Tag: Aparna Balamurali

  • ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಪವನ್ ನಿರ್ದೇಶಕ, ಫಹಾದ್ ಹೀರೋ

    ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಪವನ್ ನಿರ್ದೇಶಕ, ಫಹಾದ್ ಹೀರೋ

    ಲೂಸಿಯಾ ಖ್ಯಾತಿಯ ಪವನ್ ಕುಮಾರ್ (Pawan Kumar) ಮತ್ತು ಮಲಯಾಳಂ ಹೆಸರಾಂತ ನಟ ಫಹಾದ್ ಫಾಸಿಲ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎಂದು ಮೊದಲ ಬಾರಿಗೆ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಅದೀಗ ನಿಜವಾಗಿದೆ. ಈ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರಲಿದ್ದು, ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಿನ್ನೆಯಷ್ಟೇ ಹೊಸ ಸುದ್ದಿಯೊಂದನ್ನು ಕೊಡಲಿದ್ದೇವೆ ಎಂದು ಹೊಂಬಾಳೆ ಹೇಳಿಕೊಂಡಿತ್ತು.

    ಅಂದುಕೊಂಡಂತೆ ಆಗಿದ್ದರೆ, ಪವನ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನ ದ್ವಿತ್ವ ಸಿನಿಮಾ ಆಗಬೇಕಿತ್ತು. ಪುನೀತ್ ಅವರ ಹಠಾತ್ ನಿಧನದಿಂದಾಗಿ ದ್ವಿತ್ವ ಸೆಟ್ಟೇರಲಿಲ್ಲ. ಈಗ ಅದೇ ಕಥೆಯನ್ನು ಫಾಸಿಲ್ ಗೆ ಮಾಡಲಿದ್ದಾರಾ ಅಥವಾ ಬೇರೆ ಕಥೆಯನ್ನು ಪವನ್ ಆಯ್ಕೆ ಮಾಡಿಕೊಂಡಿದ್ದಾರಾ ಅವರೇ ಹೇಳಬೇಕು. ಒಟ್ಟಿನಲ್ಲಿ ಫಾಸಿಲ್ ಗಾಗಿ ಪವನ್ ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಧೂಮ್ (Dhoom) ಎಂದು ಹೆಸರಿಡಲಾಗಿದೆ. ಇದನ್ನೂ ಓದಿ:`ಜೂನಿಯರ್’ ಆಗಿ ಸಿನಿರಸಿಕರನ್ನು ಗೆಲ್ಲಲು ಬಂದ್ರು ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ

    ಧೂಮ್ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಹೊಂಬಾಳೆ ಸಂಸ್ಥೆ (Hombale Films), ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಬರಲಿದೆ ಎಂದಿದೆ. ಕ್ರಮವಾಗಿ ಮಲಯಾಳಂ, ಕನ್ನಡ, ತಮಿಳು ತೆಲುಗು ಭಾಷೆಯ ಹೆಸರು ಹಾಕಿರುವುದರಿಂದ ಮೂಲ ಮಲಯಾಳಂನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕನ್ನಡ ಮತ್ತು ಇತರ ಭಾಷೆಗೆ ಸಿನಿಮಾವನ್ನು ಡಬ್ ಮಾಡುತ್ತಾರಾ ಕಾದು ನೋಡಬೇಕು.

    ಫಹಾದ್ ಫಾಸಿಲ್ (Fahadh Faasil) ನಾಯಕನಾಗಿ ನಟಿಸುತ್ತಿದ್ದರೆ, ಸೂರರೈ ಪೋಟ್ರು ನಾಯಕಿ ಅಪರ್ಣಾ ಬಾಲಮುರಳಿ (Aparna Balamurali) ಈ ಸಿನಿಮಾದ ನಾಯಕಿ. ಅಕ್ಟೋಬರ್ 9 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಫಹಾದ್ ಪ್ರತಿಭಾವಂತ ನಟ, ಪವನ್ ಕುಮಾರ್ ಹೊಸ ಬಗೆಯ ಯೋಚಿಸುವ ನಿರ್ದೇಶಕ. ಹಾಗಾಗಿ ಧೂಮಂ ಸಿನಿಮಾದ ಬಗ್ಗೆ ಈಗಿನಿಂದಲೇ ನಿರೀಕ್ಷೆ ದುಪ್ಪಟ್ಟಾಗಿದೆ. ಹೊಂಬಾಳೆ ಫಿಲ್ಸ್ಮ್ ನಿಂದ ಈಗಾಗಲೇ ಸಲಾರ್, ಬಘೀರ್, ರಾಘವೇಂದ್ರ ಸ್ಟೋರ್ಸ್ ಸಿನಿಮಾಗಳು ರೆಡಿಯಾಗಿದ್ದು, ಈ ಸಿನಿಮಾ ಸಾಲಿಗೆ ಧೂಮ್ ಕೂಡ ಸೇರ್ಪಡೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯನ್ನೇ ಬಿಡಲಿಲ್ಲ ಬಾಡಿ ಶೇಮಿಂಗ್‌ ಭೂತ

