Tag: arrest

  • ಗಂಡನನ್ನು ಕೊಂದು ರೈತ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಅರೆಸ್ಟ್

    ಗಂಡನನ್ನು ಕೊಂದು ರೈತ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಅರೆಸ್ಟ್

    ಹಾಸನ: ಬೇಲೂರು ತಾಲೂಕಿನ ಮತ್ತಾವರದ ರೈತ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

    ಕಳೆದ ಜೂನ್ 8 ರಂದು ರೈತ ಯೋಗೇಶ್ (45) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಸಾಲದ ಬಾಧೆಯಿಂದ ಗಂಡ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಪತ್ನಿ ಗಾಯತ್ರಿ ದೂರು ದಾಖಲಿಸಿದ್ದಳು.

    ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪತ್ನಿ ಮತ್ತು ಪುತ್ರ ದರ್ಶನ್ ನ್ನನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾವೇ ಕೊಲೆ ಮಾಡಿದ್ದಾಗಿ ಸತ್ಯವನ್ನು ಒಪ್ಪಿಕೊಂಡಿದ್ದಾರೆ.

    ಆತ್ಮಹತ್ಯೆ ಎಂದು ಬಿಂಬಿಸಿ ಪರಿಹಾರದ ಹಣ ಪಡೆಯಲು ಯೋಗೇಶ್ ಮಲಗಿದ್ದಾಗ ಕತ್ತು ಹಿಸುಕಿ ಕೊಂದಿದ್ದೇವೆ. ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಕೋಣೆಯಲ್ಲೇ ನೇಣು ಹಾಕಿದ್ದೇವೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದರು. ಈಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

  • ದೀಪಕ್ ರಾವ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    ದೀಪಕ್ ರಾವ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

    ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ತಲ್ಲಣಕ್ಕೆ ಸೃಷ್ಟಿಸಿದ್ದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

    ಸಫ್ವಾನ್ (23) ಬಂಧಿತ ಆರೋಪಿಯಾಗಿದ್ದಾನೆ. ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಸಿಸಿಬಿ ಪೊಲೀಸರು ಸುರತ್ಕಲ್ ನ ಮುಕ್ಕ ಬಳಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತನಾದ ದೀಪಕ್ ರಾವ್‍ನನ್ನು ಇದೇ ವರ್ಷ ಜನವರಿ 3ರಂದು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ದೀಪಕ್ ರಾವ್ ಕೊಲೆ ಇಡೀ ಕರಾವಳಿಯಲ್ಲಿ ಭಾರೀ ತಲ್ಲಣಕ್ಕೆ ಕಾರಣವಾಗಿತ್ತು. ಇದಕ್ಕೂ ಮೊದಲು ಹಲವು ಪ್ರಮುಖರ ಹೆಸರುಗಳು ಪ್ರಕರಣದಲ್ಲಿ ಕೇಳಿಬಂದಿತ್ತು.

    ದೀಪಕ್ ರಾವ್ ಕೊಲೆ ಸಂಬಂಧ ಎಸಿಪಿ ಮಂಜುನಾಥ ಶೆಟ್ಟಿ ನೇತೃತ್ವದ ತನಿಖಾ ತಂಡ 13 ಮಂದಿ ಆರೋಪಿಗಳ ವಿರುದ್ಧ ಏಪ್ರಿಲ್ ನಲ್ಲಿ ಮಂಗಳೂರಿನ ಎರಡನೇ ಜೆಎಂಎಫ್ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು.

