Tag: Aparna Balamurali

  • ಅಪರ್ಣಾ ಬಾಲಮುರಳಿ ಜೊತೆ ರಾಜ್ ಬಿ ಶೆಟ್ಟಿ ಮತ್ತೊಂದು ಮಲಯಾಳಂ ಸಿನಿಮಾ

    ಅಪರ್ಣಾ ಬಾಲಮುರಳಿ ಜೊತೆ ರಾಜ್ ಬಿ ಶೆಟ್ಟಿ ಮತ್ತೊಂದು ಮಲಯಾಳಂ ಸಿನಿಮಾ

    ನ್ನಡದ ನಟ ರಾಜ್ ಬಿ ಶೆಟ್ಟಿ (Raj B Shetty) ಅವರು ಮಮ್ಮುಟ್ಟಿಗೆ ವಿಲನ್ ಆಗಿ ನಟಿಸಿ ಗೆದ್ಮೇಲೆ ಇದೀಗ ಮತ್ತೊಂದು ಮಲಯಾಳಂ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ (Aparna Balamurali) ಜೊತೆ ‘ರುಧಿರಂ’ (Rudhiram) ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.

    ಬಹುಭಾಷೆಗಳಲ್ಲಿ ಮೂಡಿ ಬರಲಿರುವ ‘ರುಧಿರಂ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜೇನು ಸಾಕಾಣಿಕೆ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅದಷ್ಟೇ ಅಲ್ಲ, ಹಲವು ಶೇಡ್‌ಗಳಲ್ಲಿ ನಟ ಕಾಣಿಸಿಕೊಂಡಿದ್ದು, ಚಿತ್ರದಲ್ಲಿ ಹೀರೋನಾ? ವಿಲನ್ ಪಾತ್ರನಾ? ಎಂಬ ಕುತೂಹೂಲ ನೋಡುಗರಿಗೆ ಮೂಡಿದೆ.

     

    View this post on Instagram

     

    A post shared by Rudhiram (@rudhiramthemovie)

    ಇಡೀ ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ, ಅಪರ್ಣಾ ಮತ್ತು ಒಂದು ನಾಯಿ ಮಾತ್ರ ತೋರಿಸಲಾಗಿದೆ. ಅಲ್ಲಲ್ಲಿ ರಕ್ತ, ಕೆಲವು ಆಯುಧಗಳು, ಬಂದೂಕುಗಳು ಸಹ ಕಾಣಿಸಿಕೊಳ್ಳುತ್ತದೆ. ಇದೊಂದು ಪಕ್ಕಾ ಥ್ರಿಲ್ಲರ್ ಸಿನಿಮಾ ಆಗಿದೆ. ಇನ್ನೂ ‘ರುಧಿರಂ’ ಚಿತ್ರವನ್ನು ಜಿಶೋ ಲೋನ್ ಆಂಟನಿ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್

    ಇನ್ನೂ ‘ಟೋಬಿ’ ನಟ ರಾಜ್ ಬಿ ಶೆಟ್ಟಿಗೆ ಬಾಲಿವುಡ್‌ನಿಂದಲೂ ಬುಲಾವ್ ಬಂದಿದೆ. ನಿರ್ದೇಶಕ ಅನುರಾಗ್ ಕಶ್ಯಪ್ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

  • ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ರಾಕಿಂಗ್ ಸ್ಟಾರ್ ಯಶ್ ‘ಧೂಮಂ’ (Dhoomam) ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಲೂಸಿಯಾ ಪವನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಇಂದು 12.59ಕ್ಕೆ ಬಿಡುಗಡೆಯಾಗಿದ್ದು,  ಆ ಟ್ರೈಲರ್ ನಲ್ಲಿ ನೀವು ಯಶ್ ಅವರನ್ನು ನೋಡಬಹುದಾಗಿದೆ. ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಿದ್ದು ಕನ್ನಡ ಮತ್ತು ಮಲಯಾಳಂನಲ್ಲಿ ಅದನ್ನು ನೋಡಬಹುದಾಗಿದೆ. ಯಶ್  (Yash) ಅವರದ್ದು ಯಾವ ಪಾತ್ರ? ಅವರು ಹೇಗೆ ಕಾಣಿಸುತ್ತಾರೆ ಎನ್ನುವುದನ್ನು ನೀವು ಟ್ರೈಲರ್ ನಲ್ಲೇ ನೋಡಬೇಕು.