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯನ್ನೇ ಬಿಡಲಿಲ್ಲ ಬಾಡಿ ಶೇಮಿಂಗ್‌ ಭೂತ

    ಕಾಲಿವುಡ್‌ನ `ಸೂರರೈ ಪೋಟ್ರು’ (Surarai Potru) ಚಿತ್ರದ ಮೂಲಕ ಗಮನ ಸೆಳೆದ ನಟಿ ಅಪರ್ಣಾ ಬಾಲಮುರಳಿ(Aparna Balamurali) ಮತ್ತೆ ಸುದ್ದಿಯಲ್ಲಿದ್ದಾರೆ. `ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯ ಗರಿ (National Award Winner) ಮುಡಿಗೇರಿಸಿಕೊಂಡಿದ್ದರು. ಈಗ ಬಾಡಿ ಶೇಮಿಂಗ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ದಪ್ಪಗಾಗಿದ್ದಾರೆ ಎಂದು ಟ್ರೋಲ್ ಮಾಡಿದವರಿಗೆ ಖಡಕ್ ಆಗಿ ನಟಿ ತಿರುಗೇಟು ನೀಡಿದ್ದಾರೆ.

    ತೆಲುಗು ಮತ್ತು ತಮಿಳು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಅಪರ್ಣಾ ಬಾಲಮುರಳಿ ಅವರು ಸುಧಾ ಕೊಂಗರ ನಿರ್ದೇಶನದ `ಸೂರರೈ ಪೋಟ್ರು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಬಾಚಿಕೊಂಡರು. ಸೂರ್ಯ ಅವರ ಪತ್ನಿಯ ಪಾತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದರು. ಈಗ ಸಾಲು ಸಾಲು ಚಿತ್ರಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

    ಇನ್ನು ಮೊದಲಿಂದಲೂ ಗುಂಡಗಿದ್ದ ನಟಿ ಅಪರ್ಣಾ ಈಗ ಮತ್ತಷ್ಟು ದಪ್ಪಗಾಗಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಬಾಡಿ ಶೇಮಿಂಗ್ ಕಾಟ ಶುರುವಾಗಿದೆ. ಇತ್ತೀಚೆಗೆ `ನೀತಂ ಒರು ವಾನಂ’ ಅಪರ್ಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ರಿಲೀಸ್ ಆಗುತ್ತಿದೆ. ನಟಿಯ ಹುಟ್ಟುಹಬ್ಬ ಸಂದರ್ಭದಲ್ಲಿ ಲಂಗ ದಾವಣಿ ಲುಕ್‌ನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿರುವ ಪೋಸ್ಟರ್‌ವೊಂದನ್ನ ರಿಲೀಸ್ ಮಾಡಲಾಗಿತ್ತು. ಅಪರ್ಣಾ ಲುಕ್ ನೋಡಿ ಕೆಲ ನೆಟ್ಟಿಗರು, ಅದೆಷ್ಟು ದಪ್ಪಗಾಗಿದ್ದೀರಾ ನೀವು ಬರೀ ತಾಯಿಯ ಪಾತ್ರಕ್ಕೆ ಲಾಯಕ್ಕು ಎಂದು ನಟಿಗೆ ಟೀಕೆ ಮಾಡಿದ್ದಾರೆ. ಅವರ ಫೋಟೋಗಳನ್ನ ಕೂಟ ಟ್ರೋಲ್ ಮಾಡಿದ್ದಾರೆ. ಇದನ್ನೂ ಓದಿ:‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

