Tag: Appachchu Ranjan

  • ನನಗೆ ವೋಟು ಹಾಕಬೇಡಿ – ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ಅಪ್ಪಚ್ಚು ರಂಜನ್ ತಿರುಗೇಟು

    ನನಗೆ ವೋಟು ಹಾಕಬೇಡಿ – ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ಅಪ್ಪಚ್ಚು ರಂಜನ್ ತಿರುಗೇಟು

    ಮಡಿಕೇರಿ: ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ನನಗೆ ವೋಟು ಹಾಕಬೇಡಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ (Appachchu Ranjan) ಕಿಡಿಕಾರಿದ್ದಾರೆ.

    ಹೌದು, ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (SomavaraPete) ಮತ್ತು ಕುಶಾಲನಗರ (Kushalnagara) ತಾಲೂಕು ನೇರುಗಳಲೆ ಗ್ರಾಮ ಪಂಚಾಯಿತಿ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಲೋಕೋಪಯೋಗಿ ಇಲಾಖೆಯ ಮಸಗೂಡು ಕಣಿವೆಯ ರಸ್ತೆಯು ಸುಮಾರು 18 ಕಿ.ಲೋವರೆಗೂ ಕಳೆದ 10 ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಈ ಹಿಂದೆ ಈ ಗ್ರಾಮಕ್ಕೆ 5 ಖಾಸಗಿ ಬಸ್ಸುಗಳು ಸಂಚರಿಸುತ್ತಿತ್ತು. ಆದರೆ ರಸ್ತೆ ಹಾಳಾಗಿರುವುದರಿಂದ ಬಸ್ಸುಗಳ ವ್ಯವಸ್ಥೆ ನಿಲ್ಲಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಸೋಮವಾರಪೇಟೆ ಕೂಡಿಗೆಗೆ ನಡೆದು ಹೋಗುವ ದುಸ್ಥಿತಿಯಾಗಿದೆ.

    ಈ ಗ್ರಾಮಕ್ಕೆ ಈ ಹಿಂದೆ ಆಟೋ ಬಾಡಿಗೆ 50-60 ತೆಗೆದುಕೊಳ್ಳುತ್ತಿದ್ದರು. ಆದರೆ ಈಗ 200 ರಿಂದ 300 ರೂ. ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಗ್ರಾಮದಲ್ಲಿ ಕೂಲಿ ಕಾರ್ಮಿಕರು ಸೇರಿದಂತೆ ಸುಮಾರು 5,000 ಜನ ಇದ್ದಾರೆ. ಇದು ಸುಮಾರು 10 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜನರಿಗೆ ವಯಸ್ಕರಿಗೆ, ಮಕ್ಕಳಿಗೆ ಓಡಾಡಲು ತುಂಬಾ ಕಷ್ಟಕರವಾಗಿದೆ. ಈ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಮಾಡುವುದರಿಂದ ಹೆಚ್ಚು ಲಾರಿಗಳ ಓಡಾಟ ಇರುವುದರಿಂದ ರಸ್ತೆ ಹಾಗೂ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಅಪಾಯದಲ್ಲಿದೆ. ಹೀಗಾಗಿ ಇಲ್ಲಿನ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಹ ‘ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ನನಗೆ ನೀವು ಕೊಟ್ಟಿರುವ ಪೊಷಿಷನ್‌ ಸಾಕು, ಇನ್ಯಾವುದೂ ಬೇಡ – ಡಿಕೆಶಿ ರಾಜಕೀಯ ನಿವೃತ್ತಿ ಸುಳಿವು!

    ಈ ರಸ್ತೆ ಸಮಸ್ಯೆ ಕಳೆದ ಹತ್ತು ವರ್ಷಗಳಿಂದ ಇದೆ. ಈ ಗ್ರಾಮದಲ್ಲಿ ಕಲ್ಲಿನ ಕೊರೆಗಳು ಇರುವುದರಿಂದ ಸಾಕಷ್ಟು ಲಾರಿಗಳು ಓಡಾಟ ನಡೆಸುತ್ತಿದ್ದು, ಗ್ರಾಮ ಸಂಪೂರ್ಣ ಧೂಳು ಮಯವಾಗಿದೆ. ಸರಿಯಾದ ರಸ್ತೆ ಮಾಡಿ ಶಾಲಾ ಕಾಲೇಜು ಮಕ್ಕಳ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಧಾನಿ ಮೋದಿ (Prime Minister Narendra Modi) ಅವರ ಕಚೇರಿಗೆ ಪತ್ರ ಮೇಲ್ ಮಾಡಲಾಗಿದೆ. ಅಲ್ಲದೇ ಅಪ್ಪಚ್ಚು ರಂಜನ್ ಅವರಿಗೆ ಪತ್ರ ಕೊಡಲು ಹೋದರೆ, ನಿಮ್ಮ ಗ್ರಾಮಸ್ಥರು ವೋಟು ತನಗೆ ಬೇಡ ಇಲ್ಲಿಂದ ಹೋಗಿ ಎಂದು ಕೊಡಗು ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ (B.C.Nagesh) ಅವರ ಮುಂದೆಯೇ ಬೈದು ಕಳಿಸಿದ್ದಾರೆ. ಇದೀಗಾ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    Live Tv
    [brid partner=56869869 player=32851 video=960834 autoplay=true]

  • 4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಗುಣಮಟ್ಟ ಕಳಪೆ- 5 ಗ್ರಾಮಗಳ ಗ್ರಾಮಸ್ಥರ ಆರೋಪ

    4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಗುಣಮಟ್ಟ ಕಳಪೆ- 5 ಗ್ರಾಮಗಳ ಗ್ರಾಮಸ್ಥರ ಆರೋಪ

    ಮಡಿಕೇರಿ: 4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಕಳಪೆ ಗುಣಮಟ್ಟದ್ದಾಗಿದೆ ಎಂದು ಸೋಮವಾರಪೇಟೆ ತಾಲೂಕಿನ ಐದು ಗ್ರಾಮಗಳ ಗ್ರಾಮಸ್ಥರು ಆರೋಪಿಸಿದ್ದಾರೆ. ಕೊಡ್ಲೂರ್ ಗ್ರಾಮದಿಂದ ಹಂಡ್ಲಿ ಗ್ರಾಮದವರೆಗೆ 5 ಗ್ರಾಮಗಳನ್ನು ಒಳಗೊಂಡಂತೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣವಾಗುತ್ತಿದೆ. ರೂ. 4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಕಳಪೆ ಗುಣಮಟ್ಟದ್ದಾಗಿದೆ ಎಂದು ಗ್ರಾಮ ಪ್ರಮುಖರಾದ ತಾಳೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    2020ರ ಸೆಪೆಂಬರ್ 9 ರಂದು ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಅನುದಾನದಲ್ಲಿ ಗುತ್ತಿದೆದಾರ ಶಿವಲೀಲಾ ಸುರೇಶ್ ಸಜ್ಜನ್, ಎಂಜಿನಿಯರ್ ಗಳಾದ ಪ್ರಭು ಹಾಗೂ ಪೂವಯ್ಯ ಅವರಿಂದ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಅಪ್ಪಚ್ಚುರಂಜನ್ ಶಂಕುಸ್ಫಾಪನೆ ನೆರವೇರಿಸಿದ್ದರು. ಅಕ್ಟೋಬರ್ ನಿಂದ ಕಾಮಗಾರಿಗೆ ಚಾಲನೆ ನೀಡಲಾಯಿತು.

    ರಸ್ತೆಯ ಎರಡೂ ಕಡೆಯಿಂದ ರಸ್ತೆಗೆ ಅಗತ್ಯವಿರುವ 32 ಅಡಿ ಅಗಲೀಕರಣ ಮಾಡುತ್ತಾ ಕೆಲ ಮನೆಗಳ ಮುಂದೆ ಬೇಕಾದ ಹಾಗೇ ಜಾಗ ಬಿಟ್ಟು ಕಾಮಗಾರಿ ಮುಂದುವರಿಸಿದರು. ನಂತರ ರಸ್ತೆಗೆ 40 ಹಾಗೂ 20 ಎಂಎಂ ಕಲ್ಲುಗಳ ಮಿಶ್ರಣವನ್ನು ಹಾಕಿ ಸಮತಟ್ಟಾದ ಮೇಲ್ಪದರವನ್ನು ರೋಲಿಂಗ್ ಮಾಡಿ ಡಾಂಬರ್ ಹಾಕಿದ್ದಾರೆ. 15 ದಿನಗಳ ನಂತರ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸಿದಾಗ ರಸ್ತೆಗೆ ಹಾನಿಯಾಗಿದೆ. ಪ್ರತಿದಿನ ಓಡಾಡುವ ವಾಹನಗಳಿಂದ ರಸ್ತೆಯ ಎರಡೂ ಕಡೆಯಲ್ಲೂ ಹಾಳಾಗುತ್ತಿದೆ. 2021ರ ಆಗಸ್ಟ್ 13ಕ್ಕೆ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಮುಗಿಯಬೇಕಾಗಿರುವುದರಿಂದ ರಸ್ತೆಯ ಎರಡೂ ಕಡೆ ಡ್ರೈನೇಜ್ ಮಾಡದೇ ಶೋಲ್ಡರ್ ಮೇಲೆ ರೋಲಿಂಗ್ ಹಾಗೂ ಅಧಿಕ ವೈಬ್ರೈಟರ್ ರೋಲ್ ಮಾಡದೆ ಡಾಂಬರು ಮಾಡಿರುವುದರಿಂದಲೇ ರಸ್ತೆಯ ಗುಣಮಟ್ಟ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

  • PPE ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗೆ ಅಪ್ಪಚ್ಚು ರಂಜನ್ ಭೇಟಿ

    PPE ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗೆ ಅಪ್ಪಚ್ಚು ರಂಜನ್ ಭೇಟಿ

    ಮಡಿಕೇರಿ: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಿಪಿಇ ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ, ಮಾನಸಿಕ ಧೈರ್ಯ ತುಂಬಿದರು.

    ಕೊಡಗಿನ ಗಡಿ ಭಾಗಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆಸಿ ನಂತರ ಅಗತ್ಯ ಮುನ್ನಚರಿಕೆ ಕ್ರಮಗಳ ಕೈಗೊಳ್ಳುವಂತೆ ಸೂಚನೆ ನೀಡಿದರಿ. ಬಳಿಕ ಕುಶಾಲನಗರದ ಸಮೀಪದ ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿದರು.

    ಈ ಬಾರಿ ಕೊಡಗಿನಲ್ಲಿ ಕೋವಿಡ್ 19 ಅತಿಯಾಗಿದೆ. ಕೆಲಸದ ನಿಮಿತ್ತವಾಗಿ ನಗರದಲ್ಲಿ ವಾಸಿಸುತ್ತಿದ್ದ ಜನರು ಲಾಕ್‍ಡೌನ್ ಘೋಷಣೆ ಆದ ಕೂಡಲೇ ಬಹಳಷ್ಟು ಮಂದಿ ಆಗಮಿಸಿ ಕೊರೊನಾ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಕೊಡಗಿನಲ್ಲಿ ಬಹಳಷ್ಟು ಕೊರೋನ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿನ ವೈದ್ಯರು ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆಹಾರ ಪದಾರ್ಥಗಳು ಗುಣಮಟ್ಟದಾಗಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಸೋಂಕಿತರು ತಮ್ಮ ಮನೆಗಳಲ್ಲಿರುವಂತೆ ಕೇಂದ್ರದಲ್ಲಿಯೂ ಖುಷಿಯಲ್ಲಿ ಇದ್ದಾರೆ. ಎಂದು ತಿಳಿಸಿದ್ರು.

