Tag: arrest

  • ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಬಂಧನ

    ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಬಂಧನ

    ಚಿಕ್ಕಮಗಳೂರು: ಮೂಡಿಗೆರೆ ಧನ್ಯಶ್ರೀ ಪ್ರಕರಣದ ಪ್ರಮುಖ ಆರೋಪಿ ಸಂತೋಷ್‍ನನ್ನು ಚಿಕ್ಕಮಗಳೂರು ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿದ್ದಾರೆ.

    ಧನ್ಯಶ್ರೀ ಜೊತೆ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದ ಸಂತೋಷ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಕಜೇಕಾರ್ ಗ್ರಾಮದವನೆಂದು ತಿಳಿದು ಬಂದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಊರನ್ನು ಬಿಟ್ಟು ತಲೆಮರೆಸಿಕೊಂಡಿದ್ದ ಸಂತೋಷ್ ನನ್ನು ಮೂಡಿಗೆರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದಾರೆ. ಧನ್ಯಶ್ರೀ ಜೊತೆ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದ ಸಂತೋಷ್, ಅದನ್ನು ಸ್ಕ್ರೀನ್ ಶಾಟ್ ತೆಗೆದು ಹಿಂದೂಪರ ಸಂಘಟನೆಗಳ ಗ್ರೂಪ್ ಗೆ ಹಾಕಿದ್ದನು. ಅಲ್ಲದೇ ಕರೆ ಮಾಡಿ ಧನ್ಯಶ್ರೀ ಹಾಗೂ ತಾಯಿ ಸರಸ್ವತಿಗೆ ಧಮ್ಕಿ ಹಾಕಿದ್ದನು.

    ಏನಿದು ಪ್ರಕರಣ: ಕಳೆದ ಕೆಲ ದಿನಗಳ ಹಿಂದೆ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಳು. ಈ ಪ್ರಕರಣದಲ್ಲಿ ಯುವತಿ ಆತ್ಮಹತ್ಯಗೆ ಮಾಡಿಕೊಳ್ಳುವ ನೈತಿಕ ಪೊಲೀಸ್‍ಗಿರಿ ಕಾರಣ ಎಂದು ತಿಳಿದು ಬಂದಿತ್ತು.

    ಧನ್ಯಶ್ರೀ ಆತ್ಮಹತ್ಯೆ ನಂತರ ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಕಾಣಿಸಿಕೊಂಡಿದ್ದವು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಅವರು, ಪೊಲೀಸ್ ಇಲಾಖೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿರೋ ಸಂಘಟನಾಕಾರರು ಹಾಗೂ ವ್ಯಕ್ತಿಗಳ ಬಗ್ಗೆ ಹಾವಿನ ಜೊತೆ ಸರಸವಾಡಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೇ ಮೃತ ಧನ್ಯಶ್ರೀಗೆ ಸಂತೋಷ್ ಸೇರಿದಂತೆ ಐವರು ಸಂಘಟನೆ ಕಾರ್ಯಕರ್ತರು ಧಮ್ಕಿ ಹಾಕಿದ್ದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾವಿಗೂ ಮುನ್ನ 36 ಗಂಟೆ ಏನನ್ನೂ ತಿನ್ನದೆ ಖಾಲಿ ಹೊಟ್ಟೆ ಇದ್ದದ್ದು ಮರಣೋತ್ತರ ಪರೀಕ್ಷೆಯಿಂದ ಧೃಡಪಟ್ಟಿದೆ ಎಂದು ಹೇಳಿದ್ದರು. ಓದಿ: ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್

    ಧನ್ಯಶ್ರೀ ಮನೆಗೆ ಐವರು ಸಂಘಟನಾಕಾರರು ಎರಡು ಬಾರಿ ಹೋಗಿ ಬಂದಿರೋ ದಾಖಲೆ ಇದೆ. ಅವರ ಮನೆಗೆ ಹೋಗಿ ಹೆತ್ತವರ ಎದುರೇ ಸೊಂಟದ ಕೆಳಗಿನ ಭಾಷೆಯಲ್ಲಿ ಬಾಯಿಗೆ ಬಂದಂತೆ ಬಯ್ದಿರೋದು ಗೊತ್ತಾಗಿದೆ. ಎರಡು, ಮೂರು, ನಾಲ್ಕನೇ ತಾರೀಖು ಬೋಲ್ಡ್ ಆಗಿದ್ದ ಧನ್ಯಶ್ರೀ ಐದನೇ ತಾರೀಖು, ಐವರು ಎರಡು ಬಾರಿ ಮನೆಗೆ ಬಂದುಹೋದ ಮೇಲೆ ಆಕೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರಕರಣದಲ್ಲಿ ಯಾರೇ ಇರಲಿ, ಎಷ್ಟೆ ದೊಡ್ಡ ವ್ಯಕ್ತಿಗಳೇ ಬರಲಿ, ಎಷ್ಟೆ ಒತ್ತಡ ಬಂದರು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ- ಸಾವಿಗೂ ಮುನ್ನ ಐ ಲವ್ ಮುಸ್ಲಿಮ್ಸ್ ಎಂದು ಮೆಸೇಜ್ ಮಾಡಿದ್ದ ಯುವತಿ

    https://www.youtube.com/watch?v=RFSQfZFZs4Y

    https://youtu.be/H8lL8K6TcM8

  • ಪತ್ನಿ ಶೀಲ ಶಂಕಿಸಿ ಜಗಳವಾಡಿದ ಪತಿಗೆ ಬೆಂಕಿ ಹಚ್ಚಿದ ಪತ್ನಿ, ಮಕ್ಕಳು

    ಪತ್ನಿ ಶೀಲ ಶಂಕಿಸಿ ಜಗಳವಾಡಿದ ಪತಿಗೆ ಬೆಂಕಿ ಹಚ್ಚಿದ ಪತ್ನಿ, ಮಕ್ಕಳು

    ಕೊಪ್ಪಳ: ಪತ್ನಿ ಶೀಲ ಶಂಕಿಸಿ ಜಗಳವಾಡಿದ ಪತಿಗೆ ಆತನ ಪತ್ನಿ ಹಾಗೂ ಮಕ್ಕಳು ಸೇರಿ ಬೆಂಕಿ ಹಚ್ಚಿರೋ ಘಟನೆ ಕೊಪ್ಪಳ ದಲ್ಲಿ ನಡೆದಿದೆ.

    ಯಲಬುರ್ಗಾ ತಾಲೂಕಿನ ಹರಿಶಂಕರಬಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಭಯ್ಯ ಹಿರೇಮಠ್ ಎಂಬ ವ್ಯಕ್ತಿಗೆ ಪತ್ನಿ ದಾಕ್ಷಾಯಣಿ, ಮಕ್ಕಳಾದ ಕುಮಾರಸ್ವಾಮಿ, ವೀರಯ್ಯ ಹಾಗೂ ತಮ್ಮನ ಪತ್ನಿ ಸುಮಿತ್ರಾ ಎನ್ನುವವರು ಬೆಂಕಿ ಹಚ್ಚಿದ್ದಾರೆ. ಅದೃಷ್ಟವಶಾತ್ ಪ್ರಭಯ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹಚ್ಚಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಭಯ್ಯ ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ನರೇಗಲ್ ನಿವಾಸಿ. ಕಳೆದ ಐದು ವರ್ಷಗಳಿಂದ ಹರಿಶಂಕರಬಂಡಿಯಲ್ಲಿ ವಾಸವಾಗಿದ್ದರು. ಇಂದು ಮುಂಜಾನೆ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡಿದ್ದು, ಇದರಿಂದ ರೊಚ್ಚಿಗೆದ್ದ ಪತ್ನಿ ಹಾಗೂ ಮಕ್ಕಳು ಪ್ರಭಯ್ಯನಿಗೆ ಬೆಂಕಿ ಹಚ್ಚಿದ್ದರು.

