕಟಣೆ ಹಾಕಿದ್ದ ಅನುಶ್ರೀ ಶುಕ್ರವಾರ ಬೆಳಗ್ಗೆ ಮಂಗಳೂರು ಸಿಸಿಬಿ ಪೋಲಿಸರ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಇಂದು ಮುಂಜಾನೆ 5ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದರು. ಆದರೆ ಅನುಶ್ರೀ ಮಾತ್ರ ವಿಚಾರಣೆಗೆ ಹಾಜರಾಗಿಲ್ಲ.

    ಇತ್ತ ಅನುಶ್ರೀ ವಿಚಾರಣೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಕ್ರೈಂ ಠಾಣೆ ಪೊಲೀಸರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. 15 ಜನ ಅಧಿಕಾರಿಗಳು, ಸಿಬ್ಬಂದಿಯಿಂದ ವಿಚಾರಣೆಗೆ ತಯಾರಿ ಮಾಡಲಾಗಿತ್ತು. ಮೊದಲ ಹಂತದಲ್ಲಿ ಆರೋಪಿಗಳಾದ ಕಿಶೋರ್ ಅಮನ್, ತರುಣ್ ರಾಜ್ ಜೊತೆಗಿನ ಸಂಬಂಧ ಬಗ್ಗೆ ಪ್ರಶ್ನಿಸಿ, ಎರಡನೇ ಹಂತದಲ್ಲಿ ಸಾಕ್ಷ್ಯ ತೋರಿಸಿ ಅನುಶ್ರೀಗೆ ಪ್ರಶ್ನೆ ಮಾಡಲು ತಯಾರಿ ನಡೆಸಿದ್ದರು. ಆದರೆ ಅನುಶ್ರೀ ನಿನ್ನೆ ವಿಚಾರಣೆಗೆ ಹಾಜರಾಗಿಲ್ಲ.

    ಈಗಾಗಲೇ ಬಂಧನವಾಗಿರುವ ಕಿಶೋರ್, ತರುಣ್, ನೌಶೀನ್ ಮಂಗಳೂರಿನ ಪಾಂಡೇಶ್ವರದಲ್ಲಿನ ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಸಾಕಷ್ಟು ಮಾಹಿತಿ ಸಂಗ್ರಹಿಸಿದ ಪೊಲೀಸರು ಶುಕ್ರವಾರ ಸಂಜೆ ವೇಳೆಗೆ ಕಿಶೋರ್ ಹಾಗೂ ನೌಶೀನ್‍ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋರ್ಟಿಗೆ ಹಾಜರುಪಡಿಸುವ ಮುನ್ನ ಆರೋಪಿಗಳಿಗೆ ಡ್ರಿಲ್ ಮಾಡಲಾಗಿದ್ದು, ಆರೋಪಿ ತರುಣ್ ಅನುಶ್ರೀ ಬಗೆಗಿನ ಮಹತ್ವದ ಸಂಗತಿಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

    ಬಂಧನ ಮಾಡಿದ ಬಳಿಕ ತರುಣ್, ಅನುಶ್ರೀ ಕುಡಿತ್ತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಹೀಗಾಗಿ ತರುಣ್ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿರುವ ಈ ಎಲ್ಲಾ ಮಾಹಿತಿಗಳು ಅನುಶ್ರೀಗೆ ಕಂಟಕವಾಗುವ ಸಾಧ್ಯತೆಗಳಿವೆ.

  • ಮಂಗಳೂರಿಗೆ ಬಂದ್ರೂ ಸಿಸಿಬಿ ವಿಚಾರಣೆಗೆ ಹಾಜರಾಗದ ಅನುಶ್ರೀ

    ಮಂಗಳೂರಿಗೆ ಬಂದ್ರೂ ಸಿಸಿಬಿ ವಿಚಾರಣೆಗೆ ಹಾಜರಾಗದ ಅನುಶ್ರೀ

    ಮಂಗಳೂರು: ನಿರೂಪಕಿ ಹಾಗೂ ನಟಿ ಅನುಶ್ರೀ ಹೆಗಲಿಗೆ ಅಂಟಿಕೊಂಡ ಡ್ರಗ್ಸ್ ಕೇಸ್ ನ ವಿಚಾರ ಮುಂದುವರಿದಿದೆ. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದ ಅನುಶ್ರೀ ಮಾತ್ರ ವಿಚಾರಣೆಗೆ ಗೈರಾಗಿದ್ದಾರೆ.

    ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. ಆದರೆ ಇಂದು ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.

