Tag: Apthamitra

  • ಆಪ್ತಮಿತ್ರ ದುರ್ಘಟನೆ ನೆನಪಿಸಿಕೊಂಡ ರಮೇಶ್ ಅರವಿಂದ್

    ಆಪ್ತಮಿತ್ರ ದುರ್ಘಟನೆ ನೆನಪಿಸಿಕೊಂಡ ರಮೇಶ್ ಅರವಿಂದ್

    ಟ, ನಿರ್ದೇಶಕ ಹಾಗೂ ನಿರೂಪಕ ರಮೇಶ ಅರವಿಂದ್ (Ramesh Aravind) 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ದೈಜಿ ಸಿನಿಮಾದ (Daiji Cinema) ಟೀಸರ್ ಕೂಡಾ ರಿಲೀಸ್ ಆಗಿದೆ. ಈ ವೇಳೆ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ನಟ ವಿಷ್ಣುವರ್ಧನ್ (Vishnuvardhan) ಅವರ ಜೊತೆಗಿನ ದಿನಗಳು ಹಾಗೂ ಅವರಿಗೆ ಸಲ್ಲಬೇಕಾದ ಗೌರವಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ಜೊತೆಗೆ ಆಪ್ತಮಿತ್ರ-3 ಸಿನಿಮಾ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

    ಆಪ್ತಮಿತ್ರ (Apthamitra) ಸಿನಿಮಾವನ್ನ ಮಾಡಿಯಾದ್ಮೇಲೆ ಒಂದು ದುರ್ಘಟನೆ ನಡೆಯಿತು. ಇದಾದ ಬಳಿಕ ಆಪ್ತರಕ್ಷಕ ಅಂದ್ರೆ ಆಪ್ತಮಿತ್ರ ಸಿನಿಮಾದ ಭಾಗ-2 ಸಿನಿಮಾ ರಿಲೀಸ್ ನಂತರ ಮತ್ತೊಂದು ಆಘಾತವೇ ನಡೆದುಹೋಯ್ತು. ಕಾಕತಾಳಿಯವೋ ಅಥವಾ ಆಕಸ್ಮಿಕವೋ ಇವೆರಡು ಘಟನೆ ನಡೆದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಆಪ್ತಮಿತ್ರ ಸಿರೀಸ್ ಅಂದ್ರೆ ಕೊಂಚ ಹಿಂಜರಿಕೆ ಉಂಟಾಗಿದೆ. ಇದು ಕಲಾವಿದರಿಗೂ ಸಹ ಆಘಾತ, ಆತಂಕವನ್ನ ಸೃಷ್ಟಿಸಿದೆ. ಹೀಗಾಗಿ ಆಪ್ತಮಿತ್ರ ಪಾರ್ಟ್-3 ಬರುತ್ತಾ ಎನ್ನುವ ಹಲವಾರು ಪ್ರಶ್ನೆಗಳು ಆಗಾಗ ಕೇಳಿ ಬರುತ್ತಿವೆ. ಇದನ್ನೂ ಓದಿ: ಉಪೇಂದ್ರ ದಂಪತಿ ಫೋನ್ ಹ್ಯಾಕ್ ಸೈಬರ್ ವಂಚಕರು ದೋಚಿದ್ದೆಷ್ಟು ಹಣ?

    ಆಪ್ತಮಿತ್ರ ಸಿನಿಮಾದ ಪಾರ್ಟ್-3 ಸ್ಕಿಪ್ಟ್‌ ಬಂದಿದೆಯಾ..? ಬಂದರೆ ಸಿನಿಮಾ ಮಾಡುತ್ತಿರಾ ಎನ್ನುವ ಪ್ರಶ್ನೆಗೆ ನಟ ರಮೇಶ್ ಅರವಿಂದ್ ಪ್ರತಿಕ್ರಿಯೆ ನೀಡಿದ್ದಾರೆ. `ನನ್ನ ಪ್ರಕಾರ ಅದೊಂದು ಸಬ್ಜೆಕ್ಟ್, ಅದೊಂದು ಸ್ಕಿçÃನ್, ಅದೊಂದು ಪಿಕ್ಸಿಯಸ್ ಕ್ಯಾರೆಕ್ಟರ್ ನಾಗವಲ್ಲಿ ಅನ್ನೋದು. ಆದರೆ ಆಪ್ತರಕ್ಷಕ ಮಾಡುವ ವೇಳೆ ಅಂತಹದೊಂದು ಕಥೆ ಬಂದಿತ್ತು. ಆಪ್ತಮಿತ್ರ, ಆಪ್ತರಕ್ಷಕ ಆದ್ಮೇಲೆ ನಾನು ಮಾಡ್ತಿರುವ ಹಾರರ್ ಸಿನಿಮಾ ದೈಜಿನೇ’ ಎಂದು ಹೇಳಿದ್ದಾರೆ.