Tag: arrest

  • ಪ್ಲಾನ್ ಕೇಳಿದ್ರೆ ಶಾಕ್ ಆಗ್ತೀರಿ- ಪ್ರಿಯತಮನ ಜೊತೆ ಹೊಸ ಜೀವನ ಆರಂಭಿಸಲು ತಂದೆ-ತಾಯಿ, ಇಬ್ಬರು ಹೆಣ್ಮಕ್ಕಳನ್ನೇ ಕೊಲೆಗೈದ್ಳು!

    ಪ್ಲಾನ್ ಕೇಳಿದ್ರೆ ಶಾಕ್ ಆಗ್ತೀರಿ- ಪ್ರಿಯತಮನ ಜೊತೆ ಹೊಸ ಜೀವನ ಆರಂಭಿಸಲು ತಂದೆ-ತಾಯಿ, ಇಬ್ಬರು ಹೆಣ್ಮಕ್ಕಳನ್ನೇ ಕೊಲೆಗೈದ್ಳು!

    ತಿರುವನಂತಪುರ: ತನ್ನ ಪ್ರಿಯತಮನ ಜೊತೆ ಹೊಸ ಜೀವನ ನಡೆಸಲು ಅಡ್ಡಿಯಾಗುತ್ತಿದ್ದಾರೆಂದು ತಂದೆ-ತಾಯಿ ಹಾಗೂ ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದ ಖತರ್ನಾಕ್ ಮಹಿಳೆಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

    ಬಂಧಿತ ಮಹಿಳೆಯನ್ನು 34 ವರ್ಷದ ಸೌಮ್ಯ ಎಂದು ಗುರುತಿಸಲಾಗಿದೆ. ಬಂಧಿಸಿದ ಬಳಿಕ ಬರೋಬ್ಬರಿ 11 ಗಂಟೆ ವಿಚಾರಣೆ ನಡೆಸಿದಾಗ ನಾಲ್ವರ ಸಾವಿನ ಹಿಂದಿನ ರಹಸ್ಯ ಬಯಲಾಗಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಹೆತ್ತವರು, ಮಗಳ ಕೊಲೆ: ಜನವರಿ 31ರಂದು ಸೌಮ್ಯ ಮಗಳು 8 ವರ್ಷದ ಐಶ್ವರ್ಯಾ ಸಾವನ್ನಪ್ಪಿದ್ದಳು. ಈ ಮೊದಲು ಮಾರ್ಚ್ 7ರಂದು ಆಕೆಯ ತಾಯಿ 68 ವರ್ಷದ ತಾಯಿ ಕಮಲ ಹಾಗೂ ಏಪ್ರಿಲ್ 13ರಂದು ತಂದೆ 76 ವರ್ಷದ ಕುನ್ಹಿಕನ್ನಣ್ ಮೃತಪಟ್ಟಿದ್ದರು. ಇನ್ನೊರ್ವ ಮಗಳು ಕೀರ್ತನಾ 2012ರಲ್ಲಿ ಮೃತಪಟ್ಟಿದ್ದಳು. ಈ ನಾಲ್ವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸದ ಪಕ್ಕದ ನಿವಾಸದಲ್ಲಿದ್ದು, ಇವೆರೆಲ್ಲರೂ ವಾಂತಿ ಬಾಧೆಯಿಂದ ಮೃತಪಟ್ಟಿದ್ದಾರೆಂದು ವರದಿಯಾಗಿತ್ತು.

    ಇತ್ತ ಒಬ್ಬರಾದ ಮೇಲೊಬ್ಬರಂತೆ ಕುಟುಂಬದವರೆಲ್ಲ ಸಾವನ್ನಪ್ಪಿದ್ದರಿಂದ ಸಂಶಯಗೊಂಡ ಕುಟುಂಬಸ್ಥರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ತನ್ನ ನಿವಾಸದ ಬಳಿಯೇ ನಿಗೂಢವಾಗಿ ವ್ಯಕ್ತಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಪೊಲೀಸರಿಗೆ ತನಿಖೆ ನಡೆಸಿ ಕೊಲೆ ರಹಸ್ಯವನ್ನು ಬೇಧಿಸುವಂತೆ ಸೂಚಿಸಿದ್ದರು. ತನಿಖೆಗೆ ಒತ್ತಡ ಜಾಸ್ತಿಯಾಗುತ್ತಿದ್ದಂತೆ ಮೃತದೇಹಗಳನ್ನು ಸಮಾಧಿಯಿಂದ ಮೇಲಕ್ಕೆ ಎತ್ತಲಾಗಿತ್ತು. ವಿಧಿ ವಿಜ್ಞಾನ ಪ್ರಯೋಗಾಲಯದವರು ಮೃತದೇಹವನ್ನು ಪರಿಶೀಲಿಸಿದಾಗ ಐಶ್ವರ್ಯಾ ದೇಹದಲ್ಲಿ ಅಲ್ಯೂಮಿನಿಯಂ ಫಾಸ್ಫೈಡ್ ಇರುವ ಅಂಶ ಪತ್ತೆಯಾಗಿತ್ತು. ಸಾಧಾರಣವಾಗಿ ಕೀಟನಾಶಕದಲ್ಲಿ ಬಳಸುವ ಈ ರಾಸಾಯನಿಕ ದೇಹದಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ ಇದೊಂದು ಕೊಲೆ ಎನ್ನುವುದು ಪೊಲೀಸರಿಗೆ ಗೊತ್ತಾಯಿತು.

