Tag: Arasikere

  • ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳ ಕೊಲೆ – ಸತ್ಯ ಹೊರಬರುತ್ತಿದ್ದಂತೆ ಆರೋಪಿ ಆತ್ಮಹತ್ಯೆ

    ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳ ಕೊಲೆ – ಸತ್ಯ ಹೊರಬರುತ್ತಿದ್ದಂತೆ ಆರೋಪಿ ಆತ್ಮಹತ್ಯೆ

    – ಕೊಲೆ ಮಾಡಿ ಹೃದಯಾಘಾತ ಎಂದು ಬಿಂಬಿಸಿದ್ದ ಆರೋಪಿ

    ಹಾಸನ: ಚಿನ್ನದ ಮಾಂಗಲ್ಯ ಸರದ (Mangalsutra) ಆಸೆಗೆ ಮಾವನ ಮಗಳನ್ನೇ ಕೊಂದು ಹೃದಯಾಘಾತ (Heart Attack) ಎಂದು ಬಿಂಬಿಸಿ, ಸತ್ಯ ಹೊರಬರುತ್ತಿದ್ದಂತೆ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arasikere) ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶಕುಂತಲ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಮಾವನ ಮಗಳನ್ನೇ ಕೊಂದ ಆರೋಪಿ. ತನಿಖೆ ನಂತರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 27 ವರ್ಷಗಳ ಹಿಂದೆ ಪಾಲಾಕ್ಷ ಜೊತೆ ವಿವಾಹವಾಗಿದ್ದ ಶಕುಂತಲಾ, ಮಕ್ಕಳಿಲ್ಲದ ಕಾರಣ ಮನೆಯಲ್ಲಿ ಇಬ್ಬರೇ ವಾಸವಿದ್ದರು. ಆ.20 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಾವನ ಮಗಳ ಮನೆಗೆ ಶಿವಮೂರ್ತಿ ಬಂದಿದ್ದ. ಮನೆಗೆ ಬರುವಾಗಲೇ ನಕಲಿ ಚಿನ್ನದ ಸರ ತಂದಿದ್ದ. ಬಳಿಕ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿ 36 ಗ್ರಾಂ ತೂಕದ ಚಿನ್ನದ ಸರ ಎಗರಿಸಿ ನಕಲಿ ಚಿನ್ನದ ಸರ ಹಾಕಿದ್ದ. ದನ ಮೇಯಿಸಲು ಹೋಗಿದ್ದ ಶಕುಂತಲಾ ಪತಿ ಪಾಲಾಕ್ಷ ವಾಪಸ್ ಮನೆಗೆ ಬಂದ ವೇಳೆ ಶಕುಂತಲಾ ನೆಲದ ಮೇಲೆ ಬಿದ್ದಿದ್ದಳು. ಇದನ್ನೂ ಓದಿ: ನಾವು ಮಾಡುವ ಈ ಸಣ್ಣ ತಪ್ಪುಗಳೇ ಸೈಬರ್‌ ಅಪರಾಧಕ್ಕೆ ದಾರಿ – 7 ತಿಂಗಳಲ್ಲಿ ಬರೋಬ್ಬರಿ 861 ಕೋಟಿ ಲೂಟಿ

    ಪತ್ನಿ ನೆಲದ ಮೇಲೆ ಬಿದ್ದಿರುವ ಬಗ್ಗೆ ಪಾಲಾಕ್ಷ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಶಕುಂತಲಾ ಸಾವನ್ನಪ್ಪಿರುವ ಸುದ್ದಿ ತಿಳಿದು ಗ್ರಾಮಕ್ಕೆ ಬಂದಿದ್ದ ಶಕುಂತಲಾ ಸಹೋದರಿಯರು ಪತಿ ಪಾಲಾಕ್ಷ ವಿರುದ್ಧವೇ ಆರೋಪ ಮಾಡಿದ್ದರು. ಇದೇ ವೇಳೆ ಘಟನಾ ಸ್ಥಳಕ್ಕೆ ಬಂದಿದ್ದ ಆರೋಪಿ ಶಿವಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ. ಈ ವೇಳೆ ಗ್ರಾಮಸ್ಥರು ಶಿವಮೂರ್ತಿ ಮಾತನ್ನೇ ನಂಬಿದ್ದರು. ಆದರೆ ಸಾವಿನ ಬಗ್ಗೆ ಅನುಮಾನಗೊಂಡ ಶಕುಂತಲಾ ಸಂಬಂಧಿಕ 112ಕ್ಕೆ ಕರೆ ಮಾಡಿದ ಹಿನ್ನೆಲೆ ಸ್ಥಳಕ್ಕೆ ಜಾವಗಲ್ ಪೊಲೀಸರು ಆಗಮಿಸಿದ್ದರು. ಈ ವೇಳೆ ಹೃದಯಾಘಾತವಾಗಿದೆ ಮರಣೋತ್ತರ ಪರೀಕ್ಷೆ ಬೇಡ ಎಂದು ಶಿವಮೂರ್ತಿ ಹೇಳಿದ್ದಾನೆ. ಅಲ್ಲದೇ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಮಾಜಿ ಸಚಿವ ಬಿ.ಶಿವರಾಂಗೆ ಮರಣೋತ್ತರ ಪರೀಕ್ಷೆ ಬೇಡ ಎಂದು ಗ್ರಾಮದ ಕೆಲವರು ಫೋನ್ ಮಾಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ಮಾಡಿಸುವಂತೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದರು. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದಂತೆ ಶಿವಮೂರ್ತಿ ಭಯಗೊಂಡಿದ್ದ. ಗ್ರಾಮದ ಹಲವೆಡೆ ಸಿಸಿಟಿವಿ ಅಳವಡಿಸಿದ್ದು, ಶಿವಮೂರ್ತಿ ಸಿಸಿಟಿವಿ ಇದ್ದ ಕಡೆ ಓಡಾಡುವುದನ್ನೇ ಬಿಟ್ಟಿದ್ದ. ಶಿವಮೂರ್ತಿ ಪತ್ನಿ ಗ್ರಾ.ಪಂ. ಸದಸ್ಯೆ ಆಗಿದ್ದರು. ಪೊಲೀಸ್ ತನಿಖೆ ಚುರುಕುಗೊಳ್ಳತ್ತಿದ್ದಂತೆ ಹೆದರಿದ ಶಿವಮೂರ್ತಿ ಕೊಲೆ ಮಾಡಿದ ಒಂದು ವಾರದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿಯೇ ನೇಣುಬಿಗಿದುಕೊಂಡು ಶಿವಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನಿಖೆ ನಂತರ ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣದ ಸತ್ಯಾಂಶ ಬಯಲಾಗಿದೆ. ಚಿನ್ನದ ಸರ ಕದ್ದ ಶಿವಮೂರ್ತಿ ಅದನ್ನು ಜಾವಗಲ್‌ನ ಚಾಮುಂಡೇಶ್ವರಿ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟಿದ್ದ. ಸದ್ಯ ಪೊಲೀಸರು ಮಾಂಗಲ್ಯ ಸರವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

  • ಹಾಸನ | ಶಾಲೆಯಲ್ಲಿ ಮಕ್ಕಳ ನಡುವೆ ಗಲಾಟೆ – ತಂದೆಯ ಕೊಲೆಯಲ್ಲಿ ಅಂತ್ಯ

    ಹಾಸನ | ಶಾಲೆಯಲ್ಲಿ ಮಕ್ಕಳ ನಡುವೆ ಗಲಾಟೆ – ತಂದೆಯ ಕೊಲೆಯಲ್ಲಿ ಅಂತ್ಯ

    ಹಾಸನ: ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ (Arasikere) ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ. ಅರಸೀಕೆರೆ ನಗರದ ಖಾಸಗಿ ಶಾಲೆಯಲ್ಲಿ (School) ಓದುತ್ತಿದ್ದ ತೌಫಿಕ್ ಹಾಗೂ ಫರಾನ್ ಪುತ್ರರು ಆ.25 ರಂದು ಕ್ಷುಲ್ಲಕ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಮಾಡಿಕೊಂಡಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಅರಸೀಕೆರೆಯ ಬಿಹೆಚ್ ರಸ್ತೆಯಲ್ಲಿರುವ ಅಂಗಡಿಯಲ್ಲಿ ಎದುರಾದ ತೌಫಿಕ್ ಹಾಗೂ ಫರಾನ್ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಇದನ್ನೂ ಓದಿ: ದೆಹಲಿಯ ಕಲ್ಕಾಜಿ ದೇಗುಲದಲ್ಲಿ ಪ್ರಸಾದ ವಿಚಾರಕ್ಕೆ ಗಲಾಟೆ – 15 ವರ್ಷಗಳಿಂದ ಸೇವಕನಾಗಿದ್ದ ವ್ಯಕ್ತಿಯ ಹತ್ಯೆ

    ಜಗಳ ಅತಿರೇಕಕ್ಕೆ ತಿರುಗಿ ಫರಾನ್, ತೌಫಿಕ್‍ನನ್ನು ತಳ್ಳಿದ್ದ. ಈ ವೇಳೆ ಮೇಲಿನಿಂದ ಮೆಟ್ಟಿಲುಗಳ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ತೌಫಿಕ್‍ನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಅವರು ಸಾವನ್ನಪ್ಪಿದ್ದರು.

    ತೌಫಿಕ್ ಸಾವಿನಿಂದ ರೊಚ್ಚಿಗೆದ್ದ ಕುಟುಂಬಸ್ಥರು, ರಾತ್ರಿ ಫರಾನ್ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಾರಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ಶಾಸಕ ಕೆ.ಎಂ.ಶಿವಲಿಂಗೇಗೌಡ ಮೃತನ ಅಂತಿಮ ದರ್ಶನ ಪಡೆದಿದ್ದಾರೆ. ಘಟನೆ ಸಂಬಂಧ ಪೊಲೀಸರ ನಿರ್ಲಕ್ಷ್ಯಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನ – ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಗುಂಡೇಟು

  • 2 ವರ್ಷಗಳಲ್ಲಿ ಎತ್ತಿನಹೊಳೆ ಪೂರ್ಣಗೊಳಿಸಿ 7 ಜಿಲ್ಲೆಗಳಿಗೆ ನೀರು ಕೊಡ್ತೇವೆ: ಸಿದ್ದರಾಮಯ್ಯ

    2 ವರ್ಷಗಳಲ್ಲಿ ಎತ್ತಿನಹೊಳೆ ಪೂರ್ಣಗೊಳಿಸಿ 7 ಜಿಲ್ಲೆಗಳಿಗೆ ನೀರು ಕೊಡ್ತೇವೆ: ಸಿದ್ದರಾಮಯ್ಯ

    – ಹಾಸನದಲ್ಲಿ ಜೆಡಿಎಸ್‌ನವರು ಗೃಹಲಕ್ಷ್ಮಿ ತಗೋತಿಲ್ವಾ? ಅಂತ ಸಿಎಂ ಪ್ರಶ್ನೆ

    ಹಾಸನ: ಮುಂದಿನ ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ ಏಳು ಜಿಲ್ಲೆಗಳಿಗೆ ನೀರು ಕೊಡ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

    ಹಾಸನದ (Hassan) ಅರಸೀಕೆರೆ (Arsikere) ತಾಲೂಕು ಕ್ರೀಡಾಂಗಣದಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನೇರವಾಗಿ ಅಧಿಕಾರಕ್ಕೆ ಬಂದಿಲ್ಲ. 2018ರಲ್ಲಿ ಯಡಿಯೂರಪ್ಪ (Yediyurappa) ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದರು. ಅವರು ರಾಜ್ಯದ ಅಭಿವೃದ್ಧಿ ಮಾಡುವ ಬದಲು ಲೂಟಿ ಹೊಡೆದರು. ಎತ್ತಿನಹೊಳೆ ಯೋಜನೆ ಆಗೋದೆ ಇಲ್ಲ ಎಂದು ಕುಮಾರಸ್ವಾಮಿ ರಾಜಕೀಯವಾಗಿ ಹೇಳಿದ್ದಾರೆ. ಇನ್ನು ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ 7 ಜಿಲ್ಲೆಗಳಿಗೆ ನೀರು ಕೊಡ್ತೇವೆ ಎಂದರು. ಇದನ್ನೂ ಓದಿ: ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

    ಜೆಡಿಎಸ್‌ನವರು ಗೃಹಲಕ್ಷ್ಮಿ ತಗೋತಿಲ್ವಾ?
    ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡುತ್ತಿದೆ. ಪಕ್ಷಾತೀತವಾಗಿ ಗ್ಯಾರೆಂಟಿಗಳನ್ನು ಕೊಡುತ್ತಿದ್ದೇವೆ. ಹಾಸನ ಜಿಲ್ಲೆಯಲ್ಲಿ ಜೆಡಿಎಸ್‌ನವರು (JDS) ಗೃಹಲಕ್ಷ್ಮಿ ತಗೋತಿಲ್ವಾ? ಶಕ್ತಿ ಯೋಜನೆಯಡಿಯಲ್ಲಿ ಬಸ್‌ನಲ್ಲಿ ಓಡಾಡುತ್ತಿಲ್ವಾ? ಎಲ್ಲಾ ಜಾತಿಯವರಿಗೂ ಶಕ್ತಿ ತುಂಬುತ್ತಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್‌ನವರು ಹೇಳುವ ಮಾತುಗಳು ಸತ್ಯಕ್ಕೆ ದೂರವಾದ ಮಾತುಗಳು. ಅವರು ಹೇಳುವ ಮಾತಿನಲ್ಲಿ ಸತ್ಯವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಆಗ್ರಹ – ಶಿವಲಿಂಗೇಗೌಡ ಬೆಂಬಲಿಗರ ವಿರುದ್ಧ ವೇದಿಕೆಯಲ್ಲೇ ಸಿಎಂ ಗರಂ

    ಹಾಸನ ಜಿಲ್ಲೆಯಲ್ಲಿ ತೆಂಗಿನಮರಗಳಿಗೆ ರೋಗ ಬಂದಿದೆ. ಎಷ್ಟೇ ಹಣ ಖರ್ಚಾದರೂ ಕೂಡ ರೋಗ ತಡೆಗಟ್ಟುವ ಕೆಲಸ ಮಾಡಲಾಗುತ್ತದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಗೆ ಒತ್ತುಕೊಟ್ಟು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

    ಶ್ರೇಯಸ್‌ಪಟೇಲ್ ಗೆಲ್ಲಿಸಿ ಇತಿಹಾಸ ನಿರ್ಮಾಣ ಮಾಡಿದ್ರಿ. ಶ್ರೇಯಸ್‌ಪಟೇಲ್ ಒಬ್ಬ ಪ್ರಾಮಾಣಿಕ ಯುವಕ. ಒಳ್ಳೆಯ, ಯೋಗ್ಯ ತೀರ್ಮಾನವನ್ನು ಮಾಡಿದ್ದೀರಾ. ಹಾಸನ ಜಿಲ್ಲೆಯಲ್ಲಿ ಏಳು ವಿಧಾನಸಭಾ ಸ್ಥಾನಗಳಿವೆ. ಮುಂದಿನ ಚುನಾವಣೆಯಲ್ಲಿ ಏಳಕ್ಕೆ ಏಳು ಸ್ಥಾನವನ್ನು ಗೆಲ್ಲಿಸಿಕೊಡುವ ಕೆಲಸ ಮಾಡಬೇಕು. ಶಿವಲಿಂಗೇಗೌಡ, ಶ್ರೇಯಸ್‌ಪಟೇಲ್ ನೇತೃತ್ವದಲ್ಲಿ ಚುನಾವಣೆ ನಡೆದರೆ ನೀವು ಅವರಿಗೆ ಆಶೀರ್ವಾದ ಮಾಡಬೇಕು ಎಂದರು.

  • 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

    6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

    ಹಾಸನ: ಮದುವೆಯಾದ ಆರು ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

    ಮೃತಳನ್ನು ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವಿದ್ಯಾ ಎನ್ನಲಾಗಿದ್ದು, ಸೋಮಲಾಪುರ ಗ್ರಾಮದ ಶಿವು ಎಂಬುವವರ ಜೊತೆ ವಿವಾಹವಾಗಿದ್ದರು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಇದನ್ನೂ ಓದಿ: 5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ

    ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಮಂಗಳವಾರ ಸಂಜೆ ಅರಸೀಕೆರೆ ರೈಲ್ವೆ (Arsikere Railway Station) ಟ್ರ‍್ಯಾಕ್ ಬಳಿ ವಿದ್ಯಾ ಶವವಾಗಿ ಪತ್ತೆಯಾಗಿದ್ದಾರೆ.

    ಮದುವೆಯಾದ ಆರಂಭದಿಂದಲೂ ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು. ಇದೀಗ ಮಗಳನ್ನು ಅವರೇ ಹತ್ಯೆ ಮಾಡಿದ್ದಾರೆ ಎಂದು ಮೃತ ವಿದ್ಯಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

    ಸದ್ಯ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ‘ಅಣ್ಣಾವ್ರು ಮನೆದೇವ್ರು… ಅಪ್ಪು ನಮ್ಮನೆ ಮಗ’ ಎಂದ ಯಶ್ ಅಮ್ಮ

  • ಕೇಂದ್ರ ಸಚಿವ ಸೋಮಣ್ಣ ಕಾಲಿಗೆ ಬಿದ್ದ ಹಾಸನ ಡಿಸಿ

    ಕೇಂದ್ರ ಸಚಿವ ಸೋಮಣ್ಣ ಕಾಲಿಗೆ ಬಿದ್ದ ಹಾಸನ ಡಿಸಿ

    ಹಾಸನ: ಅರಸೀಕೆರೆ (Arasikere) ತಾಲೂಕಿನ ಕೋಡಿಮಠಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಭೇಟಿ ನೀಡಿದ ವೇಳೆ ಹಾಸನದ ನೂತನ ಡಿಸಿ (Hassan DC) ಸೋಮಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

    ಸ್ವಾಮೀಜಿ ಭೇಟಿಗೆ ಸಚಿವರು ಆಗಮಿಸುತ್ತಲೇ ನೂತನ ಡಿಸಿ ಕೆಎಸ್ ಲತಾಕುಮಾರಿ (KS Lathakumari) ಸೋಮಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಬಳಿಕ ಸರ್ ನಿಮ್ಮನ್ನು ನೋಡಿ ಬಹಳ ಖುಷಿಯಾಯಿತು. ನೀವು ನಮಗೆ ಬಹಳ ಬೇಕಾದವರು ಎಂದು ಹೇಳಿದರು. ಇದನ್ನೂ ಓದಿ: ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

    ಈ ವೇಳೆ ಮಾತನಾಡಿದ ಸೋಮಣ್ಣ, ನೀವು ಒಳ್ಳೆಯ ಕೆಲಸಗಾರರು. ಒಳ್ಳೆಯ ಕೆಲಸ ಮಾಡುತ್ತೀರಿ. ಯಾರ ಬಾಯಿಗೂ ಬೀಳೋದು ಬೇಡ. ಬೇಲೂರು-ಹಾಸನ 503 ಎಕರೆ ಭೂ ಸ್ವಾದೀನ ಮಾಡಬೇಕು. ಇದು ನಿಮ್ಮ ಅವಧಿಯಲ್ಲೇ ಆಗಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ನಿಮ್ಮ ಆದೇಶ ಖಂಡಿತಾ ಆಗುತ್ತೆ ಸರ್ ಎಂದರು. ಇದನ್ನೂ ಓದಿ: 14.89 ಲಕ್ಷಕ್ಕೆ ಹೋಂಡಾ ಸಿಟಿ ಸ್ಪೋರ್ಟ್ ಎಡಿಷನ್ ಬಿಡುಗಡೆ – ಕಾರ್‌ನಲ್ಲಿ ಏನು ಬದಲಾವಣೆಯಾಗಿದೆ?

  • Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arasikere) ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ದರ್ಶನ್ (22) ಆತ್ಮಹತ್ಯೆಗೆ ಶರಣಾದ ಯುವಕ. ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೇವಿನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸಿ ಜೊತೆಯಲ್ಲಿ ಓಡಾಡಿದ್ದರು. ಬಿಎ ಮುಗಿಸಿ ವ್ಯವಸಾಯ ಮಾಡುತ್ತಿದ್ದ ದರ್ಶನ್ ಯುವತಿಗೆ ಮದುವೆಯಾಗೋಣ ಎಂದಿದ್ದ. ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದನ್ನೂ ಓದಿ: ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಇದರಿಂದ ಮನನೊಂದ ದರ್ಶನ್ ಫೆ.5ರಂದು ಮನೆಯಲ್ಲಿಯೇ ವಿಷ ಸೇವಿಸಿದ್ದಾನೆ. ವಿಷ ಸೇವನೆ ಬಳಿಕ ದರ್ಶನ್ ವಾಂತಿ ಮಾಡುತ್ತಿದ್ದನ್ನು ಕಂಡು ಸ್ನೇಹಿತರಾದ ರವಿ ಮತ್ತು ಯಶ್ವಂತ್ ಪ್ರಶ್ನಿಸಿದಾಗ, ಯುವತಿ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ನನ್ನ ಮನಸ್ಸಿಗೆ ಬೇಜಾರಾಗಿದೆ. ಹಾಗಾಗಿ ವಿಷ ಸೇವನೆ ಮಾಡಿರುವುದಾಗಿ ಹೇಳಿ ದರ್ಶನ್ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಚಾಮರಾಜನಗರ| ಚಾಲಕನಿಗೆ ಮೂರ್ಛೆ; ಮರಕ್ಕೆ ಡಿಕ್ಕಿಯಾದ ಬಸ್

    ತಕ್ಷಣವೇ ಸ್ನೇಹಿತರು ಅರಸೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ದರ್ಶನ್ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

    ಇನ್ನು ಘಟನೆ ಸಂಬಂಧ ಯುವತಿ ವಿರುದ್ಧ ದರ್ಶನ್ ಬಾವ ಶಂಕರ್ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆ | ಸರ್ಕಾರದಿಂದ ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನ: ರವಿಕುಮಾರ್ ವ್ಯಂಗ್ಯ

  • ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ – 3 ದಿನ ಪೆಟ್ರೋಲ್ ಹಾಕಿ ಶವ ಸುಟ್ಟಿದ್ದ ಪಾಪಿಗಳು

    ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ – 3 ದಿನ ಪೆಟ್ರೋಲ್ ಹಾಕಿ ಶವ ಸುಟ್ಟಿದ್ದ ಪಾಪಿಗಳು

    ಹಾಸನ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಕೊಲೆಗೈದ ಘಟನೆ ಅರಸೀಕೆರೆಯ (Arasikere) ಹೊರ ವಲಯದ ತಿರುಪತಿ ಕ್ರಾಸ್ ಬಳಿ ನಡೆದಿದೆ.

    ಕೊಲೆಯಾದ (Murder) ವ್ಯಕ್ತಿಯನ್ನು ಮುಜಾಮಿಲ್ ಎಂದು ಗುರುತಿಸಲಾಗಿದೆ. ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಯಾಸೀನ್ ಕೊಲೆಗೈದ ಆರೋಪಿಗಳಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಮುಜಾಮಿಲ್ ಅಡ್ಡಿಯಾಗಿದ್ದಕ್ಕೆ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

    ಕೊಲೆಯಾದ ಮುಜಾಮಿಲ್‍ನ ಪತ್ನಿ ಜೊತೆ ಯಾಸೀನ್ ಅಕ್ರಮ ಸಂಬಂಧ ಹೊಂದಿದ್ದ. ಇದೇ ವಿಚಾರಕ್ಕೆ ಪತ್ನಿ ಜೊತೆ ಮುಜಾಮಿಲ್ ಜಗಳವಾಡುತ್ತಿದ್ದ. ಇದರಿಂದ ಆತನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿ ಹಾಗೂ ಯಾಸೀನ್ ಡಿ.15ರಂದು ಮದ್ಯ ಸೇವಿಸಿದ್ದ ಮುಜಾಮಿಲ್‍ನನ್ನು ನಗರದ ಹೊರ ವಲಯಕ್ಕೆ ಕರೆದೊಯ್ದು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದರು. ಬಳಿಕ ಶವವನ್ನು ಚರಂಡಿಗೆ ಹಾಕಿ ಮೂರು ದಿನಗಳ ಕಾಲ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಅಲ್ಲದೇ ಹೊಗೆ ಬರದಂತೆ ಗುಜರಿ ಅಂಗಡಿಯಿಂದ ಕಬ್ಬಿಣದ ವಸ್ತುಗಳನ್ನು ತಂದು ಚರಂಡಿ ಮುಚ್ಚಿದ್ದರು.

    ಎರಡು ದಿನಗಳ ನಂತರ ಆರೋಪಿ ಮಹಿಳೆ ಹಾಗೂ ಆಕೆಯ ಪುತ್ರ ಜಾಹೀದ್ ಖಾನ್ ಪೊಲೀಸ್ ಠಾಣೆಗೆ ತೆರಳಿ ಮುಜಾಮಿಲ್ ಕಾಣೆಯಾಗಿದ್ದ ಬಗ್ಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಸುಟ್ಟ ಸ್ಥಿತಿಯಲ್ಲಿದ್ದ ಮುಜಾಮಿಲ್ ಶವವನ್ನು ಪತ್ತೆ ಹಚ್ಚಿದ್ದರು. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

    ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಯುವತಿ ಬಲಿ

    ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಯುವತಿ ಬಲಿ

    ಹಾಸನ: ಶಂಕಿತ ಡೆಂಗ್ಯೂಗೆ (Suspected Dengue) ಯುವತಿ (Young Woman) ಬಲಿಯಾದ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

    ಸುಪ್ರೀತಾ (26) ಶಂಕಿತ ಡೆಂಗ್ಯೂನಿಂದ ಸಾವನ್ನಪ್ಪಿದ ಯುವತಿ. ಈಕೆ ಹಾಸನ ಜಿಲ್ಲೆ ಅರಸಿಕೆರೆ (Arasikere) ತಾಲೂಕಿನ ಮುದುಡಿ ತಾಂಡ್ಯ ಗ್ರಾಮದವಳಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸುಪ್ರೀತಾ ಜೂಲುನಾಯ್ಕ-ಸುಮಿತ್ರಾದೇವಿ ಎಂಬವರ ಪುತ್ರಿಯಾಗಿದ್ದಾಳೆ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಸುಪ್ರೀತಾ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಳು. ಇದನ್ನೂ ಓದಿ: ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

    ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರೀತಾಗೆ ಬಹು ಅಂಗಾಂಗ ವೈಫಲ್ಯ ಕಾಣಿಸಿಕೊಂಡಿದೆ. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಆಕೆಯ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಪ್ರೀತಾ ಸಾವನ್ನಪ್ಪಿದ್ದಾಳೆ. ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಸಾವಿನ ಸಂಖ್ಯೆ ಏಳಕ್ಕೆ ಏರಿದೆ. ಈ ಪೈಕಿ ಮೂರು ಮಕ್ಕಳು ಡೆಂಗ್ಯೂವಿನಿಂದ ಸಾವನ್ನಪ್ಪಿರುವುದು ದೃಢವಾಗಿದೆ. ಇದನ್ನೂ ಓದಿ: ಗದಗದಲ್ಲಿ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

  • ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

    – ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಅಂತಾ ಶಿಕ್ಷಕರಿಗೆ ತರಾಟೆ

    ಹಾಸನ: ಅರಸೀಕೆರೆಯ (Arasikere) ಶಾಲೆಯೊಂದರಲ್ಲಿ (School) ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಗರಂ ಆಗಿದ್ದಾರೆ.

    ಗಣರಾಜ್ಯೋತ್ಸವ (Republic Day) ಅಂಗವಾಗಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಶಾಲಾ ಮಕ್ಕಳು ನೃತ್ಯ ಪ್ರದರ್ಶನವೊಂದರಲ್ಲಿ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಪ್ರದರ್ಶಿಸಿದ್ದರು. ಇದರಿಂದ ಶಾಸಕ ಶಿವಲಿಂಗೇಗೌಡ, ತಹಸೀಲ್ದಾರ್ ಸಂತೋಷ್ ಹಾಗೂ ಸಾರ್ವಜನಿಕರು ಕೆಂಡಾಮಂಡಲವಾಗಿದ್ದು, ಶಾಲಾ ಶಿಕ್ಷಕಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    ಶಾಲಾ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ, ಕಮಲ ಯಾವ ಪಕ್ಷದ ಚಿಹ್ನೆ? ಯಾವ ಸೀಮೆ ನಾಗರಿಕರು ನೀವು? ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಎಂದು ಕೋಪಗೊಂಡಿದ್ದಾರೆ. ಈ ವೇಳೆ ಶಾಲಾ ಶಿಕ್ಷಕಿ, ಕಮಲ ಒಂದು ಪಕ್ಷದ ಚಿಹ್ನೆ ಹೇಗೆ ಆಗುತ್ತೆ ಸರ್? ನೀವು ಹೀಗೆ ಮಾತನಾಡಿದರೆ ಸರಿ ಹೋಗಲ್ಲ ಸರ್ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 2024ರಲ್ಲಿ ಅಣು ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ: ಕೋಡಿಮಠ ಸ್ವಾಮೀಜಿ ಭವಿಷ್ಯ

    ಇದರಿಂದ ಸಿಟ್ಟುಗೊಂಡ ಶಾಸಕರು, ಏನು ಸರಿ ಹೋಗಲ್ಲ? ನಿಮಗೆ ನೋಟಿಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ತಹಸೀಲ್ದಾರ್ ಸಂತೋಷ್ ಮಧ್ಯಪ್ರವೇಶಿಸಿ ಒಂದು ಧರ್ಮ, ಒಂದು ಪಕ್ಷದ ಚಿಹ್ನೆ ಹೈಲೆಟ್ ಮಾಡಬಾರದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಕಿ ಲಕ್ಷ್ಮಿ, ನಿನ್ನೆ-ಮೊನ್ನೆ ನೃತ್ಯ ನೋಡಿದವರು ನೋಡಿದರೆ ಅದನ್ನು ಬಳಸುತ್ತಿರಲಿಲ್ಲ. ಸಭೆಯಲ್ಲಿ ಸೂಚನೆ ನೀಡಿದ್ದರೆ ಚಿಹ್ನೆ ಬಳಸುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

    ಇದಕ್ಕೆ ಪ್ರತ್ಯುತ್ತರ ಕೊಟ್ಟ ಶಾಸಕ ಶಿವಲಿಂಗೇಗೌಡ, ಇವರು ಎಂತದ್ದಾನ್ನಾದರೂ ತೋರಿಸಿಕೊಳ್ಳಲಿ ನನಗೇನು? ಅಲ್ಲಿ ಯಾವನೋ ಕುಳಿತಿರುತ್ತಾನೆ. ಬಿಜೆಪಿ ಚಿಹ್ನೆ ತೋರಿಸುತ್ತಿದ್ದಾರೆ ಎಂದು ಕಲ್ಲು ತೂರಿದರೆ ಮುಂದೆ ಆಗುವುದನ್ನು ನೋಡಬೇಕು. ಇದು ರಾಷ್ಟ್ರೀಯ ಹಬ್ಬ ಎಂದು ಸಿಡಿಮಿಡಿಗೊಂಡಿದ್ದಾರೆ. ಅತ್ಯುತ್ತಮ ನೃತ್ಯಕ್ಕಾಗಿ ಶಾಲಾ ಮಕ್ಕಳು ಮೊದಲ ಬಹುಮಾನ ಪಡೆದಿದ್ದರು. ಶಾಸಕರ ಆಕ್ಷೇಪದ ನಂತರ ತಾಲೂಕು ಆಡಳಿತ ನಾಲ್ಕನೇ ಬಹುಮಾನ ನೀಡಿದೆ. ಇದನ್ನೂ ಓದಿ: ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ

  • ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ

    ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ

    ಹಾಸನ: ಕೂಲಿ ಕೆಲಸಕ್ಕೆಂದು (Wage Work) ಕರೆದುಕೊಂಡು ಬಂದು ಕೂಡಿ ಹಾಕಿದ್ದ 18 ಮಂದಿ ಕಾರ್ಮಿಕರನ್ನು (Workers) ರಕ್ಷಿಸಿ ಆರೋಪಿಯನ್ನು ಬಂಧಿಸಿದ ಘಟನೆ ಹಾಸನದ (Hassan) ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಹಾಸನ ಜಿಲ್ಲೆ ಅರಸೀಕೆರೆ (Arasikere) ತಾಲೂಕಿನ ಬಾಣಾವರ ಹೋಬಳಿಯ ಚೆಲುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುನೇಶ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ನಿರ್ಗತಿಕರಿಗೆ ಕೆಲಸ ಕೊಡಿಸುತ್ತೇನೆ ಎಂದು ಕರೆದುಕೊಂಡು ಬಂದು ಎಲ್ಲರನ್ನೂ ಒಂದೆಡೆ ಕೂಡಿ ಹಾಕಿದ್ದ. ಅಲ್ಲದೇ ಕಾರ್ಮಿಕರಿಗೆ ಸರಿಯಾಗಿ ವೇತನ ಮತ್ತು ಆಹಾರ ನೀಡದೆ ದುಡಿಸಿಕೊಳ್ಳುತ್ತಿದ್ದ. ಒಂದೇ ವಾಹನದಲ್ಲಿ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಮತ್ತೆ ತನ್ನ ತೋಟದ ಮನೆಯಲ್ಲಿ ಕೂಡಿ ಹಾಕುತ್ತಿದ್ದ ಕಿರಾತಕನನ್ನು ಬಂಧಿಸುವಲ್ಲಿ (Arrest) ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: ರಾಯಚೂರು ಜಿಪಂ ಸಿಇಓಗೆ ನೋಟಿಸ್

    ರೈಲ್ವೆ, ಬಸ್ ನಿಲ್ದಾಣದಲ್ಲಿದ್ದ ನಿರ್ಗತಿಕರನ್ನು ಕರೆದುಕೊಂಡು ಬಂದು ಬಂಧಿಸಿಟ್ಟಿದ್ದು ಮಾತ್ರವಲ್ಲದೇ ಯಾರನ್ನೂ ಹೊರಗೆ ಬಿಡದೆ ದುಡಿಸಿಕೊಂಡು ಚಿತ್ರಹಿಂಸೆ ನೀಡುತ್ತಿದ್ದ. ಕಾರ್ಮಿಕರು ಸ್ನಾನ, ಬಟ್ಟೆ, ಆಹಾರವಿಲ್ಲದೇ ಪರದಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 18 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಆರೋಪಿ ಮುನೇಶ್ ಈ ಹಿಂದೆಯೂ ಇಂತಹದೇ ಕೃತ್ಯಗಳಲ್ಲಿ ಭಾಗಿಯಾಗಿದ್ದು, ನಾಲ್ಕನೇ ಬಾರಿಗೆ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!