ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಹಾಗು ಎಡೆಯೂರು ಶ್ರೀ ಸಿದ್ದಲಿಂಗೇಶ್ವರದಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿದೆ. ಇದೀಗ ನಿಮ್ಮ ಮನರಂಜನೆಯನ್ನು ದುಪ್ಪಟ್ಟುಗೊಳಿಸಲು ಜಗವನು ಕಾಯುವ ಕರುಣೆಯ ತಾಯಿ ‘ಪಾರ್ವತಿ’ಯ (Parvathi) ಕಥೆಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ ಅದೇ ಶ್ರೀ ದೇವಿ ಮಹಾತ್ಮೆ.

ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರು ಜನ್ಮತಾಳುತ್ತಾಳೆ. ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಅರ್ಥಗರ್ಭಿತವಾಗಿ ಎಳೆ ಎಳೆಯಾಗಿ ಮನಮುಟ್ಟುವಂತೆ ಜನರಿಗೆ ತಿಳಿಸುವುದೇ ‘ಶ್ರೀ ದೇವೀ ಮಹಾತ್ಮೆ’ಯ ಮುಖ್ಯ ಉದ್ದೇಶ. ಇದನ್ನೂ ಓದಿ:ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ ‘ಕೆಂಡ’ ಸಿನಿಮಾ

ಇನ್ನು ಈ ಧಾರಾವಾಹಿಯು ಅದ್ದೂರಿಯಾಗಿ, ಅಮೋಘ ಸೆಟ್ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ. ಶಿವನ ಪಾತ್ರವನ್ನು ಅರ್ಜುನ್ ರಮೇಶ್ (Arjun Ramesh), ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ (Jeevitha Vasista) ನಿರ್ವಹಿಸುತ್ತಿದ್ದಾರೆ. ಜೊತೆಗೆ ಈ ಪೌರಾಣಿಕ ಧಾರಾವಾಹಿಯು ಅತ್ಯುತ್ತಮ ತಾರಾಗಣವನ್ನು ಹೊಂದಿದ್ದು, ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.
ಬರುತ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ ‘ಶ್ರೀ ದೇವಿ ಮಹಾತ್ಮೆ’ (Sri Devi Mahatme) ನಿಮ್ಮ ಮನೆ ಮನದಂಗಳದಲ್ಲಿ ಇದೇ ಜುಲೈ 1 ರಿಂದ ಸೋಮ-ಶನಿವಾರ ರಾತ್ರಿ 7 ಗಂಟೆಗೆ ಪ್ರಸಾರವಾಗಲಿದೆ. ದೇವಿಯ ಮಹಿಮೆಯನ್ನು ಕಣ್ತುಂಬಿಕೊಳ್ಳುತ್ತ ಪುನೀತರಾಗಿ.


















ನಟ ಅರ್ಜುನ್ ರಮೇಶ್ ಅವರು ರಾಜಕೀಯ, ನಟನೆ ಎರಡರಲ್ಲೂ ಮುಂಚೂಣಿಯಲ್ಲಿರುವ ನಟ. ಅವರು ಬಿಗ್ ಬಾಸ್ ಮನೆಯಲ್ಲಿ ವೈಯಕ್ತಿಕ ವಿಚಾರದಿಂದ ಸಾಕಷ್ಟು ಚರ್ಚೆ ಆಗುತ್ತಿದ್ದಾರೆ. ತಮ್ಮ ವೈಯಕ್ತಿಕ ಬದುಕಿನ ಅಸಲಿ ಕಥೆಯನ್ನ ಬಿಚ್ಚಿಟ್ಟಿದ್ದಾರೆ. ತಮಗೆ ಎರಡು ಮದುವೆ ಆಗಿದೆ ಎಂದು ಇದನ್ನು ಆರಂಭದಲ್ಲೇ ಹೇಳಿಕೊಂಡಿದ್ದರು. ಈಗ ಅವರು ಒಂದು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ. ಇನ್ನು ಫ್ಲರ್ಟ್ ವಿಚಾರದಲ್ಲಿ ಸಂಜಯ್ ದತ್ ಅವರನ್ನು ಮೀರಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:
ನಾನು ಎಷ್ಟು ಜನರ ಜತೆ ಫ್ಲರ್ಟ್ ಮಾಡಿದ್ದೇನೆ ಎಂಬುದು ನನಗೇ ಗೊತ್ತಿಲ್ಲ. ಆ ಲೆಕ್ಕವನ್ನು ಇಲ್ಲಿ ಕೊಡೋಕೆ ಹೋಗಲ್ಲ. ಇದರ ಲೆಕ್ಕ ನೀಡೋಕೆ ಹೋದರೆ ಸಂಜಯ್ ದತ್ ಅವರನ್ನು ನಾನು ಹಿಂದಿಕ್ಕುತ್ತೇನೆ ಎಂದಿದ್ದಾರೆ ಅರ್ಜುನ್ ರಮೇಶ್. ಈ ಮೂಲಕ ಅವರು ಸಾಕಷ್ಟು ಜನರ ಜತೆ ರಿಲೇಶನ್ಶಿಪ್ನಲ್ಲಿದ್ದೆ, ಫ್ಲರ್ಟ್ ಮಾಡಿದ್ದೆ ಎಂಬ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ನಾನು ಬಿಗ್ ಬಾಸ್ಗೆ ಹೋಗುವ ದಿನ ನನ್ನ ಇಡೀ ಕುಟುಂಬದವರು ಅಳೋಕೆ ಶುರು ಮಾಡಿದರು. ಅವರಿಗೆ ನನ್ನ ಬಿಟ್ಟು ಬೇರೆ ಪ್ರಪಂಚ ಇಲ್ಲ. ಮಿಲನ್ ನನ್ನ ಮೊದಲ ಹೆಂಡತಿ. ಮದುವೆ ಆಗಿದ್ದಾಗಲೇ ರವಿಕಾ ಜತೆ ಪ್ರೀತಿಯಲ್ಲಿದ್ದೆ. ರವಿಕಾಳನ್ನು ಸುಮಾರು ಐದು ವರ್ಷಗಳ ಕಾಲ ಹೊರ ಜಗತ್ತಿನಿಂದ ಬಚ್ಚಿಟ್ಟೆ. ರವಿಕಾಳನ್ನು ಭೇಟಿ ಮಾಡುವ ವಿಚಾರ ಮಿಲನ್ಗೆ ಗೊತ್ತಾದರೆ ಎಂಬ ಭಯ ಸದಾ ಕಾಡುತ್ತಿತ್ತು. ನಿಮ್ಮ ಲೈಫ್ ಅರ್ಥ ಏನು ಎಂದು ರವಿಕಾ ಪಾಲಕರು ಒಂದು ದಿನ ಕೇಳಿದರು ಎಂದು ತಮ್ಮ ಹಳೆಯ ಪ್ಲ್ಯಾಶ್ ಬ್ಯಾಕ್ ಸ್ಟೋರಿ ನೆನಪಿಸಿಕೊಂಡಿದ್ದಾರೆ.