  • ಮನೆಗಳ್ಳರಿಂದ 4.15 ಲಕ್ಷ ರೂ.ನಗದು, 18.5 ಗ್ರಾಂ ಚಿನ್ನ, 65 ಸಾವಿರ ರೂ. ಮೌಲ್ಯದ ಮೊಬೈಲ್ ವಶ

    ಮನೆಗಳ್ಳರಿಂದ 4.15 ಲಕ್ಷ ರೂ.ನಗದು, 18.5 ಗ್ರಾಂ ಚಿನ್ನ, 65 ಸಾವಿರ ರೂ. ಮೌಲ್ಯದ ಮೊಬೈಲ್ ವಶ

    ಮೈಸೂರು: ಮನೆಗಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ರಂಗಸಮುದ್ರ ಗ್ರಾಮದ ಮನು, ಗವಿ, ಯೋಗೇಶ್, ಹಾಗೂ ಬೆಂಗಳೂರು ಕುಂಬಳಗೋಡು ನಿವಾಸಿ ಶಶಿಕುಮಾರ್ ಬಂಧಿತ ಆರೋಪಿಗಳು. ಜುಲೈ 7ರಂದು ರಂಗಸಮುದ್ರ ಗ್ರಾಮದ ವೀಣಾ ಅವರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದರು.

    ಖಚಿತ ಮಾಹಿತಿ ಮೇರೆಗೆ ರಂಗಸಮುದ್ರ ಗೇಟ್ ಬಳಿ ಟಿ.ನರಸೀಪುರ ತಾಲೂಕಿನ ಬನ್ನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 4.15 ಲಕ್ಷ ರೂ. ನಗದು, 18.5 ಗ್ರಾಂ ಚಿನ್ನಾಭರಣ ಹಾಗೂ 65 ಸಾವಿರ ರೂ. ಬೆಲೆಯ ನಾಲ್ಕು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

  • ಮಕ್ಕಳ ವದಂತಿ ನಂಬಿ ಹತ್ಯೆ, 30 ಮಂದಿ ಅರೆಸ್ಟ್

    ಮಕ್ಕಳ ವದಂತಿ ನಂಬಿ ಹತ್ಯೆ, 30 ಮಂದಿ ಅರೆಸ್ಟ್

    ಬೀದರ್: ಮಕ್ಕಳ ಕಳ್ಳರೆಂದು ಮುಸುಕುಧಾರಿಗಳಿಗೆ ಗ್ರಾಮಸ್ಥರು ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾನಗರ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ.

    ಶುಕ್ರವಾರ ತಡರಾತ್ರಿ ಪೊಲೀಸರು ಜನರನ್ನು ಬಂಧಿಸಿದ್ದಾರೆ. ಪೊಲೀಸರು ವಿಡಿಯೋ ನೋಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಜಿಲ್ಲೆಯ ಔರಾದ್ ತಾಲೂಕಿನ ಮೂರ್ಕಿ ಗ್ರಾಮದ ಬಳಿ ಮಕ್ಕಳ ಕಳ್ಳರೆಂದು ಮುಸುಕುದಾರಿಗಳಿಗೆ ಗ್ರಾಮಸ್ಥರು ಹಿಗ್ಗಾ-ಮುಗ್ಗಾ ಥಳಿಸಿದ್ದರು. ಜನರು ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅಜಮ್(26) ಆರೋಪಿ ಮೃತಪಟ್ಟಿದ್ದನು.

    ಗ್ರಾಮಸ್ಥರು ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಬಳಿಕ ಈ ವಿಡಿಯೋವನ್ನು ಪೊಲೀಸರು ಗಮನಿಸಿ ಜನರನ್ನು ಬಂಧಿಸಲು ಮುಂದಾಗಿದ್ದರು. ಈ ಬಗ್ಗೆ ತಿಳಿದುಕೊಂಡು ಗ್ರಾಮಸ್ಥರು ಬಂಧನದ ಭೀತಿಯಿಂದ ಗ್ರಾಮವನ್ನು ತೊರೆದಿದ್ದರು.

    ಶುಕ್ರವಾರ ತಡರಾತ್ರಿ ಪೊಲೀಸರು ಬಂಧಿಸಲು ಹೋದಾಗ ಜನರು ಗಲಾಟೆ ಮಾಡುತ್ತಿದ್ದರು. ಸ್ಥಳಕ್ಕೆ ಎಸ್.ಪಿ ದೇವರಾಜ್ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಳಿಕ 30 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಕಮಲಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಯುವತಿಯ ನಗ್ನ ಫೋಟೋ ವೈರಲ್ ಮಾಡಿದವರು ಅರೆಸ್ಟ್!

    ಯುವತಿಯ ನಗ್ನ ಫೋಟೋ ವೈರಲ್ ಮಾಡಿದವರು ಅರೆಸ್ಟ್!

    ಮಂಗಳೂರು: ಯುವತಿಯ ನಗ್ನ ಫೋಟೋವನ್ನು ವೈರಲ್ ಮಾಡಿದ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪೊಲೀಸರು ಬಂಧಿಸಿದ್ದಾರೆ.

    ಸಂದೇಶ್, ಜಗದೀಶ್ ಮತ್ತು ನವೀನ್ ಬಂಧಿತ ಆರೋಪಿಗಳು. ಮೊದಲು ಸಂದೇಶ್ ಯುವತಿಯನ್ನು ಪರಿಚಯ ಮಾಡಿಕೊಂಡು ಪುಸಲಾಯಿಸಿ ನಗ್ನ ಚಿತ್ರಗಳನ್ನು ಸೆರೆ ಹಿಡಿಯುತ್ತಿದ್ದನು. ಈತನ ನೀಚ ಕೃತ್ಯ ತಿಳಿದ ಬಳಿಕ ಯುವತಿ ದೂರವಾಗಿದ್ದಳು.

    ಆರೋಪಿ ಸಂದೇಶ್ ಆಕೆಯ ಬಳಿ ಪಡೆದಿದ್ದ ನಗ್ನ ಫೋಟೋಗಳನ್ನು ತನ್ನ ಸ್ನೇಹಿತರಾದ ಜಗದೀಶ್ ಮತ್ತು ನವೀನ್ ಜೊತೆ ಸೇರಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದನು. ಫೋಟೋಗಳು ವೈರಲ್ ಆದ ಬಳಿಕ ಪೊಲೀಸರು ವಿಚಾರಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

  • ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!

    ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!

    ಲಾಹೋರ್: ಪನಾಮಾ ಪೇಪರ್ಸ್ ಹಗರಣದಲ್ಲಿ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಲಂಡನ್‍ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್ ಫೋರ್ಟ್‍ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

    ಲಂಡನ್ ನಿಂದ ಲಾಹೋರ್ ಗೆ ಶುಕ್ರವಾರ ಸಂಜೆ ವೇಳಗೆ ನವಾಜ್ ಷರೀಫ್ ಪುತ್ರಿ ಮಾರಿಯಾಮ್ ಜೊತೆ ಆಗಮಿಸುತ್ತಿದ್ದು, ಈ ವೇಳೆ ಸ್ವಾಗರ ಕೋರಿ ಬೆಂಬಲಿಗರು ಮೆರವಣಿಗೆ ನಡೆಸುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿದೆ. ಭದ್ರತೆಗೆ 10 ಸಾವಿರ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಬಂಧನದ ಬಳಿಕ ಹೆಲಿಕಾಪ್ಟರ್ ಮೂಲಕ ಇಸ್ಲಾಮಾಬಾದ್ ನ ಅದೀಲಾ ಜೈಲಿಗೆ ಕರೆದ್ಯೊಯುವ ಸಾಧ್ಯತೆ ಇದೆ.

    ಪಾಕಿಸ್ತಾನ ಸುಪ್ರೀಂಕೋರ್ಟ್ ನವಾಜ್ ಷರೀಫ್ ದೋಷಿ ಎಂದು 2017ರ ಜುಲೈ 28 ರಂದು ತೀರ್ಪು ನೀಡಿತ್ತು. ಅಲ್ಲದೇ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ನವಾಜ್ ಷರೀಫ್ ಅರ್ಹರಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಬಳಿಕ ಈ ವೇಳೆ ಶರೀಫ್ ತಮ್ಮ ಹುದ್ದೆ ತೋರೆದು ಅನಾರೋಗ್ಯದ ಕಾರಣ ಕೆಲ ದಿನಗಳ ಹಿಂದೆ ಲಂಡನ್ ಗೆ ತೆರಳಿದ್ದರು.