    ಪವನ್ ಕುಮಾರ್ (Pawan Kumar) ನಿರ್ದೇಶನದ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಈ ಸಿನಿಮಾವನ್ನು ಕೇವಲ ಎರಡೇ ಎರಡು ತಿಂಗಳಲ್ಲಿ ಚಿತ್ರೀಕರಣ ಮುಗಿಸಿದೆ ಅಚ್ಚರಿ ಮೂಡಿಸಿದ್ದರು ನಿರ್ದೇಶಕರು. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿದ್ದ ಹೊಂಬಾಳೆ ಫಿಲ್ಮ್ಸ್, ತಮ್ಮ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದ್ದರು.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್  (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ (Aparna Balamurali) ಜೊತೆಯಾಗಿದ್ದಾರೆ. ಕನ್ನಡದ ಅಚ್ಯುತ್ ಕುಮಾರ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.  ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾ ಕೂಡ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. ಶ್ರೀಮುರುಳಿ ನಟನೆಯ ಬಘೀರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಯುವ ರಾಜ್ ಕುಮಾರ್ ನಟನೆಯ ಯುವ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ತಮಿಳು ಮತ್ತು ಹಿಂದಿಯಲ್ಲೂ ಸಿನಿಮಾ ಮಾಡುವುದಾಗಿ ಹೊಂಬಾಳೆ ಘೋಷಣೆ ಮಾಡಿದೆ.

     

    ಐದು ವರ್ಷದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಂಡವಾಳವನ್ನು ಸಿನಿಮಾ ರಂಗದಲ್ಲಿ ಹೂಡುವುದಾಗಿ ಹೇಳಿರುವ ನಿರ್ಮಾಪಕ ವಿಜಯ ಕಿರಗಂದೂರು, ಈಗಾಗಲೇ ಹಲವು ಚಿತ್ರಗಳನ್ನು ಘೋಷಣೆ ಮಾಡಿದ್ದಾರೆ. ಕಾಂತಾರ 2 ಸಿನಿಮಾ ಮಾಡಲು ಯೋಜನೆ ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾ ಕೂಡ ಶುರು ಮಾಡಲಿದ್ದಾರಂತೆ. ಅಲ್ಲದೇ, ಬಾಲಿವುಡ್ ನಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನುವುದು ಹೊಸ ವರ್ತಮಾನ.

  • ನಾಳೆ ಪವನ್ ಕುಮಾರ್ ನಿರ್ದೇಶನದ ಧೂಮಂ ಸಿನಿಮಾದ ಟ್ರೈಲರ್ ರಿಲೀಸ್

    ನಾಳೆ ಪವನ್ ಕುಮಾರ್ ನಿರ್ದೇಶನದ ಧೂಮಂ ಸಿನಿಮಾದ ಟ್ರೈಲರ್ ರಿಲೀಸ್

    ಹೊಂಬಾಳೆ ಬ್ಯಾನರ್ (Hombale Films) ನಲ್ಲಿ ಮೂಡಿ ಬರುತ್ತಿರುವ ಮಲಯಾಳಂನ ಮೊದಲ ಸಿನಿಮಾ ಧೂಮಂ (Dhoomam) ಚಿತ್ರದ ಟ್ರೈಲರ್ ನಾಳೆ ಬಿಡುಗಡೆಯಾಗಲಿದೆ. ಚಿತ್ರದ ನಿರ್ದೇಶಕ ಪವನ್ ಕುಮಾರ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನಾಳೆ 12.59ಕ್ಕೆ ಮೊದಲ ಟ್ರೈಲರ್ (Trailer) ರಿಲೀಸ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಪವನ್ ಕುಮಾರ್ (Pawan Kumar) ನಿರ್ದೇಶನದ ಮೊದಲ ಮಲಯಾಳಂ ಸಿನಿಮಾ ಕೂಡ ಇದಾಗಿದ್ದರಿಂದ ಟ್ರೈಲರ್ ಬಗ್ಗೆ ಕುತೂಹಲ ಮೂಡಿದೆ.

