Tag: arrest

  • ಪ್ರಿಯಕರ, ಸ್ನೇಹಿತರಿಂದ ಗ್ಯಾಂಗ್ ರೇಪ್ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಕಾಮುಕರ ಬಂಧನ

    ಪ್ರಿಯಕರ, ಸ್ನೇಹಿತರಿಂದ ಗ್ಯಾಂಗ್ ರೇಪ್ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಕಾಮುಕರ ಬಂಧನ

    ದಾವಣಗೆರೆ: ಪ್ರಿಯಕರನೊಬ್ಬ ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಇಬ್ಬರು ಕಾಮುಕರನ್ನು ಬಂಧಿಸುವಲ್ಲಿ ಚನ್ನಗಿರಿ ಠಾಣಾ ಪೊಲೀಸರು ಯಶ್ವಸಿಯಾಗಿದ್ದಾರೆ.

    ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳು ಗುಡ್ಡದಲ್ಲಿ ಕಳೆದ ಶುಕ್ರವಾರದಂದು ಈ ಘಟನೆ ನಡೆದಿತ್ತು. ಭದ್ರಾವತಿ ತಾಲೂಕಿನ ರಂಗಾಪುರ ಗ್ರಾಮದ ಪ್ರಿಯಕರ ರಮೇಶ್ ತನ್ನ ಸ್ನೇಹಿತರಾದ ಅರುಣ್ ಹಾಗೂ ವಿಜಯ್ ಜೊತೆಗೂಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಿಯಕರನ್ನು ಬಂಧಿಸಿದ್ದರು. ಆದರೆ ಅರುಣ್ ಮತ್ತು ವಿಜಯ್ ಪರಾರಿಯಾಗಿದ್ದರು.

    ಏನಿದು ಪ್ರಕರಣ?: ರಂಗಾಪುರ ಗ್ರಾಮದ ರಮೇಶ್ ಮತ್ತು ಅಪ್ರಾಪ್ತೆಯ ಪ್ರೀತಿ ಎರಡು ವರ್ಷದ ಹಿಂದೆ ಬ್ರೇಕ್ ಅಪ್ ಆಗಿತ್ತು. ರಮೇಶ್ ಪುನಃ ಪ್ರೀತಿಸುತ್ತೇನೆಂದು ಹೇಳಿ ಬಾಲಕಿಯನ್ನ ಜೂ.2 ರಂದು ಜೋಳದಾಳು ಅಮ್ಮನ ಗುಡ್ಡಕ್ಕೆ ಕರೆತಂದಿದ್ದ. ರಮೇಶ್ ಜೊತೆ ವಿಜಯ್, ಅರುಣ್ ಕೂಡ ಬಂದಿದ್ದು, ಮೂವರು ಸೇರಿ ಬಾಲಕಿಯನ್ನ ಹೆದರಿಸಿ ಅತ್ಯಾಚಾರ ಮಾಡಿದ್ದರು.

    ಮೂವರು ಕಾಮುಕರಿಂದ ತಪ್ಪಿಸಿಕೊಂಡು ಹೋದ ಬಾಲಕಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಳು. ಶಿವಮೊಗ್ಗ ಆಸ್ಪತ್ರೆಯವರು ಈ ಬಗ್ಗೆ ಅಲ್ಲಿನ ಎಸ್‍ಪಿಗೆ ಮಾಹಿತಿ ನೀಡಿದ್ದರು. ನಂತರ ಚನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇದೀಗ ಮೂವರು ಕಾಮುಕರನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

     

  • ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಒಂದು ವರ್ಷದ ಬಳಿಕ ನಾಲ್ವರು ಕಾಮುಕರು ಅರೆಸ್ಟ್

    ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಒಂದು ವರ್ಷದ ಬಳಿಕ ನಾಲ್ವರು ಕಾಮುಕರು ಅರೆಸ್ಟ್

    ಧಾರವಾಡ: ಅಪ್ರಾಪ್ತ ಬಾಲಕಿಯ ಮೇಲೆ ಸಮೂಹಿಕ ಅತ್ಯಾಚಾರ ಎಸಗಿ ತಲೆ ಮರೆಸಿಕೊಂಡಿದ್ದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಅಣ್ಣಪ್ಪ ಅಲಿಯಾಸ್ ವಿರೇಂದ್ರ ಶೇರಖಾನೆ(23), ಅಮೀತ್ (20), ಸುನಿಲ್ ಮಾದರ(23) ಹಾಗೂ ವಿನೋದ್ ಯಲ್ಲಾಪುರ (20) ಬಂಧಿತ ಆರೋಪಿಗಳು. ಈ ನಾಲ್ವರಲ್ಲಿ ಅಣ್ಣಪ್ಪ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ಹೇಳಿ ಅತ್ಯಾಚಾರ ಎಸಗಿದ್ದನು. ಅಪ್ಪಣ್ಣ ತನ್ನ ಮೂವರು ಸ್ನೇಹಿತರೊಂದಿಗೆ ಬಾಲಕಿಯನ್ನು ಹಳೆ ಹುಬ್ಬಳ್ಳಿಯ ಕೆಇಬಿ ಗ್ರಿಡ್ ನ ಪಾಳು ಕ್ವಾರ್ಟಸ್ ಗೆ ಕರೆದುಕೊಂಡು ಹೋಗಿ ನಿರಂತರ ಅತ್ಯಾಚಾರ ಮಾಡಿದ್ದರು.

    ಅತ್ಯಾಚಾರಕ್ಕೊಳಾಗದ ಬಾಲಕಿ ಮಗುವಿಗೂ ಸಹ ಜನ್ಮ ನೀಡಿದ್ದಳು. 2016ರ ಆರಂಭದಿಂದ ಕಾಮುಕರು ಅಪ್ರಾಪ್ತೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ. ಡಿಸೆಂಬರ್‍ನಲ್ಲಿ ಬಾಲಕಿ ಮಗುವಿಗೆ ಸಹ ಜನ್ಮ ನೀಡಿದ್ದಾಳೆ. ಆದರೆ ಪೋಷಕರು ಮರ್ಯಾದೆಗೆ ಹೆದರಿ ಸುಮ್ಮನಾಗಿದ್ರು. ಕೊನೆಗೆ ಅಪ್ರಾಪ್ತೆಯೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

    ದೂರು ದಾಖಲಾದ ನಂತರ ಆರೋಪಿಗಳು ನಾಪತ್ತೆಯಾಗಿದ್ದರು. ಕೊನೆಗೂ ಇಂದು ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ.

     

  • 600 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ಕಲಘಟಗಿ ಖಾಸ್ನಿಸ್ ಬ್ರದರ್ಸ್ ಬಂಧನ

    600 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ಕಲಘಟಗಿ ಖಾಸ್ನಿಸ್ ಬ್ರದರ್ಸ್ ಬಂಧನ

    ಧಾರವಾಡ: ಕೋಟಿ ಕೋಟಿ ಹಣ ವಂಚನೆ ಮಾಡಿ ಪರಾರಿಯಾಗಿದ್ದ ಖಾಸ್ನಿಸ್ ಸಹೋದರರು ಕೊನೆಗೂ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

    ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸತ್ಯಬೋಧ, ಸಂಜೀವ ಹಾಗೂ ಶ್ರೀಕಾಂತ ಸಹೋದರರು ಉತ್ತರ ಕರ್ನಾಟಕದ ಜನರಿಗೆ ಕೋಟ್ಯಾಂತರ ರೂ. ಹಣ ವಂಚನೆ ಮಾಡಿ ಕಳೆದ ಏಪ್ರಿಲ್ 10ರಂದು ಪರಾರಿಯಾಗಿದ್ರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡುತ್ತಿದ್ದಂತೆಯೇ ಸರ್ಕಾರ ಪ್ರಕರಣವನ್ನ ಸಿಐಡಿಗೆ ಒಪ್ಪಿಸಿತು. ಸಿಐಡಿ ಎಸ್‍ಪಿ ಸಿದ್ದರಾಮಯ್ಯ ನೇತೃತ್ವದ ತಂಡ ಈ ವಂಚರಕನ್ನು ಬಂಧಿಸಿದ್ದು, ಇಂದು ಧಾರವಾಡ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

    ಹರ್ಷಾ ಎಂಬ ಕಂಪನಿ ತೆರೆದು 1 ಲಕ್ಷಕ್ಕೆ 7 ಸಾವಿರ ರೂಪಾಯಿ ಬಡ್ಡಿ ನೀಡುವದಾಗಿ ಜನರನ್ನ ನಂಬಿಸಿ 600 ಕೋಟಿಗೂ ಹೆಚ್ಚು ಹಣ ವಂಚಿಸಿ ಪರಾರಿಯಾಗಿದ್ರು. ಇನ್ನು ಸಿಐಡಿ ಅಧಿಕಾರಿಗಳ ತಂಡ ರಾತ್ರಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲಿಸಿದೆ ಎಂದು ತಿಳಿದುಬಂದಿದೆ.

  • 9ನೇ ಕ್ಲಾಸ್ ವಿದ್ಯಾರ್ಥಿ ಶಶಾಂಕ್ ಕೊಲೆ: ಬೆಟ್ಟಿಂಗ್ ಹಣಕ್ಕಾಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

    9ನೇ ಕ್ಲಾಸ್ ವಿದ್ಯಾರ್ಥಿ ಶಶಾಂಕ್ ಕೊಲೆ: ಬೆಟ್ಟಿಂಗ್ ಹಣಕ್ಕಾಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

    ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿ ಶಶಾಂಕ್ ಕೊಲೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಬೆಟ್ಟಿಂಗ್ ದಂಧೆಕೋರನ ಅಟ್ಟಹಾಸಕ್ಕೆ ಅಮಾಯಕ ಬಾಲಕ ಕೊಲೆಯಾಗಿರುವ ಭೀಕರ ಸತ್ಯ ಬಯಲಾಗಿದೆ.

    ಶಶಾಂಕ್‍ನನ್ನು ಕೊಲೆ ಮಾಡಿದ್ದ ಡಿಪ್ಲೊಮಾ ವಿದ್ಯಾರ್ಥಿ, 18 ವರ್ಷದ ದೀಕ್ಷಿತ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸುಜಾತ ಮತ್ತು ಲೋಕೆಶ್ ದಂಪತಿಯ ಪುತ್ರನಾದ ಶಶಾಂಕ್ ತೇಗನಹಳ್ಳಿಯ ಆಶೀರ್ವಾದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂಟನೇ ತರಗತಿ ಪಾಸಾಗಿ ಒಂಬತ್ತನೇ ತರಗತಿಗೆ ಕಾಲಿಟ್ಟಿದ್ದ. ಆದ್ರೆ ಶಶಾಂಕ್ ಇದ್ದಕ್ಕಿದ್ದಂತೆ ಮೇ 16 ರಂದು ಮನೆಯಿಂದ ನಾಪತ್ತೆಯಾಗಿದ್ದ. ನಂತರ ಶಶಾಂಕ್ ಶವವಾಗಿ ಪತ್ತೆಯಾಗಿದ್ದ.

    ಅಂದು ನಡೆದಿದ್ದೇನು?: ಮೇ 15ರಂದು ಶಶಾಂಕ್ ಮನೆಯಿಂದ ಕಾಣೆಯಗಿದ್ದ. ದೀಕ್ಷಿತ್‍ಗೆ ವಿಪರೀತ ಕ್ರಿಕೆಟ್ ಬೆಟ್ಟಿಂಗ್ ಚಟವಿದ್ದು, ಬೆಟ್ಟಿಂಗ್‍ನಲ್ಲಿ ಸೋತು ಏಳು ಸಾವಿರ ಹಣ ಕೊಡಲಾಗದೇ ಸಂಕಟಕ್ಕೆ ಸಿಲುಕಿದ್ದ. ಹೀಗಾಗಿ ಬೆಟ್ಟಿಂಗ್‍ನಲ್ಲಿ ಸೋತ ಹಣ ತೀರಿಸಲು ಶಶಾಂಕ್ ಮನೆಗೆ ಕಳ್ಳತನಕ್ಕೆ ದೀಕ್ಷಿತ್ ಬಂದಿದ್ದ. ಶಶಾಂಕ್ ಗೆ ಈ ಮೊದಲೇ ದೀಕ್ಷಿತ್‍ನ ಪರಿಚಯವಿದ್ದುದ್ದರಿಂದ ಆತನನ್ನು ಗುರುತಿಸಿದ್ದ. ಆಗ ದೀಕ್ಷಿತ್ ಶಶಾಂಕ್‍ನನ್ನು ಉಪಾಯವಾಗಿ ಮನೆಯಿಂದ ಸ್ವಲ್ಪ ದೂರ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಶಶಾಂಕ್ ಕೊರಳಲ್ಲಿದ್ದ ಬೆಳ್ಳಿಯ ಸರ ಕಿತ್ತುಕೊಂಡು ನಂತರ ಶಶಾಂಕ್ ಬಳಿಯಿದ್ದ ಮನೆಯ ಬೀಗದ ಕೀ ತೆಗೆದುಕೊಂಡು ಬಂದು ಮನೆಯಲ್ಲಿದ್ದ ಬೆಳ್ಳಿ ವಸ್ತು ಮತ್ತು ಕೆಲವೊಂದು ಉಮಾಗೋಲ್ಡ್ ಆಭರಣಗಳನ್ನ ಕದ್ದು ಮಾರಾಟ ಮಾಡಿ ಏನೂ ತಿಳಿಯದಂತೆ ಇದ್ದ ಎಂದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

    ತಮ್ಮ ಮುದ್ದಿನ ಮಗ ಕಾಣದೇ ಇದ್ದಾಗ ಪೋಷಕರು ಶಶಾಂಕ್ ಮೊಬೈಲ್‍ಗೆ ಕರೆ ಮಾಡಿದ್ರು. ಆದ್ರೆ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಇದ್ರಿಂದ ಹೆದರಿದ ತಂದೆ ತಾಯಿ ತಮ್ಮ ಸಂಬಂಧಿಕರಿಗೆಲ್ಲ ವಿಷಯ ತಿಳಿಸಿ ಶಶಾಂಕ್‍ಗಾಗಿ ಇಡೀ ಪಟ್ಟಣವನ್ನೆಲ್ಲ ಹುಡುಕಾಟ ನಡೆಸಿದ್ರು. ಆದ್ರೆ ಶಶಾಂಕ್ ಮಾತ್ರ ಎಲ್ಲಿಯೂ ಪತ್ತೆಯಾಗಿರಲಿಲ್ಲ. ನಂತರ ಮೇ 17 ರಂದು ಶಶಾಂಕ್ ತನ್ನ ಮನೆಯ ಕೂಗಳತೆ ದೂರದಲ್ಲಿ ಹೆಣವಾಗಿ ಸಿಕ್ಕಿದ್ದ.

    ಶಶಾಂಕ್ ತಲೆ, ಮೈ, ಕೈಗೆಲ್ಲ ಹಲ್ಲೆ ನಡೆಸಲಾಗಿತ್ತು. ಆ ನಂತ್ರ ಆತನ ಮರ್ಮಾಂಗಕ್ಕೆ ಹೊಡೆದು ಕತ್ತು ಬಿಗಿದು ಬರ್ಬರವಾಗಿ ಕೊಲೆ ಮಾಡಿದ್ರು. ಕೊನೆಗೆ ಅಲ್ಲೇ ಇದ್ದ ಚಿಕ್ಕ ಮರವನ್ನು ಕತ್ತರಿಸಿ ಶಶಾಂಕ್ ಮೃತದೇಹ ಯಾರಿಗೂ ಕಾಣದಂತೆ ಮುಚ್ಚಿ ಪರಾರಿಯಾಗಿದ್ರು. ಬೆಳಗ್ಗೆ ಸಾರ್ವಜನಿಕರು ವಾಕಿಂಗ್ ಹೋದಾಗ ಶಶಾಂಕ್ ಹತ್ಯೆಯಾಗಿರುವುದು ಬೆಳಕಿಗೆ ಬಂದಿತ್ತು.

    ಪೊಲೀಸರು ಬೀಸಿದ ಬಲೆಗೆ ಇದೀಗ ಆರೋಪಿ ದೀಕ್ಷಿತ್ ಅಂದರ್ ಆಗಿದ್ದು, ಕ್ರಿಕೆಟ್ ಬೆಟ್ಟಿಂಗ್ ಕೋರನ ಕೃತ್ಯಕ್ಕೆ ಅಮಾಯಕ ಬಾಲಕ ಬಲಿಯಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ.

     

  • ಜನ್ಮದಿನಾಂಕ, ಹೆಸರು ಒಂದೇ: ಸೌದಿಯಲ್ಲಿ ತುಮಕೂರಿನ ಯುವಕ ಅರೆಸ್ಟ್!

