Tag: Apeksha Purohit

  • ಅದ್ದೂರಿಯಾಗಿ ನಡೆಯಿತು ಪವನ್ ಒಡೆಯರ್ ಮಗಳ ನಾಮಕರಣ

    ಅದ್ದೂರಿಯಾಗಿ ನಡೆಯಿತು ಪವನ್ ಒಡೆಯರ್ ಮಗಳ ನಾಮಕರಣ

    ಸ್ಯಾಂಡಲ್‌ವುಡ್ (Sandalwood) ಡೈರೆಕ್ಟರ್ ಪವನ್ ಒಡೆಯರ್ (Pavan Wadeyar) ದಂಪತಿ ತಮ್ಮ ಮುದ್ದಾದ ಮಗಳಿಗೆ ಚೆಂದದ ಹೆಸರಿಟ್ಟಿದ್ದಾರೆ. ಇತ್ತೀಚೆಗಷ್ಟೇ 2ನೇ ಮಗುವನ್ನ ಪವನ್- ಅಪೇಕ್ಷಾ ಜೋಡಿ ಬರಮಾಡಿಕೊಂಡರು. ಈಗ ಅದ್ದೂರಿಯಾಗಿ ಮಗಳ ನಾಮಕರಣ ಮಾಡಿದ್ದಾರೆ.

    ಗೂಗ್ಲಿ (Googly Film) ನಿರ್ದೇಶಕ ಪವನ್ ಒಡೆಯರ್ (Pavan Wadeyar) ಮತ್ತು ಅಪೇಕ್ಷಾ ಜೋಡಿ (Apeksha Purohit) ತಮ್ಮ ಮುದ್ದು ಮಗಳಿಗೆ ಯಾದ್ವಿ (Yadvi) ಎಂದು ಹೆಸರಿಟ್ಟಿದ್ದಾರೆ. ನಾಮಕರಣದ ಚೆಂದದ ವಿಡಿಯೋವೊಂದನ್ನ ಸೋಶಿಯಲ್ ಮೀಡಿಯಾದಲ್ಲಿ ಪವನ್ ದಂಪತಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:104 ದಿನಗಳಲ್ಲಿ ರೆಡಿಯಾಯ್ತು ಪರಿಣಿತಿ ಮದುವೆಗೆ ಧರಿಸಿದ ದುಬಾರಿ ಲೆಹೆಂಗಾ

    ಇವಳೇ ನಮ್ಮ ಜೀವನದ ಹೊಸ ಪ್ರೀತಿ, ರಾಜಕುಮಾರಿ ಮತ್ತು ಶೌರ್ಯನ ತಂಗಿ. ನಾವು ಇವಳನ್ನು ಯಾದ್ವಿ ಒಡೆಯರ್ ಎಂದು ಕರೆಯುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪವನ್ ಪತ್ನಿ ಅಪೇಕ್ಷಾ ಪುರೋಹಿತ್ ಬರೆದುಕೊಂಡಿದ್ದಾರೆ. ಈ ಸಮಾರಂಭದಲ್ಲಿ ‘ಗಾಳಿಪಟ’ ನಟಿ ಭಾವನಾ ರಾವ್‌ (Bhavana Rao) ಸೇರಿದಂತೆ ಚಿತ್ರರಂಗದ ಅನೇಕ ನಟ-ನಟಿಯರು ಭಾಗಿಯಾಗಿದ್ದಾರೆ.

    ಅಂದ್ಹಾಗೆ, 2018ರಲ್ಲಿ ಅಪೇಕ್ಷಾ ಪುರೋಹಿತ್- ಪವನ್ ಒಡೆಯರ್ ಮದುವೆಯಾದರು. ದಂಪತಿಗೆ ಈಗಾಗಲೇ ಶೌರ್ಯ ಎಂಬ ಮಗನಿದ್ದಾನೆ. ಕಳೆದ ಜುಲೈ ತಿಂಗಳಿನಲ್ಲಿ ಹೆಣ್ಣು ಮಗುವಿಗೆ ಅಪೇಕ್ಷಾ ಜನ್ಮ ನೀಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ನಿರ್ದೇಶಕ ಪವನ್‌ ಒಡೆಯರ್‌ ದಂಪತಿ

    2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ನಿರ್ದೇಶಕ ಪವನ್‌ ಒಡೆಯರ್‌ ದಂಪತಿ

    ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ ನಿರ್ದೇಶಕ ಪವನ್ ಒಡೆಯರ್(pavan wadeyar)- ಅಪೇಕ್ಷಾ ಪುರೋಹಿತ್ (Apeksha Purohit) ದಂಪತಿ ಸದ್ಯ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಶೌರ್ಯ ಎಂಬ ಮುದ್ದಾದ ಗಂಡು ಮಗನಿದ್ದು, ಮತ್ತೆ ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ ನಟಿ ಅಪೇಕ್ಷಾ.

