Tag: arrest

  • ಕೈ ಯುವ ಮುಖಂಡನ ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್!

    ಕೈ ಯುವ ಮುಖಂಡನ ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್!

    ಬೆಂಗಳೂರು: ಕಾಂಗ್ರೆಸ್ ಯುವ ಅಧ್ಯಕ್ಷನ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೊಡ್ಡಜಾಲ ಸಮೀಪ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದಾಗ ಈ ಘಟನೆ ನಡೆದಿದೆ.

    ಮನೋಜ್ ಅಲಿಯಾಸ್ ಕೆಂಚ ಮತ್ತು ಮಂಜೇಗೌಡ ಬಂಧಿತ ಆರೋಪಿಗಳು. ಚಿಕ್ಕಚಾಲ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇವರನ್ನು ಖಚಿತ ಮಾಹಿತಿ ಮೇರೆಗೆ ವಿದ್ಯಾರಣ್ಯಪುರ ಹಾಗೂ ಯಲಹಂಕ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಆತ್ಮರಕ್ಷಣೆಗಾಗಿ ಯಲಹಂಕ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ.

    ಆರೋಪಿ ಮನೋಜ್ ಅಲಿಯಾಸ್ ಕೆಂಚನ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಳ್ಳಾಲಸಂದ್ರದ ಕಾಂಗ್ರೆಸ್ ಯುವ ಅಧ್ಯಕ್ಷ ಅರುಣ್ ಕುಮಾರ್ ನನ್ನು ಕೊಲೆ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೇಳಿ ಬಂದಿವೆ. ಅರುಣ್ ತಡರಾತ್ರಿ ಸಿನೆಮಾ ನೋಡಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಯುವ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಹತ್ಯೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತ್ನಿಗಾಗಿ ಕಟ್ಟಡ, ಕಾರ್, ಬೈಕಿಗೆ ಬೆಂಕಿ ಇಟ್ಟ

    ಪತ್ನಿಗಾಗಿ ಕಟ್ಟಡ, ಕಾರ್, ಬೈಕಿಗೆ ಬೆಂಕಿ ಇಟ್ಟ

    ಚೆನ್ನೈ: ವ್ಯಕ್ತಿಯೊಬ್ಬ ಪತ್ನಿ ಮಾತನಾಡಿಸಿಲ್ಲ ಎಂದು ಕೋಪಗೊಂಡು ಕಟ್ಟಡ, ಕಾರ್ ಮತ್ತು ಬೈಕಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆದಿದೆ.

    ಈ ಘಟನೆ ಶುಕ್ರವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 30 ವರ್ಷದ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗೆ ಕೆಲವು ದಿನಗಳಿಂದ ಉದ್ಯೋಗವಿರಲಿಲ್ಲ. ಆದ್ರೆ ಈತ ಉದ್ಯೋಗ ಹುಡುಕುವ ಪ್ರಯತ್ನವನ್ನು ಕೂಡ ಮಾಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಈತನ ಪತ್ನಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಕೆಲಸಕ್ಕೆ ಹೋಗುತ್ತಿಲ್ಲ ಎಂಬ ಕಾರಣಕ್ಕೆ ಪತ್ನಿ ಕೆಲವು ದಿನಗಳಿಂದ ಮಾತು ಬಿಟ್ಟಿದ್ದರು. ಪತ್ನಿ ಮಾತನಾಡಿಸುತ್ತಿಲ್ಲ ಎಂದು ಕೋಪಗೊಂಡ ಪತಿ ಆಕ್ರೋಶದಿಂದ ಕುಡಿದ ಮತ್ತಿನಲ್ಲಿ ಕಾರು, ಬೈಕ್ ಮತ್ತು ಕಟ್ಟಡಕ್ಕೆ ಬೆಂಕಿ ಇಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯಕ್ಕೆ ಆರೋಪಿಯನ್ನು ಬಂಧಿಸಿದ್ದು, ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಆತನ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ರಾತ್ರೋರಾತ್ರಿ ನಟ ದುನಿಯಾ ವಿಜಯ್ ಬಂಧನ!

    ರಾತ್ರೋರಾತ್ರಿ ನಟ ದುನಿಯಾ ವಿಜಯ್ ಬಂಧನ!

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಕರಿಚಿರತೆ ದುನಿಯಾ ವಿಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸರು ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಡಿ ನಟ ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ. ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ದುನಿಯಾ ವಿಜಯ್ ವಿರುದ್ಧ ಶನಿವಾರ ರಾತ್ರಿ ಸುಮಾರು 11.30ಕ್ಕೆ ದೂರು ನೀಡಿದ್ದಾರೆ.

    ನಡೆದಿದ್ದೇನು?
    ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದಾರೆ. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ.

    ಮಾರುತಿಗೌಡ ಸಹಚರರಿಂದ ದೂರು ಪಡೆದ ಹೈಗ್ರೌಂಡ್ ಪೊಲೀಸರು ಮೊದಲಿಗೆ ದುನಿಯಾ ವಿಜಯ್‍ಗೆ ಕರೆ ಮಾಡಿ ಎಚ್ಚರಿಸಿದ್ದಾರೆ. 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷನಾಗಿದ್ದಾರೆ. ಜೊತೆಗೆ ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೋಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ.

    ಇದೇ ವೇಳೆ ಪಾನಿಪುರಿ ಕಿಟ್ಟಿ ಹುಡುಗರು, ದುನಿಯ್ ವಿಜಿ ಕಾರ್ ನ ಮೇಲೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಕೆಎಸ್‍ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪೊಲೀಸ್ ಠಾಣೆ ಬಳಿಯೂ ದರ್ಪ ಮೆರೆಯುತ್ತಿದ್ದ ವಿಜಿಗೆ ಎಸಿಪಿ ರವಿಶಂಕರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.

    ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದುನಿಯ್ ವಿಜಯ್ ಹಾಗೂ ಸಹಚರರನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 365, 342, 325, 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈಗ್ರೌಂಡ್ ಪೊಲೀಸರು ದುನಿಯ್ ವಿಜಯ್ ನನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಈ ಹಿಂದೆ ದುನಿಯಾ ವಿಜಯ್ ಗೆ ಪಾನಿಪೂರಿ ಕಿಟ್ಟಿ ಜಿಮ್ ಟ್ರೇನರ್ ಆಗಿದ್ದರು. ಆದರೆ ಇತ್ತೀಚೆಗೆ ಈ ಎರಡೂ ಗ್ಯಾಂಗ್‍ಗಳ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಾನಿಪುರ ಕಿಟ್ಟಿಯ ಮೇಲಿನ ದ್ವೇಷಕ್ಕೆ ಆತನ ಅಣ್ಣನ ಮಗ ಮಾರುತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಮಾರುತಿಗೌಡ ಈಗ ನಟರಾದ ಯಶ್, ಅಜಯ್ ರಾವ್, ಪ್ರೇಮ್‍ಗೂ ಜಿಮ್ ಟ್ರೇನರ್ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಮಸಾಜ್‍ಗೆ ಬರ್ತಿದ್ದ ಗ್ರಾಹಕರ ನಗ್ನ ಫೋಟೋ ತೆಗೆದು ಪ್ರೇಮಿಗಳಿಂದ ಬ್ಲಾಕ್‍ಮೇಲ್

    ಮಸಾಜ್‍ಗೆ ಬರ್ತಿದ್ದ ಗ್ರಾಹಕರ ನಗ್ನ ಫೋಟೋ ತೆಗೆದು ಪ್ರೇಮಿಗಳಿಂದ ಬ್ಲಾಕ್‍ಮೇಲ್

    ನವದೆಹಲಿ: ಮಸಾಜ್ ಪಾರ್ಲರ್‌ಗೆ ಬರುತ್ತಿದ್ದ ಗ್ರಾಹಕರ ನಗ್ನ ಫೋಟೋ ತೆಗೆದು ಬ್ಲಾಕ್‍ಮೇಲ್ ಮಾಡಿ ಹಣ ಪೀಕುತ್ತಿದ್ದ ಪ್ರೇಮಿಯನ್ನು ಶುಕ್ರವಾರ ನವದೆಹಲಿ ಪೊಲೀಸರು ಬಂಧಿಸಿದ್ದಾರೆ.

    ಶಾದಾಬ್ ಗೌಹರ್ ಹಾಗೂ ಆತನ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಹಕರೊಬ್ಬರು ಬುಧವಾರ ಗೌಹರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಗೌಹರ್ ನನ್ನ ನಗ್ನ ಫೋಟೋ ತೆಗೆದು ಬ್ಲಾಕ್‍ಮೇಲ್ ಮಾಡಿ ನನ್ನಿಂದ 3 ಲಕ್ಷ ರೂ. ಹಣ ಪಡೆದಿದ್ದಾನೆ ಎಂದು ದೂರಿದ್ದಾರೆ.

    ನಾನು ಇಂಟರ್‌ನೆಟ್ ನಲ್ಲಿ ಮಸಾಜ್ ಪಾರ್ಲರ್ ಹುಡುಕುತ್ತಿದ್ದೆ. ಈ ವೇಳೆ ನನಗೆ ಶಾಬಾದ್ ನಂಬರ್ ದೊರೆಯಿತು. ಆತ ಅರ್ಮಾನ್ ಮಲ್ಲಿಕ್ ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದನು. ಸೆಪ್ಟಂಬರ್ 8ರಂದು ಶಾಬಾದ್ ಮಸಾಜ್‍ಗೆಂದು ನನಗೆ ವೈಶಾಲಿಯಲ್ಲಿರುವ ಹೋಟೆಲ್ ರೂಮಿಗೆ ಕರೆದಿದ್ದನು. ಆಗ ಆತ ನನಗೆ ಮಸಾಜ್ ಮಾಡಿ 12 ಸಾವಿರ ಹಣವನ್ನು ಪಡೆದನು. ಮತ್ತೆ ಕೆಲವು ದಿನಗಳ ನಂತರ ಆತ ಅದೇ ಹೋಟೆಲ್ ರೂಮಿನಲ್ಲಿ ಮತ್ತೊಂದು ಮಸಾಜ್ ಸೆಶನ್‍ಗೆ ಕರೆದನು ಎಂದು ಗ್ರಾಹಕ ಹೇಳಿದ್ದಾರೆ.

    ನನ್ನನ್ನು ಹೋಟೆಲ್ ರೂಮಿಗೆ ಕರೆದ ನಂತರ ಶಾಬಾದ್ 20 ನಿಮಿಷ ನನಗೆ ಮಸಾಜ್ ಮಾಡಿದ್ದನು. ನಂತರ ರೂಮಿನ ಬಾಗಿಲು ಬಡಿಯುವ ಶಬ್ಧ ಕೇಳಿಸಿತ್ತು. ಆಗ ಶಾಬಾದ್ ಬಾಗಿಲನ್ನು ತೆಗೆದಾಗ ಇಬ್ಬರು ಯುವತಿಯರು ರೂಮಿಗೆ ಪ್ರವೇಶಿಸಿದ್ದರು. ಇಬ್ಬರು ಯುವತಿಯರು ರೂಮಿಗೆ ಪ್ರವೇಶಿಸಿದ ನಂತರ ಅವರು ನನ್ನ ಬಟ್ಟೆಗಳನ್ನು ತೆಗೆದು, ವ್ಯಾಲೇಟ್ ಹಾಗೂ ಮೊಬೈಲ್ ಕಸಿದುಕೊಂಡರು. ಬಳಿಕ ಶಾಬಾದ್ ನನ್ನ ಮೇಲೆ ಹಲ್ಲೆ ನಡೆಸಿ ನನ್ನನ್ನು ನಿಂದಿಸಿದನು.

    ಯುವತಿಯೊಬ್ಬಳು ತನ್ನ ಬಟ್ಟೆ ಹರಿದುಕೊಂಡು ನನ್ನ ಮೇಲೆ ರೇಪ್ ಕೇಸ್ ಹಾಕಿಸುವುದಾಗಿ ಬೆದರಿಸಿದ್ದಳು. ಮೂವರು ಆರೋಪಿಗಳು ನನ್ನ ನಗ್ನ ಫೋಟೋ ತೆಗೆದು 10 ಲಕ್ಷ ರೂ. ಗಾಗಿ ಬ್ಲಾಕ್‍ಮೇಲ್ ಮಾಡಿದರು. ಆಗ ನನ್ನ ಕಾರಿನಲ್ಲಿದ್ದ 3 ಲಕ್ಷ ರೂ. ಅವರಿಗೆ ನೀಡಿದೆ. ಅವರು ಬಲವಂತವಾಗಿ ನನ್ನಿಂದ 4.5 ಲಕ್ಷ ರೂ.ಯ 4 ಚೆಕ್‍ಗಳಿಗೆ ಸಹಿ ಹಾಕಿಸಿಕೊಂಡರು. ಅಲ್ಲದೇ ಉಳಿದ ಹಣವನ್ನು ಬೇಗ ನೀಡಿಲ್ಲವೆಂದರೆ ನನ್ನ ನಗ್ನ ಫೋಟೋವನ್ನು ನನ್ನ ಕುಟುಂಬದವರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು.

    ಗ್ರಾಹಕ ಸಹಿ ಮಾಡಿದ ಚೆಕ್‍ಗಳ ಪೇಮೆಂಟ್ ಆಗದಂತೆ ಮಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಶಾದಾಬ್ ಹಾಗೂ ಆತನ ಪ್ರಿಯತಮೆಯನ್ನು ಸಾಕೇತ್‍ನ ಮಾಲ್‍ನಲ್ಲಿ ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶೋಕಿಗಾಗಿ ಬರೋಬ್ಬರಿ 17 ಕಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್!

    ಶೋಕಿಗಾಗಿ ಬರೋಬ್ಬರಿ 17 ಕಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್!

