Tag: app

  • ಪತಿಯ ಮೇಲೆ ಪತ್ನಿಯಿಂದಲೇ ಹೈಟೆಕ್ ಬೇಹುಗಾರಿಕೆ: ಸಿಕ್ಕಿಬಿದ್ದಿದ್ದು ಹೇಗೆ? ಏನಿದು ಆ್ಯಪ್?

    ಪತಿಯ ಮೇಲೆ ಪತ್ನಿಯಿಂದಲೇ ಹೈಟೆಕ್ ಬೇಹುಗಾರಿಕೆ: ಸಿಕ್ಕಿಬಿದ್ದಿದ್ದು ಹೇಗೆ? ಏನಿದು ಆ್ಯಪ್?

    ತಿರುವನಂತಪುರಂ: ಸ್ನೇಹಿತೆಯ ಪತಿಯ ಚಲನವಲನಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಬಂಧಿಸಿರುವ ಘಟನೆ ಕೇರಳ ತಿರುವನಂತಪುರಂ ನಲ್ಲಿ ನಡೆದಿದೆ.

    ಸ್ನೇಹಿತೆಯ ಪತಿಯ ಮೊಬೈಲ್ ನಲ್ಲಿ ರಿಯಲ್ ಟೈಮ್ ಟ್ರ್ಯಾಕಿಂಗ್ ಅಪ್ಲಿಕೇಶನ್ ಅಳವಡಿಸಿದ ಬ್ಯಾಂಕ್ ಉದ್ಯೋಗಿ ಆತನ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ನೀಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಅಜಿತ್ ಎಸ್ (32) ಎಂಬಾತ ಟ್ರ್ಯಾಕ್ ವ್ಯೂ ಎಂಬ ಮೊಬೈಲ್ ಸೆಕ್ಯೂರಿಟಿ ಅಪ್ಲಿಕೇಶನ್ ಬಳಸಿ ಸ್ನೇಹಿತೆಯ ಪತಿಯ ಚಲನವಲನಗಳನ್ನು ದಾಖಲಿಸುತ್ತಿದ್ದ. ಈ ಮೂಲಕ ಸ್ನೇಹಿತೆಯ ಪತಿಯ ಲೋಕೇಶನ್, ಮೊಬೈಲ್ ನಲ್ಲಿ ದಾಖಲಾಗುವ ವಿಡಿಯೋ, ಫೋಟೋ ಮತ್ತು ಕಾಲ್ ರೆರ್ಕಾಡಿಂಗ್ ಮಾಹಿತಿಯನ್ನು ಪಡೆಯುತ್ತಿದ್ದರು.

    ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿದ ಕೊಚ್ಚಿ ಪೊಲೀಸ್ ಕಮಿಷನರ್ ಹಿಮೇಂದ್ರನಾಥ್, ಕೇರಳದಲ್ಲಿ ಇಂತಹ ಪ್ರಕರಣ ಇದೇ ಮೊದಲ ಬಾರಿಗೆ ವರದಿಯಾಗಿದೆ. ಸದ್ಯ ಬಂಧಿಸಲಾಗಿರುವ ವ್ಯಕ್ತಿ ವಿಚಾರಣೆ ನಡೆಯುತ್ತಿದ್ದು, ಆತ ಈ ರೀತಿಯ ಮೊಬೈಲ್ ಅಪ್ಲಿಕೇಶನ್ ಬಳಸಿ ಮತ್ತಷ್ಟು ಜನರನ್ನು ಟ್ರ್ಯಾಕ್ ಮಾಡಿರುವ ಶಂಕೆ ಇದ್ದು, ಈ ಕುರಿತು ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಅದ್ವೈತ್ ಆರ್ ವಿ (25) ಹಾಗೂ ಶೃತಿ ದಂಪತಿಗಳಾಗಿದ್ದು, ಇಬ್ಬರ ದಾಂಪತ್ಯದಲ್ಲಿ 7 ಲಕ್ಷ ರೂ, ಹಣದ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಈ ಕಾರಣದಿಂದ ಶೃತಿ ಗೆ ಸಹಾಯ ಮಾಡಲು ಸ್ನೇಹಿತ ಅಜಿತ್ ಸಹಾಯ ಪಡೆದ ಶೃತಿ ಪತಿ ಅದ್ವೈತ್ ಮೊಬೈಲ್ ಫೋನ್ ನಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಸಿದ್ದಳು. ಈ ವೇಳೆ ಶೃತಿ 15 ದಿನಗಳು ಪತಿಯ ಮನೆ ತೊರೆದು ಹೋಗಿದ್ದಳು. ಇದಾದ ಬಳಿಕ ಪತ್ನಿ ಶೃತಿ ಮನೆಯಲ್ಲಿ ಇಲ್ಲದಿದ್ದರೂ ಪತಿ ಎಲ್ಲಾ ಚಲನವಲನ ಬಗ್ಗೆ ಮಾಹಿತಿ ನೀಡಿ ಪ್ರಶ್ನಿಸುತ್ತಿದ್ದಳು ಎಂದು ಅದ್ವೈತ್ ತಿಳಿಸಿದ್ದಾರೆ.

    ನಾನು ಭೇಟಿ ನೀಡಿದ್ದ ಸ್ಥಳ, ತೆಗೆದುಕೊಂಡ ಆಹಾರ ಹಾಗೂ ಮನೆಯ ರೂಮ್ ನಲ್ಲಿದ್ದ ವೇಳೆ ಏನು ಮಾಡುತ್ತಿದೆ ಎಲ್ಲಾ ಮಾಹಿತಿಯನ್ನು ನೀಡುತ್ತಿದ್ದಳು. ಈ ವೇಳೆ ನನಗೆ ಶಂಕೆ ವ್ಯಕ್ತವಾಗಿ ರೂಮ್‍ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಳಾ ಎನ್ನುವುದರ ಬಗ್ಗೆಯೂ ಪರಿಶೀಲಿಸಿದೆ. ಬಳಿಕ ಐಟಿ ತಜ್ಞರ ಬಳಿ ನನ್ನ ಮೊಬೈಲ್ ನೀಡಿ ಪರಿಶೀಲನೆ ನಡೆಸಿದ ವೇಳೆ ಪತ್ನಿಯ ಕೃತ್ಯ ತಿಳಿಯಿತು. ಪತ್ನಿ ಸ್ನೇಹಿತನ ಸಹಾಯದಿಂದ ನನ್ನ ಮೊಬೈಲ್ ಅನ್ನು ಆಕೆ ಟ್ರ್ಯಾಕ್ ಮಾಡುತ್ತಿದ್ದಳು ಎಂದು ಅದ್ವೈತ್ ತಿಳಿಸಿದ್ದಾರೆ.