    ‘ಧೂಮಂ’ ಸಿನಿಮಾ ಕೇವಲ ಎರಡೇ ಎರಡು ತಿಂಗಳಲ್ಲಿ ಚಿತ್ರೀಕರಣ ಮುಗಿಸಿದೆ ಅಚ್ಚರಿ ಮೂಡಿಸಿದ್ದರು ನಿರ್ದೇಶಕರು. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿದ್ದ ಹೊಂಬಾಳೆ ಫಿಲ್ಮ್ಸ್, ತಮ್ಮ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದ್ದರು. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್  (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ (Aparna Balamurali) ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾ ಕೂಡ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. ಶ್ರೀಮುರುಳಿ ನಟನೆಯ ಬಘೀರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಯುವ ರಾಜ್ ಕುಮಾರ್ ನಟನೆಯ ಯುವ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ತಮಿಳು ಮತ್ತು ಹಿಂದಿಯಲ್ಲೂ ಸಿನಿಮಾ ಮಾಡುವುದಾಗಿ ಹೊಂಬಾಳೆ ಘೋಷಣೆ ಮಾಡಿದೆ.

     

    ಐದು ವರ್ಷದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಂಡವಾಳವನ್ನು ಸಿನಿಮಾ ರಂಗದಲ್ಲಿ ಹೂಡುವುದಾಗಿ ಹೇಳಿರುವ ನಿರ್ಮಾಪಕ ವಿಜಯ ಕಿರಗಂದೂರು, ಈಗಾಗಲೇ ಹಲವು ಚಿತ್ರಗಳನ್ನು ಘೋಷಣೆ ಮಾಡಿದ್ದಾರೆ. ಕಾಂತಾರ 2 ಸಿನಿಮಾ ಮಾಡಲು ಯೋಜನೆ ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾ ಕೂಡ ಶುರು ಮಾಡಲಿದ್ದಾರಂತೆ. ಅಲ್ಲದೇ, ಬಾಲಿವುಡ್ ನಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನುವುದು ಹೊಸ ವರ್ತಮಾನ.

  • Hombale Films ನಿರ್ಮಾಣದ  ‘ಧೂಮಂ’ ಫಸ್ಟ್ ಲುಕ್ ಔಟ್

    Hombale Films ನಿರ್ಮಾಣದ ‘ಧೂಮಂ’ ಫಸ್ಟ್ ಲುಕ್ ಔಟ್

    ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್- ಫಹಾದ್ ಫಾಸಿಲ್ ಕಾಂಬಿನೇಷನ್ ‘ಧೂಮಂʼ ಸಿನಿಮಾ ಫಸ್ಟ್ ಲುಕ್ ಇದೀಗ ಹೊಂಬಾಳೆ ಫಿಲ್ಮ್ಸ್ (Hombale Films) ರಿವೀಲ್ ಮಾಡಿದೆ. ಪೋಸ್ಟರ್ ಲುಕ್‌ನಿಂದ ‘ಧೂಮಂ’ ಸಿನಿಮಾ ಗಮನ ಸೆಳೆಯುತ್ತಿದೆ.

    ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್‌ನಿರ್ಮಾಣದ ಕೆಜಿಎಫ್. ಕೆಜಿಎಫ್ 2, ಕಾಂತಾರ ಸಿನಿಮಾ ಸೇರಿದಂತೆ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವ ಮೂಲಕ ಸದ್ದು ಮಾಡ್ತಿದೆ. ಇದೀಗ ಮೊದಲ ಬಾರಿಗೆ ಮಲಯಾಳಂ ಚಿತ್ರ ‘ಧೂಮಂ’ (Dhoomam) ಸಿನಿಮಾಗೆ ಸಾಥ್ ನೀಡಿದೆ. ಈ ಚಿತ್ರವನ್ನ ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪವನ್‌ ಕುಮಾರ್ (Pawan Kumar) ಆ್ಯಕ್ಷನ್ ಕಟ್ ಹೇಳಿದ್ದಾರೆ.

    ಫಹಾದ್ ಫಾಸಿಲ್ – ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ (Aparna Balamurali) ನಟನೆಯ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ಏ.17ರಂದು ರಿವೀಲ್ ಆಗಿದೆ. ಡಿಫರೆಂಟ್ ಕಂಟೆಂಟ್‌ನಲ್ಲಿ ಸಿನಿಮಾ ಮೂಡಿ ಬಂದಿದೆ. ಮಲಯಾಳಂ ಸೇರಿದಂತೆ ಕನ್ನಡ, ತೆಲುಗು, ತಮಿಳು ಭಾಷೆಯಲ್ಲೂ ಚಿತ್ರ ಮೂಡಿ ಬಂದಿದೆ. ಇದನ್ನೂ ಓದಿ:ಬಿರುಕಿನ ಸಂಬಂಧಕ್ಕೆ ‘ಮಾವು-ಬೇವು’ ಸಿನಿಮಾ ಅಮೃತ ದಾರ

     

    View this post on Instagram

     

    A post shared by Hombale Films (@hombalefilms)

    ಪೋಸ್ಟರ್ ಫಸ್ಟ್ ಲುಕ್‌ನಲ್ಲಿ ನಟ ಫಹಾದ್, ಭಿನ್ನ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಲುಕ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬೆಂಕಿಯಿಲ್ಲದೇ ಹೊಗೆ ಇಲ್ಲ, ಇಲ್ಲಿ ಮೊದಲ ಕಿಡಿ ಎಂದು ಅಡಿಬರಹದೊಂದಿಗೆ ಚಿತ್ರದ ಲುಕ್ ರಿವೀಲ್ ಮಾಡಲಾಗಿದೆ.

    ಪವನ್ ಕುಮಾರ್ ಕೂಡ ವಿಭಿನ್ನ ಕಥೆಯನ್ನ ಫಹಾದ್- ಅಪರ್ಣಾ ಜೋಡಿಯೊಂದಿಗೆ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ. ‘ಧೂಮಂʼ ಸಿನಿಮಾ ತೆರೆಯ ಮೇಲೆ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

  • ನಾಳೆ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ :  ಹೊಂಬಾಳೆ ಫಿಲ್ಮ್ಸ್

    ನಾಳೆ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಹೊಂಬಾಳೆ ಫಿಲ್ಮ್ಸ್

    ಲೂಸಿಯಾ ಪವನ್ (Lucia Pawan) ನಿರ್ದೇಶನದ ಧೂಮಂ (Dhoomam) ಸಿನಿಮಾದ ಫಸ್ಟ್ ಲುಕ್ (First Look) ಅನ್ನು ನಾಳೆ ಬೆಳಗ್ಗೆ 10.45ಕ್ಕೆ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಈ ಕುರಿತು ಸಂಸ್ಥೆಯು ಸೋಷಿಯಲ್ ಮೀಡಿಯಾದಲ್ಲಿ ವಿವರ ಹಂಚಿಕೊಂಡಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಪವನ್ ಇದೇ ಮೊದಲ ಬಾರಿಗೆ ಆ ಭಾಷೆಯಲ್ಲಿ ಚಿತ್ರ ಮಾಡಿದ್ದಾರೆ. ಈ ಪೋಸ್ಟರ್ ಪೋಸ್ಟ್ ಮಾಡಿದ ಬೆನ್ನಲ್ಲೇ ಸಲಾರ್ ಸಿನಿಮಾದ ಅಪ್ ಡೇಟ್ ನೀಡಿ ಎಂದು ಅಭಿಮಾನಿಗಳು ಕೇಳಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್ (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ  (Aparna Balamurali)ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ.

    ಧೂಮಂ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಹೊಂಬಾಳೆ ಸಂಸ್ಥೆ (Hombale Films), ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಬರಲಿದೆ ಎಂದಿದೆ. ಕ್ರಮವಾಗಿ ಮಲಯಾಳಂ, ಕನ್ನಡ, ತಮಿಳು ತೆಲುಗು ಭಾಷೆಯ ಹೆಸರು ಹಾಕಿರುವುದರಿಂದ ಮೂಲ ಮಲಯಾಳಂನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕನ್ನಡ ಮತ್ತು ಇತರ ಭಾಷೆಗೆ ಸಿನಿಮಾವನ್ನು ಡಬ್ ಮಾಡುತ್ತಾರಾ ಕಾದು ನೋಡಬೇಕು.

  • ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ನ್ನಡದ ಹೆಸರಾಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ಮಲಯಾಳಂ ಸಿನಿಮಾ ರಂಗಕ್ಕೆ ಹಾರಿದ್ದಾರೆ. ರಮ್ಯಾ ನಿರ್ಮಾಣದ ಚೊಚ್ಚಲು ಸಿನಿಮಾದ ಶೂಟಿಂಗ್ ಮುಗಿಸಿರುವ ರಾಜ್, ಮಲಯಾಳಂ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಇದು ಇವರ ಚೊಚ್ಚಲು ಮಲಯಾಳಂ ಸಿನಿಮಾವಾಗಿದ್ದು, ಚಿತ್ರಕ್ಕೆ ರುಧಿರಂ (Rudhiram) ಎಂದು ಹೆಸರಿಡಲಾಗಿದೆ.

    ರುಧಿರಂ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೇವಲ ನಟನೆಯನ್ನು ಮಾತ್ರ ಮಾಡುತ್ತಿದ್ದಾರೆ. ಜಿಶೋ ಲೋನ್ ಆಂಟೋನಿ (Jisho Lone Antony) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಫೆಬ್ರವರಿ 14 ರಂದು ಈ ಚಿತ್ರಕ್ಕೆ ಮುಹೂರ್ತವಾಗಿದ್ದು, ಇದೀಗ ಚಿತ್ರೀಕರಣವನ್ನು ಆರಂಭಿಸಿದ್ದಾರೆ ನಿರ್ದೇಶಕರು. ರಾಜ್ ಬಿ ಶೆಟ್ಟಿ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ (Aparna Balamurali) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ

    ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದವರು ರಾಜ್ ಬಿ ಶೆಟ್ಟಿ. ಆನಂತರ ಅನೇಕ ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕರಾಗಿ ಕೆಲಸ ಮಾಡಿದವರು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ತಂಡದ ಸಕ್ರೀಯ ಸದಸ್ಯನಾಗಿರುವ ರಾಜ್, ತಮ್ಮದೇ ಆದ ರೀತಿಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಎಲ್ಲದರ ಯಶಸ್ಸೇ ಇಂದು ಅವರನ್ನು ಮಲಯಾಳಂ ಚಿತ್ರರಂಗಕ್ಕೆ ಕರೆದುಕೊಂಡು ಹೋಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟಿ ಅಪರ್ಣಾ ಜೊತೆ ಅನುಚಿತ ವರ್ತನೆ: ಕಾಲೇಜು ವಿದ್ಯಾರ್ಥಿ ಅಮಾನತು

    ನಟಿ ಅಪರ್ಣಾ ಜೊತೆ ಅನುಚಿತ ವರ್ತನೆ: ಕಾಲೇಜು ವಿದ್ಯಾರ್ಥಿ ಅಮಾನತು

    ತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ಕೇರಳದ ಕಾಲೇಜಿಗೆ ಅತಿಥಿಯಾಗಿ ಹೋಗಿದ್ದರು. ಈ ಸಮಯದಲ್ಲಿ ವೇದಿಕೆಯ ಮೇಲೆಯೇ ಆ ಕಾಲೇಜಿನ ವಿದ್ಯಾರ್ಥಿಯೊಬ್ಬ ನಟಿಯ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಆ ಹುಡುಗನ ನಡೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಮಹಿಳೆಯರ ರಕ್ಷಣೆ ಕುರಿತಾಗಿಯೂ ಚರ್ಚೆ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ನಟಿಗೆ ಕ್ಷಮೆ ಕೇಳಿದೆ.

    ಈ ಘಟನೆಯಿಂದಾಗಿ ನಮ್ಮ ಕಾಲೇಜಿಗೂ ಕೆಟ್ಟ ಹೆಸರು ಬಂದಿದೆ. ನಮಗೂ ತಲೆತಗ್ಗಿಸುವಂತಹ ವಿಚಾರವಿದು. ನಿಮ್ಮೊಂದಿಗೆ ಆ ಹುಡುಗ ಆ ರೀತಿ ನಡೆದುಕೊಂಡಿದ್ದು ತುಂಬಾ ನೋವಾಗಿದೆ. ಹಾಗಾಗಿ ಕ್ಷಮೆ ಕೇಳುತ್ತೇವೆ. ಕೇವಲ ಕ್ಷಮೆ ಮಾತ್ರವಲ್ಲ, ಆ ವಿದ್ಯಾರ್ಥಿಯನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ರೀತಿ ಯಾರೂ ನಡೆದುಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

