Tag: Appanna

  • ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಸಂತ್ರಸ್ತೆ ನಟಿ ಕಿರುಕುಳ ಆರೋಪ ಸುಳ್ಳು- ವೈರಲ್ ಆಡಿಯೋ ಬಗ್ಗೆ ಅಪ್ಪಣ್ಣ ಸ್ಪಷ್ಟನೆ

    ಡೆನೂರು ಮನು (Madenoor Manu) ಅತ್ಯಾಚಾರ ಪ್ರಕರಣ ಭುಗಿಲೆದ್ದಿರೋ ಬೆನ್ನಲ್ಲೇ ನಟ ಅಪ್ಪಣ್ಣ ರಾಮದುರ್ಗ (Appanna Ramadurga) ವಿರುದ್ಧವು ಕೇಳಿಬಂದಿರೋ ಕಿರುಕುಳ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ವೈರಲ್ ಆಗಿರೋ ಆಡಿಯೋ ನನ್ನದಲ್ಲ. ಕಿರುಕುಳ ಆರೋಪ ಸುಳ್ಳು ಎಂದು ಅಪ್ಪಣ್ಣ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಿಮ್ಮ ಮಾಧ್ಯಮಗಳಲ್ಲೇ ಆಡಿಯೋ ಬಂತು. ಅದನ್ನು ಸಂತ್ರಸ್ತೆ ಸುಳ್ಳು ಅಂತ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. 2-3 ವರ್ಷದ ಹಳೆಯ ಆಡಿಯೋ. ಆ ಸಂತ್ರಸ್ತೆ, ಅಪ್ಪಣ್ಣ ಅವರದ್ದು ಯಾವುದೇ ಪಾತ್ರವಿಲ್ಲ. ನನ್ನ ಜೊತೆ ಶೋ ಮಾಡಬಾರದು ಅಂತ ಮನು ಒತ್ತಾಯಪೂರ್ವಕವಾಗಿ ಮಾಡಿಸಿರೋ ವಿಡಿಯೋ ಎಂದು ಮಾಧ್ಯಮಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಅದೇ ನಿಜ, ನನ್ನಿಂದ ಆ ಹುಡುಗಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!

    ನಾನು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು ಎಂದು ಅವರ ಕೈಯಲ್ಲಿ ಕಿರುಕುಳ ನೀಡ್ತಿರೋದಾಗಿ ಮನು ಸುಳ್ಳು ಆಡಿಯೋ ಮಾಡಿಸಿದ್ದರ ಬಗ್ಗೆ ಆಕೆ ಹೇಳಿದ್ದಾರೆ. ಮನುಗೆ ಆಗಲಿ ಆ ಸಂತ್ರಸ್ತೆ ಹುಡುಗಿಗೆ ಆಗಿರಲಿ ನನ್ನ ಮೇಲೆ ವೈಯಕ್ತಿಕವಾಗಿ ಏನಿತ್ತೋ ನನಗೆ ಗೊತ್ತಿಲ್ಲ.

    ಈ ವೇಳೆ, ನನಗೆ ಈ ರೀತಿ ಆಡಿಯೋ ಮಾಡಿಕೊಂಡಿರೋ ವಿಚಾರ ಮೊದಲೇ ಗೊತ್ತಿತ್ತು. ಎರಡು ವರ್ಷದ ಹಿಂದೆ ಸಂತ್ರಸ್ತೆ ಬಂದು ಆಡಿಯೋ ಬಗ್ಗೆ ಹೇಳಿದ್ದರು. ಆಗ ನಾನು ಹೀಗೆಲ್ಲಾ ಮಾಡಬಾರದು ಎಂದು ಬುದ್ಧಿ ಹೇಳಿ ಕಳುಹಿಸಿದ್ದೆ, ಕ್ಷಮೆ ಕೇಳಿ ಹೋಗಿದ್ದರು. ಈ ರೀತಿ ಆಡಿಯೋ ವೈರಲ್ ಆದಾಗ ನಮ್ಮ ಮನೆಯವರು ಸಹಜವಾಗಿ ಗಾಬರಿಯಾಗಿದ್ದರು. ಆಗ ನಾನೇ ಧೈರ್ಯ ಹೇಳಿದ್ದೇನೆ. ಮನು ಆರೋಪಿಸಿರುವ ಆ ಲೇಡಿ ಡಾನ್ ಯಾರು ಎಂದು ನನಗೆ ಗೊತ್ತಿಲ್ಲ. ಇದಕ್ಕೆ ಮನು ಅವರೇ ಕ್ಲ್ಯಾರಿಟಿ ನೀಡಬೇಕು ಎಂದಿದ್ದಾರೆ.

    ವೈರಲ್ ಆಗಿರುವ ಆಡಿಯೋದಲ್ಲಿ ಕಾಮಿಡಿ ಕಿಲಾಡಿಗಳು ಶೋನಲ್ಲಿ ಅಪ್ಪಣ್ಣ ರಾಮದುರ್ಗ ಅಂತ ಇದ್ದಾನೆ. ಅವರನು ‘ಕಾಮಿಡಿ ಕಿಲಾಡಿಗಳು’ ಸೀಸನ್ ಎರಡರಿಂದಲೂ ನನಗೆ ಸಿಕ್ಕಾಪಟ್ಟೆ ಟಾರ್ಚರ್ ಕೊಡ್ತಿದ್ದಾನೆ. ಶೋಗಳಿಗೆ ಕರೆದುಕೊಂಡು ಹೋಗಿ ಕೆಟ್ಟ ದೃಷ್ಟಿಯಲ್ಲಿ ನೋಡೋದು ಎಲ್ಲ ಮಾಡ್ತಿದ್ದ. ತುಂಬಾ ದಿನಗಳವರೆಗೆ ಅವುಗಳಿಂದ ನಾನು ತಪ್ಪಿಸಿಕೊಂಡು ಬರುತ್ತಿದ್ದೆ. ಇತ್ತೀಚೆಗೆ ಅವನ ಕಾಟ ಹೆಚ್ಚಾಗಿದ್ದು, ನನಗೆ ಅವನ ಕಿರುಕುಳ ತಪ್ಪಿಲ್ಲ ಎಂದು ಸಂತ್ರಸ್ತೆ ಹೇಳಿದ್ದರು ಎಂದು ಹೇಳಿಕೊಂಡಿದ್ದಾರೆ.

  • ದಶಕದ ನಂತರ ಮತ್ತೊಮ್ಮೆ ಜೀ ವಾಹಿನಿಯಲ್ಲಿ ‘ಯಾರಿಗುಂಟು ಯಾರಿಗಿಲ್ಲ’

    ದಶಕದ ನಂತರ ಮತ್ತೊಮ್ಮೆ ಜೀ ವಾಹಿನಿಯಲ್ಲಿ ‘ಯಾರಿಗುಂಟು ಯಾರಿಗಿಲ್ಲ’

    ಬೆಂಗಳೂರು: ಕನ್ನಡ ದೃಶ್ಯಮಾಧ್ಯಮದಲ್ಲಿ ತನ್ನದೇ ಆದಂಥ ಸ್ಥಾನವನ್ನು ಪಡೆದುಕೊಂಡಿರುವ ಜೀ ಕನ್ನಡ ವಾಹಿನಿ ಇಲ್ಲಿಯವರೆಗೂ ಪ್ರೇಕ್ಷಕರಿಗೆ ಇಷ್ಟವಾದ ಕಾರ್ಯಕ್ರಮಗಳನ್ನೇ ಕೊಡುತ್ತಿದೆ. ಮನೋರಂಜನೆಗೆ ಮತ್ತೊಂದು ಹೆಸರಾಗಿ ಈ ವಾಹಿನಿ ಮೂಡಿಬರುತ್ತಲಿದೆ.

    ತನ್ನ ವಿಭಿನ್ನ ಪ್ರಯತ್ನಗಳ ಮೂಲಕ ಹೊಸ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದೆ. ಈಗಾಗಲೇ ಜನಪ್ರಿಯ ರಿಯಾಲಿಟಿ ಶೋಗಳು ಹಾಗೂ ಧಾರಾವಾಹಿಗಳ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿರುವ ಜೀ ಕನ್ನಡ ಈಗ ತನ್ನ ಜನಪ್ರಿಯ ಶೋಗಳಲ್ಲಿ ಒಂದಾದ ‘ಯಾರಿಗುಂಟು ಯಾರಿಗಿಲ್ಲ’ ಕಾರ್ಯಕ್ರಮವನ್ನು ಹೊಸ ರೂಪದೊಂದಿಗೆ ವೀಕ್ಷಕರ ಮುಂದೆ ಮತ್ತೆ ತರಲು ಸಿದ್ಧವಾಗಿದೆ.

    ಕಳೆದ 2007ರಲ್ಲಿ ತನ್ನ ಮೊದಲ ಸರಣಿಯನ್ನು ಶುರುಮಾಡಿದ್ದ ಯಾರಿಗುಂಟು ಯಾರಿಗಿಲ್ಲ ಕಾರ್ಯಕ್ರಮ ದಶಕದಾಚೆಗೂ ಕನ್ನಡಿಗರ ಮನೆ ಮನದಲ್ಲಿ ವಿಶೇಷ ಮನೋರಂಜನೆಯ ಕುರುಹಾಗಿ ನೆಲೆನಿಂತಿದೆ. ಅಂಥಾ ವಿನೂತನ ಕಾರ್ಯಕ್ರಮ ಇದೀಗ ಮತ್ತೊಮ್ಮೆ ಮೂಡಿಬರಲು ಸಿದ್ಧವಾಗಿದೆ. ಈಗ ಇನ್ನೊಂದಷ್ಟು ಹೊಸ ಯೋಜನೆ, ಯೋಚನೆಗಳೊಂದಿಗೆ ಮೂಡಿಬರಲು ಸಿದ್ಧವಾಗುತ್ತಿರುವ ಈ ಕಾರ್ಯಕ್ರಮ ಹೆಸರಾಂತ ತಾರೆಯರೊಂದಿಗೆ ತನ್ನ ಸರಣಿಯನ್ನು ಆರಂಭಿಸುತ್ತಿದೆ. ತನ್ನ ಪ್ರೇಕ್ಷಕರಿಗೆ ಹೊಸ ರೂಪದೊಂದಿಗೆ ಮನೋರಂಜನೆಯ ರಸದೌತಣವನ್ನು ನೀಡಲು ಇದೇ ಆಗಸ್ಟ್ 4ರಿಂದ ಯಾರಿಗುಂಟು ಯಾರಿಗಿಲ್ಲ ತನ್ನ ಪ್ರಸಾರವನ್ನು ಆರಂಭಿಸುತ್ತಿದೆ.

    ಜೀ ಕನ್ನಡ ಪರಿವಾರದ ನಾಗಿಣಿ, ಕಮಲಿ, ಬ್ರಹ್ಮಗಂಟು, ಯಾರೇ ನೀ ಮೋಹಿನಿ, ಗಂಗಾ, ಜೋಡಿ ಹಕ್ಕಿ, ಮಹಾದೇವಿ, ಕಾಮಿಡಿ ಕಿಲಾಡಿಗಳು, ಸರಿಗಮಪ ಶೋಗಳ ಕಲಾವಿದರು ಪ್ರತ್ಯೇಕ ತಂಡಗಳಾಗಿ ಪಾಲ್ಗೊಂಡು ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಯಾರಿಗುಂಟು ಯಾರಿಗಿಲ್ಲ ಕಾರ್ಯಕ್ರಮದ ಪ್ರತಿ ಸಂಚಿಕೆಯಲ್ಲಿ ಒಟ್ಟು 6 ಜನ ತಾರೆಯರಿರುತ್ತಾರೆ, 4 ಸುತ್ತುಗಳಿರುತ್ತವೆ. ಒಂದೊಂದು ಸುತ್ತಿನಲ್ಲೂ ಮನ ತುಂಬುವಂಥ ಮನೋರಂಜನೆಯೊಂದಿಗೆ ವಾರಂತ್ಯಕ್ಕೆ ಜೀ ವಾಹಿನಿಯ ಕೊಡುಗೆಯಾಗಿ ಯಾರಿಗುಂಟು ಯಾರಿಗಿಲ್ಲ ವೀಕ್ಷಕರ ಮುಂದೆ ಬರಲಿದೆ.

    ಹೊಸ ನೋಟ, ಹೊಸ ಆಟದ ಜೊತೆ ಕಾಮಿಡಿ ಕಿಲಾಡಿ ಸೀಸನ್ 2 ಖ್ಯಾತಿಯ ಅಪ್ಪಣ್ಣ ಹಾಗೂ ಸೂರಜ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ತಮ್ಮ ನೈಜವಾದ ನಿರೂಪಣೆ ಹಾಗೂ ಚುರುಕಾದ ಮಾತುಗಳ ಮೂಲಕ ಕಾರ್ಯಕ್ರಮಕ್ಕೆ ಹೊಸ ಸ್ಪರ್ಶವನ್ನು ನೀಡಲಿದ್ದಾರೆ. ಯಾರಿಗುಂಟು ಯಾರಿಗಿಲ್ಲ ಕಾರ್ಯಕ್ರಮವು ಆಗಸ್ಟ್ 4ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ.