Tag: Archaeology Department

  • ಕೃಷ್ಣಾ ನದಿಯಲ್ಲಿ ಪತ್ತೆಯಾದ ವಿಷ್ಣು ವಿಗ್ರಹ ಪ್ರಾಚ್ಯ ವಸ್ತುಸಂಗ್ರಹಾಲಯಕ್ಕೆ ಸ್ಥಳಾಂತರ

    ಕೃಷ್ಣಾ ನದಿಯಲ್ಲಿ ಪತ್ತೆಯಾದ ವಿಷ್ಣು ವಿಗ್ರಹ ಪ್ರಾಚ್ಯ ವಸ್ತುಸಂಗ್ರಹಾಲಯಕ್ಕೆ ಸ್ಥಳಾಂತರ

    ರಾಯಚೂರು: ಜಿಲ್ಲೆಯ ದೇವಸುಗೂರು ಬಳಿ ಕೃಷ್ಣಾ ನದಿಯಲ್ಲಿ (Krishna River) ಪತ್ತೆಯಾಗಿದ್ದ 3 ವಿಗ್ರಹಗಳಲ್ಲಿ ಅಯೋಧ್ಯೆ ಬಾಲಕರಾಮನ ವಿನ್ಯಾಸ ಹೋಲುವ ದಶಾವತಾರಿ ವಿಷ್ಣು ವಿಗ್ರಹ (Vishnu Idol) ಈಗ ಪುರಾತತ್ವ ಇಲಾಖೆ ವಸ್ತುಸಂಗ್ರಹಾಲಯ ಸೇರಿದೆ. ಒಂದು ವಿಗ್ರಹ ರಾಜ್ಯಕ್ಕೆ ಸೇರಿದರೆ ಇನ್ನೂ ಎರಡು ವಿಗ್ರಹಗಳು ತೆಲಂಗಾಣದ ಪಾಲಾಗಿವೆ.

    ದೇವಸುಗೂರಿನ ರಾಮಲಿಂಗೇಶ್ವರ ದೇವಾಲಯದಲ್ಲಿ ಇರಿಸಿದ್ದ ವಿಷ್ಣು ಮೂರ್ತಿಯನ್ನ ಪುರಾತತ್ವ ಇಲಾಖೆ (Department of Archaeology) ಅಧಿಕಾರಿಗಳು ಪರಿಶೀಲನೆ ನಡೆಸಿ ವಸ್ತುಸಂಗ್ರಹಾಲಯಕ್ಕೆ ಸ್ಥಳಾಂತರಿಸಿದ್ದಾರೆ. ರಾಯಚೂರಿನ (Raichur) ನವರಂಗ್ ದರ್ಗಾದಲ್ಲಿನ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಆದ್ರೆ ವಿಗ್ರಹದ ಕಾಲಾವಧಿ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದೆ. 400 ವರ್ಷಗಳಷ್ಟು ಹಳೆಯ ವಿಗ್ರಹ ಎಂದು ನಿರೀಕ್ಷಿಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೃಷ್ಣಾ ನದಿಯಲ್ಲಿ ಸಿಕ್ಕ ಶಿವಲಿಂಗ, ವಿಷ್ಣುವಿನ ವಿಗ್ರಹಕ್ಕೆ ಅಂತಾರಾಜ್ಯ ಪೈಪೋಟಿ

    ಮತ್ತೊಂದು ವಿಷ್ಣು ವಿಗ್ರಹ ಹಾಗೂ ಶಿವಲಿಂಗ ತೆಲಂಗಾಣ ಪಾಲಾಗಿವೆ. ಎರಡು ರಾಜ್ಯಗಳ ಗಡಿಯಲ್ಲಿ ಮೂರ್ತಿಗಳು ದೊರೆತ ಹಿನ್ನೆಲೆ ಪೈಪೋಟಿ ನಡೆದಿತ್ತು. ತೆಲಂಗಾಣದ ಭಕ್ತರು ತೆಗೆದುಕೊಂಡು ಹೋದ ವಿಷ್ಣು ವಿಗ್ರಹ ಹಾಗೂ ಶಿವಲಿಂಗ ಕುರಿತು ತೆಲಂಗಾಣದ ಅಧಿಕಾರಿಗಳು ಅಧ್ಯಯನ ನಡೆಸಿದ್ದಾರೆ. ವಿಗ್ರಹಗಳ ಸಂಪೂರ್ಣ ಪರಿಶೀಲನೆ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಅಂತ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಚುನಾವಣೆ ಮತ ಎಣಿಕೆ ಅಂತ್ಯ; ಇಮ್ರಾನ್ ಖಾನ್ ಮುನ್ನಡೆ, ನವಾಜ್ ಷರೀಫ್‌ಗೆ ಸೇನೆ ಬೆಂಬಲ