    `ಸೂರರೈ ಪೊಟ್ರು’ (Soorarai Potru) ಸಿನಿಮಾದ ನಟಿ ಅಪರ್ಣಾ ಬಾಲಮುರಳಿ (Aparna Balamurali) ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಹಲವು ಭಾಷೆಗಳಲ್ಲಿ ಸಿನಿಮಾ ಮಾಡುತ್ತಿರುವ ನಟಿ ಅಪರ್ಣಾ ಇತ್ತೀಚೆಗೆ ಕೇರಳದ ಕಾಲೇಜಿಗೆ ಭೇಟಿ ನೀಡಿದ್ದರು. ʻತಂಕಂʼ (Tankam) ಸಿನಿಮಾ ಪ್ರಚಾರ ಕಾರ್ಯಕ್ಕಾಗಿ ಕೇರಳದ (Kerala) ಕಾಲೇಜಿಗೆ ಅಪರ್ಣಾ ಮತ್ತು ತಂಡ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಕುಳಿತಿದ್ದ ಅಪರ್ಣಾ ಕಡೆ ವಿದ್ಯಾರ್ಥಿಯೊಬ್ಬರು (Student) ಓಡಿ ಬಂದ. ಬಂದವನೇ ಅಪರ್ಣಾ ಕೈ ಹಿಡಿದು ಮಾತನಾಡಿದ, ಬಳಿಕ ಸೆಲ್ಫಿ ಕೇಳಿದ. ಅಪರ್ಣಾ ಕೂಡ ಸೆಲ್ಫಿ ಕೊಡಲು ಎದ್ದು ನಿಂತರು. ಆಗ ವಿದ್ಯಾರ್ಥಿ ಅಪರ್ಣಾ ಹೆಗಲ ಮೇಲೆ ಕೈ ಹಾಕಿದ. ಅಪರ್ಣಾ ಆತನಿಂದ ತಪ್ಪಿಸಿಕೊಂಡು ದೂರ ಹೋದರು.

    ಕಾಲೇಜು ವಿದ್ಯಾರ್ಥಿಯ ಕೆಟ್ಟ ವರ್ತನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಘಟನೆಯಿಂದ ಅಪರ್ಣಾ ತುಂಬಾ ಹಿಂಸೆ ಅನುಭವಿಸಿದ್ದಾರೆ. ಈ ಘಟನೆಯ ಬಳಿಕ ಕೆಲವು ವಿದ್ಯಾರ್ಥಿಗಳು ನಟಿಯ ಬಳಿ ಬಂದು ಕ್ಷಮೆ ಕೇಳಿದ್ದಾರೆ. ಬಳಿಕ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿ ಕೂಡ ಕ್ಷಮೆ ಕೇಳಿದ್ದಾರೆ. ನಾನು ನಿಮ್ಮ ದೊಡ್ಡ ಅಭಿಮಾನಿ, ನಿಮ್ಮ ಜೊತೆ ಹೀಗೆ ವರ್ತಿಸುವ ಯೋಚನೆ ನನ್ನಲ್ಲಿರಲಿಲ್ಲ ಎಂದು ಹೇಳಿದ್ದಾರೆ. ಘಟನೆ ನಡೆದ ವೇಳೆ `ತಂಕಂ’ ಚಿತ್ರತಂಡ ಒಂದು ಮಾತನಾಡದೇ ಸೈಲೆಂಟ್ ಆಗಿದ್ದಕ್ಕೆ ತಂಡದ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    `ಸೂರರೈ ಪೊಟ್ರು’ (Soorarai Potru) ಸಿನಿಮಾದ ನಟಿ ಅಪರ್ಣಾ ಬಾಲಮುರಳಿ (Aparna Balamurali) ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಹಲವು ಭಾಷೆಗಳಲ್ಲಿ ಸಿನಿಮಾ ಮಾಡುತ್ತಿರುವ ನಟಿ ಅಪರ್ಣಾ ಇತ್ತೀಚೆಗೆ ಕೇರಳದ ಕಾಲೇಜಿಗೆ ಭೇಟಿ ನೀಡಿದ್ದರು. ಕಾಲೇಜು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರು ಅಪರ್ಣಾ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ʻತಂಕಂʼ ಸಿನಿಮಾ ಪ್ರಚಾರ ಕಾರ್ಯಕ್ಕಾಗಿ ಕೇರಳದ (Kerala) ಕಾಲೇಜಿಗೆ ಅಪರ್ಣಾ ಮತ್ತು ತಂಡ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಕುಳಿತಿದ್ದ ಅಪರ್ಣಾ ಕಡೆ ವಿದ್ಯಾರ್ಥಿಯೊಬ್ಬರು (Student) ಓಡಿ ಬಂದ. ಬಂದವನೇ ಅಪರ್ಣಾ ಕೈ ಹಿಡಿದು ಮಾತನಾಡಿದ, ಬಳಿಕ ಸೆಲ್ಫಿ ಕೇಳಿದ. ಅಪರ್ಣಾ ಕೂಡ ಸೆಲ್ಫಿ ಕೊಡಲು ಎದ್ದು ನಿಂತರು. ಆಗ ವಿದ್ಯಾರ್ಥಿ ಅಪರ್ಣಾ ಹೆಗಲ ಮೇಲೆ ಕೈ ಹಾಕಿದ. ಅಪರ್ಣಾ ಆತನಿಂದ ತಪ್ಪಿಸಿಕೊಂಡು ದೂರ ಹೋದರು. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ `ಸತ್ಯ’ ಸೀರಿಯಲ್ ಖ್ಯಾತಿಯ ಸಾಗರ್- ಸಿರಿ ರಾಜು

