Tag: aravind limbavali

  • ಗುಜರಾತ್ ರೀತಿ ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಎದೆಗಾರಿಕೆ ತೋರಿಸಲಿ: ಅರವಿಂದ ಲಿಂಬಾವಳಿ

    ಗುಜರಾತ್ ರೀತಿ ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಎದೆಗಾರಿಕೆ ತೋರಿಸಲಿ: ಅರವಿಂದ ಲಿಂಬಾವಳಿ

    ಬೆಂಗಳೂರು: ವಕ್ಫ್ ವಿರೋಧಿ ಹೋರಾಟ ಬಳಿಕ ಅಕ್ರಮ ಬಾಂಗ್ಲಾ ನಿವಾಸಿಗಳ (Illegal Bangladeshi Residents) ವಿರುದ್ಧ ಹೋರಾಟಕ್ಕೆ ಬಿಜೆಪಿ (BJP) ಭಿನ್ನಮತೀಯ ನಾಯಕರು ಮುಂದಾಗಿದ್ದಾರೆ.

    ಮಹಾದೇವಪುರ (Mahadevapura) ವಿಧಾನಸಭೆ ಕ್ಷೇತ್ರದಲ್ಲಿಂದು ಬಿಜೆಪಿ ರೆಬೆಲ್‌ಗಳ ಟೀಮ್ ಅಕ್ರಮ ವಲಸಿಗರ ವಿರುದ್ಧ ಬೃಹತ್ ಜನಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಿ ಎಂ ಸಿದ್ದೇಶ್ವರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕಿ ಮಂಜುಳಾ ಲಿಂಬಾವಳಿ, ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಸಂಸದರಾದ ಬಿ ವಿ ನಾಯಕ್, ಪ್ರತಾಪ್ ಸಿಂಹ, ಶಾಸಕ ಬಿ ಪಿ ಹರೀಶ್ ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಸಂಬಂಧ ರಾಜ್ಯ ಸರ್ಕಾರ (Karnataka Government) ನಿರ್ಲಕ್ಷ್ಯ ವಹಿಸಿದೆ. ಅಪರಾಧ, ಭಯೋತ್ಪಾದನಾ ಚಟುವಟಿಕೆಗಳಲ್ಲಿ ಅಕ್ರಮ ವಲಸಿಗರು ಭಾಗವಹಿಸಿ ದೇಶದ ಭದ್ರತೆಗೆ ಸವಾಲಾಗಿದ್ದಾರೆ. ಗುಜರಾತ್ ಮಾದರಿಯಲ್ಲಿ ರಾಜ್ಯ ಸರ್ಕಾರವು ಅಕ್ರಮ ವಲಸಿಗರ ಗಡೀಪಾರಿಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಅಕ್ರಮ ಮುಸ್ಲಿಂ ವಲಸಿಗರು ಭಯೋತ್ಪಾದನೆ, ಜನೋತ್ಪಾದನೆಯಲ್ಲಿ ತೊಡಗಿದ್ದಾರೆ: ಪ್ರತಾಪ್ಸಿಂಹ

    ಇನ್ನು ಇದೇವೇಳೆ ಮಹಾದೇವಪುರ ಕ್ಷೇತ್ರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ನಿವಾಸಿಗಳ ಕುರಿತು ಕುರು ಸಾಕ್ಷ್ಯಚಿತ್ರ ಪ್ರದರ್ಶನ ಪ್ರಸಾರ ಮಾಡಿದ್ದಲ್ಲದೇ ಕಿರು ಪುಸ್ತಕ ಬಿಡುಗಡೆಗೊಳಿಸಲಾಯ್ತು. ಅಲ್ರಮ ವಲಸಿಗರ ವಿರುದ್ಧದ ಈ ಜನಜಾಗೃತಿ ಅಭಿಯಾಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದಾಗಿ ಬಿಜೆಪಿ ಭಿನ್ನ ನಾಯಕರು ನಿರ್ಧಾರ ಪ್ರಕಟಿಸಿದರು.

    ಇದೇವೇಳೆ ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ (Aravind Limbavali), ಅಕ್ರಮ ವಲಸಿಗರ ವಿಚಾರದಲ್ಲಿ ಗುಜರಾತ್ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಎದೆಗಾರಿಕೆ ತೋರಬೇಕು ಎಂದು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಗ್ರಹಿಸಿದರು.

    ಅಕ್ರಮ ವಲಸಿಗರ ವಿಚಾರದಲ್ಲಿ ಸಿದ್ದರಾಮಯ್ಯ ರಾಜಕಾರಣ ಮಾಡಬಾರದು. ವಲಸಿಗರ ವಿಚಾರದಲ್ಲಿ ರಾಜ್ಯ ಸರ್ಕಾರ ಸಾಫ್ಟ್ ಆಗಿದೆ. ಗುಜರಾತ್‌ನಲ್ಲಿ ಇತ್ತೀಚೆಗೆ ಎರಡು ಸಾವಿರಕ್ಕೂ ಹೆಚ್ಚು ಅಕ್ರಮ ವಲಸಿಗರ ಗಡೀಪಾರು ಮಾಡಲಾಯ್ತು.‌ ರಾಜ್ಯ ಸರ್ಕಾರವೂ ಆ ಕೆಲಸ ಮಾಡಲಿ. ಅಕ್ರಮ ವಲಸಿಗರಿಗೆ ಯಾವುದೋ ಒತ್ತಡದ ಕಾರಣಕ್ಕೆ ಅವಕಾಶ ಕೊಟ್ರೆ ಕರ್ನಾಟಕ ಪಶ್ಚಿಮ ಬಂಗಾಳ ಆಗುತ್ತೆ. ಯಾರ್ಯಾರು ಅಕ್ರಮವಾಗಿ ಬಂದಿದ್ದಾರೋ ಅವರನ್ನು ವಾಪಸ್ ಕಳಿಸಿ ಎಂದು ಒತ್ತಾಯಿಸಿದರು.

     

    ಅಕ್ರಮ ವಲಸಿಗರಿಗೆ ಫೇಕ್ ಆಧಾರ್ ಕಾರ್ಡ್ ಮಾಡಿಕೊಡುವ ಜಾಲ ಬೆಂಗಳೂರಿನಲ್ಲಿ ಇದೆ. ಅದಕ್ಕಾಗಿ ಏಜೆನ್ಸಿಗಳೂ ಇವೆ. ಪೊಲೀಸರು ವಲಸಿಗರ ಮೊಬೈಲ್ ಪರಿಶೀಲಿಸಿದ್ರೆ ಅವರ ಜಾತಕವೇ ಗೊತ್ತಾಗುತ್ತೆ. ಈ ಕೆಲಸ ಸರ್ಕಾರ, ಪೊಲೀಸ್ ಬದ್ಧತೆಯಿಂದ ಮಾಡಬೇಕು. ಅಕ್ರಮ ವಲಸಿಗರನ್ನು ಕೆಲಸಕ್ಕೆ ಯಾರೂ ಸೇರಿಸಿಕೊಳ್ಳದಂತೆ ಕರೆ ನೀಡಿದರು. ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ಬಸ್ಸಿನಲ್ಲಿ ಪ್ರಾಣಿಗಳ ಜೊತೆ ಟಯರ್‌, ಫ್ರಿಡ್ಜ್‌, ವಾಷಿಂಗ್ಮೆಷಿನ್ಸಾಗಿಸಬಹುದು! –ಯಾವುದಕ್ಕೆ ಎಷ್ಟು ದರ?

    ಇನ್ನು ಇದೇವೇಳೆ ಪೊಲೀಸ್ ಒಬ್ಬರು ಮೊಬೈಲ್‌ನಲ್ಲಿ ತಮ್ಮ ಭಾಷಣ ರೆಕಾರ್ಡ್ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿ ಗರಂ ಆದ ಲಿಂಬಾವಳಿ,ಇಲ್ಲಿ ಬಂದು ರೆಕಾರ್ಡ್ ಮಾಡೋದೇಕೆ? ನಾವು ದೇಶಭಕ್ತರು. ಅಕ್ರಮ ವಲಸಿಗರನ್ನು ಹೋಗಿ ರೆಕಾರ್ಡ್ ಮಾಡಲು ತಾಕತ್ ಇದೆಯಾ ಕಿಡಿಕಾರಿದರು.

    ಇದು ಬಿಜೆಪಿ ಅಸಮಧಾನಿತರ ಹೋರಾಟ ಅಂತ ಮಾಧ್ಯಮಗಳು ಬರೆಯುತ್ತವೆ. ನಾವು ಅಸಮಾಧಾನಿತ ಹೋರಾಟವಲ್ಲ. ನಮ್ಮದು ದೇಶ ಉಳಿಸುವ ಹೋರಾಟ ಎಂದು ಲಿಂಬಾವಳಿ ಸ್ಪಷ್ಟಪಡಿಸಿದರು.

  • ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

    ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

    ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ (Davanagere) ಕೇಂದ್ರದ ಮಾಜಿ ಸಚಿವ ಜಿಎಂ ಸಿದ್ದೇಶ್ವರ್ (GM Siddeshwar) ಜನ್ಮದಿನ ಸಂಭ್ರಮ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿತ್ತು. ಬಿಎಸ್‌ವೈ, ರೇಣುಕಾಚಾರ್ಯ ವಿರುದ್ಧ ರೆಬೆಲ್ ನಾಯಕರು ಮುಗಿಬಿದ್ದು ಕೆಂಡ ಕಾರಿದರು.

    ಇಂದು ಬೆಣ್ಣೆನಗರಿ ಬಿಜೆಪಿಯಲ್ಲಿ ಅಕ್ಷರಶಃ ಇನ್‌ಸೈಡ್ ಸ್ಟೋರಿಗಳು ಓಪನ್ ಆದವು. ಸುಮಾರು ದಿನಗಳಿಂದ ಹೊಟ್ಟೆಯಲ್ಲಿ ಬಚ್ಚಿಟ್ಟ ಸಂಗತಿಗಳು ಹೊರಬಂದವು, ಕಾರ್ಯಕರ್ತರಿಗೆ ಕನಸಲ್ಲೂ ಕಂಡಿರದ ವಿಷಯಗಳ ಅನಾವರಣ ಆಗಿತ್ತು. ನಾಯಕರ ಮಧ್ಯ ಈ ರೀತಿ ಆಗಿದೆಯಾ ಎಂದು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವ ಸಂದರ್ಭ ನಿರ್ಮಾಣ ಆಗಿತ್ತು. ಮಾಜಿ ಸಚಿವ ಜಿಎಂ ಸಿದ್ದೇಶ್ವರ್ ಅವರ 74ನೇ ಜನ್ಮದಿನವನ್ನ ಅಭಿಮಾನಿ ಬಳಗದಿಂದ ನಗರದ ರೇಣುಕಾ ಮಂದಿರದಲ್ಲಿ ಏರ್ಪಡಿಸಲಾಗಿತ್ತು. ಮೊದಲಿಗೆ ಇದು ಜನ್ಮದಿನ ಮಾತ್ರ ಎಂದು ನಾಯಕರು ಸಾರಿದ್ದರು. ಆದರೆ ಬರುಬರುತ್ತಾ ಆಗಿದ್ದೆ ಬೇರೆ. ಬಿಜೆಪಿ ರೆಬೆಲ್ಸ್ ನಾಯಕರ ಶಕ್ತಿ ಪ್ರದರ್ಶನಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು. ಅರವಿಂದ್ ಲಿಂಬಾವಳಿ, ಗೋವಿಂದ ಕಾರಜೋಳ, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ, ಬಿಪಿ ಹರೀಶ್ ಸೇರಿದಂತೆ ಹಲವು ನಾಯಕರ ಸಮಾಗಮವಾಯಿತು. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    ಈ ವೇಳೆ ಮಾತನಾಡಿದ ಅರವಿಂದ ಲಿಂಬಾವಳಿ (Aravind Limbavali), ಯಡಿಯೂರಪ್ಪ (BS Yediyurappa) ಪಕ್ಷ ಬಿಟ್ಟು ಹೋದವರು. ಕಾಂಗ್ರೆಸ್, ಜೆಡಿಎಸ್ ಕದ ತಟ್ಟಿ ಬಂದವರು. ಮತ್ಯಾಕೆ ವಾಪಾಸ್ ಬಂದರೋ ಗೊತ್ತಿಲ್ಲ. ಯಡಿಯೂರಪ್ಪ ಸಿಎಂ ಆಗೋಕೆ ಸಿದ್ದೇಶ್ವರ್ ಕಾರಣ. ಆದರೆ ಸಿದ್ದೇಶ್ವರ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ನೇರವಾಗಿ ಟಾಂಗ್ ಕೊಟ್ಟು ಕಿಡಿಕಾರಿದರು. ಇದನ್ನೂ ಓದಿ: 50 ಮೌಲಾನ ಆಜಾದ್ ಮಾದರಿ ಶಾಲೆ ತೆರೆಯಲು ಸರ್ಕಾರ ಆದೇಶ – ವಿಪಕ್ಷಗಳ ಕಿಡಿ

    ಕಾರ್ಯಕ್ರಮದ ಉದ್ದಕ್ಕೂ ದಾವಣಗೆರೆ ಎಂಪಿ ಸೋಲಿನ ಚರ್ಚೆ, ಬಿಎಸ್‌ವೈ ವಿಚಾರವೇ ಪ್ರಮುಖವಾಗಿತ್ತು. ರೇಣುಕಾಚಾರ್ಯ ಅಂಡ್ ಟೀಂ ಸೋಲಿಗೆ ಪ್ರಮುಖ ಕಾರಣ ಹಾಗೂ ಬಿಎಸ್ ವೈ, ವಿಜಯೇಂದ್ರ ಕಾರಣ ಎಂದು ನಾಯಕರು ಪರೋಕ್ಷವಾಗಿ ಆರೋಪಿಸಿದರು. ನಮ್ಮವರ ಅಡ್ಜಸ್ಟ್ಮೆಂಟ್ ಕಾರಣದಿಂದ ಕಾಂಗ್ರೆಸ್ ಗೆದ್ದಿದೆ. ಮೊಣಕಾಲುದ್ದ ನೀರಲ್ಲಿ ದೋಣಿ ಚಲಾಯಿಸಿ, ಕೊರೊನಾ ಟೈಂನಲ್ಲಿ ಡಿಂಗ್ ಡಾಂಗ್ ಮಾಡಿದ್ರು ಎಂದು ರೇಣುಕಾಚಾರ್ಯಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು. ಇದನ್ನೂ ಓದಿ: 111.8 ಕೋಟಿ ಅನುದಾನದ ಬಳಿಕವೂ ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ಸರ್ಕಾರ

    2006ರಲ್ಲಿ ಮೊದಲ ಭಾರೀ ಬಿಜೆಪಿ ಸರ್ಕಾರ ಬರಲು ನಾನೇ ಕಾರಣ. ಕುಮಾರಸ್ವಾಮಿ ಸಿಎಂ, ಬಿಎಸ್‌ವೈ ಸಿಎಂ ಆಗೋ ವಿಚಾರ ಮಾತುಕತೆ ಮಾಡಿದ್ದೇ ನಾನು. ನಂತರ 110 ಸೀಟು ಬಂದಾಗ ಉಳಿದ ಶಾಸಕರನ್ನ ಕರೆದುಕೊಂಡು ಬಂದು ಬಿಎಸ್‌ವೈ ಸಿಎಂ ಮಾಡಿದ್ದೇ ನಾವು. ಅವರಿಂದ ನಾನೇನು ಗಳಿಸಿಲ್ಲ, ಪಡೆದಿಲ್ಲ. ನನ್ನನ್ನು ಮಂತ್ರಿ ಮಾಡಿದ್ದಾರೆ ಎಂದಿದ್ದಾರೆ. ನನ್ನನ್ನು ಮಂತ್ರಿ ಮಾಡಿದ್ದು ಮೋದಿಜಿ, ಅನಂತಕುಮಾರ್. ಇವರಿಂದ ನಾನೇನು ಪಡೆದಿಲ್ಲ, ನನ್ನಿಂದ ಇವರಿಗೆ ಅನುಕೂಲ ಆಗಿದೆ. ಆದರೆ ನನ್ನ ಪತ್ನಿಯನ್ನು ಚುನಾವಣೆಯಿಂದ ಸೋಲಿಸಿದರು ಎಂದು ಸಿದ್ದೇಶ್ವರ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

    ಒಟ್ಟಾರೆ ಬೆಣ್ಣೆನಗರಿಯಲ್ಲಿಂದು ರೆಬೆಲ್ಸ್ ಸೈಲೆಂಟಾಗಿ ಠಕ್ಕರ್ ಮೇಲೆ ಠಕ್ಕರ್ ಕೊಟ್ಟರು. ರಾಜ್ಯಾಧ್ಯಕ್ಷ ವಿಜಯೇಂದ್ರ ಹೆಸರು ಪ್ರಸ್ತಾಪಿಸಿದರೆ ತೊಡಕಾಗಬಹುದೆಂದ ಅರಿತ ನಾಯಕರು ಚಾಣಾಕ್ಷತನದಿಂದ ಮಾತುಗಳನ್ನಾಡಿದರು. ವಿಜಯೇಂದ್ರನ ಬಿಟ್ಟು ಯಡಿಯೂರಪ್ಪ ವಿರುದ್ಧ ಸೈಲೆಂಟಾಗಿ ಸಮರ ಸಾರಿದಂತೆ ಕಾಣುತ್ತಿದೆ. ಇನ್ನೊಂದು ಕಡೆ ಬಿಎಸ್‌ವೈ, ರೇಣುಕಾಚಾರ್ಯ ವಿರುದ್ಧ ಮಾತನಾಡಬೇಕಾದದ್ದನ್ನೆಲ್ಲ ಮಾತಾಡಿಬಿಟ್ಟರು. 30 ವರ್ಷದಿಂದ ಭದ್ರಕೋಟೆಯಾಗಿದ್ದ ದಾವಣಗೆರೆಯನ್ನು ಲಗಾನ್ ಟೀಂನಿಂದ ಕಳೆದುಕೊಂಡಿದ್ದರ ಕುರಿತಾಗಿ ಎಲ್ಲರು ರೋಷಾವೇಶ ಹೊರ ಹಾಕಿದರು. ಇದನ್ನೂ ಓದಿ: 15 ಏಷ್ಯನ್ ರಾಷ್ಟ್ರಗಳ ಎದುರು ವಿಜಯಪುರದ ಇತಿಹಾಸ ಅನಾವರಣಗೊಳಿಸಿದ ಡಿಸಿ

  • ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು

    ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು

    ನವದೆಹಲಿ\ಬೆಂಗಳೂರು: ರಾಜ್ಯ ಬಿಜೆಪಿ ಗೊಂದಲ ಶಮನಕ್ಕೆ ಕೊನೆಗೂ ಹೈಕಮಾಂಡ್ ಮುಂದಾಗಿದೆ. ಬಿಜೆಪಿಯಲ್ಲಿ ನಡೆಯುತ್ತಿದ್ದ ಲಿಂಗಾಯತ ವರ್ಸಸ್ ಲಿಂಗಾಯತ ಸಮರಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ಬೆನ್ನಲ್ಲೇ ಎರಡೂ ಬಣಗಳ ಸಭೆಗಳಿಗೂ ವಿರಾಮ ಸಿಕ್ಕಿದೆ. ಇನ್ನೊಂದು ಕಡೆ ಮೊನ್ನೆಯಷ್ಟೇ ದೆಹಲಿಗೆ ಹೋಗಿದ್ದ ಅರವಿಂದ ಲಿಂಬಾವಳಿ (Aravind Limbavali) ನೇರವಾಗಿ ಅಮಿತ್ ಶಾ (Amith Shah) ಅವರನ್ನ ಭೇಟಿ ಮಾಡಿ ವಿಜಯೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದರು.

    ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ಇದೀಗ ಬಿಜೆಪಿ ಮನೆ ರಿಪೇರಿಗೆ ಕೈ ಹಾಕಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಲಿಂಗಾಯತ ವರ್ಸಸ್ ಲಿಂಗಾಯತ ಸಮರಕ್ಕೆ ಅಮಿತ್ ಶಾ ಬ್ರೇಕ್ ಹಾಕಿದ್ದಾರೆ. ದೆಹಲಿಯಿಂದಲೇ ಖಡಕ್ ಸಂದೇಶ ರವಾನಿಸಿರುವ ಅಮಿತ್ ಷಾ, ಪ್ರತ್ಯೇಕ ಸಭೆಗಳನ್ನು ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 83,00,00,00,00,000 ಕ್ರಿಪ್ಟೋ ವಂಚನೆ – ಕೇರಳದಲ್ಲಿ ಸಿಬಿಐನಿಂದ ಲಿಥುವೇನಿಯಾದ ಪ್ರಜೆ ಅರೆಸ್ಟ್‌

    ಅಮಿತ್ ಶಾ ಎಚ್ಚರಿಕೆ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೊಲ್‌ಗೆ ಮುಂದಾಗಿದ್ದಾರೆ. ಲಿಂಗಾಯತ ಅಸ್ತ್ರ ಮುಂದಿಟ್ಟುಕೊಂಡು ಯಾವುದೇ ಕಾರಣಕ್ಕೂ ಭವಿಷ್ಯದಲ್ಲಿ ಸಭೆ ಹಾಗೂ ಶಕ್ತಿ ಪ್ರದರ್ಶನ ನಡೆಸದಂತೆ ಮಾಜಿ ಶಾಸಕ ರೇಣುಕಾಚಾರ್ಯಗೆ ಬಿಎಸ್‌ವೈ ಅವರು ಖಡಕ್ ಸಂದೇಶ ನೀಡಿದ್ದಾರೆ. ಬುಧವಾರ ರಾತ್ರಿ ತಮ್ಮ ಧವಳಗಿರಿ ನಿವಾಸಕ್ಕೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡು ಮಾತಾಡಿರುವ ಯಡಿಯೂರಪ್ಪ ಅವರು, ವಿಜಯೇಂದ್ರ ಬೆಂಬಲಿಸಿ ಲಿಂಗಾಯತರು ಯಾವುದೇ ಸಭೆ ನಡೆಸದಂತೆ ಸೂಚನೆ ನೀಡಿದ್ದಾರೆ. ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸುಮ್ಮನಿದ್ದರೂ ಸಮುದಾಯದ ಮಹಾಸಂಗಮ ಸಮಾವೇಶ ನಡೆಸುವುದಾಗಿ ರೇಣುಕಾಚಾರ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

