ಶಿವಮೊಗ್ಗ: ಜ್ಞಾನೇಂದ್ರ ಅವರು ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವರಾಗಿದ್ದು, ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಲ್ಲ ಎಂದು ಮಾಜಿ ಸಚಿವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಗೃಹ ಸಚಿವರಾದಾಗ ನಾನು ಸಹ ಅವರಿಗೆ ಶುಭ ಹಾರೈಸಿದ್ದೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ, ಸಮರ್ಥರಿದ್ದಾರೆ ಅಂದುಕೊಂಡಿದ್ದೆ. ಆದರೆ ಅವರು ನೀಡಬೇಕಾದ ಹೇಳಿಕೆಯನ್ನು ಮುಖ್ಯಮಂತ್ರಿಗಳು, ಸಚಿವ ಸುಧಾಕರ್ ಅವರು ನೀಡುತ್ತಿದ್ದಾರೆ. ಗೃಹ ಸಚಿವರಾದ ಬಳಿಕ ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಎಲ್ಲರೂ ಗೃಹ ಸಚಿವರಾಗಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿನಾ: ಕಾರಣ ಕ್ರಿಮಿನಲ್ ಕೇಸ್ ಹಾಕಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳನ್ನು ಹೆದರಿಸಿಕೊಂಡು ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
– ಕುಸಿದು ಬಿದ್ದ ಸಿಬ್ಬಂದಿ, ಮಾನವೀಯತೆ ಮೆರೆದ ಚಿಕ್ಕಮಗಳೂರು ಎಸ್ಪಿ
ಚಿಕ್ಕಮಗಳೂರು: 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶಂಸಿದ್ದಾರೆ.
ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ 5ನೇ ತಂಡ ತರಬೇತಿ ಪಡೆದು ನಿರ್ಗಮಿತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಜೊತೆ ಮೈಸೂರಿನ ಗ್ಯಾಂಗ್ ರೇಪ್ ವಿಚಾರವಾಗಿ ಮಾತನಾಡಿದ್ದು, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಯಾವ ಸಾಕ್ಷಿಗಳು ಇಲ್ಲ. ತೊಂದರೆಗೊಳಗಾದವರು ಹೇಳಿಕೆ ನೀಡಿಲ್ಲ. ಆದರೂ ನಮ್ಮ ಪೊಲೀಸರು ಪ್ರಕರಣವನ್ನು ಹೇಗೆ ಭೇದಿಸುತ್ತಾರೆ ಎಂದು ಅನ್ನಿಸಿತ್ತು. ಮಂತ್ರಿಯಾಗಿ ನಾನೇ ಕುತೂಹಲದಿಂದ ವೀಕ್ಷಿಸುತ್ತಿದ್ದೆ. ನಮ್ಮ ಪೊಲೀಸರು 85 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಆಗ ನನ್ನ ಹೃದಯ ತುಂಬಿ ಬಂತು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ನಮ್ಮ ಪೊಲೀಸರ ಇಮೇಜ್ ಜಾಸ್ತಿಯಾಯ್ತು. ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಬಿಗಿಯಾಗಿದೆ. ವೈಜ್ಞಾನಿಕವಾಗಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವ ಎಲ್ಲಾ ಕಲೆ ನಮ್ಮ ಪೊಲಿಸರಿಗೆ ಕರಗತವಾಗಿದೆ. ನಮ್ಮ ಸೇನಾ ಪಡೆ ಜಗತ್ತಿನ ಅತ್ಯಂತ ಮೂರನೇ ದೊಡ್ಡ ಪಡೆ. ಜಗತ್ತಿನಲ್ಲಿ ನಮ್ಮ ಪೊಲೀಸ್ ಪಡೆಗೆ ಒಳ್ಳೆಯ ಹೆಸರಿದೆ. ಅದರಲ್ಲೂ ನಮ್ಮ ಕರ್ನಾಟಕದ ಪೊಲೀಸರಿಗೆ ಇದೆ ಎಂದು ತರಬೇತಿ ಪಡೆದ ನೂತನ ನಿರ್ಗಮಿತ ಪೊಲೀಸರಿಗೆ ಹುರಿದುಂಬಿಸಿದ್ದಾರೆ.ಇದನ್ನೂ ಓದಿ:KSRTC ಬಸ್ ತಡೆದು ವಿದ್ಯಾರ್ಥಿಗಳು, ಜನರಿಂದ ಪ್ರತಿಭಟನೆ
ಮೈಸೂರು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಅವರಿಗೆ ಶಿಕ್ಷೆ ಆಗುವಂತೆ ನಮ್ಮ ಪೊಲೀಸರು ವಿಶೇಷ ಶ್ರಮ ವಹಿಸಿದ್ದಾರೆ. ಸರ್ಕಾರ ಕೂಡ ಅದರ ಬಗ್ಗೆ ವಿಶೇಷವಾದ ಆದ್ಯತೆ ನೀಡಿದೆ. ಮೈಸೂರಿನ ಎರಡೂ ಪ್ರಕರಣಗಳನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಎಲ್ಲಾ ಪೊಲೀಸ್ ತಂಡಕ್ಕೆ ನನ್ನ ಕೃತಜ್ಞತೆ ಎಂದು ಪ್ರಶಂಸಿದ್ದಾರೆ.
ಯಾರು ಅಪರಾಧ ಮಾಡುತ್ತಾರೋ ಅವರಿಗೆ ದೊಡ್ಡ ಸಂದೇಶ ಹೋಗಿದೆ. ಏನಾದರೂ ಮಾಡಿ ಹೇಗಾದರೂ ಬಚಾವ್ ಆಗಬಹುದು ಅನ್ನೋದು ಆಗಲ್ಲ. ಪೊಲೀಸರು ಅದರ ಹಿಂದೆ ಬೀಳುತ್ತಾರೆ. ಅದನ್ನು ಯಶಸ್ವಿಯಾಗಿ ಭೇದಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್
ಸಂತ್ರಸ್ತೆ ಈಗ ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಇಂತಹಾ ಸಮಯದಲ್ಲಿ ಹೆಚ್ಚು ಒತ್ತಡ ಹಾಕುವುದು ಸರಿಯಲ್ಲ. ನಮ್ಮ ಮಹಿಳಾ ಪೊಲೀಸ್ ಅಧಿಕಾರಿಗಳು ವಿಶೇಷ ಪ್ರಯತ್ನ ಮಾಡಿದರು. ಸ್ವಲ್ಪ ಸಮಯದ ನಂತರ ಹೇಳಬಹುದು. ಮಣಿಪಾಲ್ ಘಟನೆಯಲ್ಲಿ ಹೇಳಿಕೆ ಕೊಡುವುದಿಲ್ಲ ಎಂದವರು ಮೂರು ತಿಂಗಳ ಬಳಿಕ ಹೇಳಿಕೆ ನೀಡಿದ್ದರು. ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜ್ಞಾನೇಂದ್ರ ಅವರು ಭಾಷಣ ಮಾಡುವ ವೇಳೆ ವೇದಿಕೆ ಮುಂಭಾಗ ಎಡ ಹಾಗೂ ಬಲಭಾಗದಲ್ಲಿ ನಿಂತಿದ್ದ ಪೊಲೀಸರಲ್ಲಿ ಮೈಸೂರಿನ ಅಶ್ವದಳದ ಮೈಲುದ್ದೀನ್ ಎಂಬ ಸಿಬ್ಬಂದಿ ಬಿಸಿಲಿಗೆ ತಲೆಸುತ್ತು ಬಂದು ಬಿದ್ದರು. ಕೂಡಲೇ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ವೇದಿಕೆ ಮೇಲಿಂದ ಎದ್ದು ಬಂದು ಸಿಬ್ಬಂದಿಯನ್ನು ಎತ್ತಿ ನೀರು ಕುಡಿಸಿ ಆಂಬುಲೆನ್ಸ್ ಗೆ ಕಾಲ್ ಮಾಡಿದ್ದಾರೆ. ಸ್ವತಃ ಎಸ್ಪಿಯೇ ಆ ಸಿಬ್ಬಂದಿಯನ್ನು ಎತ್ತಿಕೊಂಡು ಹೋಗಿ ಆಂಬುಲೆನ್ಸ್ ನಲ್ಲಿ ಕೂರಿಸಿದರು. ಅಲ್ಲಿವರೆಗೆ ಜ್ಞಾನೇಂದ್ರ ಅವರು ಕೂಡ ಮಾತು ನಿಲ್ಲಿಸಿದ್ದರು..ಇದನ್ನೂ ಓದಿ:ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ನೀಡಿದ ಎನ್.ಆರ್.ರಮೇಶ್
ಬೆಳಗಾವಿ: ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನ ಗ್ಯಾಂಗ್ರೇಪ್ ಆರೋಪಿಗಳ ಬಂಧನ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದೆ ಈ ರೀತಿ ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಯಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ
ಒಂದೊಂದು ಪೊಲೀಸ್ ಠಾಣೆಯಲ್ಲಿ ಹತ್ತತ್ತು ಸಿಬ್ಬಂದಿ ಕೊರತೆ ಇದೆ. ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಯಾರಿಗೆ ಏನೇ ಆದರೂ ಪೊಲೀಸರು ಬರಲೇಬೇಕು. ಅವರು ಬೆಳಗ್ಗೆಯಿಂದ ರಾತ್ರಿಯವರೆಗೂ ಒತ್ತಡದಲ್ಲಿ ಕೆಲಸ ಮಾಡ್ತಾರೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಸಮಗ್ರ ಬದಲಾವಣೆ ಆಗಬೇಕು ಎಂದು ಪೊಲೀಸರ ಪರವಾಗಿ ನಿಂತಿದ್ದಾರೆ.ಇದನ್ನೂ ಓದಿ:ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಶವವಾಗಿ ಪತ್ತೆ
ನಮ್ಮಲ್ಲಿ ಯಾವುದೇ ಹೊಸ ತಂತ್ರಜ್ಞಾನವಿಲ್ಲ, ನಾವು ಇನ್ನೂ ಹಳೆಯ ವ್ಯವಸ್ಥೆಯಲ್ಲಿ ಇದ್ದೇವೆ. ಸಮಗ್ರವಾಗಿ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ಹೊಯ್ಸಳ ಹೋಯ್ತು, ಗರುಡ ಹೋಯ್ತು ಈಗ 112 ಟೀಮ್ ಬಂದಿದೆ. ವಾಹನ ಬದಲಾಗುವುದು ಮಾತ್ರವಲ್ಲ ವ್ಯವಸ್ಥೆಯೂ ಬದಲಾಗಬೇಕು. ಎಲ್ಲ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಆಗಬೇಕು ಎಂದು ಸಿಎಂಗೆ ಆಗ್ರಹಿಸಿದ್ದಾರೆ.
ಗೃಹಸಚಿವ ಅರಗ ಜ್ಞಾನೇಂದ್ರ ರೇಪ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಹಿಂದಿನಿಂದಲೂ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಇನ್ನೇನು ಮಾಡೋದು ಅವರ ಹಣೆಬರಹ ಅಷ್ಟೇ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅದರ ಬಗ್ಗೆ ಏನೇನೋ ಹೇಳಿಕೊಳ್ಳುತ್ತಾರೆ. ಮಂತ್ರಿಗಳ ಈ ರೀತಿ ಹೇಳಿಕೆಯಿಂದ ಅವರಿಗೆ ವ್ಯತಿರಿಕ್ತ ಆಗೋ ಸಾಧ್ಯತೆ ಇದೆ. ಕೇಂದ್ರ ಸಚಿವರು, ರಾಜ್ಯದ ಸಚಿವರು ಸಾಕಷ್ಟು ಬಾರಿ ಈ ಕುರಿತು ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.