    ಸದ್ಯ ಬಂಧಿತ ಅಜಿತ್ ನೀಡಿರುವ ಮಾಹಿತಿ ಅನ್ವಯ, ಶೃತಿ ಪತಿಯ ಮೇಲೆ ಅನುಮಾನದಿಂದ ಅವರ ಎಲ್ಲಾ ಚಲನವಲನ ಬಗ್ಗೆ ಮಾಹಿತಿ ಪಡೆಯಲು ಕೇಳಿದ್ದರು. ಈ ಮೂಲಕ ಸಂಗ್ರಹಿಸಿದ ಮಾಹಿತಿ ಅನ್ವಯ ಪತಿಯ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಲು ಬಳಕೆ ಮಾಡುವ ಉದ್ದೇಶವಿತ್ತು ಎಂದು ತಿಳಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

    ಪತ್ನಿಯ ಈ ಕೃತ್ಯದಿಂದ ಅಘಾತಕ್ಕೆ ಒಳಗಾಗಿರುವ ಅದ್ವೈತ್ ಯಾವ ಉದ್ದೇಶದಿಂದ ಈ ರೀತಿ ನಡೆಸಿದ್ದಾಳೆ ಎಂಬುದು ತಿಳಿಯುತ್ತಿಲ್ಲ. ಇದು ನಮ್ಮ 6 ವರ್ಷದ ಮಗಳ ಜೀವನವನ್ನು ನಾಶ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಟ್ರ್ಯಾಕ್ ವ್ಯೂ ಹೇಗೆ ಕಾರ್ಯನಿರ್ವಹಿಸುತ್ತದೆ:
    ಟ್ರ್ಯಾಕ್ ವ್ಯೂ ಎಂಬ ಮೊಬೈಲ್ ಆ್ಯಪ್ ಆಂಡ್ರಾಯ್ಡ್ ಮೊಬೈಲ್ ಗಳಲ್ಲಿ ವ್ಯಕ್ತಿಯ ವೈಯಕ್ತಿಕ ಮಾಹಿತಿ ಸಂಗ್ರಹಿಸಲು ಬಳಕೆ ಮಾಡಲಾಗುತ್ತದೆ. ಈ ಆ್ಯಪನ್ನ ವ್ಯಕ್ತಿಯ ಮೊಬೈಲ್ ನಲ್ಲಿ ಅಳವಡಿಸಿದರೆ ಆತ ಮೊಬೈಲ್ ಮೂಲಕ ನಡೆಸುವ ಎಲ್ಲಾ ಮಾಹಿತಿ ಸಂಗ್ರಹಿಸಬಹುದಾಗಿದೆ.

    ಮುಖ್ಯವಾಗಿ ವ್ಯಕ್ತಿಯ ಲೋಕೇಶನ್ ಅನ್ನು ಮೊಬೈಲ್ ಜಿಪಿಎಸ್ ಆಫ್ ಇದ್ದರೂ ಟ್ರ್ಯಾಕ್ ಮಾಡಬಹುದು. ಗೂಗಲ್ ಮ್ಯಾಪ್ ಬಳಸಿ ಆತನ ಸ್ಥಳವನ್ನು ನಿಖರವಾಗಿ ತಿಳಿಯಬಹುದಾಗಿದೆ. ಅಷ್ಟೇ ಅಲ್ಲದೇ ಈ ಆಪ್ ಮೂಲಕ 6 ತಿಂಗಳ ಕಾಲ ಮೊಬೈಲ್ ಹಿಸ್ಟರಿಯನ್ನು ಬ್ಯಾಕಪ್ ಮಾಡಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಮುಸ್ಲಿಂ ಸಮುದಾಯದ ಪರ ನಿಂತ ಸುಷ್ಮಾ ಸ್ವರಾಜ್ ಟ್ರೋಲ್

    ಮುಸ್ಲಿಂ ಸಮುದಾಯದ ಪರ ನಿಂತ ಸುಷ್ಮಾ ಸ್ವರಾಜ್ ಟ್ರೋಲ್

    – ಪಾಸ್ ಪೋರ್ಟ್ ನಿಯಮಗಳಲ್ಲಿ `ಕಾಂತ್ರಿಕಾರಿ’ ಬದಲಾವಣೆ

    ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮುಸ್ಲಿಂ ಸಮುದಾಯದ ಪರ ನಿಂತಿದ್ದ ಕಾರಣ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಟ್ರೋಲ್ ಒಳಗಾಗಿದ್ದರು. ಆದರೆ ಸದ್ಯ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆಗೊಳಿಸಿ ಕಾಂತ್ರಿಕಾರಿ ಬದಲಾವಣೆಗೆ ಕಾರಣರಾಗಿದ್ದಾರೆ.

    ಪಾಸ್ ಪೋರ್ಟ್ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಸ್ ಪೋರ್ಟ್ ಪಡೆಯಲು ಯಾವುದೇ ಕಚೇರಿಯಲ್ಲೂ ವಿವಾಹ ಪ್ರಮಾಣ ಪತ್ರ ತೋರಿಸಬೇಕಾದ ಅಗತ್ಯವಿಲ್ಲ. ಅಲ್ಲದೇ ಭಾರತದ ಯಾವುದೇ ಮೂಲೆಯಿಂದಲೂ ಸಹ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು ಎಂದು  ತಿಳಿಸಿದ್ದಾರೆ. ಅಲ್ಲದೇ ವಿಚ್ಛೇದಿತ ಮಹಿಳೆಯರು ತಮ್ಮ ಮಾಜಿ ಪತಿ ಮತ್ತು ಅವರ ಮಕ್ಕಳ ಹೆಸರನ್ನು ತುಂಬಬೇಕಾದ ಅಗತ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಪಪಡಿಸಿದೆ.

    ಈ ಬದಲಾವಣೆಯನ್ನು ಪಾಸ್ ಪೋರ್ಟ್ ನಿಯಮಗಳಲ್ಲಿ ಮಾಡಲಾದ ಕಾಂತ್ರಿಕಾರಿ ಬದಲಾವಣೆ ಎಂದು ಕರೆದಿರುವ ಸುಷ್ಮಾ ಸ್ವರಾಜ್ ಅವರು, ವಿಚ್ಚೇದಿತ ಪುರುಷ ಹಾಗೂ ಆತನೊಂದಿಗಿರುವ ಮಕ್ಕಳ ಹೆಸರನ್ನು ನಮೂದಿಸಬೇಕೆ ಎಂಬ ಬಗ್ಗೆ ಕೆಲ ವಿಚ್ಚೇದಿತ ಮಹಿಳೆಯರು ದೂರು ನೀಡಿದ್ದರು. ಆದ್ದರಿಂದ ನಿಯಮವನ್ನು ಬದಲಾವಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

    ದೇಶದಲ್ಲಿ 260 ಪಾಸ್ ಪೋರ್ಟ್ ಸೇವಾ ಕೇಂದ್ರಗಳ ಸ್ಥಾಪನೆ ಕುರಿತು ಮಾಹಿತಿ ನೀಡಿದ ಅವರು, ಈಗಾಗಲೇ 212 ಕೇಂದ್ರಗಳು ಕಾರ್ಯಾರಂಭ ಮಾಡಿದೆ. ಇನ್ನು 38 ಹೆಚ್ಚುವರಿ ಕೇಂದ್ರಗಳಲ್ಲಿ ಎರಡು ಕೇಂದ್ರಗಳು ಆಂರಭಿಸುವ ಹಂತದಲ್ಲಿದೆ. ದೇಶದ ಲೋಕಸಭಾ ಕ್ಷೇತ್ರಗಳಿಗೆ ಒಂದರಂತೆ 260 ಕೇಂದ್ರಗಳನ್ನು ಸ್ಥಾಪಿಸುವುದಾಗಿ ತಿಳಿಸಿದರು.