    ರಣವಿಕ್ರಮ, ಗೂಗ್ಲಿ, ಡೊಳ್ಳು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಿರ್ದೇಶಕ ಪವನ್ ಒಡೆಯರ್ (Pavan Wadeyar) ಮನೆಯಲ್ಲಿ ಸಂಭ್ರಮ, ಖುಷಿ ಮನೆ ಮಾಡಿದೆ. ತಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರುವ ಸಂತಸದಲ್ಲಿದ್ದಾರೆ. ಸದ್ಯ ಪವನ್ ಪತ್ನಿ ಅಪೇಕ್ಷಾ ಬೇಬಿ ಬಂಪ್ ಫೋಟೋಶೂಟ್ (Baby Bump Photoshoot) ಮೂಲಕ ಸಿಹಿ ಸುದ್ದಿ ನೀಡಿದ್ದಾರೆ.

    ಕಪ್ಪು ಬಣ್ಣದ ಉಡುಗೆಯಲ್ಲಿ ನಟಿ ಅಪೇಕ್ಷಾ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ಕೊಟ್ಟಿದ್ದಾರೆ. ನಮ್ಮ 2ನೇ ಮಗು ಜಗತ್ತಿಗೆ ಕಾಲಿಡುತ್ತಿದೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಇರಲಿ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಆಸ್ಕರ್ ನಗೆ ಬೀರಿದ್ದ ಬೊಮ್ಮನ್-ಬೆಳ್ಳಿ ಬದುಕು ಮೂರಾಬಟ್ಟೆ

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಶ್ರೀಮತಿ ಭಾಗ್ಯಲಕ್ಷ್ಮಿʼ ಸೀರಿಯಲ್‌ನಲ್ಲಿ ನಾಯಕಿಯಾಗಿ ಅಪೇಕ್ಷಾ (Apeksha Purohit) ಬಣ್ಣ ಹಚ್ಚಿದ್ದರು. ಪವನ್ ಒಡೆಯರ್ ಅವರನ್ನು ಪ್ರೀತಿಸಿ ಗುರುಹಿರಿಯರ ಸಮ್ಮುಖದಲ್ಲಿ 2018ರಲ್ಲಿ ಮದುವೆಯಾದರು. ಈಗ ಅಪೇಕ್ಷಾ ಅವರು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಕೂಡ ಗುರುತಿಸಿಕೊಳ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಪವನ್ ಒಡೆಯರ್ ಅಪೇಕ್ಷಾ ದಂಪತಿ ಮಗನ ಹೆಸರು ಶೌರ್ಯ

    ಪವನ್ ಒಡೆಯರ್ ಅಪೇಕ್ಷಾ ದಂಪತಿ ಮಗನ ಹೆಸರು ಶೌರ್ಯ

    ಬೆಂಗಳೂರು: ಯುವ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ದಂಪತಿ ಗಂಡು ಮಗು ಹುಟ್ಟಿರುವ ವಿಚಾರ ಗೊತ್ತೇ ಇದೆ. ಇದೀಗ ದಂಪತಿ ತಮ್ಮ ಮುದ್ದಿನ ಮಗನಿಗೆ ಹೆಸರಿಟ್ಟಿದ್ದಾರೆ.

     

    ಹೌದು. ತಮ್ಮ ಮಗನ ಹೆಸರನ್ನು ದಂಪತಿ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗನಿಗೆ ಶೌರ್ಯ ಎಂದು ಹೆಸರಿಟ್ಟಿದ್ದಾರೆ.

    ಮುದ್ದಿನ ಮಗನಿಗೆ ಹೆಸರಿಟ್ಟಿರುವುದನ್ನು ಒಂದು ಪುಟ್ಟ ವೀಡಿಯೋ ಮಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಮಗನ ನಾಮಕರಣದ ಒಂದು ಫೋಟೋ ಹಾಗೂ ಮಗುವಿನ ಕೆಲವು ಮುದ್ದಾದ ಫೋಟೋಗಳನ್ನು ಕೂಡ ವೀಡಿಯೋದಲ್ಲಿ ಸೇರಿಸಿದ್ದಾರೆ.