    ಬೆಂಗಳೂರು: ಶೋಕಿಗಾಗಿ ದುಬಾರಿ ಬೆಲೆಯ ಕಾರುಗಳನ್ನ ಕದಿಯುತ್ತಿದ್ದ ಗ್ಯಾಂಗ್ ವೊಂದನ್ನು ರಾಜಗೋಪಾಲನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಪೊಲೀಸರು ಕಾರ್ ಕಳ್ಳತನಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಜೀವನ್, ಶ್ರೀನಿವಾಸ್, ಮಂಜುನಾಥ್, ಸಾಗರ್, ಅಮ್ಜದ್, ನೂರುಲ್ಲಾ ಮತ್ತು ಪ್ರವೀಣ್ ಬಂಧಿತ ಆರೋಪಿಗಳು. ಒಂದು ವರ್ಷದಿಂದ ಈ ಗ್ಯಾಂಗ್ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಈ ಗ್ಯಾಂಗ್ ನವರು ಮೊದಲು ಟ್ರಾವೆಲ್ ಏಜೆನ್ಸಿಯಲ್ಲಿ ಕಾರನ್ನು ಬುಕ್ ಮಾಡಿ ಟ್ರಿಪ್ ಕರೆದುಕೊಂಡು ಹೋಗುತ್ತಿದ್ದರು. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರ್ ಚಾಲಕನ ಜೊತೆ ಸಲುಗೆಯಿಂದ ಮಾತನಾಡುತ್ತಿದ್ದರು. ಬಳಿಕ ಕಾರ್ ಚಾಲಕನಿಗೆ ಕಂಠ ಪೂರ್ತಿ ಕುಡಿಸುತ್ತಿದ್ದರು. ಚಾಲಕನಿಗೆ ಮದ್ಯದ ನಶೆ ಏರುತ್ತಿದ್ದಂತೆಯೇ ಕೈಕಾಲು ಕಟ್ಟಿ ಆತನನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಕಾರ್ ಸಮೇತ ಪರಾರಿಯಾಗುತ್ತಿದ್ದರು. ಹೀಗೆ ಕದ್ದ ಕಾರುಗಳನ್ನು ಗುರುತು ಸಿಗದಂತೆ ಅಚ್ಚುಕಟ್ಟಾಗಿ ಬದಲಾಯಿಸುತ್ತಿದ್ದರು. ಆರ್‍ಸಿ ಬುಕ್, ಚಾರ್ಸಿ ನಂಬರ್ ಸೇರಿ ಎಲ್ಲವನ್ನು ಅಚ್ಚುಕಟ್ಟಾಗಿ ಡಾಕ್ಯುಮೆಂಟ್ ಬದಲಾಯಿಸುತ್ತಿದ್ದರು. ಈ ಖದೀಮರು ಬರೋಬ್ಬರಿ 17 ಬೆಲೆಬಾಳುವ ಕಾರುಗಳನ್ನ ಕದ್ದಿದ್ದರು.

    ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಬೆಲೆ ಬಾಳುವ 17 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.youtube.com/watch?v=U8KS52yx3vk

  • ತಾಯಿಯನ್ನ ಹೊರಗೆ ನಿಲ್ಲಿಸಿ ಸರ್ಕಾರಿ ಆಸ್ಪತ್ರೆಯಲ್ಲೇ 11ರ ಬಾಲಕಿ ಮೇಲೆ ರೇಪ್

    ತಾಯಿಯನ್ನ ಹೊರಗೆ ನಿಲ್ಲಿಸಿ ಸರ್ಕಾರಿ ಆಸ್ಪತ್ರೆಯಲ್ಲೇ 11ರ ಬಾಲಕಿ ಮೇಲೆ ರೇಪ್

    ನವದೆಹಲಿ: 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಸಿಬ್ಬಂದಿ ಅತ್ಯಾಚಾರ ಮಾಡಿರುವ ಘಟನೆ ಶುಕ್ರವಾರ ದೆಹಲಿಯಲ್ಲಿ ನಡೆದಿದೆ.

    ಸೆಪ್ಟೆಂಬರ್ 13 ರಂದು ರೋಹಿಣಿಯ ಇಎಸ್‍ಐ ಆಸ್ಪತ್ರೆಗೆ ಸಂತ್ರಸ್ತೆ ಚಿಕಿತ್ಸೆಗೆಂದು ದಾಖಲಾಗಿದ್ದಳು. ಅಂದಿನಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆರೋಪಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು, 40 ವರ್ಷದ ರಾಧೆ ಶ್ಯಾಮ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶುಕ್ರವಾರ ಮುಂಜಾನೆ ಸುಮಾರು 4.30ಕ್ಕೆ ಸಿಬ್ಬಂದಿ ರಾಧೆ ಶ್ಯಾಮ್, ವಾರ್ಡ್ ನಲ್ಲಿದ್ದ ಸಂತ್ರಸ್ತೆಯನ್ನು ಪಕ್ಕದ ಕೋಣೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ತಾಯಿಯನ್ನು ಹೊರಗೆ ನಿಲ್ಲಿಸಿ, ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಡಿಸಿಪಿ ರಾಜ್ನೀಶ್ ಗುಪ್ತಾ ತಿಳಿಸಿದ್ದಾರೆ.

    ಅತ್ಯಾಚಾರ ಮಾಡಿ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಹೇಳಿ ಸಂತ್ರಸ್ತೆಯನ್ನು ಮೊದಲಿದ್ದ ಬೆಡ್ ಗೆ ಕರೆತಂದು ಮಲಗಿಸಿದ್ದಾನೆ. ಬಳಿಕ ತಾಯಿಯೂ ಹಿಂದಿರುಗಿ ಮಗಳ ಬಳಿ ಬಂದಿದ್ದಾರೆ. ಆಗ ತಾಯಿಗೆ ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ಹೇಳಿದ್ದಾಳೆ. ನಂತರ ಸಂತ್ರಸ್ತೆಯ ಕುಟುಂಬವು ಪೊಲೀಸರಿಗೆ ಬೆಳಗ್ಗೆ 6 ಗಂಟೆಗೆ ಕರೆ ಮಾಡಿ ದೂರು ನೀಡಿದ್ದಾರೆ.