    ರಾಯಚೂರು ಜಿಲ್ಲೆಯ ದೇವಸುಗೂರು ಬಳಿಯ ಕೃಷ್ಣಾ ನದಿಯಲ್ಲಿ ಕಳೆದ ಐದು ದಿನಗಳ ಹಿಂದೆ ಎರಡು ವಿಷ್ಣು ಅವತಾರದ ವೆಂಕಟೇಶ್ವರ ಸ್ವಾಮಿ ಮೂರ್ತಿಗಳು ಹಾಗೂ ಶಿವಲಿಂಗ ಮೂರ್ತಿ ಪತ್ತೆಯಾಗಿತ್ತು. ವೆಂಕಟೇಶ್ವರನ ಮೂರ್ತಿಯೊಂದು ಅಯೋಧ್ಯೆ ಬಾಲಕರಾಮನ ವಿನ್ಯಾಸವನ್ನೇ ಹೋಲುವಂತಿತ್ತು. ನದಿಯಲ್ಲಿ ನೀರು ಬತ್ತಿದ್ದು, ಇದ್ದಷ್ಟೇ ನೀರಿನಲ್ಲಿ ಮೀನುಗಾರರು ಮೀನು ಹಿಡಿಯುತ್ತಿದ್ದ ವೇಳೆ ಮೂರ್ತಿಗಳು ಪತ್ತೆಯಾಗಿದ್ದವು. ಇದನ್ನೂ ಓದಿ: ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಗ್ಯಾಂಗ್‌ರೇಪ್ – ಇಬ್ಬರ ವಿರುದ್ಧ ದೂರು ದಾಖಲು

  • ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ

    ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ

    ಹಾಸನ: ಕುರಾನ್  (Quran) ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಇದನ್ನ ನಾನು ವರದಿಯಲ್ಲಿ ಕೊಡುತ್ತೇನೆ. ಕೈಪಿಡಿಯಲ್ಲಿ ಏನು ಹೇಳಿದೆ ಯಾರು ಏನೇನು ಮಾಡುತ್ತಿದ್ದಾರೆ, ಏನು ತಪ್ಪು ಆಗಿದೆ ಎನ್ನುವ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಇನ್ನು 2-3 ದಿನದಲ್ಲಿ ನಮ್ಮ ವರದಿಯನ್ನು ನೀಡುತ್ತೇವೆ ಎಂದು ಪುರಾತತ್ವ ಇಲಾಖೆಯ (Archaeology Department) ಹಿರಿಯ ಆಗಮ ಪಂಡಿತ್‌ ಜಿ.ಎ.ವಿಜಯ್ ಕುಮಾರ್ ಹೇಳಿದರು.

    ಜಿಲ್ಲೆಯ ಬೇಲೂರಿನ (Beluru) ಐತಿಹಾಸಿಕ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತರ ತಂಡ ದೇವಾಲಯಕ್ಕೆ (Temple) ಭೇಟಿ ನೀಡಿ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಥೋತ್ಸವದ ದಿನ ಯಾರ‍್ಯಾರು, ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು ವ್ಯತ್ಯಾಸ ಆಗಿದೆ. ಜನರಲ್ಲಿ ಏನು ಗೊಂದಲ ಆಗಿದೆ? ಅವುಗಳ ಪರಿಶೀಲನೆಗೆ ಮೇಲಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗಾಗಿ ಗುರುವಾರ ಭೇಟಿ ನೀಡಲಾಗಿದೆ. ದೇವಾಲಯದಲ್ಲಿ ಯಾರು, ಯಾವ ಸಂದರ್ಭದಲ್ಲಿ ಯಾವ ಕರ್ತವ್ಯ ಹೇಗೆ ಮಾಡಬೇಕು ಎಂದು ಕೈಪಿಡಿಯಲ್ಲಿದೆ. ಇದು ಮೈಸೂರು ಮಹಾರಾಜರ ಸಂಸ್ಥಾನದಿಂದ ಬಿಡುಗಡೆ ಆಗಿದೆ‌. ಅದರಂತೆ ಎಲ್ಲಾ ವಿಧಿವಿಧಾನ, ಪೂಜಾ, ಕೈಂಕರ್ಯ, ಕರ್ತವ್ಯ ನಡೆಯುತ್ತಿದೆ ಎಂದರು.

    ಸ್ವಲ್ಪ ವ್ಯತ್ಯಾಸ ಉಂಟಾಗಿ ಜನರಲ್ಲಿ ಗೊಂದಲ ಆಗಿದೆ. ಹಾಗಾಗಿ ನಾವು ಬಂದು ಆ ಗ್ರಂಥ ಪರಿಶೀಲನೆ ಮಾಡಿದ್ದೇವೆ. ವ್ಯವಸ್ಥಾಪನಾ ಸಮಿತಿ, ಆಡಳಿತ ಅಧಿಕಾರಿ, ಧಾರ್ಮಿಕ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಬಗ್ಗೆ ಇನ್ನೂ ಅನೇಕ ಗ್ರಂಥಗಳನ್ನು ಅಧ್ಯಯನ ಮಾಡಿ ಎಲ್ಲವನ್ನೂ ತಿಳಿದು ನಾನು ಹಿರಿಯ ಅಧಿಕಾರಿಗಳಿಗೆ ವರದಿ ಕೊಡಬೇಕಾಗುತ್ತದೆ. ಕೈಪಿಡಿಯಲ್ಲಿ ಏನಿದೆ ಅದನ್ನ ಮಾಡಬೇಕು, ಆಗಿರುವ ಲೋಪದೋಷ ಸರಿಪಡಿಸಿಕೊಳ್ಳಬೇಕು. ಕೈಪಿಡಿ ಪ್ರಕಾರ ಎಲ್ಲರೂ ಹಿಂದೂ ಧಾರ್ಮಿಕ ದತ್ತಿ ಕಾಯಿದೆ ಸೆಕ್ಷನ್ 58ರ ಪ್ರಕಾರ ದೇವಾಲಯದ ಸಂಪ್ರದಾಯ ನಡೆಸಿಕೊಂಡು ಹೋಗಬೇಕು ಎಂದಿದೆ‌. ಅದರಂತೆ ಸರ್ಕಾರ ಮುಂದಿನ ಕ್ರಮ ವಹಿಸುತ್ತದೆ ಎಂದು ಹೇಳಿದರು.

    ರಥದ ಮುಂದೆ ಕುರಾನ್ ಪಠಣ ಮಾಡಬೇಕು ಎಂದು ಎಲ್ಲಿಯು ಹೇಳಿಲ್ಲ. ನಾನು ಓದಿದ ಪ್ರಕಾರ ರಥದ ಮುಂದೆಯಾಗಲಿ, ದೇವಾಲಯದ ಮುಂದೆಯಾಗಲಿ ಮಾಡಬೇಕು ಎಂದು ಹೇಳಿಲ್ಲ. ಅವರಿಗೆ ಗೌರವ ಸಲ್ಲಿಸಬೇಕು, ಅವರು ನಮಸ್ಕರಿಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ಕೈಪಿಡಿ ಪ್ರತಿಯನ್ನು ಪಡೆಯಲಾಗಿದೆ. ಮುಂದೆ ಏನು ಮಾಡಬೇಕು ಎಂದು ಆಯುಕ್ತರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – 13 ಮಂದಿ ಸಾವು

    ಪ್ರತಿವರ್ಷ ರಥೋತ್ಸವದ ವೇಳೆ ಕುರಾನ್ ಪಠಣ ನಡೆಸಿ ನಂತರ ತೇರನ್ನು ಎಳೆಯುತ್ತಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವರ್ಷದಿಂದ ಕುರಾನ್ ಪಠಣ ಸಂಪ್ರದಾಯ ನಿಲ್ಲಿಸಬೇಕೆಂದು ಹಿಂದೂಪರ ಸಂಘಟನೆಗಳು ಹೋರಾಟ ಮಾಡಿದ್ದವು. ಹಿಂದೂಪರ ಸಂಘಟನೆಗಳ ಹೋರಾಟ ಹಿನ್ನೆಲೆಯಲ್ಲಿ ವಾಸ್ತವಾಂಶ ಅರಿಯಲು ಆಗಮಿಕರ ತಂಡ ಭೇಟಿ ನೀಡಿತ್ತು. ಏಪ್ರಿಲ್ 4 ಮತ್ತು 5ರಂದು ಚನ್ನಕೇಶವ ಸ್ವಾಮಿ ರಥೋತ್ಸವ ನಡೆಯಲಿದೆ. ಇದನ್ನೂ ಓದಿ: ಧಮ್ ಇದ್ರೆ ಡಿಕೆಶಿ ಮೀಸಲಾತಿ ನಿರ್ಧಾರವನ್ನು ವಾಪಸ್ ಪಡೆಯಲಿ – ಯತ್ನಾಳ್ ಸವಾಲ್