     

    View this post on Instagram

     

    A post shared by Pavan wadeyar (@pavanwadeyar)

    2020ರ ಡಿಸೆಂಬರ್ 10 ರಮದು ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿಗೆ ಮಗ ಹುಟ್ಟಿದ್ದನು. ಈ ಸಂತಸದ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದರು. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ ತಮ್ಮ ಇನ್‍ಸ್ಟಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು. ಅಲ್ಲದೆ ನನ್ನ ಜನ್ಮದಿನದಂದೇ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು ಬರೆದುಕೊಂಡಿದ್ದರು.

    ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಅಭಿನಯಿಸಿದ್ದಾರೆ.

     

    View this post on Instagram

     

    A post shared by Pavan wadeyar (@pavanwadeyar)

     

  • ಜನ್ಮ ದಿನದಂದೇ ಅದ್ಭುತ ಗಿಫ್ಟ್- ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್

    ಜನ್ಮ ದಿನದಂದೇ ಅದ್ಭುತ ಗಿಫ್ಟ್- ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್

    ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿಗೆ ಗಂಡು ಮಗುವಿನ ಜನನವಾಗಿದೆ.

    ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ ತಮ್ಮ ಇನ್‍ಸ್ಟಾ, ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೆ ನನ್ನ ಜನ್ಮದಿನದಂದೇ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು ಬರೆದುಕೊಂಡಿದ್ದಾರೆ.

    https://twitter.com/PavanWadeyar/status/1314234597077471234

    ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಅಭಿನಯಿಸಿದ್ದಾರೆ.

    ಮೊದಲ ಮಗುವಿನ ಸಂತಸದಲ್ಲಿದ್ದ ದಂಪತಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದರು. ಅಲ್ಲದೇ ಅಪೇಕ್ಷಾ ಪುರೋಹಿತ್ ಗರ್ಭಿಣಿ ಫೋಟೋಶೂಟ್ ಕೂಡ ಮಾಡಿಸಿದ್ದರು. ಪತ್ನಿಯ ಜೊತೆ ಪವನ್ ಒಡೆಯರ್ ಕೂಡ ಫೋಟೋಗೆ ಪೋಸ್ ಕೊಟ್ಟಿದ್ದರು. ವಿವಿಧ ರೀತಿಯಲ್ಲಿ ದಂಪತಿ ಫೋಟೋಶೂಟ್ ಮಾಡಿದ್ದು, ಇಬ್ಬರು ಮುದ್ದಾಗಿ ಕಾಣಿಸಿಕೊಂಡಿದ್ದರು.

    ಈ ಫೋಟೋವನ್ನು ಪವನ್ ಅವರು ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿದ್ದು, ‘ಸದಾ ವಟ ವಟ ಮಾತನಾಡುವ ನಾನು. ಮೌನಿಯಾದ ಕ್ಷಣಗಳು. ಹೌದು. ನಮ್ಮ ಜೀವನದ ಅತ್ಯಂತ ಸುಂದರ ದಿನಗಳಿಗಾಗಿ ಹಾತೊರೆಯುತ್ತಿದ್ದೇವೆ. ಮಾತುಗಳಲ್ಲಿ ಆ ಖುಷಿ ಹೇಳಲಾಗದೆ. ಹಾಡಿನ ರೂಪದಲ್ಲಿ ವ್ಯಕ್ತಪಡಿಸುವ ಪ್ರಯತ್ನ ಮಾಡಿದ್ದೇವೆ. ಆ ಮುಗುಳುನಗೆ ಹಾಡಿಗಾಗಿ ನಿರೀಕ್ಷಿಸಿ’ ಎಂದು ಬರೆದುಕೊಂಡಿದ್ದರು. ಇದೀಗ ದಂಪತಿಗೆ ಗಂಡು ಮಗು ಹುಟ್ಟಿದ್ದು, ಕುಟುಂಬ ಸಂಸತದಲ್ಲಿದೆ.

     

    View this post on Instagram

     

    A post shared by Pavan wadeyar (@pavanwadeyar)

  • ಪವನ್ ಒಡೆಯರ್ ಪತ್ನಿಗೆ ಸೀಮಂತ ಸಂಭ್ರಮ

    ಪವನ್ ಒಡೆಯರ್ ಪತ್ನಿಗೆ ಸೀಮಂತ ಸಂಭ್ರಮ

    ಬೆಂಗಳೂರು: ಇತ್ತೀಚೆಗಷ್ಟೆ ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ತಂದೆ-ತಾಯಿ ಆಗುತ್ತಿರುವ ಸಂತಸವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ತುಂಬು ಗರ್ಭಿಣಿ ಅಪೇಕ್ಷಾ ಅವರಿಗೆ ಸೀಮಂತ ಶಾಸ್ತ್ರ ನೆರವೇರಿದೆ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಪವನ್ ಒಡೆಯರ್ ದಂಪತಿ – ಫೋಟೋಶೂಟ್

    ಅಪೇಕ್ಷಾ ಪುರೋಹಿತ್ ಅವರ ಸೀಮಂತ ಕಾರ್ಯಕ್ರಮ ಮಾಡಲಾಗಿದೆ. ಈ ಸುಂದರ ಕ್ಷಣಗಳ ಫೋಟೋವನ್ನು ನಿರ್ದೇಶಕ ಪವನ್ ಒಡೆಯರ್ ಟ್ವಿಟ್ಟರಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತುಂಬಾ ಸರಳವಾಗಿ ಸೀಮಂತ ಶಾಸ್ತ್ರ ಮಾಡಲಾಗಿದ್ದು, ಕುಟುಂಬದವರು ಮತ್ತು ಆಪ್ತರು ಮಾತ್ರ ಸೀಮಂತ ಸಂಭ್ರಮದಲ್ಲಿ ಭಾಗಿಯಾಗಿದ್ದರು.

    ತುಂಬು ಗರ್ಭಿಣಿ ಅಪೇಕ್ಷಾ ಹಸಿರು ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ. ಜೊತೆಗೆ ಇಷ್ಟದ ತಿನಿಸುಗಳನ್ನು ಇಟ್ಟು ಬಯಕೆ ಶಾಸ್ತ್ರ ಮಾಡಿಸಿಕೊಂಡಿದ್ದಾರೆ. ಪೂಜೆ ಮತ್ತು ಶಾಸ್ತ್ರದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಕೆಲ ದಿನಗಳ ಹಿಂದೆಯಷ್ಟೆ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ಅಭಿಮಾನಿಗಳು ಗುಡ್‍ನ್ಯೂಸ್ ಕೊಟ್ಟಿದ್ದರು. ಅಂದರೆ ತಾವು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಪವನ್ ಒಡೆಯರ್ ಸೋಶಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದರು. “ಸದಾ ವಟ ವಟ ಮಾತನಾಡುವ ನಾನು. ಮೌನಿಯಾದ ಕ್ಷಣಗಳು. ಹೌದು ನಮ್ಮ ಜೀವನದ ಅತ್ಯಂತ ಸುಂದರ ದಿನಗಳಿಗಾಗಿ ಹಾತೊರೆಯುತ್ತಿದ್ದೇವೆ. ಮಾತುಗಳಲ್ಲಿ ಆ ಖುಷಿ ಹೇಳಲಾಗದೆ. ಹಾಡಿನ ರೂಪದಲ್ಲಿ ವ್ಯಕ್ತಪಡಿಸುವ ಪ್ರಯತ್ನ ಮಾಡಿದ್ದೇವೆ. ಆ ಮುಗುಳುನಗೆ ಹಾಡಿಗಾಗಿ ನಿರೀಕ್ಷಿಸಿ” ಎಂದು ಬರೆದುಕೊಂಡಿದ್ದರು.

    https://twitter.com/PavanWadeyar/status/1314234597077471234

    ಪವನ್ ಒಡೆಯರ್ ಹಾಡಿನ ಮೂಲಕ ತಾವು ತಂದೆಯಾಗುತ್ತಿರುವ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶೀಫ್ರದಲ್ಲೇ ಹಾಡನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಅಪೇಕ್ಷಾ ಪುರೋಹಿತ್ ಗರ್ಭಿಣಿ ಫೋಟೋಶೂಟ್ ಮಾಡಿಸಿದ್ದು, ಪತ್ನಿಯ ಜೊತೆ ಪವನ್ ಒಡೆಯರ್ ಕೂಡ ಫೋಟೋಗೆ ಪೋಸ್ ಕೊಟ್ಟಿದ್ದರು. ವಿವಿಧ ರೀತಿಯಲ್ಲಿ ದಂಪತಿ ಫೋಟೋಶೂಟ್ ಮಾಡಿದ್ದು, ಇಬ್ಬರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

  • ಮೊದಲ ಮಗುವಿನ ನಿರೀಕ್ಷೆಯಲ್ಲಿ ಪವನ್ ಒಡೆಯರ್ ದಂಪತಿ – ಫೋಟೋಶೂಟ್

    ಮೊದಲ ಮಗುವಿನ ನಿರೀಕ್ಷೆಯಲ್ಲಿ ಪವನ್ ಒಡೆಯರ್ ದಂಪತಿ – ಫೋಟೋಶೂಟ್

    ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿ ಗುಡ್‍ನ್ಯೂಸ್ ಕೊಟ್ಟಿದ್ದು, ಶೀಫ್ರದಲ್ಲೇ ತಂದೆ-ತಾಯಿಯಾಗುತ್ತಿದ್ದಾರೆ.

    ಹೌದು..ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಚಾರವನ್ನು ಪವನ್ ಒಡೆಯರ್ ಸೋಶಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ. ಅಲ್ಲದೇ ಅಪೇಕ್ಷಾ ಪುರೋಹಿತ್ ಗರ್ಭಿಣಿ ಫೋಟೋಶೂಟ್ ಮಾಡಿಸಿದ್ದಾರೆ. ಪತ್ನಿಯ ಜೊತೆ ಪವನ್ ಒಡೆಯರ್ ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ವಿವಿಧ ರೀತಿಯಲ್ಲಿ ದಂಪತಿ ಫೋಟೋಶೂಟ್ ಮಾಡಿದ್ದು, ಇಬ್ಬರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಈ ಫೋಟೋವನ್ನು ಪವನ್ ಅವರು ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿದ್ದು, “ಸದಾ ವಟ ವಟ ಮಾತನಾಡುವ ನಾನು. ಮೌನಿಯಾದ ಕ್ಷಣಗಳು. ಹೌದು ನಮ್ಮ ಜೀವನದ ಅತ್ಯಂತ ಸುಂದರ ದಿನಗಳಿಗಾಗಿ ಹಾತೊರೆಯುತ್ತಿದ್ದೇವೆ. ಮಾತುಗಳಲ್ಲಿ ಆ ಖುಷಿ ಹೇಳಲಾಗದೆ. ಹಾಡಿನ ರೂಪದಲ್ಲಿ ವ್ಯಕ್ತಪಡಿಸುವ ಪ್ರಯತ್ನ ಮಾಡಿದ್ದೇವೆ. ಆ ಮುಗುಳುನಗೆ ಹಾಡಿಗಾಗಿ ನಿರೀಕ್ಷಿಸಿ” ಎಂದು ಬರೆದುಕೊಂಡಿದ್ದಾರೆ.

    ಪವನ್ ಒಡೆಯರ್ ಹಾಡಿನ ಮೂಲಕ ತಾವು ತಂದೆಯಾಗುತ್ತಿರುವ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶೀಫ್ರದಲ್ಲೇ ಹಾಡನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಪವನ್ ಒಡೆಯರ್ ಫೋಟೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.

    ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.

    ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ‘ತ್ರಿವೇಣಿ ಸಂಗಮ’, ‘ಕಿನ್ನರಿ’, ‘ಸಾಗುತ ದೂರ ದೂರ’ ‘ಮರಳಿ ಬಂದಳು ಸೀತೆ’ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಟಿಎನ್ ಸೀತಾರಾಮ್ ಅವರ ‘ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

    ನಿರ್ದೇಶಕ ಪವನ್ ಒಡೆಯರ್ ‘ರಣವಿಕ್ರಮ’, ‘ನಟರಾಜ ಸರ್ವಿಸ್’, ‘ಗೂಗ್ಲಿ’, ‘ಗೋವಿಂದಾಯ ನಮಃ’ ಹಾಗೂ ‘ನಟ ಸಾರ್ವಭೌಮ’ ಸಿನಿಮಾಗಳನ್ನು ಮಾಡಿದ್ದಾರೆ.

    https://www.instagram.com/p/CF63JisHbav/?igshid=1hp2sfdnxt7i0

  • ಪತ್ನಿಯ ಹುಟ್ಟುಹಬ್ಬಕ್ಕೆ ಶುಭಕೋರಿ ವಿಶೇಷ ಮನವಿ ಸಲ್ಲಿಸಿದ ಪವನ್ ಒಡೆಯರ್

    ಪತ್ನಿಯ ಹುಟ್ಟುಹಬ್ಬಕ್ಕೆ ಶುಭಕೋರಿ ವಿಶೇಷ ಮನವಿ ಸಲ್ಲಿಸಿದ ಪವನ್ ಒಡೆಯರ್

    ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ತಮ್ಮ ಪತ್ನಿ, ನಟಿ ಅಪೇಕ್ಷಾ ಪುರೋಹಿತ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದಾರೆ.

    ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪತ್ನಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿರುವ ಪವನ್ ಒಡೆಯರ್, ಅದ್ಭುತ ಸ್ನೇಹಿತೆ, ಮಹಾನ್ ವಾಗ್ಮಿ, ಈ ಒಡೆಯರ್‍ನ ಸಂಪೂರ್ಣ ಜೀವನದ ಒಡತಿ. ಈ ನಿನ್ನ ಹುಟ್ಟುಹಬ್ಬದ ದಿನದಂದು ನನ್ನ ಒಂದು ಬಿನ್ನಹ, ಗೂಗಲ್‍ಗೂ ಕನ್‍ಫ್ಯೂಸ್ ಮಾಡುವಂಥ ಪ್ರಶ್ನೆಗಳನ್ನು ಸ್ವಲ್ಪ ಕಡಿಮೆ ಮಾಡ್ಕೋ ಬಂಗಾರಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಎಂತಹ ಕಷ್ಟ ಬಂದ್ರೂ ಎದುರಿಸೋದನ್ನ ಕಲಿಸಿರುವುದೇ ದರ್ಶನ್ ಸರ್: ಪವನ್ ಒಡೆಯರ್

    ಪತ್ನಿಯ ಹುಟ್ಟುಹಬ್ಬಕ್ಕೆ ಪವನ್ ಒಡೆಯರ್ ಕಾರ್ ಗಿಫ್ಟ್ ನೀಡಿದ್ದಾರೆ. ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು.

    ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ‘ತ್ರಿವೇಣಿ ಸಂಗಮ’, ‘ಕಿನ್ನರಿ’, ‘ಸಾಗುತ ದೂರ ದೂರ’ ‘ಮರಳಿ ಬಂದಳು ಸೀತೆ’ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಟಿಎನ್ ಸೀತಾರಾಮ್ ಅವರ `ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

    ನಿರ್ದೇಶಕ ಪವನ್ ಒಡೆಯರ್ ‘ರಣವಿಕ್ರಮ’, ‘ನಟರಾಜ ಸರ್ವಿಸ್’, ‘ಗೂಗ್ಲಿ’, ‘ಗೋವಿಂದಾಯ ನಮಃ’ ಹಾಗೂ ‘ನಟ ಸಾರ್ವಭೌಮ’ ಸಿನಿಮಾಗಳನ್ನು ಮಾಡಿದ್ದಾರೆ.

  • ನಾಲ್ವರು ಸ್ಟಾರ್ ನಟರನ್ನು ಹಿಂದಿಕ್ಕಿದ ಅಪೇಕ್ಷಾ ಪುರೋಹಿತ್

    ನಾಲ್ವರು ಸ್ಟಾರ್ ನಟರನ್ನು ಹಿಂದಿಕ್ಕಿದ ಅಪೇಕ್ಷಾ ಪುರೋಹಿತ್

    ಬೆಂಗಳೂರು: ಇತ್ತೀಚೆಗೆ ನಡೆದ ದಕ್ಷಿಣ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ(ಸೈಮಾ) ಕಾರ್ಯಕ್ರಮದಲ್ಲಿ ನಾಲ್ವರು ಖ್ಯಾತ ನಟರನ್ನು ಹಿಂದಿಕ್ಕಿ ನಟಿ ಅಪೇಕ್ಷಾ ಪೊರೋಹಿತ್ ಅವರು ಟಿ.ಎನ್. ಸೀತಾರಾಮ್ ನಿರ್ದೇಶನದ `ಕಾಫಿತೋಟ’ದಲ್ಲಿ ಅಭಿನಯಕ್ಕಾಗಿ ಅತ್ಯುತ್ತಮ ಖಳನಟಿ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

    ಸೆಪ್ಟೆಂಬರ್ 14 ಮತ್ತು 15 ಎರಡು ದಿನ ದುಬೈನಲ್ಲಿ ಸೈಮಾ 2018 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಿನಿಮಾಗಳು, ನಟ, ನಟಿ, ಖಳನಟ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಸೇರಿದಂತೆ ಸಾಕಷ್ಟು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ.