    ಮಾಹಿತಿ ತಿಳಿದ ಪೊಲೀಸರು ಆಸ್ಪತ್ರೆಗೆ ಬಂದು ರಾಧೆ ಶ್ಯಾಮ್ ನನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಗುಪ್ತಾ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಬೇಹುಗಾರಿಕೆಯಲ್ಲಿ ತೊಡಗಿದ್ದ ಚೀನಾದ ಗೂಢಚಾರನ ಬಂಧನ: ಆತನ ಬಳಿ ಸಿಕ್ಕಿದ್ದು ಏನು?

    ಬೇಹುಗಾರಿಕೆಯಲ್ಲಿ ತೊಡಗಿದ್ದ ಚೀನಾದ ಗೂಢಚಾರನ ಬಂಧನ: ಆತನ ಬಳಿ ಸಿಕ್ಕಿದ್ದು ಏನು?

    ನವದೆಹಲಿ: ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ದೆಹಲಿಯ ಪೊಲೀಸರು ಚೀನಾದ ಗೂಢಾಚಾರನೊಬ್ಬನನ್ನು ಬಂಧಿಸಿದ್ದಾರೆ.

    39 ವರ್ಷದ ಚಾರ್ಲಿ ಪೆಂಗ್ ಬಂದಿತ ಚೀನಾದ ಗೂಢಚಾರ. ಆರೋಪಿಯನ್ನು ಸೆಪ್ಟಂಬರ್ 13ರಂದು ಮಂಜು ಕಾ ತಿಲ್ಲಾ ಎಂಬಲ್ಲಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಆರೋಪಿ ಬಳಿ ಭಾರತೀಯ ಪಾಸ್‍ಪೋರ್ಟ್, ಆಧಾರ್ ಕಾರ್ಡ್, 3.5 ಲಕ್ಷ ರೂಪಾಯಿ ನಗದು, ಒಂದು ಕಾರು ಹಾಗೂ ಮಹತ್ವದ ದಾಖಲೆಗಳನ್ನು ವಶಪಡಿಸಕೊಂಡಿದ್ದಾರೆ. ಇದಲ್ಲದೇ 2,000 ಸಾವಿರ ಅಮೆರಿಕನ್ ಡಾಲರ್ ಹಾಗೂ 2,000 ಥಾಯ್ ಕರೆನ್ಸಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    ಪ್ರಾಥಮಿಕ ಮಾಹಿತಿಗಳ ಪ್ರಕಾರ ಚಾರ್ಲಿ ಪೆಂಗ್ ಒಬ್ಬ ನುರಿತ ಗುಢಾಚಾರನೆಂದು ಹೇಳಲಾಗುತ್ತಿದೆ. ಈತ 5 ವರ್ಷಗಳ ಹಿಂದೆ ಭಾರತಕ್ಕೆ ಬಂದು ದೆಹಲಿಯಲ್ಲಿ ನೆಲೆಸಿದ್ದನು. ಅಲ್ಲದೇ ಪದೇ ಪದೇ ಹಿಮಾಚಲ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದನು ಎಂದು ತಿಳಿದು ಬಂದಿದೆ.

    ಈತ ಭಾರತೀಯ ಯುವತಿಯನ್ನು ವಿವಾಹವಾಗಿ ಆಕೆಯ ಮೂಲಕ ಮಣಿಪುರ ವಿಳಾಸದ ಆಧಾರದ ಮೇಲೆ ಭಾರತದ ಆಧಾರ್ ಕಾರ್ಡ್ ಹಾಗೂ ಪಾಸ್‍ಪೋರ್ಟ್ ಹೊಂದಿದ್ದನು. ಈತ ದೆಹಲಿಯ ಗುರುಗ್ರಾಮದಲ್ಲಿ ವಿದೇಶಿ ವಿನಿಯ ಕರೆನ್ಸಿ ಕಚೇರಿಯನ್ನು ಹೊಂದಿ ಬೇಹುಗಾರಿಕೆಯನ್ನು ನಡೆಸುತ್ತಿದ್ದ ಎನ್ನುವ ಮಾಹಿತಿ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ವರದಿಯಾಗಿದೆ.

    ಚಾರ್ಲಿ ಪೆಂಗ್ ತನ್ನ ವಿದೇಶಿ ವಿನಿಮಯ ಕಚೇರಿಯ ಮೂಲಕ ಹವಾಲ ದಂದೆ ನಡೆಸುತ್ತಿದ್ದರ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಆದರೆ ಈತನನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಚಾರ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸದ್ಯ ಆರೋಪಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೆಕ್ಸ್ ಫಿಲ್ಮ್ ನೋಡಿ, 10ನೇ ಕ್ಲಾಸ್ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದ ಪಿಯು ವಿದ್ಯಾರ್ಥಿಗಳು!

    ಸೆಕ್ಸ್ ಫಿಲ್ಮ್ ನೋಡಿ, 10ನೇ ಕ್ಲಾಸ್ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದ ಪಿಯು ವಿದ್ಯಾರ್ಥಿಗಳು!

    ಡೆಹ್ರಾಡೂನ್: ನಾಲ್ವರು ಪಿಯು ವಿದ್ಯಾರ್ಥಿಗಳು ಪೋರ್ನ್ ವಿಡಿಯೋ ನೋಡಿ ಬಳಿಕ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರೆಸಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಡೆಹ್ರಾಡೂನ್ ಬೋರ್ಡಿಂಗ್ ಶಾಲೆಯ ವಿದ್ಯಾರ್ಥಿಗಳು ಈ ನೀಚ ಕೃತ್ಯ ಮಾಡಿದ್ದು, ಈಗ ಅವರನ್ನು ಅತ್ಯಾಚಾರದ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮತ್ತು ಸಂತ್ರಸ್ತೆ ಒಂದೇ ಬೋರ್ಡಿಂಗ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆರೋಪಿಗಳು ತಮ್ಮ ಫೋನಿನಲ್ಲಿ ಪೋರ್ನ್ ವಿಡಿಯೋ ನೋಡಿ ಈ ರೀತಿಯ ಕೃತ್ಯ ಮಾಡಿದ್ದಾರೆ ಎಂದು ಡೆಹ್ರಾಡೂನ್ ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ನಿವೇದಿತಾ ಕುಕ್ರೆಟ್ಟಿ ಅವರು ತಿಳಿಸಿದ್ದಾರೆ.

    ಮೊದಲು ತಮ್ಮ ಮೊಬೈಲ್ ಫೋನಿನಲ್ಲಿ ಪೋರ್ನ್ ಸಿನಿಮಾಗಳನ್ನು ನೋಡಿದ ಬಳಿಕ ಒಬ್ಬನನ್ನು 16 ವರ್ಷದ ಹುಡುಗಿಯನ್ನು ಅತ್ಯಾಚಾರ ಮಾಡುವಂತೆ ಪ್ರೇರೇಪಿಸಿರುವುದಾಗಿ ವಿದ್ಯಾರ್ಥಿಗಳಲ್ಲಿ ಒಬ್ಬ ತಪ್ಪನ್ನು ಒಪ್ಪಿಕೊಂಡಿದ್ದಾನೆ ಅಂತ ಪೊಲೀಸ್ ಮೂಲಗಳು ತಿಳಿಸಿವೆ.

    ನಡೆದಿದ್ದೇನು?
    ಈ ಘಟನೆ ಆಗಸ್ಟ್ 14 ರಂದು ನಡೆದಿದೆ. ಸ್ವಾತಂತ್ರ್ಯ ದಿನಾಚರಣೆಗೆ ತಯಾರು ಮಾಡಿಕೊಳ್ಳುತ್ತಿದ್ದಾಗ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಸ್ಟೋರ್ ರೂಮ್ ಗೆ ಕರೆದುಕೊಂಡು ಹೋಗಿದ್ದಾರೆ. ನಂತರ ನಾಲ್ವರು ಹುಡುಗರು ಸೇರಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಮತ್ತು ಆಕೆಯ ಸೋದರಿ ಹಾಸ್ಟೆಲ್‍ನ ಒಂದೇ ಕೋಣೆಯಲ್ಲಿ ಉಳಿದುಕೊಂಡಿದ್ದರು. ಸೋದರಿಯರ ತಂದೆ ಮತ್ತು ತಾಯಿ ನಡುವೆ ಜಗಳ ಉಂಟಾಗಿದ್ದರಿಂದ ಮಕ್ಕಳು ನೋಡಲು ಯಾರು ಬಂದಿರಲಿಲ್ಲ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ತನ್ನ ದೇಹದಲ್ಲಾದ ಬದಲಾವಣೆ ಮತ್ತು 12ನೇ ಕ್ಲಾಸ್ ಹುಡುಗರು ನಡೆಸಿರುವ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ತಂಗಿಯ ಮಾತು ಕೇಳಿದ ಅಕ್ಕ ನೇರವಾಗಿ ಶಿಕ್ಷಕರಿಗೆ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದ್ದನ್ನು ಇನ್ಸ್ಟಿಟ್ಯೂಟ್ ಸಿಬ್ಬಂದಿ ಮುಚ್ಚಿಹಾಕಲು ಮತ್ತು ಆಕೆ ಗರ್ಭಿಣಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಹುಡುಗರು ಮತ್ತು ಶಾಲಾ ನಿರ್ದೇಶಕ, ಪ್ರಿನ್ಸಿಪಾಲ್ ಸೇರಿದಂತೆ ಐದು ಶಾಲಾ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಅಪ್ರಾಪ್ತರನ್ನು ರಿಮ್ಯಾಂಡ್ ಹೋಂಗೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೊಬೈಲ್ ಫೋನ್ ಗಳಲ್ಲಿ ಸುಲಭವಾಗಿ ಪೋರ್ನ್ ವಿಡಿಯೋ ಸಿಗುವುದರಿಂದ ಈ ರೀತಿ ಕೃತ್ಯ ಹೆಚ್ಚಾಗುತ್ತಿವೆ. ಅದರಲ್ಲೂ ಅಪ್ರಾಪ್ತರೇ ಅತಿ ಹೆಚ್ಚಾಗಿ ಲೈಂಗಿಕ ಅಪರಾಧಗಳಿಗೆ ತೊಡಗಿದ್ದಾರೆ. ಈ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ಯೋಜನೆಯನ್ನು ಜಾರಿಗೆ ಮಾಡಬೇಕು ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ತಹಶೀಲ್ದಾರ್ ಮೇಲೆ ಹಲ್ಲೆ: 15 ಕ್ಕೂ ಹೆಚ್ಚು ನಿರಾಶ್ರಿತರು ಅರೆಸ್ಟ್

