Tag: appointed

  • Breaking- ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

    Breaking- ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

    ಸುನೀಲ್ ಪುರಾಣಿಕ್ ಅವರಿಂದ ತೆರುವಾಗಿದ್ದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಲಾಗಿದ್ದು, ಕನ್ನಡದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಕ ಮಾಡಿ, ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ (Academy), ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.

    ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಅಶೋಕ್ ಕಶ್ಯಪ್, ಲಿಫ್ಟ್ ಕೊಡ್ಲಾ, ಧ್ವಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿ, ರಾಷ್ಟ್ರ ಪ್ರಶಸ್ತಿ ಪಡೆದ ತಲೆದಂಡ ಸಿನಿಮಾಗೆ ಅಶೋಕ್ ಕಶ್ಯಪ್ ಅವರೇ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ ಎನ್ನುವುದು ವಿಶೇಷ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ

    ಜಗ್ಗೇಶ್, ಉಪೇಂದ್ರ, ಪ್ರಿಯಾಮಣಿ ಸೇರಿದಂತೆ ಕನ್ನಡದ ಅನೇಕ ಸ್ಟಾರ್ ನಟರ ಚಿತ್ರಗಳಿಗೆ ಕ್ಯಾಮೆರಾ ಕೆಲಸ ಮಾಡಿದ ಹೆಗ್ಗಳಿಕೆ ಅಶೋಕ್ ಅವರದ್ದು. ಅಲ್ಲದೇ ಅನೇಕ ಧಾರಾವಾಹಿಗಳಿಗೆ ಕೆಲಸ ಕೂಡ ಮಾಡಿದ್ದಾರೆ. ಇವರದ್ದೇ ನಿರ್ಮಾಣ ಸಂಸ್ಥೆಯಿಂದ ಧಾರಾವಾಹಿಗಳು ಕೂಡ ನಿರ್ಮಾಣವಾಗಿವೆ. ಸಿನಿಮಾಟೋಗ್ರಾಫರ್, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿದ್ದಾರೆ. ಭಾರತೀಯ ಸಿನಿಮಾ ರಂಗದ ಅತ್ಯುತ್ತಮ ಸಿನಿಮಾಟೋಗ್ರಾಫರ್ ಗಳಲ್ಲಿ ಇವರು ಒಬ್ಬರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ ಸರಕಾರ : ಚುನಾವಣೆ ಅನಿವಾರ್ಯ

    ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ ಸರಕಾರ : ಚುನಾವಣೆ ಅನಿವಾರ್ಯ

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಬೆನ್ನೆಲ್ಲೆ, ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ ಕೂಡ ನಡೆಸಬೇಕೆಂದು ಮತ್ತು ಚುನಾವಣೆ ನಡೆಯುವವರಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕೆಂದು ನಿರ್ಮಾಪಕ ಕೃಷ್ಣೇಗೌಡ ಸಹಕಾರ ಸಂಘಗಳ ಉಪ ನಿಬಂಧಕರಿಗೆ ದೂರು ನೀಡಿದ್ದರು. ಅದರ ಅನ್ವಯ, ಇದೀಗ ಆರು ತಿಂಗಳ ಅವಧಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

    ಈಗಿರುವ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಅಧಿಕಾರ ಅವಧಿ ಸೆಪ್ಟೆಂಬರ್ 2021ಕ್ಕೆ ಮುಕ್ತಾಯವಾಗಿತ್ತು. ಆನಂತರ ಚುನಾವಣೆ ನಡೆಸದೇ ಅಧಿಕಾರಿ ಮುಂದುವರೆಸಲಾಗಿತ್ತು. ಹಾಗಾಗಿ ನಿರ್ಮಾಪಕ ಕೃಷ್ಣೇಗೌಡ ಅವರು ಸಹಕಾರ ಇಲಾಖೆಗೆ ಪತ್ರ ಬರೆದು, ‘ಸೆಪ್ಟೆಂಬರ್ 2021ರಲ್ಲೇ ಸಂಘದ ಪದಾವಧಿಯು ಮುಕ್ತಾಗೊಂಡಿರುವುದು ಕಂಡು ಬಂದಿದ್ದು, ಅವಧಿ ಮುಗಿದಿರುವ ಆಡಳಿತ ಮಂಡಳಿಯು ಅನಧಿಕೃತವಾಗಿ ಮುಂದುವರೆದಿರುತ್ತದೆ. ಸಂಘದ ಆಡಳಿತ ಮಂಡಳಿ ಚುನಾವಣೆಯನ್ನು ನಿಗದಿತ ಅವಧಿಯಲ್ಲಿ ನಡೆಸಲು ವಿಫಲವಾಗಿರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ ಎಂದು’ ಆದೇಶದ ಹೊರಡಿಸಲಾಗಿದೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಿರುವ ಕಾರಣದಿಂದಾಗಿ ಅಧ್ಯಕ್ಷರಾಗಿದ್ದ ಡಿ.ಕೆ.ರಾಮಕೃಷ್ಣ ಅವರು ರಾಜೀನಾಮೆ ಕೊಡುವಂತಾಗಿದೆ. ಅಲ್ಲದೇ, ಆಡಳಿತಾಧಿಕಾರಿಯು ಕೂಡಲೇ ಸಂಘದ ಪ್ರಭಾರ ವಹಿಸಿಕೊಂಡು, ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ, ಚುನಾಯಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ, ಸರಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ಈ ಆದೇಶ ಪ್ರತಿಯನ್ನು ನಿರ್ಮಾಪಕ ಕುಮಾರ್ ಶ್ರೀನಿವಾಸ್ ಮೂರ್ತಿ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡು ಶೀಘ್ರದಲ್ಲೇ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

    Live Tv

  • ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    – ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್ ನೇಮಕ

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಳಗಿಳಿಸಿ, ಪುಷ್ಪಾ ಅಮರನಾಥ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

    ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತವಾಗಿ ತೆರೆ ಬಿದ್ದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಧ್ಯಕ್ಷ ಪಟ್ಟದಿಂದ ಕೆಳಗಿಳಿಸುವಂತೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಸಹೋದರರು ಬೇಡಿಕೆ ಇಟ್ಟಿದ್ದರು. ಈಗ ಹೈ ಕಮಾಂಡ್ ಈ ಬೇಡಿಕೆಗೆ ಅಸ್ತು ಅಂದಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಳಗಡೆ ಇಳಿಸುವ ವಿಚಾರ ಚರ್ಚೆ ಆಗುತ್ತಿದ್ದಂತೆ ಅಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿತ್ತು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದರು. ಇದಾದ ಕೆಲವೇ ದಿನಗಳ ನಂತರ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನು ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದರು. ಈ ಎಲ್ಲ ಪ್ರಕ್ರಿಯೆ ಮೂಲಕ ಪುಷ್ಪಾ ಅಮರನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv