Tag: Archana Kottige

  • ಕ್ರಿಕೆಟರ್ ಶರತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಡಿಯರ್ ಸತ್ಯ’ ನಟಿ

    ಕ್ರಿಕೆಟರ್ ಶರತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಡಿಯರ್ ಸತ್ಯ’ ನಟಿ

    ಕ್ರಿಕೆಟರ್ ಶರತ್ ಬಿ.ಆರ್ (Sharath B.R) ಜೊತೆ ನಟಿ ಅರ್ಚನಾ ಕೊಟ್ಟಿಗೆ (Archana Kottige) ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ. ಈ ಮದುವೆ ಸಂಭ್ರಮಕ್ಕೆ ಸ್ಯಾಂಡಲ್‌ವುಡ್ ಕಲಾವಿದರು ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ: ಉಗ್ರರ ದಾಳಿ ಬಗ್ಗೆ ಸುದೀಪ್ ಕಿಡಿ

    ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಕ್ರಿಕೆಟರ್ ಶರತ್ ಬಿ.ಆರ್ ಜೊತೆ ಇಂದು (ಏ.23) ನಟಿ ಹಸೆಮಣೆ ಏರಿದ್ದಾರೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಈ ಮದುವೆ ಜರುಗಿದೆ. ಇದನ್ನೂ ಓದಿ:ಸ್ಟಾರ್ ಕ್ರಿಕೆಟರ್‌ನೊಂದಿಗೆ ಎಂಗೇಜ್ ಆದ ‘ಡಿಯರ್ ಸತ್ಯ’ ನಟಿ ಅರ್ಚನಾ

    ನಿನ್ನೆ (ಏ.22) ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಸಪ್ತಮಿ ಗೌಡ, ಸ್ವಾನಿ ಸುದೀಪ್, ಆಶಿಕಾ ರಂಗನಾಥ್, ಖುಷಿ ರವಿ, ಅಮೃತಾ ಅಯ್ಯಂಗಾರ್, ತೇಜಸ್ವಿನಿ ಶರ್ಮಾ, ಸಾನ್ಯ ಅಯ್ಯರ್, ಯುವ ರಾಜ್‌ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿ ಶುಭಕೋರಿದರು.

    ಕ್ರಿಕೆಟರ್ ಪ್ರಸಿದ್ಧ್ ಕೃಷ್ಣ, ವೈಶಾಖ್ ವಿಜಯ್ ಕುಮಾರ್, ದೇವದತ್ ಪಡಿಕ್ಕಲ್ ಅನೇಕರು ಭಾಗಿಯಾಗಿ ಸ್ನೇಹಿತ ಶರತ್ ಹಾಗೂ ಅರ್ಚನಾ ದಂಪತಿಗೆ ಶುಭಹಾರೈಸಿದರು.

    ಅಂದಹಾಗೆ, ಅರ್ಚನಾ ಅವರು ಡಿಯರ್ ಸತ್ಯ, ಎಲ್ರ ಕಾಲೆಳೆಯುತ್ತೆ ಕಾಲ, ಶಬರಿ, ಒಂದು ಅಲಂಕಾರ ವಿದ್ಯಾರ್ಥಿ, ಹೊಂದಿಸಿ ಬರೆಯಿರಿ ಸೇರಿದಂತೆ 8ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತ ಶರತ್ ಅವರು ಕರ್ನಾಟಕ ಕ್ರಿಕೆಟರ್ ಆಟಗಾರ. ಬ್ಯಾಟರ್ ಹಾಗೂ ವಿಕೆಟ್ ಕೀಪರ್ ಆಗಿ ಗುರುತಿಸಿಕೊಂಡಿದ್ದಾರೆ. 2019ರ ನವೆಂಬರ್‌ನಲ್ಲಿ ಬಾಂಗ್ಲಾದೇಶದ ನಡೆದ ಉದಯೋನ್ಮುಕ ತಂಡಗಳ ಏಷ್ಯಾ ಕಪ್‌ನಲ್ಲಿ ಅವರು ಭಾರತ ತಂಡದ ನಾಯಕನಾಗಿದ್ದರು. ಕಳೆದ ವರ್ಷದ ಐಪಿಎಲ್‌ನಲ್ಲಿ ಅವರು ಗುಜರಾತ್ ಟೈಟನ್ಸ್ ತಂಡದಲ್ಲಿದ್ದರು.