    ತಹಶೀಲ್ದಾರ್ ಮೇಲೆ ಹಲ್ಲೆ: 15 ಕ್ಕೂ ಹೆಚ್ಚು ನಿರಾಶ್ರಿತರು ಅರೆಸ್ಟ್

    ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ 15 ಕ್ಕೂ ಹೆಚ್ಚು ನಿರಾಶ್ರಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಕುಶಾಲನಗರದ ವಾಲ್ಮೀಕಿ ಭವನದಲ್ಲಿ ತೆರೆಯಲಾಗಿದ್ದ ನಿರಾಶ್ರಿತ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಿರಾಶ್ರಿತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಉದ್ರಿಕ್ತರು ತಹಶೀಲ್ದಾರ್ ಮೇಲೆಯೇ ಹಲ್ಲೆ ನಡೆಸಿದ್ದರು. ಈ ವೇಳೆ ತಲೆಗೆ ಪೆಟ್ಟು ಬಿದ್ದಿದ್ದ ತಹಶೀಲ್ದಾರ್ ಆಸ್ಪತ್ರೆಗೆ ದಾಖಲಾಗಿದ್ದರು.

    ಕೈ ಕೈ ಮಿಲಾಯಿಸುವ ವೇಳೆ ಕೆಲ ನಿರಾಶ್ರಿತರು ಸಹ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಗಳಿಂದ ದೂರು ದಾಖಲಾಗಿತ್ತು. ಗುರುವಾರ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು, ಇಂದು ಮುಂಜಾನೆ ಏಕಾಏಕಿ ನಿರಾಶ್ರಿತ ಕೇಂದ್ರಕ್ಕೆ ತೆರಳಿ ಹಲ್ಲೆ ಆರೋಪ ಸಂಬಂಧ 15 ಕ್ಕೂ ಹೆಚ್ಚು ನಿರಾಶ್ರಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಕಳೆದ 15 ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಕೊಡಗು ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಅನೇಕರು ಬೀದಿಪಾಲಾಗಿದ್ದರು. ನಿರಾಶ್ರಿತರಾಗಿದ್ದ ಜನರನ್ನು ಸರ್ಕಾರ ನಿರಾಶ್ರಿತ ಕೇಂದ್ರಗಳಲ್ಲಿ ತಂಗುವಂತೆ ವ್ಯವಸ್ಥೆ ಮಾಡಿಕೊಟ್ಟಿತ್ತು. ಆದರೆ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ತೆರೆಯಲಾಗಿದ್ದ ನಿರಾಶ್ರಿತ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸದೇ ಇದ್ದರಿಂದ ಸಾರ್ವಜನಿಕರು ರೊಚ್ಚಿಗೆದ್ದಿದ್ದರು. ನಿರಾಶ್ರಿತ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ ಹಾಗೂ ಸರಿಯಾದ ಸಮಯಕ್ಕೆ ಊಟವನ್ನು ನೀಡುತ್ತಿಲ್ಲವೆಂದು ನಿರಾಶ್ರಿತರು ಗಂಭೀರವಾಗಿ ಆರೋಪಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೈಂಗಿಕ ಕಿರುಕುಳ ನೀಡ್ತಿದ್ದ ಡ್ಯಾನ್ಸ್ ಸ್ವಾಮೀಜಿ ಶಿಷ್ಯನ ಬಂಧನ

    ಲೈಂಗಿಕ ಕಿರುಕುಳ ನೀಡ್ತಿದ್ದ ಡ್ಯಾನ್ಸ್ ಸ್ವಾಮೀಜಿ ಶಿಷ್ಯನ ಬಂಧನ

    ಮೈಸೂರು: ವಿವಾಹಿತ ಮಹಿಳೆಗೆ ಪತಿಯ ಸಹಕಾರದಿಂದಲೇ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನ್ಸ್ ಸ್ವಾಮೀಜಿಯ ಶಿಷ್ಯನನ್ನು ಕುವೆಂಪುನಗರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.

    ಆರೋಪಿ ಶ್ರೀ ವಿದ್ಯಾಹಂಸ ಭಾರತಿ ಸ್ವಾಮೀಜಿಯ ಶಿಷ್ಯ ಅನಿಲ್ ಆಚಾರ್ಯ ಬಂಧಿತ ಆರೋಪಿ. ರಾಮಕೃಷ್ಣ ನಗರದಲ್ಲಿರುವ ಮನೆಗೆ ಮಧ್ಯರಾತ್ರಿ ತೆರಳಿ ಲೈಂಗಿಕ ಕಿರುಕುಳ ನೀಡಿತ್ತಿದ್ದನು ಎಂದು ಮಹಿಳೆ ಆರೋಪ ಮಾಡಿದ್ದರು. ಅಲ್ಲದೇ ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ತನ್ನ ಪತಿ ಸಹಕಾರವನ್ನು ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದರು.