    ಇದೇ ವೇಳೆ ಸ್ಯಾಂಡಲ್‍ವುಡ್ ಅತ್ಯುತ್ತಮ ಖಳನಟಿ ಪಾತ್ರಕ್ಕೆ ಅಪೇಕ್ಷಾ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸೈಮಾದಲ್ಲಿ ಸ್ಯಾಂಡಲ್‍ವುಡ್ ಸಿನಿಮಾದಲ್ಲಿ ಅಭಿನಯಿಸಿದ್ದ ಅತ್ಯುತ್ತಮ ಖಳನಾಯನ ಪಾತ್ರ ಪ್ರಶಸ್ತಿಗೆ ಐದು ಮಂದಿ ಆಯ್ಕೆಯಾಗಿದ್ದರು. ‘ರಾಜಕುಮಾರ್’ ಸಿನಿಮಾದಿಂದ ನಟ ಪ್ರಕಾಶ್ ರಾಜ್, ‘ಪಟಾಕಿ’ ಚಿತ್ರದಿಂದ ಆಶೀಶ್ ವಿದ್ಯಾರ್ಥಿ, ‘ಕಾಫಿತೋಟ’ ಸಿನಿಮಾದಿಂದ ಅಪೇಕ್ಷಾ ಪುರೋಹಿತ್, ‘ಹೆಬ್ಬುಲಿ’ ಸಿನಿಮಾದಿಂದ ಪಿ. ರವಿಶಂಕರ್ ಮತ್ತು ‘ಚಕ್ರವರ್ತಿ’ ಚಿತ್ರದಿಂದ ಶಹವಾರ್ ಅಲಿ ಪ್ರಶಸ್ತಿ ಸುತ್ತಿಗೆ ಆಯ್ಕೆ ಆಗಿದ್ದರು.

    ಅಂತಿಮವಾಗಿ ‘ಕಾಫಿತೋಟ’ ಸಿನಿಮಾದಲ್ಲಿ ಖಳನಾಯಕಿಯಾಗಿ ಅಭಿನಯಿಸಿದ್ದ ಅಪೇಕ್ಷಾ ತಮ್ಮ ಅತ್ಯುತ್ತಮ ನಟನೆಯಿಂದ ಸೈಮಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಪ್ರಶಸ್ತಿ ಪಡೆದ ಖುಷಿಯಲ್ಲಿ ಅಪೇಕ್ಷಾ ಅವರು ತನ್ನ ಸಂತಸವನ್ನು ಟ್ಟಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಮೇಲೆ ಭರವಸೆ ಇಟ್ಟು ಈ ಪಾತ್ರವನ್ನು ಮಾಡಿಸಿದ ಸೀತಾರಾಮ್ ಸರ್ ಗೆ ಹೃದಯ ಪೂರ್ವಕವಾಗಿ ಧನ್ಯವಾದಗಳು. ನನ್ನ ಎಲ್ಲ ಸ್ನೇಹಿತರಿಗೆ, ನನಗೆ ಬೆಂಬಲ ನೀಡಿದವರಿಗೆ ಮತ್ತು ಕಾಫಿತೋಟ ಚಿತ್ರತಂಡದವರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿಶ್ಚಿತಾರ್ಥದ ಸಂಭ್ರಮದಲ್ಲಿ `ಗೂಗ್ಲಿ’ ನಿರ್ದೇಶಕ ಪವನ್ ಒಡೆಯರ್

    ನಿಶ್ಚಿತಾರ್ಥದ ಸಂಭ್ರಮದಲ್ಲಿ `ಗೂಗ್ಲಿ’ ನಿರ್ದೇಶಕ ಪವನ್ ಒಡೆಯರ್

    ಬೆಂಗಳೂರು: ಮೊನ್ನೆ ತಾನೇ ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಾವು ಮೆಚ್ಚಿದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ಮತ್ತೊಬ್ಬ ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಹಸೆಮಣೆ ಏರಲು ಸಜ್ಜಾಗುತ್ತಿದ್ದಾರೆ.

    ಕುಟುಂಬದ ಹಿರಿಯರು ನೋಡಿ ಮೆಚ್ಚಿರುವ ಅಪೇಕ್ಷಾ ಪುರೋಹಿತ್ ಜೊತೆಗೆ ವಿವಾಹ ಬಂಧನಕ್ಕೆ ಪವನ್ ಒಳಗಾಗಲಿದ್ದಾರೆ. ಡಿಸೆಂಬರ್ 7 ರಂದು ಪವನ್-ಅಪೇಕ್ಷಾ ಜೋಡಿಯ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ.