    ಸದ್ಯ ಪ್ರಭಯ್ಯನಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

                                                                             ವೀರಯ್ಯ
                                                                          ಕುಮಾರಸ್ವಾಮಿ
                                                                              ದಾಕ್ಷಾಯಣಿ
                                                                            ಸುಮಿತ್ರಾ

  • ನೀನು ನನಗೆ ಬೇಡ ಎಂದಿದ್ದಕ್ಕೆ 20 ಕಡೆ ಇರಿದು ಪ್ರಿಯತಮೆಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

    ನೀನು ನನಗೆ ಬೇಡ ಎಂದಿದ್ದಕ್ಕೆ 20 ಕಡೆ ಇರಿದು ಪ್ರಿಯತಮೆಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

    ಬೆಂಗಳೂರು: ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಮೊಹಮದ್ ಮುಬೀನ್ (30) ಬಂಧಿತ ಆರೋಪಿ. ಡಿಸೆಂಬರ್ 26ರಂದು ಸುಂಕದಕಟ್ಟೆಯಲ್ಲಿರುವ ತಸ್ಲಿಮಾ ಬಾನು ಮನೆಯಲ್ಲಿಯೇ ಆಕೆಯ ಕೊಲೆ ನಡೆದಿತ್ತು. ಮುಬೀನ್ ಹಾಗು ಮಹಿಳೆ ಒಂದೇ ಊರಿನವರಾಗಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

    2006 ರಲ್ಲಿ ಆರೋಪಿ ಮಹಮದ್ ಮುಬೀನ್ ಜೈಲು ಸೇರಿದ್ದ. ಇದಾದ ನಂತರ ತಸ್ಲಿಮಾ ಬಾನುಗೆ ಮನೆಯವರು ಬೇರೆ ಮದುವೆ ಮಾಡಿಸಿದ್ದರು. ಜೈಲಿಂದ ಬಂದ ನಂತರ ಮುಬೀನ್ ತಸ್ಲಿಮಾ ಜೊತೆ ಸಂಪರ್ಕದಲ್ಲಿದ್ದನು. ಅಷ್ಟೇ ಅಲ್ಲದೇ ದುಡಿಯಲು ಎಂದು ದುಬೈಗೆ ಹೋಗಿದ್ದನು.

    ಮುಬೀನ್ ದುಬೈನಲ್ಲಿ ದುಡಿದು ತಸ್ಲಿಮಾ ಬಾನುಗೆ ಒಡವೆ, ನೆಕ್ಲೆಸ್, ಮೊಬೈಲ್, ಬಟ್ಟೆ ಎಲ್ಲವನ್ನೂ ಕೊಡಿಸುತ್ತಿದ್ದ. ಡಿಸೆಂಬರ್ 26ರಂದು ತಸ್ಲಿಮಾಳನ್ನು ನೋಡಲು ಮುಬೀನ್ ಬೆಂಗಳೂರಿಗೆ ಬಂದಿದ್ದ. ಆಗ ತಸ್ಲಿಮಾ ನೀನು ನನಗೆ ಬೇಡ ಎಂದು ಹೇಳಿದ್ದಾಳೆ. ತಸ್ಲಿಮಾ ಈ ರೀತಿ ಹೇಳಿದ್ದಕ್ಕೆ ಸಿಟ್ಟಾಗಿ ಮುಬೀನ್ ಅಡುಗೆ ಮನೆಯಿಂದ ಚಾಕು ತಂದು 20 ಕಡೆ ಇರಿದು ಕೊಲೆ ಮಾಡಿದ್ದಾನೆ.

    ಕೊಲೆ ನಂತರ ತಾನು ಕೊಡಿಸಿದ್ದ ಒಡವೆ, ನೆಕ್ಲೆಸ್, ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ. ಈಗ ಆರೋಪಿ ಮುಬೀನ್‍ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮುಬೀನ್ ತನ್ನ ಕೈ ಮೇಲೆ ಚಾಕುವಿನಿಂದ ತಸ್ಲೀಮಾ ಎಂದು ಬರೆದುಕೊಂಡಿದ್ದ ವಿಚಾರ ಬೆಳಕಿಗೆ ಬಂದಿದೆ.