    ಈ ನಡುವೆ ತನ್ನ ಮೇಲೆ ಯಾರೂ ಸಂಶಯ ವ್ಯಕ್ತಪಡಿಸಬಾರದೆಂದು ಸೌಮ್ಯ ಮಕ್ಕಳು ಹಾಗೂ ಪೋಷಕರಿಗೆ ಕಂಡು ಬಂದಿದ್ದ ಸಮಸ್ಯೆ ನನ್ನಲ್ಲೂ ಕಂಡುಬರುತ್ತದೆ ಎಂದು ಹೇಳಿ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಳು. ಚಿಕಿತ್ಸೆಯಿಂದ ಡಿಸ್ಚಾರ್ಜ್ ಆದ ಕೂಡಲೇ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಿಜವಾದ ಸಂಗತಿ ಪ್ರಕಟವಾಗಿದ್ದು, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಸದ್ಯ ಆರೋಪಿ ಸೌಮ್ಯಾಳನ್ನು 4 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ಕೊಲೆ ಮಾಡಿದ್ದು ಯಾಕೆ?
    ಮದುವೆಯಾಗಿ ಈಗಾಗಲೇ ಮಕ್ಕಳನ್ನು ಹೊಂದಿರುವ ಸೌಮ್ಯಳಿಗೆ ಅಕ್ರಮ ಸಂಬಂಧವಿತ್ತು. ಅಷ್ಟೇ ಅಲ್ಲದೇ ಗಂಡ ಜೊತೆ ಡೈವೋರ್ಸ್ ಪಡೆದಿದ್ದಳು. ಒಂದು ದಿನ ತಾಯಿ ಸೌಮ್ಯ ಪ್ರಿಯಕರ ಜೊತೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದಾಗ ಸಣ್ಣ ಮಗಳು ಕೀರ್ತನಾ ನೋಡಿದ್ದಾಳೆ. ಈ ವಿಚಾರ ಗೊತ್ತಾದ ಕೂಡಲೇ ಸಿಟ್ಟುಗೊಂಡ ಸೌಮ್ಯ ಮಗಳನ್ನು ಇಲಿಪಾಷಾಣ ಹಾಕಿ 2012 ರಲ್ಲಿ ಕೊಲೆ ಮಾಡಿದ್ದಳು. ನಂತರ ತನ್ನ ಅಕ್ರಮ ಸಂಬಂಧಕ್ಕೆ ಮುಂದುವರಿಸಲು ಮನೆಯವರು ಅಡ್ಡಿ ಆಗುತ್ತಿದ್ದಾರೆ ಎಂದು ತಿಳಿದು ಹಂತ ಹಂತವಾಗಿ ಒಬ್ಬೊಬ್ಬರನ್ನು ಮುಗಿಸಲು ಪ್ಲಾನ್ ಮಾಡುತ್ತಾ ಬಂದಿದ್ದಾಳೆ. ಅದರಂತೆ ಎಲ್ಲರಿಗೂ ಆಹಾರದಲ್ಲಿ ಇಲಿ ಪಾಷಾಣ ಹಾಕಿ ಕೊಲೆ ಮಾಡಿದ್ದಾಳೆ. ನಿಗೂಢವಾಗಿ ಸಾವನ್ನಪ್ಪುತ್ತಿದ್ದ ಹಿನ್ನೆಲೆಯಲ್ಲಿ ಜನರು ಪ್ರಶ್ನೆ ಮಾಡುತ್ತಿದ್ದಾಗ ಆಕೆ ನನ್ನ ಮಗಳು ಹಿಂದೆ ವಾಂತಿ ಮಾಡಿ ಮೃತಪಟ್ಟಿದ್ದಳು. ಇದಾದ ನಂತರ ಪೋಷಕರು ಈ ರೀತಿಯಾಗಿ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಇವರೆಲ್ಲ ಮೃತಪಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ ಎಂದು ಜನರಲ್ಲಿ ಹೇಳಿ ತಾನು ಈ ಪ್ರಕರಣದಲ್ಲಿ ಅಮಾಯಕಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಳು.

  • ಮದುವೆಯಲ್ಲಿ ವರನನ್ನೇ ಅರೆಸ್ಟ್ ಮಾಡಿಸಿದ ವಧು!

    ಮದುವೆಯಲ್ಲಿ ವರನನ್ನೇ ಅರೆಸ್ಟ್ ಮಾಡಿಸಿದ ವಧು!

    ಕೋಲ್ಕತ್ತಾ: ಮದುವೆ ಮನೆಯಲ್ಲಿ ವರನೊಬ್ಬ ಕುಡಿದು ಬಂದು ಅಸಭ್ಯವಾಗಿ ವರ್ತಿಸಿದ್ದಕ್ಕೆ ವಧು ಮದುವೆ ನಿಲ್ಲಿಸಿ ಆತನನ್ನು ಅರೆಸ್ಟ್ ಮಾಡಿಸಿದ ಘಟನೆ ಪಶ್ಚಿಮ ಬಂಗಾಳದ ಬಂಹುರಾ ಜಿಲ್ಲೆಯಲ್ಲಿ ನಡೆದಿದೆ.

    ಬುದ್ಹಾರ್ ಸಹೀಶ್ ಶಾಲೆಯಲ್ಲಿ ಶಿಕ್ಷಕನಾಗಿದ್ದು ಆತನ ಮದುವೆ ಏಪ್ರಿಲ್ 20ರಂದು ನಿಗದಿಯಾಗಿತ್ತು. ತನ್ನ ಮದುವೆಯ ದಿನವೇ ಸಹೀಶ್ ತನ್ನ ಸಂಬಂಧಿಕರ ಜೊತೆ ಕುಡಿದು ಮದುವೆ ಮನೆಗೆ ಬಂದಿದ್ದನು. ಭಯಂಕರ ನಶೆಯಲ್ಲಿದ ಸಹೀಶ್ ಸರಿಯಾಗಿ ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ.

    ಸಹೀಶ್ ನನ್ನು ಈ ರೀತಿ ನೋಡಿದ ಆತನ ಪೋಷಕರು ದಂಗಾಗಿದ್ದಾರೆ. ಅಷ್ಟೇ ಅಲ್ಲದೇ ಮದುವೆ ಮಂಟಪದಲ್ಲಿ ವರ ಹಾಗೂ ವಧು ಕುಳಿತುಕೊಳ್ಳಲು ಇಟ್ಟಿದ್ದ ಸ್ಟೂಲ್‍ನನ್ನು ಕಾಲಿನಿಂದ ಒದ್ದಿದ್ದಾನೆ. ನಂತರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪುರೋಹಿತರನ್ನು ಕೆಟ್ಟ ಪದಗಳಲ್ಲಿ ನಿಂದಿಸಿ ಜೋರಾಗಿ ಕಿರುಚಾಡಿದ್ದಾನೆ ಎಂದು ವರದಿಯಾಗಿದೆ.

    ಈ ಶಾಸ್ತ್ರ-ಸಂಪ್ರದಾಯಗಳಲ್ಲಿ ನನಗೆ ನಂಬಿಕೆಯಿಲ್ಲ. ನನ್ನ ವಧುವನ್ನು ನನ್ನ ಜೊತೆ ಕರೆದುಕೊಂಡು ಹೋಗಲು ಬಿಡು ಎಂದು ಕಿರುಚಾಡಿದ್ದಾನೆ. ಈ ವರ್ತನೆ ಕಂಡು ಶಾಕ್ ಆದ ವಧು ಸಹೀಶ್ ಜೊತೆಗಿನ ತನ್ನ ಮದುವೆಯನ್ನು ಮುರಿದಿದ್ದಾಳೆ. ನಂತರ ವಧುವಿನ ತಂದೆ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ.

    ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವರ ಹಾಗೂ ಆತನ ಸಹೋದರನನ್ನು ವಶಕ್ಕೆ ಪಡೆದರು. ಕುಡಿದ ನಶೆಯಲ್ಲಿದ್ದ ಇಬ್ಬರೂ ದೂರು ದಾಖಲಾಗುವರೆಗೂ ಪೊಲೀಸರ ವಶದಲ್ಲೇ ಇದ್ದರು ಎಂದು ವರದಿಯಾಗಿದೆ.

    ಮದುವೆಗೆ ಬಂದಿದ್ದ ಅತಿಥಿಗಳು ವಧುವಿನ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಹೀಶ್‍ನ ಕುಟುಂಬದವರು ವರದಕ್ಷಿಣೆ ಆಗಿ ಪಡೆದ ಬೈಕ್, ಹಾಸಿಗೆ, ಡ್ರೆಸಿಂಗ್ ಟೇಬಲ್, ತಿಜೋರಿ ಹಾಗೂ ಉಳಿದ ವಸ್ತುಗಳನ್ನು ವಧುವಿನ ಕುಟುಂಬಕ್ಕೆ ಹಿಂತಿರುಗಿಸಿದ್ದರು.

  • 8 ತಿಂಗಳ ಕಂದಮ್ಮನನ್ನ ಅತ್ಯಾಚಾರಗೈದಿದ್ದ ಕಾಮುಕನನ್ನು ಹಿಗ್ಗಾ ಮುಗ್ಗಾ ಥಳಿಸಿದ ಸಾರ್ವಜನಿಕರು-ವಿಡಿಯೋ ನೋಡಿ

    8 ತಿಂಗಳ ಕಂದಮ್ಮನನ್ನ ಅತ್ಯಾಚಾರಗೈದಿದ್ದ ಕಾಮುಕನನ್ನು ಹಿಗ್ಗಾ ಮುಗ್ಗಾ ಥಳಿಸಿದ ಸಾರ್ವಜನಿಕರು-ವಿಡಿಯೋ ನೋಡಿ

    ಇಂದೋರ್: 8 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿಯನ್ನು ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ ಜಿಲ್ಲಾ ನ್ಯಾಯಾಲಯದ ಮುಂದೆ ನಡೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಮಾಡಿದ್ದ ಪೊಲೀಸರು ಕಾಮುಕನನ್ನು ನ್ಯಾಯಾಲಯದ ಮುಂದೇ ಹಾಜರು ಪಡಿಸಲು ಕರೆತಂದಿದ್ದರು.

    ಕಾಮುಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಕುರಿತು ಮಾಹಿತಿ ಪಡೆದ ಸಾರ್ವಜನಿಕರು ಆ ವೇಳೆ ಕೋರ್ಟ್ ಆವರಣದಲ್ಲಿ ಜಮಾವಣೆಗೊಂಡಿದ್ದರು. ಆರೋಪಿಯನ್ನು ಪೊಲೀಸರು ವಾಹನದಿಂದ ಕೆಳಗಿಳಿಸುತ್ತಿದಂತೆ ಸಾರ್ವಜನಿಕರು ಏಕಾಏಕಿ ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಈ ವೇಳೆ ಬೆರಳೆಣಿಕೆ ಸಂಖ್ಯೆಯಲ್ಲಿದ್ದ ಪೊಲೀಸರು ಆರೋಪಿಯನ್ನು ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ.

