ಕನಸಿನ ರಾಣಿ ಮಾಲಾಶ್ರೀ (Malashri) ಮಗಳ ಜೊತೆ ಪೆದ್ದಮ್ಮನ ದರ್ಶನ ಮಾಡಿದ್ದಾರೆ. ಹೈದ್ರಾಬಾದ್ನ ಜುಬಲಿ ಹಿಲ್ಸ್ನಲ್ಲಿರುವ ಪೆದ್ದಮ್ಮ ದೇವಸ್ಥಾನ ಅಲ್ಲಿನ ಸುಪ್ರಸಿದ್ಧ ದೇವಸ್ಥಾನದಲ್ಲೊಂದು. ಕರ್ನಾಟಕದಲ್ಲಿ ಮೆಜೆಸ್ಟಿಕ್ನಲ್ಲಿರುವ ಅಣ್ಣಮ್ಮ ದೇವಿಯ ಮೇಲಿನ ನಂಬಿಕೆಯಂತೆ ಹೈದ್ರಾಬಾದ್ನಲ್ಲಿ ಪೆದ್ದಮ್ಮ ದೇವಿಯ ಮೇಲೆ ಭಕ್ತರ ಅಪಾರ ನಂಬಿಕೆ ಇದೆ. ಹೀಗಾಗಿ ಗೌರಿ ಹಬ್ಬದ ದಿನ ಅಲ್ಲಿನ ಪೆದ್ದಮ್ಮನ ದರ್ಶನ ಮಾಡಿದ್ದಾರೆ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ (Aradhana Ram).
ಬಾಲಯ್ಯರ 50ನೇ ವರ್ಷದ ಸಿನಿಮಾ ಜರ್ನಿ ವಿಶೇಷವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ಮಾಲಾಶ್ರೀ ಮಗಳ ಸಮೇತ ಅತಿಥಿಯಾಗಿ ತೆರಳಿದ್ದರು. ಹಲವು ದಿನ ಅಲ್ಲೇ ಉಳಿದಿದ್ದಾರೆ. ಅಷ್ಟಕ್ಕೂ ಆಂಧ್ರನಾಡು ಮಾಲಾಶ್ರೀಯ ತವರುಮನೆ ಕೂಡ. ಹೀಗಾಗಿ ಆಂಧ್ರಕ್ಕೆ ತೆರಳಿದ್ದ ಮಾಲಾಶ್ರೀ ಅಲ್ಲಿನ ಸಹೋದ್ಯೋಗಿ ಆಪ್ತರನ್ನೆಲ್ಲಾ ಭೇಟಿಯಾಗಿದ್ದಾರೆ. ಈ ವೇಳೆ ಅಲ್ಲಿಯೇ ಇರುವ ಪೆದ್ದಮ್ಮ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ಇದನ್ನೂ ಓದಿ: `ಡಿ’ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷ್ಯವಾದ ಮಣ್ಣು – ದೇಶದಲ್ಲೇ ಮೊದಲ ಪ್ರಕರಣ!
