Tag: arrest

  • 7 ತಿಂಗಳ ಕಂದಮ್ಮನನ್ನು ಕೊಂದ್ಳು ಪಾಪಿ ತಾಯಿ

    7 ತಿಂಗಳ ಕಂದಮ್ಮನನ್ನು ಕೊಂದ್ಳು ಪಾಪಿ ತಾಯಿ

    ನವದೆಹಲಿ: ಆರ್ಥಿಕ ಸಮಸ್ಯೆಗೆ ಹೆದರಿ ತನ್ನ ಏಳು ತಿಂಗಳ ಕಂದಮ್ಮನನ್ನು ಕೊಂದು ಸಹಜ ಸಾವು ಎಂದು ಸಾಬೀತು ಪಡಿಸಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಆದಿಬಾ ಎಂಬವಳೇ ಮಗುವನ್ನು ಕೊಂದ ಪಾಪಿ ತಾಯಿ. ಮಗುವಿನ ತಂದೆ ಇಸ್ರೇಲ್ ಖಾನ್ ಮತ್ತು ಆದಿಬಾ ಮಲ್ಚಾಂಡ್ ಆಸ್ಪತ್ರೆಗೆ ಮೃತಪಟ್ಟ ಮಗುವನ್ನು ಕರೆತರುತ್ತಾರೆ. ಆಗಸ್ಟ್ 20 ರಂದು ಹಳ್ರಾತ್ ನಿಜಾಮುದ್ದೀನ್ ಪೊಲೀಸ್ ಠಾಣೆಯಲ್ಲಿ ಮಗು ಮೃತಪಟ್ಟಿರುವುದು ತಿಳಿದು, ವಿಚಾರಿಸಿದಾಗ ಮಗು ಬಕೆಟ್ ನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಪೋಷಕರು ಹೇಳುತ್ತಾರೆ.

    ಮಗುವಿನ ಕುತ್ತಿಗೆಯ ಭಾಗದಲ್ಲಿ ಅನುಮಾನಸ್ಪದ ಗುರುತುಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಮರಣೋತ್ತರ ಪರೀಕ್ಷೆಗಾಗಿ ಮಗುವಿನ ದೇಹವನ್ನು ಆಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಫಾರ್ ಮೆಡಿಕಲ್ ಸೈನ್ಸ್ (ಏಮ್ಸ್)ಗೆ ಕಳುಹಿಸಲಾಗಿತ್ತು.

    ಆಗಸ್ಟ್ 27 ರಂದು ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ಕತ್ತಿನ ಭಾಗಕ್ಕೆ ಮಾರಣಾಂತಿಕ ಒತ್ತಡ ಉಂಟಾಗಿದೆ. ಅಲ್ಲದೇ ಮೃತ ದೇಹದ ಆಂತರಿಕ ಭಾಗಗಳಲ್ಲಿ ಯಾವುದೇ ನೀರು ತುಂಬಿರಲಿಲ್ಲ ಎಂದು ವರದಿಯಾಗಿದೆ. ಈ ಕಾರಣದಿಂದಾಗಿ ಪೊಲೀಸರು ಮನೆಯ ಸ್ನಾನದ ಕೋಣೆಯನ್ನು ಪರಿಶೀಲಿಸಿ ಮಗು ಮೃತಪಟ್ಟಿದೆ ಎಂದು ಹೇಳಲಾಗಿದ್ದ ಬಕೆಟ್ ವಶಪಡಿಸಿಕೊಂಡಿದ್ದರು. ಆದಿಬಾ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಘಟನೆ ನಡೆದಿತ್ತು ಎಂಬುವುದು ಬೆಳಕಿಗೆ ಬಂದಿತ್ತು.

    ಕೊಲೆ ಮಾಡಿದ್ದು ಯಾಕೆ..?
    ಅನುಮಾನದ ಆಧಾರದ ಮೇಲೆ ಆದಿಬಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಮಗು ಹುಟ್ಟಿದಾಗಿನಿಂದಲೂ ಅನಾರೋಗ ಪೀಡಿತವಾಗಿತ್ತು. ಮಗುವಿನ ಚಿಕಿತ್ಸೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಲಾಗಿತ್ತು. ಆರ್ಥಿಕ ಸಮಸ್ಯೆಗಳನ್ನು ತೊಡೆದುಹಾಕಲು ಮಗುವನ್ನೇ ಕೊಲೆ ಮಾಡಲು ನಿರ್ಧರಿದ್ದಾಳೆ. ಬಳಿಕ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮಲಗಿದ್ದ ಮಗುವನ್ನು ತನ್ನ ದುಪ್ಪಟದ ಸಹಾಯದಿಂದ ಮಗುವನ್ನು ಕೊಲೆ ಮಾಡಿದ್ದಾಳೆ. ಮೃತಪಟ್ಟ ಮಗುವಿನ ದೇಹವನ್ನು ಬಕೆಟ್ ನಲ್ಲಿ ಹಾಕಿ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಮೃತ ದೇಹವನ್ನು ತೆಗೆದು ಹಾಸಿಗೆ ಮೇಲೆ ಮಲಗಿಸಿ ಪತಿಗೆ ವಿಷಯವನ್ನು ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದರು.

    ಸದ್ಯಕ್ಕೆ ಪೊಲೀಸರು ಆರೋಪಿ ಆದಿಬಾಳನ್ನು ಬಂಧಿಸಿದ್ದು, ಕೊಲೆ ಮಾಡಲು ಬಳಸಿದ್ದ ದುಪ್ಪಟವನ್ನು ವಶಪಡಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವರದಕ್ಷಿಣೆಯಲ್ಲಿ ಕೊಲೆಯಾಗಿದ್ದ ಮಹಿಳೆ ಇನ್ನೊಬ್ಬನ ಜೊತೆ ಜೀವಂತವಾಗಿ ಪ್ರತ್ಯಕ್ಷ!

    ವರದಕ್ಷಿಣೆಯಲ್ಲಿ ಕೊಲೆಯಾಗಿದ್ದ ಮಹಿಳೆ ಇನ್ನೊಬ್ಬನ ಜೊತೆ ಜೀವಂತವಾಗಿ ಪ್ರತ್ಯಕ್ಷ!

    ಲಕ್ನೋ: ವರದಕ್ಷಿಣೆ ಕಿರುಕುಳದಿಂದ ಕೊಲೆಗೀಡಾಗಿದ್ದ ಮಹಿಳೆಯೊಬ್ಬಳು ಮತ್ತೊಬ್ಬನನ್ನು ಮದುವೆಯಾಗಿರುವ ಪ್ರಕರಣವೊಂದು ಉತ್ತರಪ್ರದೇಶದ ಫಾಜೀಯಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ರೂಬಿ ಹಾಗೂ ಆಕೆಯ ಇನ್ನೊಬ್ಬ ಪತಿ ರಾವುನನ್ನು ಸಫ್ದರ್ಜಂಗ್ ಪೊಲೀಸರು ಬಂಧಿಸಿದ್ದಾರೆ. ರೂಭಿಯು ಬಾರಾಬಂಕಿಯ ನಿವಾಸಿಯಾಗಿದ್ದು, ಅದೇ ಪ್ರದೇಶದ ನಿವಾಸಿಯಾಗಿದ್ದ ರಾಹುಲ್ ಎಂಬಾತನನ್ನು 2016ರ ಜನವರಿಯಲ್ಲಿ ಮದುವೆಯಾಗಿದ್ದಳು. 2017ರ ಜೂನ್ ನಲ್ಲಿ ರೂಬಿ ತಂದೆ ಹರಿಪ್ರಸಾದ್ ನನ್ನ ಮಗಳನ್ನು ಪತಿ ರಾಹುಲ್, ಆಕೆಯ ಮಾವ ರಾಮಹರ್ಷ ಹಾಗೂ ಅತ್ತೆ ಬಾರ್ಕಿ ವರದಕ್ಷಿಣೆ ಕಿರುಕುಳ ನೀಡಿ ಕೊಂದುಹಾಕಿದ್ದಾರೆ ಎಂದು ದೂರು ನೀಡಿದ್ದರು.

    ಈ ಕುರಿತು ತನಿಖೆ ಆರಂಭಿಸಿದ ಸಫ್ದರ್ಜಂಗ್ ಪೊಲೀಸ್ ಠಾಣೆಯ ಪೊಲೀಸರು ಕೊಲೆ ಆರೋಪ ಸಾಬೀತು ಮಾಡುವಂತಹ ಯಾವುದೇ ಸಾಕ್ಷ್ಯಗಳು ಸಿಗದೇ ಕಾರಣ ದೂರನ್ನು ದಾಖಲಿಸಿಕೊಳ್ಳಲಿಲ್ಲ. ಪೊಲೀಸರು ದೂರು ದಾಖಲಿಕೊಳ್ಳದ್ದಕ್ಕೆ ಹರಿಪ್ರಸಾದ್‍ರವರು ಕೋರ್ಟ್ ಮೊರೆ ಹೋಗಿದ್ದರು. 2018ರ ಜುಲೈ ತಿಂಗಳಲ್ಲಿ ಕೋರ್ಟ್ ಪ್ರಕರಣವನ್ನು ದಾಖಲಿಸಿಕೊಳ್ಳುವಂತೆ ಆದೇಶ ನೀಡಿತ್ತು.

    ಈ ಕುರಿತು ತನಿಖೆ ಕೈಗೊಂಡ ಪೊಲೀಸರಿಗೆ ಮಹಿಳೆಯ ಫೇಸ್ಬುಕ್ ಹಾಗೂ ಆಕೆಯ ದೂರವಾಣಿ ಕರೆಗಳ ಮೇಲೆ ಅನುಮಾನ ಬಂದು, ತೀವ್ರ ತನಿಖೆ ನಡೆಸಿದಾಗ, ಆಕೆಯು ದೆಹಲಿಯಲ್ಲಿ ಮತ್ತೊಬ್ಬನೊಂದಿಗೆ ಮದುವೆಯಾಗಿ ಜೀವನ ನಡೆಸುತ್ತಿರುವ ವಿಚಾರ ತಿಳಿದು ಬಂದಿದೆ. ಕೂಡಲೇ ದೆಹಲಿಗೆ ತೆರಳಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಬಾರಾಬಂಕಿ ಜಿಲ್ಲಾ ವರಿಷ್ಠಾಧಿಕಾರಿ ವಿ.ಪಿ.ಶ್ರೀವಾತ್ಸವ್, ಕೊಲೆಯಾದ ಮಹಿಳೆಯ ಮೃತದೇಹ ಸಿಗದ ಕಾರಣ, ದೂರನ್ನು ದಾಖಲಿಸಿಕೊಂಡಿರಲಿಲಲ್ಲ. ಕೋರ್ಟ್ ಆದೇಶದ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದಾಗ, ಆಕೆಯು ಜೀವಂತವಾಗಿದ್ದಾಳೆಂದು ತಿಳಿದು ಬಂತು. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ, ಆಕೆಯು ತನ್ನ ಪ್ರಿಯಕರನೊಂದಿಗೆ ಮದುವೆಯಾಗಲು ಈ ರೀತಿಯ ನಾಟಕವಾಡಿರುವುದಾಗಿ  ಒಪ್ಪಿಕೊಂಡಿದ್ದಾಳೆಂದು ತಿಳಿಸಿದ್ದಾರೆ.

    ನ್ಯಾಯಾಲಯದ ದಿಕ್ಕು ತಪ್ಪಿಸಿದ ರೂಭಿ, ಪತಿ ರಾಹುಲ್ ಹಾಗೂ ತಂದೆ ಹರಿಪ್ರಸಾದ್ ವಿರುದ್ಧ ಐಪಿಸಿ ಸೆಕ್ಷನ್ 182ರ ಅಡಿ ಪ್ರಕರಣವನ್ನು ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 15 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಬೌದ್ಧ ಸನ್ಯಾಸಿ ಅರೆಸ್ಟ್

    15 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಬೌದ್ಧ ಸನ್ಯಾಸಿ ಅರೆಸ್ಟ್

    ಪಾಟ್ನಾ: ಬಿಹಾರದ ಬೋಧ್ ಗಯಾದಲ್ಲಿ 15 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಬೌದ್ಧ ಸನ್ಯಾಸಿಯನ್ನು ಬುಧವಾರ ಪೋಲಿಸರು ಬಂಧಿಸಿದ್ದಾರೆ.

    ಬೋಧ್‍ಗಯಾದಲ್ಲಿನ ಮಾಸ್ತಿಪುರ್ ಗ್ರಾಮದಲ್ಲಿ ಸನ್ಯಾಸಿ, ಪ್ರಸನ್ನ ಜ್ಯೋತಿ ಬೌದ್ಧ ಶಾಲೆ ಮತ್ತು ಧ್ಯಾನ ಕೇಂದ್ರ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದನು. ಆ ಕೇಂದ್ರದಲ್ಲಿ ಅಸ್ಸಾಂನ ಕರ್ಬಿ ಆಂಗ್ಲೋಂಗ್ ಜಿಲ್ಲೆಯ ಮಕ್ಕಳು ಅಧ್ಯಯನ ಮಾಡುತ್ತಿದ್ದರು. ಸನ್ಯಾಸಿ ಈ ಬಾಲಕರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಡೆಪ್ಯೂಟಿ ಎಸ್ಪಿ ರಾಜ್ಕುಮಾರ್ ಷಾ ಅವರು ಈ ಘಟನೆ ಕುರಿತು ಸನ್ಯಾಸಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಹೇಳಿದ್ದಾರೆ.

    6 ರಿಂದ 12 ವರ್ಷದ ಚಿಕ್ಕ ಮಕ್ಕಳನ್ನು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗುವಂತೆ ಸನ್ಯಾಸಿ ಒತ್ತಡ ಹಾಕುತ್ತಿದ್ದ ಎಂದು ಬಾಲಕರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬೌದ್ಧ ಶಾಲೆ ಮತ್ತು ಧ್ಯಾನ ಕೇಂದ್ರವನ್ನು ನಡೆಸುತ್ತಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ, ಗುಂಡು ಹಾರಿಸಿ ದರೋಡೆಕೋರರ ಬಂಧನ

    ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ, ಗುಂಡು ಹಾರಿಸಿ ದರೋಡೆಕೋರರ ಬಂಧನ

    ಬೆಂಗಳೂರು: ನಗರದ ಹೊರವಲಯದ ದೇವನಹಳ್ಳಿಯ ಬಳಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದರೋಡೆಕೋರರನ್ನು ಚೇಸ್ ಮಾಡಿ, ಗುಂಡು ಹಾರಿಸುವ ಮೂಲಕ ಇಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಉದಯ ಹಾಗೂ ಪವನ್ ಬಂಧಿತ ಆರೋಪಿಗಳಾಗಿದ್ದಾರೆ. ಬುಧವಾರ ಸಂಜೆ ಇಬ್ಬರು ದರೋಡೆಕೋರರ ಖಚಿತ ಮಾಹಿತಿ ಮೇರೆಗೆ ಯಲಹಂಕ ಇನ್ಸ್ ಪೆಕ್ಟರ್ ಮಂಜೇಗೌಡ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಇಬ್ಬರು ಪೊಲೀಸರನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಚೇಸ್ ಮಾಡಿದ ಪೊಲೀಸರು, ದೇವನಹಳ್ಳಿ ಸಮೀಪದ ಅಕ್ಕುಪೇಟೆ ಬೊಮ್ಮವಾರ ಮೀಸಲು ಅರಣ್ಯ ಪ್ರದೇಶದಲ್ಲಿ ಹಿಡಿದಿದ್ದಾರೆ.

    ತಪ್ಪಿಸಿಕೊಳ್ಳಲು ದರೋಡೆಕೋರರು ಪೊಲೀಸರು ಹಾಗೂ ಅವರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೂಡಲೇ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಇಬ್ಬರು ದರೋಡೆಕೋರರ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಬಂಧಿತ ಆರೋಪಿಗಳು ಕಳೆದ ಎರಡು ದಿನಗಳ ಹಿಂದೆ ಗಣೇಶ ಹಬ್ಬದ ಚಂದಾ ವಸೂಲಿಮಾಡುತ್ತಿದ್ದ ವೃದ್ಧರೊಬ್ಬರನ್ನು ಸುಲಿಗೆ ಮಾಡಿದ್ದರು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿತ್ತು, ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕ್ರೀಡಾಂಗಣದಲ್ಲೇ ಕುಳಿತು ಆನ್‍ಲೈನ್ ಕ್ರಿಕೆಟ್ ಬೆಟ್ಟಿಂಗ್ – ಇಬ್ಬರು ಅರೆಸ್ಟ್

    ಕ್ರೀಡಾಂಗಣದಲ್ಲೇ ಕುಳಿತು ಆನ್‍ಲೈನ್ ಕ್ರಿಕೆಟ್ ಬೆಟ್ಟಿಂಗ್ – ಇಬ್ಬರು ಅರೆಸ್ಟ್

    ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯದ ವೇಳೆ ಆನ್‍ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

    ರಿಕಿ ಹಾಗೂ ಮಾಯಾಂಕ್ ಬಂಧಿತ ಆರೋಪಿಗಳಾಗಿದ್ದು, ಇಬ್ಬರು ರಾಜಸ್ಥಾನ ಮೂಲದ ಬುಕ್ಕಿಗಳು ಎಂಬ ಮಾಹಿತಿ ಲಭಿಸಿದೆ. ಇಂದು ಭಾರತ `ಎ’ ಹಾಗೂ ದಕ್ಷಿಣ ಆಫ್ರಿಕಾ `ಎ’ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ಕ್ರೀಡಾಂಗಣದಲ್ಲೇ ಕುಳಿತು ಆರೋಪಿಗಳು ಆನ್ ಲೈನ್ ಬೆಟ್ಟಿಂಗ್ ಆಡುತ್ತಿದ್ದರು.

    ಕ್ರೀಡಾಂಗಣದಲ್ಲೇ ಕುಳಿತು ಬೆಟ್ಟಿಂಗ್ ಆಡುವುದರಿಂದ ಟಿವಿಯಲ್ಲಿ ಪ್ರಸಾರವಾಗುವ ಮೂವತ್ತು ಸೆಕೆಂಡ್ ಮುಂಚೆಯೇ ಪ್ರತಿಯೊಂದು ಬಾಲ್ ನ ಆಪ್‍ಡೇಟ್ ಲಭಿಸುತ್ತಿತ್ತು. ಇದನ್ನೇ ಲಾಭವಾಗಿ ಬಳಸಿಕೊಳ್ಳುತ್ತಿದ್ದ ಆರೋಪಿಗಳು ನಂಬರ್ ಕೋಡ್‍ಗಳ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಅನುಮಾನಗೊಂಡ ಬಿಸಿಸಿಐ ಸದಸ್ಯ ಧೀರಜ್ ಮಲ್ಹೋತ್ರಾ ಅವರು ಕಬ್ಬನ್ ಪಾರ್ಕ್ ಪೊಲೀಸರಗೆ ಮಾಹಿತಿ ನೀಡಿದ್ದರು. ಬಳಿಕ ಆರೋಪಿಗಳನ್ನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

    ವಿಚಾರಣೆ ವೇಳೆ ಕಳೆದ ಕೆಲ ವರ್ಷದಿಂದ ಬೆಟ್ಟಿಂಗ್ ನಡೆಸುತ್ತಿದ್ದ ಕುರಿತು ಮಾಹಿತಿ ಬಾಯ್ಬಿಟ್ಟಿರುವ ಆರೋಪಿಗಳು ಇತರೇ ಕೆಲ ಬುಕ್ಕಿಗಳ ಜೊತೆ ಸಂಪರ್ಕ ಇರುವ ಕುರಿತು ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ಆರೋಪಿಗಳಿಂದ ಬೆಟ್ಟಿಂಗ್ ನಡೆಸಲು ಬಳಸುತ್ತಿದ್ದ ಮೊಬೈಲ್ ಹಾಗೂ ವೈಫೈ ರೂಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಧಿಕಾರಿಗಳ ಮೇಲಿನ ಸಿಟ್ಟಿಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕ್ದ!

    ಅಧಿಕಾರಿಗಳ ಮೇಲಿನ ಸಿಟ್ಟಿಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕ್ದ!

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಮಾನ ನಿಲ್ದಾಣದ ಪೊಲೀಸರು ಯಶಸ್ವಿಯಾಗಿದ್ದಾರೆ.

    ಉಡುಪಿ ಜಿಲ್ಲೆಯ ಮಣಿಪಾಲದ ಆದಿತ್ಯ ರಾವ್ (34) ಬಂಧಿತ ಆರೋಪಿಯಾಗಿದ್ದಾನೆ. ಕಳೆದ 15 ದಿನಗಳಲ್ಲಿ ಎರಡು ಬಾರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ಗೆ ಕರೆ ಮಾಡಿ ವಿಮಾನ ನಿಲ್ದಾಣವನ್ನು ಸ್ಟೋಟಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ. ಅಲ್ಲದೇ ಕಳೆದ ಎರಡು ದಿನಗಳ ಹಿಂದೆಯೂ ಸಹ ವಿಮಾನ ನಿಲ್ದಾಣದ ಪಾರ್ಕಿಂಗ್ ಜಾಗವನ್ನು ಸ್ಪೋಟಿಸುವುದಾಗಿ ಇ-ಮೇಲ್ ಮಾಡಿದ್ದನು. ಇದರಿಂದ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣವನ್ನು ಸಂಪೂರ್ಣ ಪರಿಶೀಲನೆ ನಡೆಸಿದಾಗ, ಇದೊಂದು ಹುಸಿಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.

    ಹುಸಿ ಬಾಂಬ್ ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತೀವ್ರವಾಗಿ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಬಿಇ, ಎಂಬಿಎ ವಿದ್ಯಾಭ್ಯಾಸ ಮಾಡಿಕೊಂಡು, ಕೆಲ ತಿಂಗಳ ಹಿಂದೆಯಷ್ಟೆಯೇ ಕೆಐಎಎಲ್‍ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ ಅಲ್ಲಿನ ಅಧಿಕಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲವೆಂದು ಕೆಲಸ ಬಿಟ್ಟಿದ್ದನು. ಅಧಿಕಾರಿಗಳ ಮೇಲಿನ ಕೋಪಕ್ಕೆ ಈ ರೀತಿ ಬೆದರಿಕೆ ಮಾಡಿರುವುದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅಲ್ಲದೇ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಹಾಕಿರುವುದದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದು, ಘಟನೆ ಸಂಬಂಧ ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 12 ಮಂದಿ ಅಂತರ್ ರಾಜ್ಯ ಕಳ್ಳರ ಬಂಧನ: 3 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶ

    12 ಮಂದಿ ಅಂತರ್ ರಾಜ್ಯ ಕಳ್ಳರ ಬಂಧನ: 3 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶ

    ಬಾಗಲಕೋಟೆ: 12 ಜನ ಅಂತರ್ ರಾಜ್ಯ ಕಳ್ಳರನ್ನು ಜಿಲ್ಲೆಯ ಇಳಕಲ್ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ 1.50 ಲಕ್ಷ ರೂ. ನಗದು, 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 4 ಬೈಕ್ ವಶಕ್ಕೆ ಪಡೆದಿದ್ದಾರೆ.

    ಆಂಧ್ರಪ್ರದೇಶ ಮೂಲದ ಗೂಗಲ್ ಜಿನ್ನಾ, ದಾಸ್ ಬಾಬು, ನಾನಿ ಗುಗಲಾ, ಬಾಣಾಲ್ ಚಿನ್ನಾ, ವಿಜಯ ಅಕುಲಾ, ಇಳಯ ರಾಜಾ, ಪ್ರಸಂಗಿ ಬಾನಾಲಾ, ರಾಜು, ಮೈಕಲ್ ರಾಜು ಉಪತೊಲ್ಲಾ, ಆಂಜನೇಯ ಬೆಲ್ದಾರಾ, ಎಲಿಜಾ ಬಾಣಾಲ್ ಹಾಗೂ ನಂದಾ ಚೆಲ್ಲಾ ಬಂಧಿತ ಆರೋಪಿಗಳು.