  • ಕಲ್ಲಿನಿಂದ ಹೊಡೆದು ಗಂಡನನ್ನು ಕೊಂದ ಪತ್ನಿ ಅರೆಸ್ಟ್

    ಕಲ್ಲಿನಿಂದ ಹೊಡೆದು ಗಂಡನನ್ನು ಕೊಂದ ಪತ್ನಿ ಅರೆಸ್ಟ್

    ಜಮ್ಮು: 5 ಮಕ್ಕಳ ತಾಯಿಯೊಬ್ಬಳು ತನ್ನ ಗಂಡನೊಂದಿಗೆ ಜಗಳವಾಡಿ ಬಳಿಕ ಆತನ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಮೊಹಮ್ಮದ್ ಖಾಸಿಮ್(43) ಕೊಲೆಯಾದ ವ್ಯಕ್ತಿ. ಜನವರಿ 1ರಂದು ಚಸ್ಸಾನಾ ಪ್ರದೇಶದ ತಲ್ಯಾರ್‍ನಲ್ಲಿ ಖಾಸಿಮ್ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ಪತ್ನಿ ಸಬ್ಝಾ ಬೇಗಂಳನ್ನು ಬಂಧಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿ ಪತ್ನಿ ಗಂಡನನ್ನು ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾಳೆ. ಆಗಾಗ ಮನೆಯಲ್ಲಿ ಜಗಳವಾಗ್ತಿತ್ತು ಎಂದು ಹೇಳಿದ್ದಾಳೆ. ಕೊಲೆ ನಡೆದ ದಿನವೂ ಇಬ್ಬರ ಮಧ್ಯೆ ಜಗಳವಾಗಿದ್ದು, ಮನೆಯ ಹೊರಗಡೆ ಸಬ್ಝಾ ಕಲ್ಲು ತೆಗೆದುಕೊಂಡು ಗಂಡನ ತಲೆಗೆ ಹಲವು ಬಾರಿ ಹೊಡೆದಿದ್ದಾಳೆ. ಪರಿಣಾಮ ಖಾಸಿಮ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ನವಿಲು ಬೇಟೆಯಾಡ್ತಿದ್ದವರನ್ನ ಅಟ್ಟಾಡಿಸಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

    ನವಿಲು ಬೇಟೆಯಾಡ್ತಿದ್ದವರನ್ನ ಅಟ್ಟಾಡಿಸಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

    ತುಮಕೂರು: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕೆ.ರಾಮಪುರದಲ್ಲಿ ನಡೆದಿದೆ.

    ಬಂಧಿತರು ಆಂಧ್ರದ ಕಂಬದೂರು ಗ್ರಾಮದವರಾಗಿದ್ದು, ನವಿಲುಗಳನ್ನು ಬೇಟೆಯಾಡಿ ಕೊಂದು ಜೋಳಿಗೆಯಲ್ಲಿ ಹೊತ್ತೊಯ್ಯತ್ತಿದ್ದರು. ಹನುಮನ ಬೆಟ್ಟ ನವಿಲು ಸಂರಕ್ಷಣಾ ಗುಡ್ಡದಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಬೇಟೆಯಾಡಿದ್ದರು.

    ಇದನ್ನು ಗಮನಿಸಿದ ಕೆ. ರಾಮಪುರ ಗ್ರಾಮಸ್ಥರು ಬೇಟೆಗಾರರನ್ನು ಅಟ್ಟಾಡಿಸಿ ಹಿಡಿದು ವೈ.ಎನ್. ಹೊಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

     

     

     

  • ಅಬ್ದುಲ್ ಬಶೀರ್ ಕೊಲೆ ಯತ್ನ- ನಾಲ್ವರು ಆರೋಪಿಗಳ ಬಂಧನ

    ಅಬ್ದುಲ್ ಬಶೀರ್ ಕೊಲೆ ಯತ್ನ- ನಾಲ್ವರು ಆರೋಪಿಗಳ ಬಂಧನ

    ಮಂಗಳೂರು: ಜಿಲ್ಲೆಯ ಫಾಸ್ಟ್ ಫುಡ್ ವ್ಯಾಪಾರಿ ಅಬ್ದುಲ್ ಬಶೀರ್ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಬಂಧನವಾಗಿದೆ.

    ಶ್ರೀಜಿತ್ ಪಿ.ಕೆ (25), ಕಿಶನ್ ಪೂಜಾರಿ (21), ಧನುಷ್ ಪೂಜಾರಿ (22), ಸಂದೇಶ್ ಕೋಟ್ಯಾನ್ (22) ಬಂಧಿತ ಆರೋಪಿಗಳು. ಶ್ರೀಜಿತ್, ಕಾಸರಗೋಡಿನ ಉಪ್ಪಳದ ಮಂಗಲ್ಪಾಡಿ ನಿವಾಸಿ, ಸಂದೇಶ್ ಮಂಜೇಶ್ವರದ ಕುಂಜತ್ತೂರು ನಿವಾಸಿ, ಕಿಶನ್ ಮತ್ತು ಧನುಷ್ ಮಂಗಳೂರಿನ ಪಡೀಲ್ ನಿವಾಸಿಗಳು ಎಂದು ತಿಳಿದು ಬಂದಿದೆ.

    ಮಂಗಳೂರಿನ ಕಂಕನಾಡಿ ಗರೋಡಿ ಜಾತ್ರೆಗೆ ಬಂದಿದ್ದ ಯುವಕರ ತಂಡ ದೀಪಕ್ ರಾವ್ ಹತ್ಯೆಯಾದ ದಿನ ಎಜೆ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಹಿಂದೂ ಯುವಕನ ಕೊಲೆಯಾಗಿದೆ ಎಂದು ಆಕ್ರೋಶಗೊಂಡ ಈ ಯುವಕರು ಸೇಡು ತೀರಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. ದೀಪಕ್ ಹತ್ಯೆಗೆ ರಿವೇಂಜ್ ಆಗಿ ಕೃತ್ಯ ಬಷೀರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಹೇಳಿದರು.

    ಬಷೀರ್ ಗೂ ಬಂಧಿತ ಆರೋಪಿಗಳಿಗೂ ಸಂಬಂಧವಿಲ್ಲ. ಮೇಲ್ನೋಟಕ್ಕೆ ಹಳೇ ವೈಷಮ್ಯ ಕಾಣಿಸುತ್ತಿಲ್ಲ. ಮುಂದೆ ತನಿಖೆಯಲ್ಲಿ ಎಲ್ಲಾ ಸತ್ಯಗಳು ಬಹಿರಂಗ ಆಗುತ್ತದೆ ಎಂದು ಇದೇ ವೇಳೆ ಹೇಳಿದ್ದಾರೆ. ಜ.3 ರಂದು ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಅಬ್ದುಲ್ ಬಶೀರ್ ಚಿಕಿತ್ಸೆಗೆ ಸ್ಪಂದಿಸ್ತಾಯಿದ್ದಾರೆ, ಅಬ್ದುಲ್ ಬಶೀರ್ ದೇಹ ಸ್ಥಿತಿ ಸುಧಾರಿಸಿದೆ ಎಂದು ಸ್ಪಷ್ಟಪಡಿಸಿದರು.

    ಆರಂಭದಲ್ಲಿ ಇದ್ದಂತಹ ವಿಷಮ ಸ್ಥಿತಿ ಈಗ ಮಂಗಳೂರಲ್ಲಿ ಇಲ್ಲ ಎಂದು ಪೊಲೀಸ್ ಕಮೀಷನರ್ ಹೇಳಿದರು. ಇದನ್ನೂ ಓದಿ: ದೀಪಕ್ ಹತ್ಯೆ ನಡೆದ ರಾತ್ರಿ ಮಂಗ್ಳೂರಿನಲ್ಲಿ ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ

    https://www.youtube.com/watch?v=prf8LAzRcus

    https://www.youtube.com/watch?v=XIln_78eJlQ

    https://www.youtube.com/watch?v=nqZ3ZShX1q0

  • ಹಾವು, ಗೂಬೆ ಕಳ್ಳ ಸಾಗಾಣಿಕೆ ಮಾಡ್ತಿದ್ದ ಆರು ಜನ ಅರೆಸ್ಟ್

    ಹಾವು, ಗೂಬೆ ಕಳ್ಳ ಸಾಗಾಣಿಕೆ ಮಾಡ್ತಿದ್ದ ಆರು ಜನ ಅರೆಸ್ಟ್

    ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಾವು ಹಾಗೂ ಗೂಬೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಆರು ಜನರನ್ನ ಬಂಧಿಸಿದ್ದಾರೆ.