    ನಿನ್ನೆ ರಾತ್ರಿ ಸೋಷಿಯಲ್ ಮೀಡಿಯಾ ಫೇಸ್‍ಬುಕ್‍ನಲ್ಲಿ ಪತ್ರಿಕಾ ಪ್ರಕಟಣೆ ಹಾಕಿದ್ದ ಅನುಶ್ರೀ ಇಂದು ಬೆಳಗ್ಗೆ ಮಂಗಳೂರು ಸಿಸಿಬಿ ಪೋಲಿಸರ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಇಂದು ಮುಂಜಾನೆ 5ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದರು. ಆದರೆ ಅನುಶ್ರೀ ಮಾತ್ರ ಇಂದು ವಿಚಾರಣೆಗೆ ಹಾಜರಾಗಿಲ್ಲ. ಅನುಶ್ರೀ ವಿಚಾರಣೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಕ್ರೈಂ ಠಾಣೆ ಪೊಲೀಸರು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು.

    15 ಜನ ಅಧಿಕಾರಿಗಳು, ಸಿಬ್ಬಂದಿ ನೇಮಿಸಿ ವಿಚಾರಣೆಗೆ ತಯಾರಿ ಮಾಡಲಾಗಿತ್ತು. ಮೊದಲ ಹಂತದಲ್ಲಿ ಆರೋಪಿಗಳಾದ ಕಿಶೋರ್ ಅಮನ್, ತರುಣ್ ರಾಜ್ ಜೊತೆಗಿನ ಸಂಬಂಧ ಬಗ್ಗೆ ಪ್ರಶ್ನಿಸಿ, ಎರಡನೇ ಹಂತದಲ್ಲಿ ಸಾಕ್ಷ್ಯ ತೋರಿಸಿ ಅನುಶ್ರೀಗೆ ಪ್ರಶ್ನೆ ಮಾಡಬೇಕೆಂದಿದ್ದರು. ಈಗಾಗಲೇ ಬಂಧನವಾಗಿರುವ ಕಿಶೋರ್, ತರುಣ್, ನೌಶೀನ್ ಮಂಗಳೂರಿನ ಪಾಂಡೇಶ್ವರದಲ್ಲಿನ ಇಕೊನಾಮಿಕ್&ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದು ಇಂದು ಸಾಕಷ್ಟು ಮಾಹಿತಿ ಸಂಗ್ರಹಿಸಿದ ಪೊಲೀಸರು ಸಂಜೆ ವೇಳೆಗೆ ಕಿಶೋರ್ ಹಾಗೂ ನೌಶೀನ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಕೋರ್ಟ್‍ಗೆ ಹಾಜರುಪಡಿಸುವ ಮುನ್ನ ಇಂದು ಕೂಡಾ ಆರೋಪಿಗಳಿಗೆ ಡ್ರಿಲ್ ಮಾಡಲಾಗಿದ್ದು, ಆರೋಪಿ ತರುಣ್ ಅನುಶ್ರೀ ಬಗೆಗಿನ ಮಹತ್ವದ ಸಂಗತಿಗಳನ್ನು ಬಾಯ್ಬಿಟ್ಟಿದ್ದಾನೆ. ನಿನ್ನೆ ಬಂಧನ ಮಾಡಿದ ಬಳಿಕ ತರುಣ್ ಅನುಶ್ರೀ ಕುಡಿತಾ ಇದ್ರು ಅಂತಾ ಮಾತ್ರ ಹೇಳಿದ್ದ. ಆದರೆ ಪೋಲಿಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ದೇವು. ಆ ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್‍ನ ಕಿಕ್ಕೇರಿಸಿಕೊಳ್ಳುತ್ತಿದ್ದರು ಎಂದು ಹೇಳಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ತರುಣ್ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿರುವ ಈ ಎಲ್ಲ ಮಾಹಿತಿಗಳು ಅನುಶ್ರೀಗೆ ಕಂಟಕವಾಗುವ ಎಲ್ಲ ಸಾಧ್ಯತೆಗಳಿವೆ. ಸದ್ಯ ಸಿಸಿಬಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗುವುದಕ್ಕೆ ಮೂರು ದಿನಗಳ ಕಾಲಾವಕಾಶವಿದೆ. ಹೀಗಾಗಿ ಅನುಶ್ರೀ ನಾಳೆಯ ಒಳಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ.

  • ಸಿಸಿಬಿ ನೋಟಿಸ್ – ಮಾಧ್ಯಮಗಳಲ್ಲಿ ಅನುಶ್ರೀ ಮನವಿ

    ಸಿಸಿಬಿ ನೋಟಿಸ್ – ಮಾಧ್ಯಮಗಳಲ್ಲಿ ಅನುಶ್ರೀ ಮನವಿ

    – ನನ್ನ ಕುಟುಂಬ ವರ್ಗಕ್ಕೆ ನೋವು ತಂದಿದೆ

    ಬೆಂಗಳೂರು: ಖ್ಯಾತ ನಿರೂಪಕಿ, ನಟಿ ಅನುಶ್ರೀಗೆ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಕುರಿತು ಅನುಶ್ರೀ ಕೂಡ ಸ್ಪಷ್ಟನೆ ಕೊಟ್ಟಿದ್ದಾರೆ. ಇದೀಗ ಮಾಧ್ಯಮಗಳಲ್ಲಿ ಅನುಶ್ರೀ ಮನವಿವೊಂದನ್ನು ಮಾಡಿಕೊಂಡಿದ್ದಾರೆ.

    ನಟಿ ಅನುಶ್ರೀ ಒಂದು ಪತ್ರವನ್ನು ಬರೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಿಸಿಬಿ ನೋಟಿಸ್ ಸ್ವೀಕರಿಸಿದ ಅನುಶ್ರೀ- ಶನಿವಾರ ವಿಚಾರಣೆಗೆ ಹಾಜರು

    ಪತ್ರದಲ್ಲಿ ಏನಿದೆ?
    ಗುರುವಾರ ಸಂಜೆ ನನಗೆ ಮಂಗಳೂರಿನಲ್ಲಿ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ಒಂದು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾನು ಸ್ವತಃ ಮಂಗಳೂರಿಗೆ ತೆರಳಿ ಆ ವಿಚಾರಣೆಗೆ ಖುದ್ದಾಗಿ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಇದು ಬರೀ ವಿಚಾರಣೆಯ ಸೂಚನೆಯಾಗಿದ್ದು, ಮಾಧ್ಯಮಗಳಲ್ಲಿ ನಾನು ನಟಿಸಿದ ಚಿತ್ರವೊಂದನ್ನು ಬಳಸಿ ನನ್ನನ್ನು ಅಪರಾಧಿ ಎಂಬಂತೆ ತೋರಿಸುವ ಪ್ರಯತ್ನಗಳು ನಡೆಯುತ್ತಿವೆ. ಮಾಧ್ಯಮ ಮಿತ್ರರಲ್ಲಿ ನನ್ನ ಕೋರಿಕೆ ಇಷ್ಟೆ, ಪ್ರಸ್ತುತ ಚರ್ಚೆಯಾಗುತ್ತಿರುವ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ. ವಿಚಾರಣೆಗೆ ಕರೆದ ಕೂಡಲೇ ನಾನು ಅಪರಾಧಿ ಎಂದಲ್ಲ ಎಂದು ನಮಗೆ ತಿಳಿದಿದೆ ಎಂದರು.

    ಪೊಲೀಸರಿಗೆ ನನಗೆ ತಿಳಿದಿರುವ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುತ್ತೇನೆ. ಮಾಧ್ಯಮಗಳು ಈ ವಿಚಾರವನ್ನು ಕುರಿತಂತೆ ಯಾವುದೇ ನಿಲುವನ್ನು ಕೊಳ್ಳದಿರಿ ಎನ್ನುವುದು ನನ್ನ ಕಳಕಳಿಯ ಮನವಿ. ಈ ವಿಚಾರ ನನ್ನ ಕುಟುಂಬ ವರ್ಗಕ್ಕೆ ಈಗಾಗಲೇ ನೋವು ತಂದಿದೆ. ಮಾಧ್ಯಮಗಳಲ್ಲಿ ಅತಿಯಾದ ಪ್ರಚಾರವು ಸತ್ಯವನ್ನು ದಾರಿ ತಪ್ಪಿಸುವುದಾಗಬಾರದು ಎನ್ನವುದು ನನ್ನ ಕಾಳಜಿ. ಆದ್ದರಿಂದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎಲ್ಲರೂ ಅಪರಾಧಿಗಳಲ್ಲ ಎನ್ನುವುದು ತಮಗೂ ತಿಳಿದಿದೆ. ಆದ್ದರಿಂದ ಈ ವಿಚಾರ ಕುರಿತಂತೆ ಸಮತೋಲನದ ವರದಿಗಳನ್ನು ನೀಡುವಂತೆ ಕೋರುತ್ತೇನೆ ಎಂದು ಮಾಧ್ಯಮ ಮಿತ್ರರಲ್ಲಿ ಕೇಳಿಕೊಂಡಿದ್ದಾರೆ.