    ಕೊಡಗು ಜಿಲ್ಲೆಯಲ್ಲಿ ಕೊರೊನ ಮಹಾಮಾರಿ ರುದ್ರ ನರ್ತನ ದಿನದಿಂದ ದಿನಕ್ಕೆ ತಾಂಡವವಾಡುತ್ತಿದೆ. ಸಾವು ನೋವಿನ ಸಂಖ್ಯೆ ದಿನ ಕಳೆದಂತೆ ಮಿತಿಮೀರುತ್ತಿದೆ ಇಂದು ಕೋಡ ಜಿಲ್ಲೆಯಲ್ಲಿ 681 ಪಾಸಿಟಿವ್ ಪ್ರಕರಣಗಳು ದಾಖಲಾಗಿದು 24 ಗಂಟೆಗಳಲ್ಲಿ 12 ಜನರು ಮೃತ ಪಟ್ಟಿದ್ದಾರೆ. ಹೀಗಾಗಿ ಕೊರೋನ ಸೋಂಕು ತಡೆಗಟ್ಟಲು ಕೊಡಗು ಜಿಲ್ಲಾಡಳಿತ ಬಿಗಿ ಕ್ರಮದ ಮೊರೆ ಹೋಗಿದೆ. ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಕಲ್ಪಿಸಲಾಗಿದ್ದು, ಬಾಕಿ ದಿನಗಳು ಕೊಡಗು ಜಿಲ್ಲೆ ಸಂಪೂರ್ಣ ಬಂದ್ ಆಗಿದೆ.

  • ಮನಸ್ಸಿಗೆ ನೋವಾದಾಗ ಕೆಲವರು ಸಹಿಸಿಕೊಳ್ಳಲ್ಲ: ಅಪ್ಪಚ್ವು ರಂಜನ್

    ಮನಸ್ಸಿಗೆ ನೋವಾದಾಗ ಕೆಲವರು ಸಹಿಸಿಕೊಳ್ಳಲ್ಲ: ಅಪ್ಪಚ್ವು ರಂಜನ್

    ಮಡಿಕೇರಿ: ಕೆಲವರು ವೀಕ್‍ಮೈಂಡ್ ಇರುತ್ತಾರೆ. ಮನಸ್ಸಿಗೆ ನೋವಾಗುವಂತ ಘಟನೆಗಳು ನಡೆದಾಗ ಸಹಿಸಿಕೊಳ್ಳುವುದಿಲ್ಲ. ಅದು ಧರ್ಮೇಗೌಡರ ವಿಷಯದಲ್ಲೂ ನಡೆದಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ವು ರಂಜನ್ ಬೇಸರ ವ್ಯಕ್ತಪಡಿಸಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ವೈಯಕ್ತಿಕವಾಗಿ ನೋವುಂಟು ಮಾಡಿದೆ. ಭಗವಂತ ಅವರ ಕುಟುಂಬಕ್ಕೆ ದುಖಃ ಸಹಿಸಿಕೊಳ್ಳುವ ಶಕ್ತಿಯನ್ನು ಕೊಡಲಿ. ಸಭಾಪತಿ ಪೀಠಕ್ಕಾಗಿ ಸದನದಲ್ಲಿ ಇತ್ತೀಚಿಗೆ ನಡೆದಿದ್ದಂತ ಘಟನೆಯಿಂದ ನೋವಾಗಿತ್ತು.

    ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಸಭಾಪತಿ ಸ್ಥಾನದ ಬಗ್ಗೆ ಒಮ್ಮೆ ಅವಿಶ್ವಾಸ ನಿರ್ಣಯವಾದ ಮೇಲೆ ಆ ಪೀಠದಲ್ಲಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಮುಂದುವರೆಯಬಾರದಿತ್ತು. ಹಿಂದೊಮ್ಮೆ ನಮ್ಮ ಪಕ್ಷದ ಸಭಾಪತಿಗೆ ಸ್ಥಾನಕ್ಕೆ ಅವಿಶ್ವಾಸ ಗೊತ್ತುವಳಿ ನಿರ್ಣಯವಾದ ತಕ್ಷಣದಲ್ಲೇ ಶಂಕರಮೂರ್ತಿ ಅವರು ಸ್ಥಾನವನ್ನು ತ್ಯಾಗ ಮಾಡಿದರು ಎಂದು ಕಾಂಗ್ರೆಸ್‍ನ ಪರಿಷತ್ ಸದಸ್ಯರನ್ನು ಕುಟುಕಿದರು.