    ಬಂಧಿತರು ಇದೇ ವರ್ಷ ಮಾರ್ಚ್ 29ರಂದು ಇಳಕಲ್ ನಗರದ ವಿಶ್ವನಾಥ ಪಾಟೀಲ್ ಮನೆಯಲ್ಲಿ 3 ಲಕ್ಷ ರೂ. ನಗದು, 151 ಗ್ರಾಂ ಚಿನ್ನ ದೋಚಿದ್ದರು. ಮಾರ್ಕಂಡಯ್ಯ ವಗ್ಗಾ ಎಂಬವರು ಆಗಸ್ಟ್ 16ರಂದು ಇಳಕಲ್ ನ ಎಸ್.ಬಿ.ಐ ಬ್ಯಾಂಕಿನಿಂದ ಹಣ ಬ್ಯಾಗ್ ಹಿಡಿದು ಹೊರಗೆ ಬಂದಿದ್ದರು. ಆಗ ಹಿಂಬದಿಯಿಂದ ಬಂದ ಆರೋಪಿಗಳು ಬ್ಯಾಗ್ ಕಿತ್ತುಕೊಂಡು ಹೋಗಿದ್ದರು.

    ರಾಜ್ಯದ ವಿವಿಧ ಭಾಗದಲ್ಲಿ ಇವರು ಕಳ್ಳತನ ಮಾಡುತ್ತಿದ್ದು, ಇವರ ಪತ್ತೆಗಾಗಿ ಬಲೆ ಬೀಸಿದ್ದ ಇಳಕಲ್ ಪೊಲೀಸರು 12 ಜನರನ್ನು ತುಮಕೂರಿನಲ್ಲಿ ಬಂಧಿಸಿದ್ದಾರೆ. ಇವರೆಲ್ಲರೂ ವಿವಿಧ ಗ್ರಾಮಗಳಿಗೆ ಹೋಗಿ, ಅಲ್ಲಿ ಕೆಲವು ದಿನಗಳ ಕಾಲವಿದ್ದು, ಎಲ್ಲವನ್ನೂ ವೀಕ್ಷಿಸಿ ಕಳ್ಳತನ ಮಾಡುತ್ತಿದ್ದರು. ಇವರ ಜೊತೆಗೆ ದೊಡ್ಡ ತಂಡವೇ ಬಂಧಿತರ ಹಿಂದಿದೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಉಳಿದವರನ್ನು ಪತ್ತೆ ಹಚ್ಚಲು ವಿಚಾರಣೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ಹತ್ಯೆಗೆ ಸಂಚು: ವರವರ ರಾವ್ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

    ಮೋದಿ ಹತ್ಯೆಗೆ ಸಂಚು: ವರವರ ರಾವ್ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಸಂ ಸಂಸ್ಥಾಪಕ ಮತ್ತು ಕ್ರಾಂತಿಕಾರಿ ಬರಹಗಾರ ವರವರ ರಾವ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದು, ಈಗ ದೆಹಲಿ ಹೈಕೋರ್ಟ್ ಬಂಧನಕ್ಕೆ ತಡೆಯಾಜ್ಞೆ ನೀಡಿದೆ.

    ಇಂದು ಹೈದರಾಬಾದ್‍ಗೆ ಬಂದಿದ್ದ ಪುಣೆ ಪೊಲೀಸ್ ತಂಡವು, ಸ್ಥಳೀಯ ಪೊಲೀಸರ ಸಹಾಯ ಪಡೆದು, ನಗರದ ವಿವಿಧೆಡೆ ವರವರ ರಾವ್ ಪತ್ತೆಗಾಗಿ ಶೋಧಕಾರ್ಯ ನಡೆಸಿದ್ದರು. ಚಿಕ್ಕಡ್‍ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಜವಾಹರ್ ನಗರದಲ್ಲಿರುವ ವರವರ ರಾವ್ ಮನೆಗೆ 20ಕ್ಕೂ ಹೆಚ್ಚು ಪುಣೆ ಮಫ್ತಿ ವೇಷದ ಪೊಲೀಸರು ಭೇಟಿ ನೀಡಿದ್ದರು. ಈ ವೇಳೆ ಕೆಲ ಹೊತ್ತು ರಾವ್ ಅವವನ್ನು ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಿದ್ದರು.

    ವರವರ ರಾವ್ ಹಾಗೂ ಕುಟುಂಬಸ್ಥರ ಮನೆ ಮೇಲೆ ಅಷ್ಟೇ ಅಲ್ಲದೆ ಪತ್ರಕರ್ತರಾದ ಕೆ.ವಿ.ಕುಮಾರನಾಥ್, ಕ್ರಾಂತಿ ತೆಕುಲ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಸತ್ಯನಾರಾಯಣ ಅವರ ಮನೆ ಮೇಲೂ ಪೊಲೀಸರು ದಾಳಿ ಮಾಡಿ, ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಏನಿದು ಪ್ರಕರಣ?
    ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಚುರುಕು ಕಾರ್ಯಾಚರಣೆ ನಡೆಸಿದ್ದರು. ಇತ್ತೀಚೆಗೆ ಮಾನವಹಕ್ಕು ಕಾರ್ಯಕರ್ತ ರೋನಾ ಜಾಕೋಬ್ ವಿಲ್ಸನ್ ಅವರ ದೆಹಲಿಯ ಮನೆಯಲ್ಲಿ ಕೆಲವು ಪತ್ರಗಳನ್ನು ವಶಕ್ಕೆ ಪಡೆದಿದ್ದರು. ಆ ಪತ್ರಗಳಲ್ಲಿ ವರವರ ರಾವ್ ಹೆಸರು ಉಲ್ಲೇಖವಾಗಿದೆ. ಅವರನ್ನು ಬಂಧಿಸಲು ಅನುಮತಿ ನೀಡುವಂತೆ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರು. ಇನ್ನು ರಾವ್ ನಕ್ಸಲ್ ಸಂಘಟನೆಗಳಿಗೆ ಹಾಗೂ ಅವರು ನಡೆಸುತ್ತಿರುವ ದಾಳಿಗೆ ಆರ್ಥಿಕ ನೆರವು ನೀಡುತ್ತಿದ್ದರು ಎನ್ನುವ ಆರೋಪವೂ ಕೇಳಿ ಬಂದಿದೆ.