    ಪೊಲೀಸರ ವಿಚಾರಣೆ ಆದ ನಂತರ ಮಾಧ್ಯಮಗಳಿಗೆ ನೀಡಬಹುದಾದ ಮಾಹಿತಿಯನ್ನು ನಾನು ನೀಡುತ್ತೇನೆ. ಈ ವಿಚಾರದಲ್ಲಿ ಪೊಲೀಸರಿಗೆ ಸಹಕರಿಸುತ್ತೇನೆ. ಮಾಧ್ಯಮ ಮಿತ್ರರು ಕೂಡ ಸತ್ಯಾಸತ್ಯತೆಗಳು ಹೊರಬರುವವರೆಗೆ ತಾಳ್ಮೆಯಿಂದ ಸಹಕರಿಸಬೇಕಾಗಿ ಎಂದು ನಿರೂಪಕಿ ಅನುಶ್ರೀ ಮನವಿ ಮಾಡಿಕೊಂಡಿದ್ದಾರೆ.

    https://www.facebook.com/AnchorAnushree/photos/a.625365900832803/3261962123839821

    ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಪಾರ್ಟಿಗಳಲ್ಲಿ ಖ್ಯಾತ ನಿರೂಪಕಿ ಭಾಗಿಯಾಗುತ್ತಾರೆ ಎಂದು ಹೇಳಿಕೆ ನೀಡಿದ್ದ. ಅಲ್ಲದೇ ಕಿಶೋರ್ ಆಪ್ತ ತರುಣ್ ವಿಚಾರಣೆ ವೇಳೆ ಅನುಶ್ರೀಯವರ ಹೆಸರು ಹೇಳಿದ್ದಾನೆ ಎನ್ನಲಾಗಿದೆ. ಈ ಇಬ್ಬರ ಹೇಳಿಕೆಯನ್ನಾಧರಿಸಿ ಅನುಶ್ರೀ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಕಣ್ಣೊರೆಸಿ ಕನ್ನಡ ಹೇಳಿ ಕೊಟ್ಟ ಸರಸ್ವತಿ ನನ್ನಮ್ಮ- ಅನುಶ್ರೀ ಭಾವನಾತ್ಮಕ ಪೋಸ್ಟ್

    ಕಣ್ಣೊರೆಸಿ ಕನ್ನಡ ಹೇಳಿ ಕೊಟ್ಟ ಸರಸ್ವತಿ ನನ್ನಮ್ಮ- ಅನುಶ್ರೀ ಭಾವನಾತ್ಮಕ ಪೋಸ್ಟ್

    ಬೆಂಗಳೂರು: ತಮ್ಮ ವಿಭಿನ್ನ ಶೈಲಿಯ ನಿರೂಪಣೆಯಿಂದಲೇ ನಾಡಿನ ಜನತೆಗೆ ಚಿರಪರಿಚಿತರಾಗಿರುವ ಆ್ಯಂಕರ್ ಅನುಶ್ರೀ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ವೈಯಕ್ತಿಕ, ವೃತ್ತಿ ಬದುಕು ಹಾಗೂ ಆಗುಹೋಗುಗಳ ಕುರಿತು ಪೋಸ್ಟ್ ಮಾಡುತ್ತಿರುತ್ತಾರೆ. ಅದೇ ರೀತಿ ಅವರ ಅಮ್ಮನ ಹುಟ್ಟುಹಬ್ಬಕ್ಕೆ ಮನಮಿಡಿಯುವ ಸಾಲುಗಳನ್ನು ಬರೆಯುವ ಮೂಲಕ ವಿಶ್ ಮಾಡಿದ್ದಾರೆ.

    ಇತ್ತೀಚೆಗೆ ಚಿರು ಸರ್ಜಾ ಸಾವನ್ನಪ್ಪಿದ ವೇಳೆ ಭಾವನಾತ್ಮಕ ಸಾಲುಗಳನ್ನು ಬರೆಯುವ ಮೂಲಕ ಅನುಶ್ರೀ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ಸಹ ಪೋಸ್ಟ್ ಮಾಡಿ ಜಾಗೃತಿ ಮೂಡಿಸಿದ್ದರು. ಯಾವ ನಗುವಿನ ಹಿಂದೆ ಯಾವ ನೋವಿರಿತ್ತೋ? ಯಾರು ಬಲ್ಲರು ಎಂದು ಬರೆದುಕೊಂಡಿದ್ದರು.

    ಇದೀಗ ತಮ್ಮ ತಾಯಿ ಕುರಿತು ಪೋಸ್ಟ್ ಮಾಡುವ ಮೂಲಕ ಅನುಶ್ರೀ ಮೆಚ್ಚುಗೆಗೆ ಪಾತ್ರರಾಗಿದ್ದು, ಭಾವನಾತ್ಮಕ ಸಾಲುಗಳನ್ನು ಬರೆಯುವ ಮೂಲಕ ತಾಯಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಅಮ್ಮ… ನನಗೆ ಜನ್ಮ ಕೊಟ್ಟ ಜನ್ಮದಾತೆ ನನ್ನ ಅಮ್ಮ, ಮಾತು ಕಲಿಸಿ ಮುತ್ತು ಕೊಟ್ಟ ಮುದ್ದು ನನ್ನ ಅಮ್ಮ, ನನ್ನ ಕಣ್ಣೊರೆಸಿ ಕನ್ನಡ ಹೇಳಿ ಕೊಟ್ಟ ಸರಸ್ವತಿ ನನ್ನ ಅಮ್ಮ. ವಿದ್ಯೆ, ವಿನಯತೆ ಕೊಟ್ಟ ಗುರು ನನ್ನಮ್ಮ ಎಂದು ಬರೆದುಕೊಂಡಿದ್ದಾರೆ.

    ಅಮ್ಮ…
    ನನಗೆ ಜನ್ಮ ಕೊಟ್ಟ ಜನ್ಮದಾತೆ ನನ್ನ ಅಮ್ಮ …
    ಮಾತು ಕಲಿಸಿ ಮುತ್ತು ಕೊಟ್ಟ ಮುದ್ದು ನನ್ನ ಅಮ್ಮ ..
    ನನ್ನ ಕಣ್ಣೊರೆಸಿ ಕನ್ನಡ ಹೇಳಿ…

    Posted by Anchor Anushree on Wednesday, August 19, 2020

    ತಾನು ನಡೆದು ನನ್ನನ್ನು ಗುರಿ ತಲುಪಿಸಿದ ಮಾರ್ಗದರ್ಶಿ ನನ್ನ ಅಮ್ಮ, ತಾನು ಹಸಿದು ನನ್ನ ಹೊಟ್ಟೆ ತುಂಬಿಸಿದ ಅನ್ನಪೂರ್ಣೆ ನನ್ನಮ್ಮ. ತಂದೆಯಾಗಿ, ಸ್ನೇಹಿತೆಯಾಗಿ ನಿಂತ ನನ್ನ ಜೀವದಾತೆ, ಎಂದೂ ನಾನು ಅನುಶ್ರೀ ಅಮ್ಮ ಎಂದು ಹೇಳದ ಸ್ವಾಭಿಮಾನಿ ನನ್ನಮ್ಮ. ಆದ್ರೆ ಅನುಶ್ರೀ ನಿಮ್ಮ ಮಗಳು ಎಂತ ಪ್ರತಿಭಾನ್ವಿತೆ ಅಲ್ವಾ ಎಂದಾಗ ಹೆಮ್ಮೆಯಿಂದ ಬೀಗುವ ನನ್ನ ಹೆಮ್ಮೆಯ ಅಮ್ಮ ಎಂಬ ಭಾವನಾತ್ಮಕ ಸಾಲುಗಳನ್ನು ಹಾಕಿದ್ದಾರೆ.

    ಸೋಲದಿರು, ಗೆಲ್ಲುವ ಪ್ರಯತ್ನ ಬಿಡದಿರು ಎಂದು ಜೀವನ ಪಾಠ ಹೇಳಿಕೊಟ್ಟ ರಿಯಲ್ ಹೀರೋ ನನ್ನಮ್ಮ. ಅಮ್ಮ ಹುಟ್ಟು ಹಬ್ಬದ ಶುಭಾಶಯಗಳು, ನನ್ನ ಆಯುಷ್ಯ ನಿಮ್ಮ ಪಾಲಾಗಲಿ ಎಂಬ ಮನ ಮಿಡಿಯುವ ಸಾಲುಗಳನ್ನು ಪೋಸ್ಟ್ ಮಾಡುವ ಮೂಲಕ ತಾಯಿಯ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

    ಅನುಶ್ರೀ ಪೋಸ್ಟ್‍ಗೆ ಹಲವರು ಕಮೆಂಟ್ ಮಾಡಿದ್ದು, ಇಂತಹ ಮಗಳನ್ನು ಪಡೆದ ನೀವೇ ಧನ್ಯರು ಎಂದು ಹೇಳಿದ್ದಾರೆ. ಇನ್ನೂ ಹಲವರು ತಮ್ಮ ಕಮೆಂಟ್‍ಗಳ ಮೂಲಕವೇ ಅನುಶ್ರೀಯವರ ತಾಯಿಗೆ ಶುಭ ಕೋರಿದ್ದಾರೆ.