    ಕಾಲೇಜು ವಿದ್ಯಾರ್ಥಿಯ ಕೆಟ್ಟ ವರ್ತನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಘಟನೆಯಿಂದ ಅಪರ್ಣಾ ತುಂಬಾ ಹಿಂಸೆ ಅನುಭವಿಸಿದ್ದಾರೆ.

    ಈ ಘಟನೆಯ ಬಳಿಕ ಕೆಲವು ವಿದ್ಯಾರ್ಥಿಗಳು ನಟಿಯ ಬಳಿ ಬಂದು ಕ್ಷಮೆ ಕೇಳಿದ್ದಾರೆ. ಬಳಿಕ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿ ಕೂಡ ಕ್ಷಮೆ ಕೇಳಿದ್ದಾರೆ. ನಾನು ನಿಮ್ಮ ದೊಡ್ಡ ಅಭಿಮಾನಿ, ನಿಮ್ಮ ಜೊತೆ ಹೀಗೆ ವರ್ತಿಸುವ ಯೋಚನೆ ನನ್ನಲ್ಲಿರಲಿಲ್ಲ ಎಂದು ಹೇಳಿದ್ದಾರೆ. ಘಟನೆ ನಡೆದ ವೇಳೆ `ತಂಕಂ’ ಚಿತ್ರತಂಡ ಒಂದು ಮಾತನಾಡದೇ ಸೈಲೆಂಟ್ ಆಗಿದ್ದಕ್ಕೆ ತಂಡದ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎರಡನೇ ತಿಂಗಳಿಗೆ ಧೂಮಂ ಶೂಟಿಂಗ್ ಮುಗಿಸಿದ ಹೊಂಬಾಳೆ ಫಿಲ್ಮ್ಸ್

    ಎರಡನೇ ತಿಂಗಳಿಗೆ ಧೂಮಂ ಶೂಟಿಂಗ್ ಮುಗಿಸಿದ ಹೊಂಬಾಳೆ ಫಿಲ್ಮ್ಸ್

    ಲೂಸಿಯಾ ಪವನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮಲಯಾಳಂ ‘ಧೂಮಂ’ ಸಿನಿಮಾ ಕೇವಲ ಎರಡೇ ಎರಡು ತಿಂಗಳಲ್ಲಿ ಚಿತ್ರೀಕರಣ ಮುಗಿಸಿದೆ. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್, ತಮ್ಮ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದ್ದಾರೆ. ಈಗಾಗಲೇ ಸಂತೋಷ್ ಆನಂದ್ ರಾಮ್ ನಿರ್ದೇಶನದ, ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ ಕೂಡ ಬಿಡುಗಡೆಗೆ ಸಿದ್ಧವಾಗಿದ್ದು, ಅದರ ಸಾಲಿಗೆ ಧೂಮಂ ಕೂಡ ಸೇರಿಕೊಂಡಿದೆ.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್ ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು. ಇದನ್ನೂ ಓದಿ: ಮದುವೆ ಬಗ್ಗೆ ಮೌನ ಮುರಿದ ರಾಗಿಣಿ ದ್ವಿವೇದಿ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾ ಕೂಡ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. ಶ್ರೀಮುರುಳಿ ನಟನೆಯ ಬಘೀರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಯುವ ರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ಇನ್ನಷ್ಟೇ ಶೂಟಿಂಗ್ ಶುರು ಮಾಡಬೇಕು. ಜೊತೆಗೆ ತಮಿಳು ಮತ್ತು ಹಿಂದಿಯಲ್ಲೂ ಸಿನಿಮಾ ಮಾಡುವುದಾಗಿ ಹೊಂಬಾಳೆ ಘೋಷಣೆ ಮಾಡಿದೆ.