    ರೆಬೆಲ್ ನಾಯಕ ಯತ್ನಾಳ್ ಸಹ ಮಾ. 22ರಂದು ನಡೆಸಬೇಕಿದ್ದ ಲಿಂಗಾಯತ ಸಮಾವೇಶವನ್ನು ಮುಂದೂಡಿದ್ದಾರೆ. ಬುಧವಾರ ತಂಡದ ಪ್ರಮುಖರ ಸಭೆ ನಡೆಸಿದ್ದ ಯತ್ನಾಳ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಲಿಂಗಾಯತ ಸಮಾವೇಶ ಸದ್ಯಕ್ಕೆ ನಡೆಸದಿರುವ ತೀರ್ಮಾನಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

    ಈ ನಡುವೆ ವಿಜಯೇಂದ್ರಗೆ ಕೊಂಚ ಹಿನ್ನಡೆಯಾಗುವ ವಿದ್ಯಮಾನ ನಡೆದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರರನ್ನ ಮುಂದುವರೆಸದಂತೆ ನೇರವಾಗಿ ಅಮಿತ್ ಷಾ ಅವರಿಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹುಟ್ಟೂರಿನ ರಥೋತ್ಸವದಲ್ಲಿ ತೇರು ಎಳೆದ ಅರ್ಜುನ್ ಸರ್ಜಾ, ಧ್ರುವ ಸರ್ಜಾ

    ಮಾ. 11ರಂದು ಅರವಿಂದ ಲಿಂಬಾವಳಿ, ಅಮಿತ್ ಷಾ ಬುಲಾವ್ ಮೇರೆಗೆ ದೆಹಲಿಗೆ ಹೋಗಿದ್ದರು. ದೆಹಲಿಯ ಸಂಸತ್ ಭವನದಲ್ಲಿ ಸುಮಾರು 15 ನಿಮಿಷಗಳ ಕಾಲ ಅಮಿತ್ ಶಾ ಜತೆ ಅರವಿಂದ ಲಿಂಬಾವಳಿ ಮಾತುಕತೆ ನಡೆಸಿ ರಾಜ್ಯ ಬಿಜೆಪಿಯ ಪ್ರಸಕ್ತ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರೆಸದಂತೆ ಕಾರಣ ಸಹಿತ ದೂರು ಕೊಟ್ಟು ಬಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!

    ರಾಜ್ಯ ಬಿಜೆಪಿಯತ್ತ ಹೈಕಮಾಂಡ್ ಈಗ ಗಮನ ಕೊಡುತ್ತಿರುವುದು ನಿಷ್ಠ ಬಿಜೆಪಿಗರಲ್ಲಿ ಸಮಾಧಾನ ತಂದಿದೆ. ವಿಜಯೇಂದ್ರ ಹಾಗೂ ಯತ್ನಾಳ್ ಬಣಗಳಲ್ಲಿ ಏನಾಗುತ್ತದೋ ಎಂಬ ಆತಂಕ ಸೃಷ್ಟಿಸಿದೆ. ಆದರೆ ಈ ಬಾರಿ ಹೈಕಮಾಂಡ್ ನಿಜಕ್ಕೂ ಬಿಜೆಪಿಯ ಭಿನ್ನಮತ, ಗೊಂದಲ ಸರಿಪಡಿಸುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರವನ್ನು ಕಾದು ನೋಡಬೇಕಿದೆ.

  • ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್‌ ಮಿಸ್‌- ಬಿಜೆಪಿಯ10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್‌ ಮಿಸ್‌- ಬಿಜೆಪಿಯ10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬೆಂಗಳೂರು: ಬಿಜೆಪಿಯ (BJP) ಮೂರನೇ ಪಟ್ಟಿ ಘೋಷಣೆಯಾಗಿದ್ದು ರಾಮದಾಸ್‌ (Ramdas) ಮತ್ತು ಅರವಿಂದ ಲಿಂಬಾವಳಿಗೆ (Aravind Limbavali) ಟಿಕೆಟ್‌ ಮಿಸ್‌ ಆಗಿದೆ.

    ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್‌ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್‌ಗೆ ಟಿಕೆಟ್‌ ಘೋಷಣೆಯಾಗಿದೆ. ಜಗದೀಶ್‌ ಶೆಟ್ಟರ್‌ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಮಹೇಶ್‌ ಟೆಂಗಿನಕಾಯಿಗೆ ಟಿಕೆಟ್‌ ನೀಡಲಾಗಿದೆ.

     

    ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್‌ ಉಮೇಶ್‌ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್‌ ಇನ್ನೂ ಘೋಷಣೆಯಾಗಿಲ್ಲ.

    ಯಾವ ಕ್ಷೇತ್ರದಿಂದ ಯಾರು?
    ನಾಗಠಾಣ – ಸಂಜೀವ್ ಐಹೊಳೆ
    ಸೇಡಂ – ರಾಜಕುಮಾರ್ ಪಾಟೀಲ್
    ಕೊಪ್ಪಳ – ಮಂಜುನಾಥ್ ಅಂಬರೀಶ್
    ರೋಣ – ಕಳಕಪ್ಪ ಬಂಡಿ
    ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
    ಹಗರಿಬೊಮ್ಮನಹಳ್ಳಿ – ಬಿ ರಾಮಣ್ಣ
    ಹೆಬ್ಬಾಳ – ಕಟ್ಟ ಜಗದೀಶ್
    ಗೋವಿಂದರಾಜನಗರ – ಉಮೇಶ್‍ಶೆಟ್ಟಿ
    ಮಹದೇವಪುರ – ಮಂಜುಳ ಅರವಿಂದ ಲಿಂಬಾವಳಿ
    ಕೃಷ್ಣರಾಜ- ಶ್ರೀವತ್ಸ

  • ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ

    ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ

    ಚಿತ್ರದುರ್ಗ: ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡದ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ (Immadi Siddharameshwara Shri) ಅಸಮಾಧಾನ ಹೊರಹಾಕಿದ್ದಾರೆ.

    ಚಿತ್ರದುರ್ಗದ (chitradurga) ಭೋವಿ ಮಠದಲ್ಲಿ (Bovimath) ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರವಿಂದ ಲಿಂಬಾವಳಿ ಮತ್ತು ಗೂಳಿಹಟ್ಟಿ ಶೇಖರ್ ಅವರನ್ನು ಕಡೆಗಣನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಅವರು ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರು. ಅವರನ್ನು ಸಹ ಕಡೆಗಣನೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಭೇಟಿ ರಾಜಕೀಯದ ಬಣ್ಣ ಬೇಡ : ನಟ ರಿಷಬ್ ಶೆಟ್ಟಿ

    ಈ ಹಿಂದೆ 8 ರಿಂದ 10 ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದರು. ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷದ ವರಿಷ್ಠರಿಗೆ ಭೋವಿ ಸಮಾಜದ (Bovi community) ಮುಖಂಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆವು. ಆದರೆ ಈ ಬಾರಿ ಸಮುದಾಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ಕಡೆಗಣಿಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಅರವಿಂದ ಲಿಂಬಾವಳಿ (Aravind Limbavali), ಗೂಳಿಹಟ್ಟಿ ಶೇಖರ್ (Gulihatti D Shekar) ಅವರಿಗೆ ಬಿಜೆಪಿ ಹಾಗೂ ಅಖಂಡ ಶ್ರೀನಿವಾಸ್ (Akhanda Srinivas) ಅವರಿಗೆ ಕಾಂಗ್ರೆಸ್ ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ. ಟಿಕೆಟ್ ನೀಡದಿದ್ದರೆ ಭೋವಿ ಸಮುದಾಯ ಕಡೆಗಣಿಸಿದ ಪಕ್ಷಗಳನ್ನು ಸಮುದಾಯ ಕೈಬಿಡಲಿದೆ ಎಂದು ಎರಡೂ ಪಕ್ಷದ ವರಿಷ್ಠರಿಗೆ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಯಾಣದ ನಡುವೆಯೇ ಪಕ್ಷದ ಕೆಲಸ, ಆಹಾರ ಸೇವನೆ, ವಿಶ್ರಾಂತಿ – ಇದು ಹೆಚ್‌ಡಿಕೆ ದಿನಚರಿ

  • ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ರಾಮನಗರ: ಕಗ್ಗಲೀಪುರದ ಉದ್ಯಮಿ ಪ್ರದೀಪ್ (Businessman Pradeep) ಶೂಟೌಟ್ ಕೇಸ್‍ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಇನ್ನೊಂದು ವಾರದಲ್ಲಿ ನ್ಯಾಯಾಲಯಕ್ಕೆ ತನಿಖಾ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.

    ಬರೋಬ್ಬರಿ ಇಪ್ಪತ್ತು ಮಂದಿಯ ಹೇಳಿಕೆಯನ್ನ ದಾಖಲಿಸಿರೋ ಪೊಲೀಸ್ರು, ಎ3 ಆರೋಪಿ ಅರವಿಂದ್ ಲಿಂಬಾವಳಿ ಸೇರಿದಂತೆ ಎಲ್ಲರ ಮೇಲೂ ಬಿ ರಿಪೋರ್ಟ್ ಸಲ್ಲಿಕೆ ಸಾಧ್ಯತೆ ಇದೆ. ಪೊಲೀಸರು ಪ್ರಕರಣ ಸಂಬಂಧ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಬಳಿ ಎರಡು ಪುಟಗಳ ಹೇಳಿಕೆ ಪಡೆದಿದ್ದಾರೆ ಎನ್ನಲಾಗ್ತಿದೆ. ಆದರೆ ನನಗೂ ಪ್ರದೀಪ್ ಆತ್ಮಹತ್ಯೆ ಕೇಸ್‍ಗೂ ಸಂಬಂಧವಿಲ್ಲ. ಪ್ರದೀಪ್ ಪರಿಚಿತ ವ್ಯಕ್ತಿವಾಗಿದ್ದು, ಸ್ನೇಹಿತರ ನಡುವಿನ ಹಣಕಾಸಿನ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದೇ ಅಷ್ಟೇ ಎಂದು ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ಅಲ್ಲದೆ ಡೆತ್‍ನೋಟ್‍ನಲ್ಲಿ ಪ್ರದೀಪ್ ಮಾಡಿರೋ ಆರೋಪಕ್ಕೆ ಸ್ಪಷ್ಟ ಸಾಕ್ಷ್ಯ ಸಿಗ್ತಿಲ್ಲ. ಮೊಬೈಲ್‍ನ ಟೆಕ್ನಿಕಲ್ ಎವಿಡೆನ್ಸ್ ಹಾಗೂ ಡೆತ್‍ನೋಟ್ ಬಗ್ಗೆಯೂ ಪ್ರಬಲ ಸಾಕ್ಷ್ಯವಿಲ್ಲ. ಸದ್ಯ ಎ1 ಆರೋಪಿ ಗೋಪಿ ಸೇರಿ ಶಾಸಕ ಅರವಿಂದ ಲಿಂಬಾವಳಿ ಒಳಗೊಂಡಂತೆ ಆರು ಮಂದಿ ಆರೋಪಿತರ ಹೇಳಿಕೆಯನ್ನ ದಾಖಲಿಸಿರೋ ಪೊಲೀಸ್ರು ತನಿಖಾ ರಿಪೋರ್ಟ್ ಸಲ್ಲಿಕೆಗೆ ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ನಮ್ಮ ಕಾರ್ಯಕರ್ತನೇ – ಲಿಂಬಾವಳಿ ಸ್ಪಷ್ಟನೆ

  • ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

    ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

    ಬೆಂಗಳೂರು: ಉದ್ಯಮಿ ಪ್ರದೀಪ್ (Businessman Pradeep) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಒತ್ತಾಯ ಮಾಡಿದ್ದಾರೆ.

    ಇಂದು ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಒತ್ತಾಯಿಸುತ್ತೇನೆ ಎಂದರು.

    ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು. ಆದರೆ ಈವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ (Namitha) ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಸ್ ಕೊಡಿಸುವ ಕೆಲಸ ಮಾಡಬೇಕು. ಇದನ್ನೂ ಓದಿ: BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ – ಸರ್ಕಾರ ಆದೇಶ

    ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್‍ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

    ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ (BJP Government) ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯ ಮಾಡುತ್ತೇನೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಕೆಲವರು ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ. ಬಿಜೆಪಿಯವರು ನಾಯಕರ ಹಣದಾಸೆಗೆ ಇಂಥಾ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಎಂದು ಮರು ಪ್ರಶ್ನೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ನಾನೇನು ಸ್ವಂತ ಬೋಟ್‌ನಲ್ಲಿ ಹೋಗಿದ್ನಾ; ಬೇಕಿದ್ರೆ ಲಿಂಬಾವಳಿ ಕೇಳಿ?: ಸಿದ್ದು ಬೋಟ್‌ ಪ್ರಸಂಗ

    ನಾನೇನು ಸ್ವಂತ ಬೋಟ್‌ನಲ್ಲಿ ಹೋಗಿದ್ನಾ; ಬೇಕಿದ್ರೆ ಲಿಂಬಾವಳಿ ಕೇಳಿ?: ಸಿದ್ದು ಬೋಟ್‌ ಪ್ರಸಂಗ

    ಬೆಂಗಳೂರು: ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ(Siddaramaiah) ಅವರು ಬೋಟ್‌ನಲ್ಲಿ ಭೇಟಿ ನೀಡಿದ ಪ್ರಸಂಗ ಸದನದಲ್ಲಿ ಹಾಸ್ಯ ಚಟಾಕಿಗೆ ಕಾರಣವಾಯಿತು.