    2017ರ ಜುಲೈನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ನವಾಜ್ ಷರೀಫ್ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ನಂತರ ಕಳೆದ ವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಲಂಡನ್‍ನಲ್ಲಿ ಐಷಾರಾಮಿ ಬಂಗಲೆ ಸೇರಿದಂತೆ ಅಕ್ರಮ ಆಸ್ತಿ ಖರೀದಿಸಿದ್ದ ಆರೋಪದ ಮೇರೆಗೆ ನವಾಜ್ ಷರೀಫ್‍ಗೆ 10 ವರ್ಷ ಜೈಲು ಶಿಕ್ಷೆ ಮತ್ತು ಪನಾಮ ಹಗರಣದಲ್ಲಿ ಪುತ್ರಿ ಮರಿಯಮ್ ನವಾಜ್‍ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

    ಏನಿದು ಪ್ರಕರಣ?
    ಪನಾಮ ಪೇಪರ್ ಹೊರ ಹಾಕಿರುವ ಮಾಹಿತಿ ಆಧಾರವನ್ನು ಇಟ್ಟುಕೊಂಡು ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಸುಪ್ರೀಂಕೋರ್ಟ್ ನಲ್ಲಿ ಷರೀಫ್ ವಿರುದ್ಧ ಕೇಸ್ ದಾಖಲಿಸಿದ್ದರು. ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟ್ ಪ್ರಧಾನಿ ಷರೀಫ್ ಹಾಗೂ ಭ್ರಷ್ಟಾಚಾರದ ಪ್ರಕರಣದ ಕುರಿತು ಜಂಟಿ ತನಿಖಾ ತಂಡ(ಜೆಐಟಿ) ತನಿಖೆ ನಡೆಸುವಂತೆ ಆದೇಶಿಸಿತ್ತು. ಷರೀಫ್ ಲಂಡನ್ ನಲ್ಲಿ 2 ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಜೆಐಟಿ ವರದಿ ನೀಡಿತ್ತು. ಆದರೆ ಷರೀಫ್ ಅವರು ನನ್ನ ಮೇಲಿರುವ ಆರೋಪಗಳು ಎಲ್ಲ ಸುಳ್ಳು, ಯಾವುದೇ ಸಾಕ್ಷ್ಯಧಾರಗಳು ಇಲ್ಲ ಎಂದು ವಾದಿಸಿದ್ದರು.

    ಏನಿದು ಪನಾಮ ಪೇಪರ್ ಕೇಸ್?
    ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದು `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆಗಳನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

  • ತಲಾಖ್ ನೀಡಿದ್ದಕ್ಕೆ ಅನ್ನ, ನೀರು ಕೊಡದೇ ಪತಿಯಿಂದಲೇ ಪತ್ನಿ ಕೊಲೆ!

    ತಲಾಖ್ ನೀಡಿದ್ದಕ್ಕೆ ಅನ್ನ, ನೀರು ಕೊಡದೇ ಪತಿಯಿಂದಲೇ ಪತ್ನಿ ಕೊಲೆ!

    ಲಕ್ನೋ: ತಲಾಖ್ ನೀಡಿದ್ದಕ್ಕೆ ರೊಚ್ಚಿಗೆದ್ದ ಪತಿ ಅನ್ನ ನೀರು ನೀಡದೇ ಪತ್ನಿಯನ್ನು ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

    ರಜೀಯಾ ಮೃತ ದುರ್ದೈವಿ ನಹಿಮ್ ಕೂಡಿ ಹಾಕಿದ್ದ ಪತಿ. ದಂಪತಿಗೆ 6 ವರ್ಷದ ಮಗುವಿದೆ. ರಜೀಯಾ ಅವರನ್ನು ಕೂಡಿ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಜೀಯಾ ಅವರು ಮಂಗಳವಾರ ಮೃತ ಪಟ್ಟಿದ್ದಾರೆ.

    ರಜೀಯಾ ಅವರ ಪತಿ ನಹಿಮ್ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಪತಿಯ ವರ್ತನೆಯಿಂದ ಬೇಸತ್ತ ರಜೀಯಾ ತ್ರಿವಳಿ ತಲಾಖ್ ನೀಡಿದ್ದರು. ಇದರಿಂದ ಕೋಪಗೊಂಡ ನಹಿಮ್ ರಜೀಯಾ ಅವರನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದ. ಅಷ್ಟೇ ಅಲ್ಲದೆ ಆಕೆಗೆ ಅನ್ನ ನೀರು ಕೊಡುತ್ತಿರಲಿಲ್ಲ ಎಂದು ರಜೀಯಾ ಸಹೋದರಿ ದೂರಿದ್ದಾರೆ.

    ರಜೀಯಾ ಅವರನ್ನು ನೋಡಲು ಮನೆಗೆ ಹೋದಾಗ ಪತಿಯ ಕೃತ್ಯ ಬೆಳಕಿಗೆ ಬಂದಿದ್ದು, ತಕ್ಷಣವೇ ರಜೀಯಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಹಿಮ್ ವಿರುದ್ಧ ಪ್ರಕರಣ ದಾಖಲಿಸಲು ಠಾಣೆಗೆ ಹೋಗಿದ್ದೇವು. ಆದರೆ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ ಎಂದು ಅವರು ಆರೋಪಿಸಿದರು.

    ನಹಿಮ್ ತನ್ನ ಮೊದಲ ಪತ್ನಿಗೂ ವರದಕ್ಷಣೆ ತರುವಂತೆ ಕಿರುಕುಳ ನೀಡುತ್ತಿದ್ದ. ಇದರಿಂದಾಗಿ ಅವರು ವಿಚ್ಛೇದನ ಪಡೆದು ಬೆರೆಯಾಗಿದ್ದರು ಎಂದು ಮೇರಾ ಹಕ್ ಎನ್‍ಜಿಓ ಸಂಸ್ಥಾಪಕಿ ಫರ್ಹಾತ್ ನಖ್ವಿ ತಿಳಿಸಿದರು.

    ರಜೀಯಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಲಕ್ನೋಗೆ ಕಳುಹಿಸಲಾಗಿತ್ತು. ಆದರೆ ರಜೀಯಾ ಅವರ ಸ್ಥಿತಿ ಗಂಭೀರವಾಗಿತ್ತು ಹೀಗಾಗಿ ಮೃತಪಟ್ಟಿದ್ದಾರೆ ಎಂದು ಫರ್ಹಾತ್ ನಖ್ವಿ ವಿವರಿಸಿದರು.

  • ಹೆತ್ತವರನ್ನು ಕೊಲ್ಲಲು ಕಳ್ಳತನಕ್ಕೆ ಇಳಿದಿದ್ದ ನಟೋರಿಯಸ್ ಸೈಕೋಪಾತ್ ಅರೆಸ್ಟ್!

    ಹೆತ್ತವರನ್ನು ಕೊಲ್ಲಲು ಕಳ್ಳತನಕ್ಕೆ ಇಳಿದಿದ್ದ ನಟೋರಿಯಸ್ ಸೈಕೋಪಾತ್ ಅರೆಸ್ಟ್!

    ಬೆಂಗಳೂರು: ಹೆತ್ತವರನ್ನ ಕೊಲ್ಲಲು ಕಳ್ಳತನಕ್ಕೆ ಇಳಿದಿದ್ದ ನಗರದ ನಟೋರಿಯಸ್ ಸೈಕೋಪಾತ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

    ಆದಿತ್ಯ ಶರತ್(25) ಬಂಧಿತ ಆರೋಪಿ. ಈತ ಬೈಕ್ ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರಿಗೆ ಸೆರೆಸಿಕ್ಕಿದ್ದು, ಬಸವೇಶ್ವರನಗರ ಪೊಲೀಸರು ಶರತ್‍ನನ್ನು ಬಂಧಿಸಿದ್ದಾರೆ.

    ಯಾರು ಈ ಶರತ್?
    ಕಾಮಾಕ್ಷಿಪಾಳ್ಯ ಬಳಿಯ ವೃಷಭಾವತಿನಗರ ನಿವಾಸಿ ಆರೋಪಿ ಶರತ್ ಡಿಪ್ಲೋಮಾ ಪದವಿ ಓದಿದ್ದು ಹಲವು ಹುಡುಗಿಯರನ್ನ ತನ್ನ ಗರ್ಲ್ ಫ್ರೆಂಡ್ಸ್ ಅಂತ ಮನೆಯಲ್ಲಿ ಹೇಳುತ್ತಿದ್ದನು. ಅಷ್ಟೇ ಅಲ್ಲದೇ ಶರತ್ ಆಗಾಗ ಗೆಳತಿಯರನ್ನ ಬದಲಿಸುತ್ತಿದ್ದನು. ಮಗನ ವರ್ತನೆಗೆ ಬೇಸತ್ತು ಪೋಷಕರು ಬುದ್ಧಿವಾದ ಹೇಳಿ ಮದುವೆಯಾಗು ಎಂದು ಒತ್ತಡ ಹಾಕಲು ಶುರು ಮಾಡಿದ್ದರು.

    ಪೋಷಕರ ಒತ್ತಡ ತಾಳಲಾರದೇ ಅವರನ್ನೇ ಕೊಲ್ಲಲು ಶರತ್ ನಿರ್ಧರಿಸಿದ್ದ. ಬಳಿಕ ಅವರಿಗೆ ಊಟದಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದನು. ಆದರೆ ಈ ಬಗ್ಗೆ ಪೋಷಕರು ತಿಳಿದುಕೊಂಡು ಆತನನ್ನು ಮನೆಯಿಂದಲೇ ಹೊರಹಾಕಿದ್ದಾರೆ. ಅಲ್ಲದೇ ಮಗನ ವಿರುದ್ಧವೇ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ.

    ಖಿನ್ನತೆಗೆ ಜಾರಿದ: ಮನೆಯಿಂದ ಹೊರಬಿದ್ದ ನಂತರ ಶರತ್ ರಾಯಲ್ ಎನ್ ಫೀಲ್ಡ್ ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದನು. ಪೋಷಕರು ಹೊರಹಾಕಿದ ಕೋಪಕ್ಕೆ ಖಿನ್ನತೆಗೆ ಒಳಗಾಗಿದ್ದ ಆತ ಅವರನ್ನು ಕೊಲ್ಲಲೇಬೇಕೆಂಬ ನಿರ್ಧಾರಕ್ಕೆ ಬಂದಿದ್ದ. ಅಷ್ಟೇ ಅಲ್ಲದೇ ಕೊಲೆ ಮಾಡುವುವುದು ಹೇಗೆ ಎಂದು ಗೂಗಲ್ ನಲ್ಲಿ ಸರ್ಚ್ ಕೂಡ ಮಾಡಿದ್ದನು. ಸರ್ಚ್ ಮಾಡಿದ ಬಳಿಕ ಮನೆಯ ವಾಟರ್ ಟ್ಯಾಂಕ್ ಗೆ ವಿಷ ಬೆರೆಸಿದ್ದ. ಈ ವಿಷಯ ಕೂಡ ಪೋಷಕರಿಗೆ ತಿಳಿಯುತ್ತದೆ.

    ಪಿಸ್ತೂಲ್ ಖರೀದಿ: ವಿಷದ ಮೂಲಕ ಕೊಲೆ ಮಾಡುವುದು ಸಾಧ್ಯವಾಗದೇ ಇದ್ದಾಗ ಕೊನೆಗೆ ಗುಂಡಿಟ್ಟು ಕೊಲ್ಲುವುದೇ ಸೂಕ್ತ ಎಂದು ನಿರ್ಧರಿಸಿ ಬಿಹಾರ ಮೂಲದ ತನ್ನ ಡಿಪ್ಲೋಮಾ ಸ್ನೇಹಿತನ ಮೂಲಕ ಪಿಸ್ತೂಲ್ ಖರೀದಿಸುತ್ತಾನೆ. ಆದರೆ ಬೈಕ್ ಕಳ್ಳತನ ಮಾಡುವಾಗ ಆರೋಪಿ ಶರತ್ ಸಿಕ್ಕಿಬಿದ್ದಿದ್ದಾನೆ. ಬಂಧನದ ವೇಳೆ ಒಂದು ಪಿಸ್ತೂಲ್ 8 ಜೀವಂತ ಗುಂಡುಗಳು ಪತ್ತೆಯಾಗಿತ್ತು. ಪಿಸ್ತೂಲ್ ಖರೀದಿಸಿದ್ದು ಯಾಕೆ ಎಂದು ವಿಚಾರಣೆ ವೇಳೆ ಪೊಲೀಸರು ಪ್ರಶ್ನಿಸಿದಾಗ ತಂದೆ-ತಾಯಿಯನ್ನ ಕೊಲ್ಲಲ್ಲಿಕ್ಕಾಗಿ ಖರೀದಿಸಿದ್ದಾಗಿ ಹೇಳಿಕೆ ನೀಡಿ ತನ್ನ ಎಲ್ಲ ವೃತ್ತಾಂತವನ್ನು ತಿಳಿಸಿ ಸತ್ಯವನ್ನು ಒಪ್ಪಿಕೊಂಡಿದ್ದಾನೆ.

    ಸದ್ಯಕ್ಕೆ ಪೋಲೀಸರು ಸೈಕೋಪಾಥ್ ಶರತ್ ವಿರುದ್ಧ ಕೊಲೆಯತ್ನ, ಕಳ್ಳತನ, ಮೋಟಾರ್ ವಾಹನ ಕಾಯ್ದೆ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣದ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಪರ್ಸ್ ನಲ್ಲಿ ಹಣ, ಮೊಬೈಲ್ ತಗೊಂಡು ಹೊರಗಡೆ ಹೋಗೋವಾಗ ಹುಷಾರ್!

    ಪರ್ಸ್ ನಲ್ಲಿ ಹಣ, ಮೊಬೈಲ್ ತಗೊಂಡು ಹೊರಗಡೆ ಹೋಗೋವಾಗ ಹುಷಾರ್!

    ಬೆಂಗಳೂರು: ಮನೆ ಕೆಲಸಕ್ಕೆ ಬಂದಿದ್ದೇವು ಎಂದು ಹೇಳಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳಿಯರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ.

    ದಿಲ್ ಶಾದ್ ಮತ್ತು ಪ್ಯಾರೇಜಾನ್ ಬಂಧಿತ ಆರೋಪಿಗಳು. ಸೋಮವಾರ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನಕ್ಕೆ ಮುಂದಾದಾಗ ಇಬ್ಬರು ಕಳ್ಳಿಯರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

    ಈ ಹಿಂದೆ ಡಿಜೆ ಹಳ್ಳಿ ಪೊಲೀಸರಿಂದ ಬಂಧನಕ್ಕೊಳಗಾಗಿ ಮೂರು ತಿಂಗಳ ಹಿಂದೆಯಷ್ಟೇ ಬಿಡುಗಡೆಯಾಗಿದ್ದರು. ಜೈಲಿನಿಂದ ಬಂದ ಬಳಿಕ ಮತ್ತೆ ತಮ್ಮ ಕೈಚಳಕ ಮುಂದುವರಿಸಿದ್ದರು. ಏರಿಯಾದಲ್ಲಿ ಅಕ್ಕ-ತಂಗಿ ಎಂದು ಹೇಳಿಕೊಂಡು ಮನೆ ಕೆಲಸ ಮಾಡುತ್ತೀವಿ ಎಂದು ಕಳ್ಳತನ ಮಾಡುತ್ತಾರೆ.

    ಅಲ್ಲದೇ ಇವರಿಬ್ಬರು ಮದುವೆ ಕಾರ್ಯಕ್ರಮಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಪರ್ಸ್ ಎಗರಿಸೋಕೆ ನಿಂತಿರುತ್ತಾರೆ. ಜನರ ಗಮನವನ್ನು ಬೇರೆಡೆ ಸೆಳೆದು, ಸ್ವಲ್ಪ ಯಾಮಾರುವಷ್ಟರಲ್ಲಿ ಪರ್ಸ್, ಮೊಬೈಲ್ ಕಳ್ಳತನ ಮಾಡುತ್ತಾರೆ.

  • ಆರೋಪಿ ಪರ ಬ್ಯಾಟಿಂಗ್ ಮಾಡಿದ ಪಿಎಸ್ಐಗೆ ಕ್ಲಾಸ್- ಬಿಜೆಪಿ ಶಾಸಕನ ವಿಡಿಯೋ ವೈರಲ್

    ಆರೋಪಿ ಪರ ಬ್ಯಾಟಿಂಗ್ ಮಾಡಿದ ಪಿಎಸ್ಐಗೆ ಕ್ಲಾಸ್- ಬಿಜೆಪಿ ಶಾಸಕನ ವಿಡಿಯೋ ವೈರಲ್

    ಕಲಬುರಗಿ: ಬಿಜೆಪಿ ಕಾರ್ಯತರ್ಕನ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ಮುಖಂಡನನ್ನು ಬಿಡುಗಡೆಗೊಳಿಸಿದ್ದಕ್ಕೆ ಬಿಜೆಪಿ ಗ್ರಾಮೀಣ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಠಾಣೆಯಲ್ಲೇ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಭಾನುವಾರ ಬಿಜೆಪಿ ಕಾರ್ಯಕರ್ತ ಅಮರನಾಥ ಸಾಹು ಎಂಬವರ ಮೇಲೆ ಜೆಡಿಎಸ್ ಮುಖಂಡ ಶರಣಬಸಪ್ಪ ಸಾವಳಗಿ ಹಲ್ಲೆ ಮಾಡಿದ್ದರು. ಘಟನೆ ಸಂಬಂಧ ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಲಾಗಿತ್ತು. ಆದರೆ ಪಿಎಸ್ ಐ ಗಜಾನನರವರು ಆರೋಪಿಯನ್ನು ನೆಪ ಮಾತ್ರಕ್ಕೆ ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು.

    ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಬಿಜೆಪಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರಣು ಸಲಗರ್ ನರೋಣಾ ಪೊಲೀಸ್ ಠಾಣೆಗೆ ತೆರಳಿ ಪಿಎಸ್ ಐ ಗಜಾನನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಬಿಜೆಪಿ ಅಧ್ಯಕ್ಷ ಪೊಲೀಸರನ್ನು ತರಾಟೆಗೆ ತೆಗೆದುಕೊಳ್ಳುವ ದೃಶ್ಯವನ್ನು ಅಲ್ಲೇ ಇದ್ದ ಕಾರ್ಯಕರ್ತರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೇ ಬಳಿಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಇದೀಗ ವೈರಲ್ ಆಗಿದೆ.

    https://www.youtube.com/watch?v=0KhCIqdxOEs