    ಐದು ವರ್ಷದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಂಡವಾಳವನ್ನು ಸಿನಿಮಾ ರಂಗದಲ್ಲಿ ಹೂಡುವುದಾಗಿ ಹೇಳಿರುವ ನಿರ್ಮಾಪಕ ವಿಜಯ ಕಿರಗಂದೂರು, ಈಗಾಗಲೇ ಹಲವು ಚಿತ್ರಗಳನ್ನು ಘೋಷಣೆ ಮಾಡಿದ್ದಾರೆ. ಕಾಂತಾರ 2 ಸಿನಿಮಾ ಮಾಡಲು ಯೋಜನೆ ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾ ಕೂಡ ಶುರು ಮಾಡಲಿದ್ದಾರಂತೆ. ಅಲ್ಲದೇ, ಬಾಲಿವುಡ್ ನಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನುವುದು ಹೊಸ ವರ್ತಮಾನ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 68ನೇ ಸಾಲಿನ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದ ಸ್ಟಾರ್‌ಗಳು ಇವರೇ

    68ನೇ ಸಾಲಿನ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದ ಸ್ಟಾರ್‌ಗಳು ಇವರೇ

    ತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ(National Film Awards) ಪಡೆಯಲಿರುವ ಪ್ರತಿಭಾನ್ವಿತರ ಪಟ್ಟಿಯನ್ನ ಬಿಡುಗಡೆ ಮಾಡಲಾಗಿತ್ತು. ಅದರಂತೆ ಇಂದು ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu)  ಅವರು ವಿಜೇತರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

    68ನೇ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಇಂದು ನವದೆಹಲಿಯಲ್ಲಿ ಪ್ರದಾನ ಮಾಡಲಾಯಿತು. ಭಿನ್ನ ಕಥಾಹಂದರ ಹೊಂದಿರುವ ಕನ್ನಡದ `ಡೊಳ್ಳು’ (Dollu) ಚಿತ್ರಕ್ಕಾಗಿ ಪವನ್ ಒಡೆಯರ್, `ತಲೆದಂಡ’ (Thaledanda) ಚಿತ್ರ, ಸಾಂಸ್ಕೃತಿಕ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ `ನಾದದ ನವನೀತ’ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ:ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನ ತಮಿಳು ಚಿತ್ರ `ಸೂರರೈ ಪೋಟ್ರು’ ಲಭಿಸಿದೆ. ಇನ್ನು ಬಾಲಿವುಡ್ ನಟ ಅಜಯ್ ದೇವಗನ್, ಕಾಲಿವುಡ್ ನಟ ಸೂರ್ಯ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಯ್ತು. `ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಿದ್ದಾರೆ. ಸಂಗೀತ ಸಂಯೋಜಕ ವಿಶಾಲ್ ಭಾರದ್ವಾಜ್ ಅವರು `1232 ಕೆಎಂ’ ಸಾಕ್ಷ್ಯಚಿತ್ರದಲ್ಲಿ `ಮರೇಂಗೆ ತೋ ವಹಿನ್ ಜಾ ಕರ್’ ಹಾಡಿಗಾಗಿ ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನ ಪಡೆದರು.

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಹೀಗಿದೆ:

    ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

    ವಿಶಿಷ್ಟ ಕಥಾಹಂದರ ಸಿನಿಮಾ: ಡೊಳ್ಳು (ಕನ್ನಡ)

    ಸಾಂಸ್ಕೃತಿಕ ವಿಭಾಗದ ಸಿನಿಮಾ: ನಾದದ ನವನೀತ (ಕನ್ನಡ)

    ಅತ್ಯುತ್ತಮ ನಟ: ಅಜಯ್ ದೇವಗನ್ ಮತ್ತು ಕಾಲಿವುಡ್‌ ನಟ ಸೂರ್ಯ

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

    ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

    ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

    ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್

    ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

    ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

    ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್, ಸುಧಾ ಕೊಂಗರು (ಸೂರರೈ ಪೋಟ್ರು)

    ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

    ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್ ದೇಶಪಾಂಡೆ (ಮಿ ವಸಂತ್ ರಾವ್)

    ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

    Live Tv
    [brid partner=56869869 player=32851 video=960834 autoplay=true]