    ಜನ್ಮದಿನಾಂಕ, ಹೆಸರು ಒಂದೇ: ಸೌದಿಯಲ್ಲಿ ತುಮಕೂರಿನ ಯುವಕ ಅರೆಸ್ಟ್!

    ತುಮಕೂರು: ಒಂದೇ ಹೆಸರು, ಒಂದೇ ಜನ್ಮ ದಿನಾಂಕದಿಂದಾಗಿ ಕರ್ನಾಟಕದ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ಕಾನೂನು ಜಂಜಾಟದಲ್ಲಿ ಸಿಲುಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಸುಬ್ರಹ್ಮಣ್ಯ ನಿವಾಸಿ ನಯಾಜ್ ಅಹಮದ್ ಸೌದಿಯಲ್ಲಿ ಬಂಧಿಯಾಗಿದ್ದಾರೆ.

    ನಯಾಜ್ ಹೆಸರಿನ ಬೆಂಗಳೂರು ಮೂಲದವನು ಎನ್ನಲಾದ ಯುವಕನೋರ್ವ ಸೌದಿಯಲ್ಲಿ ಅಪರಾಧವೆಸಗಿ ಪರಾರಿಯಾಗಿದ್ದು ತುರುವೇಕೆರೆ ಮತ್ತು ಬೆಂಗಳೂರು ಯುವಕರಿಬ್ಬರ ಹೆಸರು, ಹುಟ್ಟಿದ ದಿನಾಂಕ ಪಾಸ್ ಪೋರ್ಟ್ ನೊಂದಣಿ ಎಲ್ಲವೂ ಹೊಂದಾಣಿಕೆ ಆಗಿದೆ. ಹಾಗಾಗಿ ತುರುವೇಕೆರೆ ಮೂಲದ ನಯಾಜ್‍ನನ್ನು ಸೌದಿ ಪೊಲೀಸರು ವಿಚಾರಣೆಗಾಗಿ ಬಂಧಿಸಿದ್ದಾರೆ.

    ಕಳೆದ ಏಪ್ರಿಲ್ 20ರಂದು ನಯಾಜ್ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ಏರ್ ಪೋರ್ಟ್ ತನಿಖಾಧಿಕಾರಿಗಳು ಕೆಲವೊಂದು ಮಾಹಿತಿ ಬೇಕು ಅಂತಾ ಹೇಳಿ ಬಂಧಿಸಿದ್ದಾರೆ. ಆದ್ರೆ ಒಂದು ತಿಂಗಳು ಕಳೆದರೂ ಇನ್ನೂ ಬಿಡುಗಡೆ ಮಾಡಿಲ್ಲ ಅಂತಾ ನಗರದ ಮೌಲಿಯೊಬ್ಬರು ಪತ್ರಿಕಾಗೋಷ್ಟಿ ನಡೆಸಿ ತಮ್ಮ ನೋವನ್ನು ಅಲವತ್ತುಕೊಂಡಿದ್ದಾರೆ.

  • ಬೈಕ್‍ನಲ್ಲಿ ಬಂದು ಯುವತಿಯರ ಹಿಂಭಾಗಕ್ಕೆ ಹೊಡೆದು ಪರಾರಿಯಾಗ್ತಿದ್ದ ಕಾಮುಕ ಟೆಕ್ಕಿ ಅರೆಸ್ಟ್!

    ಬೈಕ್‍ನಲ್ಲಿ ಬಂದು ಯುವತಿಯರ ಹಿಂಭಾಗಕ್ಕೆ ಹೊಡೆದು ಪರಾರಿಯಾಗ್ತಿದ್ದ ಕಾಮುಕ ಟೆಕ್ಕಿ ಅರೆಸ್ಟ್!

    ಬೆಂಗಳೂರು: ರಸ್ತೆಯಲ್ಲಿ ನಿಂತಿರುವ ಯುವತಿಯರ ಹಿಂಭಾಗಕ್ಕೆ ಹೊಡೆದು ಪರಾರಿಯಾಗುತ್ತಿದ್ದ ಕಾಮುಕನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ನಗರದ ಶ್ರೀಗಂಧಕಾವಲು ನಿವಾಸಿ ವಿನೀತ್ ಬಂಧಿತ ಆರೋಪಿ. ವಿನೀತ್ ಬೈಕ್ ನಲ್ಲಿ ವೇಗವಾಗಿ ಬಂದು ರಸ್ತೆಯ ಪಕ್ಕ ನಿಂತಿರುವ ಹುಡುಗಿಯರನ್ನು ಹಿಂಬದಿಯಿಂದ ಮುಟ್ಟಿ ಪರಾರಿಯಾಗುತ್ತಿದ್ದ. ವಿನೀತ್ ಬಿಇ ಮುಗಿಸಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾನೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿಯ ಹಿಂಭಾಗಕ್ಕೆ ಹೊಡೆದು ಫ್ಲೈಯಿಂಗ್ ಕಿಸ್ ಕೊಟ್ಟ ಕಾಮುಕ! 

    ಏಪ್ರಿಲ್ 10 ರಂದು ನಾಗರಭಾವಿ ಸರ್ಕಲ್ ಬಳಿ ಯುವತಿಯೊಬ್ಬರು ಊಟದ ಪಾರ್ಸೆಲ್‍ಗಾಗಿ ಕಾಯುತ್ತಾ ರಸ್ತೆಯ ಬದಿ ನಿಂತಿದ್ರು. ಈ ವೇಳೆ ಬೈಕ್‍ನಲ್ಲಿ ಬಂದ ವಿನೀತ್ ಯುವತಿಯ ಹಿಂಭಾಗ ಮುಟ್ಟಿ ಪರಾರಿಯಾಗಿದ್ದ. ಇದ್ರಿಂದ ಭಯಭೀತಳಾದ ಯುವತಿ ಪ್ರಾಂಶುಪಾಲರ ಜೊತೆ ಬಂದು ಮೇ 3ರಂದು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಇದನ್ನೂ ಓದಿ: 6 ವರ್ಷದ ಮಗುವನ್ನು ಅತ್ಯಾಚಾರವೆಸಗಿ ಕೊಂದು, ಮನೆಯಲ್ಲೇ ಮೃತದೇಹ ಬಚ್ಚಿಟ್ಟಿದ್ದ ಕಾಮುಕ 

    ಡ್ಯೂಟಿ ಬಳಿಕ ಹುಡುಗಿಯರನ್ನ ಚೇಡಿಸುತ್ತಿದ್ದ: ಖಾಸಗಿ ಕಂಪನಿಯೊಂದರಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ವಿನೀತ್ ತನ್ನ ಕೆಲಸ ಮುಗಿದ ಮೇಲೆ ರಸ್ತೆಯಲ್ಲಿ ಹೋಗುವ ಯುವತಿಯರನ್ನು ಚುಡಾಯಿಸುತ್ತಿದ್ದ ಹಾಗು ಜನಸಂದಂಣಿಯಿರುವ ಬಸ್‍ಗಳಲ್ಲಿ ಹತ್ತಿ ತನ್ನ ಲೈಂಗಿಕ ಆಸಕ್ತಿಯನ್ನು ತೃಪ್ತಿಪಡಿಸಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ.

    ಮೇ 3ರಂದು ದಾಖಲಾದ ದೂರಿನ್ವಯ ಚಂದ್ರಾಲೇಔಟ್ ಪೊಲೀಸರು ನಾಗರಭಾವಿ ಬಳಿಯ ಸಿಸಿಟಿವಿ ಪರಿಶೀಲನೆ ನಡೆಸಿ, ಕಾಮುಕ ವಿನೀತ್‍ನನ್ನು ಬಂಧಿಸಿದ್ದಾರೆ. ವಿನೀತ್ ವಿರುದ್ಧ ಐಪಿಸಿ ಸೆಕ್ಷನ್ 354, ಲೈಂಗಿಕ ಕಿರಿಕುಳ ಆರೊಪದಡಿ ದೂರು ದಾಖಲಿಸಿ ನ್ಯಾಯಂಗ ಬಂಧನದಲ್ಲಿ ಇರಿಸಲಾಗಿದೆ.

    ಇದನ್ನೂ ಓದಿ: ಹೆಂಡತಿಗೆ ವಯಾಗ್ರ ಮಾತ್ರೆ ತಿನ್ನಿಸಿ ಪೀಡಿಸ್ತಿದ್ನಂತೆ ಕಾಮುಕ ಪತಿ

    ಇದನ್ನೂ ಓದಿ:  ನನ್ನ ಗಂಡನಿಗೆ ಪುರುಷತ್ವ ಇಲ್ಲ ಎಂದು ಪೊಲೀಸರಿಗೆ ಪತ್ನಿ ದೂರು 

     

  • ನಟ ಸಾಧು ಕೋಕಿಲ ಕಾರು ಚಾಲಕನ ಬಂಧನ

    ನಟ ಸಾಧು ಕೋಕಿಲ ಕಾರು ಚಾಲಕನ ಬಂಧನ

    ಬೆಂಗಳೂರು: ನಟ ಸಾಧುಕೋಕಿಲ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

    ವಿಜಯ್ ಕುಮಾರ್ ಅಲಿಯಾಸ್ ಗಜ ಬಂಧಿತ ಆರೋಪಿ. ಈತ ಸಾಧು ಕೋಕಿಲ ಅವರ ಕಾರಿನಲ್ಲಿದ್ದ ಲ್ಯಾಪ್ ಟಾಪ್, 3 ಸಾವಿರ ವಿದೇಶಿ ಕರೆನ್ಸಿ ಹಾಗು ಮೊಬೈಲ್ ಕಳ್ಳತನ ಮಾಡಿದ್ದ. ಏಪ್ರಿಲ್ 24 ರಂದು ಕಳ್ಳತನ ನಡೆದಿತ್ತು. ಈ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಇದೀಗ ಇನ್ಸ್ ಪೆಕ್ಟರ್ ವಿರೇಂದ್ರ ಪ್ರಸಾದ್ ತಂಡದಿಂದ ಆರೋಪಿಯ ಬಂಧನವಾಗಿದೆ.

    ಇದನ್ನೂ ಓದಿ: ಲಂಡನ್ ಲಾಡ್ರ್ಸ್ ಮೈದಾನದಲ್ಲಿ ಕಿಚ್ಚನ ಕಲರವ – ಕಾರ್ಪೊರೇಟ್ ಕ್ರಿಕೆಟ್ ಡೇ ಟೂರ್ನಿಯಲ್ಲಿ ವಿಜಯಪತಾಕೆ

     

  • ಅಕ್ರಮವಾಗಿ ವಲಸೆ ಬಂದ ಬಾಂಗ್ಲಾ ಪ್ರಜೆಗಳಿಗೂ ಸಿಗುತ್ತೆ ಆಧಾರ್ ಕಾರ್ಡ್, 2200 ರೂ. ಕೊಟ್ರೆ ಪಾಸ್‍ಪೋರ್ಟ್

    ಅಕ್ರಮವಾಗಿ ವಲಸೆ ಬಂದ ಬಾಂಗ್ಲಾ ಪ್ರಜೆಗಳಿಗೂ ಸಿಗುತ್ತೆ ಆಧಾರ್ ಕಾರ್ಡ್, 2200 ರೂ. ಕೊಟ್ರೆ ಪಾಸ್‍ಪೋರ್ಟ್

    ಬೆಳಗಾವಿ: ಆಧಾರ್ ಕಾರ್ಡ್, ಪಾಸ್‍ಪೋರ್ಟ್, ವೋಟರ್ ಐಡಿ ಇವೆಲ್ಲ ನಮ್ಮ ಅಧಿಕೃತ ಗುರುತಿನ ದಾಖಲೆಗಳು. ನಾವು ಭಾರತೀಯರು ಅನ್ನೋದನ್ನು ಖಾತ್ರಿಪಡಿಸುವುದಕ್ಕೆ ಇರೋ ದಾಖಲೆಗಳು. ಆದ್ರೆ ಗಡಿ ನಾಡು ಬೆಳಗಾವಿಯಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ವಲಸೆ ಬಂದಿರುವ ಮಂದಿಗೆಲ್ಲಾ ಆಧಾರ್ ಕಾರ್ಡ್, ಪಾಸ್‍ಪೋರ್ಟ್, ವೋಟರ್ ಐಡಿ ಮಾಡಿಸಿಕೊಡುವ ದಂಧೆ ನಡೆಯುತ್ತಿದೆ.

    ಅದ್ರಲ್ಲೂ ಪಾಸ್‍ಪೋರ್ಟ್ ಪಡೆಯುವುದು ಇನ್ನೂ ಸುಲಭ. ಕೇವಲ 2200 ರೂಪಾಯಿ ಖರ್ಚು ಮಾಡಿದ್ರೆ ಸಾಕು ವಿದೇಶಿಯರಿಗೆ ನಮ್ಮ ದೇಶದ ಪಾಸ್ ಪೋರ್ಟ್ ಸಿಗುತ್ತೆ. ಇಂತಹದ್ದೊಂದು ದೊಡ್ಡ ದಂದೆ ಬೆಳಗಾವಿಯಲ್ಲಿ ತಲೆ ಎತ್ತಿದೆ. ಸ್ವತಃ ಪಾಸ್‍ಪೋರ್ಟ್ ಪಡೆದ ಬಾಂಗ್ಲಾದೇಶದ ಪ್ರಜೆಯೇ ಈ ಭಯಾನಕ ಸತ್ಯವನ್ನ ಬಾಯಿಬಿಟ್ಟಿದ್ದಾನೆ.

    ಕೆಲ ದಿನಗಳ ಹಿಂದೆಯಷ್ಟೇ ಪೊಲೀಸರು ನಕಲಿ ಪಾಸ್‍ಪೋರ್ಟ್ ಮೂಲಕ ಪುಣೆಯ ಮಾರ್ಗವಾಗಿ ದುಬೈಗೆ ಹಾರಲು ಯತ್ನಿಸಿದ್ದ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದರು. ಅಂಜುಬೇಗಂ (37), ಹಫೀಜುಲ್ಲಾ ಇಸ್ಲಾಂ(20), ಅಕೀಬ (20), ಅನ್ನನ್ ಸದ್ದಾರ್ (21), ರೋಹನ್ ಸೆಕ್ (21), ಅಬ್ದುಲ್ ಹಾಯ್ ನಿಹಾರ ಅಲಿ ಗಾಜಿ (60), ಮೊಹಮ್ಮದ್ ಅಲಮಿನ್ ಶೌಪಿ ಉದ್ದಿನ್ ಬೇಪಾರಿ (26) ಸೇರಿದಂತೆ 11 ಆರೋಪಿಗಳನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳ ಮಾಹಿತಿ ಜಾಡು ಹಿಡಿದ ಬೆಳಗಾವಿ ಪೊಲೀಸರು, ನಗರದಲ್ಲಿ ನಡೆಯುತ್ತಿರುವ ನಕಲಿ ದಾಖಲಾತಿಯ ಮಾಫಿಯ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

    ಸ್ವತಃ ಹಬಿಬುಲ್ ಶೇಖ್ ಅನ್ನೋ ಬಾಂಗ್ಲಾದೇಶಿ ಪ್ರಜೆ ಅಕ್ರಮವಾಗಿ ಪಾಸ್‍ಪೋರ್ಟ್ ಪಡೆದು ಆರೇಳು ವರ್ಷಗಳಿಂದ ಬೆಳಗಾವಿಯಲ್ಲಿ ವಾಸಿಸುತ್ತಿರುವ ಬಗ್ಗೆ ಪಬ್ಲಿಕ್ ಟಿವಿ ಕ್ಯಾಮೆರಾ ಮುಂದೆ ಬಾಯ್ಬಿಟ್ಟಿದ್ದಾನೆ. ಈ ಪ್ರಕರಣ ಸಂಪೂರ್ಣ ತನಿಖೆಯಾದರೆ ಇನ್ನಷ್ಟು ಜನ ಬಾಂಗ್ಲಾದೇಶದ ನುಸುಳುಕೊರರು ಬಂಧಿತರಾಗಲಿದ್ದಾರೆ.

    https://www.youtube.com/watch?v=x_uURstQ6uk

     

  • ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

    ಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ?

    ಬಳ್ಳಾರಿ: ಬಾಹುಬಲಿ ಚಿತ್ರದ ಟಿಕೆಟ್ಟಿಗೆ ಇದೀಗ ಎಲ್ಲೆಡೆ ಭಾರೀ ಬೇಡಿಕೆಯಿದೆ. ಸಾವಿರಾರು ರೂಪಾಯಿ ಕೊಟ್ಟಾದ್ರೂ ಸರಿ ಚಿತ್ರ ನೋಡಬೇಕು ಅಂತಾ ಪೇಕ್ಷಕರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಆದ್ರೆ ಈ ಹಿಂದೆ ಬಿಡುಗಡೆಯಾಗಿ ಭಾರೀ ಯಶಸ್ವಿ ಕಂಡ ಅಲ್ಲು ಅರ್ಜುನ್ ನಟನೆಯ `ಸರೈನೋಡು’ ತೆಲುಗು ಟಿಕೆಟ್ ನೀಡದ್ದಕ್ಕೆ ಚಿತ್ರಮಂದಿರ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಆರೋಪಿಗಳು 5 ತಿಂಗಳ ಬಳಿಕ ಅರೆಸ್ಟ್ ಆಗಿದ್ದಾರೆ.

    ಬಳ್ಳಾರಿಯಲ್ಲಿ ತೆಲುಗು ಚಿತ್ರಗಳು ಬಿಡುಗಡೆಯಾದ್ರೆ ಮಧ್ಯರಾತ್ರಿಯೇ ತೆರೆ ಕಾಣುತ್ತವೆ. ಮಧ್ಯರಾತ್ರಿಯೇ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಮುಗಿಬಿಳೋದು ಮಾಮೂಲಾಗಿದೆ. ಆದ್ರೆ ಕೇಳಿದಷ್ಟು ಟಿಕೆಟ್ ನೀಡಲಿಲ್ಲ ಅನ್ನೋ ಕಾರಣಕ್ಕೆ ಚಿತ್ರಮಂದಿರದ ಸಿಬ್ಬಂದಿಯನ್ನು ಕೊಲೆ ಮಾಡಿರುವುದು ಇದೀಗ ಬಯಲಾಗಿದೆ.

    ಏನಿದು ಪ್ರಕರಣ?
    ಕಳೆದ ನವಂಬರ್ 1 ರಂದು ಬಳ್ಳಾರಿಯ ರಾಘವೇಂದ್ರ ಚಿತ್ರಮಂದಿರದ ಸೆಕ್ಯೂರಿಟಿ ಗಾರ್ಡ್ ವಂಕಟೇಶನನ್ನು ಕೆಲ ದುಷ್ಕಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಅಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಬಳ್ಳಾರಿಯ ಬ್ರೂಸಪೇಟೆ ಪೊಲೀಸರು, ಇದೊಂದು ಹಣಕಾಸಿನ ವ್ಯವಹಾರಕ್ಕೆ ಕೊಲೆ ನಡೆದಿರಬಹುದೆಂದು ತನಿಖೆ ಮುಂದುವರೆಸಿದ್ದರು. ಇದೀಗ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಅವರ ಹೇಳಿಕೆ ಕಂಡು ಇದೀಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. `ಸೈರನೋಡು’ ಚಿತ್ರದ ಟಿಕೆಟ್ ನೀಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್ ಕೊಲೆ ಮಾಡಿರುವುದು ಇದೀಗ ಬಯಲಾಗಿದೆ.

    ಅಲ್ಲು ಅರ್ಜುನ್ ನಟನೆಯ `ಸರೈನೋಡು’ ಎಂಬ ತೆಲುಗು ಚಿತ್ರ ಕಳೆದ ವರ್ಷ ಏಪ್ರಿಲ್ 22 ತಿಂಗಳಲ್ಲಿ ನಗರದ ರಾಘವೇಂದ್ರ ಟಾಕೀಸ್‍ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾ ನೋಡಲು ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ ಆಟೋಚಾಲಕರಾದ ಮೌನೇಶ್ ಅಲಿಯಾಸ್ ಮಡಿಕೆ ಮೇಳಿ (21), ನಾಗೇಶ್ (23) ಮತ್ತೊಬ್ಬ ಸ್ನೇಹಿತನ ಜೊತೆ ಆಗಮಿಸಿದ್ದರು.

    ಜನಸಂದಣಿ ಹೆಚ್ಚಾಗಿದ್ದರಿಂದ 3 ಟಿಕೆಟ್ ನೀಡುವಂತೆ ಟಾಕೀಸ್ ಸೆಕ್ಯೂರಿಟಿ ಗಾರ್ಡ್ ವೆಂಕಟೇಶ್‍ಗೆ ಹೆಚ್ಚಿನ ಹಣ ನೀಡಿದ್ದರು. ಆದರೆ ಸೆಕ್ಯೂರಿಟಿ ಗಾರ್ಡ್ ಎರಡೇ ಟಿಕೆಟ್ ನೀಡಿ ಸರಿಮಾಡಿಕೊಳ್ಳಿ ಎಂದಿದ್ದ. ಇದರಿಂದ ರೊಚ್ಚಿಗೆದ್ದ ಈ ಮೂವರು 6 ತಿಂಗಳ ಬಳಿಕ ಅಂದ್ರೆ ನವೆಂಬರ್ 20ಕ್ಕೆ ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು.

    ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
    ಸೋಮವಾರ ಬಳ್ಳಾರಿ ನಗರದ ಹೊರ ವಲಯದ ಗುಗ್ಗರಟ್ಟಿ ಪ್ರದೇಶದ ಹೊನ್ನಳ್ಳಿ ರಸ್ತೆಯಲ್ಲಿ ಎರಡು ಬೈಕ್‍ನಲ್ಲಿ ಬರುತ್ತಿದ್ದ ಈ ಮೂವರು ಗ್ರಾಮೀಣ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಪರಾರಿಯಾಗಲು ಮುಂದಾಗಿದ್ದರು. ಕೂಡಲೇ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವಾಚ್‍ಮ್ಯಾನ್ ವೆಂಕಟೇಶ್ ಕೊಲೆ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ.

    ಕಳೆದ ಮಾರ್ಚ್‍ನಲ್ಲಿ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು ಮಾಡಿದ್ದ ಇವರು 98 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಅಷ್ಟೇ ಅಲ್ಲದೇ ದಮ್ಮೂರು ಹಾಗು ಕಂಪ್ಲಿಯಲ್ಲಿ ಎರಡು ಬೈಕ್ ಕಳ್ಳತನ ಮಾಡಿದ ಪ್ರಕರಣಗಳನ್ನು ಒಪ್ಪಿಕೊಂಡಿದ್ದಾರೆಂದು ಎಎಸ್‍ಪಿ ಆರ್ ಚೇತನ್ ತಿಳಿಸಿದ್ದಾರೆ.

    ಆಟೋ ಚಾಲಕರಾಗಿರುವ ಈ ಆರೋಪಿಗಳು ಅನೇಕ ಸಣ್ಣಪುಟ್ಟ ಕಳ್ಳತನ ಪ್ರಕರಣಗಳನ್ನು ಮಾಡಿದ್ದಾರೆಂದು ತಿಳಿದುಬಂದಿದೆ. ಬಂಧಿತರನ್ನು ಇನ್ನಷ್ಟು ವಿಚಾರಣೆ ಮಾಡಲಾಗುವುದು ಎಂದು ಎಸ್‍ಪಿ ಹೇಳೀದ್ದಾರೆ. ಗ್ರಾಮೀಣ ಡಿವೈಎಸ್‍ಪಿ ಸುರೇಶ್, ಸಿಪಿಐ ಪ್ರಸಾದ್ ಗೋಕುಲೆ, ಪಿಎಸ್‍ಐ ವಸಂತ್ ಉಪಸ್ಥಿತರಿದ್ದರು.

  • ನಿರ್ದೇಶಕ ಮಧುರ್ ಭಂಡಾರ್ಕರ್ ಕೊಲೆಗೆ ಸುಪಾರಿ- ರೂಪದರ್ಶಿಗೆ 3 ವರ್ಷ ಜೈಲು

    ನಿರ್ದೇಶಕ ಮಧುರ್ ಭಂಡಾರ್ಕರ್ ಕೊಲೆಗೆ ಸುಪಾರಿ- ರೂಪದರ್ಶಿಗೆ 3 ವರ್ಷ ಜೈಲು

    ಮುಂಬೈ: ಹಿಂದಿ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಮಧುರ್ ಭಂಡಾರ್ಕರ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ರೂಪದರ್ಶಿ ಪ್ರೀತಿ ಜೈನ್‍ಗೆ ಇಲ್ಲಿನ ನ್ಯಾಯಲಯ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ.

    ಪ್ರೀತಿ ಜೈನ್ ಜೊತೆ ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದ ನರೇಶ್ ಪರ್ದೇಶಿ ಮತ್ತು ಶಿವರಾಮ್ ದಾಸ್‍ಗೂ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

    ಏನಿದು ಪ್ರಕರಣ?: ನಿರ್ದೇಶಕ ಭಂಡಾರ್ಕರ್ ಅವರನ್ನು ಕೊಲ್ಲಲು ರೂಪದರ್ಶಿ ಪ್ರೀತಿ 2005ರ ಸೆಪ್ಟೆಂಬರ್‍ನಲ್ಲಿ ಅಂಡರ್ ವಲ್ರ್ಡ್ ಡಾನ್ ಆಗಿದ್ದ ಅರುಣ್ ಗಾವ್ಲಿಯ ಸಹಚರ ನರೇಶ್ ಪರ್ದೇಶಿಗೆ 75,000 ರೂ. ಸುಪಾರಿ ನೀಡಿದ್ದಳು. ಆದ್ರೆ ನರೇಶ್ ತನ್ನ ಕೆಲಸವನ್ನು ಮಾಡಿ ಮುಗಿಸದ ಕಾರಣಕ್ಕೆ ಪ್ರೀತಿ ಜೈನ್ ಆತನಿಗೆ ತಾನು ಕೊಟ್ಟಿದ್ದ 75,000 ರೂ.ಗಳನ್ನು ವಾಪಸ್ ಕೊಡಲು ಕೇಳಿದ್ದಳು. ಈ ಬಗ್ಗೆ ಅರುಣ್ ಗಾವ್ಲಿಯ ಮತ್ತೊಬ್ಬ ಸಹಚರ ವಕೀಲ ಬಗಾವೆಗೆ ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಇದಕ್ಕೂ ಮೊದಲು ಜೈನ್, ಭಂಡಾರ್ಕರ್ ಅವರು ಸಿನಿಮಾದಲ್ಲಿ ಪಾತ್ರ ಕೊಡುವುದಾಗಿ ಹೇಳಿ 1999 ರಿಂದ 2004ರ ಅವಧಿಯ ವೇಳೆ ನನ್ನ ಮೇಲೆ 16ಕ್ಕೂ ಹೆಚ್ಚು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 2004ರ ಜುಲೈನಲ್ಲಿ ದೂರು ದಾಖಲಿಸಿದ್ದಳು. ಭಂಡಾರ್ಕರ್ ನನಗೆ ವಂಚಿಸಿದ್ದಾರೆ. ಅವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದಳು. ಬಳಿಕ ತನ್ನ ಆರೋಪವನ್ನು ಕೈಬಿಡುತ್ತಿದ್ದೇನೆ ಎಂದು ಹೇಳಿದಾಗ ಕೋರ್ಟ್ ಭಂಡಾರ್ಕರ್ ವಿರದ್ಧದ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡಿತ್ತು.