  • ಭರ್ತಿಯಾದ ಹಾರಂಗಿ ಜಲಾಶಯ-ಶಾಸಕ ಅಪ್ಪಚ್ಚು ರಂಜನ್ ಬಾಗಿನ ಸಮರ್ಪಣೆ

    ಭರ್ತಿಯಾದ ಹಾರಂಗಿ ಜಲಾಶಯ-ಶಾಸಕ ಅಪ್ಪಚ್ಚು ರಂಜನ್ ಬಾಗಿನ ಸಮರ್ಪಣೆ

    ಮಡಿಕೇರಿ: ಕೊಡಗು ಜಿಲ್ಲೆಯ ಏಕೈಕ ಜಲಾಶಯ ಹಾರಂಗಿಯ ಒಡಲು ಭರ್ತಿಯಾಗಲು ಇನ್ನು ಕೆಲವೇ ಅಡ್ಡಿಗಳಷ್ಟು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ವರ ಮಹಾಲಕ್ಷ್ಮಿ ಹಬ್ಬದ ದಿನದಂದು ಜಲಾಶಯಕ್ಕೆ ಬಾಗಿನ ಅರ್ಪಿಸಿದ್ರು .

    ಬಾಗಿನ ಅರ್ಪಣೆ ಬಳಿಕ ಮಾತಾನಾಡಿದ ಶಾಸಕ ಅಪ್ಪಚ್ಚು ರಂಜನ್, ಕೊಡಗು ಜಿಲ್ಲೆಯ ಜನತೆ ಕಳೆದ ಎರಡು ವರ್ಷಗಳಿಂದಲೂ ಪ್ರಾಕೃತಿಕ ವಿಕೋಪದದಿಂದ ತತ್ತರಿಸಿದ್ದಾರೆ. ಅತಿವೃಷ್ಠಿಯಿಂದ ಸಾಕಷ್ಟು ಮಂದಿ ಕಷ್ಟ ಅನುಭವಿಸಿದ್ದಾರೆ. ಈ ವರ್ಷ ಇಂತಹ ದುರ್ಘಟನೆಗಳು ಸಂಭವಿಸದಂತೆ ಜಿಲ್ಲೆಯ ಅಧಿದೇವತೆ ಕಾವೇರಿ ಮಾತೆಯನ್ನು ಪ್ರಾರ್ಥಿಸಿ ಬಾಗಿನ ಸಮರ್ಪಿಸಿದ್ದೇವೆ ಎಂದರು.

    ಜಲಾಶಯದಲ್ಲಿ 7 ಟಿಎಂಸಿ ನೀರಿನ ಸಂಗ್ರಹವಿದ್ದು, 1.5 ಟಿಎಂಸಿ ಮಾತ್ರ ಭರ್ತಿಯಾಗಲು ಬಾಕಿ ಇದೆ. ಆದರೆ ರೈತರ ಅನುಕೂಲಕ್ಕೆ ಎಡ ಹಾಗೂ ಬಲದಂಡೆಗಳ ಮೂಲಕ 900 ಕ್ಯೂಸೆಕ್ಸ್ ನೀರನ್ನ ಹೊರ ಬಿಡಲಾಗುವುದು. ಇದನ್ನು ಅನ್ನದಾತರು ಹಾಗೂ ರಾಜ್ಯದ ಜನತೆ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

    ಕಳೆದ 24 ವರ್ಷದಿಂದ ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರಲಾಗಿದೆ. ಈ ಜಲಾಶಯದಿಂದ ಪಕ್ಕದ ಹಾಸನ ಮತ್ತು ಮೈಸೂರು ಜಿಲ್ಲೆಯ ರೈತರಿಗೆ ನೀರು ವರದಾನವಾಗಲಿದೆ. ಇದಕ್ಕೂ ಮೊದಲು ಜಲಾಶಯದ ಬಳಿ ಇರುವ ಕಾವೇರಿಗೆ ಪೂಜೆ ನೆರವೇರಿಸಲಾಯಿತು.

  • ಬಾಯಿಗೆ ಬಂದಂಗೆ ಮಾತಾಡಿ ಕೆರಳಿಸ್ಬೇಡ, ನಾನು ಗಂಡು ಮಗನೇ- ಕಾರ್ಯಕರ್ತನಿಗೆ ಅಪ್ಪಚ್ಚುರಂಜನ್ ಅವಾಜ್

    ಬಾಯಿಗೆ ಬಂದಂಗೆ ಮಾತಾಡಿ ಕೆರಳಿಸ್ಬೇಡ, ನಾನು ಗಂಡು ಮಗನೇ- ಕಾರ್ಯಕರ್ತನಿಗೆ ಅಪ್ಪಚ್ಚುರಂಜನ್ ಅವಾಜ್

    ಮಡಿಕೇರಿ: ಶಾಸಕ ಅಪ್ಪಚ್ಚು ರಂಜನ್ ಅವರನ್ನು ಬಿಜೆಪಿ ಕಾರ್ಯಕರ್ತರೇ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.

    ಕಡಗದಾಳ್ ಗ್ರಾಮಕ್ಕೆ ಅಪ್ಪಚ್ಚುರಂಜನ್ ಚುನಾವಣಾ ಪ್ರಚಾರಕ್ಕೆ ಹೋಗಿದ್ರು. ಈ ವೇಳೆ ಆರ್‍ಎಸ್‍ಎಸ್ ಬಗ್ಗೆ ಅಪ್ಪಚ್ಚುರಂಜನ್ ಉಡಾಫೆ ವರ್ತನೆ ತೋರುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:  ಮಸೀದಿಯ ಕೆಲ್ಸ ಮಾಡಿದ್ರಿ, ದೇವಸ್ಥಾನದ ಅಭಿವೃದ್ಧಿ ಯಾಕ್ ಮಾಡಿಲ್ಲವೆಂದ ಯುವಕನಿಗೆ ಆನಂದ್ ಸಿಂಗ್ ಅವಾಜ್

    ನೀವು ಮಾಡ್ತಿರೋದ ಸರೀನಾ ಅಂತಾ ಪ್ರಶ್ನಿಸಿದ್ರು. ಇದ್ರಿಂದ ಕೋಪಗೊಂಡ ಶಾಸಕ ಅಪ್ಪಚ್ಚು ರಂಜನ್, ಕುಳಿತ ಸ್ಥಳದಿಂದ ಎದ್ದು ಬಂದು ಕಾರ್ಯಕರ್ತನಿಗೆ ಅವಾಜ್ ಹಾಕಿದ್ದಾರೆ. ಬಾಯಿಗೆ ಬಂದಂಗೆ ಮಾತಾಡಬೇಡ, ನನ್ನನ್ನ ಕೆರಳಿಸಬೇಡ. ನಾನು ಗಂಡು ಮಗನೇ ಅಂತಾ ಕೈ ತಟ್ಟಿ ಅಪ್ಪಚ್ಚುರಂಜನ್ ಅಬ್ಬರಿಸಿದ್ದಾರೆ. ಇದನ್ನೂ ಓದಿ: ಜಗ್ಗೇಶ್ ಗೆದ್ದರೆ ಹಿಂದು ಗೆದ್ದಂತೆ ಟ್ವೀಟ್ – ವಿಡಿಯೋ ಮೂಲಕ ಯುವತಿಯಿಂದ ಜಗ್ಗೇಶ್‍ಗೆ ತರಾಟೆ

    ಶಾಸಕರ ಈ ನಡೆಗೆ ಬಿಜೆಪಿ ವಲಯದಲ್ಲಿಯೇ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.