    ಅಂದಹಾಗೇ ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಇತ್ತೀಚೆಗೆ ಬಿಡುಗಡೆಗೊಂಡ ಟಿಎನ್ ಸೀತಾರಾಮ್ ಅವರ `ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

    ಅಪೇಕ್ಷಾ ಓದಿದ್ದು ಫ್ಯಾಷನ್ ಡಿಸೈನಿಂಗ್. ಕನ್ನಡ ಖಾಸಗಿ ವಾಹಿನಿಯೊಂದರಲ್ಲಿ ಮೂಡಿ ಬರುತ್ತಿದ್ದ `ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆಗೆ ಎಂಟ್ರಿ ನೀಡಿದ್ದರು. ನಂತರ ಕಿರುತೆರೆಯಿಂದ ಬೆಳ್ಳಿ ತೆರೆಗೆ ಬರಲು ಟಿ.ಎನ್. ಸೀತಾರಾಮ್ ನಿರ್ದೇಶನದ `ಕಾಫೀ ತೋಟ’ ಸಿನಿಮಾ ಇವರಿಗೆ ಉತ್ತಮ ಅವಕಾಶವನ್ನು ನೀಡಿತ್ತು. ಸಿನಿಮಾ ರಂಗಕ್ಕೆ ಅಚ್ಚರಿಯಾಗಿ ಬಂದ ಇವರು `ಕಿನಾರೆ’ ಮತ್ತು `ಕಾಣದ ಕಡಲಿಗೆ’ ಎಂಬ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ.

    ಗುರು-ಹಿರಿಯರು ನಿಶ್ಚಯಿಸಿದಂತೆ ಡಿಸೆಂಬರ್ 7ರಂದು ನಿಶ್ಚಿತಾರ್ಥ ನಡೆಯಲಿದ್ದು, ಬೆಂಗಳೂರಿನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    https://www.instagram.com/p/BcEJevTHxjs/?hl=en&taken-by=apekshapurohit

    https://www.instagram.com/p/BcAh6hBHv5I/?hl=en&taken-by=apekshapurohit

    https://www.instagram.com/p/Bb844uJnvfR/?hl=en&taken-by=apekshapurohit

    https://www.instagram.com/p/Bb4VLnQnNhz/?hl=en&taken-by=apekshapurohit

    https://www.instagram.com/p/Bbm88Z0H0vf/?hl=en&taken-by=apekshapurohit

    https://www.instagram.com/p/BbV0gyOHayZ/?hl=en&taken-by=apekshapurohit

    https://www.instagram.com/p/BbQ4HCFHSxL/?hl=en&taken-by=apekshapurohit

    https://www.instagram.com/p/BbGxb3snjuE/?hl=en&taken-by=apekshapurohit

    https://www.instagram.com/p/Ba3oegIn0It/?hl=en&taken-by=apekshapurohit

    https://www.instagram.com/p/BacLgr4HiO6/?hl=en&taken-by=apekshapurohit

    https://www.instagram.com/p/Bax1pY3n4f7/?hl=en&taken-by=apekshapurohit

    https://www.instagram.com/p/BaOONhjnUOd/?hl=en&taken-by=apekshapurohit

    https://www.instagram.com/p/BaCSo6NnMXj/?hl=en&taken-by=apekshapurohit

    https://www.instagram.com/p/BZ8XjWknc5l/?hl=en&taken-by=apekshapurohit

    https://www.instagram.com/p/BZndgkXnQWu/?hl=en&taken-by=apekshapurohit

    https://www.instagram.com/p/BZKqxp7HgLr/?hl=en&taken-by=apekshapurohit

    https://www.instagram.com/p/BYsSBuEnEsJ/?hl=en&taken-by=apekshapurohit

    https://www.instagram.com/p/BYAxNuJn5v3/?hl=en&taken-by=apekshapurohit

    https://www.instagram.com/p/BX23uvAnbPl/?hl=en&taken-by=apekshapurohit

    https://www.instagram.com/p/BXO0fkunN1y/?hl=en&taken-by=apekshapurohit

    https://www.instagram.com/p/BWkGyimHL1L/?hl=en&taken-by=apekshapurohit

    https://www.instagram.com/p/BVmFzs2n_X1/?hl=en&taken-by=apekshapurohit

    https://www.instagram.com/p/BVT5oDXHiGo/?hl=en&taken-by=apekshapurohit

    https://www.instagram.com/p/BU6E8RdBWFE/?hl=en&taken-by=apekshapurohit

    https://www.instagram.com/p/BUjVoKiB-tw/?hl=en&taken-by=apekshapurohit

    https://www.instagram.com/p/BTqBQoZBf8e/?hl=en&taken-by=apekshapurohit

    https://www.instagram.com/p/BSu1NoRh0uz/?hl=en&taken-by=apekshapurohit

    https://www.instagram.com/p/BRx7UDkhdRN/?hl=en&taken-by=apekshapurohit

    https://www.instagram.com/p/BQlXQb6B35z/?hl=en&taken-by=apekshapurohit

    https://www.instagram.com/p/_yAVUUvTDg/?taken-by=pavanwadeyar