    ಘಟನೆಯ ವಿವರ: ಪುಟ್ಟ ಕಂದಮ್ಮನ ಹೆತ್ತವರು ಬಲೂನ್ ಮಾರಿ ಜೀವನ ನಡೆಸುತ್ತಿದ್ದು, ನಗರದ ರಾಜ್ ವಾಡ ಕೋಟೆಯ ರಸ್ತೆ ಬದಿಯಲ್ಲಿ ನಿದ್ದೆ ಮಾಡುತ್ತಿದ್ದರು. ಇದನ್ನು ಗಮನಿಸಿದ 21 ವರ್ಷದ ಕಾಮುಕ ನವೀನ್ ಎಂಬಾತ ಮುಗ್ದ ಕಂದಮ್ಮನನ್ನು ಹೆತ್ತವರ ಬಳಿಯಿಂದ ಅಪಹರಿಸಿ 200 ಮೀಟರ್ ದೂರದಲ್ಲಿರೋ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಕೊಲೆಗೈದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಆರೋಪಿ ಅತ್ಯಾಚಾರಕ್ಕೊಳಗಾದ ಮಗುವಿನ ಹೆತ್ತವರಿಗೆ ತಿಳಿದವನಾಗಿದ್ದು, ಹೀಗಾಗಿ ಆತನನ್ನು ಬೇಗ ಬಂಧಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

    ಪ್ರಕರಣ ಬೆಳಕಿಗೆ: ಕಟ್ಟಡದ ನೆಲ ಮಾಳಿಗೆಯಲ್ಲಿರುವ ತನ್ನ ಅಂಗಡಿಯ ಬಾಗಿಲು ತೆರೆಯಲು ಮಾಲೀಕ ಬಂದಾಗ, ಒಂದು ಬದಿಯಲ್ಲಿ ಪುಟ್ಟ ಕಂದಮ್ಮ ಶವವಾಗಿ ಬಿದ್ದಿರುವುದು ಕಂಡು ಬಂದಿತ್ತು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ರವಾನಿಸಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು.

    ಸದ್ಯ ಪೊಲೀಸರು ದ್ವಿ-ಚಕ್ರ ವಾಹನದ ಜೊತೆಗೆ ರಕ್ತಸಿಕ್ತವಾದ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯನ್ನು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಖಂಡಿಸಿದ್ದರು. ಪ್ರಕರಣದ ವಿಚಾರಣೆಯನ್ನು ವೇಗವಾಗಿ ನಡೆಸಲು ಸೂಚಿಸಿದ್ದರು.

     

  • ರಸ್ತೆ ಬದಿಯಲ್ಲಿ ಹೆತ್ತವರೊಂದಿಗೆ ಮಲಗಿದ್ದ 8 ತಿಂಗ್ಳ ಕಂದಮ್ಮನನ್ನು ಅಪಹರಿಸಿ ರೇಪ್ ಮಾಡಿ ಕೊಲೆಗೈದ!

    ರಸ್ತೆ ಬದಿಯಲ್ಲಿ ಹೆತ್ತವರೊಂದಿಗೆ ಮಲಗಿದ್ದ 8 ತಿಂಗ್ಳ ಕಂದಮ್ಮನನ್ನು ಅಪಹರಿಸಿ ರೇಪ್ ಮಾಡಿ ಕೊಲೆಗೈದ!

    ಇಂದೋರ್: ಕಾಮುಕನೊಬ್ಬ ನಗರದ ರಸ್ತೆ ಬದಿಯಲ್ಲಿ ಹೆತ್ತವರ ಜೊತೆ ಮಲಗಿದ್ದ 8 ತಿಂಗಳ ಮಗುವನ್ನು ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

    ಈ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಹೆತ್ತವರೊಂದಿಗೆ ನಿದ್ದೆಗೆ ಜಾರಿದ್ದ ಕಂದಮ್ಮನನ್ನು ಕಾಮುಕ ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಘಟನೆಯ ವಿವರ: ಪುಟ್ಟ ಕಂದಮ್ಮನ ಹೆತ್ತವರು ಬಲೂನ್ ಮಾರಿ ಜೀವನ ನಡೆಸುತ್ತಿದ್ದು, ನಗರದ ರಾಜ್ ವಾಡ ಕೋಟೆಯ ರಸ್ತೆ ಬದಿಯಲ್ಲಿ ನಿದ್ದೆ ಮಾಡುತ್ತಿದ್ದರು. ಇದನ್ನು ಗಮನಿಸಿದ 21 ವರ್ಷದ ಕಾಮುಕ ನವೀನ್ ಎಂಬಾತ ಮುಗ್ದ ಕಂದಮ್ಮನನ್ನು ಹೆತ್ತವರ ಬಳಿಯಿಂದ ಅಪಹರಿಸಿ 200 ಮೀಟರ್ ದೂರದಲ್ಲಿರೋ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಕೊಲೆಗೈದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಆರೋಪಿ ಅತ್ಯಾಚಾರಕ್ಕೊಳಗಾದ ಮಗುವಿನ ಹೆತ್ತವರಿಗೆ ತಿಳಿದವನಾಗಿದ್ದು, ಹೀಗಾಗಿ ಆತನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ವಿಡಿಯೋದಲ್ಲೇನಿದೆ?: ಮಗುವಿನ ದೂರದ ಸಂಬಂಧಿಯಾಗಿರೋ ಆರೋಪಿ ನವೀನ್ ಗಡ್ಕೆ, ತನ್ನ ದ್ವಿಚಕ್ರ ವಾಹನದಲ್ಲಿ ಬೆಳಗಿನ ಜಾವ 4.45ರ ಸುಮಾರಿಗೆ ಮಗು ಮಲಗಿದ್ದ ಸ್ಥಳಕ್ಕೆ ಬಂದಿದ್ದಾನೆ. ಮಗುವನ್ನು ಅಲ್ಲಿಂದ ಅಪಹರಿಸುತ್ತಾನೆ. ನಂತ್ರ ಹತ್ತಿರದಲ್ಲಿರೋ ವಾಣಿಜ್ಯ ಸಂಕೀರ್ಣವೊಂದರ ನೆಲಮಾಳಿಗೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಮೃತದೇಹ ಮಧ್ಯಾಹ್ನ ದೊರೆತಿದೆ ಗುಪ್ತಾಂಗ, ತಲೆ ಸೇರಿದಂತೆ ಬಾಲಕಿಯ ದೇಹದಲ್ಲಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಕಾಮುಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಯನ್ನು ಎಸೆದಿರಬೇಕು ಅಂತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶಂಕಿಸಿದ್ದಾರೆ.

     

    ಪ್ರಕರಣ ಬೆಳಕಿಗೆ: ಕಟ್ಟಡದ ನೆಲ ಮಾಳಿಗೆಯಲ್ಲಿರುವ ತನ್ನ ಅಂಗಡಿಯ ಬಾಗಿಲು ತೆರೆಯಲು ಮಾಲೀಕ ಬಂದಾಗ, ಒಂದು ಬದಿಯಲ್ಲಿ ಪುಟ್ಟ ಕಂದಮ್ಮ ಶವವಾಗಿ ಬಿದ್ದಿರುವುದು ಕಂಡು ಬಂದಿತ್ತು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ರವಾನಿಸಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

    ಸದ್ಯ ಪೊಲೀಸರು ದ್ವಿ-ಚಕ್ರ ವಾಹನದ ಜೊತೆಗೆ ರಕ್ತಸಿಕ್ತವಾದ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯನ್ನು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಖಂಡಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತ ಅವರು ತಿಳಿಸಿದ್ದಾರೆ.

  • ದರೋಡೆ ಮಾಡಿ ತಪ್ಪನ್ನ ಕ್ಷಮಿಸುವಂತೆ ದೇವರ ಮೊರೆ ಹೋದ್ರು – ದೇವಾಲಯದಲ್ಲೇ ಪೊಲೀಸರಿಗೆ ಸೆರೆಯಾದ್ರು

    ದರೋಡೆ ಮಾಡಿ ತಪ್ಪನ್ನ ಕ್ಷಮಿಸುವಂತೆ ದೇವರ ಮೊರೆ ಹೋದ್ರು – ದೇವಾಲಯದಲ್ಲೇ ಪೊಲೀಸರಿಗೆ ಸೆರೆಯಾದ್ರು

    ಬೆಂಗಳೂರು: ದರೋಡೆ ಮಾಡಿ ತಪ್ಪನ್ನು ಕ್ಷಮಿಸುವಂತೆ ದೇವರ ಮೊರೆ ಹೋಗುತ್ತಿದ್ದ ಖತರ್ನಾಕ್ ದರೋಡೆಕೋರರನನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ನಗರದ ಹೊರವಲಯ ನೆಲಮಂಗಲ ಪಟ್ಟಣ ಪೊಲೀಸರು ಕುಖ್ಯಾತ ದರೋಡೆಕೋರರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಆರೋಪಿಗಳು ಶೋಕಿಗಾಗಿ ದರೋಡೆ ಮಾಡುವ ವೃತ್ತಿಯನ್ನು ಆರಂಭಿಸಿದ್ದರು. ದರೋಡೆ ಮಾಡಿದ ಬಳಿಕ ಮಾಡಿದ ತಪ್ಪನ್ನ ಕ್ಷಮಿಸುವಂತೆ ದೇವರ ಮೊರೆ ಹೋಗುತ್ತಿದ್ದರು. ಆದರೆ ದೇವರ ಮೊರೆ ಹೋದಾಗಲೇ ಗ್ರಹಚಾರ ಕೈಕೊಟ್ಟು ಪೊಲೀಸರ ಅತಿಥಿಗಳಾಗಿದ್ದಾರೆ.

    ಕಳೆದ ಒಂದು ವಾರದ ಹಿಂದೆ ನೆಲಮಂಗಲ ಪಟ್ಟಣದ ವೀವರ್ಸ್ ಕಾಲೋನಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಫೈನಾನ್ಸಿಷಯರ್ ಮೇಲೆ ಹಲ್ಲೆ ಮಾಡಿ, ಚಿನ್ನಾಭರಣಗಳೊಂದಿಗೆ ಐದು ಮಂದಿ ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬೆನ್ನತ್ತಿದ ಪೊಲೀಸರು ಸಿಸಿಟಿವಿ ದೃಶ್ಯ ಆಧಾರಿಸಿ ವಿನೋದ್, ವಿಜಯ್, ಶಿವರಾಜ್, ಅನಿಲ್ ಹಾಗೂ ಒಬ್ಬ ಅಪ್ರಾಪ್ತ ಆರೋಪಿ ಸೇರಿದಂತೆ ಐದು ಜನರನ್ನು ಬಂಧಿಸಿದ್ದಾರೆ.

    ಬಂಧಿತರು ನಗರದ ಕಮಲನಗರ ಹಾಗೂ ಕಾಮಾಕ್ಷಿಪಾಳ್ಯದ ನಿವಾಸಿಗಳಾಗಿದ್ದು, ಶೋಕಿಗಾಗಿ ದರೋಡೆ ಮಾಡಲು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 2 ಬೈಕ್, 3 ಲಕ್ಷ 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಾಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಈ ಕಾರ್ಯಾಚರಣೆಗೆ ಬೆಂಗಳೂರು ಗ್ರಾಮಾಂತರ ಎಸ್.ಪಿ ಭೀಮಶಂಕರ್ ಎಸ್ ಗುಳೇದ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

  • ಕಾರವಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸತೀಶ್ ಸೈಲ್‍ಗೆ ಬಂಧನದ ಭೀತಿ

    ಕಾರವಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸತೀಶ್ ಸೈಲ್‍ಗೆ ಬಂಧನದ ಭೀತಿ

    ಕಾರವಾರ: ಪಕ್ಷೇತರ ಶಾಸಕ, ಕಾರವಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸತೀಶ್ ಸೈಲ್‍ಗೆ ಬಂಧನದ ಭೀತಿ ಎದುರಾಗಿದೆ.