`ಕಾಟೇರ’ ಚಿತ್ರದ ಮೂಲಕ ಮಾಲಾಶ್ರೀ ಮಗಳು ಆರಾಧನಾ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಬಳಿಕ ಆರಾಧನಾ ಒಳ್ಳೆಯ ಅವಕಾಶಕ್ಕಾಗಿ ಕಾದಿದ್ದಾರೆ. ಈ ನಡುವೆ ಟಾಲಿವುಡ್ನಿಂದಲೂ ಆರಾಧನಾಗೆ ಸಿನಿಮಾ ಆಫರ್ ಬರ್ತಿರೋ ಸುದ್ದಿಯಿತ್ತು. ಬಹುಶಃ ಹೈದ್ರಾಬಾದ್ಗೆ ತೆರಳಿರುವ ಮಾಲಾಶ್ರೀ ಮಗಳ ಸಿನಿಮಾ ಕರಿಯರ್ ವಿಚಾರವಾಗಿಯೂ ಚರ್ಚಿಸಿರುವ ಸಾಧ್ಯತೆ ಇದೆ. ಹಲವು ಸ್ಕ್ರಿಪ್ಟ್ಗಳನ್ನ ಕೇಳಿರುವ ಸುದ್ದಿಯೂ ಬಂದಿದೆ. ಶ್ರೀಘ್ರದಲ್ಲೇ ಆರಾಧನಾ ಟಾಲಿವುಡ್ಗೆ ಎಂಟ್ರಿ ಕೊಟ್ರೂ ಆಶ್ಚರ್ಯವೇನಿಲ್ಲ. ಇದನ್ನೂ ಓದಿ: ‘ಹನುಮಾನ್’ ನಿರ್ದೇಶಕನ ಹೊಸ ಸಿನಿಮಾ: ಚಿತ್ರರಂಗಕ್ಕೆ ಬಾಲಯ್ಯ ಪುತ್ರನ ಗ್ರ್ಯಾಂಡ್ ಎಂಟ್ರಿ
ಕನ್ನಡ ಚಿತ್ರರಂಗದ ಹಿರಿಯ ನಟಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhanaa Ram) ನಟಿಸಿರೋ ‘ಕಾಟೇರ’ (Katera) ಸಿನಿಮಾ ಇಂದು (ಡಿ.29) ಬಿಡುಗಡೆಯಾಗಿದೆ. ದರ್ಶನ್ಗೆ (Darshan) ಜೋಡಿಯಾಗಿ ಪ್ರಭಾ ಪಾತ್ರಕ್ಕೆ ಜೀವ ತುಂಬಿರೋ ಮಗಳ ನಟನೆ ನೋಡಿ ಮಾಲಾಶ್ರೀ ಕಣ್ಣೀರಿಟ್ಟಿದ್ದಾರೆ.
‘ಕಾಟೇರ’ ಸಿನಿಮಾವನ್ನು ಮಗಳ ಜೊತೆಯೇ ಮಾಲಾಶ್ರೀ (Malashree) ವೀಕ್ಷಿಸಿ ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಖುಷಿ ಆಗಿದೆ ಮಗಳ ಆ್ಯಕ್ಟಿಂಗ್ ನೋಡಿ, ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಒಂದೇ ಸಿನಿಮಾದಲ್ಲಿ ಎಲ್ಲಾ ತರಹ ನಟಿಸಿ ತೋರಿದ್ದಾಳೆ. ತುಂಬಾ ಖುಷಿ ಆಗ್ತಿದೆ. ಅವಳಿಗೆ ಸಿನಿಮಾರಂಗದಲ್ಲಿ ಫ್ಯೂಚರ್ ಇದೆ ಎಂದು ಮಾಲಾಶ್ರೀ ಭಾವುಕರಾಗಿದ್ದಾರೆ.
ಅಮ್ಮನ ಹೊರತಾಗಿ ಪ್ರೇಕ್ಷಕಿಯಾಗಿ ಹೇಳಬೇಕು ಅಂದರೆ ಮಗಳ ನಟನೆಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೀನಿ. ಎಲ್ಲಾ ದೃಶ್ಯಕ್ಕೂ ಜೀವ ತುಂಬಿದ್ದಾಳೆ ಆರಾಧನಾ. ಹೆಮ್ಮೆ ಆಗುತ್ತಿದೆ ಎಂದು ಮಗಳಿಗೆ ಮಾಲಾಶ್ರೀ ಮುತ್ತಿಟ್ಟಿದ್ದಾರೆ.
