Tag: arrest

  • ದಂಗಲ್ ನಟಿ ಝೈರಾ ವಾಸಿಮ್ ಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಅರೆಸ್ಟ್

    ದಂಗಲ್ ನಟಿ ಝೈರಾ ವಾಸಿಮ್ ಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಅರೆಸ್ಟ್

    ಮುಂಬೈ: ದಂಗಲ್ ನಟಿ ಝೈರಾ ವಾಸಿಮ್‍ಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯನ್ನು ಭಾನುವಾರದಂದು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ನಟಿ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುವಾಗ ಅವರ ಹಿಂದಿನ ಸೀಟಿನಲ್ಲಿ ಇದ್ದ ಮತ್ತೊಬ್ಬ ಪ್ರಯಾಣಿಕ ಝೈರಾಗೆ ಲೈಂಗಿಕ ಕಿರುಕುಳ ನೀಡಿದ್ದ. ಮುಂಬೈಗೆ ಬಂದಿಳಿದ ತಕ್ಷಣ ವಿಡಿಯೋ ಮೂಲಕ ನಡೆದ ಘಟನೆಯನ್ನು ಝೈರಾ ವಿವರಿಸಿದ್ದರು.

    ಬಂಧಿತನನ್ನು ಮುಂಬೈ ಮೂಲದ ಉದ್ಯಮಿ ವಿಕಾಸ್ ಸಚ್‍ದೇವ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಡೆದ ಘಟನೆಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ವಿಚಾರಣೆಗೆ ನಿರ್ದೇಶನ ನೀಡಿತ್ತು. ವಿಕಾಸ್ ಸಚ್‍ದೇವ್ ವಿರುದ್ಧ ಐಪಿಸಿ ಸೆಕ್ಷನ್ 354 ಹಾಗೂ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮುಂಬೈ ಪೊಲೀಸ್ ಆಯುಕ್ತ ಅನಿಲ್ ಕುಂಬಾರೆ ಹೇಳಿದ್ದಾರೆ.

    https://www.youtube.com/watch?v=QLYr2Kq4FtI

    ಏನಿದು ಘಟನೆ?: ವಿಮಾನದಲ್ಲಿ ಕಿಡಿಗೇಡಿಯೊಬ್ಬ ಝೈರಾ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರಿಂದ ಮನನೊಂದ ನಟಿ ಬಿಕ್ಕಿ-ಬಿಕ್ಕಿ ಅತ್ತಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 17 ವರ್ಷದ ನಟಿ ಝೈರಾ ಫ್ಲೈಟ್‍ನಲ್ಲಿ ನಿದ್ರೆಗೆ ಜಾರಿದ್ದರು. ಈ ವೇಳೆ ಹಿಂಬದಿ ಸೀಟ್ ನಲ್ಲಿ ಕುಳಿತುಕೊಂಡಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೋರ್ವ ಆಕೆಯ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಝೈರಾಳನ್ನು ಹಿಂದಿನಿಂದ ಕಾಲಿನಲ್ಲಿ ಸ್ಪರ್ಶಿಸಿದ್ದಾನೆ.

    ಇದರಿಂದ ಝೈರಾ ಕೂಡಲೇ ಎಚ್ಚರಗೊಂಡು ಆ ವ್ಯಕ್ತಿಯ ಅಸಭ್ಯ ಚಟುವಟಿಕೆಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಅಲ್ಲಿ ಬೆಳಕು ಕಡಿಮೆ ಇದಿದ್ದರಿಂದ ಅವನ ಮುಖವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಆಗಲಿಲ್ಲ. ಆ ವ್ಯಕ್ತಿ ಸುಮಾರು 5-10 ನಿಮಿಷವರೆಗೂ ಝೈರಾ ಕತ್ತು ಹಾಗೂ ಕಾಲುಗಳನ್ನು ಸವರಿದ್ದಾನೆ ಎಂದು ಇನ್ ಸ್ಟಾಗ್ರಾಂನಲ್ಲಿ ಝೈರಾ ಪೋಸ್ಟ್ ಮಾಡಿದ್ದಾರೆ.

    ಝೈರಾ ಇನ್‍ಸ್ಟಾಗ್ರಾಂನಲ್ಲಿ ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಲೈವ್ ವಿಡಿಯೋ ಮಾಡಿದ್ದಾರೆ. ಈ ಘಟನೆ ಬಗ್ಗೆ ವಿಸ್ತಾರಾ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, ಬೇರೆ ಪ್ರಯಾಣಿಕನಿಂದ ಅವರಿಗೆ ಆದ ಅನುಭವವನ್ನು ನಾವು ಕೇಳಿದ್ದೇವೆ. ನಾವು ಈ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ನಾವು ಝೈರಾಗೆ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧರಿದ್ದೇವೆ. ಈ ರೀತಿಯ ಘಟನೆಗಳನ್ನು ನಾವು ಸಹಿಸುವುದಿಲ್ಲ ಎಂದು ಉತ್ತರಿಸಿದ್ದಾರೆ.

    ಘಟನೆ ನಡೆದ ನಂತರ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಝೈರಾ ಇದ್ದ ಹೋಟೆಲ್ ಗೆ ಭೇಟಿ ನೀಡಿ ಅವರ ಹೇಳಿಯನ್ನು ಪಡೆದು ಕೇಸ್ ದಾಖಲಿಸಿದ್ದಾರೆ.

  • ಪತ್ರಕರ್ತ ರವಿಬೆಳಗೆರೆ ಬಂಧನ- ಸಂಸದ ಪ್ರಹ್ಲಾದ್ ಜೋಷಿ ಹೀಗಂದ್ರು

    ಪತ್ರಕರ್ತ ರವಿಬೆಳಗೆರೆ ಬಂಧನ- ಸಂಸದ ಪ್ರಹ್ಲಾದ್ ಜೋಷಿ ಹೀಗಂದ್ರು

    ಹುಬ್ಬಳ್ಳಿ: ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತೆ. ಯಾರು ಎಂಥವರು ಎಂಬುದನ್ನು ಕಾಲ ನಿರ್ಧಾರ ಮಾಡುತ್ತೆ ಅಂತ ಸಂಸದ ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ.

    ಪತ್ರಕರ್ತ ರವಿ ಬೆಳಗೆರೆ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ತಾನೊಬ್ಬನೇ ಸತ್ಯವಂತ ಎನ್ನುವ ಹಾಗೆ ರವಿ ಬೆಳಗೆರೆ ಇದ್ದರು. ತಾನೊಬ್ಬನೇ ಸಾಚಾ.. ಉಳಿದವರೆಲ್ಲಾ ಚಾರಿತ್ರ್ಯಹೀನರು ಅನ್ನೋ ರೀತಿಯಲ್ಲಿ ಜೀವನ ಮಾಡುತ್ತಿದ್ದರು ಅಂದರು.  ಇದನ್ನೂ ಓದಿ: ಸಿಸಿಬಿ ಕಸ್ಟಡಿಯಲ್ಲಿ ಮೊದಲ ರಾತ್ರಿ ಕಳೆದ ರವಿ ಬೆಳಗೆರೆ- ನಿದ್ದೆ ಬಾರದೇ ಪೇಪರ್ ನಲ್ಲಿ ಗೀಚಿದ್ರು

    ಪ್ರಕರಣದಲ್ಲಿ ಬೆಳಗೆರೆ ಸಿಲುಕಿದ್ದಾರೆ ಎಂದು ಈ ಮಾತು ಹೇಳುತ್ತಿಲ್ಲ. ಯಾರನ್ನಾದರೂ ದೈಹಿಕವಾಗಿ ಮುಗಿಸುತ್ತೇನೆ ಎಂಬುದು ಸರಿಯಲ್ಲ ಅಂತ ಜೋಷಿ ಹೇಳಿದ್ರು.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು.  ಇದನ್ನೂ ಓದಿ: ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು

    https://www.youtube.com/watch?v=86k-IW3-boE

    https://www.youtube.com/watch?v=kJ5uYUEgVeM

    https://www.youtube.com/watch?v=tvAkOpM6ZZo

    https://www.youtube.com/watch?v=lgEoaxQ1l44

    https://www.youtube.com/watch?v=bwXnj2XMWag

  • Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕು ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೇಳಿದ್ದಾರೆ.

    ತನ್ನ ಹತ್ಯೆಗೆ ಸುಪಾರಿ ನೀಡಿ ಬಂಧನವಾಗಿರುವ ರವಿ ಬೆಳಗೆರೆ ಅವರ ಕುರಿತು ಅವರು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿ, ರವಿ ಬೆಳಗೆರೆ ಅವರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ. ಸಿಸಿಬಿ ಮತ್ತು ಎಸ್‍ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. 

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ವೇಳೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನನ್ನನ್ನು ಕೊಲೆ ಮಾಡಲು ರವಿಬೆಳಗೆರೆಯಿಂದ ಸುಪಾರಿ ಪಡೆದಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಈ ವಿಚಾರ ನನಗೂ ತಿಳಿದಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಬಂಧನ ನಡೆಸಿದ ಸಂದರ್ಭದಲ್ಲಿ ತಿಳಿಯಿತು ಎಂದರು.

    ಸುಪಾರಿ ನೀಡಿರುವ ಬಗ್ಗೆ ಕೇಳಿ ನನಗೂ ಶಾಕ್ ಆಗಿದ್ದು, ನನ್ನ ಹಾಗೂ ರವಿಬೆಳಗೆರೆ ಅವರ ಸಂಬಂಧ ಸುಮಾರು 14 ವರ್ಷಗಳದ್ದು, ನಿರಂತರವಾಗಿ 14 ವರ್ಷ ಅವರ ಬಳಿ ಕೆಲಸ ಮಾಡಿದ್ದೇನೆ. ಅಲ್ಲದೇ ಅವರಿಗೆ ಎಂದು ಅಸಮಾಧಾನ ಬಾರದ ಹಾಗೇ ಕೆಲಸ ಮಾಡಿದ್ದೇನೆ. ಈಗಿದ್ದು ನನ್ನ ವಿರುದ್ಧ ಸುಪಾರಿ ನೀಡುವ ಸುದ್ದಿ ಕೇಳಿ ಅಶ್ಚರ್ಯ ಹಾಗೂ ಅತಂಕವಾಗುತ್ತಿದೆ ಎಂದು ಹೇಳಿದರು.

    ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ?
    ನನ್ನ ಅವರ ಮಧ್ಯೆ ಯಾವುದೇ ವೈಯಕ್ತಿಕ ಜಗಳವಿಲ್ಲ. 2014 ಡಿಸೆಂಬರ್ ನಲ್ಲಿ ನಾನು ಅವರ ಬಳಿ ಕೆಲಸ ಬಿಟ್ಟೆ. 14 ವರ್ಷದ ಅವಧಿಯಲ್ಲಿ ನನ್ನ ಹಾಗೂ ನನ್ನ ವರದಿಗಳ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿರಲಿಲ್ಲ. ಯಾವುದೇ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ 2014ರಲ್ಲಿ ಅವರು ನನ್ನ ಬಗ್ಗೆ ಸಂಶಯ ವ್ಯಕ್ತಪಡಿಸಲು ಆರಂಭಮಾಡಿದರು. ಹೀಗಾಗಿ ನಂಬಿಕೆ ಇಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸಬಾರದು ಎಂಬ ಕಾರಣಕ್ಕೆ ಕೆಲಸ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಈ ಹಿಂದೆ ಪ್ಲಾನ್ ಮಾಡಲಾಗಿತ್ತಾ?
    ಈ ಹಿಂದೆ ತಮ್ಮ ಮೇಲೆ ನಡೆದ ದಾಳಿ ಕುರಿತು ಪ್ಲಾನ್ ಮಾಡಲಾಗಿತ್ತು ಎಂದು ಸಿಸಿಬಿ ಪೊಲೀಸರ ಮಾಹಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಎಂದು ಸಂಶಯ ಉಂಟಾಗಿರಲಿಲ್ಲ, ಆದರೆ ಪೊಲೀಸ್ ಮಾಹಿತಿ ಪಡೆದ ನಂತರ ನನ್ನ ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸಿ ಕೊಂಡರೆ ಹೌದು ಎನ್ನುವ ಭಾವನೆ ಬರುತ್ತಿದೆ. 2014 ಡಿಸೆಂಬರ್ 20, ಶನಿವಾರ ರವಿಬೆಳಗೆರೆ ಅವರು ನನಗೆ ಪದೆ ಪದೆ ಕರೆಮಾಡಿ ಚಾನಲ್‍ಗೆ ಬಂಡವಾಳ ಹೂಡಲು ಕೆಲವರು ಬರುತ್ತಿದ್ದಾರೆ. ನಿನ್ನ ಬಳಿ ಮಾತನಾಡಬೇಕು ಬಾ ಎಂದು ಕರೆದರು. ಆದರೆ ನಾನು ಅಂದು ತಡವಾಗಿ ಕಚೇರಿ ಬಳಿ ತೆರಳಿದೆ, ಆ ವೇಳೆಗೆ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಲ್ಲಿಗೆ ಬಂದಿದ್ದರು. ಆದರೆ ಕಚೇರಿಯಲ್ಲಿ ನೋಡಿದರೆ ಯಾರು ಇರಲಿಲ್ಲ. ಆಗ ನಾನು ಅವರ ಬಳಿ ಬಂಡವಾಳ ಹೂಡುವ ವ್ಯಕ್ತಿಗಳ ಬಗ್ಗೆ ಕೇಳಿದೆ, ಆದರೆ ಈ ಬಗ್ಗೆ ಮಾತನಾಡದೆ ಬೇರೆ ವಿಷಯ ಕುರಿತು ಮಾತನಾಡಿದರು. ಅಂದು ಅನುಮಾನಗೊಂಡು ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಮಾಹಿತಿ ಪಡೆದೆ. ಅವರು ಸಹ ಅನುಮಾನ ವ್ಯಕ್ತಪಡಿಸಿ ನನ್ನನ್ನು ಅಲ್ಲಿಂದ ಹೊರಡುವಂತೆ ಸೂಚಿಸಿದರು. ತಕ್ಷಣ ನಾನು ಅಲ್ಲಿಂದ ನಾನು ಬೇರೆ ಕಡೆ ತೆರಳಿ ಕೆಲಸ ಬಿಡುವ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

    ವಿಳಾಸ ತಿಳಿಯಲು ಕೊರಿಯರ್ ನೆಪ:
    ಕಳೆದ ಆಗಸ್ಟ್ 28 ರಂದು ನನ್ನ ಮನೆ ಬಳಿ ಆರೋಪಿ ಶಶಿ ಓಡಾಡುವುದನ್ನು ಗಮನಿಸಿದ್ದೇನೆ, ಆತನು ಅಲ್ಲಿಯೇ ಒಂದು ವರ್ಷ ಕೆಲಸ ಮಾಡಿದ್ದ. ಈ ವೇಳೆ ಆತನ ಹಿನ್ನೆಲೆ ತಿಳಿದಿತ್ತು. ನಾನು ಉತ್ತರ ಹಳ್ಳಿ ಬಳಿ ವಾಸಿಸುತ್ತಿದ್ದೆ, ನಂತರ ಕಳೆದ ವರ್ಷ ನನ್ನ ಮಗನ ಶಾಲೆಯ ವಿಚಾರವಾಗಿ ಮಲ್ಲೇಶ್ವರಂ ಬಳಿ ಮನೆ ಬದಲಾಯಿಸಿದೆ. ನಂತರ ವಸಂತಪುರಕ್ಕೆ ಬಂದೆ ಈ ವೇಳೆ ನನಗೆ ಕೊರಿಯರ್ ಅಫೀಸ್ ನಿಂದ ಕರೆ ಬಂತು. ಆಗ ಕೆಲವು ಪುಸ್ತಕ ನೀಡಬೇಕಿದೆ ಎಂದು ನನ್ನ ವಿಳಾಸ ಪಡೆದರು. ಅಂದು ಬಂದ ಪುಸ್ತಕದಲ್ಲಿ ಬಿ.ಎಚ್ ರಾಘವೇಂದ್ರ ಬರೆದ ಪುಸ್ತಕವು ಇತ್ತು, ರಾಘವೇಂದ್ರ ಅವರು ರವಿಬೆಳಗೆರೆ ಅವರ ಆಪ್ತ ಗೆಳೆಯರು. ಇದರಿಂದ ಅನುಮಾನಗೊಂಡು ರವಿಬೆಳಗೆರೆ ಅವರಿಗೆ ಕರೆ ಮಾಡಿ ಈ ಕುರಿತು ವಿಚಾರಿಸಿದೆ. ಆದರೆ ಅವರು ಪುಸ್ತಕ ಕಳುಹಿಸಿಲ್ಲ ಎಂದು ಹೇಳಿದರು. ನಂತರ ಕೊರಿಯರ್ ನಿಂದ ಬಂದ ಕರೆ ಆಧಾರಿಸಿ ನಾನು ಪರಿಶೀಲಿಸಲು ಮುಂದಾದಾಗ ಅದು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ 10 ವರ್ಷಗಳ ಕಾಲ ಕೊರಿಯರ್ ಸೇವೆ ಮಾಡುತ್ತಿದ್ದ ಮಂಜುವಿನ ನಂಬರ್ ಎಂದು ತಿಳಿಯಿತು. ಆಗ ನಾನು ಆತನನ್ನು ವಿಚಾರಿಸಿದಾಗ ಮಹಿಳೆಯೊಬ್ಬರು ಬಂದು ಕೊಟ್ಟರು ಎಂದು ತಿಳಿಸಿದ. ಆಗ ನನಗೆ ಆತ ಸುಳ್ಳು ಹೇಳುತ್ತಿರುವ ಕುರಿತು ಮನವರಿಕೆ ಆಯ್ತು, ನನ್ನ ಮನೆ ವಿಳಾಸ ತಿಳಿಯಲು ಮಾಡಿದ ತಂತ್ರ ಎಂದು ಅರಿವಾಯಿತು ಎಂದರು.

    ಆದರೂ ನಾನು ಏನು ತಪ್ಪು ಮಾಡಿಲ್ಲ ಎಂಬ ಧೈರ್ಯದ ಮೇಲೆ ಸುಮ್ಮನಾದೆ, ಸುಪಾರಿ ಕೊಟ್ಟಿರುವ ಕುರಿತು ಎಲ್ಲೂ ಸುಳಿವು ನನಗೆ ಸಿಗಲಿಲ್ಲ. ಇಲ್ಲವಾದರೆ ಅಂದೇ ರವಿಬೆಳಗೆರೆ ಅವರು ಜೈಲು ಸೇರುತ್ತಿದ್ದರು, ಎಸ್‍ಐಟಿ ಅಧಿಕಾರಿಗಳ ಕಾರ್ಯ ಮೆಚ್ಚುವಂತದ್ದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಾದೇ ಕಾರ್ಯನಿರ್ವಹಿಸಿದ್ದಾರೆ. ಆದರೆ ಒಬ್ಬ ರಾಕ್ಷಸ ರವಿಬೆಳಗೆರೆ ಬಳಿ 14 ವರ್ಷದ ಕೆಲಸ ಮಾಡಿದ ನಂತರವು ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕಿದೆ ಎಂದರು.

    ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    https://www.youtube.com/watch?v=tvAkOpM6ZZo

     

     

  • ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಂಧಿಸಲು ತೆರಳಿದಾಗ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಪೊಲೀಸ್ ಅಧಿಕಾರಿಗೆ ಬುದ್ಧಿವಾದ ಹೇಳಿರುವ ವಿಚಾರ ಮೂಲಗಳಿಂದ ಸಿಕ್ಕಿದೆ.

    ಚಾಮರಾಜಪೇಟೆಯ ಹಾಯ್ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ರವಿ ಬೆಳಗೆರೆ ಇದ್ದಾರೆ ಎಂದು ತಿಳಿದು ಬೆಳಗ್ಗೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಬೆಳಗೆರೆ ನಿದ್ರೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ( ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ )

    ಈ ವೇಳೆ ಪೊಲೀಸರೊಂದಿಗೆ ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಅವರು, ನಾನೇನು ಓಡಿ ಹೋಗುವುದಿಲ್ಲ. ಬಂದು ವಿಚಾರಣೆ ಮಾಡಿ. ಅದೃಷ್ಟ ಚೆನ್ನಾಗಿಲ್ಲ ನೀವು ನನ್ನನ್ನು ಹಿಡಿದುಕೊಂಡಿದ್ದೀರಿ, ಬಂಧಿಸ್ತೀನಿ ಅಂತ ಹೇಳ್ತೀರಿ. ಮೊದಲೇ ನನಗೆ ಹುಷಾರಿಲ್ಲ. ನನ್ನನ್ನು ಬಂಧಿಸಿ ಜಡ್ಜ್ ಮನೆಗೆ ಕರೆದುಕೊಂಡು ಹೋದರೂ ಜಾಮೀನು ಸಿಕ್ಕುತ್ತೆ. ಅನಾರೋಗ್ಯ ಕಾರಣದಿಂದ ಜಾಮೀನು ಕೊಡುತ್ತಾರೆ. ಸುಮ್ನೆ ಯಾಕೆ ರಿಸ್ಕ್ ತಗೆದುಕೊಳ್ಳುತ್ತಿದ್ದೀರಿ. ಕೊಲ್ಲೊದಕ್ಕೆ ಹೇಳಿರಬಹುದು ಕೊಂದಿಲ್ಲ ಅಲ್ವಾ? ಜಾಮೀನಿನ ಮೇಲೆ ವಿಚಾರಣೆ ಮಾಡಿ. ಸುಮ್ನೆ ಹಿಂಸೆ ತಗೋ ಬೇಡಿ. ನನ್ನ ಪಾಡಿಗೆ ನನ್ನ ಬಿಡಿ ಎಂದು ಅಧಿಕಾರಿಗಳಿಗೆ ಬುದ್ಧಿವಾದ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.  ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

     

     

  • ಸಿನಿಮಾಗೆ ಕರೆದುಕೊಂಡು ಹೋಗಿ ಥಿಯೇಟರ್‍ನಲ್ಲೇ ಯುವತಿ ಮೇಲೆ ಗ್ಯಾಂಗ್‍ರೇಪ್

    ಸಿನಿಮಾಗೆ ಕರೆದುಕೊಂಡು ಹೋಗಿ ಥಿಯೇಟರ್‍ನಲ್ಲೇ ಯುವತಿ ಮೇಲೆ ಗ್ಯಾಂಗ್‍ರೇಪ್

    ಲಕ್ನೋ: ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಂದರ್ಭದಲ್ಲಿಯೇ 16 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಮಿರತ್ ಜಿಲ್ಲೆಯಲ್ಲಿ ನಡೆದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಆರೋಪಿಯು ಸಂತ್ರಸ್ತೆಯ ಜೊತೆ ಫೋನ್ ಮೂಲಕ ಸ್ನೇಹ ಬೆಳೆಸಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ನಡೆದಿದ್ದೇನು?: ಮಂಗಳವಾರ ಸಂತ್ರಸ್ತೆಗೆ ಪರಿಚಿತನಾಗಿದ್ದ ಆರೋಪಿ ಶಾಪಿಂಗ್ ಮಾಡಿಸುವುದಾಗಿ ಹೇಳಿ ಮವಾನಾ ಬಳಿ ಯುವತಿಯನ್ನ ಕರೆಸಿಕೊಂಡಿದ್ದಾನೆ. ಶಾಪಿಂಗ್ ಮಾಡಿದ ನಂತರ ಸಿನಿಮಾ ನೋಡಲು ಥಿಯೇಟರ್‍ಗೆ ಕರೆದುಕೊಂಡು ಹೋಗಿದ್ದಾನೆ. ಇವನು ಹೋಗುವಷ್ಟರಲ್ಲಿ ಮತ್ತೊಬ್ಬ ಆರೋಪಿ ಚಿತ್ರಮಂದಿರಕ್ಕೆ ಬಂದಿದ್ದ. ಚಿತ್ರ ಪ್ರದರ್ಶನ ಆರಂಭವಾಗುತ್ತಿದ್ದಂತೆಯೇ ಯುವತಿಯನ್ನು ಬಾಲ್ಕನಿಗೆ ಕರೆದೊಯ್ದು ಅಲ್ಲಿ ಇಬ್ಬರೂ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಯುವತಿಯನ್ನು ಬೈಕ್‍ನಲ್ಲಿ ಮುಜಾಫರ್ ನಗರಕ್ಕೆ ಕರೆದೊಯ್ದು ಬಿಟ್ಟಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬೈಕ್ ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

     

  • ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತದೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅರೆಸ್ಟ್

    ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತದೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅರೆಸ್ಟ್

    ಹುಬ್ಬಳ್ಳಿ: ನಗರದ ಗಣೇಶ್ ಪೇಟೆ ಪಾಕಿಸ್ತಾನದ ಹಾಗೆ ಕಾಣುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಖೈರಾತಿಯನ್ನು ನಾಲ್ಕನೇ ಜೆಎಂಎಫ್‍ಸಿ ನ್ಯಾಯಾಧೀಶೆ ದೀಪ್ತಿ ನಾಡಗೌಡ ಅವರೆದುರು ಹಾಜರುಪಡಿಸಲಾಗಿದ್ದು, 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಮೌಲ್ವಿ ವಿರುದ್ಧ ಶಾಂತಿ ಭಂಗ ಮತ್ತು ಪ್ರಚೋದನಾತ್ಮಕ ಹೇಳಿಕೆ ಪ್ರಕರಣ ದಾಖಲಾಗಿತ್ತು.

    ಏನಿದು ಪ್ರಕರಣ?: ನಗರದ ಗಣೇಶ್ ಪೇಟೆಯಲ್ಲಿ ಶನಿವಾರ ನಡೆದ ಈದ್ ಮಿಲಾದ್ ಹಬ್ಬದ ವೇಳೆ ಗಣೇಶ ಪೇಟೆಯ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಎನ್ನುವ ಮೌಲ್ವಿ, ಗಣೇಶ ಪೇಟೆ ನನಗೆ ಪಾಕಿಸ್ತಾನದಂತೆ ಕಾಣುತ್ತದೆ. ಪಾಕಿಸ್ತಾನಕ್ಕೆ ಹೋಗುವ ಅವಶ್ಯಕತೆ ಇಲ್ಲ. ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ. ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಮೌಲ್ವಿಯ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಮೌಲ್ವಿ ಈ ರೀತಿ ಹೇಳಿಕೆ ನೀಡುವಾಗ ಅವರ ಪಕ್ಕದಲ್ಲೇ ಉತ್ತರ ವಲಯ ಎಸಿಪಿ ದಾವೂದ್ ಖಾನ್ ಹಾಗೂ ಪೊಲೀಸರು ಇದ್ದರು. ಪೊಲೀಸರ ಎದುರು ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಪೊಲೀಸರು ಸುಮ್ಮನೆ ಕುಳಿತುಕೊಂಡಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

  • ಪತ್ನಿಯ ಹತ್ಯೆಗೆ ಸುಪಾರಿ – ಕೊಲೆಗೂ ಮುನ್ನವೇ ಪೊಲೀಸ್ ಅತಿಥಿಯಾದ ಪತಿ, ಸುಪಾರಿ ಗ್ಯಾಂಗ್

    ಪತ್ನಿಯ ಹತ್ಯೆಗೆ ಸುಪಾರಿ – ಕೊಲೆಗೂ ಮುನ್ನವೇ ಪೊಲೀಸ್ ಅತಿಥಿಯಾದ ಪತಿ, ಸುಪಾರಿ ಗ್ಯಾಂಗ್

    ಬೆಂಗಳೂರು: ಪತ್ನಿಯನ್ನು ಕೊಲ್ಲಲು ಸುಪಾರಿ  ನೀಡಿದ ಪತಿ ಹಾಗೂ ಸುಪಾರಿ  ಹಂತಕರ ತಂಡವನ್ನು ವೈಯಾಲಿಕಾವಲ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

    ಪತಿ ನರೇಂದ್ರಬಾಬು ಹಾಗೂ ಸುಪಾರಿ ಗ್ಯಾಂಗ್ ನ ಸದಸ್ಯರಾದ ಚಿನ್ನಸ್ವಾಮಿ ಮತ್ತು ಅಭಿಲಾಷ್ ಬಂಧಿತ ಆರೋಪಿಗಳು. ನರೇಂದ್ರಬಾಬು ಎಂಬಾತ ತನ್ನ ಪತ್ನಿ ವಿನುತಾರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದ. ಇದರಂತೆ ಗುರುವಾರ ನಗರದ ವೈಯಾಲಿಕಾವಲ್ ನಲ್ಲಿ ವಿನುತಾರನ್ನು ಕೊಲೆ ಮಾಡಲು ಆಟೋದಲ್ಲಿ ಕಾದು ಕುಳಿತಿದ್ದ ವೇಳೆ ಸುಪಾರಿ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

    ಪತಿ ಹಾಗೂ ಪತ್ನಿಯ ನಡುವಿನ ಕೌಟುಂಬಿಕ ಕಲಹವೇ ಕೊಲೆ ಯತ್ನಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಕಳೆದ ಐದು ವರ್ಷಗಳಿಂದ ದಂಪತಿ ದೂರ ವಾಸಿಸುತ್ತಿದ್ದರು. ಆದರೆ ವಿನುತಾ ಪತಿಯ ಆಸ್ತಿಯಲ್ಲಿ ಪಾಲು ಬೇಕು ಎಂದು ಗಲಾಟೆ ಮಾಡಿದ್ದರು. ಇದೇ ವಿಚಾರಕ್ಕೆ ವೈಯಾಲಿಕಾವಲ್ ಪೊಲೀಸ್ ಸ್ಟೇಷನ್ ಅಲ್ಲಿ ಇಬ್ಬರ ಮೇಲೂ ಐದು ದೂರು ದಾಖಲಾಗಿದೆ.

    ಈ ನಡುವೆ ವಿನುತಾ ಕಳೆದ 6 ತಿಂಗಳ ಹಿಂದೆ ನರೇಂದ್ರಬಾಬು ಮನೆಯಲ್ಲಿ ಸೇರಿಕೊಂಡು ಆತನನ್ನು ಹೊರಹಾಕಿ ಆಸ್ತಿ ಲಪಟಾಯಿಸುವ ಪ್ಲಾನ್ ಮಾಡಿದ್ದರು. ಇದರಿಂದ ಆರೋಪಿ ನರೇಂದ್ರಬಾಬುವಿಗೆ ವಾಸಿಸಲು ಮನೆ ಇರಲಿಲ್ಲ. ಹೀಗಾಗಿ ನರೇಂದ್ರಬಾಬು 15 ಲಕ್ಷ ರೂ. ಗಳಿಗೆ ಪತ್ನಿಯ ಕೊಲೆ ಮಾಡಲು ಸುಪಾರಿ ನೀಡಿದ್ದ. ಅದರಂತೆ ಹಂತಕರಿಗೆ ಎರಡು ಲಕ್ಷ ರೂ. ಅಡ್ವಾನ್ಸ್ ಸಹ ನೀಡಿದ್ದ.

    ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿ ಸುಪಾರಿ ಹಂತಕರು ಮಾರಾಕಾಸ್ತ್ರಗಳೊಂದಿಗೆ ಹೊಂಚು ಹಾಕಿದ್ದರು. ಆದರೆ ಅಂದು ಕೊಲೆ ಸಾಧ್ಯವಾಗಿರಲಿಲ್ಲ. ಕೊಲೆ ಬಗ್ಗೆ ಮಾಹಿತಿ ಪಡೆದ ವೈಯಾಲಿಕಾವಲ್ ಪೊಲೀಸರು ತಕ್ಷಣವೇ ಎಚ್ಚೆತ್ತು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಪ್ರತಿ ದಿನ ಪತ್ನಿಗೆ ನೀನು ದಪ್ಪಗೆ ಇದ್ದೀಯ ಎಂದು ಪತಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸರಗೊಂಡಿದ್ದ ವಿನುತಾ ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನುವ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಪ್ರಸ್ತುತ ವೈಯಾಲಿಕಾವಲ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

  • ಲವ್ವರ್ ಜೊತೆ ಓಡಿ ಹೋಗಿದ್ದಕ್ಕೆ ಅಪ್ರಾಪ್ತೆಯ ಮೇಲೆ ತಂದೆ, ಅಣ್ಣ, ಕುಟುಂಬಸ್ಥರಿಂದ ಗ್ಯಾಂಗ್‍ರೇಪ್!

    ಲವ್ವರ್ ಜೊತೆ ಓಡಿ ಹೋಗಿದ್ದಕ್ಕೆ ಅಪ್ರಾಪ್ತೆಯ ಮೇಲೆ ತಂದೆ, ಅಣ್ಣ, ಕುಟುಂಬಸ್ಥರಿಂದ ಗ್ಯಾಂಗ್‍ರೇಪ್!

    ಲಕ್ನೋ: ಪ್ರೀತಿಸಿದ ಹುಡುಗನ ಜೊತೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ 17 ವರ್ಷದ ಹುಡುಗಿಯ ಮೇಲೆ ಕುಟುಂಬಸ್ಥರೇ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಫರ್ ನಗರದ ದಂಧೇಡಾ ಗ್ರಾಮದಲ್ಲಿ ನಡೆದಿದೆ.

    ನಾನು ಪ್ರಿಯಕರನ ಜೊತೆ ಓಡಿ ಹೋಗಿದ್ದಕ್ಕೆ ಕುಟುಂಬದವರೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ. ಈ ದೂರಿನ ಅನ್ವಯ ಆಕೆಯ ಅಪ್ಪ, ಅಣ್ಣ ಮತ್ತು ಇಬ್ಬರು ಚಿಕ್ಕಪ್ಪಂದಿರನ್ನು ಪೊಲೀಸರು ಬಂಧಿಸಿದ್ದಾರೆ.

     ಏನಿದು ಪ್ರಕರಣ?
    ಅದೇ ಗ್ರಾಮದ ಮೂರು ಮಕ್ಕಳ ತಂದೆಯಾಗಿರುವ, 32 ವರ್ಷದ ವ್ಯಕ್ತಿಯ ಜೊತೆ ಇದೇ ವರ್ಷದ ಜುಲೈ ಮತ್ತು ಅಕ್ಟೋಬರ್ ನಲ್ಲಿ ಎರಡು ಬಾರಿ ಯುವತಿ ಓಡಿ ಹೋಗಿದ್ದಳು. ಈ ವೇಳೆ ಪೋಷಕರು ತನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

    ಈ ದೂರಿನ ಆಧಾರದಲ್ಲಿ ಸಂತ್ರಸ್ತೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದರು. ಈ ಸಂದರ್ಭದಲ್ಲಿ ಸಂತ್ರಸ್ತೆ ನಾನೇ ಇಷ್ಟ ಪಟ್ಟು ಆತನ ಹಿಂದೆ ಓಡಿ ಹೋಗಿದ್ದೆ ಎಂದು ಹೇಳಿದ ಮೇಲೆ ಆತನನ್ನು ಬಿಟ್ಟು ಕಳುಹಿಸಿದ್ದರು.

    ಮನೆಯವರು ಎರಡನೇ ಬಾರಿ ಆರೋಪಿ ವ್ಯಕ್ತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದಾಗ, ಆಕೆ ಅಲಹಾಬಾದ್ ಹೈಕೋರ್ಟ್‍ಗೆ ನವೆಂಬರ್ 2 ರಂದು ಅರ್ಜಿ ಸಲ್ಲಿಸಿ ನರ್ಸಿಂಗ್ ಹೋಮ್ ಒಂದರಲ್ಲಿ ತನ್ನ ಮನೆಯವರೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಬಲವಂತದಿಂದ ಗರ್ಭಪಾತ ಮಾಡಿಸಲು ಮುಂದಾಗಿದ್ದರು ಎಂದು ತಿಳಿಸಿದ್ದಳು.

    ಈಗ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376ಡಿ ಮತ್ತು 313 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ಸಂತ್ರಸ್ತೆಯ ತಾಯಿ ಮತ್ತು ಅತ್ತಿಗೆ ಪ್ರತಿಕ್ರಿಯಿಸಿ, ತಮ್ಮ ಮನೆಯವರ ವಿರುದ್ಧ ಮಾಡಲಾಗಿರುವ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ.

     

  • ನ್ಯಾಯಾಧೀಶೆಯನ್ನೇ ಅಪಹರಣಗೈಯಲು ಯತ್ನಿಸಿದ ಕ್ಯಾಬ್ ಡ್ರೈವರ್!

    ನ್ಯಾಯಾಧೀಶೆಯನ್ನೇ ಅಪಹರಣಗೈಯಲು ಯತ್ನಿಸಿದ ಕ್ಯಾಬ್ ಡ್ರೈವರ್!

    ನವದೆಹಲಿ: ಮಹಿಳೆಯರ ಜೊತೆ ಕ್ಯಾಬ್ ಡ್ರೈವರ್ ಗಳು ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆಗಳನ್ನು ಕೇಳಿದ್ದೀರಿ. ಆದ್ರೆ ಇದೀಗ ಕ್ಯಾಬ್ ಡ್ರೈವರೊಬ್ಬ ನ್ಯಾಯಾಧೀಶೆಯನ್ನೇ ಅಪಹರಣ ಮಾಡಲು ಯತ್ನಿಸಿದ ಘಟನೆ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಸದ್ಯ ಕ್ಯಾಬ್ ಡ್ರೈವರ್ ನನ್ನು ಬಂಧಿಸಲಾಗಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಕರ್ಕರ್ ಡೂಮ ಕೋರ್ಟ್ ಗೆ ಕ್ಯಾಬ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಡ್ರೈವರ್ ಮಾರ್ಗ ಬದಲಿಸಿ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಹಪುರ್ ಕಡೆ ಕ್ಯಾಬ್ ಚಲಾಯಿಸಲು ಮುಂದಾದ. ಈ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೇ ನಾನು ನನ್ನ ಸಹೋದ್ಯೋಗಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ರವಾನಿಸಿದೆ ಅಂತ ನ್ಯಾಯಾಧೀಶೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ಮಹಿಳೆ ಎದುರೆ ಹಸ್ತಮೈಥುನ ಮಾಡಿಕೊಂಡ ಉಬರ್ ಕ್ಯಾಬ್ ಡ್ರೈವರ್ ಅರೆಸ್ಟ್

    ಸ್ವಲ್ಪ ಮುಂದಕ್ಕೆ ತನ್ನ ವಾಹನ ಚಲಾಯಿಸಿದ ಚಾಲಕ ಬಳಿಕ ದೆಹಲಿಯತ್ತ ಸಂಚರಿಸಲು ಯೂಟರ್ನ್ ತೆಗೆದುಕೊಂಡ. ಕೂಡಲೇ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಾಜಿಪುರ್ ಟೋಲ್ ಪಲಾಜಾದ ಬಳಿ ಕ್ಯಾಬ್ ಡ್ರೈರ್ ನನ್ನು ಬಂಧಿಸಿದ್ದಾರೆ.

    ಚಾಲಕ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • ವೈದ್ಯರಿಗೆ ಬ್ಲ್ಯಾಕ್ ಮೇಲ್: ಯುವತಿ ಸೇರಿ ಐವರ ಬಂಧನ

    ವೈದ್ಯರಿಗೆ ಬ್ಲ್ಯಾಕ್ ಮೇಲ್: ಯುವತಿ ಸೇರಿ ಐವರ ಬಂಧನ

    ಬೀದರ್: ನಾವು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ(ಎಮ್‍ಸಿಐ) ಇಂಟೆಲಿಜೆನ್ಸ್ ಆಫೀಸರ್ಸ್ ಎಂದು ಹೇಳಿ ವೈದ್ಯರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಸುನೀಲ್ (31), ಜೀನಿತ್ (25), ಪುನೀತ್ (25), ವೆಂಕಟೇಶ್ವರ ಪ್ರಿಯದರ್ಶಿನಿ (40), ಮಂಜುಳಾ (26) ಎಂದು ಗುರುತಿಸಲಾಗಿದೆ.

    ಬೆಂಗಳೂರಿನಿಂದ ಬಂದ ಐದು ಜನ ತಂಡ ಬೀದರ್‍ನ ಬಾವಗಿ ಆಸ್ಪತ್ರೆ ಹಾಗೂ ನವ ಜೀವನ ಆಸ್ಪತ್ರೆಯ ವೈದ್ಯರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದೇ ಸಹಕಾರ ಮಾಡದೆ ಇದ್ರೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಗೆ ನಿಮ್ಮ ವರದಿ ನೀಡುತ್ತೆವೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದರು.

    ಕೆಲವು ದಿನಗಳಿಂದ ಬೀದರ್ ನಲ್ಲೆ ಉಳಿದು, ವೈದ್ಯರ ಬಗ್ಗೆ ಗಮನಿಸಿ ಈ ತಂಡ ಕೃತ್ಯ ಎಸಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಬೀದರ್ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ನಕಲಿ ತಂಡ ಖೆಡ್ಡಾಗೆ ಬಿದ್ದಿದೆ.