    ಅಕ್ರಮ ಅದಿರು ಸಾಗಾಣಿಕೆ ಪ್ರಕಣರದ ವಿಚಾರಣೆ ನಡೆಸುತ್ತಿರುವ ಗೋವಾ ಎಸ್‍ಐಟಿ ಸತೀಶ್ ಸೈಲ್‍ಗೆ ಇಂದು ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

    ಏಪ್ರಿಲ್ 9 ರಂದೇ ಎಸ್‍ಐಟಿ ನೋಟಿಸ್ ನೀಡಿದ್ರೂ ಸತೀಶ್ ಸೈಲ್ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿದ್ದು, ಹೆಚ್ಚಿನ ವಿಚಾರಣೆಗಾಗಿ ಗೋವಾ ಎಸ್‍ಐಟಿ ಸತೀಶ್‍ರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

    ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇಂದು ಏನ್ ಮಾಡ್ತಾರೆ ಅನ್ನೋದನ್ನ ಕಾದು ನೋಡಬೇಕು. ಒಂದು ವೇಳೆ, ಬಂಧನಕ್ಕೆ ಒಳಗಾದ್ರೆ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪೋದು ನಿಶ್ಚಿತ. ಹೀಗಾಗಿ ಪರ್ಯಾಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಮತ್ತೋರ್ವ ಆಕಾಂಕ್ಷಿ ರಾಜೇಂದ್ರ ನಾಯ್ಕ್ ರನ್ನ ದೆಹಲಿಗೆ ಕರೆಸಿಕೊಂಡಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

  • ಎರಡು ಕುಟುಂಬಗಳ ನಡುವೆ ಕಲ್ಲು ಹಾಗೂ ದೊಣ್ಣೆಗಳಿಂದ ಮಾರಾಮಾರಿ – ವಿಡಿಯೋ

    ಎರಡು ಕುಟುಂಬಗಳ ನಡುವೆ ಕಲ್ಲು ಹಾಗೂ ದೊಣ್ಣೆಗಳಿಂದ ಮಾರಾಮಾರಿ – ವಿಡಿಯೋ

    ಬೆಳಗಾವಿ: ಜಮೀನಿಗಾಗಿ ಎರಡು ಕುಟುಂಬಗಳ ಸದಸ್ಯರು ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ನಡೆದಿದೆ.

    ಮಾಯಪ್ಪ ಪಾಯಪ್ಪಗೋಳ ಹಾಗೂ ರಾಮ ಪಾಯಪ್ಪಗೋಳ ಕುಟುಂಬದ ಸುಮಾರು 15ಕ್ಕೂ ಹೆಚ್ಚು ಮಂದಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

    https://www.youtube.com/watch?v=EZPfOAIfFEY

  • ಕದ್ದ ಮಾಲಿನಲ್ಲಿ ನಮ್ಗೂ ಅರ್ಧಪಾಲು ನೀಡು- ಪೊಲೀಸರ ಕುಮ್ಮಕ್ಕಿನಲ್ಲೇ ಮನೆ ದೋಚುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್

    ಕದ್ದ ಮಾಲಿನಲ್ಲಿ ನಮ್ಗೂ ಅರ್ಧಪಾಲು ನೀಡು- ಪೊಲೀಸರ ಕುಮ್ಮಕ್ಕಿನಲ್ಲೇ ಮನೆ ದೋಚುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೊಲೀಸರ ಕಣ್ಗಾವಲಿನಲ್ಲಿಯೇ ಮನೆ ದೋಚುತ್ತಿದ್ದ ನಟೋರಿಯಸ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಆರ್ಮುಗಂ ಅಲಿಯಾಸ್ ಕರಿಯಾ ಎನ್ನಲಾಗಿದೆ. ಈತನಿಗೆ ಇಬ್ಬರು ಪೇದೆಗಳು ಕುಮ್ಮಕ್ಕು ನೀಡುತ್ತಿದ್ದರು ಎಂಬುದಾಗಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

    ಖತರ್ನಾಕ್ ಕಳ್ಳ ಆಮುರ್ಗಂ ಮೈಕೋ ಲೇ ಔಟ್ ನಲ್ಲಿ ಮನೆಯೊಂದರಲ್ಲಿ ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದನು. ಈ ವೇಳೆ ಅದೇ ಪ್ರದೇಶದ ಪೇದೆ ಹಸೀಮ್ ಸಾಬ್ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೂಡಲೇ ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ಈ ವೇಳೆ ಖದೀಮ ಕರಿಯಾ, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೇದೆಗಳಾದ ಮಧು, ತಿಪ್ಪೇಸ್ವಾಮಿಯಿಂದ ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬುದಾಗಿ ಬಾಯ್ಬಿಟ್ಟಿದ್ದಾನೆ. ಕದ್ದ ಮಾಲಿನಲ್ಲಿ ಇಬ್ಬರಿಗೂ ಅರ್ಧ ಪಾಲು ನೀಡುವಂತೆ ತಾಕೀತು ಮಾಡುತ್ತಿದ್ದರು. ಹೀಗಾಗಿ ಅವರ ಮಾತಿನಂತೆ ಕಳ್ಳತನ ಮಾಡಿ ಅವರಿಗೂ ಪಾಲು ನೀಡುತ್ತಿರುವುದಾಗಿ ಆರ್ಮುಗಂ ಹೇಳಿದ್ದಾನೆ.

    ಆರ್ಮುಗಂ ಹೆಸರು ಪ್ರಸ್ತಾಪಿಸಿದ ಬಳಿಕ ಪೇದೆಗಳಿಬ್ಬರೂ ಎಸ್ಕೇಪ್ ಆಗಿದ್ದಾರೆ. ಇದೀಗ ಅವರಿಬ್ಬರ ಪತ್ತೆಗೆ ಆಗ್ನೇಯ ವಿಭಾಗ ಡಿಸಿಪಿ ಬೋರಲಿಂಗಯ್ಯ ಅವರಿಂದ ವಿಶೇಷ ತಂಡ ರಚಿಸಲಾಗಿದೆ.

    ಘಟನೆ ಸಂಬಂಧ ಮೈಕೋ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

  • ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 100 ಕೆ.ಜಿ ಚಿನ್ನಾಭರಣ ವಶ- 34 ಮಂದಿ ಆರೋಪಿಗಳ ಬಂಧನ

    ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 100 ಕೆ.ಜಿ ಚಿನ್ನಾಭರಣ ವಶ- 34 ಮಂದಿ ಆರೋಪಿಗಳ ಬಂಧನ

    ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 34 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    2017-18 ಸಾಲಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲೆತ್ನಿಸಿದ 100 ಕೆ.ಜಿ. ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ಇದರ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬರೋಬ್ಬರಿ 30 ಕೋಟಿಗೂ ರೂ. ಅಧಿಕವಾಗಿದೆ.

    ಅಕ್ರಮವಾಗಿ ಸ್ಮಗ್ಲಿಂಗ್ ನಲ್ಲಿ ಭಾಗಿಯಾಗಿರುವ 34 ಜನ ಆರೋಪಿಗಳನ್ನ ಅಧಿಕಾರಿಗಳು ಬಂಧಿಸಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮಧ್ಯ ಏಷ್ಯಾ, ಗಲ್ಫ್ ರಾಷ್ಟ್ರಗಳು ಸೇರಿದಂತೆ ಜೋರ್ಡಾನ್, ಶ್ರೀಲಂಕಾ ಮತ್ತು ದಕ್ಷಿಣಾ ಏಷ್ಯಾದ ಅಕ್ರಮ ಸ್ಮಗ್ಲರ್ಸ್ ಇದೀಗ ಕಂಬಿ ಎಣಿಸುತ್ತಿದ್ದಾರೆ.

    ಬಟ್ಟೆ, ಕೊರಿಯರ್, ಬೆಲ್ಟ್ ಬಕಲ್, ಚಪ್ಪಲಿ, ಚಾಕಲೇಟ್, ಸೋಪ್, ಒಳ ಉಡುಪು, ಮಣ್ಣು ಮಿಶ್ರಿತ ಪುಡಿ ಹೀಗೆ ವಿವಿಧ ರೂಪಗಳಲ್ಲಿ ವಿಮಾನ ನಿಲ್ದಾಣದ ಮೂಲಕ ಸ್ಮಗ್ಲಿಂಗ್ ನಡೆಸುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

    2016-17 ಸಾಲಿನಲ್ಲಿ ಕಸ್ಟಮ್ಸ್ ಅಧಿಕಾರಿಗಳು 34 ಕೆ.ಜಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಚಿನ್ನಾಭರಣಗಳನ್ನ ವಶಪಡಿಸಿಕೊಂಡಿದ್ದರು. ಇದರ ಮಾರುಕಟ್ಟೆ ಮೌಲ್ಯ 9.97 ಕೋಟಿ ರೂ. ಕಳೆದ ಸಾಲಿಗೆ ಹೋಲಿಸಿಕೊಂಡರೆ ಪ್ರಸಕ್ತ ಸಾಲಿನಲ್ಲಿ ಶೇ 200 ರಷ್ಟು ಅಕ್ರಮ ಸಾಗಾಟ ಪ್ರಕರಣ ಹೆಚ್ಚಾಗಿವೆ ಎಂದು ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

  • ಕುಡಿದ ನಶೆಯಲ್ಲಿ ಬೆಳ್ಳಂಬೆಳಗ್ಗೆ ಮನೆಮುಂದೆ ಕಾರು ನಿಲ್ಲಿಸಿ ಜೋಡಿಯಿಂದ ಸೆಕ್ಸ್!

    ಕುಡಿದ ನಶೆಯಲ್ಲಿ ಬೆಳ್ಳಂಬೆಳಗ್ಗೆ ಮನೆಮುಂದೆ ಕಾರು ನಿಲ್ಲಿಸಿ ಜೋಡಿಯಿಂದ ಸೆಕ್ಸ್!

    ಗುರುಗಾಂವ್‍: ಮನೆಮುಂದೆ ಕಾರು ನಿಲ್ಲಿಸಿ ಜೋಡಿಯೊಂದು ಸೆಕ್ಸ್ ಮಾಡುತ್ತಿದ್ದು, ಅದನ್ನು ಪ್ರಶ್ನಿಸಿದ ಮಹಿಳೆಯ ಜೊತೆಗೂ ಅನುಚಿತವಾಗಿ ವರ್ತಿಸಿದ ಘಟನೆ ಬುಧವಾರ ಬೆಳಗ್ಗೆ 5 ಗಂಟೆಗೆ ಹರ್ಯಾಣದ ಗುರುಗಾಂವ್‍ನಲ್ಲಿ ನಡೆದಿದೆ.