ಅಮ್ಮಾ ಅಳೋದು ನೋಡಿ ನನಗೂ ಅಳು ಬರುತ್ತಿದೆ. ಕಾಟೇರ ಬಿಗ್ ಪ್ರಾಜೆಕ್ಟ್ನಲ್ಲಿ ನನಗೆ ಅವಕಾಶ ಕೊಟ್ಟಿದ್ದಕ್ಕೆ ಇಡೀ ತಂಡಕ್ಕೆ ಧನ್ಯವಾದಗಳು. ಮೊದಲ ಸಿನಿಮಾದಲ್ಲಿಯೇ ಇಷ್ಟು ಒಳ್ಳೆಯ ಪಾತ್ರ ಸಿಕ್ಕಿದೆ ಇದರ ಬಗ್ಗೆ ಖುಷಿಯಿದೆ ಎಂದು ಕಾಟೇರ ನಟಿ ಆರಾಧನಾ ಭಾವುಕರಾಗಿದ್ದಾರೆ. ಇದನ್ನೂ ಓದಿ:ನಟ ವಿಜಯಕಾಂತ್ ದರ್ಶನಕ್ಕೆ ಬಂದಿದ್ದ ವಿಜಯ್ ಮೇಲೆ ಚಪ್ಪಲಿ ಎಸೆತ
ದರ್ಶನ್ ನಟನೆಯ ‘ಕಾಟೇರ’ ಸಿನಿಮಾಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ದರ್ಶನ್-ಆರಾಧನಾ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡುತ್ತಿದೆ. ಸಿನಿಮಾ ಈ ವರ್ಷದ ಹಿಟ್ ಲಿಸ್ಟ್ಗೆ ಸೇರೋದು ಗ್ಯಾರಂಟಿ ಅಂತಿದ್ದಾರೆ ಅಭಿಮಾನಿಗಳು.
ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ (Malashree) ಅವರು ಪುತ್ರಿಯ ಜೊತೆ ಸಿದ್ಧಿವಿನಾಯಕ ದೇವರ ದರ್ಶನ ಪಡೆದಿದ್ದಾರೆ. ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.
ನಟಿ ಮಾಲಾಶ್ರೀ ಪಡ್ಡೆಹುಡುಗರ ಕನಸಿನ ರಾಣಿಯಾಗಿ ಮರೆದವರು. ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತಾ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಜ್ಯೂ.ಮಾಲಾಶ್ರೀ ಆರಾಧಾನಾ (Aradhana Ram) ಕೂಡ ಸಿನಿಮಾಗೆ ಎಂಟ್ರಿ ಕೊಡ್ತಿದ್ದಾರೆ. ಈ ಬೆನ್ನಲ್ಲೇ ದೇವರ ಸನ್ನಿಧಿಗೆ ಮಾಲಾಶ್ರೀ-ಆರಾಧಾನಾ ಭೇಟಿ ನೀಡಿದ್ದಾರೆ. 5ಕ್ಕೂ ಹೆಚ್ಚು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ (Katera Film) ಸಿನಿಮಾ ಇಂದು ಕೊನೆಯ ಹಂತದ ಶೂಟಿಂಗ್ ಮುಕ್ತಾಯವಾಗಿದೆ. ಚಿತ್ರತಂಡದ ಕಡೆಯಿಂದ ಇಂದು (ಸೆ.11) ಸುದ್ದಿಗೋಷ್ಠಿ ಆಯೋಜಿಸಿದೆ. ಈ ಚಿತ್ರದ ಮೂಲಕ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ವೇಳೆ ನಟ ದರ್ಶನ್ ಜೊತೆ ತೆರೆಹಂಚಿಕೊಂಡಿದ್ದರ ಬಗ್ಗೆ ಯುವನಟಿ ಆರಾಧನಾ ರಾಮ್ ಸಂತಸ ವ್ಯಕ್ತಪಡಿಸಿದ್ದರು. ತೆರೆಹಿಂದಿನ ಅನುಭವ ಬಿಚ್ಚಿಟ್ಟರು.
ದರ್ಶನ್ ಸರ್ ಅವರ ಸಿನಿಮಾದಲ್ಲಿ ನಟಿಸಲು ಚಾನ್ಸ್ ಸಿಕ್ಕಿದ್ದಕ್ಕೆ ತುಂಬಾ ಖುಷಿಯಿದೆ. ಪೋಸ್ಟರ್ನಲ್ಲಿ ನನ್ನ ನೋಡಿದ್ರೆ, ಅದು ನಾನೇ ನಾ ಅಂತಾ ಅನಿಸುತ್ತಾಯಿದೆ. ದರ್ಶನ್ ಅವರ ಜೊತೆ ಫಸ್ಟ್ ಟೈಮ್ ವರ್ಕ್ ಮಾಡುತ್ತಾ ಇದ್ದೀನಿ ಎಂದು ಒಂದು ದಿನನೂ ಅನಿಸಲಿಲ್ಲ. ನಟಿಸೋದಕ್ಕೆ ಸರ್ಪೋಟ್ ಮಾಡಿದ್ದರು. ನನಗೆ ಸೆಟ್ನಲ್ಲಿ ದರ್ಶನ್ ಸರ್ ಚಾಕಲೇಟ್ ತಂದು ಕೊಡುತ್ತಾ ಇದ್ದರು. ನಮ್ಮ ಡಿ ಬಾಸ್ ಹೀರೋ ಬಗ್ಗೆ ಎಷ್ಟು ಮಾತನಾಡಿದ್ದರು ಅದು ಸಾಕಾಗೋಲ್ಲ. ಇದನ್ನೂ ಓದಿ:‘ಮ್ಯಾಟ್ನಿ’ ಚಿತ್ರದ ಎಣ್ಣೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನೀನಾಸಂ ಸತೀಶ್
ತರುಣ್ (Tarun) ಅವರಂತಹ ನಿರ್ದೇಶಕರ ನಿರ್ದೇಶನದಲ್ಲಿ ಮೊದಲ ಬಾರಿ ನಟಿಸುತ್ತಿದ್ದೇನೆ ಅಂದರೆ ಅದು ನನ್ನ ಅದೃಷ್ಟ. ದಿನ ಹೊಸ ತರಹದ ಚಾಲೆಂಜ್ ಕೊಡುತ್ತಿದ್ದರು. ಈ ತರಹ ನೀನು ಮಾಡಬಹುದು ಅಂತಿದ್ರು. ಈ ಅವಕಾಶಕ್ಕೆ ನಾನು ಅಭಾರಿಯಾಗಿದ್ದೇನೆ. ನಿಮ್ಮ ಸಿನಿಮಾ ಕಲ್ಪನೆಯನ್ನ ನಾನು ಸ್ವಲ್ಪ ಆದರೂ ಟಚ್ ಮಾಡಿದ್ದೇನೆ ಎಂದು ಭಾವಿಸುತ್ತೇನೆ ಎಂದು ಡೈರೆಕ್ಟರ್ ಬಗ್ಗೆ ನಟಿ ಮಾತನಾಡಿದ್ದಾರೆ.
‘ಕಾಟೇರ’ (Katera) ಸಿನಿಮಾದಿಂದ ಕಲಿತ್ತಿದ್ದೇನೆ. ಪ್ರತಿದಿನವೂ ಕಲಿಯೋದು ಇತ್ತು. ನನಗೆ ನಿಮ್ಮ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ರಾಕ್ಲೈನ್ ವೆಂಕಟೇಶ್ಗೆ ಮೆಚ್ಚುಗೆ ಸೂಚಿಸಿದ್ದರು ಆರಾಧನಾ ರಾಮ್.
ಚಾಲೆಂಜಿಂಗ್ ಸ್ಟಾರ್ ದರ್ಶನ್-ಆರಾಧನಾ ರಾಮ್ (Aradhana Ram) ನಟನೆಯ ಸಿನಿಮಾಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ರಾಕ್ಲೈನ್ ವೆಂಕಟೇಶ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.