    ಇದಕ್ಕೂ ಮೊದಲು ಲಖನೌದಲ್ಲಿ ಅಂತರ್ ಧರ್ಮೀಯ ದಂಪತಿಗೆ ಕಿರುಕುಳ ನೀಡಿದ್ದ ಪಾಸ್‍ಪೋರ್ಟ್ ಅಧಿಕಾರಿಯನ್ನು ವರ್ಗಾವಣೆ ಮಾಡಿ, ಅಧಿಕಾರಿಯ ವಿರುದ್ಧ ಕೈಗೊಂಡ ಬಗ್ಗೆ ಕೆಲವರು ಟ್ರೋಲ್ ಮಾಡಿದ್ದರು. ಇಸ್ಲಾಮಿಕ್ ಕಿಡ್ನಿ ಪಡೆದಿದ್ದರ ಫಲ ಎಂದೆಲ್ಲಾ ಕಮೆಂಟ್ ಮಾಡಿದ್ದರು. ಈ ಟ್ರೋಲ್ ಗಳಿಗೆ ಪ್ರತಿಕ್ರಿಯಿಸಿದ ಸುಷ್ಮಾ ಅವರು ಅಂತಹ ಟ್ರೋಲ್ ಲೈಕ್ ಮಾಡಿ, ಕೆಲವರ ಟ್ವೀಟ್ ನಿಂದ ದೊಡ್ಡ ಗೌರವವೇ ಸಿಕ್ಕಿದೆ. ಅದನ್ನು ನಾನು ನಿಮ್ಮೊಂದಿಗೆ ಶೇರ್ ಮಾಡಿದ್ದೇನೆ. ಅದನ್ನು ನಾನು ಇಷ್ಟಪಟ್ಟಿದ್ದೇನೆ ಎಂದು ಟಾಂಗ್ ನೀಡಿದ್ದಾರೆ.

  • ಪ್ರಧಾನಿ ಜೊತೆ ಮಾತನಾಡಿ ಪುಳಕಿತನಾಗಿದ್ದೇನೆ- ಶಾಸಕ ಸುನಿಲ್ ಕುಮಾರ್

    ಪ್ರಧಾನಿ ಜೊತೆ ಮಾತನಾಡಿ ಪುಳಕಿತನಾಗಿದ್ದೇನೆ- ಶಾಸಕ ಸುನಿಲ್ ಕುಮಾರ್

    ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತನಾಡುವ ಅವಕಾಶ ಸಿಕ್ಕಿರುವುದು ನನ್ನ ಜೀವನದ ಅಪರೂಪ ಘಟನೆ ಅಂತ ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

    ಇಂದು ಬಿಜೆಪಿ ನಾಯಕ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಆಪ್ ಮೂಲಕ ಸಂವಾದ ನಡೆಸಿದ್ದರು. ಸಂವಾದದ ಬಳಿಕ ಮಾತನಾಡಿದ ಸುನಿಲ್ ಕುಮಾರ್, ಮೋದಿ ಅವರ ಜೊತೆ ನೇರ ಮಾತುಕತೆ ನಡೆಸುತ್ತೇವೆ ಅಂತ ಕನಸಲ್ಲೂ ಊಹಿಸಿರಲಿಲ್ಲ. ಆದ್ರೆ ಇವತ್ತು ಅವರ ಜೊತೆ ಮಾತಾಡುವ ಅವಕಾಶ ಸಿಕ್ಕಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಅಂದ್ರು. ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿಯೇ ಬಿಜೆಪಿ ಅಜೆಂಡಾ -ಅಭ್ಯರ್ಥಿಗಳಿಗೆ ಮೋದಿ ಪ್ರಚಾರ ಪಾಠ

    ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ 15-20 ದಿನಗಳಿಂದ ನಿರಂತರವಾಗಿ ಓಡಾಟ ಮಾಡುತ್ತಿರುವ ನಮಗೆ ಅವರ ಜೊತೆ ಮಾತಾಡಿದ ನಂತರ ಒಂದು ಹೊಸ ಉತ್ಸಾಹ, ಪುಳಕಿತವಾದಂತಹ ಅನುಭವವಾಗಿದೆ ಅಂತ ಸಂತಸ ವ್ಯಕ್ತಪಡಿಸಿದ್ದಾರೆ.

    ಯಾವ ರೀತಿಯಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕು ಅಂತ ಅವರು ಹೇಳಿದ್ದಾರೆ. ಹೀಗಾಗಿ ಅವರು ಕೊಟ್ಟ ಸೂಚನೆಗಳನ್ನು ಮೈಗೂಡಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಪ್ರಧಾನಿ ಜೊತೆ ಒಬ್ಬ ಸಾಮಾನ್ಯ ಕಾರ್ಯಕರ್ತ ಈ ರೀತಿ ಮಾತುಕತೆ ಮಾಡಿರುವಂತದ್ದು, ನನ್ನ ಜೀವನದ ಅತ್ಯಂತ ಅಮೂಲ್ಯವಾದ ಘಟನೆ ಅಂದ್ರು.

  • ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ – `ಮುಖ್ಯಮಂತ್ರಿ ಮಾತು ಆ್ಯಪ್’ ಬಿಡುಗಡೆ

    ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ – `ಮುಖ್ಯಮಂತ್ರಿ ಮಾತು ಆ್ಯಪ್’ ಬಿಡುಗಡೆ

    ಬೆಂಗಳೂರು: ಕಾಂಗ್ರೆಸ್ ನಾಯಕರು `ಮುಖ್ಯಮಂತ್ರಿ ಮಾತು ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಆ್ಯಪ್ ಬಿಡುಗಡೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಚುನಾವಣೆ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿಕೆಶಿವಕುಮಾರ್, ಜಾರ್ಜ್ ರಿಂದ ಆ್ಯಪ್ ಬಿಡುಗಡೆ ಮಾಡಿಸಲಾಗಿದೆ.

    ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಅನ್ನೊ ಟ್ಯಾಗ್ ಲೈನ್ ಕೂಡ ಇದೆ. ಈ ಆ್ಯಪ್ ನಲ್ಲಿ ಮುಖ್ಯಮಂತ್ರಿಗಳ ಮಾತು, ಸಿದ್ದರಾಮಯ್ಯ ಭಾಷಣದ ವಿಡಿಯೋ ಲಭ್ಯವಾಗುತ್ತದೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಸರ್ಕಾರದ ಸಾಧನೆ ಮತ್ತು ಮುಂದಿನ ದಿನಗಳ ವಿಷನ್ ಕುರಿತಾತ ವಿಡಿಯೋ ಲಭ್ಯವಾಗುತ್ತದೆ. ಈ ಆ್ಯಪ್‍ನಲ್ಲಿ ಸಿಎಂ ಫೋಟೋ ಸ್ಕ್ಯಾನ್ ಮಾಡಿದರೆ ಸಿದ್ದರಾಮಯ್ಯ ಅವರ ಭಾಷಣ ಲಭ್ಯವಾಗುತ್ತದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಈ ಆ್ಯಪ್ ನಿರ್ಮಾಣ ಮಾಡಲಾಗಿದ್ದು, ಆಗ್ನೆಂಟೆಡ್ ರಿಯಾಲಿಟಿ ತಂತ್ರಜ್ಞಾನದ ಆ್ಯಪ್ ಆಗಿದೆ.