    ವಿಧಾನಸಭೆಯಲ್ಲಿ (Vidhanasabha Session) ರಾಜ್ಯದಲ್ಲಿನ ಅತಿವೃಷ್ಟಿ ಸಂಬಂಧ ನಿಯಮ 69ರಡಿ ಚರ್ಚೆ ನಡೆಯಿತು. ಬೆಂಗಳೂರಿನಲ್ಲಿ ಮಳೆ ಅವಾಂತರಗಳ ಕುರಿತು ಸಿದ್ದರಾಮಯ್ಯ ಅವರು ಮಾತನಾಡುವಾಗ ಬೋಟ್‌ ಪ್ರಸಂಗ ಮುನ್ನೆಲೆಗೆ ಬಂತು. ಸೆಲೆಬ್ರಿಟಿಗಳು ಇರುವ ಯಮಲೂರಿನಲ್ಲಿ ಬೋಟ್‌ನಲ್ಲೇ ಹೋಗಬೇಕು ಎಂದು ಸಿದ್ದರಾಮಯ್ಯ ಹೇಳುವಾಗ ಮಧ್ಯೆ ಪ್ರವೇಶಿಸಿದ ಶಾಸಕ ಅರವಿಂದ್‌ ಲಿಂಬಾವಳಿ, ರೋಡಲ್ಲೇ ಹೋಗಬಹುದಿತ್ತು. ನೀವ್ಯಾಕೆ ಬೋಟಲ್ಲಿ ಹೋದಿರಿ ಗೊತ್ತಿಲ್ಲ ಎಂದು ಸಿದ್ದು ಕಾಲೆಳೆದರು.

    ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಿದ್ದು, ನೀವು ಬರೋದಾಗಿ ಹೇಳಿದ್ರೆ ನಾನೇ ವೆಲ್ ಕಮ್ ಮಾಡ್ತಿದ್ದೆ. ರಸ್ತೆ ತೋರಿಸಬಹುದಿತ್ತು ಎಂದು ತಿರುಗೇಟು ಕೊಟ್ಟರು. ಅದಕ್ಕೆ ಲಿಂಬಾವಳಿ ಪ್ರತಿಕ್ರಿಯಿಸಿ, ನಿಮ್ಮನ್ನ ದಿಕ್ಕು ತಪ್ಪಿಸೋರು ತುಂಬಾ ಜನ ಇದಾರೆ, ಹುಷಾರಾಗಿರಿ ಸಾರ್ ಎಂದು ಮತ್ತೆ ಕಾಳೆದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಿಎಂ ಬೊಮ್ಮಾಯಿ(Basavaraj Bommai), ಒಂದೂವರೆ ಅಡಿ ನೀರಿರುವ ಜಾಗದಲ್ಲಿ ನಿಮ್ಮನ್ನು ಬೋಟಲ್ಲಿ ಕರ್ಕೊಂಡ್ ಹೋಗಿದ್ದ ಪುಣ್ಯಾತ್ಮ ಯಾರಪ್ಪ? ನಾವೆಲ್ಲ ರಸ್ತೆಯಲ್ಲೇ ಹೋಗಿದ್ದು ಎಂದು ಸಿದ್ದುಗೆ ಟಾಂಗ್‌ ಕೊಟ್ಟರು.

    ಕೃಷ್ಣ ಬೈರೇಗೌಡ ಮಾತನಾಡಿ, ಎನ್‌ಡಿಆರ್‌ಎಫ್ ಬೋಟ್‌ನಲ್ಲೇ ಹೋಗಿದ್ದೆವು. ಸುಮಾರು ಲೇಔಟ್ ನೀರಿನಲ್ಲಿ ಮುಳುಗಿತ್ತು. ಅಲ್ಲಿ ಜನ ಕಷ್ಟ ಅನುಭವಿಸಿದ್ದು, ಸುಳ್ಳಾ? ನಾವು ಬೋಟಲ್ಲ, ನೆಡೆದುಕೊಂಡೇ ಹೋಗಿದ್ದೆವು ಎಂದ ಸಿಎಂ ಮಾತಿಗೆ ತಿರುಗೇಟು ನೀಡಿದರು. ಇದೇ ವೇಳೇ ಅರವಿಂದ ಲಿಂಬಾವಳಿ ಮಾತನಾಡಿ ಲೇಔಟ್ ಮಾಡಿದವನ ತಪ್ಪಿಂದ ನೀರು ನಿಂತಿದ್ದು ನಿಜ. ದೊಡ್ಡ ದೊಡ್ಡ ಐಷಾರಾಮಿ ಕಾರಿನಲ್ಲಿ ಓಡಾಡ್ತಿದ್ದವರನ್ನ, ಟ್ರಾಕ್ಟರ್‌ನಲ್ಲಿ ಕರೆದುಕೊಂಡು ಬರುವ ಪರಿಸ್ಥಿತಿ ಬಂತು ಎಂದರು.

    ನಾನು ನನ್ನ ಸ್ವಂತ ಬೋಟ್ ತಗೊಂಡ್ ಹೋಗಿರಲಿಲ್ಲ. ಎನ್‌ಡಿಆರ್‌ಎಫ್ ಬೋಟ್ ತೆಗೆದುಕೊಂಡು ಹೋಗಿದ್ದೆ. ಲಿಂಬಾವಳಿ ಅವರನ್ನೇ ಕೇಳಿ, ಮೋಟಾರ್ ಬೋಟ್ ತೆಗೆದುಕೊಂಡು ಹೋಗಿದ್ದೆ. ಒಂದೂವರೆ ಅಡಿ ನೀರು ಇರಲಿಲ್ಲ, 10-12 ಅಡಿ ನೀರು ನಿಂತಿತ್ತು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಂತೆ ಅರವಿಂದ್ ಲಿಂಬಾವಳಿ ಮಧ್ಯಪ್ರವೇಶಿಸಿ, ಸಿಎಂ ಯಂಗ್ ಆಗಿದ್ದಾರೆ. ಹಾಗಾಗಿ ನಡೆದುಕೊಂಡು ಹೋದ್ರು, ನಿಮಗೆ ಸ್ವಲ್ಪ ವಯಸ್ಸಾಗಿದೆ ಹಾಗಾಗಿ ಬೋಟಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕಾಲೆಳೆದರು.

    ನಾನು ಹೋದಾಗ ನೀರು ಹೆಚ್ಚಿತ್ತೋ, ಕಡಿಮೆ ಇತ್ತೋ ಗೊತ್ತಿಲ್ಲ. ಆದ್ರೆ ನಾನು ನಡೆದುಕೊಂಡು ಹೋಗಿದ್ದು. ನನ್ನ ಬೋಟಲ್ಲಿ ಬರೋದಕ್ಕೆ ಹೇಳಿದ್ರು, ಆದ್ರೆ ನಾನು ಜೀಪಲ್ಲಿ ಹೋದೆ ಎಂದು ಸಿಎಂ ಹೇಳಿದರು. ಬೋಟಲ್ಲಿ ಹೋಗಿದ್ದು ನಿಜ, ನೀರೆದ್ದರೇನೇ ಬೋಟಲ್ಲಿ ಹೋಗೋಕೆ ಸಾಧ್ಯ, ಅದು ಒಂದೂವರೆ ಅಡಿಯಾದ್ರೂ ಇರಲಿ, ಹತ್ತೂವರೆ ಅಡಿಯಾದ್ರೂ ಇರಲಿ. ಮಳೆಯಿಂದ ಹಾನಿಯಾಗಿರೋದು ಸತ್ಯವಾಗಿದ್ದು, ಅಲ್ಲಿ ಭೇಟಿ ಕೊಟ್ಟಾಗ ಜನ ಸಮಸ್ಯೆ ಹೇಳಿಕೊಂಡ್ರು, ಕಾರು, ಸ್ಕೂಟರ್ ಎಲ್ಲ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕೊಡುವಂತೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

    ಈ ವೇಳೆ ಮಧ್ಯಪ್ರವೇಶ ಮಾಡಿದ ಅಶೋಕ್ (R Ashok), ಎನ್‌ಡಿಆರ್‌ಎಫ್ ನಾರ್ಮ್ಸ್ ಪ್ರಕಾರ, ಮಳೆ ನಿಂತ ಬಳಿಕವೇ ಸರ್ವೆ ಮಾಡಬೇಕು. ಪ್ರತಿದಿನ ಹೋಗಿ ಪರಿಶೀಲನೆ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಂತೆ ಸಿದ್ದರಾಮಯ್ಯ ಅವರು, ಪರಿಹಾರ ಕೊಡಲೇ ಬೇಕು. ಬರದಲ್ಲಿ ಎರಡು ವಿಧ, ಒಂದು ಒಣ ಬರ, ಮತ್ತೊಂದು ಹಸಿ ಬರ. ಒಣ ಬರ ಅಂದ್ರೆ ಮಳೆ ಬಾರದೆ, ಬೆಳೆ ಒಣಗಿ ಹೋಗುತ್ತೆ. ಇದರಿಂದ ಗೊಬ್ಬರ, ಬಿತ್ತನೆ ಬೀಜದ ಎಲ್ಲಾ ಖರ್ಚುಗಳು ಉಳಿಯುತ್ತೆ. ಹಸಿ ಬರ ಅಂದ್ರೆ, ಬೆಳೆ ಬೆಳೆದು ಮಳೆ ಬಿದ್ದು ಹಾನಿಯಾಗೋದು. ಇದರಿಂದ ಬೆಳೆದ ಎಲ್ಲ ಬೆಳೆ ಹಾಳಾಗುತ್ತೆ, ರೈತರಿಗೂ ನಷ್ಟ ಆಗುತ್ತದೆ, ಇದರಿಂದ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

    ಇದಕ್ಕೂ ಮೊದಲು ಮಾತನಾಡಿದ ಅತಿವೃಷ್ಟಿ ಕುರಿತು ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜನ ಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಒಳ ಹಾಗೂ ಹೊರ ಭಾಗದಲ್ಲಿ ಇಡೀ ಜನ ಜೀವನ ಅಸ್ತವ್ಯಸ್ತ ಆಗಿದೆ. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿಲ್ಲ. ಅವರ ಬೇಜವಾಬ್ದಾರಿತನದಿಂದ ಈ ಪರಿಸ್ಥಿತಿ ಬಂದಿದೆ. ನಾನು ಜವಾಬ್ದಾರಿಯಿಂದಲೇ ಬೇಜವಾಬ್ದಾರಿ ಅಂತ ಬಳಸಿದ್ದೇನೆ. ಸುಮಾರು 20 ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ. ಕಳೆದ ಬಾರಿ ಮುಂಗಾರು ಅಧಿವೇಶನದಲ್ಲಿ ಮಾತನಾಡುವಾಗ ಆಗಲೂ ಪ್ರವಾಹ ಬಂದಿತ್ತು ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನವರು ಚಡ್ಡಿ ಹಾಕಿ ಶಾಖೆಗೆ ಬರೋ ದಿನ ದೂರವಿಲ್ಲ – ಸಿಟಿ ರವಿ ವ್ಯಂಗ್ಯ

    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಮಾತನಾಡಿದ್ದೆ. ಹವಾಮಾನ ತಜ್ಞರು ಮುಂದಿನ ದಿನದಲ್ಲಿ ಹವಾಮಾನ ಬದಲಾವಣೆಯಿಂದ ರಾಜ್ಯ ಭೀಕರ ಪರಿಸ್ಥಿತಿ ಎದುರಿಸಬೇಕಾಗಲಿದೆ ಅಂತ ಮುನ್ನೆಚ್ಚರಿಕೆ ನೀಡಿದರು. ಈ ವಿಚಾರ ಕಳೆದ ಬಾರಿ ಈ ವಿಚಾರ ಪ್ರಸ್ತಾಪ ಮಾಡಿದ್ದೆ. ಹವಾಮಾನ ವಿಜ್ಞಾನಿಗಳು 2030ರೊಳಗೆ ಕೃಷಿ ಮೇಲೆ ಪರಿಣಾಮ ಬೀರಲಿದೆ. ಭತ್ತ ಬೆಳೆ ಸುಮಾರು 5.6ರಷ್ಟು ಕಡಿಮೆಯಾಗಬಹುದು. ಕಡ್ಲೆ 19.2ರಷ್ಟು, ರಾಗಿ ಶೇ.12 ರಷ್ಟು, ಶೇಂಗಾ 9.6ರಷ್ಟು, ಸೋಯಾಬಿನ್ ಕಡಿಮೆ ಆಗಬಹುದು. ಬೆಳೆ ಹೆಚ್ಚಾಗೋದ್ರಲ್ಲಿ ಹತ್ತಿ, ಜೋಳ, ಕಬ್ಬು ಜಾಸ್ತಿಯಾಗುವ ಬೆಳೆಗಳು ಎಂದು ಹವಮಾನ ತಜ್ಞರು ತಿಳಿಸಿದ್ದಾರೆ. ಅದಕ್ಕಾಗಿ ಕೆಲವೆಡೆ ಮಳೆ ಹೆಚ್ಚಾಗಿದೆ, ಕೆಲವೆಡೆ ಕಡಿಮೆಯಾಗಿದೆ ಎಂದರು. ಇದನ್ನೂ ಓದಿ: ನೀನು ಕಬಡ್ಡಿ ಆಡಿ ಆಡಿ ಸ್ಟ್ರಾಂಗ್ ಆಗಿದ್ದೀಯಾ- ಅಶೋಕ್ ಕಾಲೆಳೆದ ಸಿದ್ದರಾಮಯ್ಯ

    ಮಲೆನಾಡಿನಲ್ಲಿ ಕಡಿಮೆ ಮಳೆಯಾಗಿದ್ದು, ಬಯಲುಸೀಮೆಯಲ್ಲಿ ಮಳೆ ಹೆಚ್ಚಾಗಿದೆ. ಹವಾಮಾನ ಬದಲಾವಣೆಯಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ 15-20ರಷ್ಟು ಹೆಚ್ಚಾಗಬಹುದು. ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಸುತ್ತಮುತ್ತ ಹೆಚ್ಚಾಗಬಹುದು. ಭಾರೀ ಮಳೆಯಿಂದ ರಸ್ತೆಗಳೆಲ್ಲ ಉಕ್ಕಿ ಹರಿದಿವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ರಮ್ಯಾ ಹೇಳಿದ್ದು ನಿಜ: ಶಾಸಕ ಅರವಿಂದ ಲಿಂಬಾವಳಿ

    ರಮ್ಯಾ ಹೇಳಿದ್ದು ನಿಜ: ಶಾಸಕ ಅರವಿಂದ ಲಿಂಬಾವಳಿ

    ಬೆಂಗಳೂರು: ಪ್ರಭಾವಿ ಶಾಸಕರ ಜಮೀನು ಈ ಭಾಗದಲ್ಲಿಯೇ ಇದೆ. ರಮ್ಯಾ ಹೇಳಿದ್ದು ನಿಜ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, 17 ಕೋಟಿ ವಿಲ್ಲಾ ಮಾಡಿದವರಿಗೆ ಬುದ್ಧಿ ಇಲ್ಲ ಬಿಡಿ ಎಂದು ಕೆಂಡಾಮಂಡಲರಾಗಿದ್ದಾರೆ. ಎಲ್ಲವೂ ನಿಧಾನಕ್ಕೆ ಗೊತ್ತಾಗುತ್ತೆ ಎಂದು ಒತ್ತುವರಿ ಬಗ್ಗೆ ಶಾಸಕ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

    ಒತ್ತುವರಿದಾರರಿಗೆ ಇನ್ನೂ ಟೈಂ ಇಲ್ಲ. ಎಲ್ಲವೂ ತೆರವು ಮಾಡೋದೇ. ಒತ್ತುವರಿದಾರರಿಗೆ ಬಿಸಿ ಮುಟ್ಟಿಸೋಕೆ ಹೋಗಿಯೇ ನಂಗೆ ಸಮಸ್ಯೆಯಾಗಿದೆ. ಹಾಗಂತ ನಾನು ಸುಮ್ಮನೆ ಇರಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    ರಮ್ಯಾ ಹೇಳಿದ್ದೇನು..?: ಕಳೆದ ಎರಡು ವಾರಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಅನೇಕ ಪ್ರದೇಶಗಳು ಕೆರೆಗಳಂತಾಗಿವೆ. ಮನೆಗೆ ನೀರು ನುಗ್ಗಿ ಜನ ಜೀವನಕ್ಕೆ ಅಪಾರ ತೊಂದರೆ ಉಂಟಾಗಿದೆ. ವಾಹನ ಸವಾರರಿಗಂತೂ ನಿತ್ಯ ನರಕ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ರಮ್ಯಾ, ಬೆಂಗಳೂರು ಹೀಗೆ ಆಗುವುದಕ್ಕೆ ಕಾರಣ ಜನಪ್ರತಿನಿಧಿಗಳು. 28 ಎಂಎಲ್.ಎ ಗಳಿಗೆ 26 ಎಂಎಲ್‍ಎಗಳು ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಅವರೇ ಇದ್ದರೆ, ಬೆಂಗಳೂರನ್ನು ಕಾಪಾಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

    ಹಣ ಇದ್ದವರಿಗೆ ಅದರಲ್ಲೂ ರಿಯಲ್ ಎಸ್ಟೇಟ್ ಮಾಡುತ್ತಿರುವ ಹೆಚ್ಚಿನ ಜನರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದು ಏಕೆ ಎಂದು ಪ್ರಶ್ನೆ ಮಾಡಿರುವ ರಮ್ಯಾ, ಚುನಾವಣಾ ಆಯೋಗವು ಒಬ್ಬ ಎಂ.ಎಲ್.ಎ ಗೆ ಚುನಾವಣೆ ಖರ್ಚು ಮಾಡಲು 40 ಲಕ್ಷ ರೂಪಾಯಿ ಮಿತಿ ನಿಗದಿ ಮಾಡಿದೆ. ಆದರೆ ಕೋಟಿ ಲೆಕ್ಕಗಳಲ್ಲಿ ಖರ್ಚಾಗುತ್ತಿದೆ ಏಕೆ? ಎಂದಿದ್ದಾರೆ. ಹಾಗಾಗಿ ಬುದ್ಧಿವಂತಿಕೆಯಿಂದ ಮತ ಚಲಾಯಿಸುವಂತೆ ಅವರು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ

    ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ

    ಬೆಂಗಳೂರು: ಕೇಳಿಸಿಕೊಳ್ಳುವಷ್ಟು ಶಾಂತಿ, ಸಹನೆ ಇಲ್ಲ ಅಂದರೆ ಅವರು ಆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ ಅಂತ ಅನಿಸುತ್ತದೆ. ಇಡೀ ಸರ್ಕಾರಕ್ಕೇ ಮುಂದುವರಿಯುವುದಕ್ಕೆ ಅರ್ಹತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

    ಮಹಿಳೆಯ ಮೇಲೆ ಶಸಕ ಅರವಿಂದ ಲಿಂಬಾವಳಿ ದರ್ಪದ ಕುರಿತು ಪ್ರತಿಕ್ರಿಯಿಸಿದ ಅವರು, ಔಟರ್ ರಿಂಗ್ ರೋಡ್ ನವರು ಮಳೆಯಿಂದ ಆ ಕ್ಷೇತ್ರದಲ್ಲಿ ಏನಾಗಿದೆ ಅಂತ ಸರ್ಕಾರಕ್ಕೆ ಬರೆದಿದ್ದಾರೆ. ಅವರಿಗೆ ಎಷ್ಟು ಕೋಟಿ ನಷ್ಟ ಆಗಿದೆ ಅಂತ ಹೇಳಿದ್ದಾರೆ. ಅವರಿಗೆ ಬಾಯಿ ಇತ್ತು ಹೇಳುವ ಶಕ್ತಿ ಇತ್ತು ಪತ್ರ ಬರೆದಿದ್ದಾರೆ. ಆದರೆ ಶಕ್ತಿ ಇಲ್ಲದ ಮಹಿಳೆಯರು ಯಾವುದೇ ಪಾರ್ಟಿ ಇರಬಹುದು, ಶಾಸಕರಿಗೆ ಕೇಳದೇ ಇನ್ನು ಯಾರಿಗೆ ಕೇಳಬೇಕು ಎಂದು ಪ್ರಶ್ನಿಸಿದರು.

    ಕೇವಲ ಲಿಂಬಾವಳಿಗೆ ಮಾತ್ರವಲ್ಲ, ಯಾರಿಗೂ ಮುಂದುವರಿಯುವುದಕ್ಕೆ ಅರ್ಹತೆ ಇಲ್ಲ. ಇದು ಸರ್ಕಾರದ ವೈಫಲ್ಯ. ಅಧಿಕಾರಿಗಳ ಕೈಗೊಂಬೆ ಆಗಿಟ್ಟುಕೊಂಡು ಬೇಕಾದ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು ಅಕ್ಷಮ್ಯ : ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಕಿಡಿ

    ಬ್ರಾಂಡ್ ಬೆಂಗಳೂರು ಹಾಳಗಿರುವ ಬಗ್ಗೆ ಐಟಿಯವರು ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರಿಗೆ ಶಕ್ತಿ ಇದೆ ಅವರು ಬರೆಯುವ ಮೂಲಕ ಹೇಳಿದ್ದಾರೆ. ಬ್ರಾಂಡ್ ಇಲ್ಲಾ ಏನೂ ಇಲ್ಲ. 20 ವರ್ಷದಿಂದ ಉಳಿಸಿದ್ದೆವು. ಎಸ್.ಎಂ.ಕೃಷ್ಣ ಕಾಲದಲ್ಲೂ ಇತ್ತು. ಸಿದ್ದರಾಮಯ್ಯ ಕಾಲದಲ್ಲೂ ಬ್ರಾಂಡ್ ಬೆಂಗಳೂರು ಉಳಿಸಿದ್ದೆವು. ಈಗ ಎಲ್ಲಾ ಗೋವಿಂದ ಗೋವಿಂದ ಎಂದು ಬಿಜೆಪಿ ವಿರುದ್ಧ ಗರಂ ಆದರು.

    Live Tv
    [brid partner=56869869 player=32851 video=960834 autoplay=true]