Tag: arrest

  • ಅಶ್ಲೀಲ ವೆಬ್‍ಸೈಟ್‍ಗೆ ವಿದ್ಯಾರ್ಥಿನಿಯರ ಫೋಟೋ ಹಾಕಿದ್ದ ಮೈಸೂರು ವಿವಿ Rank ಸ್ಟೂಡೆಂಟ್ ಬಂಧನ!

    ಅಶ್ಲೀಲ ವೆಬ್‍ಸೈಟ್‍ಗೆ ವಿದ್ಯಾರ್ಥಿನಿಯರ ಫೋಟೋ ಹಾಕಿದ್ದ ಮೈಸೂರು ವಿವಿ Rank ಸ್ಟೂಡೆಂಟ್ ಬಂಧನ!

    ಮೈಸೂರು: ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಭಾವಚಿತ್ರವನ್ನ ಅಶ್ಲೀಲ ವೆಬ್‍ಸೈಟ್‍ಗೆ ಅಪ್ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಂದು ಜಯಲಕ್ಷೀಪುರಂ ಪೊಲೀಸರು ಬಂಧಿಸಿದ್ದಾರೆ.

    ಜೈಕುಮಾರ್ ಬಂಧಿತ ಆರೋಪಿ. ಈತ ಇದೇ ಕಾಲೇಜಿನಲ್ಲಿ ಪರಿಸರ ಅಧ್ಯಯನ ವಿಭಾಗದ ಕೊನೆ ಸೆಮಿಸ್ಟರ್ ಓದುತ್ತಿದ್ದು, ಪರಿಸರ ವಿಭಾಗದ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಟಾಪರ್ ಆಗಿದ್ದಾನೆ.

    ಇದನ್ನೂ ಓದಿ: ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್?

    ಏನಿದು ಪ್ರಕರಣ?: ವಾರದ ಹಿಂದೆ ಲೋಕ್ಯಾಟೋ ಎಂಬ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದ 10 ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಅಪ್ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ವೆಬ್‍ಸೈಟ್ ನೋಡುವ ಕಾಮುಕರು ಈ ನಂಬರ್ ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದರು. ನಮ್ಮ ನಂಬರ್ ಬೇರೆಯವರಿಗೆ ಹೇಗೆ ಸಿಕ್ಕಿತು? ಅದರಲ್ಲೂ ಈ ರೀತಿ ಯಾಕೆ ಕೆಟ್ಟದಾಗಿ ಮಾತಾಡುತ್ತಿದ್ದಾರೆ ಅಂತಾ ವಿದ್ಯಾರ್ಥಿನಿಯರು ಪರಿಶೀಲಿಸಿದಾಗ ಅವರ ಫೋಟೋ ಮತ್ತು ನಂಬರ್ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್‍ನಲ್ಲಿ ಇರುವುದು ಗಮನಕ್ಕೆ ಬಂದಿತ್ತು. ತಕ್ಷಣ ಈ ವಿಚಾರವನ್ನು ವಿಭಾಗದ ಮುಖ್ಯಸ್ಥರ ಗಮನಕ್ಕೆ ತಂದು ನಂತರ ವಿವಿಯ ಕುಲಸಚಿವರ ಗಮನಕ್ಕೆ ತರಲಾಗಿತ್ತು. ಅವರ ಅನುಮತಿಯಂತೆ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು.

    ಈ ಸುದ್ದಿ ಬೆಳಕಿಗೆ ಬಂದಾಗ ವಿದ್ಯಾರ್ಥಿನಿಯರಿಗೆ ಪರಿಚಯ ಇರುವವರೇ ಈ ಕೃತ್ಯವೆಸಗಿದ್ದಾರೆ ಎನ್ನುವ ಶಂಕೆ ಮೂಡಿತ್ತು. ಅಲ್ಲದೇ ವಿದ್ಯಾರ್ಥಿನಿಯರು ಪ್ರಾಧ್ಯಾಪಕರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಪೊಲೀಸರು ಜೈಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಫೋಟೋ ಹಾಗೂ ಫೋನ್ ನಂಬರ್ ಅಪ್‍ಲೋಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

  • ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿಯಿಂದ ಮಹಿಳೆ ಮೇಲೆ ಆಸಿಡ್ ದಾಳಿ

    ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿಯಿಂದ ಮಹಿಳೆ ಮೇಲೆ ಆಸಿಡ್ ದಾಳಿ

    – ಪತ್ನಿ, ಮಕ್ಕಳು ಸೇರಿ ನಾಲ್ವರ ಬಂಧನ

    ರಾಯಚೂರು: ಲಿಂಗಸುಗೂರಿನ ಜನತಾ ಕಾಲೋನಿಯಲ್ಲಿ ಮುಸುಕುಧಾರಿ ವೇಷದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ.

    ಲಿಂಗಸುಗೂರು ನಿವಾಸಿ ಶರ್ಮುದ್ದೀನ್ ಹಾಗೂ ಅವನ ಪತ್ನಿ ಮತ್ತು ಮಕ್ಕಳು ಬಂಧಿತ ಆರೋಪಿಗಳು. ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ಕು ಜನರಿಂದ ಈ ಕೃತ್ಯ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಮಹಿಳೆ ಶರಣಮ್ಮ ಮುಖ, ಕೈ-ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿವೆ. ಗಾಯಾಳುವನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ.

    ಶರ್ಮುದ್ದಿನ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ಕಾರಣಕ್ಕೆ ಶರ್ಮುದ್ದಿನ್ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತ ಪತ್ನಿ ಹಾಗು ಇಬ್ಬರು ಮಕ್ಕಳು ಭಾನುವಾರ ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಹಲ್ಲೆ ಮಾಡಿ ಆಸಿಡ್ ಎರಚಿ ಪರಾರಿಯಾಗಿದ್ದರು.

    ಘಟನೆ ಹಿನ್ನೆಲೆಯಲ್ಲಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಕೊನೆಗೂ ವಿಜಯ್ ಮಲ್ಯ ಬಂಧನ

    ಕೊನೆಗೂ ವಿಜಯ್ ಮಲ್ಯ ಬಂಧನ

    ಲಂಡನ್: ಮದ್ಯ ದೊರೆ ವಿಜಯ್ ಮಲ್ಯಾರನ್ನ ಕೊನೆಗೂ ಲಂಡನ್ ನಲ್ಲಿ ಬಂಧಿಸಲಾಗಿದೆ.

    ಲಂಡನ್ ಕಾಲಮಾನದ ಪ್ರಕಾರ ಇಂದು ಬೆಳಿಗ್ಗೆ 9.30ರ ವೇಳೆಗೆ ಮಲ್ಯ ಬಂಧನವಾಗಿದೆ ಎಂದು ಹೇಳಲಾಗಿದೆ. ಮಲ್ಯ ಬಂಧನದ ವಿಷಯವನ್ನ ಇಂಗ್ಲೆಂಡ್ ಸರ್ಕಾರ ಸ್ಪಷ್ಟಪಡಿಸಿದೆ.

    ಕೆಲವೇ ಕ್ಷಣಗಳಲ್ಲಿ ವೆಸ್ಟ್ ಮಿನಿಸ್ಟರ್ ಕೋರ್ಟ್‍ಗೆ ಮಲ್ಯರನ್ನ ಪೊಲೀಸರು ಕರೆದೊಯ್ಯಲಿದ್ದಾರೆ. ಮಲ್ಯ ಬಂಧನದ ಹಿನ್ನೆಲೆಯಲ್ಲಿ ಸಿಬಿಐ ತಂಡ ಲಂಡನ್‍ಗೆ ತೆರಳಲಿದೆ.

    ಮಲ್ಯ ಪಾಸ್‍ಪೋರ್ಟ್ ರದ್ದು ಮಾಡಿದ್ದ ಭಾರತ, ಇಂಗ್ಲೆಂಡ್ ಸರ್ಕಾರಕ್ಕೆ ಮಲ್ಯರನ್ನು ಗಡೀಪಾರು ಮಾಡುವಂತೆ ಕೇಳಿತ್ತು. ಆದ್ರೆ ಇಂಗ್ಲೆಂಡ್‍ನಲ್ಲಿ ಪಾಸ್‍ಪೋರ್ಟ್ ಮಾನ್ಯತೆ ಕಳೆದುಕೊಂಡಿದ್ದರೂ ಕೂಡ ಆ ವ್ಯಕ್ತಿ ಅಲ್ಲೇ ನೆಲೆಸಲು ಅವಕಾಶವಿರುವುದರಿಂದ ಭಾರತದ ಗಡೀಪಾರು ಮನವಿ ಇಂಗ್ಲೆಂಡ್ ಕಾನೂನುಗಳ ಅಡಿ ಬರುವುದಿಲ್ಲ ಎಂದು ಹೇಳಿತ್ತು.

    ಕಳೆದ ವಾರ ದೆಹಲಿ ಕೋರ್ಟ್ ಫಾರಿನ್ ಎಕ್ಸ್ ಚೇಂಜ್ ರೆಗ್ಯುಲೇಷನ್ ಆ್ಯಕ್ಟ್(FERA) ಉಲ್ಲಂಘನೆ ಆರೋಪದ ಮೇಲೆ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

    ವಿಜಯ್ ಮಲ್ಯ 17 ಬ್ಯಾಂಕ್‍ಗಳ ಒಕ್ಕೂಟಕ್ಕೆ ಸುಮಾರು 9 ಸಾವಿರ ಕೋಟಿ ರೂ. ಸಾಲ ಹಿಂದಿರುಗಿಸಬೇಕಿದ್ದು, ಕಳೆದ ವರ್ಷ ಮಾರ್ಚ್ 2ರಂದು ಭಾರತ ತೊರೆದು ಲಂಡನ್‍ಗೆ ಹೋಗಿ ನೆಲೆಸಿದ್ದರು.