    ಇದೀಗ ಟ್ರೋಲಿಗರಿಗೆ ನಟಿ ಅಪರ್ಣಾ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೇಹದ ತೂಕಕ್ಕೂ ಟ್ಯಾಲೆಂಟ್‌ಗೂ ಯಾವುದೇ ಸಂಬಂಧವಿಲ್ಲ. ದೇಹದಲ್ಲಿನ ಕೆಲ ಸಮಸ್ಯೆಗಳಿಂದ ವ್ಯಕ್ತಿಯ ತೂಕ ಹೆಚ್ಚಿಸುತ್ತದೆ. ನನಗೆ ತಾಯಿ ಪಾತ್ರ ಮಾಡುವಷ್ಟು ವಯಸ್ಸಾಗಿಲ್ಲ. ತೆಳ್ಳಗಿರುವುದು ನಟಿಯಾಗಲು ಇರಬೇಕಾದ ಅರ್ಹತೆಗಳಲ್ಲಿ ಒಂದಲ್ಲ ಎಂದು ಅಪರ್ಣಾ ತಿರುಗೇಟು ನೀಡಿದ್ದಾರೆ. ನಟಿಯ ಪ್ರತಿಕ್ರಿಯೆ ಅಭಿಮಾನಿಗಳ  ಮೆಚ್ಚುಗೆಗೆ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

  • 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್‌ಗೆ 30 ಭಾಷೆಗಳಲ್ಲಿ 400ಕ್ಕೂ ಅಧಿಕ ಸಿನಿಮಾಗಳ ಅರ್ಜಿ ಸಲ್ಲಿಸಿದ್ದವು. ಇಂದು ನವದೆಹಲಿಯಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    1954ರಿಂದ ರಾಷ್ಟ್ರ ಪ್ರಶಸ್ತಿ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈಗ 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಭಾರತ ಸರ್ಕಾರವು ಚಲನಚಿತ್ರೋತ್ಸವ ಜವಬ್ದಾರಿ ಹೊತ್ತುಕೊಂಡಿದೆ. ಕೋವಿಡ್‌ನಿಂದ ರಾಷ್ಟ್ರ ಪ್ರಶಸ್ತಿ ಕಾರ್ಯವನ್ನ ಮುಂದೂಡಲಾಗಿತ್ತು. 2020ರ ಸಾಲಿನಲ್ಲಿ ಸಾಧನೆ ಮಾಡಿದ ಪ್ರತಿಭೆಗೆ ಗುರುತಿಸಿ, ಗೌರವಿಸಲಾಗಿದೆ. ಇದನ್ನೂ ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಚಲನಚಿತ್ರ ನಿರ್ಮಾಪಕರಾದ ವಿಪುಲ್ ಶಾ ಮತ್ತು ಅನುರಾಗ್ ಠಾಕೂರ್ ಅವರನ್ನ ಭೇಟಿ ಮಾಡಿ, 68ನೇ ರಾಷ್ಟ್ರ ಪ್ರಶಸ್ತಿಯ ಕುರಿತು ವರದಿ ಸಲ್ಲಿಸಲಾಯಿತು. ಯಾರಿಗೆಲ್ಲಾ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಕುರಿತ ಡಿಟೈಲ್ಸ್ ಇಲ್ಲಿದೆ.

    ಅತ್ಯುತ್ತಮ ಚಲನಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ನಿರ್ದೇಶಕ: ಸಚಿ, ಅಯ್ಯಪ್ಪನಂ ಕೊಶಿಯಮ್

    ಅತ್ಯುತ್ತಮ ಮನರಂಜನೆ ಚಿತ್ರ: ತಾನ್ಹಾಜಿ

    ಅತ್ಯುತ್ತಮ ನಟ: ಸೂರ್ಯ (ಸೂರರೈ ಪೋಟ್ರು)
    ಅಜಯ್ ದೇವಗನ್ ( ತಾನ್ಹಾಜಿ)

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ( ಸೂರರೈ ಪೋಟ್ರು)

    ಅತ್ಯುತ್ತಮ ಪೋಷಕ ನಟಿ: ಬಿಜು ಮೆನನ್( ಅಯ್ಯಪ್ಪನಂ ಕೋಶಿಯಂ)

    Live Tv
    [brid partner=56869869 player=32851 video=960834 autoplay=true]

  • ಆಸ್ಕರ್ ರೇಸ್‍ನಲ್ಲಿ ಸೂರರೈ ಪೊಟ್ರು – ಕನ್ನಡಿಗ ಗೋಪಿನಾಥ್ ಜೀವನ ಕಥೆ

    ಆಸ್ಕರ್ ರೇಸ್‍ನಲ್ಲಿ ಸೂರರೈ ಪೊಟ್ರು – ಕನ್ನಡಿಗ ಗೋಪಿನಾಥ್ ಜೀವನ ಕಥೆ

    ಬೆಂಗಳೂರು: ಕನ್ನಡಿಗ ಜಿ.ಆರ್.ಗೋಪಿನಾಥ್ ಅವರ ಜೀವನಕಥೆಯ ಸೂರರೈ ಪೊಟ್ರು ಸಿನಿಮಾ ಆಸ್ಕರ್ ಪ್ರಶಸ್ತಿಯ ಸ್ಪರ್ಧೆಗೆ ಎಂಟ್ರಿ ಪಡೆದುಕೊಂಡಿದೆ.

    ಸೂರರೈ ಪೊಟ್ರು ಓಟಿಟಿ ಪ್ಲಾಟ್‍ಫಾರಂನಲ್ಲಿ ಬಿಡುಗಡೆಯಾದ ಮೊದಲ ಸ್ಟಾರ್ ನಟನ ತಮಿಳು ಚಿತ್ರ. ಕನ್ನಡಿಗ ಗೋಪಿನಾಥ್ ಅವರ ಪಾತ್ರದಲ್ಲಿ ನಟ ಸೂರ್ಯ ನಟಿಸಿದ್ದರು. ತಮಿಳು ಭಾಷೆಯ ಬಹುನಿರೀಕ್ಷಿತ ಸಿನಿಮಾ ಆಗಿದ್ದರೂ ಕೋವಿಡ್-19 ಹಿನ್ನೆಲೆ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ರಿಲೀಸ್ ಮಾಡಲಾಗಿತ್ತು. ಓಟಿಟಿ ಪ್ಲಾಟ್‍ಫಾರಂನಲ್ಲಿ ವೀಕ್ಷಕರನ್ನ ತನ್ನತ್ತ ಸೆಳೆಯುವಲ್ಲಿ ಚಿತ್ರ ಯಶಸ್ವಿಯಾಗಿತ್ತು. ಅಬ್ಬರ ಪ್ರಚಾರವಿಲ್ಲದಿದ್ರೂ ಅಭಿಮಾನಿಗಳಿಂದಲೇ ದೊಡ್ಡ ಮಟ್ಟದ ಪ್ರಮೋಷನ್ ಪಡೆದುಕೊಂಡಿದ್ದು ಸತ್ಯ. ಹಾಗಾಗಿ ನೆಟ್ಟಿಗರು ಮೊಬೈಲ್ ಗಳಲ್ಲಿ ಸೂರರೈ ಪೊಟ್ರು ಹುಡುಕಾಡಿದ್ದರು.

    ಚಿತ್ರ ಜನರಲ್ ಕೆಟಗಿರಿಯಲ್ಲಿ ಆಸ್ಕರ್ ಪ್ರವೇಶಿಸಿದೆ. ಉತ್ತಮ ನಟ, ಉತ್ತಮ ನಟಿ, ಉತ್ತಮ ನಿರ್ದೇಶಕ, ಉತ್ತಮ ಸಂಯೋಜನೆ, ಉತ್ತಮ ಚಿತ್ರಕಥೆ, ರಚನೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸಿನಿಮಾ ಸ್ಪರ್ಧೆಯಲ್ಲಿದೆ. ಸೂರರೈ ಪೊಟ್ರು ವೀಕ್ಷಿಸಿದ ಅಕಾಡೆಮಿ ಸ್ಕ್ರೀನಿಂಗ್ ಸದಸ್ಯರು ಚಿತ್ರಕ್ಕೆ ಮತ ನೀಡಿ ಆಸ್ಕರ್ ಗೆ ನಾಮಿನೇಷನ್ ಮಾಡಿದ್ದಾರೆ.

    ಸುಧಾ ಕೊಂಗರ ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಸೂರ್ಯ, ಪರೇಶ್ ರಾವಲ್, ಅಪರ್ಣಾ ಬಲಮುರಳಿ, ಊರ್ವಶಿ, ಮೋಹನ್ ಬಾಬು, ಕರುಣಾಸ್ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಪುಟ್ಟ ಗ್ರಾಮದ ಯುವಕ ಹೇಗೆ ಒಂದು ವಿಮಾನಯಾನ ಸಂಸ್ಥೆ ಕಟ್ಟುತ್ತಾನೆ? ಆತನಿಗೆ ಯಾವೆಲ್ಲ ತೊಂದರೆಗಳು ಎದುರಾಗುತ್ತೆ ಅನ್ನೋ ಕಥಾ ಹಂದರವನ್ನು ಸೂರರೈ ಪೊಟ್ರು ಹೊಂದಿದೆ.