    ಮಹಿಳೆಯೊಬ್ಬರು ಯಾರೆಂದು ನೋಡಲು ಮನೆಯಿಂದ ಹೊರಗೆ ಬಂದಿದ್ದರು. ಆಗ ಮನೆಮುಂದೆಯೇ ಕಾರು ನಿಲ್ಲಿಸಿ ಒಂದು ಜೋಡಿ ಕಾರಿನಲ್ಲಿ ಸೆಕ್ಸ್ ಮಾಡುತ್ತಿದ್ದರು.

    ಕಾರಿನಲ್ಲಿ ಪಕ್ಕದ್ಮನೆಯ 26 ವರ್ಷದ ಯುವತಿ ಇದ್ದು, ಮಹಿಳೆ ಮೊದಲು ಆಕೆಯನ್ನು ಗುರುತಿಸಲಿಲ್ಲ. ನಂತರ ಅವರ ಹತ್ತಿರ ಹೋಗಿ ಅವರ ಹೆಸರನ್ನು ಕೇಳಿದ್ದಾರೆ. ಆದರೆ ಈ ಜೋಡಿ 52 ವರ್ಷದ ಮಹಿಳೆಯನ್ನು ನಿರ್ಲಕ್ಷಿಸಿದ್ದರು. ಜೋಡಿ ಯಾವುದೇ ಪ್ರತಿಕ್ರಿಯೇ ನೀಡದೇ ಇದ್ದಾಗ ಮಹಿಳೆ ಮತ್ತೆ ಅವರ ಹೆಸರನ್ನು ಕೇಳಿದ್ದಾರೆ. ಆಗ ಜೋಡಿ ಮಹಿಳೆಯನ್ನು ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ನೀನು ನಮ್ಮ ಜೊತೆ ಸೇರಿಕೋ. ನೀನು ನಮ್ಮ ಜೊತೆ ಸೇರಿ ಮಜಾ ಮಾಡು ಎಂದು ಯುವಕ ಆಕೆಯ ಕೈ ಹಿಡಿದು, ದುಪ್ಪಟ್ಟಾ ಎಳೆದಾಡಿದ್ದಾನೆ.

    ಯುವಕ ಕೈ ಹಿಡಿಯುತ್ತಿದ್ದಂತೆ ಮಹಿಳೆ ಜೋರಾಗಿ ಕಿರುಚಿ ಅಕ್ಕಪಕ್ಕದ ಮನೆಯವರನ್ನು ಕರೆಸಿದ್ದಾರೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಕಾರಿನಲ್ಲೇ ಅವರಿಬ್ಬರನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಸಿಕ್ಕಿಹಾಕಿಕೊಂಡ 20 ವರ್ಷದ ಯುವಕ ನಜಫ್‍ಗರ್ ಗೆ ಕಪಾಳಮೋಕ್ಷ ಮಾಡಿ ಆತನ ಮೇಲೆ ಐಪಿಸಿ ಸೆಕ್ಷನ್ 354(ಲೈಂಗಿಕ ಕಿರುಕುಳ) ಅಡಿಯಲ್ಲಿ ಹಿಂಸೆಯ ಕೇಸ್ ದಾಖಲಿಸಿದ್ದಾರೆ.

    ಯುವಕ ಮತ್ತು ಯುವತಿಯನ್ನು ಬಂಧಿಸುವಾಗ ಇಬ್ಬರೂ ಕುಡಿದಿದ್ದರು. ಆ ನಶೆಯಲ್ಲಿ ಯುವತಿ ತನ್ನ ಮನೆ ಎಂದುಕೊಂಡು ಪಕ್ಕದ್ಮನೆಯ ಬಾಗಿಲನ್ನು ಬಡಿದಳು. ನಂತರ ಇಬ್ಬರೂ ಕಾರಿನತ್ತ ಹೋಗಿದ್ದಾರೆ. ಬಾಗಿಲು ಬಡಿದ ಶಬ್ಧಕ್ಕೆ ಆ ಮನೆಯಲ್ಲಿದ್ದ ಮಹಿಳೆ ಎಚ್ಚರಗೊಂಡು ಹೊರಬಂದು ನೋಡಿದ್ದಾರೆ. ಅಷ್ಟೇ ಅಲ್ಲದೇ ನಾವು ಸ್ಥಳಕ್ಕೆ ಆಗಮಿಸುವ ಮೊದಲೇ ಯುವತಿಯ ಪೋಷಕರು ಆ ಸ್ಥಳಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ನಾನು ಬಾಗಿಲು ತೆಗೆಯುತ್ತಿದ್ದಂತೆ ನನಗೆ ಅವರು ನಗ್ನವಾಗಿ ಕಾಣಿಸಿದ್ದರು. ನಾನು ಅವರನ್ನು ಪ್ರಶ್ನಿಸಿದ್ದಕ್ಕೆ ಯುವತಿ ನನ್ನನ್ನು ನಿಂದಿಸಿದ್ದಾಳೆ ಹಾಗೂ ಯುವಕ ನನ್ನ ಕೈ ಹಿಡಿದು ಕಾರಿನೊಳಗೆ ಎಳೆಯಲು ಪ್ರಯತ್ನಿಸಿದ್ದಾನೆ. ಆ ಕಾರಿನಲ್ಲಿ ಮದ್ಯದ ಬಾಟಲ್, ಚಿಪ್ಸ್ ಪ್ಯಾಕೆಟ್ ಹಾಗೂ ಕಾರ್ಡ್ಸ್ ಇತ್ತು ಎಂದು ಮಹಿಳೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.