    ಇದನ್ನೂ ಓದಿ: ಕೊನೆಗೂ ಮಾರಾಟವಾಯ್ತು ಗೋವಾದಲ್ಲಿನ ವಿಜಯ್ ಮಲ್ಯ ಮನೆ 

  • ತಂದೆ-ಮಗನ ಜೋಡಿ ಕೊಲೆ ಪ್ರಕರಣ: ಆರೋಪಿಗಳ ಬಂಧನ

    ತಂದೆ-ಮಗನ ಜೋಡಿ ಕೊಲೆ ಪ್ರಕರಣ: ಆರೋಪಿಗಳ ಬಂಧನ

    ರಾಯಚೂರು: ಮಾನ್ವಿಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಂದೆ-ಮಗನ ಜೋಡಿ ಕೊಲೆ ಪ್ರಕರಣದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.  ಮಾನ್ವಿ ತಾಲೂಕು ಪಂಚಾಯ್ತಿ ಬಿಜೆಪಿ ಸದಸ್ಯ ದೇವರಾಜ್ ನಾಯಕ್, ಮುದಿಯಪ್ಪ, ಹಸನ್ ಸಾಬ್, ಅಮರೇಶ್ ಬಂಧಿತ ಆರೋಪಿಗಳು.

    ಏನಿದು ಪ್ರಕರಣ: ಏಪ್ರಿಲ್ 13 ರಂದು ಸಂಜೆ 6:30ರ ವೇಳೆಗೆ ಕುರುಕುಂದಾ ಗ್ರಾಮದ ನಬೀಸಾಬ್ ಎಂಬವರನ್ನ ಮಾಡಗೇರಾ ಕ್ರಾಸ್‍ನಲ್ಲಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬರುತ್ತಿದ್ದ ನಬೀಸಾಬ್ ಮಗ ಅಬ್ದುಲ್ ನಜೀರ್ ಸಾಬ್‍ನನ್ನ 1 ಗಂಟೆಯ ಅಂತರದಲ್ಲಿ ಹುಣಚೇಡ್ ಕ್ರಾಸ್ ಬಳಿ ಕೊಲೆ ಮಾಡಲಾಗಿತ್ತು.

    ಹಳೇ ವೈಷಮ್ಯಕ್ಕೆ ಕೊಲೆ: ಕುರಕುಂದಾ ಗ್ರಾಮದಲ್ಲಿ 30 ವರ್ಷಗಳ ಹಿಂದೆ ದೇವರಾಜ್ ನಾಯಕ್ ತಾತಾನ ಕೊಲೆಯಾಗಿತ್ತು. ಆ ಕೊಲೆ ಪ್ರಕರಣದಲ್ಲಿ ಕೊಲೆಯಾದ ನಬೀಸಾಬ್ ಕೂಡ ಭಾಗಿಯಾಗಿದ್ದ. ಈ ಹಳೇ ವೈಷಮ್ಯದಿಂದಾಗಿ ಎರಡು ಕೊಲೆಗಳನ್ನ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಆದ್ರೆ ದೇವರಾಜ್ ನಾಯಕ್ ,ನಬೀಸಾಬ್ ಬಿಜೆಪಿ ಪಕ್ಷದಲ್ಲೇ ಇದ್ದು ಒಟ್ಟಾಗಿ ಕಳೆದ ತಾಲೂಕು ಪಂಚಾಯ್ತಿ ಚುನಾವಣೆ ಎದುರಿಸಿದ್ದರು. ಚುನಾವಣೆಯಲ್ಲಿ ದೇವರಾಜ್ ನಾಯಕ್ ಗೆಲುವಿಗೆ ನಬೀಸಾಬ್ ಪ್ರಮುಖ ಪಾತ್ರವಹಿಸಿದ್ದ. ಆದ್ರೆ ಕ್ಷುಲ್ಲಕ ಕಾರಣಕ್ಕೆ ಇತ್ತೀಚೆಗೆ ನಡೆದ ಸಣ್ಣ ಜಗಳದಿಂದ ಹಳೆಯ ವೈಷಮ್ಯ ಭುಗಿಲೆದ್ದು ಜೋಡಿಕೊಲೆಯಲ್ಲಿ ಅಂತ್ಯವಾಗಿದೆ.

    ಜೋಡಿ ಕೊಲೆ ಹಿನ್ನೆಲೆಯಲ್ಲಿ ಸಿರವಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳು ದಾಖಲಾಗಿದ್ದವು. ಮಾನ್ವಿ ಸಿಪಿಐ ಜಿ.ಚಂದ್ರಶೇಖರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ರಚಿಸಿದ್ದ ವಿಶೇಷ ಪೊಲೀಸ್ ತಂಡ ನಾಲ್ಕು ಜನ ಆರೋಪಿಗಳನ್ನ ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಇದನ್ನೂ ಓದಿ: ರಾಯಚೂರು: ನಡುರಸ್ತೆಯಲ್ಲಿ ತಂದೆ-ಮಗನನ್ನು ದೊಣ್ಣೆಯಿಂದ ಹೊಡೆದು ಕೊಲೆ!