  • ಸ್ಟಾರ್ ಕ್ರಿಕೆಟರ್‌ನೊಂದಿಗೆ ಎಂಗೇಜ್ ಆದ ‘ಡಿಯರ್ ಸತ್ಯ’ ನಟಿ ಅರ್ಚನಾ

    ಸ್ಟಾರ್ ಕ್ರಿಕೆಟರ್‌ನೊಂದಿಗೆ ಎಂಗೇಜ್ ಆದ ‘ಡಿಯರ್ ಸತ್ಯ’ ನಟಿ ಅರ್ಚನಾ

    ‘ಡಿಯರ್ ಸತ್ಯ’ (Dear Sathya) ಸಿನಿಮಾ ಖ್ಯಾತಿಯ ಅರ್ಚನಾ ಕೊಟ್ಟಿಗೆ ಅವರು ಸ್ಟಾರ್ ಕ್ರಿಕೆಟರ್ ಶರತ್ ಬಿ.ಆರ್ (Sharath B.R) ಜೊತೆಗೆ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಕುಟುಂಬಸ್ಥರ ಸಮ್ಮುಖದಲ್ಲಿ ಕ್ರಿಕೆಟರ್ ಶರತ್ ಬಿ.ಆರ್ ಮತ್ತು ನಟಿ ಅರ್ಚನಾ (Archana Kottige) ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಇದೇ ಏ.23ರಂದು ಶರತ್ ಜೊತೆ ನಟಿ ಹಸೆಮಣೆ ಏರಲಿದ್ದಾರೆ. ಇದನ್ನೂ ಓದಿ:ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ

    ಕಾಲೇಜ್ ಸೀನಿಯರ್ ಆಗಿದ್ದ ಶರತ್‌ರನ್ನು ನಟಿ ವರ್ಷಗಳಿಂದ ಪ್ರೀತಿಸುತ್ತಿದ್ದರು. ಕುಟುಂಬಸ್ಥರು ಕೂಡ ಇಬ್ಬರ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ:ಕನ್ನಡಕ್ಕೆ ಬಂದ್ರು ಕುಡ್ಲದ ಬೆಡಗಿ- ಸುದೀಪ್‌ ಸಿನಿಮಾದಲ್ಲಿ ಪೂಜಾ ಹೆಗ್ಡೆ

    ಅರ್ಚನಾ ಅವರು ಡಿಯರ್ ಸತ್ಯ, ಎಲ್ರ ಕಾಲೆಳೆಯುತ್ತೆ ಕಾಲ, ಶಬರಿ, ಒಂದು ಅಲಂಕಾರ ವಿದ್ಯಾರ್ಥಿ, ಹೊಂದಿಸಿ ಬರೆಯಿರಿ ಸೇರಿದಂತೆ 8ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತ ಶರತ್ ಅವರು ಕರ್ನಾಟಕ ಕ್ರಿಕೆಟರ್ ಆಟಗಾರ. ಬ್ಯಾಟರ್ ಹಾಗೂ ವಿಕೆಟ್ ಕೀಪರ್ ಆಗಿ ಗುರುತಿಸಿಕೊಂಡಿದ್ದಾರೆ. 2019ರ ನವೆಂಬರ್‌ನಲ್ಲಿ ಬಾಂಗ್ಲಾದೇಶದ ನಡೆದ ಉದಯೋನ್ಮುಕ ತಂಡಗಳ ಏಷ್ಯಾ ಕಪ್‌ನಲ್ಲಿ ಅವರು ಭಾರತ ತಂಡದ ನಾಯಕನಾಗಿದ್ದರು. ಕಳೆದ ವರ್ಷದ ಐಪಿಎಲ್‌ನಲ್ಲಿ ಅವರು ಗುಜರಾತ್ ಟೈಟನ್ಸ್ ತಂಡದಲ್ಲಿದ್ದರು.

