ರಾಮನಗರ: ದರ್ಗಾಗೆ (Dargah) ಬಂದಿದ್ದ ಬಾಲಕ (Boy) ನೀರಿನಲ್ಲಿ ಆಟವಾಡಲು ಹೋಗಿ ಅರ್ಕಾವತಿ ನದಿಯಲ್ಲಿ (Arkavathi River) ಕೊಚ್ಚಿಹೋದ ಘಟನೆ ರಾಮನಗರ ಹೊರವಲಯದ ಹಳ್ಳಿಮಾಳ ಸಮೀಪ ನಡೆದಿದೆ.
ಮೊಹಮ್ಮದ್ ಸೈಫ್ (9) ನೀರಿನಲ್ಲಿ ಕೊಚ್ಚಿಹೋದ ಬಾಲಕ. ಸೋಮವಾರ ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ಬೆಂಗಳೂರಿನ ಲಕ್ಕಸಂದ್ರದ ನಿವಾಸಿಗಳಾದ ರಿಯಾಜ್ ಮತ್ತು ಸಮೀಮ್ ಭಾನು ತಮ್ಮ ಪುತ್ರನ ಜೊತೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ಮೊಹಮ್ಮದ್ ಸೈಫ್ ಕಾಲುಜಾರಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ. ಇದನ್ನೂ ಓದಿ: ವಿಚಾರಣೆ ಮುಗಿಸಿ ದರ್ಶನ್ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಬಾಲಕ ಪತ್ತೆಯಾಗದೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದು, ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತ ವಿರೋಧಿ ಚಟುವಟಿಕೆ – ಬ್ರಿಟಿಷ್ ಕಾಶ್ಮೀರಿ ಪ್ರೊಫೆಸರ್ ಸಾಗರೋತ್ತರ ಪೌರತ್ವ ರದ್ದು
ರಾಮನಗರ: ಜಿಲ್ಲೆಯ ಅನೇಕ ಕಡೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ (Rain) ಹಲವು ಅವಾಂತರಗಳು ಸಂಭವಿಸಿವೆ. ಅರ್ಕಾವತಿ ನದಿ (Arkavathi River) ಪಾತ್ರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು ಮೈದುಂಬಿ ಹರಿಯುತ್ತಿರುವ ನದಿಯಲ್ಲಿ ಕಾರ್ (Car) ಪತ್ತೆಯಾಗಿದೆ.
ಕನಕಪುರ ತಾಲೂಕಿನ ತಾಮಸಂದ್ರ ಗ್ರಾಮದ ಬಳಿ ನದಿಯಲ್ಲಿ ಕಾರನ್ನು ನೋಡಿದ ಸ್ಥಳೀಯರು ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕ್ರೇನ್ ಮೂಲಕ ಕಾರನ್ನು ಮೇಲೆತ್ತಿದ್ದಾರೆ. ಕಾರಿನ ಮಾಲೀಕರ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಇನ್ನೂ ರಾಮನಗರ ತಾಲೂಕಿನ ಹೊಂಬಯ್ಯನ ದೊಡ್ಡಿಯಲ್ಲಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಮಾದವಿಲ್ಲದೇ ಭಾಗ್ಯಮ್ಮ ಕುಟುಂಬಸ್ಥರು ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ – ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆ
ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆಗೆ ಕಬ್ಬಾಳು ಗ್ರಾಮದ ಬೆಸ್ಕಾಂ ಕಚೇರಿ ಜಲಾವೃತವಾಗಿದೆ. ಗ್ರಾಮದ ಹಲವು ಮನೆ, ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಟ ನಡೆಸಿದ್ದಾರೆ. ನೀರಿನ ರಭಸಕ್ಕೆ ಕಬ್ಬಾಳು ವ್ಯವಸಾಯ ಸಹಕಾರ ಸಂಘದ ಕಚೇರಿಯ ಕಾಂಪೌಂಡ್ ಗೋಡೆ ಕುಸಿತವಾಗಿದೆ. ಅಲ್ಲದೇ ತಾಲೂಕಿನ ಕಚ್ಚುವನಹಳ್ಳಿ – ತೋಟಹಳ್ಳಿ ಸಂಪರ್ಕ ಸೇತುವೆ ಕೂಡಾ ಮಳೆ ನೀರಿನಲ್ಲಿ ಕೊಚ್ಚಿಹೋಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಎಲ್ಲೆಲ್ಲಿ ಏನಾಗಿದೆ? ಅತಿ ಹೆಚ್ಚು ಮಳೆ ಎಲ್ಲಿಯಾಗಿದೆ?
ರಾಮನಗರ ಜಿಲ್ಲೆಯನ್ನು ಬಿಟ್ಟೂಬಿಡದೆ ಕಾಡುತ್ತಿರುವ ಮಳೆಯಿಂದಾಗಿ ಮೊದಲೇ ಭೀತಿಯಲ್ಲಿದ್ದ ಜನರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮತ್ತಷ್ಟು ಭಯ ತರಿಸಿದೆ. ನಿರಂತರ ಮಳೆ ರೈತ ಸಮುದಾಯಕ್ಕೆ ಶಾಪವಾಗಿ ಪರಿಣಮಿಸಿದ್ದರೆ, ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದ್ದು ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಂಡು ತ್ವರಿತವಾಗಿ ಮಳೆಹಾನಿ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಕಳೆದ ಒಂದುವರೆ ತಿಂಗಳಿನಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ರಾಮನಗರದಲ್ಲಿ (Ramanagara) ಆರ್ಭಟಿಸಲು ಶುರು ಮಾಡಿದ್ದಾನೆ. ಕಳೆದ ಬಾರಿ ಆದ ನಷ್ಟದಿಂದ ಚೇತರಿಸಿಕೊಳ್ಳುವ ಮುನ್ನವೆ, ಮತ್ತೆ ಮಹಾಮಳೆಯಿಂದ ರೇಷ್ಮೆ ನಾಡಿದ ಜನತೆ ತತ್ತರಿಸಿಹೋಗಿದ್ದಾರೆ.
ಅರ್ಕಾವತಿ ನದಿ (Arkavathi River) ಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಆತಂಕ ಹೆಚ್ಚಾಗಿದೆ. ಜಿಲ್ಲಾದ್ಯಂತ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯ ಭರ್ತಿಯಾಗಿದ್ದು, ಕಣ್ವ ನದಿಗೆ 2 ಸಾವಿರ ಕ್ಯೂಸೆಕ್ ನೀರು ಹರಿಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಅಕ್ಕ ಪಕ್ಕದ ಜಮೀನುಗಳು ಸಂಪೂರ್ಣ ಜಲಾವೃತವಾಗಿವೆ. ನೀರಿನ ರಭಸಕ್ಕೆ ತೆಂಗು, ಬಾಳೆ, ತುಳಸಿ ಸೇರಿ ಹಲವು ಬೆಳೆಗಳು ನಾಶವಾಗಿವೆ. ಕಳೆದ ಒಂದೂವರೆ ತಿಂಗಳಿನ ಹಿಂದೆ ಉಂಟಾಗಿದ್ದ ಪ್ರವಾಹ ಸುಧಾರಿಸಿಕೊಳ್ಳುವ ಮುನ್ನವೇ ಮತ್ತೆ ಮಳೆ ಸಂಕಷ್ಟ ಉಂಟಾಗಿರುವುದು ರೈತರನ್ನು ಕಂಗಾಲಾಗಿಸಿದೆ. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುತ್ತೇವೆ ಎಂದ ಹೋರಾಟಗಾರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಮತ್ತೊಂದೆಡೆ ರಾಮನಗರದ ಅರ್ಕೇಶ್ವರ ಬಡಾವಣೆಯಲ್ಲೂ ಮತ್ತೆ ಮಳೆ ಅವಾಂತರ ಸೃಷ್ಠಿಯಾಗಿದೆ. ಬಡಾವಣೆಯ 50ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿವೆ. ರೇಷ್ಮೆ ನೂಲು ತೆಗೆಯವ ಸಣ್ಣ ಕೈಗಾರಿಕಾ ಮಳಿಗೆಗಳಿಗೂ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ಯಂತ್ರಗಳು ಕೂಡಾ ನೀರಿಗಾಹುತಿಯಾಗಿವೆ. ಮನೆಯಿಂದ ನೀರು ಹೊರಹಾಕಲು ಜನರು ಹರಸಾಹಸ ಪಡುತ್ತಿದ್ದು ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಂದ ಆವಲಬೆಟ್ಟಕ್ಕೆ `ಗಂಧದಗುಡಿ ರೈಡ್’ – ಆಲದ ಗಿಡ ನೆಟ್ಟು ಪುನೀತ್ ನಾಮಕರಣ
ಒಂದೇ ತಿಂಗಳ ಅಂತರದಲ್ಲಿ ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆರೆ ಎರಡನೇ ಬಾರಿಗೆ ಕೋಡಿ ಬಿದ್ದಿದೆ. ಕೆರೆ ಕೋಡಿ ಪರಿಣಾಮ ಹಲಗೂರು-ಚನ್ನಪಟ್ಟಣ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಸಂಪರ್ಕ ಕಡಿತವಾಗಿದೆ. ರಸ್ತೆ ಮೇಲೆ ಕೆರೆ ಕೋಡಿ ನೀರು ರಭಸವಾಗಿ ಹರಿಯುತ್ತಿದ್ದು, ಲಾರಿ ಚಾಲಕನ ದುಸ್ಸಾಹಸಕ್ಕೆ ರಸ್ತೆಯಲ್ಲಿ ದಿನಸಿ ತುಂಬಿದ ಲಾರಿ ಸಿಲುಕಿದೆ. ಸದ್ಯ ಸ್ಥಳೀಯ ಆಡಳಿತ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಲಾರಿ ಹೊರತೆಗೆದಿದ್ದಾರೆ. ಅಲ್ಲದೇ ಚನ್ನಪಟ್ಟಣ ತಾಲೂಕಿನ ನೀಲಸಂದ್ರ ಸರ್ಕಾರಿ ಶಾಲೆಗೂ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಚನ್ನಪಟ್ಟಣದ ಬಿಡಿ ಕಾಲೋನಿಯಲ್ಲೂ ಮಳೆ ಆರ್ಭಟಕ್ಕೆ ಜನ ಹೈರಾಣಾಗಿದ್ದಾರೆ.
ಒಟ್ಟಾರೆ ರಾಮನಗರ ಜಿಲ್ಲೆಯನ್ನು ಬಿಟ್ಟೂಬಿಡದೇ ಕಾಡುತ್ತಿರುವ ವರುಣರಾಯ ಇನ್ನೆಷ್ಟು ದಿನ ಆರ್ಭಟಿಸುತ್ತಾನೋ ಅನ್ನುವ ಭೀತಿ ಜನರನ್ನು ಆವರಿಸಿದೆ. ಬಯಲು ಸೀಮೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ರೈತ ಸಮುದಾಯಕ್ಕೆ ಶಾಪವಾಗಿ ಪರಿಣಮಿಸಿದೆ. ನಿತ್ಯ ಸುರಿಯುತ್ತಿರುವ ರಣಮಳೆ ತಗ್ಗು ಪ್ರದೇಶದ ಜನರ ನಿದ್ದೆಯನ್ನು ಕಸಿದಿರುವುದು ದುರದೃಷ್ಟಕರ.
Live Tv
[brid partner=56869869 player=32851 video=960834 autoplay=true]