  • ಹೆಂಡತಿಯೊಂದಿಗಿನ ಸೆಕ್ಸ್ ಲೈವ್ ಸ್ಟ್ರೀಮಿಂಗ್ ಮಾಡಿದ ಟೆಕ್ಕಿ ಬಂಧನ

    ಹೆಂಡತಿಯೊಂದಿಗಿನ ಸೆಕ್ಸ್ ಲೈವ್ ಸ್ಟ್ರೀಮಿಂಗ್ ಮಾಡಿದ ಟೆಕ್ಕಿ ಬಂಧನ

    ಹೈದರಾಬಾದ್: ಹೆಂಡತಿಯ ಜೊತೆಗೆ ನಡೆಸಿದ ಲೈಂಗಿಕ ಕ್ರಿಯೆಯನ್ನು ಆಕೆಗೆ ಗೊತ್ತಿಲ್ಲದಂತೆ ಪಾರ್ನ್ ಸೈಟ್‍ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಿದ್ದ 33 ವರ್ಷದ ಮಾಜಿ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಹೈದರಾಬಾದ್‍ನಲ್ಲಿ ಬಂಧಿಸಲಾಗಿದೆ.

    ನಗರದ ಜೀಡಿಮೆಟ್ಲಾದ ನಿವಾಸಿಯಾಗಿರೋ ಬಂಧಿತ ಆರೋಪಿ ತನ್ನ ಬೆಡ್‍ರೂಮಿನಲ್ಲಿಟ್ಟಿದ್ದ ಲ್ಯಾಪ್‍ಟಾಪ್‍ನ ವೆಬ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ವೀಡಿಯೋಗಳನ್ನು ಹಣಕ್ಕಾಗಿ ಪಾರ್ನ್ ಸೈಟ್‍ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಿದ್ದ ಎಂದು ಆರೋಪಿಸಲಾಗಿದೆ.

    ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಪತ್ನಿಗೆ ಕಳೆದ ನವೆಂಬರ್‍ನಲ್ಲಿ ಕೇರಳದಲ್ಲಿರುವ ಸ್ನೇಹಿತರೊಬ್ಬರು ಹೇಳಿದಾಗ ತನ್ನ ಖಾಸಗಿ ವಿಡಿಯೋಗಳು ಪಾರ್ನ್ ಸೈಟ್‍ನಲ್ಲಿದ್ದ ಬಗ್ಗೆ ಗೊತ್ತಾಗಿದೆ ಎಂದು ಸೈಬರ್ ಕ್ರೈಂ ಎಸಿಪಿ ಎಸ್. ಜಯರಾಮ್ ತಿಳಿಸಿದ್ದಾರೆ.

    ನಂತರ ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ಐಪಿಸಿ ಸೆಕ್ಷನ್ 509 ಹಾಗೂ ಐಟಿ ಕಾಯ್ದೆಯ ಸೂಕ್ತ ಸೆಕ್ಷನ್‍ಗಳಡಿ ಕೇಸ್ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯದ ಹಿಂದಿರುವುದು ಮಹಿಳೆಯ ಗಂಡ ಎನ್ನುವುದು ಗೊತ್ತಾಗಿದೆ. ಏಪ್ರಿಲ್ 7 ರಂದು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಪೊಲೀಸರು ವಿಡಿಯೋ ಲಿಂಕ್‍ನ ಐಪಿ ವಿಳಾಸವನ್ನ ಕೇರಳದ ತಿರುಚಿಯಲ್ಲಿ ಟ್ರೇಸ್ ಮಾಡಿದ್ದರು. ನಂತರ ಆ ಐಪಿ ವಿಳಾಸದ ಮಾಲೀಕನಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಮಾಲೀಕ, ಬೇರೊಂದು ವೆಬ್‍ಸೈಟ್ ನಲ್ಲಿ ವಿಡಿಯೋ ಡೌನ್‍ಲೋಡ್ ಮಾಡಿಕೊಂಡು ಅದನ್ನೇ ಪ್ರಸಾರ ಮಾಡಿದ್ದಾಗಿ ಹೇಳಿದ್ದನೆಂದು ಜಯರಾಮ್ ತಿಳಿಸಿದ್ದಾರೆ.

    ಪೊಲೀಸರು ಹೇಳುವ ಪ್ರಕಾರ ಆರೋಪಿ ತನ್ನ ಹೆಂಡತಿಗೆ ತಿಳಿಯದಂತೆ ಲ್ಯಾಪ್‍ಟಾಪನ್ನು ಬೆಡ್‍ರೂಮಿನಲ್ಲಿರಿಸಿ ಲೈವ್ ಸ್ಟ್ರೀಮಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಈತ ಲ್ಯಾಪ್‍ಟಾಪ್‍ನಲ್ಲಿ ಸಿನಿಮಾ ಪ್ಲೇ ಮಾಡುತ್ತಿದ್ದರಿಂದ ಹೆಂಡತಿಗೆ ಇದರ ಬಗ್ಗೆ ಗೊತ್ತಾಗುತ್ತಿರಲಿಲ್ಲ. ಈತ ಪಾರ್ನ್ ವೆಬ್‍ಸೈಟ್‍ವೊಂದರ ಸದಸ್ಯನಾಗಿದ್ದು, ವಿಡಿಯೋ ಪೋಸ್ಟ್ ಮಾಡುವುದಕ್ಕೆ ಈತನಿಗೆ ಹಣ ಸಿಗುತ್ತಿತ್ತು. ಈ ಸೈಟ್‍ನಲ್ಲಿ ಸುಮಾರು 3 ಸಾವಿರ ಸದಸ್ಯರಿದ್ದಾರೆಂದು ವರದಿಯಾಗಿದೆ. ಅಲ್ಲದೆ ಆರೋಪಿ ಲೈಂಗಿಕ ಕ್ರಿಯೆಗಾಗಿ ಮಹಿಳೆಯರಿಗೆ ಪುರಷರನ್ನ ಸಪ್ಲೈ ಮಾಡೋ 3 ವೆಬ್‍ಸೈಟ್ ಗಳಲ್ಲಿ ನೊಂದಾಯಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ಪೊಲೀಸರು ಈತನ ಮೊಬೈಲ್ ಹಾಗೂ ಲ್ಯಾಪ್‍ಟಾಪ್ ಪರಿಶೀಲಿಸಿದ್ದು, ಇದಕ್ಕೆ ಪೂರಕವಾದ ಸಾಕ್ಷಿಗಳು ಸಿಕ್ಕಿವೆ. ಹಾಗೂ ಬ್ಯಾಂಕ್ ಅಕೌಂಟ್ ಕೂಡ ಪರಿಶೀಲಿಸಲಾಗಿದ್ದು ತಾಂತ್ರಿಕ ಸಾಕ್ಷಿಗಳು ಸಿಕ್ಕಿವೆ ಎಂದು ಎಸಿಪಿ ಜಯರಾಮ್ ತಿಳಿಸಿದ್ದಾರೆ.

  • ಸಿಎಂ ಗೃಹ ಕಚೇರಿಗೆ ಮುತ್ತಿಗೆ ಭೀತಿ: ರಾತ್ರೋರಾತ್ರಿ ಸಾವಿರಾರು ತುಂಗಭದ್ರಾ ಕಾರ್ಮಿಕರ ಬಂಧನ

    ಸಿಎಂ ಗೃಹ ಕಚೇರಿಗೆ ಮುತ್ತಿಗೆ ಭೀತಿ: ರಾತ್ರೋರಾತ್ರಿ ಸಾವಿರಾರು ತುಂಗಭದ್ರಾ ಕಾರ್ಮಿಕರ ಬಂಧನ

    -ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹೊರಟಿದ್ದ ಕಾರ್ಮಿಕರು

    ರಾಯಚೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಯಚೂರು ಸೇರಿ ವಿವಿಧೆಡೆಯಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದ 800 ಹೆಚ್ಚು ತುಂಗಭದ್ರಾ ವಲಯ ಹಂಗಾಮಿ ಕಾರ್ಮಿಕರನ್ನ ಬಂಧಿಸಲಾಗಿದೆ.

    ಬುಧವಾರ ಮಧ್ಯರಾತ್ರಿ ಬೆಂಗಳೂರಿಗೆ ಹೋಗದಂತೆ ತುಮಕೂರು ಬಳಿ ಬಂಧಿಸಿ ರಾಯಚೂರು ಸೇರಿ ಆಯಾ ಜಿಲ್ಲೆಗಳಿಗೆ ಕರೆತರಲಾಗಿದೆ. ಕಾರ್ಮಿಕ ಮುಖಂಡರನ್ನ ಪೊಲೀಸ್ ಠಾಣೆಗಳಲ್ಲಿ ಬಂಧಿಸಿಡಲಾಗಿದೆ.

    ವೇತನ ಹೆಚ್ಚಳ, ಗುತ್ತಿಗೆ ಕಾರ್ಮಿಕ ಪದ್ದತಿ ರದ್ದತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಏಪ್ರಿಲ್ 4 ರಿಂದ ಬಳ್ಳಾರಿ ಮುನಿರಾಬಾದ್‍ನಿಂದ ಕಾರ್ಮಿಕರು ಬೃಹತ್ ಪಾದಯಾತ್ರೆ ಜಾಥಾ ನಡೆಸಿದ್ದರು. ಅಂಬೇಡ್ಕರ್ ಜಯಂತಿಯಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಮುತ್ತಿಗೆ ಹಮ್ಮಿಕೊಂಡಿದ್ದರು. ಹೀಗಾಗಿ ಮಾರ್ಗ ಮಧ್ಯದಲ್ಲೆ ಕಾರ್ಮಿಕರನ್ನ ಬಂಧಿಸಲಾಗಿದೆ. ಬಂಧನವೇಳೆ ಪೊಲೀಸರು ಕನಿಷ್ಠ ಸೌಜನ್ಯವನ್ನೂ ತೋರಿಸಿಲ್ಲ ಅಂತ ಆರೋಪಿಸಿರುವ ಕಾರ್ಮಿಕರು ಹೋರಾಟ ಮುಂದುವರೆಸುವ ಎಚ್ಚರಿಕೆ ನೀಡಿದ್ದಾರೆ.

     

  • ಪಬ್ಲಿಕ್ ಟಿವಿಯಲ್ಲಿ ಜಾಹೀರಾತು ಪ್ರಸಾರ ಮಾಡ್ತೀನಿ ಅಂತಾ ಹಣ ಪೀಕುತ್ತಿದ್ದವ ಅರೆಸ್ಟ್

    ಪಬ್ಲಿಕ್ ಟಿವಿಯಲ್ಲಿ ಜಾಹೀರಾತು ಪ್ರಸಾರ ಮಾಡ್ತೀನಿ ಅಂತಾ ಹಣ ಪೀಕುತ್ತಿದ್ದವ ಅರೆಸ್ಟ್

    ಮೈಸೂರು: ಪಬ್ಲಿಕ್ ಟಿವಿ ನಕಲಿ ಗುರುತಿನ ಚೀಟಿ ಇಟ್ಟಿಕೊಂಡು ಜನರಲ್ಲಿ ಹಣ ಪಡೆಯುತ್ತಿದ್ದಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತನ ಬಳಿ ಸಿಕ್ಕ ಅಡ್ರೆಸ್ ಪ್ರೂಫ್‍ನಲ್ಲಿ ಬೆಂಗಳೂರಿನ ಚೋಳರಪಾಳ್ಯದ ಲೇಪಾಕ್ಷಿ ಸಂಜಯ್ ಅಂತಾ ಹೆಸರಿದೆ.

    ಪಬ್ಲಿಕ್ ಟಿವಿಯಲ್ಲಿ ಜಾಹೀರಾತು ಪ್ರಸಾರ ಮಾಡುತ್ತೇನೆ ಹಾಗೂ ನಿಮ್ಮ ಪರವಾಗಿ ಸುದ್ದಿ ಮಾಡುತ್ತೇನೆ ಎಂದು ಹಣ ವಸೂಲಿ ಮಾಡುತ್ತಿದ್ದ. ಇಂದು ಸಹ ನಂಜನಗೂಡು ಉಪಚುನಾವಣೆ ಮತ ಎಣಿಕೆ ವೇಳೆ ಪಬ್ಲಿಕ್‍ಟಿವಿ ವರದಿಗಾರನೆಂದು ಹೇಳಿಕೊಂಡು ಓಡಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.

    ಸದ್ಯ ಈ ವಂಚಕನನ್ನು ನಂಜನಗೂಡು ನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೇ ರೀತಿ ನಿಮ್ಮ ಬಳಿ ಯಾರಾದ್ರೂ ಪಬ್ಲಿಕ್ ಟಿವಿ ಹೆಸರನ್ನು ಹೇಳಿಕೊಂಡು ಹಣ ವಸೂಲಿಗೆ ಬಂದರೆ ಪಬ್ಲಿಕ್ ಟಿವಿ ಬೆಂಗಳೂರು ಕಚೇರಿಗೆ ಮಾಹಿತಿ ನೀಡಿ ಅಥವಾ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ.

  • ಮನೆಗೆ ನುಗ್ಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ರೇಪ್: ಕಾಮುಕ ಅರೆಸ್ಟ್

    ಮನೆಗೆ ನುಗ್ಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ರೇಪ್: ಕಾಮುಕ ಅರೆಸ್ಟ್

    ಬೆಂಗಳೂರು: ಪರಿಚಿತ ಯುವಕನೊಬ್ಬ ಮನೆಗೆ ನುಗ್ಗಿ ಯುವತಿಯನ್ನು ಅತ್ಯಾಚಾರ ನಡೆಸಿರುವ ಘಟನೆ ನಗರದ ಕುಮಾರಸ್ವಾಮಿ ಲೇಔಟ್‍ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಚಂದ್ರಶೇಖರ್ ಬಂಧಿತ ಯುವಕ. ನೊಂದ ಯುವತಿಯ ಮನೆಯ ಬಳಿ ವಾಸವಾಗಿದ್ದ ಚಂದ್ರಶೇಖರ್ ಕಳೆದ 3 ತಿಂಗಳಿನಿಂದ ತನ್ನನ್ನು ಮದುವೆ ಆಗುವಂತೆ ಟಾರ್ಚರ್ ಕೊಡುತ್ತಿದ್ದನು. ತನ್ನ ಮೊಬೈಲ್ ನಂಬರ್ ನೀಡಿ ಕೊಟ್ಟು ಫೋನ್ ಮಾಡುವಂತೆ ಚಂದ್ರಶೇಖರ್ ಪೀಡಿಸುತ್ತಿದ್ದನು ಎಂದು ತಿಳಿದು ಬಂದಿದೆ.

    ಏಪ್ರಿಲ್ 7 ರಂದು ಮನಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಈ ವೇಳೆ ಯುವತಿ ತಾಯಿಯ ಕೈಗೆ ಚಂದ್ರಶೇಖರ್ ಸಿಕ್ಕಿದ್ದಾನೆ. ಇದರಿಂದ ಭಯಭೀತನಾದ ಚಂದ್ರ ಯುವತಿಯ ತಾಯಿಯನ್ನು ತಳ್ಳಿ ಮನೆಯಿಂದ ಪರಾರಿಯಾಗಿದ್ದನು.

    ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಉಡುಪಿ ಡಿಸಿ ಮೇಲೆ ಕೊಲೆ ಯತ್ನ ನಡೆದ ಮರಳು ಅಡ್ಡೆ ಕಾಂಗ್ರೆಸಿಗರದ್ದು: ರಘುಪತಿ ಭಟ್

    ಉಡುಪಿ ಡಿಸಿ ಮೇಲೆ ಕೊಲೆ ಯತ್ನ ನಡೆದ ಮರಳು ಅಡ್ಡೆ ಕಾಂಗ್ರೆಸಿಗರದ್ದು: ರಘುಪತಿ ಭಟ್

    ಉಡುಪಿ: ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ, ಎಸಿ ಶಿಲ್ಪಾನಾಗ್ ಸೇರಿದಂತೆ ಏಳು ಮಂದಿಯ ಕೊಲೆ ಯತ್ನ ನಡೆದ ಕುಂದಾಪುರದ ಕಂಡ್ಲೂರು ಮರಳು ಅಡ್ಡೆ ಕಾಂಗ್ರೆಸ್ ಪಕ್ಷದ ನಾಯಕರಿಗೆ ಸೇರಿದ್ದು ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಗಂಭೀರ ಆರೋಪ ಮಾಡಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಘುಪತಿ ಭಟ್, ಜಿಲ್ಲಾಪಂಚಾಯತ್‍ನ ಮಾಜಿ ಸದಸ್ಯರೊಬ್ಬರಿಗೆ ಸೇರಿದ ಅಡ್ಡೆಯಿದು. ಸ್ವಜನಪಕ್ಷಪಾತ ಮಾಡುವ ಕಾಂಗ್ರೆಸ್ ಸರ್ಕಾರ, ಅವರ ಹೆಸರು ಬಹಿರಂಗಪಡಿಸುತ್ತಿಲ್ಲ. ಜಿಲ್ಲಾಧಿಕಾರಿಗಳ ಮೇಲೆ 50ಕ್ಕೂ ಹೆಚ್ಚು ಮಂದಿ ಕೊಲೆಗೆ ಯತ್ನ ಮಾಡಿದ್ರೂ, ಕೇವಲ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಕಾರ್ಮಿಕರು, ಮರಳು ಅಡ್ಡೆಯ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಕೃಪಾಕಟಾಕ್ಷ ಇದೆ ಎಂದು ಹೇಳಿದರು.

    ಸಚಿವರೂ ಅಕ್ರಮ ಮರಳುಗಾರಿಕೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಗುಮಾನಿಯಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವಿದೆ. ಜಿಲ್ಲಾಧಿಕಾರಿಗಳ ಕೊಲೆ ಯತ್ನ ನಡೆದರೂ ಉಸ್ತುವಾರಿ ಸಚಿವರು ಘಟನೆ ನಡೆದು ನಾಲ್ಕು ದಿನಗಳಾದರೂ ಜಿಲ್ಲೆಗೆ ಬಂದಿಲ್ಲ. ಅವರಿಗೆ ಉಪಚುನಾವಣೆಯೇ ಮುಖ್ಯವಾಗಿದೆ ಎಂದು ಕಿಡಿಕಾರಿದರು.

    ಕಳೆದ ನಾಲ್ಕು ವರ್ಷದಿಂದ ಮರಳುಗಾರಿಕೆ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದೇವೆ. ಕಾನೂನು ರೀತಿಯ ಮರಳು ತೆಗೆಯುತ್ತಿದ್ದದ್ದಕ್ಕೆ ಸಚಿವರ ಕಡೆಯ ಜನರಿಂದಲೇ ಕಾನೂನು ಹೋರಾಟ ಮಾಡಿಸಿ ಹಸಿರು ಪೀಠದಿಂದ ತಡೆ ತರಿಸಿದ್ದಾರೆ. ಇನ್ನೊಂದು ಕಡೆಯಿಂದ ಕಾಂಗ್ರೆಸ್ ಪಕ್ಷದವರೇ ಮರಳುಗಾರಿಕೆ ಮಾಡುತ್ತಿದ್ದಾರೆ. ಅದಕ್ಕೆ ಸಚಿವರ ಬೆಂಬಲವಿದೆ. ಇಂತಹ ಗೊಂದಲದಿಂದಲೇ ಜಿಲ್ಲಾಧಿಕಾರಿಗಳ ಮೇಲೆ ಕೊಲೆಯತ್ನ ಮಾಡಲಾಗಿದೆ. ಗ್ರಾಮಲೆಕ್ಕಾಧಿಕಾರಿ ಅವರನ್ನು ಮನಬಂದಂತೆ ಹೊಡೆದು ನೀರಿಗೆ ಬಿಸಾಕಿದ್ದಾರೆ. ಇಷ್ಟೆಲ್ಲಾ ಆದ್ರೂ ಸರಿಯಾದ ಕ್ರಮ ಆಗ್ತಾಯಿಲ್ಲ ಎಂದು ರಘುಪತಿ ಭಟ್ ಆರೋಪಿಸಿದರು.

  • ಮದ್ವೆಯಾದ 10 ದಿನದಲ್ಲಿ ತಲಾಖ್ ಕೊಟ್ಟ ಪತಿ ಅರೆಸ್ಟ್

    ಮದ್ವೆಯಾದ 10 ದಿನದಲ್ಲಿ ತಲಾಖ್ ಕೊಟ್ಟ ಪತಿ ಅರೆಸ್ಟ್

    ಹೈದರಾಬಾದ್: ತನ್ನ ಪತ್ನಿಗೆ ಅಂಚೆ ಪತ್ರದಲ್ಲಿ ಮೂರು ಬಾರಿ ತಲಾಖ್ ಎಂದು ಬರೆದು ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

    ಮೊಹಮ್ಮದ್ ಹನೀಫ್ (38) ಬಂಧಿತ ವ್ಯಕ್ತಿ. ಹನೀಫ್ ಕುಕಟಪಲ್ಲಿಯ ಟೈಕ್ಸ್ ಟೈಲ್ಸ್ ಶೋರೂಂ ನಲ್ಲಿ ಸೂಪರ್‍ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಮಾರ್ಚ್ 9 ರಂದು ತಲಾಬ್‍ಕಟ್ಟಾ ಗ್ರಾಮದ 26 ವರ್ಷದ ಯುವತಿಯನ್ನು ಮದುವೆ ಮಾಡಿಕೊಂಡಿದ್ದ.

    ಮದುವೆಯ ಮರುದಿನ ಮನೆಬಿಟ್ಟು ಹೋಗಿದ್ದ ಹನೀಫ್ ತಾನು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೆಂಡತಿಗೆ ಮಾಹಿತಿ ನೀಡಿದ್ದ. ಮಾರ್ಚ್ 19 ರಂದು ಹನೀಫ್ ತನ್ನ ಪತ್ನಿಗೆ ಪೋಸ್ಟ್ ಮುಖಾಂತರ ತಲಾಖ್ ಪತ್ರವನ್ನು ಕಳುಹಿಸಿದ್ದ. ಪತ್ರದಲ್ಲಿ ಮೂರು ಬಾರಿ ತಲಾಖ್ ಎಂದು ಬರೆದು ಈ ನಿರ್ಧಾರವನ್ನು ಇಬ್ಬರ ಸಮ್ಮುಖದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಬರೆದಿದ್ದ. ನಂತರ ಇದೇ ವಿಚಾರದ ಬಗ್ಗೆ ಫೋನ್ ಮಾಡಿ ಮಾತನಾಡಿದ್ದ.

    ಪತಿಯ ತಲಾಖ್ ಪತ್ರ ಪಡೆದ ಯುವತಿ ತವರುಮನೆಗೆ ತೆರಳಿದ್ದು, ಪೋಷಕರಿಗೆ ಈ ವಿಚಾರವನ್ನ ತಿಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಹನೀಫ್‍ನನ್ನು ಬಂಧಿಸಿದ್ದಾರೆ.

    ಇಸ್ಲಾಂನ ತ್ರಿವಳಿ ತಲಾಖ್ ಪದ್ಧತಿಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದು, ತ್ರಿವಳಿ ತಲಾಖ್ ನಿಷೇಧಿಸಬೇಕೋ ಬೇಡವೋ ಎಂಬ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಐವರು ಸದಸ್ಯರ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದ್ದು ಮೇ 11ರಿಂದ ವಿಚಾರಣೆ ಆರಂಭವಾಗಲಿದೆ.