    ಈ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿ, ತಂತ್ರಜ್ಞಾನ ಬೆಳೆಯಲು ಕಾಂಗ್ರೆಸ್ ಪಕ್ಷ ಕಾರಣ. ಪ್ರಜಾಪ್ರಭುತ್ವದಲ್ಲಿ 5 ವರ್ಷಕ್ಕೆ ಚುನಾವಣೆ ನಡೆಯುತ್ತದೆ. ಮತದಾರರ ನಿರೀಕ್ಷೆಗೆ ತಕ್ಕಂತೆ ಸರ್ಕಾರಗಳು ಕೆಲಸ ಮಾಡಬೇಕು. ಆಡಳಿತದಲ್ಲಿ ಪಾರದರ್ಶಕತೆ, ಅಭಿವೃದ್ಧಿ ಕೆಲಸವನ್ನು ಸರ್ಕಾರ ಮಾಡಬೇಕು. 2013ರಲ್ಲಿ ನಮ್ಮ ಸರ್ಕಾರ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಜನರೇ ಮಾಲೀಕರು. ವಿನೂತನ ತಂತ್ರಜ್ಞಾನ ಬಳಸಿಕೊಂಡು ಚುನಾವಣೆ ಪ್ರಚಾರ ಮಾಡುತ್ತೀವಿ. ಮತ್ತೆ ರಾಜ್ಯದ ಜನ ನಮಗೆ ಆಶೀರ್ವಾದ ಮಾಡುತ್ತಾರೆ ಅಂತ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

    ರಾಜ್ಯದ ಜನ ಅನ್ನ, ನೀರು ಕೊಟ್ಟವರನ್ನ ಕೈ ಬಿಡೊಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಸುಳ್ಳು ಹೇಳಿ ಜನರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ. ಅಮಿತ್ ಶಾ, ಮೋದಿ, ಯಡಿಯೂರಪ್ಪ ಬರೀ ಸುಳ್ಳು ಹೇಳುತ್ತಾರೆ. ಕೇಂದ್ರದಲ್ಲಿ ಅವರ ಸಾಧನೆ ಇಲ್ಲ, ರಾಜ್ಯದಲ್ಲೂ ಸಾಧನೆ ಇಲ್ಲ. ಜೈಲಿಗೆ ಹೋಗಿದ್ದೇವೆ ಅಂತ ಹೇಳಲು ಆಗೊಲ್ಲ. ಅದಕ್ಕಾಗಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಜೆಡಿಎಸ್ ಗೆ ರಾಜ್ಯದಲ್ಲಿ ಶಕ್ತಿ ಇಲ್ಲ. ಕೆಲ ಜಿಲ್ಲೆಯಲ್ಲಿ ಮಾತ್ರ ಜೆಡಿಎಸ್ ಇದೆ. ಅತಂತ್ರ ವಿಧಾನಸಭೆ ಆಗಲಿ ಅಂತ ಜೆಡಿಎಸ್ ಕಾಯುತ್ತಿದೆ. ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅಂತ ಕನಸ್ಸು ಕಾಣುತ್ತಿದ್ದಾರೆ. ಅದು ಕನಸಾಗೇ ಇರುತ್ತದೆ. ಅವರು ಅಧಿಕಾರಕ್ಕೆ ಬರೊಲ್ಲ. ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಎಂದ್ರು.

  • ಶೇರುದಾರರಿಗೆ ಬರೆದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ ಜೆಫ್ ಬೆಜೊಸ್

    ಶೇರುದಾರರಿಗೆ ಬರೆದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ ಜೆಫ್ ಬೆಜೊಸ್

    ಕ್ಯಾಲಿಫೋರ್ನಿಯಾ: ಜಗತ್ತಿನ ಶ್ರೀಮಂತ ಉದ್ಯಮಿ, ಅಮೆಜಾನ್ ಸಿಇಒ ಜೆಫ್ ಬೆಜೊಸ್ ತಮ್ಮ ಕಂಪೆನಿಯ ವಾರ್ಷಿಕ ಹೂಡಿಕೆದಾರರಿಗೆ ಕಳುಹಿಸಿದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವುದಾಗಿ ತಿಳಿಸಿದ್ದಾರೆ.

    ವಿಶ್ವದ ನಂ. 1 ಇ-ಮಾರಾಟ ಸೇವಾ ಸಂಸ್ಥೆ ಎಂದು ಗುರುತಿಸಿಕೊಂಡಿರುವ ಅಮೆಜಾನ್ ಭಾರತದಲ್ಲಿ ಕಂಪೆನಿಯ ಹೂಡಿಕೆ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದೆ. ಲ್ಲದೇ ಅಮೆಜಾನ್ ನೀಡುತ್ತಿರುವ ಅಲೆಕ್ಸಾ ವಾಯ್ಸ್ ಸೇವೆಯಲ್ಲಿ ಹಿಂದಿ ಭಾಷೆಯನ್ನು ಸೇರಿಸುವ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಇದರಿಂದ ಭಾರತದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಸಾಧ್ಯ ಎಂದು ಜೆಫ್ ಬೆಜೊಸ್ ಹೇಳಿದ್ದಾರೆ.

    ಅಮೆಜಾನ್ ಪ್ರೈಂ ವಿಡಿಯೋಗೆಂದೇ ಅಮೆರಿಕ, ಇಂಗ್ಲೆಂಡ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದಂತೆ ಭಾರತದಲ್ಲೂ ಮುಂದಿನ ದಿನಗಳಲ್ಲಿ ಭಾರತದ ಭಾಷೆಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಭಾರತದಲ್ಲಿ ಮೊದಲ ಬಾರಿಗೆ ಅಮೆಜಾನ್ ಪ್ರೈಂ ಸದಸ್ಯತ್ವ ಪಡೆಯಲು ಅವಕಾಶ ನೀಡಿದ ಒಂದು ವರ್ಷದಲ್ಲೇ ಕಂಪೆನಿಯ ಇತಿಹಾಸದಲ್ಲಿ ಅತೀ ಹೆಚ್ಚು ಸದಸ್ಯರಾಗಿದ್ದಾರೆ. ಬೇರೆ ದೇಶಗಳ ಮಾರುಕಟ್ಟೆಗೆ ಹೋಲಿಸಿದರೆ ಇದೊಂದು ದಾಖಲೆ ಎಂದು ಉಲ್ಲೇಖಿಸಿದ್ದಾರೆ.