    ವರವರ ರಾವ್ ಬಂಧನಕ್ಕೆ ಖಂಡಿಸಿ ಎಡಪಕ್ಷಗಳ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಾಲಾ ಹುಡ್ಗಿಯ ಬಟ್ಟೆ ಎಳೆದು ಕಿರುಕುಳ – ರಸ್ತೆಯಲ್ಲಿಯೇ 7 ಮಂದಿ ಕಾಮುಕರಿಂದ ಹೀನಾಕೃತ್ಯ

    ಶಾಲಾ ಹುಡ್ಗಿಯ ಬಟ್ಟೆ ಎಳೆದು ಕಿರುಕುಳ – ರಸ್ತೆಯಲ್ಲಿಯೇ 7 ಮಂದಿ ಕಾಮುಕರಿಂದ ಹೀನಾಕೃತ್ಯ

    ಪಾಟ್ನಾ: ರಸ್ತೆಯಲ್ಲಿಯೇ ಶಾಲಾ ಹುಡುಗಿಯೊಬ್ಬಳ ಬಟ್ಟೆ ಎಳೆದು ಏಳು ಮಂದಿ ಕಾಮುಕರು ಆಕೆಗೆ ಕಿರುಕುಳ ನೀಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ.

    ಈ ಘಟನೆ ಅನೇಕ ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏಳು ಆರೋಪಿಗಳು ಸಂತ್ರಸ್ತೆ ಅಳುತ್ತಾ ಸಹಾಯಕ್ಕೆ ಅಂಗಲಾಚಿದರೂ ಬಿಡದೇ ಕಿರುಕುಳ ನೀಡಿದ್ದಾರೆ. ಈ ವಿಡಿಯೋ 40 ಸೆಕೆಂಡ್ ಗಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸೋಮವಾರ ಪೊಲೀಸರು ತನಿಖೆ ಮಾಡಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಉಳಿದ ಆರು ಮಂದಿ ಆರೋಪಿಗಳನ್ನು ಪತ್ತೆ ಮಾಡಬೇಕಾಗಿದೆ.

    ಪಂಕಜ್ ಯಾದವ್ ಬಂಧಿತ ಆರೋಪಿ. ಈತ ಸಂತ್ರಸ್ತೆಗೆ ಕಿರುಕುಳ ನೀಡುತ್ತಿದ್ದಾಗ ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು. ಪೊಲೀಸ್ ಸಿಬ್ಬಂದಿಯೊಬ್ಬರಿಗೆ ವಾಟ್ಸಪ್ ಮೂಲಕ ಬಾಲಕಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಬಂದಿದೆ. ಅದನ್ನು ನೋಡಿದ ತಕ್ಷಣ ಎಲ್ಲ ಜಿಲ್ಲಾ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಿದೆವು. ತಕ್ಷಣ ಘಟನೆ ನಡೆದ ಸ್ಥಳವನ್ನು ಪತ್ತೆ ಮಾಡಿ ನಂತರ ಸದಾರ್ ಪೊಲೀಸ್ ಠಾಣಾ ಪೊಲೀಸರು ಪಂಕಜ್ ಯಾದವ್ ನನ್ನು ಬಂಧಿಸಿದ್ದಾರೆ ಎಂದು ಸೂಪರಿಂಟೆಂಡೆಂಟ್ ಪೊಲೀಸ್ ರಾಕೇಶ್ ಕುಮಾರ್ ತಿಳಿಸಿದ್ದಾರೆ.