    ಮಂಗಳೂರು ಮೂಲದ ಖಾದರ್, ಶಂಬು, ವೀರೇಂದ್ರ, ಜಗದೀಶ್ ಮತ್ತು ಹರಪ್ಪನಹಳ್ಳಿ ತಾಲೂಕಿನ ನಂದಿ ಬೇಗೂರಿನ ಅಲ್ಲಾಬಷ್ಕ್ ಹಾಗೂ ಲೋಕೇಶ್ ಬಂಧಿತ ಆರೋಪಿಗಳು. ಹಾವು ಮತ್ತು ಗೂಬೆಯನ್ನು ಮಾರಾಟ ಮಾಡಲು ಬಂದಾಗ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಿ ಹಾವು, ಗೂಬೆ ಹಾಗೂ ಸ್ಯಾಂಟ್ರೋ ಕಾರನ್ನ ವಶಕ್ಕೆ ಪಡೆದಿದ್ದಾರೆ.

    ಪೊಲೀಸರು ಬಂಧಿತರಿಂದ 30 ಲಕ್ಷ ರೂ. ಮೌಲ್ಯದ ನಾಲ್ಕುವರೆ ಕೆಜಿ ತೂಕದ ಹಾವು ಹಾಗೂ 20 ಲಕ್ಷ ರೂ. ಮೌಲ್ಯದ ಒಂದು ಗೂಬೆಯನ್ನ ವಶಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಆಟೋ ಚಾಲಕನಿಂದ ಹಲ್ಲೆ

    ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಆಟೋ ಚಾಲಕನಿಂದ ಹಲ್ಲೆ

    ಬೆಂಗಳೂರು: ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿ ನಡು ರಸ್ತೆಯಲ್ಲಿ ಆಟೋ ನಿಲ್ಲಿಸಿದನ್ನು ಪ್ರಶ್ನಿಸಿದಕ್ಕೆ ಆಟೋ ಚಾಲಕನೊಬ್ಬ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಕೆ ಆರ್ ಪುರಂ ನಲ್ಲಿ ನಡೆದಿದೆ.

    ಕೆ ಆರ್ ಪುರಂ ಬಳಿಯ ದೇವಸಂದ್ರ ನಿವಾಸಿ ನಯಾಜ್ ಎಂಬ ವ್ಯಕ್ತಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆಗೈದ ಆರೋಪಿ. ಪ್ರಸ್ತುತ ಆರೋಪಿ ನಿಯಾಜ್‍ನನ್ನು ಕೆಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.

    ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ನಿಯಾಜ್ ನಡುರಸ್ತೆಯಲ್ಲಿ ಆಟೋ ನಿಲ್ಲಿಸಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದ ಅಂತಾ ಹೇಳಲಾಗಿದೆ. ಸ್ಥಳದಲ್ಲಿದ್ದ ಪೇದೆ ಗೋವಿಂದ್, ಆಟೋ ಹತ್ತಿ ಪೊಲೀಸ್ ಠಾಣೆಗೆ ನಡೆಯಲು ಸೂಚಿಸಿದ್ದಾರೆ. ಈ ವೇಳೆ ಕೋಪಗೊಂಡ ನಯಾಜ್ ಪೇದೆಯನ್ನು ನಿಂದಿಸಿ ಹತ್ತಿರ ದೇವಸಂದ್ರ ಸ್ಮಶಾನದ ಬಳಿ ಕರೆದುಕೊಂಡು ಹೋಗಿ ಆತನ ಸ್ನೇಹಿತರ ನೆರವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆಟೋವನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ಪರಿಣಾಮ ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಓರ್ವ ಪಾದಚಾರಿ ಗಾಯಗೊಂಡಿದ್ದಾರೆ.

    ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ತಮ್ಮ ಸಹೋದ್ಯೋಗಿ ಪೇದೆ ಶಿವಾನಂದರನ್ನು ಕರೆಸಿಕೊಂಡು ಗೋವಿಂದ್, ಆರೋಪಿ ನಯಾಜ್‍ನನ್ನು ವಶಕ್ಕೆ ಪಡೆದಿದ್ದಾರೆ. ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ನಯಾಜ್‍ನನ್ನ ಕೆ ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.

  • ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ- ಅರ್ಧ ಕೆಜಿಗೂ ಹೆಚ್ಚಿನ ಚಿನ್ನಾಭರಣ ವಶ

    ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ- ಅರ್ಧ ಕೆಜಿಗೂ ಹೆಚ್ಚಿನ ಚಿನ್ನಾಭರಣ ವಶ

    ಬೆಂಗಳೂರು: ಮನೆಗಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದ ಐವರು ಕಳ್ಳರನ್ನು ಬಂಧಿಸಿ, ಅರ್ಧ ಕೆಜಿ ಗೂ ಹೆಚ್ಚಿನ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ನಗರದ ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದ್ದ ಸುಮಾರು ಮೂವತ್ತು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಸಿ.ವಿ. ವಿಶ್ವಾಸ್, ಗೌರೀಶ್, ಕುಮಾರ್, ಮರಿಯಪ್ಪ, ಗುಜರಿ, ಸತೀಶ ಹಾಗೂ ಮುರುಗ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳಿಂದ ಸುಮಾರು 502 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಸುಲಿಗೆ, ಒಂಬತ್ತು ಮನೆ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

    ಚಿನ್ನಾಭರಣ ಕಳೆದುಕೊಂಡ ಸಾರ್ವಜನಿಕರಿಗೆ ಇಂದು ಪೊಲೀಸರು ಅಭರಣಗಳನ್ನು ಹಿಂತಿರುಗಿಸಿದರು. ಈ ವೇಳೆ ಗ್ರಾಮಾಂತರ ಎಸ್ಪಿ ಅಮಿತ್ ಸಿಂಗ್ ಹೆಬ್ಬಗೋಡಿ ಸಿಪಿಐ ಜಗದೀಶ್ ಹಾಗೂ ಠಾಣಾ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

  • ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಐವರ ಬಂಧನ

    ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಐವರ ಬಂಧನ

    ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಆರೋಪಿಗಳಾದ ತಮಿಳುನಾಡಿನ ಹೊಸೂರು ಮೂಲದ ವೆಂಕಟರಾಜು, ಶಂಕರ್, ಮುರಳಿ, ನಾಗೇಶ್ ಹಾಗೂ ನಾಗರಾಜು ಅತ್ತಿಬೆಲೆ ಸಮೀಪದ ಟಿವಿಎಸ್ ಕ್ರಾಸ್ ಬಳಿ ಭಾನುವಾರ ತಡರಾತ್ರಿ 2 ಕಾರುಗಳಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅತ್ತಿಬೆಲೆ ಸಿಪಿಐ ರಾಜೇಶ್, ಎಸ್.ಐ ಗಜೇಂದ್ರ, ಕ್ರೈಮ್ ಸಿಬ್ಬಂದಿ ಪ್ರಭು ಹಾಗೂ ನಟರಾಜು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

    ಬಂಧಿತರಿಂದ 2 ಲಾಂಗ್ ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು 10 ದಿನಗಳ ಹಿಂದೆ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ 20,000 ಸಾವಿರ ರೂ. ನಗದು ಪರ್ಸ್ ಹಾಗೂ ಚಿನ್ನಾಭರಣ ದೋಚಿದ ಪ್ರಕರಣ ಸೇರಿದಂತೆ ಅತ್ತಿಬೆಲೆ ಹಾಗೂ ಸರ್ಜಾಪುರದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

    ಪ್ರಮುಖ ಆರೋಪಿಗಳಾದ ನಾಗರಾಜು ಹಾಗೂ ಶಂಕರ್ ನ ಮೇಲೆ ತಮಿಳುನಾಡಿನ ಹೊಸೂರು ಪೊಲೀಸ್ ಠಾಣೆಯಲ್ಲಿ 8 ಸರಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.