    ವೆಬ್‍ಸೈಟ್ ಟ್ರಾಫಿಕ್ ಲೆಕ್ಕ ಹಾಕುವ ಸಂಸ್ಥೆಗಳು ನೀಡಿದ ವರದಿಯನ್ನು ಉಲ್ಲೇಖಿಸಿ, ಅಮೆಜಾನ್ ಭಾರತದಲ್ಲಿ ಅತ್ಯಂತ ಹೆಚ್ಚು ವೇಗವಾಗಿ ಬೆಳೆಯುತ್ತಿದ್ದು, 2017 ರಲ್ಲಿ ಭಾರತದಲ್ಲಿ ಮೊಬೈಲ್ ಹಾಗೂ ಡೆಸ್ಕ್ ಟಾಪ್ ಮೂಲಕ ಅಮೆಜಾನ್ ತಾಣಕ್ಕೆ ಭೇಟಿ ನೀಡಿರುವುದು ಸಂತಸದ ಸಂಗತಿ. 2007ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಡೌನ್ ಲೋಡ್ ಆಗಿರುವ ಅಪ್ಲಿಕೇಶನ್‍ಗಳ ಪೈಕಿ ಅಮೆಜಾನ್.ಇನ್ ಅಪ್ಲಿಕೇಶನ್ ಒಂದಾಗಿದೆ ಎಂದು ಜೆಫ್ ಬೆಜೊಸ್ ತಿಳಿಸಿದ್ದಾರೆ.

    ಏನಿದು ಅಮೆಜಾನ್ ಪ್ರೈಂ?
    ಹಣವನ್ನು ಪಾವತಿಸಿ ಪಡೆಯುವ ಸೇವೆಯೇ ಅಮೆಜಾನ್ ಪ್ರೈಂ. ಪ್ರೈಂ ಸದಸ್ಯರಾದರೆ ಡೆಲಿವರಿಗಾಗಿ (ಒಂದು ದಿನ, ಎರಡು ದಿನ) ಹೆಚ್ಚುವರಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಅಷ್ಟೇ ಅಲ್ಲದೇ ಪ್ರೈಂ ವಿಡಿಯೋ, ಮ್ಯೂಸಿಕ್ ಗಳನ್ನು ಸಹ ಉಚಿತವಾಗಿ ನೋಡಬಹುದಾಗಿದೆ. ಹೊಸದಾಗಿ ರಿಲೀಸ್ ಆಗಿರುವ ಸಿನಿಮಾ ಗಳನ್ನು ಸಹ ಪ್ರೈಮ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಿ ನೋಡಬಹುದಾಗಿದೆ. ಈ ಸೇವೆಯನ್ನು ಮೊದಲ ಬಾರಿಗೆ 13 ವರ್ಷಗಳ ಹಿಂದೆ ಅಂದರೆ 2005 ರ ಜನವರಿ 2 ರಂದು ಆರಂಭಿಸಲಾಯಿತು. ಏಪ್ರಿಲ್ 2018ರ ವೇಳೆಗೆ ವಿಶ್ವದೆಲ್ಲೆಡೆ 10 ಕೋಟಿ ಪ್ರೈಂ ಸದಸ್ಯರು ಇದ್ದಾರೆ ಎಂದು ಅಮೆಜಾನ್ ತಿಳಿಸಿದೆ. ಭಾರತದಲ್ಲಿ ಈ ಸೇವೆಯನ್ನು 2016 ಜುಲೈ ತಿಂಗಳಿನಲ್ಲಿ ಆರಂಭಿಸಿತ್ತು. 999 ರೂ. ನೀಡಿದ್ದಲ್ಲಿ ವರ್ಷ ಕಾಲ ಪ್ರೈಂ ಸದಸ್ಯರಾಗಬಹುದು.

  • ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

    ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

    ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.

    ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ?
    ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಮಾತ್ರವಲ್ಲದೇ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ.

    ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್ ಸಹಕಾರಿಯಾಗಲಿದೆ. ಭೂ ಭಾಗದ ವಿವರ, ರಾಜಕಾಲುವೆ, ಕೆರೆ ಕುಂಟೆ ಸುತ್ತಲಿನ ಪ್ರದೇಶ ಹಾಗೂ ಆಸ್ತಿಯ ಆಸುಪಾಸಿನಲ್ಲಿರುವ ಇತರೇ ಭೂ ಭಾಗದ ಮಾಹಿತಿಯನ್ನು ನೀಡಲಿದೆ. ಇದರಿಂದ ಭೂ ಒತ್ತುವರಿಯನ್ನೂ ಸುಲಭವಾಗಿ ಪತ್ತೆಹಚ್ಚಬಹುದುದಾಗಿದೆ.

    ಬಳಕೆ ಹೇಗೆ?
    ಮೊಬೈಲ್ ಫೋನ್‍ಗಳಲ್ಲಿ ಈ ಆ್ಯಪ್ ಡೌನ್‍ಲೋಡ್ ಮಾಡಿ, ಲೊಕೇಷನ್ ವಿವರವನ್ನು ಅಪ್‍ಡೇಟ್ ಮಾಡಿಕೊಳ್ಳಬೇಕು. ಈ ವೇಳೆ ವ್ಯಕ್ತಿ ಯಾವ ಪ್ರದೇಶದಲ್ಲಿ ಇರುತ್ತಾರೆ ಆ ಸ್ಥಳದ ಯಾವ ಸರ್ವೆ ನಂಬರ್ ನಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇದರೊಂದಿಗ ಯಾವುದೇ ಆಸ್ತಿಯ ಸರ್ವೆ ನಂಬರ್ ನಮೂದಿದರೆ ಆ ನಿರ್ದಿಷ್ಟ ಜಾಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಆ ಜಾಗದಕ್ಕೆ ರಸ್ತೆ ಮಾರ್ಗ ಇದೆಯೇ ಎಂಬುದನ್ನೂ ತಿಳಿದುಕೊಳ್ಳಬಹುದಾಗಿದೆ.

    ಕಾನೂನು ಬದ್ಧ ದಾಖಲೆ ಅಲ್ಲ:
    ದಿಶಾಂಕ್ ಆ್ಯಪ್ ನೀಡುವ ಭೂಮಿಯ ವಿವರ ಕೇವಲ ಮಾಹಿತಿ ಆಗಿದೆ. ಇದನ್ನು ಕಾನೂನು ಬದ್ಧ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲ.

    ಯಾರಿಗೆ ಉಪಯುಕ್ತ?
    ರಾಜ್ಯದ ಎಲ್ಲಾ ಸಾರ್ವಜನಿಕರು, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿಂತೆ ಎಲ್ಲರೂ ಭೂಮಿಯ ವಿವರ ಪಡೆಯಲು ಆ್ಯಪ್ ಉಪಯುಕ್ತವಾಗಿದೆ. ಆಸ್ತಿ ವ್ಯವಹಾರ, ಹೊಸ ಭೂಮಿ ಖರೀದಿ ಹಾಗೂ ಮಾರಾಟ ವೇಳೆ ಮಾಹಿತಿಗಾಗಿ ಆ್ಯಪ್ ಬಳಕೆ ಮಾಡಬಹುದು. ಭೂಮಿಯ ಖಾತೆ ವಿವರದಲ್ಲಿ ನಮೂದಿಸಿರುವ ಸರ್ವೆ ನಂಬರ್ ಸರಿಯಾಗಿದೆಯೇ ಎಂಬುದನ್ನೂ ಪರಿಶೀಲಿಸಬಹುದಾಗಿದೆ. ಆದರೆ ಇದರಲ್ಲಿ ಆಸ್ತಿಗಳ ಆಥವಾ ನಿವೇಶನಗಳ ಮೂಲ ಭೌಗೋಳಿಕ ವಿವರಗಳನ್ನು ಲಭಿಸುವುದಿಲ್ಲ.

    ಆ್ಯಪ್ ಸಿದ್ಧಪಡಿಸಿದ್ದು ಯಾರು?
    ದಿಶಾಂಕ್ ಆ್ಯಪ್ ಅನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಸತತ ಮೂರು ವರ್ಷಗಳಿಂದ ಪರಿಶ್ರಮವಹಿಸಿ ಸಿದ್ಧಪಡಿಸಿದೆ. ಇಲಾಖೆಯು 70 ಲಕ್ಷದಷ್ಟು ಸರ್ವೆನಂಬರ್‍ಗಳಿಗೆ ಸಂಬಂಧಿಸಿದ ವಿವರಗಳು ಇದರಲ್ಲಿ ಲಭ್ಯವಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲಿಯಾದರೂ ಭೂ ಮಾಹಿತಿ ಪಡೆಯುವವರ ನೆರವಿಗೆ ಬರಲು ಕಂದಾಯ ಇಲಾಖೆ `ದಿಶಾಂಕ್ ಆ್ಯಪ್’ ಬಿಡುಗಡೆಗೊಳಿಸಿದೆ.

    ಆ್ಯಪ್ ಉದ್ದೇಶ ಏನು?
    ಒಂದೇ ಆ್ಯಪ್‍ನಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದ ಎಲ್ಲ ಸೇವೆ ಸಿಗುವಂತೆ ಮಾಡುವುದು ಇಲಾಖೆಯ ಉದ್ದೇಶವಾಗಿದೆ. ದಿಶಾಂಕ್ ಆ್ಯಪ್ ತಯಾರಿಸಲು ಕಂದಾಯ ಇಲಾಖೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬಿಎಂಆರ್‍ಡಿಎ, ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವವನನ್ನು ಪಡೆದುಕೊಂಡಿದೆ. ಆ್ಯಪ್ ಮತ್ತಷ್ಟು ಜನ ಸ್ನೇಹಿಯಾಗಿ ಮಾಡಲು ಕಂದಾಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ಹಂತದಲ್ಲಿ ಆ್ಯಪ್‍ನಲ್ಲಿ ಆಸ್ತಿ ಮಾಲೀಕರಿಗೆ ಸಂಬಂಧಿಸಿದ ವಿವರಗಳನ್ನೂ ಜೋಡಿಸುವ ಮೂಲಕ ಮತ್ತಷ್ಟು ಉಪಯುಕ್ತ ಮಹಿತಿ ಕೇಂದ್ರವಾಗಿ ರೂಪಿಸಲು ಇಲಾಖೆ ಚಿತಿಂಸಿದೆ.

    ಎಲ್ಲಿ ಸಿಗುತ್ತೆ?
    ಗೂಗಲ್ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿ ಈ ಆ್ಯಪ್ ಲಭ್ಯವಿದ್ದು 10 ಸಾವಿರಕ್ಕೂ ಹೆಚ್ಚು ಮಂದಿ ಡೌನ್‍ಲೋಡ್ ಮಾಡಿದ್ದಾರೆ. ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದರೂ, ಮಾಹಿತಿ ಕೊರತೆಯಿಂದ ಹೆಚ್ಚಿನ ಜನರು ಇದನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ. ಆ್ಯಪ್ ಡೌನ್ ಲೋಡ್ ಮಾಡಲು ಕ್ಲಿಕ್ ಮಾಡಿ – ದಿಶಾಂಕ್ 

  • ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ

    ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ

    ಬೆಂಗಳೂರು: ನಾನು ಕುಂದಾಪುರದಿಂದ ಸ್ಪರ್ಧಿಸುತ್ತೇನೆಂಬುದು ಸುಳ್ಳು ವಿಚಾರ. ಎಲ್ಲ ಅಭ್ಯರ್ಥಿಗಳು ಆದ ಮೇಲೆ ನಾನು ನಿಲ್ಲುವ ಬಗ್ಗೆ ಹೇಳ್ತಿನಿ. ನಾನು ಎಲ್ಲಿ ಸ್ಪರ್ಧಿಸಬೇಕೆಂಬ ಬಗ್ಗೆ ಇಷ್ಟರಲ್ಲೇ ಹೇಳ್ತೀನಿ ಅಂತ ರಿಯಲ್ ಸ್ಟಾರ್ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಅಧ್ಯಕ್ಷ ಉಪೇಂದ್ರ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಜೆಪಿ ಪಕ್ಷದ ಅಭ್ಯರ್ಥಿಯಾಗಲು ಮುಕ್ತ ಅವಕಾಶವಿದ್ದು, ಯಾರು ಬೇಕಾದರೂ ಸಂಪರ್ಕ ಮಾಡಬಹುದು. ವೈಯುಕ್ತಿಕ ಸಂದರ್ಶನ ಮಾಡಲಾಗುತ್ತದೆ. ಆಯಾ ಕ್ಷೇತ್ರದ ಬಗ್ಗೆ ವಿವರ, ಸಮಸ್ಯೆಗಳ ಅರಿವಿರಬೇಕು. ವಿದ್ಯಾರ್ಹತೆ ಇಲ್ಲಿ ಪರಿಗಣಿಸಲಾಗುವುದಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡಲು ಇಚ್ಛಿಸುವವರು ಒಂದು ತಿಂಗಳ ಒಳಗೆ ಅಪ್ಲಿಕೇಷನ್ ಫಿಲ್ ಮಾಡಿ ಕಳಿಸಬೇಕು ಅಂತ ಹೇಳಿದ್ರು.

    ಮಹಿಳೆಯರು ಕೂಡ ನಮ್ಮ ಪಕ್ಷಕ್ಕೆ ಅಭ್ಯರ್ಥಿಯಾಗಿ ಬರಲು ಆಸಕ್ತಿ ತೋರಿಸಿದ್ದಾರೆ. ಮಹಿಳೆಯರಿಗೂ ಮುಕ್ತ ಅವಕಾಶ ನಮ್ಮಲಿದೆ. ಒಳ್ಳೆ ಒಳ್ಳೆ ಐಡಿಯಾಗಳನ್ಮು ತೆಗೆದುಕೊಂಡು ಬನ್ನಿ ಅಂತ ಉಪ್ಪಿ ಕರೆ ಕೊಟ್ಟಿದ್ದಾರೆ. ಎಲ್ಲ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸ್ಪರ್ಧೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಗೆ ಇಂತದ್ದೇ ಎಂಬ ಮಾನದಂಡವಿಲ್ಲ. ಅವಿದ್ಯಾವಂತರಿಗೂ ಪಕ್ಷದಲ್ಲಿದೆ ಅವಕಾಶ. ಒಂದು ತಿಂಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಡೆಡ್ ಲೈನ್, ಸಂವಿಧಾನಕ್ಕನುಗುಣವಾಗಿ ಕಾಲಂ ಇಟ್ಟಿದ್ದೇವೆ. ನಮ್ಮ ಪಕ್ಷದಲ್ಲಿ ಜಾತಿ, ವರ್ಗಕ್ಕೆ ಅವಕಾಶವಿಲ್ಲ ಅಂದ್ರು.

    ವೆಬ್ ಸೈಟ್,ಆಪ್ ಲಾಂಚ್: ಇಂದಿನ ಕಾರ್ಯಕ್ರಮದಿಂದ ಕುಟುಂಬ ಸದಸ್ಯರನ್ನ ಹೊರಗಿಟ್ಟ ಉಪೇಂದ್ರ ಅವರು, ಪ್ರಜಾಕೀಯ ವೆಬ್ ಸೈಟ್ ಲೋಕಾರ್ಪಣೆ ಮಾಡಿದ್ರು. ನಗ್ನ ಸತ್ಯ ಎಂಬ ಹೆಡ್ ನಲ್ಲಿ ಹಲವು ಮಾಹಿತಿ ಹೊರಬರಲಿದ್ದು, ಅಭ್ಯರ್ಥಿಗಳ ಮಾನದಂಡದ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ರು.

    https://www.kpjpuppi.org ಉಪೇಂದ್ರ ವೆಬ್ ಸೈಟ್ ಇದಾಗಿದ್ದು, ಈ ವೆಬ್ ಸೈಟ್ ನಲ್ಲಿ ಜನರಿಗೆ ಮಾಹಿತಿ ನೀಡಲು ಅವಕಾಶ ಮಾಡಿಕೊಡಲಾಗಿದೆ. ಅಭ್ಯರ್ಥಿಯಾಗ ಬಯಸುವವರು ಇದರಲ್ಲಿ ಡಿಟೇಲ್ಸ್ ಅಪ್ಡೇಟ್ ಮಾಡಬೇಕು. ವಿಧಾನಸಭಾ ಕ್ಷೇತ್ರಕ್ಕೆ ಏನೇನು ಬೇಕೆಂಬ ಬಗ್ಗೆ ಮಾಹಿತಿಯನ್ನು ಜನರಿಗೆ ಈ ವೆಬ್ ಸೈಟ್ ನಲ್ಲಿ ನೀಡಲಿದ್ದೇವೆ ಅಂದ್ರು. ಪ್ರಜಾಕೀಯ ಟ್ಯಾಗ್ ಲೈನ್ ನಲ್ಲಿ ಕರ್ನಾಟಕ ಧ್ವಜದ ಮಾದರಿಯಲ್ಲಿ ಆಪ್ ಲೋಕಾರ್ಪಣೆಯಾಯಿತು.

    ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದಕ್ಕೆ ಪರಿಹಾರ ಕೂಡಾ ಪಟ್ಟಿ ಮಾಡಿ ಕಳುಹಿಸಿ. ಈ ಪಕ್ಷಕ್ಕೆ ಸೇರಬಯಸುವವರಿಗೆ ಯಾವುದೇ ವಿದ್ಯಾರ್ಹತೆಯ ಅಗತ್ಯವಿಲ್ಲ. ಗ್ರಾಮ ಪಂಚಾಯ್ತಿ, ನಗರ ಸಭೆ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಶಾಸಕ ಅಭ್ಯರ್ಥಿಗಳು ನಮ್ಮ ವೆಬ್‍ಗೆ ಡಿಟೇಲ್ಸ್ ಕಳಿಸಬಹುದು ಅಂತ ತಿಳಿಸಿದ್ರು.

    ವೇದಿಕೆಯಲ್ಲಿ ಚೇರ್ ಗಳನ್ನ ಚುನಾವಣಾ ಅಭ್ಯರ್ಥಿಗಳಿಗಾಗಿ ಖಾಲಿ ಉಳಿಸಿದ ಉಪೇಂದ್ರ, ನಮ್ಮ ಪಕ್ಷ ಒಂದು ಮುಕ್ತವಾದ ವೇದಿಕೆ. ಖಾಲಿ ಕುರ್ಚಿಗಳನ್ನು ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಪಕ್ಷದ ಒಂದು ಆಪ್, ಒಂದು ವೆಬ್ ಸೈಟ್ ಮಾಡಿದ್ದೇವೆ. ಅದರಲ್ಲಿ ಪಕ್ಷದ ಎಲ್ಲವೂ ಒಳಗೊಂಡಿರುತ್ತೆ. ಮೈಕೋ ನವೀನ್ ಮತ್ತು ಸ್ನೇಹಿತರು ವೆಬ್‍ಸೈಟ್ ಡಿಸೈನ್ ಮಾಡಿದ್ದಾರೆ ಅಂತ ನಟ ಉಪೇಂದ್ರ ವಿವರಿಸಿದ್ರು.

    ಬದುಕುವುದಕ್ಕೆ ಕೆಲಸ ಅನಿವಾರ್ಯ. ಇದೂ ಇದೆ ವೃತ್ತಿಯೂ ಇದೆ. ಬದುಕುವುದಕ್ಕೆ ಅದೂ ಅನಿವಾರ್ಯವಾಗಿದೆ. ಇದರಲ್ಲೇ ಮುಂದುವರಿಯುತ್ತೇನೆ. ಅನಿವಾರ್ಯವಾದರೆ ಅಲ್ಲಿಗೂ ಹೋಗ್ತೇನೆ ಅಂತ ಹೇಳಿದ್ರು. ಇನ್ನು ಪಕ್ಷ ಉದ್ಘಾಟನೆಯಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ಬಿಜೆಪಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಕುರಿತು ಮಾತನಾಡಿದ ಅವರು, ಬಿಜೆಪಿ ಅವರು ತಪ್ಪಾಗಿ ತಿಳ್ಕೊಂಡಿದ್ರು. ಯಾರೋ ಮಾಡಿದ ವಿಡಿಯೋಗೆ ನನ್ನ ಟೀಕೆ ಮಾಡಿದ್ರು. ಅವರಿಗೆ ವಾಸ್ತವ ತಿಳಿಸಿದ್ದೆ, ಬಳಿಕ ಸರಿ ಹೋಗಿದೆ. ನಾನು ಯಾರನ್ನೂ ದೂಷಿಸುವುದಿಲ್ಲ ಅಂತ ಅಂದ್ರು.

    ನಿರ್ಮಾಪಕ ಸೌಂದರ್ಯ ಜಗದೀಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಈ ವೇಳೆ ಭಾಗಿಯಾಗಿದ್ದರು.

    https://www.youtube.com/watch?v=oFdyrl5xSTg

  • ಮೆಜೆಸ್ಟಿಕ್ ನ ಕೇಂದ್ರ ಭಾಗದಲ್ಲಿ ಬೇಬಿ ಸಿಟ್ಟಿಂಗ್ ತೆರೆಯಲು ಮೆಟ್ರೋ ನಿರ್ಧಾರ

    ಮೆಜೆಸ್ಟಿಕ್ ನ ಕೇಂದ್ರ ಭಾಗದಲ್ಲಿ ಬೇಬಿ ಸಿಟ್ಟಿಂಗ್ ತೆರೆಯಲು ಮೆಟ್ರೋ ನಿರ್ಧಾರ

    ಬೆಂಗಳೂರು: ನಗರದ ಜನರ ಅವಿಭಾಜ್ಯ ಅಂಗವಾಗಿರೋ ನಮ್ಮ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಈ ಯೋಜನೆಯಲ್ಲಿ ಬಹುಮುಖ್ಯವಾದ ಒಂದು ಯೋಜನೆಯೆಂದರೆ ಬೇಬಿ ಸಿಟ್ಟಿಂಗ್.

    ಐಟಿ ಬಿಟಿ ಜನತೆ ಸೇರಿದಂತೆ ಹಲವು ಉದ್ಯೋಗಿಗಳ ಬೇಡಿಕೆ ಹಿನ್ನಲೆಯಲ್ಲಿ ಬೆಂಗಳೂರಿನ ಕೇಂದ್ರ ಭಾಗ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅತ್ಯಾಧುನಿಕವಾದ ಬೇಬಿ ಸಿಟ್ಟಿಂಗ್ ತೆರೆಯಲು ಮೆಟ್ರೋ ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಈ ಬೇಬಿ ಸಿಟ್ಟಿಂಗ್ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

    ಈ ಬೇಬಿ ಸಿಟ್ಟಿಂಗ್ ಬೆಂಗಳೂರಿನಲ್ಲಿರೋ ಇತರೆ ಬೇಬಿ ಸಿಟ್ಟಿಂಗ್ ಗಿಂತ ಅತ್ಯಾಧುನಿಕವಾಗಿರಲಿದ್ದು, ಜನ ಕುಳಿತಲ್ಲೇ ಮೊಬೈಲ್ ಮೂಲಕ ತಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಬಹುದಾಗಿದೆ.

    ಇದಕ್ಕಾಗಿ ಹೊಸ ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಪೋಷಕರು ಆ್ಯಪ್ ಮೂಲಕ ತಮ್ಮ ಮಕ್ಕಳ ಚಲನವಲನವನ್ನು ಗಮನಿಸಬಹುದು. ಕೆಲವೇ ದಿನಗಳಲ್ಲಿ ಈ ಬೇಬಿ ಸಿಟ್ಟಿಂಗ್ ಓಪನ್ ಆಗಲಿದೆ.

  • ಕೆಲವೇ ನಿಮಿಷಗಳಲ್ಲಿ ಸಿಗುತ್ತೆ ಪ್ಯಾನ್ ನಂಬರ್, ಆ್ಯಪ್ ಮೂಲಕವೇ ಟ್ಯಾಕ್ಸ್ ಕಟ್ಟಿ

    ಕೆಲವೇ ನಿಮಿಷಗಳಲ್ಲಿ ಸಿಗುತ್ತೆ ಪ್ಯಾನ್ ನಂಬರ್, ಆ್ಯಪ್ ಮೂಲಕವೇ ಟ್ಯಾಕ್ಸ್ ಕಟ್ಟಿ

    ನವದೆಹಲಿ: ಇನ್ಮುಂದೆ ನೀವು ಪ್ಯಾನ್ ಕಾರ್ಡ್‍ಗಾಗಿ ವಾರಾನುಗಟ್ಟಲೆ ಕಾಯುವ ಅವಶ್ಯಕತೆ ಇರುವುದಿಲ್ಲ. ಶೀಘ್ರದಲ್ಲೇ ನೀವು ಕೆಲವೇ ನಿಮಿಷಗಳಲ್ಲಿ ಪ್ಯಾನ್ ನಂಬರ್ ಪಡೆಯಬಹುದು ಹಾಗೂ ನಿಮ್ಮ ಸ್ಮಾರ್ಟ್ ಫೋನ್ ಮೂಲಕವೇ ತೆರಿಗೆ ಕಟ್ಟಬಹುದಾಗಿದೆ.

    ತೆರಿಗೆ ಪಾವತಿದಾರರಿಗೆ ಸಹಾಯವಾಗುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಆಧಾರ್ ಇ-ಕೆವೈಸಿ ವ್ಯವಸ್ಥೆಯ ಮೂಲಕ ಪ್ಯಾನ್ ನಂಬರ್ ವಿತರಿಸಲು ಮುಂದಾಗಿದೆ. ಇದರ ಸಹಾಯದಿಂದ ವ್ಯಕ್ತಿ ತನ್ನ ವಿಳಾಸ ಮತ್ತು ಇನ್ನಿತರ ಮಾಹಿತಿಯನ್ನ ಹೆಬ್ಬೆರಳಿನ ಗುರುತು ಹಾಗೂ ಇತರೆ ಬಯೋಮೆಟ್ರಿಕ್ ಫೀಚರ್ಸ್ ಬಳಸಿ ಪರಿಶೀಲನೆ ಮಾಡಬಹುದಾಗಿದೆ. ಇ- ಕೆವೈಸಿ ಮೂಲಕ ಸಿಮ್ ಕಾರ್ಡ್ ನೀಡಬಹುದಾದ್ರೆ ಅದೇ ರೀತಿ ಪ್ಯಾನ್ ನಂಬರ್ ಕೂಡ ನೀಡಬಹುದಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸದ್ಯಕ್ಕೆ ಪ್ಯಾನ್ ಕಾರ್ಡ್ ಪಡೆಯಲು 2 ರಿಂದ 3 ವಾರ ಬೇಕು. ಆದ್ರೆ ಈ ವ್ಯವಸ್ಥೆ ಬಂದ ನಂತರ 5 ರಿಂದ 6 ನಿಮಿಷಗಳಲ್ಲಿ ಪ್ಯಾನ್ ನಂಬರ್ ಸಿಗುತ್ತದೆ. ನಂತರ ಕಾರ್ಡನ್ನು ತಲುಪಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

    ಇದಲ್ಲದೆ ಹೊಸ ಕಂಪೆನಿಗಳಿಗೆ ಪ್ಯಾನ್ ವಿತರಿಸಲು ಈಗಾಗಲೇ ಸಿಬಿಡಿಟಿ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಸಹಯೋಗ ಮಾಡಿಕೊಂಡಿವೆ.

    ಇದಲ್ಲದೆ ಅನ್‍ಲೈನ್‍ನಲ್ಲಿ ತೆರಿಗೆ ಪಾವತಿ ಮಾಡಲು, ಪ್ಯಾನ್ ನಂಬರ್‍ಗಾಗಿ ಅರ್ಜಿ ಹಾಕಲು ತೆರಿಗೆ ಇಲಾಖೆ ಆ್ಯಪ್ ಸಿದ್ಧಪಡಿಸಿದೆ. ಈಗಾಗಲೇ ತೆರಿಗೆ ಇಲಾಖೆ ಆನ್‍ಲೈನ್ ಸೇವೆಗಳನ್ನು ಒದಗಿಸುತ್ತಿದ್ದು ಈ ಆ್ಯಪ್ ಮೂಲಕ ಹಿರಿಯ ಹಾಗೂ ಯುವ ತೆರಿಗೆದಾರರಿಗೆ ಮತ್ತಷ್ಟು ಸಹಾಯವಾಗಲಿದೆ ಎಂದು ಹೇಳಲಾಗಿದೆ.