    ನಾವು ಸಂತ್ರಸ್ತೆಯನ್ನು ಪತ್ತೆ ಮಾಡಿ ಆಕೆಯ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಸಂತ್ರಸ್ತೆ ಯಾವುದೇ ರೀತಿಯ ದೂರು ಸಲ್ಲಿಸಿಲ್ಲ. ಆದರು ನಾವು ವಿಡಿಯೋವನ್ನು ಆಧರಿಸಿದ ಪ್ರಕರಣವನ್ನು ದಾಖಲಿಸಿದ್ದೇವೆ. ಈ ವಿಡಿಯೋ ಬಂದ ಅಧಿಕಾರಿಯೊಬ್ಬರು ಎಫ್‍ಐಆರ್ ದಾಖಲಿಸಿದ್ದಾರೆ. ನಾವು ಎಲ್ಲ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಎಸ್‍ಪಿ ಹೇಳಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಸಂತ್ರಸ್ತೆ ಸೈಕಲ್ ಮೂಲಕ ಗ್ರಾಮದ ರಸ್ತೆಯಲ್ಲಿ ಹೋಗುತ್ತಿದ್ದಳು. ಆಗ ಯುವಕರ ಗುಂಪೊಂದು ಆಕೆಯನ್ನು ಅಡ್ಡ ಗಟ್ಟಿ ಕಿರುಕುಳ ನೀಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ಒಬ್ಬ ಆರೋಪಿ ಆಕೆಯನ್ನು ರಕ್ಷಿಸಲು ಪ್ರಯತ್ನಿಸಿದಾಗ ಉಳಿದರು ಆತನನ್ನು ತಡೆದಿದ್ದಾರೆ. ನಂತರ ಆಕೆ ತಪ್ಪಿಕೊಳ್ಳಲು ಪ್ರಯತ್ನಿಸಿದಾಗ ಸಂತ್ರಸ್ತೆಯ ದುಪ್ಪಟ್ಟವನ್ನು ಎಳೆದಾಡಿ ಕಿರುಕುಳ ನೀಡಿದ್ದಾರೆ. ಆಗ ಸಂತ್ರಸ್ತೆ ತನ್ನನ್ನು ಬಿಡುವಂತೆ ಗೋಗರೆದಿದ್ದಾಳೆ. ಆದರೆ ಕಾಮುಕರು ಸಂತ್ರಸ್ತೆಯನ್ನು ಬಿಡದೆ ಕಿರುಕುಳ ನೀಡಿದ್ದಾರೆ. ಈ ಎಲ್ಲ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.

    ಆರೋಪಿಯೊಬ್ಬನನ್ನು ಬಂಧಿಸಿದ ನಂತರ ಉಳಿದವರ ಪತ್ತೆ ಮಾಡುವುದು ಸುಲಭವಾಗಿದೆ. ಈಗಾಗಲೇ ಅವರಿಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಎಂಎಫ್ ಹಾಲಿಗೆ ಕಲಬೆರಕೆ ಮಾಡುತ್ತಿದ್ದ ಜಾಲ ಪತ್ತೆ: 9 ಜನರ ಬಂಧನ!

    ಕೆಎಂಎಫ್ ಹಾಲಿಗೆ ಕಲಬೆರಕೆ ಮಾಡುತ್ತಿದ್ದ ಜಾಲ ಪತ್ತೆ: 9 ಜನರ ಬಂಧನ!

    ಚಿಕ್ಕಮಗಳೂರು: ನಿಗಮಕ್ಕೆ ಸರಬರಾಜಾಗುತ್ತಿದ್ದ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧಿಕಾರಿಗಳು ಹಾಗೂ ಪೊಲೀಸರ ತಂಡ ಯಶಸ್ವಿಯಾಗಿದೆ.

    ಹಾಸನ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿರುವ ಹಾಲಿಗೆ ವಿಷಕಾರ ಪದಾರ್ಥಗಳನ್ನು ಮಿಶ್ರಣಮಾಡಲಾಗುತ್ತಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಮಾರ್ಚ್ 20 ರಂದು ಹಾಸನ ಕೆಎಂಎಫ್ ಘಟಕಕ್ಕೆ ಪತ್ರ ಬರೆದಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿನ ಸುಮಾರು 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಗಳು ಹಾಲಿನ ಕ್ಯಾನ್ ಸಾಗಾಣೆ ಮಾಡುವ ವಾಹನಗಳಲ್ಲೇ ಮಿಕ್ಸಿಂಗ್ ಮಾಡುತ್ತಿದ್ದರು. ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಬೀರೂರು ಘಟಕಗಳಿಂದ ಜಾಲಕ್ಕೆ ಸಾಥ್ ನೀಡಲಾಗುತಿತ್ತು. ಅಷ್ಟೇ ಅಲ್ಲದೇ ಮಾಚೇನಹಳ್ಳಿಯಲ್ಲೂ ಸಹ ಕಲಬೆರಕೆ ಜಾಲ ನಡೆಯುತಿತ್ತು ಎನ್ನುವ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

    ಈ ದಂಧೆಗೆ ಕೆಎಂಎಫ್ ಅಧಿಕಾರಿಗಳೇ ಬೆಂಬಲ ನೀಡುತ್ತಿದ್ದರಿಂದ ತನಿಖೆ ವಿಳಂಬಗೊಂಡಿತ್ತು. ಖುದ್ದು ಕೆಎಂಎಫ್‍ನ ಅಧಿಕಾರಿ ಸೌಮ್ಯರವರು ಮರು ತನಿಖೆಗೆ ಆದೇಶ ನೀಡಿ, ಚುರುಕುಗೊಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತನಿಖೆ ಮುಂದುವರಿಸಿದ್ದು, ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=KDooRbDdUmA