  • ‘ಗಾಳಿಗುಡ್ಡ’ ಚಿತ್ರತಂಡ ಸೇರಿಕೊಂಡ ದರ್ಶಕ್‌, ಅರ್ಚನಾ ಕೊಟ್ಟಿಗೆ, ಯಶ್‌ವಂತ್

    ‘ಗಾಳಿಗುಡ್ಡ’ ಚಿತ್ರತಂಡ ಸೇರಿಕೊಂಡ ದರ್ಶಕ್‌, ಅರ್ಚನಾ ಕೊಟ್ಟಿಗೆ, ಯಶ್‌ವಂತ್

    ಸಿನಿಮಾ ಎಂಬ ಸುಂದರ ಲೋಕ ಎಂಥವರನ್ನು ಸೆಳೆದು ಬಿಡುತ್ತದೆ. ಎಷ್ಟೋ ಜನ ತಮಗಿರುವ ಫ್ಯಾಷನ್‌ಗೋಸ್ಕರ ಇಂಡಸ್ಟ್ರಿಗೆ ಬಂದರೆ ಇನ್ನು ಎಷ್ಟೋ ಜನ ತಮ್ಮ ಪ್ರತಿಭೆಯ ಅನಾವರಣಕ್ಕೋಸ್ಕರ ಕಾಲಿಡುತ್ತಾರೆ. ಇಲ್ಲಿ ನಿರ್ದೇಶಕರಿಗೆ ಪ್ರತಿಭೆ ಇರಬೇಕು. ನಿರ್ಮಾಪಕರಿಗೆ ಸಿನಿಮಾ ಮೇಲೆ ಜವಾಬ್ದಾರಿ ಇರಬೇಕು. ಆಗ ಮಾತ್ರ ಅದ್ಭುತವಾದೊಂದು ಸಿನಿಮಾ ಸೆಟ್ಟೇರುವುದಕ್ಕೆ ಸಾಧ್ಯ. ಇಷ್ಟೆಲ್ಲಾ ಪೀಠಿಕೆ ಹಾಕುವುದಕ್ಕೆ ಕಾರಣ ‘ಗಾಳಿಗುಡ್ಡ’ ಸಿನಿಮಾ. ಇದನ್ನೂ ಓದಿ:ಹೊಸ ಹೇರ್ ಸ್ಟೈಲಿನಲ್ಲಿ ಮಿಂಚಿದ ದುನಿಯಾ ವಿಜಯ್ ಪುತ್ರಿ

    ಇತ್ತಿಚೆಗಷ್ಟೇ ‘ಗಾಳಿಗುಡ್ಡ’ (Galigudda Film) ಸಿನಿಮಾ ಮುಹುರ್ತ ಕಂಡಿದೆ. ನಾಗರಭಾವಿ ಹನುಮಗಿರಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದೆ. ಈ ಸಿನಿಮಾಕ್ಕೆ ರಘು ಅಥರ್ವ ಎಂಬುವವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನಕ್ಕೆ ಹೊಸಬರೇ ಆದರೂ ಪ್ರತಿಭೆ ಉಳ್ಳವರು. ನಿರ್ದೇಶನದ ಕನಸು ಹೊತ್ತ ರಘು ಅಥರ್ವ ಅದಕ್ಕೆಂದೆ ಒಂದಷ್ಟು ತಯಾರಿ, ತರಬೇತಿಗಳನ್ನು ಮಾಡಿಕೊಂಡು ಒಂದೊಳ್ಳೆಯ ಚಿತ್ರಕ್ಕೆ ನಿರ್ದೇಶನ ಮಾಡಲು ರೆಡಿಯಾಗಿದ್ದಾರೆ.

    ಈ ಸಿನಿಮಾಗೆ ರಘು ಪವನ್ ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾ ಮೇಲಿನ ಆಸಕ್ತಿ ಇಂದು ನಿರ್ಮಾಣಕ್ಕೆ ಕರೆದು ನಿಲ್ಲಿಸಿದೆ. ರಘು ಪವನ್ ಒಬ್ಬ ಪ್ಯಾಷನೇಟ್ ನಿರ್ಮಾಪಕ ಎಂಬುದೇ ಇಡೀ ಚಿತ್ರತಂಡದ ಖುಷಿಗೆ ಕಾರಣವಾಗಿದೆ. ಸಿನಿಮಾ ಮೇಲೆ ಪ್ಯಾಷನ್ ನಿರ್ಮಾಪಕನಿಗಿದ್ದರೆ ಆ ಸಿನಿಮಾದಲ್ಲಿ ಯಾವುದಕ್ಕೂ ಕೊರತೆ ಇರುವುದಿಲ್ಲ. ತಂತ್ರಜ್ಞರು, ಕಲಾವಿದರು ಖುಷಿ ಖುಷಿಯಾಗಿ ಸಿನಿಮಾ ಮುಗಿಸುತ್ತಾರೆ. ರಘು ಪವನ್ ಕೂಡ ಅದೇ ರೀತಿ ಇರುವವರು. ಇದನ್ನೂ ಓದಿ:ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ವಿಜಯ್ ದೇವರಕೊಂಡ

    ಮುಹೂರ್ತ ಮುಗಿಸಿಕೊಂಡಿರುವ ‘ಗಾಳಿಗುಡ್ಡ’ ಸಿನಿಮಾ ಕಳಸ, ಕುದರೆಮುಖ, ಚಿಕ್ಕಮಗಳೂರು ಮುಂತಾದ ಜಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ಮಾಡಿದೆ. ಎಲ್ಲಾ ಅಂದುಕೊಂಡಂತೆ ಆದರೆ 2025 ಬೇಸಿಗೆಗೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

    ಮಲ್ಯಾಳಮ್ ಸಂಗೀತ ನಿರ್ದೇಶಕ ರಾಹುಲ್ ಸುಬ್ರಮಣ್ಯನ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶಾಖಾಹಾರಿ ಖ್ಯಾತಿಯ ವಿಶ್ವಜಿತ್ ರಾವ್ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದಾರೆ.

    ಉಳಿದಂತೆ‌ ‘ಗೌರಿ ಶಂಕರ’ ಖ್ಯಾತಿಯ ಯಶ್ವಂತ್ ಬೆಟ್ಟಸ್ವಾಮಿ, ದರ್ಶಕ್, ಅರ್ಚನಾ ಕೊಟ್ಟಿಗೆ (Archana Kottige), ಮಂಜುನಾಥ್ ಹೆಗ್ಡೆ, ದೀಪಕ್ ರೈ, ಶ್ರೀವತ್ಸ, ಸಂದ್ಯಾ, ರೇಖಾ ಕೂಡ್ಲಿಗೆ ಸೇರಿದಂತೆ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿದೆ.

  • ಸಾಲು ಸಾಲು ಸಿನಿಮಾ ಸಂಭ್ರಮದಲ್ಲಿ ನಟಿ ಅರ್ಚನಾ ಕೊಟ್ಟಿಗೆ

    ಸಾಲು ಸಾಲು ಸಿನಿಮಾ ಸಂಭ್ರಮದಲ್ಲಿ ನಟಿ ಅರ್ಚನಾ ಕೊಟ್ಟಿಗೆ

    ಟಿ ಅರ್ಚನಾ ಕೊಟ್ಟಿಗೆ (Archana Kottige) ಸಿನಿಮಾ ರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದ (Sandalwood) ಮಟ್ಟಿಗೆ ಇವರು ಭಿನ್ನ ಆಲೋಚನೆಯ ನಟಿ ಅನ್ನೋದರಲ್ಲಿ ಎರಡು ಮಾತಿಲ್ಲ. ಯಾಕೆಂದರೆ, ಅವರಿಗೆ ನಾಯಕಿಯಾಗಿಯೇ ಫೇಮಸ್ ಆಗಬೇಕೆಂಬ ಉದ್ದೇಶವಿಲ್ಲವಂತೆ.

    ಪಾತ್ರ ಯಾವುದಾದರೂ ಅದು ಸವಾಲಿನದ್ದಾಗಿರಬೇಕು, ಪ್ರೇಕ್ಷಕರ ಮನಸಲ್ಲಿ ಅಚ್ಚಳಿಯದೇ ಛಾಪು ಮೂಡಿಸಬೇಕು ಅಂತಾರೆ ಅರ್ಚನಾ. ತಮ್ಮ ಆಲೋಚನೆಯಂತೆಯೇ ಈಗಾಗಲೇ ಸಾಕಷ್ಟು ಅವಕಾಶಗಳು ಸಿಕ್ಕಿದ್ದು, ಇನ್ನೇನು ಅವರು ಅಭಿನಯಿಸಿರುವ ಚಿತ್ರಗಳೆಲ್ಲ ಸಾಲು ಸಾಲಾಗಿ ಬಿಡುಗಡೆಯ ಸರತಿಯಲ್ಲಿವೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಇತ್ತೀಚೆಗೆ ಹೇಗಾಗಿದೆಯೆಂದರೆ, ಬಿಡುಗಡೆಯಾಗೋ ಸಿನಿಮಾಗಳಲ್ಲೆಲ್ಲ ಅರ್ಚನಾ ಇರುವಿಕೆಯೇ ದಟ್ಟವಾಗಿ ಕಾಣಿಸುತ್ತಿದೆ. ವಾರಗಳ ಹಿಂದೆಯಷ್ಟೇ ಬಿಡುಗಡೆಗೊಂಡು, ಇದೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಚಿತ್ರ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ (Hostel Hudugaru). ಅದರಲ್ಲಿಯೂ ಅರ್ಚನಾ ಕೊಟ್ಟಿಗೆ ಒಂದೊಳ್ಳೆ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅದಕ್ಕೆ ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಕೂಡ ಕೇಳಿ ಬರುತ್ತಿವೆ. ಇದರ ಬೆನ್ನಲ್ಲಿಯೇ ಅರ್ಚನಾ ನಟಿಸಿರುವ ಮತ್ತೊಂದಷ್ಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

    ಬಯಲು ಸೀಮೆ, ಎಲ್ಲರ ಕಾಲೆಳೆಯುತ್ತೆ ಕಾಲ, ಜುಗಲ್ಬಂದಿ ಮುಂತಾದ ಚಿತ್ರಗಳೀಗ ಬಿಡುಗಡೆಯ ಹೊಸ್ತಿಲಿನಲ್ಲಿವೆ. ಈ ಎಲ್ಲ ಚಿತ್ರಗಳಲ್ಲಿ ಒಂದಕ್ಕಿಂತ ಒಂದು ವಿಶೇಷ ಪಾತ್ರಗಳಲ್ಲಿ ಅರ್ಚನಾ ನಟಿಸಿದ್ದಾರಂತೆ. ಜುಗಲ್ಬಂದಿ ಚಿತ್ರದಲ್ಲಿ ಅರ್ಚನಾ ನೆಗೆಟಿವ್ ಶೇಡ್ ಪಾತ್ರದಲ್ಲಿ ನಟಿಸಿದ್ದರೆ, ಬಯಲು ಸೀಮೆ ಚಿತ್ರದಲ್ಲಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲರ ಕಾಲೆಳೆಯುತ್ತೆ ಕಾಲ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಇಲ್ಲಿ ಅರ್ಚನಾ ಹಳ್ಳಿ ಸೀಮೆಯ ಬಜಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲ ಚಿತ್ರಗಳೂ ಸಾಲು ಸಾಲಾಗಿ ಬಿಡುಗಡೆಗೊಳ್ಳಲು ಸಜ್ಜಾಗಿವೆ.

    2018ರಲ್ಲಿ ‘ಅರಣ್ಯಕಾಂಡ’ ಚಿತ್ರದ ಮೂಲಕ ನಟಿಯಾಗಿ ಎಂಟ್ರಿ ಕೊಟ್ಟವರು ಅರ್ಚನಾ ಕೊಟ್ಟಿಗೆ. ಆ ನಂತರ ವಾಸು ನಾನ್ ಪಕ್ಕಾ ಕಮರ್ಷಿಯಲ್, ಮೇಡ್ ಇನ್ ಬೆಂಗಳೂರು, ಡಿಯರ್ ಸತ್ಯಾ, ಕಟಿಂಗ್ ಶಾಪ್, ಹೊಂದಿಸಿ ಬರೆಯಿರಿ, ಪ್ಯಾನ್ ಇಂಡಿಯಾ ಚಿತ್ರವಾದ ವಿಜಯಾನಂದ ಮುಂತಾದವುಗಳಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ.

     

    ಹೀಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅರ್ಚನಾಗೆ ಒಳ್ಳೆ ನಟಿ ಅನ್ನಿಸಿಕೊಳ್ಳುವ ಹೆಬ್ಬಯಕೆ ಇದೆ. ಇದೀಗ ಮತ್ತೊಂದಷ್ಟು ಅವಕಾಶಗಳೂ ಅವರನ್ನರಸಿ ಬರುತ್ತಿವೆ. ಸದ್ಯ ಒಂದು ಸಿನಿಮಾದಲ್ಲಿ ಬ್ಯುಸಿಯಾಗಿರೋ ಅರ್ಚನಾ, ಆ ಬಗೆಗಿನ ಮಾಹಿತಿಗಳನ್ನು ಸದ್ಯದಲ್ಲಿಯೇ ಪ್ರೇಕ್ಷಕರ ಮುಂದಿಡಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂತಾರ ಖ್ಯಾತಿಯ ನಟಿಯ  ‘ಜುಗಲ್ ಬಂದಿ’ ಟ್ರೇಲರ್ ರಿಲೀಸ್

    ಕಾಂತಾರ ಖ್ಯಾತಿಯ ನಟಿಯ ‘ಜುಗಲ್ ಬಂದಿ’ ಟ್ರೇಲರ್ ರಿಲೀಸ್

    ಹೊಸಬರ ವಿನೂತನ ಪ್ರಯತ್ನವಿರುವ ‘ಜುಗಲ್ ಬಂದಿ’ (Jugal Bandi) ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ದಿವಾಕರ ಡಿಂಡಿಮ (Diwakar Dindama) ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಫಸ್ಟ್ ಲುಕ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಹೆಜ್ಜೆ ಇಡಲಿದ್ದು, ಅದಕ್ಕೂ ಮುನ್ನ ಟ್ರೇಲರ್ ಮೂಲಕ ಸಿನಿಮಾಗೆ ಆಮಂತ್ರಣ ನೀಡಿದೆ ಚಿತ್ರತಂಡ.

    ಡಿಂಡಿಮ ಪ್ರೊಡಕ್ಷನ್ಸ್ ನಡಿ ನಿರ್ಮಾಣವಾದ ಈ ಚಿತ್ರ ಹಲವು ಕಥೆಗಳ ಜುಗಲ್ ಬಂದಿ. ತಾಯಿ ಹೃದಯದ ಮಿಡಿತ, ಪ್ರೀತಿ, ವಂಚನೆ ಒಳಗೊಂಡ ಟ್ರೇಲರ್ ತುಣುಕು ಕೂಡ ಅದರ ಝಲಕ್ ಕಟ್ಟಿಕೊಟ್ಟಿದೆ.  ಚಿತ್ರದಲ್ಲಿ ಕಾಂತಾರ ಖ್ಯಾತಿಯ ಮಾನಸಿ ಸುಧೀರ್ (Manasi Sudhir), ಅರ್ಚನಾ ಕೊಟ್ಟಿಗೆ (Archana Kottige), ಅಶ್ವಿನ್ ರಾವ್ ಪಲ್ಲಕ್ಕಿ, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಒಳಗೊಂಡ ಮುಖ್ಯ ಭೂಮಿಕೆಯಿದೆ. ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್, ಅರವಿಂದ್ ರಾವ್ ಒಳಗೊಂಡ ತಾರಾಬಳಗ ‘ಜುಗಲ್ ಬಂದಿ’ ಸಿನಿಮಾದಲ್ಲಿದೆ. ಇದನ್ನೂ ಓದಿ: ತೆರೆಗೆ ಅಪ್ಪಳಿಸಲು ಸಜ್ಜಾದ ರಕ್ಷಿತ್‌ ನಟನೆಯ `ಸಪ್ತಸಾಗರದಾಚೆ ಎಲ್ಲೋ’ ಚಿತ್ರ

    ದಿವಾಕರ ಡಿಂಡಿಮ ನಿರ್ದೇಶನದ ಜೊತೆಗೆ ಡಿಂಡಿಮ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಪ್ರದ್ಯೋತ್ತನ್ ಸಂಗೀತ ನಿರ್ದೇಶನ, ಪ್ರಸಾದ್ ಹೆಚ್ ಎಂ ಸಂಕಲನ ಚಿತ್ರಕ್ಕಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರೂ ಹಾಡುಗಳಿಗೆ ನಿರ್ದೇಶಕ ದಿವಾಕರ್ ಡಿಂಡಿಮ ಸಾಹಿತ್ಯ ಬರೆದಿದ್ದಾರೆ.

  • ವಿಭಿನ್ನ ಕಥಾಹಂದರದ ‘ಯೆಲ್ಲೋ ಗ್ಯಾಂಗ್ಸ್’ ಸಿನಿಮಾ ಟ್ರೇಲರ್ ಬಿಡುಗಡೆ

    ವಿಭಿನ್ನ ಕಥಾಹಂದರದ ‘ಯೆಲ್ಲೋ ಗ್ಯಾಂಗ್ಸ್’ ಸಿನಿಮಾ ಟ್ರೇಲರ್ ಬಿಡುಗಡೆ

    ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಯೆಲ್ಲೋ ಗ್ಯಾಂಗ್ಸ್” (Yellow Gangs) ಚಿತ್ರದ ಟ್ರೇಲರ್ (Trailer) ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಬೇರೊಂದು ಉದ್ಯೋಗ ಮಾಡುತ್ತಿದ್ದ ನನ್ನನ್ನು ಚಿತ್ರರಂಗ ಆಕರ್ಷಿಸಿತ್ತು. ಮೊದಲ ಪ್ರಯತ್ನವಾಗಿ ಈ ಚಿತ್ರ ನಿರ್ದೇಶಿಸಿದ್ದೇನೆ. ಕನ್ನಡದಲ್ಲಿ ಕ್ರೈಮ್ ಥ್ರಿಲ್ಲರ್ ಚಿತ್ರಗಳು ಬಂದಿದೆಯಾದರೂ, ಇದು ಸ್ವಲ್ಪ ಭಿನ್ನ. ನಾಯಕ ದೇವ್ ದೇವಯ್ಯ (Dev Deviah), ನಾಯಕಿ ಅರ್ಚನಾ ಕೊಟ್ಟಿಗೆ (Archana Kottige) ಸೇರಿದಂತೆ ಹತ್ತೊಂಬತ್ತು ಪ್ರಮುಖ ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಎಲ್ಲಾ ಪಾತ್ರಗಳ ಮೇಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ. ಮೂರು ಗ್ಯಾಂಗ್ ಗಳಿದ್ದು, ಅದಕ್ಕೆ ಮೂರು ಜನ ಮುಖ್ಯಸ್ಥರಿರುತ್ತಾರೆ. ಸುಜ್ಞಾನ್ ಅವರ ಸುಂದರ ಛಾಯಾಗ್ರಹಣ ಹಾಗೂ ರೋಹಿತ್ ಸೋವರ್ ಅವರ ಸಂಗೀತ ನಿರ್ದೇಶನ ಈ ಚಿತ್ರದ ಹೈಲೆಟ್. ಇಡೀ ಚಿತ್ರವನ್ನು ಟ್ರ್ಯಾಲಿ ಬಳಸದೆ , ಕೈಯಲ್ಲಿ ಕ್ಯಾಮೆರಾ ಹಿಡಿದು ಚಿತ್ರಿಸಿರುವುದು ವಿಶೇಷ. ಇಂತಹ ಹಲವು ವಿಶೇಷಗಳ ಸಂಗಮವಾಗಿರುವ ನಮ್ಮ “ಯೆಲ್ಲೋ ಗ್ಯಾಂಗ್ಸ್” ಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ದೇಶಕ ರವೀಂದ್ರ ಪರಮೇಶ್ವರಪ್ಪ.

    ವಿಭಿನ್ನ ಸ್ಟುಡಿಯೋಸ್, ವಾಟ್ ನೆಕ್ಸ್ಟ್ ಮೂವೀಸ್ ಹಾಗೂ ಕೀ ಲೈಟ್ಸ್ ಸಂಸ್ಥೆ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಶಿವಮೊಗ್ಗದ ನವೋದಯ ಶಾಲೆಯಲ್ಲಿ ಓದಿರುವ ಸಾಕಷ್ಟು ವಿದ್ಯಾರ್ಥಿಗಳು ಈ ಚಿತ್ರಕ್ಕೆ ಹಣ ಹೂಡಿದ್ದೇವೆ. ಏಕೆಂದರೆ ನಿರ್ದೇಶಕ ರವೀಂದ್ರ ನಮ್ಮ ಸಹಪಾಠಿ. ಮೊದಲಿನಿಂದಲೂ ಅವರ ಯೋಚನೆ ವಿಭಿನ್ನವಾಗಿರುವುದರಿಂದ ನಮ್ಮ ಸಂಸ್ಥೆಗೆ ವಿಭಿನ್ನ ಸ್ಟುಡಿಯೋಸ್ ಎಂದು ಹೆಸರಿಟ್ಟಿದ್ದೇವೆ ಎಂದರು ನಿರಂಜನ್.

    ವಿಕ್ರಮ್ ಎಂಬ ಹೆಸರಿನಿಂದ ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ಅಭಿನಯಿಸಿರುವುದಾಗಿ ನಾಯಕ ದೇವ್ ದೇವಯ್ಯ ಹೇಳಿದರು. ನನಗೆ ಇದೊಂದು ಉತ್ತಮ ಚಿತ್ರವೆಂದರು ನಾಯಕಿ ಅರ್ಚನಾ ಕೊಟ್ಟಿಗೆ. ಚಿತ್ರದಲ್ಲಿ ನಟಿಸಿರುವ ಸತ್ಯ ಬಿ.ಜಿ, ಅರುಣ್ ಕುಮಾರ್, ನಾಟ್ಯ ರಂಗ, ವಿನೀತ್ ಕಟ್ಟಿ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಹಾಡುಗಳಿಲ್ಲ. ರೀರೇಕಾರ್ಡಿಂಗ್ ಚಿತ್ರದ ಹೈಲೆಟ್ ಎಂದರು ಸಂಗೀತ ನಿರ್ದೇಶಕ ರೋಹಿತ್. ಸಹ ನಿರ್ಮಾಪಕ ಮನೋಜ್ ಪಿ ಅವರ ಪುತ್ರಿ ಪ್ರತೀಕ್ಷ ಟ್ರೇಲರ್ ಬಿಡುಗಡೆ ಮಾಡಿದರು. ನಿರ್ದೇಶಕರೊಟ್ಟಿಗೆ ಸಂಭಾಷಣೆ ಬರೆದಿರುವ ಪ್ರವೀಣ್ ಕುಮಾರ್ ಅಚ್ಚುಕಟ್ಟಾಗಿ ಸಮಾರಂಭ ನಡೆಸಿಕೊಟ್ಟರು.

    Live Tv
    [brid partner=56869869 player=32851 video=960834 autoplay=true]