    ಸೆಪ್ಟೆಂಬರ್ 4ರಂದು ಈ ಘಟನೆ ನಡೆದಿದ್ದು ಸ್ವಾಮೀಜಿ, ರಾಜೇಶ್ ಬೋರೆ ಹಾಗೂ ಇತರ 5 ಮಂದಿಯಿಂದ ಕಿರುಕುಳ ನೀಡಿದ್ದರೆಂದು ಗೃಹಿಣಿ ಆರೋಪಿಸಿದ್ದರು. ಈ ಬಗ್ಗೆ ಸೆಪ್ಟೆಂಬರ್ 7ರಂದು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಘಟನೆ ನಡೆದ ದಿನದಿಂದ ಸ್ವಾಮೀಜಿ ಹಾಗೂ ದೂರದಾರ ಮಹಿಳೆ ಪತಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ವೇಳೆ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯ ಸಹ ಇದ್ದರು. ಸದ್ಯ ಸಂತ್ರಸ್ತೆ ಅನಿಲ್ ಆಚಾರ್ಯರನ್ನು ಗುರುತಿಸಿದ್ದು, 5 ಮಂದಿ ಪೈಕಿ ಅನಿಲ್ ಆಚಾರ್ಯ ಸಹ ಇದ್ದರು.

    ಏನಿದು ಪ್ರಕರಣ?
    ನನ್ನ ಪತಿ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ರಾಮಮಂದಿದಲ್ಲಿ ವಿದ್ಯಾಹಂಸ ಭಾರತಿ ಸ್ವಾಮೀಜಿ ಪರಿಚಯ ಇದ್ದಾರೆ. ಅವರು ಹೇಳಿದಂತೆ ಕೇಳಿದರೆ ನಮ್ಮ ಸಾಲವನ್ನೆಲ್ಲಾ ತೀರಿಸಿಕೊಳ್ಳಬಹುದು ಎಂದು ಹೇಳಿದ್ದನು. ಅದಕ್ಕೆ ನಾನು ನಿರಾಕರಿಸಿದೆ. ಮಂಗಳವಾರ ರಾತ್ರಿ ಸುಮಾರು 1 ಗಂಟೆಗೆ ಮನೆಗೆ ಬಂದು ಬೆಲ್ ಮಾಡಿದರು. ನಾನು ನನ್ನ ಪತಿ ಬಂದಿರಬೇಕು ಎಂದು ಬಾಗಿಲು ತೆಗೆದೆ. ಆದರೆ ನಮ್ಮ ಗಂಡನ ಜೊತೆ ಸ್ವಾಮೀಜಿ ಮತ್ತು ಆತನ ಚೇಲಾಗಳು ಸುಮಾರು 5 ಜನ ಏಕಾಏಕಿ ಮನೆಗೆ ನುಗ್ಗಿದ್ದರು.

    ನಮ್ಮ ಪತಿ ಮತ್ತು ಸ್ವಾಮೀಜಿ ನನ್ನ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಸ್ವಾಮೀಜಿ ನನ್ನ ಸೇವೆಗೆ ಬರುವುದಿಲ್ಲ ಎಂದು ನಿರಾಕರಿಸುತ್ತೀಯಾ ಎಂದು ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿ ರೂಮಿಗೆ ಎಳೆದುಕೊಂಡು ಹೋಗಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ನಾನು ದೇವಿ ಸ್ವರೂಪದವನು ನನ್ನ ಬೇಡಿಕೆಯನ್ನು ತಿರಸ್ಕರಿಸುತ್ತೀಯಾ ಎಂದು ಮೃಗನಂತೆ ವರ್ತಿಸಿದ್ದನು. ಇದಕ್ಕೆ ನನ್ನ ಪತಿ ಕುಮ್ಮಕ್ಕು ಕೊಟ್ಟಿದ್ದಾನೆ.

    ಅಷ್ಟೇ ಅಲ್ಲದೇ ನನ್ನ ಬಟ್ಟೆ, ಹಾಸಿಗೆ, ಮಂಚಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದನು. ಕೊನೆಗೆ ನಾನು ತಪ್ಪಿಸಿಕೊಂಡು ಪಕ್ಕದ ಮನೆಗೆ ಹೋಗಲು ಯತ್ನಸಿದೆ. ಅಷ್ಟರಲ್ಲಿ ಎಳೆದುಕೊಂಡು ಕಾರಿನಲ್ಲಿ ತನ್ನ ತೊಡೆ ಮೇಲೆ ಕೂರಿಸಿಕೊಂಡು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಇನ್ನು ಮೂರು ದಿನದಲ್ಲಿ ನನ್ನ ಸೇವೆಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ನನ್ನ ಪತಿಯ ಸಹೋದರನ ಮನೆಗೆ ಬಿಟ್ಟು ಹೋಗಿದ್ದಾನೆ. ಆದ್ದರಿಂದ ಸ್ವಾಮೀಜಿ, ಪತಿ ಮತ್ತು ಮೇಲ್ಕಂಡವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv